ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕು ಕಟ್ಟಡ ಮತ್ತು ಇತರೆ ನಿಮಾ೯ಣ ಕಾಮಿ೯ಕರ ಸಂಘ(ಸಿಐಟಿಯು)ದ ನೇತೃತ್ವದಲ್ಲಿ ಕಾಲ್ತೋಡು ಗ್ರಾಮದ ಗೋಖ೯ಲ್ ಮತ್ತು ಅಲ್ಸಾಡಿ ಪ್ರದೇಶದ ಕಟ್ಟಡ ಕಾಮಿ೯ಕರ ಸಭೆ ಅಲ್ಸಾಡಿ ಮರ್ಲ ಚಿಕ್ಕು ದೈವಸ್ಥಾನದ ವಠಾದಲ್ಲಿ ನಡೆಯಿತು. ಕಟ್ಟಡ ಕಾಮಿ೯ಕರ ಸಂಘದ ತಾಲೂಕು ಪ್ರಧಾನ ಕಾಯ೯ದಶಿ೯ ಗಣೇಶ ತೊಂಡೆಮಕ್ಕಿ ಸಮಾವೇಶ ಉದ್ಘಾಟಿಸಿ ಮಾತನಾಡಿ, ನಮ್ಮ ಕಾಮಿ೯ಕ ಸಂಘಟನೆ ಸಿಐಟಿಯು ನೇತೃತ್ವದಲ್ಲಿ ನಡೆಸಿದ ಸಮರಶೀಲ ಹೋರಾಟದ ಫಲವಾಗಿ ಇದೀಗ ಕನಾ೯ಟಕ ಕಟ್ಟಡ ಕಾಮಿ೯ಕರ ಕಲ್ಯಾಣ ಮಂಡಳಿ ಬೆಂಗಳೂರು ಇವರು,ಕರೊನಾ ಸಂಕಷ್ಟಕ್ಕೊಳಗಾದ ಕಟ್ಟಡ ಕಾಮ೯ಕರಿಗೆ ಕೊಡಬೇಕಾದ ಬಾಕಿ ಪರಿಹಾರ ಹಣ ರೂಪಾಯಿ 5000 ಈ ಕೂಡಲೇ ಬಿಡುಗಡೆಗೆ ತೀಮಾ೯ನ ಮಾಡಿರುವುದು ಆಶಾದಾಯಕ ಬೆಳವಣಿಗೆ ಹಾಗೂ ಇದು ನಮ್ಮ ಸಂಘದ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಹೇಳಿದರು. ಸಿಐಟಿಯು ಮುಖಂಡರಾದ ರೊನಾಲ್ಡ್ ರಾಜೇಶ್ ಕ್ವಾಡ್ರಸ್, ವೆಂಕಟೇಶ್ ಕೋಣಿ ಪ್ರಾಸ್ತಾವಿಕ ಮಾತನಾಡಿದರು. ಮುಂದಿನ 25,ಏಪ್ರಿಲ್,2021ರಂದು ಗೋಖ೯ಲ್, ಅಲ್ಸಾಡಿ ಪ್ರದೇಶದ ಕಟ್ಟಡ ಮತ್ತು ಇತರೆ ನಿಮಾ೯ಣ ಕಾಮಿ೯ಕರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗೊಂಬೆಯಾಟ ಟ್ರಸ್ಟ್ನ ಬೆಳ್ಳಿ ಹಬ್ಬದ ಸಂಭ್ರಮ (1995-2020) ಹಾಗೂ ಸೂತ್ರಕ್ರೀಡೆಯ ಗಾರುಡಿಗ ಕೊಗ್ಗ ದೇವಣ್ಣ ಕಾಮತ್ ಜನ್ಮ ಶತಮಾನೋತ್ಸವ (1921-2021)ದ ಅಂಗವಾಗಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಗೊಂಬೆಮನೆಯಲ್ಲಿ ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ನಿರಂತರ ಸರಣಿ ಕಾರ್ಯಕ್ರಮದಡಿ 65ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಗಂಗೊಳ್ಳಿಯ ಶಶಾಂಕ್ ಶೆಣೈ ಪ್ರಾರ್ಥಿಸಿದರು. ನಾರಾಯಣ ವಿಶೇಷ ಮಕ್ಕಳ ಶಾಲೆ, ತಲ್ಲೂರಿನ ಸಂಚಾಲಕಿ ಮನೋರಮ ಕೆ. ಅಧ್ಯಕ್ಷ ಸ್ಥಾನ ವಹಿಸಿದ್ದರು. ದೇವಕಿ ಸುರೇಶ್ ಪ್ರಭು, ತಲ್ಲೂರು ಇವರನ್ನು ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಸದಾನಂದ ಶೆಣೈ ಪರ್ಕಳ, ಉಡುಪಿಯ ಖ್ಯಾತ ಉದ್ಯಮಿ ವಿಶ್ವನಾಥ ಶೆಣೈ ಮತ್ತು ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್ ಉಪಸ್ಥಿತರಿದ್ದರು ಗೊಂಬೆಯಾಟದ ಪ್ರೋತ್ಸಾಹಕರಾದ ನರೇಂದ್ರ ಹೆಗ್ಡೆ, ತಲ್ಲೂರು ಮತ್ತು ಗೊಂಬೆಯಾಟ ಅಕಾಡೆಮಿಯ ಹಿತೈಶಿಯಾದ ರಾಜಶ್ರೀ ಆರ್. ಪೈ ಇವರನ್ನೂ ಸತ್ಕರಿಸಲಾಯಿತು. ನಂತರ ದೇವಕಿ ಸುರೇಶ್ ಪ್ರಭು ತಲ್ಲೂರು ಇವರಿಂದ ಭಜನ್ ಸಂಧ್ಯಾ ಕಾರ್ಯಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂಹವನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸಫಿಯಾ ಅವರ ಸಂಶೋಧನಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್ಡಿ ಪ್ರದಾನ ಮಾಡಿದೆ. ಪತ್ರಿಕೋದ್ಯಮ ವಿಭಾಗದ ನಿವೃತ್ತ ಉಪನ್ಯಾಸಕಿ ಪ್ರೊ. ವಹೀದಾ ಸುಲ್ತಾನ ಅವರ ಮಾರ್ಗದರ್ಶನದಲ್ಲಿ ರಚಿಸಿದ ‘ಇಂಪಾಕ್ಟ್ ಆಫ್ ಸೋಷಿಯಲ್ ನೆಟ್ವರ್ಕಿಂಗ್ ಸೈಟ್ಸ್ ಎಮಾಂಗ್ ಮೀಡಿಯಾ ಪ್ರೊಫೆನಲ್ಸ್ ಇನ್ ಕರ್ನಾಟಕ’ ಎಂಬ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ನೀಡಲಾಗಿದೆ. ಇವರು ಆಳ್ವಾಸ್ ಕಾಲೇಜಿನ ಹಳೆಯ ವಿದ್ಯಾರ್ಥಿನಿಯಾಗಿದ್ದ ಸಫಿಯಾ ಅವರು ದಿ. ಅಬ್ದುಲ್ ಹಮೀದ್ ವೇಣೂರು ಹಾಗೂ ರಬಿಯಮ್ಮ ದಂಪತಿಯ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ತ್ವರಿತಗೊಳಿಸಿ ಶೀಘ್ರವೇ ಸಂಚಾರಕ್ಕೆ ಮುಕ್ತಗೊಳಿಸಬೇಕೆಂದು ಆಗ್ರಹಿಸಿ ಹೆದ್ದಾರಿ ಹೋರಾಟ ಸಮಿತಿಯು ಸೋಮವಾರ ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ. ಭೇಟಿ ಅಹವಾಲು ಸಲ್ಲಿಸಿತು. ಹೆದ್ದಾರಿ ಹೋರಾಟ ಸಮಿತಿ ಪರವಾಗಿ ಬಿ. ಕಿಶೋರ್ ಕುಮಾರ್ ಮಾತನಾಡಿ ಕುಂದಾಪುರ ಫ್ಲೈ ಓವರ್ ಸೇರಿದಂತೆ ಉಳಿದ ಕಾಮಗಾರಿ ಮಾರ್ಚ್ 31ರ ಒಳಗೆ ಪೂರ್ಣಗೊಳಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಭರವಸೆ ಇದೀಗ ಹುಸಿಯಾಗಿದ್ದು ಮತ್ತೊಮ್ಮೆ ಕಾಮಗಾರಿ ನೆನೆಗುದಿಗೆ ಬಿದ್ದಿದೆ. ಇನ್ನೆಷ್ಟು ಕಾಲ ಕಳೆಯುವುದು? ಮಳೆಗಾಲ ಬಂತೆಂದರೆ ಮತ್ತೆ ಕಾಮಗಾರಿ ಇನ್ನೊಂದು 6 ತಿಂಗಳು ಮುಂದುವರಿಯುತ್ತದೆ. ಶೀಘ್ರ ಕ್ರಮ ಕೈಗೊಂಡು ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಉಪವಿಭಾಗಾಧಿಕಾರಿ ರಾಜು ಕೆ. ಪ್ರತಿಕ್ರಿಯಿಸಿ ಇನ್ನು 15 ದಿನಗಳ ಒಳಗೆ ಹೆದ್ದಾರಿ ಕಾಮಗಾರಿ ಮುಗಿಸಿ ಸಂಚಾರಕ್ಕೆ ಮುಕ್ತಗೊಳಿಸುವ ಬಗ್ಗೆ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ ಎಂಬ ಮಾಹಿತಿಯನ್ನು ನಮಗೆ ನೀಡಿದರು. ಉಪವಿಭಾಗಾಧಿಕಾರಿ ನೀಡಿರುವ ಈ ಗಡುವಿನ ಒಳಗೆ ಈ ಕಾಮಗಾರಿ ಮುಗಿದು…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಧರ್ಮದ ಮೇಲೆ ನಿಷ್ಠೆ ಹೊಂದಿರುವ ಮೇಸ್ತ ಸಮಾಜದ ಅಭಿವೃದ್ಧಿ ಕಾರ್ಯಗಳಿಗೆ ಸರಕಾರದಿಂದ ಈಗಾಗಲೇ ಸುಮಾರು 50 ಲಕ್ಷ ಮಂಜೂರಾಗಿದ್ದು, ಮುಂದಿನ ದಿನಗಳಲ್ಲಿ ಗುಜ್ಜಾಡಿ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದ ಅಭಿವೃದ್ಧಿಗೆ ಮತ್ತು ಸಮಾಜದ ಅಭಿವೃದ್ಧಿಗೆ ಸರಕಾರದಿಂದ ಅಗತ್ಯ ನೆರವು ನೀಡಲು ಪ್ರಯತ್ನಿಸಲಾಗುವುದು. ಕಳೆದ 46 ವರ್ಷಗಳಿಂದ ನಿರಂತರವಾಗಿ ನಾಗಮಂಡಲೋತ್ಸವವನ್ನು ನಡೆಸಿಕೊಂಡು ಬಂದಿರುವ ಮೇಸ್ತ ಸಮಾಜ ಬಾಂಧವರು ದೇವಸ್ಥಾನದಲ್ಲಿ ನಿರಂತರವಾಗಿ ಧಾರ್ಮಿಕ ಚಟುವಟಿಕೆಗಳನ್ನು ಹಮ್ಮಿಕೊಂಡು ದೇವರ ಸಾನಿಧ್ಯ ವೃದ್ಧಿಗೆ ಶ್ರಮಿಸುತ್ತಿರುವುದು ಮತ್ತು ದೇವಸ್ಥಾನದ ಪ್ರತೀಕವಾಗಿರುವ ಸ್ವಾಗತ ಗೋಪುರ ನಿರ್ಮಿಸಿರುವುದು ಶ್ಲಾಘನೀಯ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು. ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದ ವತಿಯಿಂದ ಗುಜ್ಜಾಡಿ-ಬೆಣ್ಗೆರೆ ರಸ್ತೆ ಸಮೀಪ ನಿರ್ಮಿಸಲಾಗಿರುವ ಸ್ವಾಗತ ಗೋಪುರವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ದೇವಸ್ಥಾನದ ಅಧ್ಯಕ್ಷ ಉಮೇಶ ಎಲ್.ಮೇಸ್ತ, ಕಾರ್ಯದರ್ಶಿ ಶ್ರೀಧರ ಪಿ.ಮೇಸ್ತ, ಗುಜ್ಜಾಡಿ ಗ್ರಾಪಂ ಮಾಜಿ ಅಧ್ಯಕ್ಷ ಹರೀಶ ಮೇಸ್ತ, ಮೇಸ್ತ ಸಮಾಜದ ಹಿರಿಯರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಸಿದ್ಢಾರ್ಥ ಜೆ ಶೆಟ್ಟಿ ಕಾಲೇಜಿನ ಸಂಸ್ಥಾಪಕರಾದ ಮಾಜಿ ಸಂಸದ ಐ ಎಂ ಜಯರಾಮ ಶೆಟ್ಟಿಯವರ ಪುತ್ಹಳಿಗೆ ಹಾರಾರ್ಪಣೆ ಮಾಡಿ ಗೌರವವನ್ನು ಸಲ್ಲಿಸಿದರು. ಸಂಸ್ಥಾಪಕರ ಸಾಧನೆ ಮತ್ತು ಸೇವೆಗಳ ಸಾರಾಂಶ ವಿರುವ ವಿಡಿಯೊವನ್ನ ಪ್ರದರ್ಶಿಸಿ, ಶ್ರದ್ಧಾಂಜಲಿ ಅರ್ಪಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರರಾವ್ ಮದಾನೆ ಮಾತನಾಡಿ, ದಿ|ಜಯರಾಮ ಶೆಟ್ಟಿ ಇವರ ಜೊತೆಗಿನ ತಮ್ಮ ಒಡನಾಟದ ಮತ್ತು ಅನುಭವವನ್ನು ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಕಾಲೇಜಿನ ಬೆಳವಣಿಗೆಯಲ್ಲಿ ಶ್ರಮಿಸಿದ ಸಿಬ್ಬಂದಿಗಳಿಗೆ ಐಎಂಜೆ ಪ್ರಶಸ್ತಿ ಮತ್ತು ಫಲಕ ಗಳನ್ನ ನೀಡಿ ಸನ್ಮಾನಿಸಲಾಯಿತು. ಜೊತೆಗೆ ಕಾಲೇಜಿನ ವಿಧ್ಯಾರ್ಥಿಗಳಿಗೆ ಆಯೋಜಿಸಲಾದ ಪೆನ್ಸಿಲ್ ಉಪಯೋಗಿಸಿ ಸಂಸ್ಥಾಪಕರ ಭಾವಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ ಸೋಜಾ, ಕಾಲೇಜಿನ ಅಕಾಡೆಮಿಕ್ ಡೀನ್ ಡಾ. ಪ್ರತಿಭಾ ಪಟೇಲ್ ಮತ್ತು ಪ್ಲೇಸ್ಮೆಂಟ್ ಡೀನ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ 66 ಕೆಜಿ ವಿಭಾಗದಲ್ಲಿ 115 ಕೆಜಿ ಭಾರವನ್ನು ಎತ್ತುವ ಮೂಲಕ ಸತೀಶ್ ಖಾರ್ವಿ ಅವರು ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಚಿನ್ನದ ಪದಕ ಪಡೆದ ಇವರು ಕುಂದಾಪುರದ ಹರ್ಕುಲಸ್ ಜಿಮ್ನ ವ್ಯವಸ್ಥಾಪಕರು ಹಾಗೂ ತರಬೇತುದಾರರಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಕೀಲ ಸದಾನಂದ ಶೆಟ್ಟಿ ಅವರು ಬಡ್ಡಿ ವ್ಯವಹಾರ ನಡೆಸಿರುವುದು ಸುಳ್ಳು ಎಂದಾದರೆ ತನಿಕೆ ನಡೆಯಲಿ. ಆಗಲಾದರೂ ಅವರು ನಡೆಸಿದ ಸಂಚು ಹಾಗೂ ಸತ್ಯ ಹೊರಬರಲಿದೆ ಎಂದು ಬಿಜೆಪಿ ಮುಖಂಡ ಸದಾನಂದ ಉಪ್ಪಿನಕುದ್ರು ಹೇಳಿದ್ದಾರೆ. ವಕೀಲ ಸದಾನಂದ ಶೆಟ್ಟಿ ಅವರು ಕುಂದಾಪುರದಲ್ಲಿ ನಡೆಸಿರುವ ಪತ್ರಿಕಾಗೋಷ್ಠಿಯಲ್ಲಿ ಸುಳ್ಳು ಮಾಹಿತಿ ನೀಡಿದ್ದು, ತಾನು ಬಡ್ಡಿ ವ್ಯವಹಾರ ನಡೆಸಿಲ್ಲ ಎಂದಿದ್ದಾರೆ. ಆದರೆ ಅವರು ಅದೇ ವ್ಯವಹಾರದಲ್ಲಿ ತೊಡಗಿಕೊಂಡಿರುವುದಕ್ಕೆ ನನ್ನ ಬಳಿಯು ದಾಖಲೆಗಳಿವೆ. ಸುಖಾಸುಮ್ಮನೆ ಮಾತನಾಡಿಲ್ಲ ಎಂದು ಸದಾನಂದ ಉಪ್ಪಿನಕುದ್ರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನಾನು ಅವರಿಂದ ಬಡ್ಡಿ ಹಣ ಪಡೆಯುವಾಗ ನನ್ನಿಂದ ಬ್ಯ್ಲಾಂಕ್ ಚೆಕ್ ತೆಗೆದುಕೊಂಡು, ಖಾಲಿ ಬಾಂಡ್ ಪೇಪರ್ ಮೇಲೆ ಸಹಿ ಹಾಕಿಸಿಕೊಂಡಿದ್ದರು. ಅವರು ಹಾಗೂ ನನ್ನ ನಡುವೆ ಯಾವುದೇ ಜಾಗದ ವ್ಯವಹಾರ ನಡೆದಿಲ್ಲ. ಖಾಲಿ ಬಾಂಡ್ ಪೇಪರ್ ಮೇಲೆ ಅವರು ಜಾಗ ಮಾರಿದ್ದಾಗಿ ಬರೆದುಕೊಂಡಿರಬಹುದು. ಆದರೆ ನಾನು ಅವರಿಗೆ ಜಾಗ ಮಾರುವ ಪ್ರಸ್ತಾಪವೇ ಮಾಡಿಲ್ಲ. ನಾನು ಹೇಳುವುದು ಸುಳ್ಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕನ್ನಡದ ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಭಾನುವಾರ ತಮ್ಮ ಕುಟುಂಬಿಕರೊಂದಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಳದಲ್ಲಿ ಗಣಹೋಮ ನೆರವೇರಿಸಿದರು. ಧಾರ್ಮಿಕ ಕ್ಷೇತ್ರಗಳಿಗೆ ಯಾತ್ರೆ ಕೈಗೊಂಡಿರುವ ಅವರು ಕೊಲ್ಲೂರು, ಗುಡ್ಡಟ್ಟು, ಆನೆಗುಡ್ಡೆ, ಮಂದರ್ತಿ, ಮಣಿಕಲ್, ಧರ್ಮಸ್ಥಳ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ. ಕುಂದಾಪುರ ತಾಲೂಕಿನ ಕೆರಾಡಿಯವರಾದ ನಟ ರಿಷಬ್ ಶೆಟ್ಟಿ ಅವರು ಕಿರಿಕ್ ಪಾರ್ಟಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡುವಿನಂತಹ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವುದಲ್ಲದೇ, ಬೆಲ್ ಬಾಟಂ, ಹೀರೋ ಮೊದಲಾದ ಸಿನೆಮಾಗಳಲ್ಲಿ ನಾಯಕ ನಟನಾಗಿಯೂ ಸೈ ಎನಿಸಿಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇತ್ತಿಚಿಗೆ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಕೊಲ್ಲೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ವಿರುದ್ಧ ಮಾಡಿದ ಬೆದರಿಕೆ ಹಾಗೂ ಮಾನಸಿಕ ಹಿಂಸೆ ಆರೋಪಗಳು ಮತ್ತು ಅವುಗಳಿಗೆ ಸುಕುಮಾರ ಶೆಟ್ಟಿ ನೀಡಿದ ವಾಸ್ತವ ಅಂಶ ಆಧಾರಿತ ಸ್ಪಷ್ಟನೆಯ ಹಿನ್ನೆಲೆಯಲ್ಲಿ ಪಕ್ಷ ಕಾರ್ಯಕರ್ತರಲ್ಲಿ, ಮತದಾರರಲ್ಲಿ ಗೊಂದಲ ಏರ್ಪಟ್ಟಿದೆ. ಈ ಪ್ರಕರಣವನ್ನು ವಿರೋಧ ಪಕ್ಷಗಳು ತಮ್ಮ ಲಾಭಕ್ಕೆ ಬಳಸಿಕೊಳ್ಳಲು ತೊಡಗಿವೆ. ಈ ಕಾರಣದಿಂದ ಮತ್ತು ಸದಾನಂದ ಕುಟುಂಬದವರ ಮೇಲಿನ ಮಾನವೀಯತೆಯಿಂದ ಅವರ ವಿರುದ್ಧ ದಾಖಲಿಸಿರುವ ಚೆಕ್ ಬೌನ್ಸ್ ಪ್ರಕರಣವನ್ನು ಹಿಂತೆಗೆದುಕೊಳ್ಳಲು ಶಾಸಕರು ನಿರ್ಧರಿಸಿದ್ದಾರೆ ಎಂದು ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ಕುಮಾರ ಶೆಟ್ಟಿ ತಿಳಿಸಿದರು. ಭಾನುವಾರ ಇಲ್ಲಿನ ಪಕ್ಷ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಬಿಜೆಪಿ ಶಿಸ್ತಿನ ಪಕ್ಷ. ಅದರಲ್ಲಿ ಹಿರಿಯರು, ಕಿರಿಯರು ಒಂದು ಕುಟುಂಬದ ಸದಸ್ಯರಿದ್ದಂತೆ. ಒಂದು ಕೆಟ್ಟ ಘಳಿಗೆಯಲ್ಲಿ ಈ ಬೆಳವಣಿಗೆ ಆಗಿದೆ. ಇದನ್ನು ಮುಂದುವರಿಸಬಾರದೆಂದು ಪಕ್ಷದ ಜಿಲ್ಲಾ…
