Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಲತಃ ಕುಂದಾಪುರದ ನಾಗೂರಿನ ನಿವಾಸಿ ಯಾಗಿದ್ದು, ಕನ್ನಡ ಹಾಗೂ ಇನ್ನಿತರ ಭಾಷೆಯ ಚಲನ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿದ್ದು, ಬೈಕ್ ಕಾರುಗಳನ್ನು ವಿಶಿಷ್ಠ ರೀತಿಯಲ್ಲಿ ಸಜ್ಜು ಗೊಳಿಸುತಲಿದ್ದ ದಿಲೀಪ್ ರಾಜ್(48) ಅವರು ಬೆಂಗಳೂರಿನ ತನ್ನ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ಸಂಜೆ ಅವರಿಗೆ ಅವರ ಮನೆಯಲ್ಲಿದ್ದಾಗ ಹೃದಯಾಘಾತವಾಗಿದೆ. ಮನೆಯಿಂದ ಜಯದೇವ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದ ಹಲವಾರು ನಾಯಕ ನಟರೊಂದಿಗೆ, ನಿರ್ದೇಶಕ ನಿರ್ಮಾಪಕರೊಂದಿಗೆ ಒಡನಾಟಹೊಂದಿದ್ದ ಅವರು. ಕಿರಿಕ್ ಪಾರ್ಟಿ, ರಾಜರಥ, ಅಣ್ಣಾ ಬಾಂಡ್, ಉಪ್ಪಿ-೨ ಸಿನಿಮಾ ಸೇರಿದಂತೆ ಹಲವು ಸಿನಿಮಾಗಳಿಗಾಗಿ ತನ್ನದೇ ವರ್ಕ ಶಾಪ್ ನಲ್ಲಿ ವಿಶಿಷ್ಟ ಶೈಲಿಯ ಬೈಕ್ ಕಾರುಗಳನ್ನು ಸಿದ್ಧಪಡಿಸಿ ಜನಪ್ರಿಯರಾಗಿದ್ದರು. ಸಿನೆಮಾಗಳಿಗಾಗಿಯೇ ಅವರು ಸಿದ್ಧಪಡಿಸಿದ ವಾಹನಗಳು ಆಕರ್ಷಣೆ ಪಡೆದುಕೊಂಡಿದ್ದವು. ಸೋಮಕ್ಷತ್ರೀಯ ಗಾಣಿಗ ಸಮಾಜದಲ್ಲಿ ಅತ್ಯಂತ ಚಟುವಟಿಕೆಯಿಂದಿದ್ದ ದಿಲೀಪ್ ರಾಜ್ ಇತ್ತೀಚಿಗೆ ನಡೆದ ಸಮಾಜದ ಕಾರ್ಯಕ್ರಮ ಪ್ರತಿಭಾ ಸಂಭ್ರಮದ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದು ಲವಲವಿಕೆಯಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಡ್ತರೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಮೂಕಾಂಬು ಶ್ರೀನಿವಾಸ ದೇವಾಡಿಗ ಅಧ್ಯಕ್ಷರಾಗಿ ಮತ್ತು ವೆರೋನಿಕಾ ಡಿಸೋಜಾ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಬೈಂದೂರು ತಹಶೀಲ್ದಾರ್ ರವಿ ಕಲಾಲ್ ಪಂಚಾಯಿತಿ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಿ, ಫಲಿತಾಂಶ ಘೋಷಣೆ ಮಾಡಿದರು. ಬಹುಮತ ಪಡೆದಿದ್ದ ಕಾಂಗ್ರೆಸ್ ಬೆಂಬಲಿತರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ನಡೆಯಿತು. ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರನ್ನು ಕಾಂಗ್ರೆಸ್ ಬೈಂದೂರು ಬ್ಲಾಕ್ ಅಧ್ಯಕ್ಷ ಎಸ್. ಮದನಕುಮಾರ್ ಉಪ್ಪುಂದ, ಹಿರಿಯ ಮುಖಂಡ ಎಸ್. ರಾಜು ಪೂಜಾರಿ ಮೊದಲಾದವರು ಅಭಿನಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಭಾಗೀರಥಿ ಅಧ್ಯಕ್ಷರಾಗಿ ಮತ್ತು ವೆಂಕಟ ಪೂಜಾರಿ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಬೈಂದೂರು ತಹಶೀಲ್ದಾರ್ ರವಿ ಕಲಾಲ್ ಪಂಚಾಯಿತಿ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಿ, ಫಲಿತಾಂಶ ಘೋಷಣೆ ಮಾಡಿದರು. ಬಹುಮತ ಪಡೆದಿದ್ದ ಬಿಜೆಪಿ ಬೆಂಬಲಿತರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ನಡೆಯಿತು. ನೂತನವಾಗಿ ಆಯ್ಕೆಯಾದ ವೈ.ಶ್ರೀನಿವಾಸ ಖಾರ್ವಿ ಮತ್ತು ಪ್ರೇಮಾ ಸಿ.ಎಸ್. ಪೂಜಾರಿ ಅವರನ್ನು ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಶೋಭಾ ಜಿ.ಪುತ್ರನ್ ಶುಭ ಹಾರೈಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮೀಪದ ಜೆಸಿಐ ಶಿರೂರು ಘಟಕದ ವತಿಯಿಂದ ಸೋಡಿಗದ್ದೆ ಶಾಲೆಯಲ್ಲಿ ಜಂತು ಹುಳು ನಿವಾರಣೆ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭ ಶಿರೂರು ಜೆಸಿಐ ಅಧ್ಯಕ್ಷರಾದ ನಾಗೇಶ್ ಕೆ., ಕಾರ್ಯದರ್ಶಿ ನಾಗೇಂದ್ರ ಪ್ರಭು, ಗಿರಿಶ್ ಮೇಸ್ತ, ವಿನೋದ್ ಮೇಸ್ತ ಶಿರೂರು, ಶಾಲಾ ಶಿಕ್ಷಕರು ಮೊದಲಾದವರು ಹಾಜರಿದ್ದರು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗಂಗೊಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ವೈ.ಶ್ರೀನಿವಾಸ ಖಾರ್ವಿ ಮತ್ತು ಪ್ರೇಮಾ ಸಿ.ಎಸ್.ಪೂಜಾರಿ ಅವಿರೋಧ ಆಯ್ಕೆಯಾಗಿದ್ದಾರೆ. ಕುಂದಾಪುರ ತಹಶೀಲ್ದಾರ್ ತಿಪ್ಪೇಸ್ವಾಮಿ ಪಂಚಾಯಿತಿ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಿ, ಫಲಿತಾಂಶ ಘೋಷಣೆ ಮಾಡಿದರು. ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಬಹುಮತ ಪಡೆದಿದ್ದ ಬಿಜೆಪಿ ಬೆಂಬಲಿತರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ನಡೆಯಿತು. ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ತಾಲ್ಲೂಕು ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ನಾರಾಯಣ ಕೆ, ಸದಸ್ಯ ಸುರೇಂದ್ರ ಖಾರ್ವಿ, ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ, ತ್ರಾಸಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶೇಖರ ದೇವಾಡಿಗ, ಗಂಗೊಳ್ಳಿ ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಜಯರಾಮ ದೇವಾಡಿಗ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದರು. ಚುನಾವಣಾ ಶಾಖೆಯ ರವಿ, ಆಡಳಿತಾಧಿಕಾರಿ ಚಂದ್ರಶೇಖರ, ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕೋಟದಲ್ಲಿ ನಡೆದ ಯುವರೀರ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಪ್ರಕರಣದ ರುವಾರಿ ಉಡುಪಿ ಜಿ. ಪಂ ಸದಸ್ಯ ರಾಘವೇಂದ್ರ ಕಾಂಚನ್(38) ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಒಟ್ಟು ಆರು ಮಂದಿ ಬಂಧಿತರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಫೆ.7ರಂದು ಮಡಿಕೇರಿಯಲ್ಲಿ ರಾಜಶೇಖರ ರೆಡ್ಡಿ(44), ರವಿ ಯಾನೆ ಮೆಡಿಕಲ್ ರವಿ(42) ಎಂಬವರನ್ನು ಬಂಧಿಸಲಾಗಿತ್ತು. ರಾಘವೇಂದ್ರನನ್ನು ಇಂದು ಕೋಟದಲ್ಲಿ ಬಂಧಿಸಲಾಗಿದೆ. ಹೊಸನಗರದಲ್ಲಿ ಮಣೂರು ಗ್ರಾಮದ ಹರೀಶ್ ರೆಡ್ಡಿ(40), ಕೊಡವೂರು ಗ್ರಾಮದ ಮಹೇಶ್ ಗಾಣಿಗ(38), ಉಡುಪಿ ಲಕ್ಷ್ಮಿ ನಗರದ ರವಿಚಂದ್ರ ಪೂಜಾರಿ(23) ಎಂಬವರನ್ನು ಬಂಧಿಸಲಾಗಿದೆ. ಜ.27ರಂದು ನಡೆದ ಯುವಕರ ಬರ್ಬರ ಕೊಲೆ ಆರೋಪಿಗಳು ರಾಘವೇಂದ್ರ ಕಾಂಚನ್ ಜೊತೆ ಸಂಪರ್ಕದಲ್ಲಿದ್ದರು. ಕೊಲೆ ನಡೆದ ರಾತ್ರಿಯೇ ರಾಘವೇಂದ್ರ ಕಾಂಚನ್ ಸಂಪರ್ಕಿಸಿದ್ದರು. ಪೊಲೀಸ್ ತನಿಖೆ ಸಂದರ್ಭ ರಾಘವೇಂದ್ರ ಕಾಂಚನ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ದೃಢಪಟ್ಟಿತ್ತು. ರಾಘವೇಂದ್ರ ಕಾಂಚನ್ ಅಧ್ಯಕ್ಷನಾಗಿದ್ದ ಸಂಘಟನೆಗೆ ಪರ್ಯಾಯವಾಗಿ ಭರತ್ ಬೇರೊಂದು ಸಂಘಟನೆಯಲ್ಲಿ ಸಕ್ರೀಯವಾಗಿದ್ದೇ ದ್ವೇಷಕ್ಕೆ ಕಾರಣವಾಗಿತ್ತು ಎನ್ನಲಾಗಿದ್ದು, ಇದರೊಂದಿಗೆ ಟಾಯ್ಲೆಟ್ ಪಿಟ್ ಹೊಂಡದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಕಾಲೇಜು ರಸ್ತೆಯಲ್ಲಿ ರಾಜಾರೋಷವಾಗಿ ಹೊಡೆದಾಟಕ್ಕೆ ನಿಂತು ಮಾರಾಮಾರಿಗೆ ಕಾರಣವಾಗಿದ್ದ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ವಿದ್ಯಾರ್ಥಿಗಳ ಪೈಕಿ ಓರ್ವನನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೈಂದೂರು ತಾಲೂಕು ಕಿರಿಮಂಜೇಶ್ವರ ನಿವಾಸಿ ಸುಬ್ರಹ್ಮಣ್ಯ ಶೆಟ್ಟಿ (19) ಬಂಧಿತ ಆರೋಪಿ. ಹಾಡುಹಗಲೇ ವಿದ್ಯಾರ್ಥಿಗಳ ರೌಡಿಸಂನನನು ಗಂಭೀರವಾಗಿ ಪರಿಗಣಿಸಿದ ಕುಂದಾಪುರ ಎಸ್ಐ ಹರೀಶ್ ಆರ್. ನಾಯ್ಕ್ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದರು. ಸಿಬ್ಬಂಧಿಗಳಾದ ಚೇತನ್ ಹಾಗೂ ಪ್ರಸನ್ನ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುವ ವೇಳೆ ಆತ ತಪ್ಪೊಪ್ಪಿಕೊಂಡಿದ್ದಾರೆ. ಇದನ್ನು ಓದಿ ► ಕುಂದಾಪುರ: ನಡುರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಮಾರಾಮಾರಿ – https://kundapraa.com/?p=30986 . Video  

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಚಂಡಿಗಡ್ ವಿಶ್ವವಿದ್ಯಾಲಯ ಮತ್ತು ಆಲ್ ಇಂಡಿಯಾ ವಿಶ್ವವಿದ್ಯಾಲಯ ಆಶ್ರಯದಲ್ಲಿ ಫೆ.1ರಿಂದ 5ವರೆಗೆ ನಡೆದ 34ನೇ ರಾಷ್ಟ್ರಮಟ್ಟದ ಅಂತರ್ ವಿ.ವಿ ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಏಕಾಂಕ ನಾಟಕ ಧೂತ ವಾಕ್ಯ ದ್ವಿತೀಯ, ಜಾನಪದ ನೃತ್ಯ ತೃತೀಯ ಸ್ಥಾನವನ್ನು ಪಡೆಯುವುದರ ಮೂಲಕ 10ನೇ ಬಾರಿ ಪ್ರಶಸ್ತಿ ಗಳಿಸಿ ಆಳ್ವಾಸ್ ದಾಖಲೆ ನಿರ್ಮಿಸಿದೆ. ತಂಡದಲ್ಲಿರುವ 26 ಮಂದಿ ವಿದ್ಯಾರ್ಥಿಗಳು ಕೂಡ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅವರು ತರಬೇತುದಾರರನ್ನು ಹಾಗೂ ಪ್ರೋತ್ಸಾಹಿಸಿದ ಮಂಗಳೂರು ವಿ.ವಿ ಕಲುಪತಿ, ವಿದ್ಯಾರ್ಥಿ ಕ್ಷೇಮಪಾಲನ ವಿಭಾಗದ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಏಕಾಂಕ ನಾಟಕವನ್ನು ಖ್ಯಾತ ರಂಗಕರ್ಮಿ ಜೀವನರಾಮ ಸುಳ್ಯ ನಿರ್ದೇಶಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಫ್ರೆಂಡ್ಸ್ ನಾಯಕವಾಡಿ ಸಂಸ್ಥೆಯ ವಾರ್ಷಿಕೋತ್ಸವದ ಪ್ರಯುಕ್ತ ಜರುಗಿದ ತ್ರಾಸಿ ವಲಯ ಮಟ್ಟದ ಕಿರಿಯ ಶಾಲಾ ವಿದ್ಯಾರ್ಥಿಗಳ ಪ್ರತಿಭಾ ಸ್ಪರ್ಧೆ-೨೦೧೯ರಲ್ಲಿ ದೇಶ ಭಕ್ತಿ ನೃತ್ಯದಲ್ಲಿ ಮೇಲ್‌ಗಂಗೊಳ್ಳಿ ಸರಕಾರಿ ಕಿರಿಯ ಪ್ರಾಥಮಿಕ (ಹವೇ) ಶಾಲೆ ಪ್ರಥಮ ಸ್ಥಾನ ಗಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ರಾಜ್ಯದ ಕರಾವಳಿಯಲ್ಲಿ ಕೃಷಿ ಮತ್ತು ಮೀನುಗಾರಿಕೆ ಕ್ಷೇತ್ರಗಳು ಇಲ್ಲಿನ ಎಲ್ಲ ಉದೋಗಾಕಾಂಕ್ಷಿಗಳಿಗೆ ಉದ್ಯೋಗ ನೀಡಲಾರವು. ಇಲ್ಲಿನ ಪ್ರಾಕೃತಿಕ ಸೌಂದರ್ಯವನ್ನು ಬಳಸಿಕೊಂಡು ನಡೆಸಬಹುದಾದ ಪ್ರವಾಸೋದ್ಯಮ ಆ ಕೊರತೆಯನ್ನು ಖಂಡಿತ ನೀಗಿಸಬಲ್ಲುದು ಎಂದು ಉಡುಪಿಯ ಕಡಲತೀರ ಪ್ರವಾಸೋದ್ಯಮ ಸಂಘಟನೆಯ ಅಧ್ಯಕ್ಷ ಮನೋಹರ ಎಸ್. ಶೆಟ್ಟಿ ಅಭಿಪ್ರಾಯಪಟ್ಟರು. ಬುಧವಾರ ಗುಜ್ಜಾಡಿಯ ಹೆಬ್ಬಾರ್‌ಬೈಲು ಎಂಬಲ್ಲಿ ನೂತನವಾಗಿ ಪ್ರಾರಂಭಿಸಲಾಗಿರುವ ಸಾಂಪ್ರದಾಯಿಕ ದೋಣಿಮನೆ ’ಗಂಗೋತ್ರಿ ಹಾಲಿಡೇಸ್ ಕ್ರೂಸ್’ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ರಾಜ್ಯ 98 ಕಿಲೋ ಮೀಟರ್ ಉದ್ದದ ಕರಾವಳಿಯನ್ನು ಹೊಂದಿದೆ. ಸುಂದರ ಕಡಲತೀರ ಮತ್ತು ಸಮೃದ್ಧವಾದ ಹಿನ್ನೀರುಗಳಿವೆ. ಇಲ್ಲಿ ಜಲಕ್ರೀಡೆ, ಜಲಯಾನ, ಜಲಸಾಹಸಕ್ಕೆ ವಿಫುಲ ಅವಕಾಶಗಳಿವೆ. ಇವನ್ನು ನಡೆಸಲು ವಿಶೇಷ ಶಿಕ್ಷಣದ ಅಗತ್ಯವಿಲ್ಲ. ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲು ಯಾವುದೇ ತೊಂದರೆ ಆಗುದಿಲ್ಲ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಲು ಮುಂದಾಗುವವರಿಗೆ ಸರ್ಕಾರ ಸಹಾಯಧನ ನೀಡಬೇಕು ಎಂದು ಅವರು ಹೇಳಿದರು. ರಾಷ್ಟ್ರೀಯ ಕಬ್ಬಡಿ ಆಟಗಾರ ರಿಶಾಂಕ್ ದೇವಾಡಿಗ ಸಾಂಪ್ರದಾಯಿಕ ದೋಣಿಮನೆ…

Read More