ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಉಪ್ಪುಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಪ್ಪುಂದ ಕಲ್ಯಾಣಿ ಪರಮೇಶ್ವರ ಭಟ್ ಟ್ರಸ್ಟ್ ರಿ. ಬೆಂಗಳೂರು ಇದರ ವತಿಯಿಂದ ವಿದ್ಯಾರ್ಥಿಗಳಿಗೆ 90 ಸಾವಿರ ಮೌಲ್ಯದ ಉಚಿತ ನೋಟ್ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಸತ್ತಿನ ಮಾಜಿ ಅಧ್ಯಕ್ಷ ಉಪ್ಪುಂದ ಚಂದ್ರಶೇಖರ ಹೊಳ್ಳರವರು ಆಧುನಿಕ ಪ್ರಪಂಚದಲ್ಲಿ ಪ್ರತಿ ಕ್ಷೇತ್ರದಲ್ಲ್ಲಿಯೂ ಬದಲಾವಣೆಗಳು ಸ್ವಾಭಾವಿಕವಾಗಿದ್ದು ಆದರಂತೆ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗಳಾಗಿದ್ದು ಆದರೆ ನಮ್ಮ ಸಂಸ್ಕೃತಿಯ ಪರಿಚಯ ನಿರಂತರವಾಗಿ ಸಾಗಬೇಕು, ಜೊತೆಯಲ್ಲಿ ಆಧುನಿಕ ಶಿಕ್ಷಣ ಪದ್ಧತಿ ಅಳವಡಿಕೆಯಾಗುವುದರೊಂದಿಗೆ ಗ್ರಾಮೀಣ ಭಾಗದ ಎಲ್ಲಾ ವಿದ್ಯಾರ್ಥಿಗಳಿಗೂ ಲಭ್ಯವಾಗಬೇಕು ಎಂದು ಹೇಳುತ್ತಾ ಉಪ್ಪುಂದ ಮಾದರಿ ಶಾಲೆಯ ಸಮಗ್ರ ಬೆಳವಣಿಗೆಯಲ್ಲಿ ದಾನಿಗಳ ಕೊಡುಗೆ ಬಹಳ ದೊಡ್ಡದು ಅದರಂತೆ ಯು.ಕೆ ಪಿ.ಬಿ ಟ್ರಸ್ಟ್ ಕೊಡುಗೆ ಸಹ ಶ್ಲಾಘನೀಯವಾಗಿದ್ದು ಎಂದು ಹೇಳಿದ್ದಾರೆ. ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ರಾಜರಾಮ ಪಡಿಯಾರ್ ಸಮಾರಂಭದ ಅಧ್ಯಕ್ಷತೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲೆಯಲ್ಲೇ ಪ್ರಥಮವಾಗಿ ಟೆಲಿ ಸೈಕಿಯಾಟ್ರಿಕ್ ಕ್ಯಾಂಪ್ ಅನ್ನು ಆರಂಭಿಸಿದ್ದು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಈ ಚಿಕಿತ್ಸೆಯಲ್ಲಿ ಖನ್ನತೆ ಹಾಗೂ ಮದ್ಯ ವ್ಯಸನಿಗಳು ಹೆಚ್ಚಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಿಂಗಳ ಮೊದಲ ಸೋಮವಾರ ಈ ಟೆಲಿ ಕ್ಯಾಂಪ್ ಆಸ್ಪತ್ರೆಯಲ್ಲಿ ನಡೆಸಲಾಗುತ್ತದೆ. ಈ ಚಿಕಿತ್ಸೆಯಲ್ಲಿ 50 ರಿಂದ 60 ಮಂದಿ ರೋಗಿಗಳು ಪ್ರತಿ ತಿಂಗಳು ಪಾಲ್ಗೊಳ್ಳುತ್ತಿದ್ದಾರೆ. ವೈದ್ಯರ ಜತೆ ಮಣಿಪಾಲದ ಮಾನಸಿಕ ಆರೋಗ್ಯ ವಿಭಾಗದ ಮುಖ್ಯಸ್ಥರೂ ಮಾತುಕತೆ ನಡೆಸಿ ಕೌನ್ಸೆಲಿಂಗ್ ಮೂಲಕ ಚಿಕಿತ್ಸೆ ನೀಡುತ್ತಾರೆ. ಕಳೆದ ಒಂದೂವರೆ ವರ್ಷದಿಂದ ಈ ಆಸ್ಪತ್ರೆಯಲ್ಲಿ ನಡೆಸುತ್ತಿರುವ ಟೆಲಿ ಸೈಕಿಯಾಟ್ರಿಕ್ ಕ್ಯಾಂಪ್ ಕಂಡ್ಲೂರಿನಂತಹ ಗ್ರಾಮೀಣ ಪ್ರದೇಶದಲ್ಲಿ ಯಶಸ್ವಿಯಾಗಿರುವುದು ಗಮನಾರ್ಹ. ಪ್ರತಿದಿನವೂ 150 ರಿಂದ 200 ರೋಗಿಗಳು ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಳ ರೋಗಿಗಳಿಗೆ ಆರು ಹಾಸಿಗೆಗಳಿವೆ. ಬೆಳಗ್ಗೆಯಿಂದ ಸಂಜೆಯವರೆಗೆ ಇಲ್ಲಿ ಚಿಕಿತ್ಸೆ ಲಭ್ಯ. ಬಳ್ಕೂರು, ಕಾವ್ರಾಡಿ, ಹಳ್ನಾಡುಗಳಲ್ಲಿ ಮೂರು ಉಪಕೇಂದ್ರಗಳಿವೆ. 9…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ನಕ್ಸಲ್ ಪೀಡಿತ ಪ್ರದೇಶವಾದ ಮಡಾಮಕ್ಕಿ ಗ್ರಾಮದ ಹಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಖಾಯಂ ಶಿಕ್ಷಕಿ ಹೆರಿಗೆ ರಜೆಯಲ್ಲಿರುವುದರಿಂದ ಪ್ರಸ್ತುತ ಶಿಕ್ಷಕರಿಲ್ಲದೆ ಮಕ್ಕಳು ಪರದಾಡುವಂತಾಗಿದೆ. ನಕ್ಸಲ್ ಬಾಧಿತ ಪ್ರದೇಶವೆಂದು ಗುರುತಿಸಲ್ಪಟ್ಟ ಹಂಜ ಪರಿಸರದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಡಾಮಕ್ಕಿ ಪೇಟೆಯಿಂದ ನಾಲ್ಕೂವರೆ ಕಿ.ಮೀ. ತೀರ ಒಳಪ್ರದೇಶದಲ್ಲಿದೆ. ಹಂಜ, ಎಡಮಲೆ ಭಾಗದಲ್ಲಿ 40ಕ್ಕೂ ಅಧಿಕ ಮನೆಗಳಿಗೆ ಇರುವ ಏಕೈಕ ಶಾಲೆಯಾಗಿದೆ. ಕಡಿಮೆ ಮಕ್ಕಳಿರುವ ಸರಕಾರಿ ಶಾಲೆಯನ್ನು ಹತ್ತಿರದ ಶಾಲೆಯೊಂದಿಗೆ ವಿಲೀನಗೊಳಿಸಬೇಕು ಎನ್ನುವ ಸರಕಾರಿ ಆದೇಶವಿದ್ದರೂ ಶಾಲೆಯನ್ನು ಉಳಿಸಲು ಸ್ಥಳೀಯರು ಸಾಕಷ್ಟು ಶ್ರಮಿಸುತ್ತಿದ್ದಾರೆ. ಮೂಲಸೌಕರ್ಯ ವಂಚಿತ ಹಾಗೂ ನಕ್ಸಲ್ ಪೀಡಿತ ಪ್ರದೇಶದಲ್ಲಿರುವ ಏಕೈಕ ಶಾಲೆಯೆನ್ನುವ ನೆಲೆಯಲ್ಲಿ ಇಲಾಖೆ ಮತ್ತು ಸ್ಥಳೀಯರು ಶಾಲೆಯನ್ನು ಜೀವಂತವಾಗಿಸಿಕೊಂಡಿದ್ದಾರೆ. ಆದರೆ ಸರಕಾರಿ ಶಾಲೆಯಲ್ಲಿರುವ ಖಾಯಂ ಶಿಕ್ಷಕಿ ಹೆರಿಗೆ ರಜೆಯಲ್ಲಿರುವುದರಿಂದ ಪ್ರಸ್ತುತ ಶಿಕ್ಷಕರಿಲ್ಲದೆ ಶಾಲೆ ಮುಚ್ಚುವ ಭೀತಿ ಎದುರಾಗಿದೆ. ಹಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯು 1ರಿಂದ 5ನೇ ತರಗತಿಯಿದ್ದು, ಒಟ್ಟು 11…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬಿರುಗಾಳಿ, ಮಳೆ ಹಾಗೂ ಸಿಡಿಲಿನಂತಹ ಪ್ರಕೃತಿ ವಿಕೋಪದಿಂದ ಮನೆ, ಕೊಟ್ಟಿಗೆ, ಕೃಷಿ ಮತ್ತು ತೋಟಗಾರಿಕಾ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ ಬೈಂದೂರು ಹೋಬಳಿ ಮಟ್ಟದ 29 ಫಲಾನುಭವಿಗಳಿಗೆ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಸುಮಾರು ಒಟ್ಟು 1.5 ಲಕ್ಷ ಮೊತ್ತದ ಚೆಕ್ ವಿತರಿಸಿದರು. ಈ ಸಂದರ್ಭ ತಹಶೀಲ್ದಾರ್, ಕಂದಾಯ ನಿರೀಕ್ಷಕ ಅಣ್ಣಪ್ಪ ಬಿ., ವಿವಿಧ ಗ್ರಾಮದ ಗ್ರಾಮಲೆಕ್ಕಿಗರು, ರೈತಸಂಘದ ಅಧ್ಯಕ್ಷ ಎನ್. ದೀಪಕ್ಕುಮಾರ್ ಶೆಟ್ಟಿ ಮೊದಲಾದವರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಯಡ್ತರೆ ಗ್ರಾಪಂ ವ್ಯಾಪ್ತಿಯ ಕೊರಾಡಿ ಶ್ರೀ ವನದುರ್ಗಾದೇವಿ ದೇವಸ್ಥಾನದಲ್ಲಿ ಮದ್ದೋಡಿ ಮತ್ತು ಆಲಂದೂರು ಭಾಗದ ಗ್ರಾಮಸ್ಥರಿಂದ ನೂತನ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿಯವರಿಗೆ ಅಭಿನಂದನಾ ಹಾಗೂ ಸನ್ಮಾನ ಕಾರ್ಯಕ್ರಮ ಜರುಗಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿಯವರು ರಾಜ್ಯದ ಜನತೆ ಹಿಂದಿನ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಬೇಸತ್ತು ಈ ಬಾರಿ ಬಿಜೆಪಿಯ ಹೆಚ್ಚಿನ ಸ್ಥಾನವನ್ನು ಗಳಿಸಿಕೊಟ್ಟರೂ ಕೆಲವೇ ಸೀಟುಗಳ ಕೊರತೆಯಿಂದಾಗಿ ಬಹುಮತ ಬರದ ಹಿನ್ನೆಲೆಯಲ್ಲಿ ಜಿಜೆಪಿಗೆ ಆಡಳಿತ ನಡೆಸಲಾಗಿಲ್ಲ. ತಿಂಗಳು ಕಳೆದರೂ ಇನ್ನೂ ಟೇಕ್ಅಪ್ ಆಗದ ಈಗಿನ ಸಮ್ಮಿಶ್ರ ಸರ್ಕಾರ ಆರು ತಿಂಗಳೊಳಗೆ ಪಥನಗೊಂಡು ಮುಂದೆ ಯಡಿಯೂರಪ್ಪನವರ ಸರ್ಕಾರ ಆಡಳಿತ ಚುಕ್ಕಾಣಿ ಹಿಡಿಯಲಿದೆ ಎಂದು ಭವಿಷ್ಯ ನಡಿದರು. ಸಮಾಜದ ಕಟ್ಟಕಡೆಯ ಮಗುವು ಕೂಡಾ ವಿದ್ಯಾವಂತನಾದರೆ ಭಾರತ ಬಲಿಷ್ಠಗೊಳ್ಳುತ್ತದೆ. ಆ ನೆಲೆಯಲ್ಲಿ ಮೊದಲಿನಿಂದಲೂ ಶೈಕ್ಷಣಿಕ, ಧಾರ್ಮಿಕ ಹಾಗೂ ಸಮಾಜಮುಖಿ ಕಾರ್ಯಗಳನ್ನು ಸ್ವಂತ ಲಾಭಕ್ಕಾಗಿ ಮಾಡದೇ ನಿಸ್ವಾರ್ಥದಿಂದ ಪ್ರಾಮಾಣಿಕವಾಗಿ ಮಾಡುತ್ತಾ ಬಂದಿದ್ದೇನೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬೈಂದೂರಿನ ಸಮನ್ವಯಾಧಿಕಾರಿ ಕಚೇರಿಯಲ್ಲಿ ವಲಯದ ವಿಶೇಷ ಮಕ್ಕಳಿಗೆ ಸರ್ಕಾರದಿಂದ ಪೂರೈಕೆಯಾದ ಸಾಧನ-ಸಲಕರಣೆಗಳ ವಿತರಣಾ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕ್ಷೇತ್ರ ಸಮನ್ವಯಾಧಿಕಾರಿ ಅಬ್ದುಲ್ ರವೂಫ್ ಮಾತನಾಡಿ ಅಂಗವಿಕಲತೆ ಶಾಪವಲ್ಲ. ಇವರಲ್ಲಿಯೂ ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರಿದ್ದಾರೆ. ಅಂತವರನ್ನು ಸ್ಪೂರ್ತಿಯಾಗಿಟ್ಟುಕೊಂಡು ದೈಹಿಕ ಸಾಮರ್ಥ್ಯ ಕೊರತೆಯಿಂದ ಬಳಲುವ ವಿಶೇಷ ಮಕ್ಕಳಿಗೆ ಹೆತ್ತವರು ಮನಸಿಕವಾಗಿ ಸಧೃಡರಾಗಲು ಆತ್ಮವಿಶ್ವಾಸ ತುಂಬಬೇಕು ಎಂದು ಹೇಳಿದರು. ತಾಪಂ ಸದಸ್ಯೆ ಮಾಲಿನಿ ಕೆ. ಕಾರ್ಯಕ್ರಮ ಉದ್ಘಾಟಿಸಿದರು. ತಾಪಂ ಸದಸ್ಯೆ ಸುಜಾತಾ ದೇವಾಡಿಗ, ಕ್ಷೇತ್ರ ಸಂಪನ್ನೂಲ ವ್ಯಕ್ತಿ ಕರುಣಾಕರ ಶೆಟ್ಟಿ, ಸ್ಕಂದ ಸಂಸ್ಥೆಯ ಅಧಿಕಾರಿಗಳಾದ ಶಿವರಾಜ್ ಉಪಸ್ಥಿತರಿದ್ದರು. ಸಮನ್ವಯ ಶಿಕ್ಷಣದ ಸಂಪನ್ಮೂಲ ಶಿಕ್ಷಕರಾದ ಕುಪ್ಪಯ್ಯ ಮರಾಠಿ ಸ್ವಾಗತಿಸಿ, ನಿರೂಪಿಸಿದರು. ನಾಗರತ್ನ ವಂದಿಸಿದರು. ಈ ಸಂದರ್ಭ ೬೫ ವಿಶೇಷ ಮಕ್ಕಳಿಗೆ ವಿವಿಧ ಸಲಕರಣೆಗಳನ್ನು ನೀಡಲಾಯಿತು. ವಿಕಲಚೇತನ ಮಕ್ಕಳಿಗೆ ಯಾರೂ ಅನುಕಂಪ ತೋರಿಸದೇ, ಧೈರ್ಯದಿಂದ ಬದುಕುವಂತೆ ಸ್ಪೂರ್ತಿ ಹೆಚ್ಚಿಸುವ ಮೂಲಕ ಹೆತ್ತವರು ಪ್ರೇರಿಸಬೇಕು. ಅವರು ಶಾರೀರಿಕವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ರಾಮಕ್ಷತ್ರೀಯ ಯುವಕ ಮಂಡಲದ 2018-19 ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಸಿ.ಎಚ್. ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ರಾಜ್ಯ ಪ್ರಶಸ್ತಿ ಪುರಸ್ಕೃತ ಕುಂದಾಪುರದ ಶ್ರೀ ಮೈಲಾರೇಶ್ವರ ಯುವಕ ಮಂಡಲದಲ್ಲಿ 3 ಅವಧಿ ಕಾರ್ಯದರ್ಶಿಯಾಗಿ, 36ನೇ ವರ್ಷದ ಅಧ್ಯಕ್ಷರಾಗಿ, ರೋಟರಿ ಕ್ಲಬ್ ಕುಂದಾಪುರ ಸನ್ರೈಸ್ನ ದಶಮಾಮಾನೋತ್ಸವ ಸಮಿತಿ ಕಾರ್ಯದರ್ಶಿಯಾಗಿ, ರಾಮಕ್ಷತ್ರೀಯ ಯುವಕ ಮಂಡಳಿಯಲ್ಲಿ ನಾಲ್ಕು ಬಾರಿ ಕಾರ್ಯದರ್ಶಿಯಾಗಿ, ಕೈರಾಳಿ ಸುಹೃದ್ವೇದಿ ನಿರ್ದೇಶಕರಾಗಿ, ಜೇಸಿಐ ಕುಂದಾಪುರದ ಸದಸ್ಯರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಕಳೆದ ಹದಿನೈದು ದಿನಗಳಿಂದ ಪ್ರತಿ ಬಾನುವಾರ ದಿನಾಂಕ ಜೂನ್ 03, 10, ಹಾಗೂ 17 ರಂದು ದೇವಾಲಯದ ಜೀರ್ಣೋದ್ದಾರದ ಬಗ್ಗೆ ದೇಣಿಗೆ ಸಂಗ್ರಹಕ್ಕಾಗಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ, ಜೀರ್ಣೋದ್ಧಾರ ಸಮಿತಿಯ ಸರ್ವ ಸದಸ್ಯರು ಜೊತೆಯಾಗಿ ಪರಿಸರದಲ್ಲಿ ಸುಮಾರು 225 ಮನೆಗಳಿಗೆ ಭೇಟಿ ನೀಡಿ ಮಾಹಿತಿಯನ್ನೊಳಗೊಂಡ ಪತ್ರವನ್ನು ವಿತರಿಸಿ ದೇಣಿಗೆಯನ್ನು ನೀಡುವಂತೆ ಮನವಿ ಮಾಡಿಕೊಂಡರು. ಪ್ರತಿಯೊಂದು ಮನೆಯ ಮುಖ್ಯಸ್ಥರು ಸಂತೋಷದಿಂದ ಮನವಿಯನ್ನು ಸ್ವೀಕರಿಸಿ ಸಕಾರಾತ್ಮಕ ಮೆಚ್ಚುಗೆ ವ್ಯಕ್ತಪಡಿಸುವುದರ ಜೊತೆಗೆ ಕೆಲವರು ಪ್ರಥಮ ಕಂತಿನ ತಮ್ಮ ದೇಣಿಗೆಯನ್ನು ಪಾವತಿಸಿರುಸುತ್ತಾರೆಂದು ದೇವಾಲಯದ ಆಡಳತ ಮೊಕ್ತೇಸರರಾಗಿರುವ ಬಿ.ಎಸ್.ಶಾನುಭೋಗ್ ಅವರು ತಿಳಿಸಿರುತ್ತಾರೆ. ದೇಗುಲ ನಿರ್ಮಾಣದ ಶಿಲ್ಪಿ ಮೊಳಹಳ್ಳಿ ರಾಘವೇಂದ್ರ ಆಚಾರ್ಯ ಅವರಿಗೆ ಈಗಾಗಲೇ ಮುಂಗಡ ಪಾವತಿಯ ಮುಹೂರ್ತವನ್ನು ಮಾಡಲಾಗಿದ್ದು ,ದಿನಾಂಕ 24.06.2018 ರಂದು ದ್ವಿತಿಯ ಕಂತನ್ನು ಪಾವತಿ ಮಾಡವ ವಿಚಾರವನ್ನು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ನರಸಿಂಹ ಪೂಜಾರಿ ಪಡುಕೋಣೆ, ಉಪಾಧ್ಯಕ್ಷರುಗಳಾದ ವಿಜಯಕುಮಾರ ಶೆಟ್ಟಿ ಖಂಬದಕೋಣೆ, ಡಾ.ಬಾಲಚಂದ್ರ ಭಟ್ಟ ,ವ್ಯವಸ್ಥಾಪನಾ ಸಮಿತಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ ತೆಕ್ಕಟ್ಟೆ: ಬೇಳೂರು ಸ್ಫೂರ್ತಿಧಾಮದ ಮೇಲೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಸಂಸ್ಥೆಯ ಪರವಾನಿಗೆ ರದ್ದುಗೊಳಿಸಿ, ವೃದ್ಧರನ್ನು ಸ್ಥಳಾಂತರಿಸುವಂತೆ ಸರಕಾರದ ಆದೇಶದ ಹಿನ್ನೆಲೆಯಲ್ಲಿ ಎರಡು ಬಾರಿ ವೃದ್ದರನ್ನು ಸ್ಥಳಾಂತರಿಸಲು ಅಧಿಕಾರಿ ಬಂದರೂ ಇಲ್ಲಿ ಆಶ್ರಯಿಸಿರುವ ವೃದ್ಧರು ಹೊರಹೋಗಲು ಕೇಳಲಿಲ್ಲ. ನನ್ನ ಮೇಲಿನ ಅಪವಾದಗಳಿಗೆ ಏನೂ ತಪ್ಪು ಮಾಡದ ವೃದ್ಧರನ್ನು ಬಲಾತ್ಕಾರವಾಗಿ ಸ್ಥಳಾಂತರಿಸುವ ಪ್ರಯತ್ನ ಬೇಡ, ಬದಲಿಗೆ ನನ್ನ ಹುದ್ದೆಗೆ ರಾಜೀನಾಮೆ ನೀಡಿ ಹೊರ ಬರುತ್ತೇನೆ ಎಂದು ಸ್ಫೂರ್ತಿಧಾಮದ ಮುಖ್ಯ ಕಾರ್ಯನಿರ್ವಾಹಕ ಡಾ|ಕೇಶವ ಕೋಟೇಶ್ವರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಸಂಸ್ಥೆಯ ಮುಖ್ಯಸ್ಥನಾಗಿ ನನ್ನ ಮೇಲಿನ ಅಪವಾದಗಳಿಗೆ ಉತ್ತರಿಸುವ ಪ್ರಯತ್ನ ಮಾಡಿ ಸೋತಿದ್ದೇನೆ. ಮುಂದಿನ ದಿನದಲ್ಲಿ ಸ್ಫೂರ್ತಿ ಸಂಸ್ಥೆಯ ಆಡಳಿತ ಮಂಡಳಿಯ ಸಭೆ ಕರೆದು ರಾಜೀನಾಮೆ ಸಲ್ಲಿಸಿ ಹೊರಬರುತ್ತೇನೆ. ಸಂಸ್ಥೆಯನ್ನು ಮುನ್ನಡೆಸುವ ಆಸಕ್ತಿ ಹೊಂದಿರುವ ಪ್ರಮೀಳಾ ಜೆ.ವಾಜ್ ಅವರಿಗೆ ಈ ವ್ಯವಸ್ಥೆಯ ಸಂಪೂರ್ಣ ಉಸ್ತುವಾರಿ ನೀಡಲು ಆಡಳಿತ ಮಂಡಳಿಗೆ ಶಿಫಾರಸು ಮಾಡುತ್ತೇನೆ. ಸಾರ್ವಜನಿಕ ದೇಣಿಗೆಯಿಂದ ನಿರ್ಮಿತವಾದ ಈ ಇಡೀ ವ್ಯವಸ್ಥೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ : ಇಲ್ಲಿನ ಆರ್ಎನ್ ಶೆಟ್ಟಿ ಸಭಾಭವನದಲ್ಲಿ ಉಡುಪಿ ಜಿಲ್ಲಾ ರೈತ ಸಂಘದ ಪದಾಧಿಕಾರಿಗಳ ಸಭೆ ಜರುಗಿತು. ಈ ಸಭೆಯನ್ನು ಉದ್ದೇಶಿಸಿ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಕೆ.ಪ್ರತಾಪ್ಚಂದ್ರ ಶೆಟ್ಟಿರವರು ಮಾತನಾಡಿ ಜಿಲ್ಲೆಯಲ್ಲಿ ಮರಳು ತೆಗೆಯ ಬಾರದು ಎಂದು ನಿರ್ಬಂಧ ವಿಧಿಸುವ ಅಧಿಕಾರಿಗಳು ಜಿಲ್ಲೆಯ ಜನರಿಗೆ ಅಗತ್ಯವಾಗಿರುವ ಮರಳನ್ನು ಒದಗಿಸಬೇಕು ಎನ್ನುವ ಬದ್ದತೆಯನ್ನು ಪ್ರದರ್ಶಿಸಬೇಕು. ಜಿಲ್ಲೆಯ ಜನ ಸಾಮಾನ್ಯರ ಪರ ರೈತ ಸಂಘದ ಧ್ವನಿ ಇರುತ್ತದೆ ಹೊರತು ಇನ್ನಾರದ್ದೋ ಹಿತಾಸಕ್ತಿಯನ್ನು ಕಾಯುವ ಅನಿವಾರ್ಯತೆ ನಮಗಿಲ್ಲ ಎಂದು ಹೇಳಿದರು. ಕಪ್ಪು ಹಣದಿಂದ ಮನೆ ಹಾಗೂ ಕಟ್ಟಡ ನಿರ್ಮಿಸುವವರಿಗೆ ಮರಳು ಸಮಸ್ಯೆ ಬಾಧಿಸುವುದಿಲ್ಲ. ಕಷ್ಟದಿಂದ ದುಡಿಮೆ ಮಾಡಿ ಜೀವನದಲ್ಲಿ ಮೊದಲ ಬಾರಿ ಸ್ವಂತ ಮನೆ ಮಾಡುವವರನ್ನು ಹಾಗೂ ಸರ್ಕಾರದ ಯೋಜನೆಯ ಸಹಕಾರದಿಂದ ಮನೆ ಕಟ್ಟಿಕೊಳ್ಳುವವರನ್ನು ಇಲ್ಲಿನ ಮರಳು ಸಮಸ್ಯೆ ಕಣ್ಣೀರು ತರುಸುತ್ತಿದೆ ಎನ್ನುವ ಸತ್ಯ ಅಧಿಕಾರಿಗಳಿಗೆ ಯಾಕೆ ಅರ್ಥವಾಗುತ್ತಿಲ್ಲ. ಹೊರ ಜಿಲ್ಲೆಗಳಿಗೆ ಮರಳು…
