ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಶಾಲೆಯ ಸುತ್ತಲೂ ನೀರು ತುಂಬಿಕೊಂಡಿರುವುದರಿಂದ ಮಕ್ಕಳು ಶಾಲೆಗೆ ಬರಲು ತೊಂದರೆಯಾಗುತ್ತಿದೆ. ಶಾಲಾ ವಠಾರ ತಗ್ಗು ಪ್ರದೇಶವಾಗಿರುವುದರಿಂದ ಮಳೆ ನೀರು ಈ ಪರಿಸರದಲ್ಲಿ ಸಂಗ್ರಹಗೊಳ್ಳುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ಖಾರ್ವಿಕೇರಿ ಪ್ರದೇಶದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದ್ದು, ಮಳೆ ನೀರು ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಮಾಡದಿರುವುದರಿಂದ ಮಳೆ ನೀರು ನಿಂತುಕೊಳ್ಳಲಾರಂಭಿಸದೆ. ಶಾಲಾ ವಠಾರದಲ್ಲಿ ಮಳೆ ನೀರು ನಿಂತು ಮಕ್ಕಳಿಗೆ ತೊಂದರೆಯಾಗುತ್ತಿದ್ದರೂ ಸ್ಥಳೀಯಾಡಳಿತ ಈವರೆಗೆ ಯಾವುದೇ ಕ್ರಮಕೈಗೊಳ್ಳದಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಆದಷ್ಟು ಶೀಘ್ರ ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಮಾಡುವಂತೆ ಪೋಷಕರು ಆಗ್ರಹಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳ್ಳೂರು ಗ್ರಾಮದ ಕಾಕ್ತೋಟ ಎಂಬಲ್ಲಿ ಶುಕ್ರವಾರ ದೈವಸ್ಥಾನದ ಆವರಣ ಗೋಡೆ ಕುಸಿದು ಸ್ನಾತಕೊತ್ತರ ಪದವಿ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸೇನಾಪುರಮನೆ ಚಂದ್ರಶೇಖರ ಶೆಟ್ಟಿ-ಹೇಮಾ ದಂಪತಿಯ ಮಗಳು ಧನ್ಯಾ ಕೆ.(22) ಮೃತ ದುರ್ದೈವಿ. ಘಟನೆಯ ವಿವರ: ಧನ್ಯಾ ಮನೆಯಿಂದ 100 ಮೀಟರು ಅಂತರದಲ್ಲಿದ್ದ ಜಟ್ಟಿಗೇಶ್ವರ ದೈವಸ್ಥಾನಕ್ಕೆ ಹೋಗುತ್ತಿದ್ದಾಗ ಅದರ ಪೂರ್ವ ಪಾರ್ಶ್ವದ ಆವರಣ ಕುಸಿದು ಅವಳ ಮೇಲೆ ಬಿದ್ದಿದೆ. ಅದೇ ವೇಳೆಗೆ ಬಿರುಸಾದ ಮಳೆ ಬೀಳುತ್ತಿತ್ತು. ಆವರಣದ ಕಲ್ಲುಗಳ ಅಡಿ ಸಿಲುಕಿದ್ದ ಅವಳ ಮೇಲೆ ನೀರು ಹರಿದ ಕಾರಣ ಉಸಿರುಕಟ್ಟಿ ಮೃತಳಾದಳೆಂದು ಶಂಕಿಸಲಾಗಿದೆ. ಆ ದಾರಿಯಾಗಿ ಕಿರಿಮಂಜೇಶ್ವರ ಸರ್ಕಾರಿ ಪ್ರೌಢಶಾಲೆಗೆ ಹೋಗುತ್ತಿದ್ದ ೧೦ನೇ ತರಗತಿ ವಿದ್ಯಾರ್ಥಿ ಕೃತನ್ ಶೆಟ್ಟಿ ಕಲ್ಲುಗಳ ಅಡಿ ಕೊಡೆ, ತಲೆ ಕೂದಲು ನೋಡಿ ಆಕೆಯ ಮನೆಗೆ ಓಡಿಹೋಗಿ ವಿಷಯ ತಿಳಿಸಿದ್ದಾನೆ. ನೆರೆಕೆರೆಯವರು ಬಂದು ಕಲ್ಲುಗಳನ್ನು ಸರಿಸಿ ಅವಳನ್ನು ಮೇಲೆತ್ತುವುದರೊಳಗೆ ಅವಳು ಇಹಲೋಕದ ಯಾತ್ರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆಯಾಗಿದ್ದಾರೆ. 2015ರಲ್ಲಿ ವಿಧಾನ ಪರಿಷತ್ ಪಂಚಾಯತ್ ಪ್ರತಿನಿಧಿಯಾಗಿ ಬಿಜೆಪಿ ಪಕ್ಷದಿಂದ ಸ್ವರ್ಧಿಸಿ ಆಯ್ಕೆಯಾಗಿದ್ದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆ ಹಾಗೂ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈಶ್ವರಪ್ಪ ಅವರು ಶಾಸಕರಾಗಿ ಆಯ್ಕೆಯಾದ ಬಳಿಕ ತೆರವಾದ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆಮಾಡಲಾಗಿದೆ. ರಾಜಕಾರಣದಲ್ಲಿ ಸರಳ, ಸಜ್ಜನಿಕೆಗೆ ಅನ್ವರ್ಥ ಎಂಬಂತೆ ತನ್ನನ್ನು ತೊಡಗಿಕೊಂಡು ಎಲ್ಲರೊಂದಿಗೂ ಬೆರತು ವಿಶ್ವಾಸ ಹಾಗೂ ಘನತೆಯನ್ನು ಉಳಿಸಿಕೊಂಡ ಅಪರೂಪದ ರಾಜಕಾರಣಿ ಕೋಟ ಶ್ರೀನಿವಾಸ ಪೂಜಾರಿ. ಒಬ್ಬ ಸಾಮಾನ್ಯ ಛಾಯಾಗ್ರಾಹಕನಾಗಿದ್ದ ವ್ಯಕ್ತಿ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ವಿಧಾನ ಪರಿಷತ್ಗೆ ಆಯ್ಕೆಯಾಗಿ, ಮುಜರಾಯಿ ಮಂತ್ರಿಯೂ ಆದ ಪರಿ ಅಚ್ಚರಿ ಮೂಡಿಸುವಂತದ್ದು. ತನ್ನ ಸ್ಪಷ್ಟವಾದ ಮಾತು, ಒಲವು ನಿಲುವುಗಳಿಂದಲೇ…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತದಲ್ಲಿ ನೂತನವಾಗಿ ಆರ್ಟಿಸಿ ವಿತರಣಾ ಸೇವೆ ಆರಂಭಿಸಲಾಯಿತು. ಈ ಸೇವೆಗೆ ಚಾಲನೆ ನೀಡಿದ ಕುಂದಾಪುರ ಉಪವಿಭಾಗಾಧಿಕಾರಿ ಟಿ.ಭೂಬಾಲನ್ ಮಾತನಾಡಿ ಪಹಣಿ ಪತ್ರದ ಗಣೀಕರಣ ವ್ಯವಸ್ಥೆಯಲ್ಲಿ ನಮ್ಮ ಇತರ ರಾಜ್ಯಗಳಿಗೆ ರೋಲ್ ಮಾಡೆಲ್ ಆಗಿದೆ. ಆರ್ಟಿಸಿ ವ್ಯವಸ್ಥೆಯ ಬಗ್ಗೆ ರಾಜ್ಯ ಸರಕಾರ ಹೆಚ್ಚು ಗಮನಹರಿಸಿ ಗಣೀಕರಣಗೊಳಿಸಿರುವುದರಿಂದ ಸಾರ್ವಜನಿಕರು ಸುಲಭವಾಗಿ ಆರ್ಟಿಸಿಯನ್ನು ಪಡೆಯಲು ಸಾಧ್ಯವಾಗುತ್ತಿದೆ. ವಿಕೇಂದ್ರಿಕರಣ ವ್ಯವಸ್ಥೆಯಿಂದ ಪಹಣಿ ಪತ್ರವನ್ನು ಆನ್ಲೈನ್ನಲ್ಲಿ ದೊರೆಯುವ ವ್ಯವಸ್ಥೆ ಮಾಡಿರುವುದರಿಂದ ಸಾರ್ವಜನಿಕರು ತಾಲೂಕು, ನಾಡ ಕಛೇರಿಗಳಿಗೆ ಪ್ರತಿದಿನ ಅಲೆಯುವುದು ತಪ್ಪಿದೆ. ಈ ವ್ಯವಸ್ಥೆಯಿಂದ ಕಂದಾಯ ಇಲಾಖೆ ಮೇಲೆ ಒತ್ತಡ ಕೂಡ ಕಡಿಮೆಯಾಗಿದೆ ಎಂದು ಹೇಳಿದರು. 98 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯಲ್ಲಿ ಸಾರ್ವಜನಿಕರ ಹಾಗೂ ರೈತರ ಅನುಕೂಲತೆ ಕಲ್ಪಿಸುವ ಉದ್ದೇಶದಿಂದ ಆರ್ಟಿಸಿ ವಿತರಣೆ ಸೇವೆಯನ್ನು ಪ್ರಾರಂಭಿಸಿರುವು ಶ್ಲಾಘನೀಯ. ಪ್ರಸಕ್ತ ವರ್ಷದಲ್ಲಿ ಒಂದು ಕೋಟಿ ರೂ. ಲಾಭ ಗಳಿಸಿರುವ ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ನ ಮಾಹಿತಿ ತಂತ್ರಜ್ಞಾನ ವಿಭಾಗದ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಕಲತ್ರಪಾದೆ ಇವರು ನೇಮಕಗೊಂಡಿದ್ದಾರೆ. ಇವರು ಈ ಹಿಂದೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಹಾಗೂ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿ ಕೋಮುವಾದವನ್ನು ಬಲವಾಗಿ ವಿರೋದಿಸಿ ತಮ್ಮ ನೇರ ಬರವಣಿಗೆಯ ಮೂಲಕ ಗುರುತಿಸಿಕೊಂಡಿರುವ ಸತೀಶ್ ಪೂಜಾರಿ ಇವರನ್ನು ರಾಜ್ಯ ಕಾಂಗ್ರೆಸ್ ಐ.ಟಿ.ಸೆಲ್ ಅಧ್ಯಕ್ಷ ನಿರಂಜನ್ ರಾವ್ ಅವರು ಉಡುಪಿ ಜಿಲ್ಲೆಯ ಕಾಂಗ್ರೆಸ್ ಐ.ಟಿ. ಸೆಲ್ ನ ಅಧ್ಯಕ್ಷರಾಗಿ ನಿಯುಕ್ತಿಗೊಳಿಸಿದ ಪತ್ರವನ್ನು ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ರವಿಶಂಕರ್ ಶೇರಿಗಾರ್, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸದಾಶಿವ ದೇವಾಡಿಗ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಾಕೆರೆ, ಚಿಕ್ಕಳ್ಳಿ ಮತ್ತು ಪಡುಕೋಣೆ ಭಾಗದಲ್ಲಿ ಮಳೆಯಿಂದ ಭತ್ತದ ಕೃಷಿಯ ಗದ್ದೆ ಪ್ರದೇಶಗಳು ಸಂಪೂರ್ಣ ಜಲಾವೃತ ಗೊಂಡಿದ್ದು, ಸ್ಥಳಕ್ಕೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಭೇಟಿ ನೀಡಿದರು. ಬಂಟ್ವಾಡಿ ಡ್ಯಾಂ ಹಾಗೂ ಮೊವಾಡಿ ಸೇತುವೆಗಳ ಅಪೂರ್ಣ ಕಾಮಗಾರಿಗಳಿಂದಾಗಿ ಈ ಅನಾಹುತ ಸೃಷ್ಟಿಯಾಗಿದೆ ಎಂದು ಸ್ಥಳೀಯರು ಶಾಸಕರಿಗೆ ದೂರು ನೀಡಿದ್ದು, ಕೂಡಲೇ ಸಣ್ಣ ನೀರಾವರಿ ಎಂಜಿನಿಯರ್ ಹಾಗೂ ಪಿಡಬ್ಲ್ಯುಡಿ ಎಂಜಿನಿಯರ್ ಅವರನ್ನು ಸ್ಥಳಕ್ಕೆ ಕರೆಸಿದ ಶಾಸಕರು ಜನಸಾಮಾನ್ಯರಿಗೆ ತೊಂದರೆ ಯಾಗದಂತೆ, ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಪಂಚಾಯತ್ ಸದಸ್ಯರಾದ ಶ್ರೀಧರ್ ದೇವಾಡಿಗ, ದಿನೇಶ್ ಶೆಟ್ಟಿ, ಅಶೋಕ್ ಶೆಟ್ಟಿ, ಗೋಪಾಲಕೃಷ್ಣ ನಾಡ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಗುರುಕುಲ ಪಬ್ಲಿಕ್ ಶಾಲೆ ವಕ್ವಾಡಿಯಲ್ಲಿ ವಿದ್ಯಾರ್ಥಿ ಸಂಸತ್ತಿನ ಪದಾಗ್ರಹಣ ಸಮಾರಂಭ ಜರುಗಿತು. ಪದಾಗ್ರಹಣ ಸಮಾರಂಭವನ್ನು ಉದ್ಘಾಟಿಸಿದ ಭಂಡಾರ್ಕಾರ್ಸ್ ಕಾಲೇಜು ಕುಂದಾಪುರ ಇದರ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿಯವರು ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ವಿಕಾಸಕ್ಕೆ ನಾಯಕತ್ವ ಗುಣ ಅತೀ ಅವಶ್ಯಕ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ತಮ್ಮ ಮುಂದಿನ ವೃತ್ತಿ ಮತ್ತು ವೈಯಕ್ತಿಕ ಬದುಕಿನಲ್ಲಿ ವಿಶಿಷ್ಠವಾಗಿ ಬದುಕಲು ಉತ್ತಮ ನಾಯಕತ್ವ ಅನಿವಾರ್ಯ. ಶಾಲೆಯಲ್ಲಿ ಕಲಿಯುವ ಎಲ್ಲಾ ವಿಷಯಗಳು ಹಾಗೂ ಮೌಲ್ಯಗಳು ಮುಂದಿನ ಅವರ ಜೀವನಕ್ಕೆ ತರಬೇತಿಯಾಗಲಿದೆ. ಅಲ್ಲದೇ, ಸಮಗ್ರ ಭಾರತ ದೇಶವನ್ನು ಕಟ್ಟುವಲ್ಲಿ ವಿದ್ಯಾರ್ಥಿಗಳ ನಾಯಕತ್ವ ಗುಣಗಳ ಪಾತ್ರ ಗುರುತರವಾಗಿದೆ ಎಂದು ಅಲ್ಲದೇ, ಶಾಲಾ ಚುನಾವಣೆಯ ಮೂಲಕ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಉತ್ತಮ ನಾಯಕ ಎಂದರೆ ಯಾರು? ಹಾಗೂ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಲು ಬೇಕಾಗುವ ವಿಶಿಷ್ಠ ಗುಣಗಳನ್ನು ತಿಳಿಸಿದರು. ಡಾ.ಎನ್.ಪಿ.ನಾರಾಯಣ ಶೆಟ್ಟಿಯವರು ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರಶಸ್ತಿ ಪತ್ರಗಳನ್ನು ಹಾಗೂ ಸಾಂಕೇತಿಕವಾಗಿ ಬ್ಯಾಚಸ್ಗಳನ್ನು ನೀಡಿದರು. ಈ ಕಾರ್ಯಕ್ರಮದ…
ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಅದು ಮನೆಯನ್ನು ಹೋಲುವ ಗೂಡು. ಬಿಸಿಲು ಮಳೆಯ ರಕ್ಷಣೆಗೆ ಹರಿದ ಪ್ಲಾಸ್ಟಿಕ್ ಟಾರ್ಪಲ್ಲಿನ ಆಸರೆ. ಬಡತನದ ದಾರಿದ್ರ್ಯಕ್ಕೆ ಬೇಸತ್ತು ಅದರಲ್ಲಿಯೇ ನಾಲ್ಕು ಜೀವಗಳು ಬದುಕುತ್ತಿವೆ. ಇದು ಕೋವಿನಗುಡ್ಡೆ ಎಂಬಲ್ಲಿ ಬದುಕುತ್ತಿರುವ ಸಾಂತುಬಾಯಿ ಎಂಬ ವೃದ್ಧೆಯ ಕುಟುಂಬದ ದಯಾನೀಯ ಸ್ಥಿತಿ. ಶಂಕರನಾರಾಯಣದ ಕುಳ್ಳುಂಜೆ ಗ್ರಾಮದ ಕೋವಿನಗುಡ್ಡೆ ಎಂಬಲ್ಲಿ ವಾಸವಾಗಿರುವ ಕುಡುಬಿ ಸಮುದಾಯಕ್ಕೆ ಸೇರಿದ ಸಾಂತುಬಾಯಿ ಹಲವು ವರ್ಷಗಳಿಂದ ತಮ್ಮ ಇಬ್ಬರು ಮಕ್ಕಳು ಹಾಗೂ ಓರ್ವ ಮೊಮ್ಮೊಗಳೊಂದಿಗೆ ವಾಸವಾಗಿದ್ದಾರೆ. ವಿದ್ಯುತ್ ನೋಡಿರದ ಕುಟುಂಬ ಸಂಜೆಯಾಗುತ್ತಲೇ ಅನಿವಾರ್ಯವಾಗಿ ಮಲಗಿಬಿಡುತ್ತಾರೆ. ಮುರುಕಲು ಗುಡಿಸಲಿಗೆ ಅದೇ ಗುಡಿಸಲಿನಲ್ಲಿ ಅವರ ಪ್ರೀತಿಯ ದನಕರುಗಳನ್ನು ಸಾಕಿಕೊಂಡಿದ್ದಾರೆ. ಮಳೆಗಾಲದಲ್ಲಿ ಅವರ ಸ್ಥಿತಿ ದೇವರಿಗೆ ಪ್ರೀತಿ. 2015-16 ರಲ್ಲಿ ಸಾಂತುಬಾಯಿಗೆ ಅಂಬೇಡ್ಕರ್ ವಸತಿ ಯೋಜನೆಯಡಿ ಒಂದುವರೆ ಲಕ್ಷ ರೂಪಾಯಿ ಹಣ ಮನೆ ಕಟ್ಟಲು ಮಂಜೂರಾತಿ ಆಗಿತ್ತು. ಆದರೆ ದಿನದ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದ ಕುಟುಂಬಕ್ಕೆ ಅದಕ್ಕೆ ಸರಿಯಾದ ದಾಖಲಾತಿ ಒದಗಿಸುವುದು…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದ ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ ವೇದಮೂರ್ತಿ ಕಟ್ಟೆ ಶಂಕರ ಭಟ್ ಹಾಗೂ ಕುಲ ಪುರೋಹಿತ ಸುಬ್ರಹ್ಮಣ್ಯ ಭಟ್ ಬಾಡ ಇವರ ನೇತೃತ್ವದಲ್ಲಿ ನಡೆಯಿತು. ರಾಮಕ್ಷತ್ರಿಯ ಸಮಾಜದ 13ನೇ ವರ್ಷದ ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವದ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸ್ವರ್ಣವಲ್ಲಿ ಮಠಾಧೀಶ ಶ್ರೀ ಗಂಗಾಧರೇಂದ್ರ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಮರ್ಯಾದಾ ಪುರುಷೋತ್ತಮ ಶ್ರೀರಾಮನ ವಿವಾಹ ಹಾಗೂ ಜೀವನ ಆದರ್ಶಮಯವಾಗಿದ್ದು, ಇತರರಿಗೆ ಅನುಕರಣೀಯವಾಗಿದೆ. ಪತಿ-ಪತ್ನಿಯರ ಪರಸ್ಪರ ನಿಷ್ಠೆ ಮತ್ತು ಅನ್ಯೊನತೆ ಸುಖಮಯ ಜೀವನದ ಮೊದಲ ಸೂತ್ರ ಎಂದು ಹೇಳಿದರು. ಭಗವಂತನ ಕಲ್ಯಾಣೋತ್ಸದಲ್ಲಿ ಹಲವಾರು ರೀತಿಯ ಪ್ರಯೋಜನಗಳಿದ್ದರೂ, ಸಮಾಜ ಸುಭೀಕ್ಷೆಯಾಗುತ್ತದೆ. ಅದರಿಂದ ನಾವು ನಮ್ಮ ಜೀವನದಲ್ಲಿ ಆದರ್ಶ, ತತ್ವ ಹಾಗೂ ಉತ್ತಮ ಚಿಂತನೆಗಳನ್ನು ಅಳವಡಿಸಿಕೊಳ್ಳಲು ಸಹಕಾರಿಯಾಗುತ್ತದೆ. ಇದೊಂದು ಪುಣ್ಯದ ಕಾರ್ಯವಾಗಿದ್ದರಿಂದ ಮಂಗಳಕಾರ್ಯ, ಶುಭವಿವಾಹವೆಂದು ಸಂಭೋಧಿಸುತ್ತಾರೆ. ವಿವಾಹವೆಂಬುದು ಧರ್ಮ, ಅರ್ಥ, ಕಾಮಗಳನ್ನು ಅತಿಕ್ರಮಿಸಿ ಹೊಗುವುದಿಲ್ಲ ಎಂಬ ನೆಲೆಯಲ್ಲಿ ಸಂದೇಶ ಸಾರುವ ಪವಿತ್ರಬಂಧನವಾಗಿದೆ. ಆದರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಮುದ್ರಾಡಿಯ ನಾಟ್ಕದೂರು ನಮ ತುಳುವೆರ್ ಕಲಾ ಸಂಘಟನೆಯು ಸಿಜಿಕೆ ಬೀದಿರಂಗ ದಿನದ ನೆನಪಿನಲ್ಲಿ ಸಿಜಿಕೆ ರಂಗ ಪುರಸ್ಕಾರ ಪ್ರದಾನ ಕಾರ್ಯಕ್ರಮದಲ್ಲಿ ಸ್ಥಳೀಯ ನಟ, ನಿರ್ದೇಶಕ ಯೋಗೀಶ ಬಂಕೇಶ್ವರ ಅವರಿಗೆ ಪುರಸ್ಕಾರ ಪ್ರದಾನ ಕಾರ್ಯಕ್ರಮ ಜರುಗಿತು. ಸಿಜಿಕೆ ರಂಗ ಪುರಸ್ಕಾರ ಪ್ರದಾನ ಮಾಡಿದ ಹಿರಿಯ ರಂಗನಿರ್ದೇಶಕ ಗುರುರಾಜ ಮಾರ್ಪಳ್ಳಿ ಮಾತನಾಡಿ ರಂಗಭೂಮಿಯು ಎಲ್ಲ ಕಲೆಗಳ ತವರು. ಅದರಲ್ಲೂ ನವ್ಯ ರಂಗಭೂಮಿ ಹೊಸರೀತಿಯ ಚಿಂತನೆಗೆ, ಸೃಜನಶೀಲ ಕ್ರಿಯೆಗೆ ಸೂಕ್ತ ವೇದಿಕೆಯಾಗಿದೆ. ಗ್ರಾಮೀಣ ಭಾಗದಲ್ಲಿ ರಂಗಭೂಮಿಗೆ ಸಾಕಷ್ಟು ಬೇಡಿಕೆಯಿದ್ದು, ಇದು ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡುತ್ತಿದೆ ಎಂದು ಹೇಳಿದರು. ರಂಗಭೂಮಿ ಮನುಷ್ಯ ಜೀವನದ ಅರ್ಥ, ಗುರಿ ಏನು ಎನ್ನುವುದನ್ನು ಶೋಧಿಸಿ, ಪ್ರಚುರಪಡಿಸುವ ಕೆಲಸ ಮಾಡುತ್ತದೆ. ಅದರಲ್ಲಿ ತೊಡಗಲು ಮನಸ್ಸು ಇರುವವರಿಗೆಲ್ಲ ಇಂದು ವಿಪುಲ ಅವಕಾಶಗಳಿವೆ. ಆಸಕ್ತ ವಿದ್ಯಾರ್ಥಿಗಳು ಅದರತ್ತ ಗಮನ ಹರಿಸಬೇಕು ಎಂದ ಅವರು ಯೋಗೀಶ ಬಂಕೇಶ್ವರ ಒಬ್ಬ ಪ್ರತಿಭಾವಂತ ಮತ್ತು ಕ್ರಿಯಾಶೀಲ ರಂಗಕರ್ಮಿ ಆಗಿರುವುದರಿಂದ ಅವರು…
