ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಭಿನ್ನ ಐಡಿಯಾಸ್, ಕಾರ್ಟೂನು ಕುಂದಾಪ್ರ ಬಳಗದ ಆಶ್ರಯದಲ್ಲಿ ಇಲ್ಲಿನ ಕಲಾ ಮಂದಿರದಲ್ಲಿ ನಾಲ್ಕು ದಿನಗಳ ಕಾಲ ನಡೆಯುವ ಕಾರ್ಟೂನು ಹಬ್ಬ 2018ಉದ್ಘಾಟನೆಗೊಂಡಿತು. ಖ್ಯಾತ ಸಾಹಿತಿ ಜಯಂತ ಕಾಯ್ಕಿಣಿ ಕಾರ್ಟೂನು ಹಬ್ಬ ಉದ್ಘಾಟಿಸಿ ಮಾತನಾಡುತ್ತಿದ್ದರು. ಪತ್ರಕರ್ತ ಶ್ರೀನಿವಾಸ ಜೋಕಟ್ಟೆ, ಪೊಟೋ ಪತ್ರಕರ್ತ ಯಜ್ಞ ಮಂಗಳೂರು, ಪತ್ರಕರ್ತರಾದ ದಯಾಸಾಗರ್ ಚೌಟ, ಯು.ಕೆ.ಕುಮಾರನಾಥ್ ಮಾತನಾಡಿದರು. ಕ್ರೀಡಾ ಪೊಟೋ ಪತ್ರಕರ್ತ ಸುರೇಶ್ ಕೆ. ಕರ್ಕೇರ ಅವರನ್ನು ಸನ್ಮಾನಿಸಲಾಯಿತು. ಕುಂದಾಪುರ ಪ್ರಕಾಶ್ ಶೇಟ್, ಜಯಂತ ಕಾಯ್ಕಿಣಿ ಅವರಿಗೆ ಸಂಗೀತ ನಮನ ಸಲ್ಲಿಸಿದರು. ಗಿರಿಧರ ಕಾರ್ಕಳ, ಅವಿನಾಶ್ ಕಾಮತ್, ಸೋಮಶೇಖರ ಪಡುಕೆರೆ, ಶೇಖರ ಅಜೆಕಾರು, ಧನಂಜಯ ಗುರುಪುರ, ಕೇಶವ ಸಸಿಹಿತ್ಲು, ಸತೀಶ್ ಆಚಾರ್ಯಾ ಹಾಗೂ ಇನ್ನಿತರ ಕಲಾವಿದರ ಜತೆ ಅನೌಪಚಾರಿಕ ಸಮ್ಮಿಲನ ನಡೆಯಿತು. ಕಾರ್ಟೂನು ಹಬ್ಬ ಆಯೋಜಕ ಸತೀಶ್ ಆಚಾರ್ಯ ಸ್ವಾಗತಿಸಿದರು. ಗಿರಿಧರ ಕಾರ್ಕಳ ಅತಿಥಿಗಳ ಪರಿಚಯಿಸಿದರು. ರಾಮಕೃಷ್ಣ ಹೇರ್ಳೆ ನಿರೂಪಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ವರದಿ ಡಿ.೦6ರಂದು ಕುಂದಾಪುರದ ಅಧಿದೇವರಾದ ಶ್ರೀ ಕುಂದೇಶ್ವರನ ಸನ್ನಿಧಿಯಲ್ಲಿ ದೀಪೋತ್ಸವ ಹಾಗೂ ರಥೋತ್ಸವದ ಸಂಭ್ರಮ. ಕಾರ್ತಿಕ ಬಹುಳ ಅಮಾವಾಸ್ಯೆಯಂದು ನಡೆಯುವ ಈ ದೀಪಾರಾಧನೆಯನ್ನು ಊರಿನ ಜನ ಸಂಭ್ರಮದಿಂದ ಇದಿರು ನೋಡುತ್ತಿರುತ್ತಾರೆ. ಊರಿಗೆ ಊರೇ ಪಾಲ್ಗೊಳ್ಳುವ ಈ ಲಕ್ಷ ದೀಪೋತ್ಸವ ಅಕ್ಷರಶಃ ಒಂದು ಸಾರ್ವಜನಿಕ ಉತ್ಸವ. ಈ ಹಬ್ಬಕ್ಕೆ ಒಂದು ವಾರವಿರುವಾಗಲೇ ನಗರದ ಬೀದಿಗಳ ಬದಿಯಲ್ಲಿ ಸಂಚಾರೀ ಅಂಗಡಿಗಳವರು ಸಾಲುಗಟ್ಟಿ ಬೀಡು ಬಿಡುತ್ತಾರೆ. ದೇವಾಲಯದಲ್ಲಿ ದೀಪಾಲಂಕಾರ ಮತ್ತಿತರ ಸಿದ್ಧತೆಗಳು ಆರಂಭವಾಗುತ್ತವೆ. ಬೆಳಗ್ಗೆ ಶ್ರೀ ಕುಂದೇಶ್ವರನ ಸನ್ನಿಧಿಯಲ್ಲಿ ಶತರುದ್ರಾಭಿಷೇಕ; ಮಹಾಪೂಜೆ; ಮಹಾ ಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆದರೆ, ರಾತ್ರಿ ರಂಗಪೂಜೆ ಮತ್ತು ಮಹಾಮಂಗಳಾರತಿ ನಡೆದು ಶ್ರೀ ದೇವರ ಉತ್ಸವಮೂರ್ತಿ ಗರ್ಭಗುಡಿಯಿಂದ ಹೊರಬರುತ್ತದೆ. ಈ ಸಂದರ್ಭದಲ್ಲಿ ರಥೋತ್ಸವದ ಮಾದರಿಯಲ್ಲೇ ಹಳಗ – ಜಾಗಟೆ ಮೊದಲಾದ ವಾದ್ಯೋಪಕರಣಗಳ ನಿನಾದ; ದೇವಾಲಯದ ತಂತ್ರಿಗಳ ನೇತೃತ್ವದಲ್ಲಿ ಒಳಗೆ ಮೂರು ಸುತ್ತು ಮತ್ತು ಹೊರಾಂಗಣದಲ್ಲಿ ಮೂರು ಸುತ್ತು – ಹೀಗೆ ಬಲಿಗಲ್ಲುಗಳ ಬಳಿ ಬಲಿ ಸಮರ್ಪಣೆ. ಕೊನೆಯ…
ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಒಂದೇ ನೋಟಕ್ಕೆ ಮನತುಂಬಿದ ನಗು, ಒಮ್ಮೊಮ್ಮೆ ಸೆಡವು, ಬಾಗುವ ರೇಖೆಗೆ ತಕ್ಕಂತೆ ಬದಲಾಗುವ ಭಾವಲಹರಿ. ಕಾರ್ಟೂನ್ ಎಂದರೆ ಹಾಗೆ. ಆಳುವವರಿ ಗೊಂದು ಚಾಟಿ. ಜನಸಾಮಾನ್ಯರಿಗೆ ನಗುವಿನ ಚಟಾಕಿ. ವಾಸ್ತವದ ಅನಾವರಣ. ಕಾರ್ಟೂನಿಷ್ಠರಲ್ಲಿ ಕಲಾವಿದ, ಪತ್ರಕರ್ತ ಏಕಕಾಲದಲ್ಲಿ ಜಾಗೃತನಾಗಿರುತ್ತಾನೆ. ನೂರು ಪದಗಳಲ್ಲಿ ಹೇಳಬಹುದಾದದ್ದನ್ನು ಒಂದು ರೇಖೆಯಲ್ಲಿ ಹೇಳಿ ಮುಗಿಸುವ ಛಾತಿ ಕಾರ್ಟೂನಿಷ್ಠರದ್ದು. ಇಂತಹ ಕಾರ್ಟೂನಿಷ್ಠ ರನ್ನು ಕಾರ್ಟೂನಿಷ್ಠರ ತವರು, ಕುಂದಾಪುರದಲ್ಲಿ ಒಗ್ಗೂಡಿಸಿ ಕಳೆದ ನಾಲ್ಕು ವರ್ಷಗಳಿಂದ ಆಯೋಜಿಸುತ್ತಿರುವ ಕಾರ್ಟೂನು ಹಬ್ಬ, ಐದನೇ ವರ್ಷವೂ ಸಜ್ಜುಗೊಂಡಿದೆ. ಖ್ಯಾತ ವ್ಯಂಗ್ಯಚಿತ್ರಕಾರ ಕುಂದಾಪುರದ ಸತೀಶ್ ಆಚಾರ್ಯ ಅವರ ಸಾರಥ್ಯದಲ್ಲಿ ವಿಭಿನ್ನ ಐಡಿಯಾಸ್ ಹಾಗೂ ಕಾರ್ಟೂನು ಕುಂದಾಪ್ರ ತಂಡದ ಕಾರ್ಟೂನಿಷ್ಠರ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಟೂನು ಹಬ್ಬ ಹತ್ತಾರು ವಿಶೇಷತೆಗಳೊಂದಿಗೆ ರಂಗು ರಂಗಾಗಿ ನಡೆಯುತ್ತಿದ್ದು ಈ ಭಾರಿಯೂ ನಾಲ್ಕು ದಿನಗಳ ಕಾಲ ಕುಂದಾಪುರದ ಕಲಾಮಂದಿರದಲ್ಲಿ ಜರುಗಲಿದೆ. ಹಬ್ಬದಲ್ಲಿ ಕಾರ್ಟೂನು ಪ್ರದರ್ಶನ, ಸ್ಕೂಲ್ ಟೂನ್ ಚಾಂಪಿಯನ್ಶಿಪ್ ಕಾರ್ಟೂನು ಸ್ವರ್ಧೆ,…
ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಶತಮಾನದ ಇತಿಹಾಸ ಹೊಂದಿರುವ ಸಾಂಪ್ರದಾಯಿಕ ತಗ್ಗರ್ಸೆ ಕಂಬಳವು ಕಂಠದಮನೆ ಕುಟುಂಬಸ್ಥರಿಗೆ ಸೇರಿದ ಕಂಬಳಗದ್ದೆಯಲ್ಲಿ ಪ್ರತಿವರ್ಷದಂತೆ ವಿಧಿವತ್ತಾಗಿ, ವಿಜೃಂಭಣೆಯಿಂದ ನಡೆಯಿತು. ಹಲವು ಜೊತೆ ಕೋಣಗಳು ಹರಕೆ ಹಾಗೂ ಸ್ವರ್ಧೆಯಲ್ಲಿ ಭಾಗವಹಿಸಿ ಕಂಬಳದ ಮೆರಗು ಹೆಚ್ಚಿಸಿದವು. ಕಂಬಳದ ದಿನ ಬೆಳಿಗ್ಗೆ ಗದ್ದೆಯ ಅಲಂಕಾರ, ಪೂಜೆ ಕಾರ್ಯಾದಿಗಳು ನೆರವೇರಿದ ಬಳಿಕ ಮಧ್ಯಾಹ್ನ ಕಂಬಳಕ್ಕೆ ಬರುವ ಕೋಣಗಳನ್ನು ವೀಳ್ಯ, ತೆಂಗಿನಕಾಯಿ ನೀಡಿ ಬರಮಾಡಿಕೊಳ್ಳಲಾಯಿತು.ಕಂಬಳ ಗದ್ದೆಯನ್ನು ಖುರ್ಜು ನಿಲ್ಲಿಸಿ, ತೋರಣಗಳಿಂದ ಅಲಂಕರಿಸಲಾಗಿತ್ತು. ಊರಿನ ಒಂದು ನಿರ್ದಿಷ್ಟ ಕುಟುಂಬದ ಕೋಣಗಳನ್ನು ಗದ್ದೆಗೆ ಇಳಿಸಿದ ಬಳಿಕ ಕಂಬಳಕ್ಕೆ ಅಧಿಕೃತ ಚಾಲನೆ ದೊರೆಯಿತು. ವಿಶೇಷ ವೇಷಭೂಷಣ, ವಾದ್ಯ ಮುಂತಾದವುಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿಬಂದ ನೂರಾರು ಜೊತೆ ಕೋಣಗಳ ಪೈಕಿ ಕೆಲವನ್ನು ಕಂಬಳ ಗದ್ದೆಯಲ್ಲಿ ಹರಕೆಯ ಸಲುವಾಗಿ ಕೋಣಗಳನ್ನು ಓಡಿಸಿದರೇ, ಉಳಿದ ಕೋಣಗಳು ಸ್ವರ್ಧೆಯಲ್ಲಿ ಪಾಲ್ಗೊಂಡವು. ಕಂಠದಮನೆ ಕುಟುಂಬದ ನಾರಾಯಣ ಹೆಗ್ಡೆಯವರ ಸಾರಥ್ಯದಲ್ಲಿ ಸಾಂಪ್ರದಾಯಿಕ ಕಂಬಳ ಮುನ್ನಡೆಯುತ್ತಿದ್ದು ಊರಿನ ಜನ ಹಬ್ಬದಂತೆ ಸಂಭ್ರಮಿಸಿದರು. ವಿಶಾಲ ಗದ್ದೆಯ ಅಂಚುಗಳಲ್ಲಿ ನಿಂತು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ನೃತ್ಯ ವಸಂತ ನಾಟ್ಯಾಲಯದ ನಿರ್ದೇಶಕಿ, ವಿದುಷಿ ಪ್ರವಿತಾ ಅಶೋಕ್ ಅವರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ. ನೃತ್ಯ ವಸಂತ ನಾಟ್ಯಾಲಯವನ್ನು ಹುಟ್ಟುಹಾಕಿ ಕಳೆದ 14 ವರ್ಷಗಳಿಂದ ನೂರಾರು ನೃತ್ಯಾಸಕ್ತರಿಗೆ ತರಬೇತಿ ನೀಡುತ್ತಿರುವ ಅವರು ಶಾಸ್ತ್ರೀಯ ನೃತ್ಯ ಮಾರ್ಗದರ್ಶಕಿಯಾಗಿ ಲಘು ಶಾಸ್ತ್ರೀಯ ನೃತ್ಯ ಸಂಯೋಜಿಸಿ ಅನೇಕರಿಗೆ ತರಬೇತಿ ನೀಡಿದ್ದಾರೆ. ಅವರಿಗೆ ಈವರೆಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿದೆ. p
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯಕ್ಷಗಾನ ಭಾಗವತ ಹೆರಂಜಾಲು ಗೋಪಾಲ ಗಾಣಿಗರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. ೧೯೮೪ರಲ್ಲಿ ಯಕ್ಷಗಾನ ವೃತ್ತಿಪರ ಮೇಳದಲ್ಲಿ ಕಲಾವಿದರಾಗಿ ಯಕ್ಷಗಾನ ಕಲೆಯಲ್ಲಿ ತೊಡಗಿಸಿಕೊಂಡ ಹೆರಂಜಾಲು ಗೋಪಾಲ ಗಾಣಿಗರು ಖ್ಯಾತ ಯಕ್ಷಗಾನ ಕಲಾವಿದ ದಿ. ಹೆರಂಜಾಲು ವೆಂಕಟರಮಣ ಗಾಣಿಗ ಪುತ್ರ. ನಾಲ್ಕನೇ ತರಗತಿಯೇ ವಿದ್ಯಾಭ್ಯಾಸ ಮೊಟಕುಗೊಳಿಸಿ ಕಲಾ ಸೇವೆಯಲ್ಲಿ ತೊಡಗಿಸಿಕೊಂಡವರು. ಹೆರಂಜಾಲಿನಲ್ಲಿ ಯಕ್ಷಗಾನ ಪ್ರತಿಷ್ಠಾನವನ್ನು ಸ್ಥಾಪಿಸಿ ಆಸಕ್ತ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲೆಯ ತರಭೇತಿ ನೀಡುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯಕ್ಷಗಾನ ಕಲೆಯ ಸಿಡಿಲ ಮರಿ ಎಂದೇ ಖ್ಯಾತರಾಗಿರುವ ತೀರ್ಥಹಳ್ಳಿ ಗೋಪಾಲ ಆಚಾರ್ಯ ಅವರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. ತಮ್ಮ ಹದಿನಾಲ್ಕನೇ ವಯಸ್ಸಿನಲ್ಲಿಯೇ ಯಕ್ಷಗಾನ ರಂಗಕ್ಕೆ ಪಾದಾರ್ಪಣೆ ಮಾಡಿದ ಗೋಪಾಲ ಆಚಾರ್ಯ ಅವರು ಕರಾವಳಿಯ ವಿವಿಧ ಮೇಳಗಳಲ್ಲಿ ವೇಷಕಟ್ಟಿ ಕುಣಿದಿದ್ದಾರೆ. ತಮ್ಮ ೬೩ನೇ ವಯಸ್ಸಿನಲ್ಲಿಯೂ ಅತಿಥಿ ಕಲಾವಿದರಾಗಿ ಕಲಾ ಸೇವೆಯಲ್ಲಿ ಸಕ್ರೀಯರಾಗಿದ್ದಾರೆ. ನಾಗೂರಿನಲ್ಲಿ ಪ್ರತಿವರ್ಷ ಒಂದು ವಾರಗಳ ಕಾಲ ಯಕ್ಷಗಾನ ತಾಳಮದ್ದಳೆಯನ್ನು ಯಶಸ್ವಿಯಾಗಿ ಆಯೋಜಿಸುತ್ತಿದ್ದಾರೆ. ಮಲೆನಾಡಿನವರಾದ ಅವರು ಪ್ರಸ್ತುತ ನಾಯ್ಕನಕಟ್ಟೆಯಲ್ಲಿ ನೆಲೆಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಸಂಗಕರ್ತ, ಯಕ್ಷಗಾನ ಭಾಗವತ ಎಂ. ಎಚ್. ಪ್ರಸಾದ್ ಮೊಗೆಬೆಟ್ಟು ಅವರಿಗೆ ಈ ಭಾರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ಮೊಗೆಬೆಟ್ಟು ಅವರು ಕಳೆದ 25 ವರ್ಷಗಳಿಂದ ಯಕ್ಷಗಾನ ಕಲಾಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ರಾಜ್ಯ, ಹೊರರಾಜ್ಯ, ಅಲ್ಲದೇ ವಿದೇಶದಲ್ಲಿಯೂ ಸಹ ಯಕ್ಷಗಾನ ಕಾರ್ಯಕ್ರಮಗನ್ನು ನೀಡಿರುವ ಹೆಗ್ಗಳಿಕೆ ಅವರದ್ದು. ಈವರೆಗೆ 23 ಯಕ್ಷಗಾನ ಪ್ರಸಂಗವನ್ನು ರಚಿಸಿ ಖ್ಯಾತಿಗಳಿಸಿದ್ದಾರೆ. 2003ರಲ್ಲಿ ಸಾಂಪ್ರದಾಯಿಕ ಭಾಗವತಿಕೆ ಕಲಿಕೆಗೆ ಕೇಂದ್ರ ಸರಕಾರದಿಂದ ಸಂಸ್ಕೃತಿ ಅಕಾಡೆಮಿಯ ಸ್ಕಾಲರ್ಶಿಪ್ ಪಡೆದಿದ್ದಾರೆ. 50ಕ್ಕೂ ಹೆಚ್ಚು ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮ ನೀಡಿ ಎ ಗ್ರೇಡ್ ಮಾನ್ಯತೆಯನ್ನು ಪಡೆದಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪತ್ರಿಕೋದ್ಯಮ, ಸಂಘಟನೆ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಅವಿರತವಾಗಿ ತೊಡಗಿಸಿಕೊಂಡ ಕ್ರೀಯಾಶೀಲ ವ್ಯಕ್ತಿತ್ವದ ಹಿರಿಯ ಪತ್ರಕರ್ತ ಶೇಖರ ಅಜೆಕಾರು ಅವರಿಗೆ ಈ ಭಾರಿಯ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. ಮುಂಬೈ ಯುನಿವರ್ನಿಟಿಯಲ್ಲಿ ಕನ್ನಡ ಎಂ.ಎನಲ್ಲಿ ಚಿನ್ನದ ಪದಕ ಪಡೆದುಕೊಂಡ ಅವರು ಕುಂದಾಪುರದಲ್ಲಿ ತಮ್ಮ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದರು. ಕುಂದಾಪುರ, ಮುಂಬೈ, ಬೆಂಗಳೂರು, ಮೂಡುಬಿದಿರೆಯಲ್ಲಿ ಕುಂದಪ್ರಭ, ಕರ್ನಾಟಕ ಮಲ್ಲ, ಕನ್ನಡಪ್ರಭ ಸೇರಿದಂತೆ ವಿವಿಧೆಡೆ ದಿನಪತ್ರಿಕೆ, ವೆಬ್ ಪೋರ್ಟೆಲ್ಗಳಲ್ಲಿ ಸುಧೀರ್ಘ ಸೇವೆ ಸಲ್ಲಿಸಿರುವ ಅವರು ಪ್ರಸ್ತುತ ಅಜೆಕಾರನ್ನು ಕೇಂದ್ರವಾಗಿರಿಸಿಕೊಂಡು ಕಾರ್ಯಪ್ರವೃತ್ತರಾಗಿದ್ದಾರೆ. ಸಂಘಟನಾತ್ಮವಾಗಿಯೂ ತೊಡಗಿಸಿಕೊಂಡಿದ್ದ ಅವರು ಮುಂಬಯಿ ಪೊವಾ ಕನ್ನಡ ಸೇವಾ ಸಂಘದ ಸ್ಥಾಪಕಾಧ್ಯಕ್ಷರಾಗಿ ಹೊರನಾಡಿನಲ್ಲಿ ಕನ್ನಡ ಕಟ್ಟುವ ಕಾಯಕದಲ್ಲಿ ಸಕ್ರೀಯರಾಗಿದ್ದರು. ಬೆಳದಿಂಗಳ ಸಾಹಿತ್ಯ ಸಮ್ಮೇಳನ, ಆದಿ ಗ್ರಾಮೋತ್ಸವ, ಮಿನಿ ಚಲನಚಿತ್ರೋತ್ಸವ, ಕವಿಗೋಷ್ಠಿ ಮುಂತಾದ ಸಮ್ಮೇಳನ, ಕಾರ್ಯಕ್ರಮಗಳ ಮೂಲಕ ನೂರಾರು ಸಾಧಕರು ಹಾಗೂ ಎಲೆಮರೆಯ ಕಾಯಿಯಂತಿದ್ದ ಪ್ರತಿಭೆಗಳನ್ನು ಗುರುತಿಸಿ ಗೌರವಿಸಿ ಹೆಗ್ಗಳಿಕೆ ಅವರದ್ದು. ಕನ್ನಡ ಸಾಹಿತ್ಯ ಪರಿಷತ್ ಅಜೆಕಾರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಹುಬ್ಬಳ್ಳಿಯ ಕೆ.ಎಲ್.ಇ. ತಾಂತ್ರಿಕ ಶಿಕ್ಷಣ ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿಗಳೆಲ್ಲಾ ಸೇರಿ ಡಿಸೆಂಬರ್ 9 ರಂದು ಪೂನಾದ ವಿಮಾನನಗರದ “ನೋವೋಟೆಲ್ ಹೋಟೆಲ್”ನಲ್ಲಿ ೨ನೇ ಅಂತರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಂಡಿದ್ದಾರೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಇನ್ಫೋಸಿಸ್ ಫೌಂಡೇಶನ್ ಚೇರ್ಮನ್ ಡಾ. ಸುಧಾಮೂರ್ತಿ, ಎಐಸಿಟಿಇ ಯ ಚೇರ್ಮನ್ ಹಾಗೂ ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ ಹಾಗೂ ಮಾಜಿ ಸಚಿವ ಬಸವರಾಜ ಬೊಮ್ಮಾಯಿಯವರು ಆಗಮಿಸಲಿದ್ದಾರೆ. ಹುಬ್ಬಳ್ಳಿಯ ಕೆ.ಎಲ್.ಇ. ತಾಂತ್ರಿಕ ಶಿಕ್ಷಣ ವಿಶ್ವವಿದ್ಯಾಲಯ ಈ ಹಿಂದೆ ಬಿ. ವಿ. ಭೂಮರೆಡ್ಡಿ ತಾಂತ್ರಿಕ ವಿಶ್ವವಿದ್ಯಾಲಯ ಎಂದು ಕರೆಯಲ್ಪಡುತ್ತಿತ್ತು. ಇಲ್ಲಿ ಕಲಿತ ಹಲವಾರು ಹಳೆ ವಿದ್ಯಾರ್ಥಿಗಳು ಇಂದು ವಿಶ್ವದ ಪ್ರಸಿದ್ಧ ಸಂಸ್ಥೆಗಳಲ್ಲಿ, ದೇಶಗಳಲ್ಲಿ ಹೆಸರು ಗಳಿಸಿದ್ದಾರೆ. ಆ ಪೈಕಿ ಇನ್ಫೋಸಿಸ್ ಫೌಂಡೇಶನ್ನ ಡಾ. ಸುಧಾಮೂರ್ತಿ, ವಿವೇಕ್ ಕುಲಕರ್ಣಿ, ಎಸ್.ಆರ್. ಹಿರೇಮಠ ಮೊದಲಾದವರು ಪ್ರಮುಖರು. ಹೆಚ್ಚಿನ ಸಂಖ್ಯೆಯಲ್ಲಿ ಹಳೆ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೋರಲಾಗಿದೆ.
