Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಜುಲೈ 5ರಿಂದ ರಿಂದ 19ರವರೆಗೆ ಜಾರಿಯಲ್ಲಿರುವಂತೆ ಅನ್’ಲಾಕ್ 3.0 ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮೂರನೇ ಅನ್ ಲಾಕ್ ಘೋಷಣೆ ಮಾಡಿದರು. ಸರ್ಕಾರಿ, ಖಾಸಗಿ, ಕೈಗಾರಿಕೆ, ವಾಣಿಜ್ಯ ಚಟುವಟಿಕೆಗಳು, ಮಾಲ್ ಗಳಿಗೆ ಅನುಮತಿ, ಮೆಟ್ರೋ, ಕಾರ್ಮಿಕ ಕಾರ್ಯಗಳಿಗೆ ಅವಕಾಶ ನೀಡಲಾಗಿದೆ ಎಂದರು. ಯಾವುದಕ್ಕೆಲ್ಲ ವಿನಾಯಿತಿ ನೀಡಲಾಗಿದೆ? 1. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. 2. ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. 3. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ.100ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ. 4. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ. 5. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ…

Read More

ಅಡುಗೆ ಮಾಡುವಾಗ, ಇತರರು ಊಟಕ್ಕೆ ಬಂದಾಗ ಇಂಥಾ ಜಿರಳೆಗಳನ್ನು ಅಸಹ್ಯಕರ ಎನಿಸುವುದುಂಟು. ಬಹುಪಾಲು ಜನರು ಜಿರಳೆ ಎಂಬರೆ ಮುಖ ತಿರುಗಿಸುವುದನ್ನೂ ನೋಡಿದ್ದೇವೆ. ಜಿರಲೆ ಬರಬಾರದೆಂದು ನೀವು ಎಷ್ಟೇ ಕಷ್ಟಪಟ್ಟು ನಿತ್ಯ ಸ್ವಚ್ಛಗೊಳಿಸಿದರೂ, ಯಾವೆಲ್ಲಾ ಔಷಧಗಳನ್ನು ಸಿಂಪಡಿಸಿದರೂ ಕೇವಲ ತಾತ್ಕಾಲಿಕವಷ್ಟೇ ಆಗಿರುತ್ತದೆ, ಹಾಗೂ ಹೀಗೂ ಮತ್ತೆ ಅಡುಗೆ ಮನೆ ಸೇರಿಸುತ್ತವೆ. ಅಷ್ಟೇ ಅಲ್ಲದೇ ಇದು ಅರೋಗ್ಯಕ್ಕೆ ಸಾಕಷ್ಟು ಹಾನಿಕಾರಕ ಮತ್ತು ಹಲವಾರು ಕಾಯಲೆಗಳಿಗೆ ಸಹ ಕಾರಣವಾಗಬಹುದು. ಈ ಸಮಸ್ಯೆಗಳಿಗೆ ಹೆಚ್ಚಿನ ಖರ್ಚಿಲ್ಲದೆ, ಮನೆಯಲ್ಲೇ ಇರುವ ಮದ್ದುಗಳ ಮೂಲಕ ಜಿರಳೆ ಕಾಟವನ್ನು ನಿಧಾನವಾಗಿ ನಿವಾರಿಸಬಹುದು. ಬಿಸಿನೀರು, ನಿಂಬೆ ಮತ್ತು ಅಡಿಗೆ ಸೋಡಾ ಒಂದು ಚಮಚ ನಿಂಬೆ ರಸ, 2 ಚಮಚ ಬೇಕಿಂಗ್ ಸೋಡಾವನ್ನು 1 ಲೀಟರ್ ಬಿಸಿನೀರಿನಲ್ಲಿ ಹಾಕಿ ಚೆನ್ನಾಗಿ ಬೆರೆಸಿ. ಇದನ್ನು ಸಿಂಕ್ ಅಥವಾ ನೀರು ಹೋಗುವ ಸ್ಥಳಗಳಲ್ಲಿ ಸುರಿಯಿರಿ ಅಥವಾ ಸಿಂಕ್ ಹಾಗೂ ಅಡುಗೆ ಮನೆಯ ಚಪ್ಪಡಿಗಳನ್ನು ಇದನ್ನು ಹಾಕಿ ತೊಳೆಯಿರಿ. ಇದು ಪರಿಣಾಮಕಾರಿಯಾಗಿ ಅಡುಗೆಮನೆಯಲ್ಲಿನ ಜಿರಳೆಗಳ ಸಂತಾನೋತ್ಪತ್ತಿಯನ್ನು ನಿಲ್ಲಿಸುತ್ತದೆ. ಬಿಸಿನೀರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್ 3ನೇ ಅಲೆಯು ಮಕ್ಕಳನ್ನು ಬಾಧಿಸಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಹಿನ್ನಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಮಕ್ಕಳನ್ನು ಕೋವಿಡ್ 3ನೇ ಅಲೆಯಿಂದ ರಕ್ಷಿಸುವ ಕುರಿತಂತೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮೆಡಿಕಲ್ ಎಕ್ಸ್ಪರ್ಟ್ ಕಮಿಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳನ್ನು ಕೋವಿಡ್ 3 ನೇ ಅಲೆಯಿಂದ ರಕ್ಷಿಸುವ ಕುರಿತಂತೆ ಈಗಾಗಲೇ ಭಾರತೀಯ ಮಕ್ಕಳ ವೈದ್ಯರ ಸಂಘವು ಸಿದ್ದಪಡಿಸಿರುವ ಮಾರ್ಗಸೂಚಿಯನ್ನು ಜಿಲ್ಲೆಯಲ್ಲಿ ಅನುಷ್ಠಾನ ಮಾಡಲು ಈಗಿನಿಂದಲೇ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಮಕ್ಕಳ ಚಿಕಿತ್ಸೆಗಾಗಿ ಕೆಎಂಸಿ ಯಲ್ಲಿ 40 ಐಸಿಯು ಬೆಡ್ ಗಳು ಮತ್ತು ಜಿಲ್ಲಾಸ್ಪತ್ರೆ ಮತ್ತು ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಒಟ್ಟು 60 ಬೆಡ್ ಗಳನ್ನು ಸಿದ್ದಪಡಿಸುವಂತೆ ತಿಳಿಸಿದರು. ಮಕ್ಕಳಿಗೆ ಕೋವಿಡ್ ಚಿಕಿತ್ಸೆ ನೀಡುವ ಕುರಿತಂತೆ ಜಿಲ್ಲೆಯ ಸರ್ಕಾರಿ ಮಕ್ಕಳ ವೈದ್ಯರೊಂದಿಗೆ , ಎಲ್ಲಾ ಖಾಸಗಿ ಆಸ್ಪತ್ರೆಗಳ ಮಕ್ಕಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಏಳಜಿತ ಶಾಲೆಯ ಒಟ್ಟು 139 ವಿದ್ಯಾರ್ಥಿಗಳಿಗೆ ಶ್ರೀ ರಾಮಕೃಷ್ಣ ಕುಟೀರದಿಂದ ನೋಟ್ ಬುಕ್ ಉಚಿತವಾಗಿ ವಿತರಿಸಲಾಯಿತು. ಶ್ರೀ ಸಿದ್ಧಿವಿನಾಯಕ ಸಾಂಸ್ಕೃತಿಕ ಕೇಂದ್ರದ ಗೌರವ ಕಾರ್ಯದರ್ಶಿ ಹಾಗೂ ಏಳಜಿತ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಜ್ಯೋತಿ ಎಚ್.ಎಸ್ ದೀಪ ಬೆಳಗಿ ವಿದ್ಯಾರ್ಥಿಗಳಿಗೆ ಪುಸ್ತಕ ನೀಡುವ ಮೂಲಕ ಗುರುವಾರ ಚಾಲನೆ ನೀಡಿದರು. ಪ್ರತಿ ವಿದ್ಯಾರ್ಥಿಗಳಿಗೂ ತಲಾ ಒಂದು ಸೆಟ್ ನೋಟ್ ಬುಕ್‌ಗಳನ್ನು ವಿತರಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕಾರವಾರ-ಬೆಂಗಳೂರು ವಯಾ ಪಡೀಲ್ ಬೈಪಾಸ್ ಸೂಪರ್ ಫಾಸ್ಟ್ ರೈಲಿಗೆ ‘ಪಂಚ ಗಂಗಾ ಎಕ್ಸ್‌ಪ್ರೆಸ್’ ಎಂಬ ಹೆಸರನ್ನು ಕೆಂದ್ರ ರೈಲ್ವೆ ಸಚಿವಾಲಯ ಮರುನಾಮಕರಣ ಮಾಡಿ ಆದೇಶಿಸಿದೆ. ಉಡುಪಿ ಜಿಲ್ಲೆಯ ಐದು ಪ್ರಮುಖ ಪುಣ್ಯ ನದಿಗಳು ಸಂಗಮಿಸಿ ಸೃಷ್ಟಿಯಾಗುವ ಪ್ರಾಕೃತಿಕ ಅಚ್ಚರಿ ಪಂಚಗಂಗಾವಳಿ ನದಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಗಂಗಾವಳಿ ನದಿಯ ಹೆಸರು ಸೇರಿಸಿ ಜನರ ಅಪೇಕ್ಷೆಯಂತೆ ಪಂಚಗಂಗಾ ಎಕ್ಸ್‌ಪ್ರೆಸ್  ಎಂದು ನಾಮಕರಣ ಮಾಡಲಾಗಿದೆ. ಈ ಹೆಸರನ್ನು ಬೆಂಗಳೂರು ಕಾರವಾರ (16595/16596) ರೈಲಿಗೆ ಪಂಚಗಂಗಾ ಹೆಸರು ಇಡುವಂತೆ ಕುಂದಾಪುರ ರೈಲ್ವೆ ಪ್ರಯಾಣಿಕರ ಹಿತರಕ್ಷಣಾ ಸಮಿತಿ ಹಾಗೂ ಸಾರ್ವಜನಿಕರು ಸಂಸದರಿಗೆ ಮನವಿ ಮಾಡಿದ್ದು ಅದರಂತೆ ಸಂಸದೆ ಶೋಭಾ ಕರಂದ್ಲಾಜೆ ಅವರು ಹಿಂದಿನ ರೈಲ್ವೆ ರಾಜ್ಯ ಸಚಿವರಾದ ಸುರೇಶ್ ಅಂಗಡಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು.  ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ,ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಈ ಬಗ್ಗೆ ಕೇಂದ್ರ ಸರಕಾರಕ್ಕೆ ಒತ್ತಾಯಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದರೆ: ಟೈಮ್ಸ್ ಆಫ್ ಇಂಡಿಯಾ ನಡೆಸಿದ 2021ರ ಟೈಮ್ಸ್ ಇಂಜಿನಿಯರಿಂಗ್ ಇನ್ಸ್‌ಟಿಟ್ಯೂಟ್ ರ‍್ಯಾಂಕಿಂಗ್ ಸರ್ವೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ರಾಷ್ಟ್ರಮಟ್ಟದಲ್ಲಿ 147ನೇ ರ‍್ಯಾಂಕ್ ಪಡೆದಿದೆ. ರಾಷ್ಟ್ರಮಟ್ಟದಲ್ಲಿ ನಡೆದ ಈ ಪ್ರತಿಷ್ಠಿತ ಸಮೀಕ್ಷೆಯಲ್ಲಿ ಎಐಇಟಿ ಈ ಅತ್ಯುನ್ನತ ಸ್ಥಾನ ಪಡೆದಿದೆ. ಸಂಶೋಧನೆ ಮತ್ತು ಕೌಶಲ್ಯಾಭಿವೃದ್ಧಿ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅದ್ಭುತ ಸಾಧ್ಯತೆಗಳನ್ನು ಒದಗಿಸುತ್ತಿರುವ ಈ ಭಾಗದ ಪ್ರತಿಷ್ಠಿತ ಕಾಲೇಜುಗಳಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಒಂದಾಗಿದೆ. ದೇಶದ ಅತ್ಯುತ್ತಮ ಇಂಜಿನಿಯರಿಂಗ್ ಕಾಲೇಜುಗಳನ್ನು ಗುರುತಿಸಿ ರ‍್ಯಾಂಕಿಂಗ್ ನೀಡುವುದು ಈ ಸಮೀಕ್ಷೆಯ ಆಶಯ. ಕಾಲೇಜಿನ ಮೂಲಸೌಕರ‍್ಯ, ಕುಶಲ ಉಪನ್ಯಾಸಕ ವೃಂದ, ಪಠ್ಯಕ್ರಮ, ಔದ್ಯೋಗಿಕ ಕ್ಷೇತ್ರದೊಡನೆಯ ಸಂಬಂಧ, ಬೋಧನ ಕ್ರಮ, ಸಂಶೋಧನೆಯ ವೈವಿಧ್ಯಮಯ ಸಾಧ್ಯತೆಗಳು, ಜಾಗತಿಕ ಮಟ್ಟದ ಅವಕಾಶಗಳು, ಉದ್ಯೋಗಾವಕಾಶಗಳು ಮತ್ತು ಕಾಲೇಜಿನ ಒಟ್ಟು ಬ್ರ್ಯಾಂಡ್ ಮೌಲ್ಯ ಈ ಸಮೀಕ್ಷೆಯ ವಿವಿಧ ಮಾನದಂಡಗಳಾಗಿದ್ದವು. ಈ ಮಾನದಂಡಗಳ ಆಧಾರದ ಮೇಲೆ ಅತ್ಯುತ್ತಮ ಕಾಲೇಜಿನ ಸೂಚ್ಯಂಕವನ್ನು ನೀಡಲಾಗಿದೆ. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಶಿಕ್ಷಣಕ್ಕೆ ಅರಿವು ಮತ್ತು ಅಕ್ಷರವೇ ಮೂಲ, ಚೋಮನ ದುಡಿಯಂತಹ ತಳ ಸಮುದಾಯದ ಬದುಕಿನ ಕುರಿತು ಕೃತಿ ರಚಿಸಿ ಚಿಂತಕನೊಬ್ಬನ ಚಿಂತನೆಗೆ ದಾರಿ ತೋರಿದ ಕಾರಂತರ ನೆನಪಿನಲ್ಲಿರುವ ಈ ಕಾರಂತ ಥೀಮ್ ಪಾರ್ಕ್ ಸಮಾಜಕ್ಕೆ ಕಾರಂತರ ಚಿಂತನೆಗಳನ್ನು, ಅವರ ಮೌಲ್ಯಗಳನ್ನು ಎತ್ತಿ ಹಿಡಿಯಬಲ್ಲ ಸ್ಥಳವಾಗಿದ್ದು, ಇನ್ನಷ್ಟೂ ಅಭಿವೃದ್ಧಿಗೊಂಡು ಸಾಹಿತ್ಯ ಪ್ರೇಮಿಗಳನ್ನು ಸೆಳೆಯುವಂತಾಗಲಿ ಎಂದು ಬ್ರಹ್ಮಾವರ ತಾಲೂಕು ತಹಶೀಲ್ದಾರ್ ರಾಜಶೇಖರ್ ಮೂರ್ತಿ ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಭೇಟಿ ನೀಡಿ ಕಾರಂತರ ಕಂಚಿನ ಪುತ್ಥಳಿಗೆ ಮಾಲರ್ಪಣೆ ಮಾಡಿ ರಂಗ ಮಂದಿರ ಆರ್ಟ್ ಗ್ಯಾಲರಿ, ಅಂಗನವಾಡಿ, ಗ್ರಂಥಾಲಯ ವೀಕ್ಷಿಸಿದರು. ಗ್ರಂಥಾಲಯದಲ್ಲಿನ ಪುಸ್ತಕಗಳ ಶೇಖರಣೆ ವ್ಯವಸ್ಥೆ ಶ್ಲಾಘಿಸಿ, ತಾವು ಒಂದಿಷ್ಟೂ ಪುಸ್ತಕಗಳನ್ನು ಗ್ರಂಥಾಲಯಕ್ಕೆ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಉಪಾಧ್ಯಕ್ಷ ವಾಸು ಪೂಜಾರಿ, ಪಿ.ಡಿ.ಓ ಶೈಲಾ ಎಸ್ ಪೂಜಾರಿ, ಕೋಟ ಕಂದಾಯ ನಿರೀಕ್ಷಕ ರಾಜು, ಗ್ರಾಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಟ್ಟಿಯಂಗಡಿ ‘ನಮ್ಮ ಭೂಮಿ’ಸಂಸ್ಥೆಯ ಮಕ್ಕಳಿಗೆ ಒಂದು ದಿನದ ಅನ್ನದಾನ ನೀಡುವ ಮೂಲಕ 2021-22ನೇ ಸಾಲಿನ ಕುಂದಾಪುರ ರೋಟರಿ ಮಿಡ್ ಟೌನ್ ಇದರ ಸೇವಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕುಂದಾಪುರ ರೋಟರಿ ಮಿಡ್ ಟೌನ್ ಅಧ್ಯಕ್ಷರಾದ ರೋ| ಎಡಿವಿ ರವೀಶ್ಚಂದ್ರ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ನಮ್ಮ ರೋಟರಿ ಸಂಸ್ಥೆಯ ಪ್ರಥಮ ಕಾರ್ಯಕ್ರಮದ ಅಂಗವಾಗಿ, ನಮ್ಮ ಭೂಮಿ ಸಂಸ್ಥೆಯ ಮಕ್ಕಳಿಗೆ ಅನ್ನದಾನ ಮಾಡುವ ಮೂಲಕ ಚಾಲನೆಯನ್ನು ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಉತ್ತಮ ಸಮಾಜ ಸೇವೆಗಳನ್ನು ಮಾಡುವ ಮೂಲಕ ಸಮಾಜಕ್ಕೆ ಮಾದರಿ ಕಾರ್ಯಕ್ರಮಗಳನ್ನು ನೀಡಲಿದ್ದೇವೆ ಎಂದರು. ಈ ಸಂಧರ್ಭ ರೋಟರಿ ಜಿಲ್ಲೆ 3182 ಝೋನ್ 1ರ ಅಸಿಸ್ಟೆಂಟ್ ಗವರ್ನರ್  ಪಿಎಚ್‌ಎಫ್ ರೋ| ಜಯಪ್ರಕಾಶ್ ಶೆಟ್ಟಿ, ಜಿಲ್ಲಾ ಪ್ರಾಜೆಕ್ಟ್ ಕಮಿಟಿ ಸದಸ್ಯರಾದ ಪಿಎಚ್‌ಎಫ್  ರೋ|ಶಿವರಾಮ ಶೆಟ್ಟಿ ಹಾಗೂ ಕಾರ್ಯದರ್ಶಿ ರೋ| ಎಡಿವಿ ರವಿ ಶೆಟ್ಟಿ ಮಚ್ಚಟ್ಟು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಂತರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಕುಂದಾಪುರದ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನಗರದ ವೈದ್ಯರಾದ ಡಾ. ಚಂದ್ರಶೇಖರ ಅವರನ್ನು ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್‌ನ ಮುಖಂಡರಾದ  ಚಂದ್ರಶೇಖರ ಕಲ್ಪತರು ವೈದ್ಯರನ್ನು ಸನ್ಮಾನಿಸಿ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ವೈದ್ಯರು ತಮ್ಮನ್ನು ತಾವು ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಂಡ ಬಗ್ಗೆ ಶ್ಲಾಘಿಸಿ ವೈದ್ಯರನ್ನು ಅಭಿನಂದಿಸಿದರು. ಸನ್ಮಾನ ಸ್ವೀಕರಿಸಿ ಡಾ. ಚಂದ್ರಶೇಖರ ಮಾತನಾಡಿ, ಈ ವೃತ್ತಿ ಅತೀ ಶ್ರೇಷ್ಠವಾದುದು ಈ ಮಾರಣ ಕೋವಿಡ್ ಸಂದರ್ಭದಲ್ಲೂ ಕೇವಲ ವೈದ್ಯರ ಸೇವೆ ಮಾತ್ರ ಪ್ರಮುಖವಲ್ಲ ಸಾರ್ವಜನಿಕರ ಜವಾಬ್ದಾರಿಯು ಮುಖ್ಯ ಎನ್ನುತ್ತಾ ಕಳೆದ ವರ್ಷ ಕೋವಿಡ್ ಸಂದರ್ಭದಲ್ಲಿ ಕುಂದಾಪುರದ ಲಯನ್ಸ್ ಕ್ಲಬ್ ಮಾಡಿರುವ ಸೇವಾ ಚಟುವಟಿಕೆಗಳ ಬಗ್ಗೆ ಶ್ಲಾಘಿಸಿದರು. ಲಯನ್ಸ್ ಕ್ಲಬ್ ಕುಂದಾಪುರದ ನೂತನ ಅಧ್ಯಕ್ಷರಾದ ರಾಧಾಕೃಷ್ಣ ನಾಯಕ್ ವೈದ್ಯರಿಗೆ ತಮ್ಮ ಶುಭಶಯಗಳನ್ನು ಹೇಳಿದರು. ಲಯನ್ ನವೀನ್ ಕುಮಾರ ಶೆಟ್ಟಿ, ಪ್ರಜ್ಞೇಶ್ ಪ್ರಭು, ಡಾ. ರವೀಂದ್ರ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಂದು ಸರ್ಕಾರಿ ಶಾಲೆಗಳು ಎಲ್ಲ ರೀತಿಯಿಂದಲೂ ಸುಸಜ್ಜಿತವಾಗಿವೆ. ಅಲ್ಲಿ ಮೂಲ ಸೌಲಭ್ಯಗಳ ಕೊರತೆ ಇಲ್ಲ. ಖಾಸಗಿ ಶಾಲೆಗಳಿಗಿಂತ ಉತ್ತಮ ಅರ್ಹತೆ, ತರಬೇತಿ, ಅನುಭವ ಪಡೆದ ಶಿಕ್ಷಕರಿದ್ದಾರೆ. ಹಾಗಿದ್ದರೂ ಪೋಷಕರು ಖಾಸಗಿ ಶಿಕ್ಷಣ ಸಂಸ್ಥೆಗಳತ್ತ ಒಲವು ತೋರುತ್ತಿರುವುದರ ಮರ್ಮ ಅರ್ಥವಾಗುತ್ತಿಲ್ಲ ಎಂದು ಮರವಂತೆ ನೇತಾಜಿ ಸುಭಾಶ್ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆಯ ಸಂಸ್ಥಾಪನಾ ಸಮಿತಿ ಅಧ್ಯಕ್ಷ ಎಸ್. ಜನಾರ್ದನ ಮರವಂತೆ ಹೇಳಿದರು. ಅವರು ವರ್ಚುವಲ್ ವೇದಿಕೆಯಲ್ಲಿ ನಡೆದ ನೇತಾಜಿ ಸುಭಾಶ್ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆ ಆರಂಭೋತ್ಸವದಲ್ಲಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಪ್ರವೇಶ, ಶಿಕ್ಷಣ, ಪುಸ್ತಕವೇ ಮೊದಲಾದ ಸೌಕರ್ಯಗಳು ಉಚಿತವಾಗಿ ಸಿಗುತ್ತವೆ. ಗುಣಮಟ್ಟದ ಶಿಕ್ಷಣದ ಕಾರಣದಿಂದ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರುತ್ತದೆ. ಮುಂದಿನ ದಿನಗಳಲ್ಲಾದರೂ ಪೋಷಕರು ಅವುಗಳ ಲಾಭ ಪಡೆಯುವ ಜಾಣತನ ಪ್ರದರ್ಶಿಸಬೇಕು ಎಂದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷೆ ಅನಿತಾ ಆರ್. ಕೆ, ಹಿರಿಯ ಪ್ರಾಥಮಿಕ ಶಾಲಾ ಹಳೆವಿದ್ಯಾರ್ಥಿ…

Read More