Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪೌರ ಕಾರ್ಮಿಕರ ಅಂಬೇಡ್ಕರ್ ಕಾಲನಿಯಲ್ಲಿನ ಅಪೂರ್ಣ ಮನೆ ಸಂಪೂರ್ಣವಾಗಿ ನಿರ್ಮಿಸಲು ಮಾಡಲು ಎಲ್ಲಾ ರೀತಿಯ ಸಹಕಾರ ನೀಡುವುದಲ್ಲದೆ 6 ತಿಂಗಳಲ್ಲಿ ಮನೆಗಳ ಬಾಕಿ ಅನುದಾನ ಖಾತೆಗೆ ಜಮಾ ಮಾಡಲು ಕ್ರಮ ವಹಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕುಂದಾಪುರ ಅಂಬೇಡ್ಕರ್ ಕಾಲನಿಯಲ್ಲಿರುವ ಪೌರ ಕಾರ್ಮಿಕರ ಮನೆಗಳು ಅರ್ಧಂಬರ್ಧ ಆಗಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, 13 ಮನೆಗಳು ಅಪೂರ್ಣವಾಗಿದೆ. ಮೂರು ಮನೆ ಪೂರ್ಣಗೊಂಡಿದ್ದು, ಕೊನೆಯ ಕಂತು ಬಾಕಿ ಇದೆ. ಈ ಬಗ್ಗೆ ಪುರಸಭೆ ಮುಖ್ಯಾಧಿಕಾರಿ ಜೊತೆ ಮಾತನಾಡಿದ್ದು, ಇನ್ನು 15 ದಿನದಲ್ಲಿ ಪೂರ್ಣಮನೆ ಕೊನೆಯ ಕಂತು ಖಾತೆಗೆ ಹಾಕಲಾಗುತ್ತದೆ ಎಂದು ತಿಳಿಸಿದರು. ಕಾಲನಿಯ ಮೂರು ಮನೆ ಮುಗಿದ್ದರೂ ಹತ್ತು ಮನೆ ಅರ್ಧಂಬರ್ಧ ಆಗಿದೆ. ಯಾವುದಾದರೂ ಮೂಲದಿಂದ ಪ್ರಥಮ ಹಂತದಲ್ಲಿ ೩ ಮನೆ ತೆಗೆದುಕೊಂಡು ಸಂಪೂರ್ಣ ಮಾಡುವಂತೆ ಪುರಸಭೆ ಮುಖ್ಯಾಧಿಕಾರಿಗೆ ಸೂಚಿಸಿದ್ದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇವಸ್ಥಾನಗಳು ನೆಮ್ಮದಿಯ ಕೇಂದ್ರಗಳು. ಅಲ್ಲಿಗೆ ಬರುವ ಭಕ್ತಾದಿಗಳನ್ನು ಸರಿಯಾಗಿ ನೋಡಿಕೊಳ್ಳಬೇಕು. ಆಡಳಿತ ಮಂಡಳಿ, ಅರ್ಚಕರು, ಸಿಬ್ಬಂದಿಗಳ ಶ್ರಮದಿಂದ ದೇಗುಲ ಅಭಿವೃದ್ದಿ ಸಾಧ್ಯ. ಎಲ್ಲಾ ಭಕ್ತರನ್ನು ಒಂದೇ ರೀತಿ ನೋಡಿಕೊಳ್ಳಬೇಕು. ಬಡವರಿಗೊಂದು ರೀತಿ ಶ್ರೀಮಂತರಿಗೊಂದು ರೀತಿ ಮಾಡಬಾರದು. ಸರಿಯಾದ ಪೂಜೆ ಪುನಸ್ಕಾರಗಳಿಂದ ದೇಗುಲದ ಘನತೆ ಹೆಚ್ಚುತ್ತದೆ. ಇದರಲ್ಲಿ ಅರ್ಚಕರ ಪಾತ್ರ ಬಹಳಷ್ಟಿದೆ. ಸೌಕೂರು ಸಾನಿಧ್ಯ ವಿಶೇಷತೆ ಯಿಂದ ಕೂಡಿದೆ. ಇದರ ಶಕ್ತಿ ಇನ್ನಷ್ಟು ಹೆಚ್ಚಲಿ ಆಡಳಿತ ಮಂಡಳಿ ಒಳ್ಳೆಯ ಕೆಲಸ ಮಾಡಲಿ ಎಂದು ಕೊಲ್ಲೂರು ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ಬಸ್ರೂರು ಅಪ್ಪಣ್ಣ ಹೆಗ್ಡೆ ಹೇಳಿದರು. ಅವರು ಇಂದು ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಎನ್. ಮಂಜಯ್ಯ ಶೆಟ್ಟಿ ಅವರ ಅಭಿನಂದನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಎನ್. ಮಂಜಯ್ಯ ಶೆಟ್ಟಿ ಸಬ್ಲಾಡಿ ಮಾತನಾಡಿ, ದೇಗುಲವನ್ನು ಅಭಿವೃದ್ದಿ ಪಡಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಲಾಮಂದಿರದಲ್ಲಿ ಮಂಗಳವಾರ 6ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಹಾಗೂ ಧನ್ವಂತರಿ ಜಯಂತಿ ಪ್ರಯುಕ್ತ ಆಯುರ್ವೇದದಿಂದ ಪೋಷಣ್ ಕಾರ್ಯಕ್ರಮ ಜರುಗಿತು ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ಮಾತನಾಡಿ ಅಲೋಪತಿ ವೈದ್ಯ ಪದ್ಧತಿಯನ್ನು ತಕ್ಷಣದ ರೋಗ ಪರಿಹಾರಕ್ಕಾಗಿ ಅನುಸರಿಸಲಾಗುತ್ತದೆ. ಆದರೆ ಧೀರ್ಘಕಾಲದ ರೋಗಗಳಿಗೆ ಆಯುರ್ವೇದ ವೈದ್ಯ ಪದ್ಧತಿಯೇ ಉತ್ತಮವೆಂದ ಜಗತ್ತು ಒಪ್ಪಿದೆ. ಆಯುರ್ವೇದದಲ್ಲಿ ಪಥ್ಯಗಳನ್ನು ಸರಿಯಾಗಿ ಅನುಸರಿಸಿದರೆ ಉತ್ತಮ ಪರಿಣಾಮ ಬೀರುತ್ತದೆ. ಕುಂದಾಪುರ ಪುರಸಭಾ ಸದಸ್ಯೆ ದೇವಕಿ ಸಣ್ಣಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ದತ್ತಾತ್ರೆಯ ಎಸ್. ನಾಯ್ಕ್, ಕುಂದಾಪುರ ಸರಕಾರಿ ಆಸ್ಪತ್ರೆ ತಜ್ಞ ವೈದ್ಯ ಡಾ. ನಾಗೇಶ್, ಪುರಸಭಾ ಸದಸ್ಯೆ ದೇವಕಿ ಸಣ್ಣಯ್ಯ, ಸ.ಪ.ಪೂ ಕಾಲೇಜು ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ, ಉಪಪ್ರಾಂಶುಪಾಲರಾದ ವಿನುತಾ ಗಾಂವ್ಕರ್, ಆಯುಷ್ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಡಾ. ಶ್ಯಾಮ ರಾವ್ ಮೊದಲಾದವರು ಉಪಸ್ಥಿತರಿದ್ದರು. ಡಾ. ವಿನಯಾ ಪ್ರಾರ್ಥಿಸಿದರು. ಡಾ. ಪ್ರದೀಪ ಎಸ್.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯಾವುದೇ ವ್ಯಕ್ತಿ ಸಾಕ್ಷರನಾದರೆ ತನ್ನ ಹಕ್ಕುಗಳ ಬಗ್ಗೆ ಅರಿವು ಹೊಂದಲು ಸಾದ್ಯವಾಗುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಅಕ್ಷರ ಜ್ಞಾನ ಹೊಂದುವುದು ಅತ್ಯಂತ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಹೇಳಿದರು. ಅವರು ಕಾಜಾರಗುತ್ತುನ ಜಿಲ್ಲಾ ಕಾರಾಗೃಹದಲ್ಲಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಉಡುಪಿ , ಕಾರಾಗೃಹ ಮತ್ತು ಸುಧಾರಣಾ ಸೇವೆ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಉಡುಪಿ, ಜಿಲ್ಲಾ ಕಾರಾಗೃಹ ಉಡುಪಿ ಇವರ ಸಹಯೋಗದಲ್ಲಿ ‘ಶಿಕ್ಷಣದಿಂದ ಬದಲಾವಣೆ’ ಕಾರಾಗೃಹದ ಅನಕ್ಷರಸ್ಥ ಹಾಗೂ ಅರೆ ಅನಕ್ಷರಸ್ಥ ಬಂಧಿಗಳಿಗೆ ಆಯೋಜಿಸಿದ್ದ ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾಕ್ಷರತೆ ಪಡೆಯುವುದು ವ್ಯಕ್ತಿಯ ಘನತೆ ಹಾಗೂ ಹಕ್ಕು ಆಗಿದೆ. ವ್ಯಕ್ತಿ ಸಾಕ್ಷರತೆಯ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳಸಿಕೊಳ್ಳಬೇಕು, ಅನಕ್ಷರತೆಯಿಂದ ಬಡತನ, ಜನಸಂಖ್ಯೆ ನಿಯಂತ್ರಣ ಸಮಸ್ಯೆ,ಲಿಂಗ ಅಸಮಾನತೆ ಉಂಟಾಗಲಿದ್ದು,ಇದನ್ನು ತೊಡೆದು ಹಾಕಿ ದೇಶವನ್ನು ಸಮಗ್ರವಾಗಿ ಅಭಿವೃದ್ದಿಪಡಿಸಲು ಸಾಕ್ಷರತೆಯಿಂದ ಮಾತ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ ಕ – ಉಡುಪಿ ಜಿಲ್ಲೆ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ರಿ . ಕುಂದಾಪುರ – ಬೈಂದೂರು ವಲಯ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಹಿತಿಗಳಾದ ಜನಾರ್ದನ ಅಡಿಗ ಮೊಗೇರಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ -ಬೈಂದೂರ ವಲಯದ ಅಧ್ಯಕ್ಷ ಬಿ. ದೊಟ್ಟಯ್ಯ ಪೂಜಾರಿ, ಪ್ರಧಾನ ಕಾರ್ಯದರ್ಶಿ ಶ್ರೀಕರ್ ಎಸ್, ಉಪಾಧ್ಯಕ್ಷರುಗಳಾದ ಚಂದ್ರಕಾಂತ್, ರಾಘವೇಂದ್ರ ಭಟ್ ವಂಡ್ಸೆ, ಶ್ರೀನಿವಾಸ್ ದೇವಾಡಿಗ, ಕೋಶಾಧಿಕಾರಿ ವಿಠಲ್ ನಾಗೂರ್, ಸಲಹಾ ಸಮಿತಿ ಸದಸ್ಯರು, ಪದಾಧಿಕಾರಿಗಳು, ಕಾರ್ಯಕಾರಿ ಮಂಡಳಿ ಸದಸ್ಯರು ಹಾಗೂ ಎಲ್ಲ ಛಾಯಾಗ್ರಾಹಕ ಸದಸ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ರಿ. ಮಂಗಳೂರು ಆಯೋಜಿಸಿದ ಎರಡನೇ ಅಂತರ್ ಜಿಲ್ಲಾ ಮುಕ್ತ ರ‍್ಯಾಪಿಡ್ ಚೆಸ್ ಪಂದ್ಯಾಟ ನಡೆಯಿತು. ಇಲ್ಲಿನ ಕಶ್ವಿ ಚೆಸ್ ಸ್ಕೂಲ್ ವಿದ್ಯಾರ್ಥಿಗಳಾದ 15ರ ವಯೋಮಾನದ ಬಾಲಕರ ವಿಭಾಗದಲ್ಲಿ ಹಂಗಳೂರಿನ ನಿಶಾಂತ್ ಡಿಸೋಜ್ ಪ್ರಥಮ ಸ್ಥಾನ, 13ರ ವಯೋಮಾನದ ಬಾಲಕರ ವಿಭಾಗದಲ್ಲಿ ತೀರ್ಥಹಳ್ಳಿಯ ತೇಜಸ್ ಎಂ. ಶೆಣೈ ದ್ವಿತೀಯ ಸ್ಥಾನ, 11ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಸಳ್ವಾಡಿಯ ಆರಾಧ್ಯ ಎಸ್. ಶೆಟ್ಟಿ ದ್ವಿತೀಯ ಸ್ಥಾನ, 9ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಕೋಟೇಶ್ವರದ ಸನಾ ಶೆಟ್ಟಿ ಪ್ರಥಮ ಸ್ಥಾನ, ಮತ್ತು 7ರ ವಯೋಮಾನದ ಬಾಲಕರ ವಿಭಾಗದಲ್ಲಿ ಕುಂದಾಪುರದ ಸಿದ್ಧಾಂತ ವಿ. ಪುಜಾರಿ ಪ್ರಥಮ ಸ್ಥಾನ ಹಾಗೂ ಉಪ್ಪುಂದದ ತೇಜಸ್ ದ್ವೀತಿಯ ಸ್ಥಾನ ಪಡೆದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಯೊಬ್ಬ ಕನ್ನಡಿಗನು ಕನ್ನಡದ ಉಸಿರು ಉಳಿಸುವ ಕಾರ್ಯ ಮಾಡಬೇಕು. ಕಲಾಕ್ಷೇತ್ರ ಕುಂದಾಪುರ ಈ ಕಾರ್ಯವನ್ನು ಉತ್ತಮ ರೀತಿಯಲ್ಲಿ ಮಾಡುತ್ತಿದೆ, ಕನ್ನಡದ ಹಬ್ಬವನ್ನು ಸಂಭ್ರಮಿಸುತ್ತಿದೆ ಸಾಹಿತಿ ಹಾಗೂ ಹಿರಿಯ ನ್ಯಾಯವಾದಿ ಎ.ಎಸ್.ಎನ್. ಹೆಬ್ಬಾರ್ ಹೇಳಿದರು. ಅವರು ಸೋಮವಾರ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಲಾಕ್ಷೇತ್ರ- ಕುಂದಾಪುರ ಇಲ್ಲಿನ ಬೋರ್ಡ್ ಹೈಸ್ಕೂಲಿನ ಕಲಾ ಮಂದಿರದಲ್ಲಿ ನ. ೧ರಿಂದ ನ. ೫ರ ವರೆಗೆ ಹಮ್ಮಿಕೊಂಡ ವಿವಿಧ ಕಾರ್ಯಕ್ರಮಗಳ ರಾಜ್ಯೋತ್ಸವ ಸಂಭ್ರಮದ ಉದ್ಘಾಟಿಸಿ ಮಾತನಾಡಿ ಕಾಸರಗೋಡಿನ ವಿಚಾರದಲ್ಲಿ ನಮ್ಮ ಸರಕಾರದ ಧೋರಣೆ ಮಾತ್ರ ನಿಜಕ್ಕೂ ಖೇದನೀಯ ಎಂದು ಬೇಸರ ವ್ಯಕ್ತಪಡಿಸಿದರು. ಕಲಾಕ್ಷೇತ್ರ ಕುಂದಾಪುರದ ಅಧ್ಯಕ್ಷ ಬಿ. ಕಿಶೋರ್ ಕುಮಾರ್ ಪ್ರಸ್ತಾವಿಕ ಮಾತನಾಡಿ, ಕಲಾಕ್ಷೇತ್ರವು ಕುಂದಾಪುರ, ಕುಂದಗನ್ನಡ ಭಾಷೆ, ಆಚಾರ, ವಿಚಾರ, ಸಂಸ್ಕೃತಿಯ ಪ್ರತೀಕವಾಗಿದೆ. ಈ ರಾಜ್ಯೋತ್ಸವ ಸಂಭ್ರಮದಲ್ಲಿ ಚಲನಚಿತ್ರ ಪ್ರದರ್ಶನ ಸಹಿತ ವಿವಿಧ ಕಾಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭ ಸಾಹಿತಿ ಮತ್ತು ಲೇಖಕಿ ಪೂರ್ಣಿಮಾ ಎನ್. ಭಟ್ ಕಮಲಶಿಲೆ, ಸರಕಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾನವ ಸಂವೇದನೆಗೆ ಮಾತೃಭಾಷೆಯೇ ಮೂಲಧಾತು. ಮಾತೃಭಾಷೆಯಿಂದ ದೂರ ಸರಿದಂತೆಲ್ಲಾ ಸಂವೇದನೆಯೂ ಕ್ಷೀಣಿಸುತ್ತದೆ. ಮಕ್ಕಳ ಮೇಲೆ ಪರಭಾಷಾ ಒತ್ತಡ ಹೇರಿದಂತೆಲ್ಲಾ ಮಾನಸಿಕ ಸಮಸ್ಯೆಗಳಿಗೂ ಕಾರಣವಾಗುವ ಸಾಧ್ಯತೆಯೇ ಹೆಚ್ಚು ಎಂದು ಸಾಹಿತಿ, ಜಾದೂಗಾರ ಓಂ ಗಣೇಶ್ ಉಪ್ಪುಂದ ಹೇಳಿದರು. ಅವರು ಸೋಮವಾರ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕುಂದಾಪ್ರ ಡಾಟ್ ಕಾಂ ಅಂತರ್ಜಾಲ ಸುದ್ದಿತಾಣ ಹಾಗೂ ಕಾಲೇಜಿನ ವಿವಿಧ ಸಂಘಗಳು ಜಂಟಿಯಾಗಿ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರದಲ್ಲಿ ಮಾತನಾಡಿ, ಭಾಷೆ ಹೃದಯ ಅರಳಿಸುವ ಸಾಧನ. ಅದರೊಂದಿಗೆ ನೆಲ ಜಲ ಬದುಕಿನ ಸಾಂಗತ್ಯವಿದೆ. ಕನ್ನಡ ಎಂದಾಗ ಮೂಡುವಷ್ಟು ಪ್ರೀತಿ, ಸಂಚಲನ ಮಾತೃಭಾಷೆಯಲ್ಲದೇ ಬೇರೆ ಭಾಷೆಯಿಂದ ಸಾಧ್ಯವಿಲ್ಲ. ಕನ್ನಡಕ್ಕಾಗಿ ನಾವೇ ಶ್ರಮಿಸಬೇಕು, ಭಾಷೆ ಉಳಿಸುವ ಸೈನಿಕರಾಗಲು ಪಣತೊಡೋಣ ಎಂದರು. ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಜ್ಯೋತ್ಸವದ ಹೊತ್ತಿನಲ್ಲಿ ನೈಜ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸ ರಾಜ್ಯ ಸರಕಾರದಿಂದ ಆಗಿದೆ. ಕನ್ನಡವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ತಾಲೂಕು ಆಡಳಿತದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ರಾಜು ಕೆ. ಅವರು, ವಚನ, ಗಾಯನದಂತೆ ಯಕ್ಷಗಾನವು ಕನ್ನಡ ನುಡಿ ಸೇವೆಗೆ ಮಹತ್ತರ ಕೊಡುಗೆ ನೀಡಿದೆ. ವಿಜ್ಞಾನ, ವೈದ್ಯಕೀಯ, ತಂತ್ರಜ್ಞಾನ ಭಾಷೆಯೂ ಕನ್ನಡವಾಗಬೇಕು ಎನ್ನುವ ಆಶಯ ನಮ್ಮದು. ಕನ್ನಡಕ್ಕೆ ಎರಡೂವರೆ ಸಾವಿರ ವರ್ಷಗಳ ಭವ್ಯವಾದ ಇತಿಹಾಸವಿದೆ. ಕನ್ನಡದ ಶ್ರೇಷ್ಠತೆಯನ್ನು ಮುಂದುವರಿಸಿಕೊಂಡು ಹೋಗಬೇಕಾದ ಜವಬ್ದಾರಿ ನಮ್ಮ ಮೇಲಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಪುರಸಭಾಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್ ಮಾತನಾಡಿ, ಕನ್ನಡದ ಕಂಪು ದಶ ದಿಕ್ಕುಗಳಿಗೂ ವ್ಯಾಪಿಸಿದೆ. ಕನ್ನಡದ ಶಕ್ತಿ ಅದ್ಭುತ. ಕನ್ನಡ ಭಾಷೆಯ ಬಳಕೆ ಎಲ್ಲ ಕಡೆಗಳಲ್ಲೂ ನಿರಂತರವಾಗಿರಬೇಕು ಎಂದರು. ಪುರಸಭಾ ಉಪಾಧ್ಯಕ್ಷ ಸಂದೀಪ್ ಖಾರ್ವಿ, ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಸದಸ್ಯರಾದ ದೇವಕಿ ಸಣ್ಣಯ್ಯ, ಪ್ರಭಾಕರ್ ವಿ., ಸಂತೊಷ್ ಶೆಟ್ಟಿ, ಕಮಲ ಮಂಜುನಾಥ್ ಪೂಜಾರಿ, ಪುಷ್ಪಾ ಶೇಟ್, ನಗರ ಯೋಜನಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸರೋಜಿನಿ ಮಹಿಷಿ ವರದಿಯಂತೆ ರಾಜ್ಯದಲ್ಲಿನ ಐಟಿ ಬಿಟಿ ಸೇರಿದಂತೆ ಎಲ್ಲಾ ಖಾಸಗಿ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಕಡ್ಡಾಯವಾಗಿ ಉದ್ಯೋಗ ನೀಡುವ ಕುರಿತಂತೆ, ಕಾನೂನು ಚೌಕಟ್ಟಿನಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ರಾಜ್ಯದ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು. ಅವರು ಇಂದು ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಿರುದ್ಯೋಗ ನಿವಾರಣೆ ಮತ್ತು ಕನ್ನಡ ಭಾಷಾಭಿಮಾನ ಹೆಚ್ಚಿಸಲು , ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲ ಪ್ರಾಶಸ್ತ್ಯವನ್ನು ನೀಡುವ ನಿಟ್ಟಿನಲ್ಲಿ, ಸರೋಜಿನಿ ಮಹಿಷಿ ವರದಿಯಲ್ಲಿ ಕೆಲ ಮಾರ್ಪಾಡುಗಳೊಂದಿಗೆ ಕಾನೂನಿನ ಚೌಕಟ್ಟಿನಲ್ಲಿ ಕನ್ನಡಿಗರಿಗೆ ಕಡ್ಡಾಯವಾಗಿ ಉದ್ಯೋಗ ದೊರಕಿಸಲು ಪ್ರಯತ್ನಿಸಲಾಗುವುದು ಎಂದರು. ಯುವ ಜನತೆ ಕನ್ನಡ ಸಾಹಿತ್ಯವನ್ನು ಹೆಚ್ಚು ಹೆಚ್ಚು ಓದುವುದರೊಂದಿಗೆ, ನವ ಸಾಹಿತಿಗಳ ಸಂಖ್ಯೆ ಹೆಚ್ಚಿಸಲು ಬೇಕಾದ ಸೌಲಭ್ಯಗಳನ್ನು ಸರಕಾರದಿಂದ ನೀಡಲು ಸೂಕ್ತ ಯೋಜನೆಗಳನ್ನು ರೂಪಿಸಲಾಗುವುದು ಎಂದ ಅವರು, ಕನ್ನಡ ಪುಸ್ತಕಗಳನ್ನು ಓದುವ ಪ್ರವೃತ್ತಿಯನ್ನು ರೂಢಿಸಿಕೊಳ್ಳುವುದರೊಂದಿಗೆ…

Read More