ಕುಂದಾಪ್ರ ಡಾಟ್ ಕಾಂ ಸುದ್ದಿ ತೆಕ್ಕಟ್ಟೆ: ಬೇಳೂರು ಸ್ಫೂರ್ತಿಧಾಮದ ಮೇಲೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಸಂಸ್ಥೆಯ ಪರವಾನಿಗೆ ರದ್ದುಗೊಳಿಸಿ, ವೃದ್ಧರನ್ನು ಸ್ಥಳಾಂತರಿಸುವಂತೆ ಸರಕಾರದ ಆದೇಶದ ಹಿನ್ನೆಲೆಯಲ್ಲಿ ಎರಡು ಬಾರಿ ವೃದ್ದರನ್ನು ಸ್ಥಳಾಂತರಿಸಲು ಅಧಿಕಾರಿ ಬಂದರೂ ಇಲ್ಲಿ ಆಶ್ರಯಿಸಿರುವ ವೃದ್ಧರು ಹೊರಹೋಗಲು ಕೇಳಲಿಲ್ಲ. ನನ್ನ ಮೇಲಿನ ಅಪವಾದಗಳಿಗೆ ಏನೂ ತಪ್ಪು ಮಾಡದ ವೃದ್ಧರನ್ನು ಬಲಾತ್ಕಾರವಾಗಿ ಸ್ಥಳಾಂತರಿಸುವ ಪ್ರಯತ್ನ ಬೇಡ, ಬದಲಿಗೆ ನನ್ನ ಹುದ್ದೆಗೆ ರಾಜೀನಾಮೆ ನೀಡಿ ಹೊರ ಬರುತ್ತೇನೆ ಎಂದು ಸ್ಫೂರ್ತಿಧಾಮದ ಮುಖ್ಯ ಕಾರ್ಯನಿರ್ವಾಹಕ ಡಾ|ಕೇಶವ ಕೋಟೇಶ್ವರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಸಂಸ್ಥೆಯ ಮುಖ್ಯಸ್ಥನಾಗಿ ನನ್ನ ಮೇಲಿನ ಅಪವಾದಗಳಿಗೆ ಉತ್ತರಿಸುವ ಪ್ರಯತ್ನ ಮಾಡಿ ಸೋತಿದ್ದೇನೆ. ಮುಂದಿನ ದಿನದಲ್ಲಿ ಸ್ಫೂರ್ತಿ ಸಂಸ್ಥೆಯ ಆಡಳಿತ ಮಂಡಳಿಯ ಸಭೆ ಕರೆದು ರಾಜೀನಾಮೆ ಸಲ್ಲಿಸಿ ಹೊರಬರುತ್ತೇನೆ. ಸಂಸ್ಥೆಯನ್ನು ಮುನ್ನಡೆಸುವ ಆಸಕ್ತಿ ಹೊಂದಿರುವ ಪ್ರಮೀಳಾ ಜೆ.ವಾಜ್ ಅವರಿಗೆ ಈ ವ್ಯವಸ್ಥೆಯ ಸಂಪೂರ್ಣ ಉಸ್ತುವಾರಿ ನೀಡಲು ಆಡಳಿತ ಮಂಡಳಿಗೆ ಶಿಫಾರಸು ಮಾಡುತ್ತೇನೆ. ಸಾರ್ವಜನಿಕ ದೇಣಿಗೆಯಿಂದ ನಿರ್ಮಿತವಾದ ಈ ಇಡೀ ವ್ಯವಸ್ಥೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ : ಇಲ್ಲಿನ ಆರ್ಎನ್ ಶೆಟ್ಟಿ ಸಭಾಭವನದಲ್ಲಿ ಉಡುಪಿ ಜಿಲ್ಲಾ ರೈತ ಸಂಘದ ಪದಾಧಿಕಾರಿಗಳ ಸಭೆ ಜರುಗಿತು. ಈ ಸಭೆಯನ್ನು ಉದ್ದೇಶಿಸಿ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಕೆ.ಪ್ರತಾಪ್ಚಂದ್ರ ಶೆಟ್ಟಿರವರು ಮಾತನಾಡಿ ಜಿಲ್ಲೆಯಲ್ಲಿ ಮರಳು ತೆಗೆಯ ಬಾರದು ಎಂದು ನಿರ್ಬಂಧ ವಿಧಿಸುವ ಅಧಿಕಾರಿಗಳು ಜಿಲ್ಲೆಯ ಜನರಿಗೆ ಅಗತ್ಯವಾಗಿರುವ ಮರಳನ್ನು ಒದಗಿಸಬೇಕು ಎನ್ನುವ ಬದ್ದತೆಯನ್ನು ಪ್ರದರ್ಶಿಸಬೇಕು. ಜಿಲ್ಲೆಯ ಜನ ಸಾಮಾನ್ಯರ ಪರ ರೈತ ಸಂಘದ ಧ್ವನಿ ಇರುತ್ತದೆ ಹೊರತು ಇನ್ನಾರದ್ದೋ ಹಿತಾಸಕ್ತಿಯನ್ನು ಕಾಯುವ ಅನಿವಾರ್ಯತೆ ನಮಗಿಲ್ಲ ಎಂದು ಹೇಳಿದರು. ಕಪ್ಪು ಹಣದಿಂದ ಮನೆ ಹಾಗೂ ಕಟ್ಟಡ ನಿರ್ಮಿಸುವವರಿಗೆ ಮರಳು ಸಮಸ್ಯೆ ಬಾಧಿಸುವುದಿಲ್ಲ. ಕಷ್ಟದಿಂದ ದುಡಿಮೆ ಮಾಡಿ ಜೀವನದಲ್ಲಿ ಮೊದಲ ಬಾರಿ ಸ್ವಂತ ಮನೆ ಮಾಡುವವರನ್ನು ಹಾಗೂ ಸರ್ಕಾರದ ಯೋಜನೆಯ ಸಹಕಾರದಿಂದ ಮನೆ ಕಟ್ಟಿಕೊಳ್ಳುವವರನ್ನು ಇಲ್ಲಿನ ಮರಳು ಸಮಸ್ಯೆ ಕಣ್ಣೀರು ತರುಸುತ್ತಿದೆ ಎನ್ನುವ ಸತ್ಯ ಅಧಿಕಾರಿಗಳಿಗೆ ಯಾಕೆ ಅರ್ಥವಾಗುತ್ತಿಲ್ಲ. ಹೊರ ಜಿಲ್ಲೆಗಳಿಗೆ ಮರಳು…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಭಾರತೀಯ ಜೀವವಿಮಾ ನಿಗಮ ಕುಂದಾಪುರ ಶಾಖೆಯ ಮುಖ್ಯ ಜೀವವಿಮಾ ಸಲಹೆಗಾರರಾದ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರು ಉತ್ತಮ ಜೀವಾವಿಮಾ ಪಾಲಿಸಿ ಮತ್ತು ಗ್ರಾಹಕ ಸೇವೆಯೊಂದಿಗೆ ನಿರಂತರವಾಗಿ 5ನೇ ಬಾರಿಗೆ ಅಮೇರಿಕಾದ ಮಿಲಿಯನ್ ಡಾಲರ್ ರೌಂಡ್ ಟೇಬಲ್ ಸದಸ್ಯತ್ವ ಅರ್ಹತೆ ಪಡೆದಿರುತ್ತಾರೆ. ಕೋಣಿಯ ಮಾತಾ ಮೊಂಟೆಸ್ಸೋರಿ ಮಕ್ಕಳ ಶಾಲೆಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಇವರು ಕುಂದಾಪುರ ಪರಿಸರದ ಹೆಮ್ಮೆಯ ಪ್ರತಿನಿಧಿಯಾಗಿದ್ದು ಶಾಖೆಯ ಏಕೈಕ ಗ್ಯಾಲಕ್ಸಿ ಕ್ಲಬ್ನ ಸದಸ್ಯರಾಗಿರುತ್ತಾರೆ. ಅವರ ಈ ಸಾಧನೆಗೆ ಶಾಖೆಯ ಸರ್ವ ಸಿಬ್ಬಂದಿ ವರ್ಗದವರು ಅಸಿಸ್ಟೆಂಟ್ ಮ್ಯಾನೇಜರ್ ಗಿರೀಶ್ ಎಮ್. ಮತ್ತು ಮುಖ್ಯ ಪ್ರಬಂಧಕ ಕೆ. ಪ್ರಭಾಕರ ಅವರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರದ ಸೇವಾ ಸಂಗಮ ದತ್ತಾತ್ರೇಯ ಶಿಶು ಮಂದಿರದ ಪ್ರಥಮ ಮಹಡಿಯ ಸ್ವಾಮೀ ವಿವೇಕಾನಂದ ಮಂದಿರವನ್ನು ಉದ್ಘಾಟಿಸಲಾಯಿತು. ಉದ್ಘಾಟನೆ ಮಾಡಿದ ನಿವೃತ್ತಿ ಗುರುಕುಲ ಹರಿಖಂಡಿಗೆಯ ಸಂಸ್ಥಾಪಕರಾದ ಕೆ.ಶಾಂತರಾಂ ಅಚ್ಯುತ್ ಭಂಡಾರ್ಕಾರ್ ಮಾತನಾಡಿ ಮನುಷ್ಯ ಜನ್ಮದಲ್ಲಿ ಹುಟಿದ ನಾವು ಸಮಾಜಕ್ಕೆ ಕೊಡುಗೆಯನ್ನು ನೀಡಬೇಕು. ಅದರಲ್ಲಿ ಸಂತೋಷವಿದೆ, ಆತ್ಮತೃಪ್ತಿ ಇದೆ. ನಾವು ಬದುಕಿರುವುದು ಕೆಲವೇ ಸಮಯ. ಎಲ್ಲವೂ ನಶ್ವರ. ಆದರೆ ಆತ್ಮತೃಪ್ತಿ ಮಾತ್ರ ಶಾಶ್ವತ ಎಂದು ನುಡಿದರು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಸ್ವಾಮಿ ಶ್ರೀ ಸತ್ಯ ಸ್ವರೂಪಾನಂದಜೀ (ರಾಮಕೃಷ್ಣ ಕುಟೀರ, ಯಳಜಿತ್, ಬೈಂದೂರು) ಇವರು ಮಾತನಾಡುತ್ತಾ ಭಗವದ್ಗೀತೆ ಉತ್ತಮ ಜೀವನದ ದಾರಿ ಬೆಳಕು. ಮಾತೆಯರು ಈ ಬಗ್ಗೆ ಆಸಕ್ತಿವಹಿಸಿ ಮಕ್ಕಳು ಪ್ರತೀ ದಿನ ಭಗವದ್ಗೀತೆ ಪಠಣ ಮಾಡುವಂತೆ ಪ್ರಯತ್ನಿಸಬೇಕು ಎಂದರು. ಮಂದಿರವನ್ನು ನಿರ್ಮಿಸಿ ಕೊಟ್ಟ ಸೇವಾಕರ್ತರಾದ ನರಸಿಂಹ ಸುಂದರ ಹೆಗ್ಡೆ ದಂಪತಿಗಳನ್ನು ಶಿಶುಮಂದಿರದ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನಕ್ಕೆ ಉತ್ತರಿಸಿದ ಹೆಗ್ಡೆಯವರು ಧನವನ್ನು ಕೂಡಿಡುವುದರಲ್ಲಿ ಅರ್ಥವಿಲ್ಲ. ಅವಶ್ಯಕತೆ ಇರುವವರಿಗೆ ಅದನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಮ್ಮ ಕುಂದಾಪುರ ಕನ್ನಡ ಬಳಗ ದುಬೈ ವತಿಯಿಂದ ಆರ್ಯಭಟ ಪ್ರಶಸ್ತಿ ಪುರಸ್ಕೃತ ದಿನೇಶ್ ದೇವಾಡಿಗ ನಾಗೂರು ಅವರನ್ನು ಅಭಿನಂದಿಸಲಾಯಿತು. ದಿನೇಶ್ ದೇವಾಡಿಗ ಹಾಗೂ ಅವರ ಧರ್ಮಪತ್ನಿ ವಿಶಾಲಾಕ್ಷಿಯವರನ್ನು ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ನಮ್ಮ ಕುಂದಾಪುರ ಕನ್ನಡ ಬಳಗ ದುಬೈ ಇದರ ಅಧ್ಯಕ್ಷ ಸಾಧನ ದಾಸ್ ಸೇರಿದಂತೆ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷರಾಗಿ ಜಯಾನಂದ ಹೋಬಳಿದಾರ್ ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬೈಂದೂರು ತಾಲೂಕು ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಸ್ಥಾಪಕಾಧ್ಯಕ್ಷರನ್ನಾಗಿ ಜಯಾನಂದ ಹೋಬಳಿದಾರ್ ಅವರನ್ನು ಸೂಚಿಸಿ ಆಯ್ಕೆಮಾಡಲಾಗಿದೆ. ಉಪಾಧ್ಯಕ್ಷರಾಗಿ ಸುಧಾಕರ ಶೆಟ್ಟಿ, ಶಿವರಾಮ ಕೃಷ್ಣ ಭಟ್, ನೀಲಕಂಠ ಹುದಾರ್, ಕೃಷ್ಣಯ್ಯ ಮದ್ದೋಡಿ, ಜೋಸೆಫ್ ರೋಡ್ರಿಗಸ್ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಪ್ರಕಾಶ್ ಭಟ್ ಉಪ್ಪುಂದ, ಜೊತೆ ಕಾರ್ಯದರ್ಶಿಯಾಗಿ ಆನಂದ ಯೋಜನಾನಗರ, ಗಣೇಶ್ ರಾವ್, ಪ್ರಕಾಶ್ ಮೇಸ್ತ ಶಿರೂರು, ವಿಶ್ವನಾಥ ಮೊಗವೀರ ಪಡುಕೋಣೆ, ಅಬ್ದುಲ್ ಖಾದರ್ ಕಿರಿಮಂಜೇಶ್ವರ, ನಿತಿನ್ ಕುಮಾರ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಮುತ್ತಯ್ಯ ಪೂಜಾರಿ ಯಡ್ತರೆ, ಖಜಾಂಚಿಯಾಗಿ ರವೀಂದ್ರ ಕೆ. ಪಡುವರಿ ಅವರನ್ನು ಆಯ್ಕೆಮಾಡಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಿದ್ಧಾಪುರ ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ರೋಹಿತ್ ಕುಮಾರ್ ಶೆಟ್ಟಿ ಅವರು ತಮ್ಮ ಸಮೀಪದ ಪ್ರತಿಸ್ವರ್ಧಿ ಕಾಂಗ್ರೆಸ್ ಪಕ್ಷದ ಪ್ರಸನ್ನ ಕುಮಾರ್ ಶೆಟ್ಟಿ ಅವರನ್ನು 3360 ಮತಗಳ ಅಂತರದಿಂದ ಸೋಲಿಸಿ ಗೆಲುವಿನ ನಗೆ ಬೀರಿದ್ದಾರೆ. ಸಿದ್ಧಾಪುರ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ತಾರನಾಥ ಶೆಟ್ಟಿ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ರೋಹಿತ್ ಶೆಟ್ಟಿ 11,926 ಮತಗಳನ್ನು ಪಡೆದಿದ್ದರೇ, ಕಾಂಗ್ರೆಸ್ ಪಕ್ಷದ ಪ್ರಸನ್ನಕುಮಾರ್ ಶೆಟ್ಟಿ 8566 ಮತಗಳು ಹಾಗೂ ಜೆಡಿಎಸ್ ಪಕ್ಷದ ಅರುಣ ಶೆಟ್ಟಿ 276 ಮತಗಳನ್ನು ಪಡೆದಿದ್ದರು. ಚಲಾವಣೆಯಾದ 21,048 ಮತಗಳ ಪೈಕಿ 280 ನೋಟಾ ಮತಗಳು ಬಿದ್ದಿದ್ದವು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ನಿವೃತ್ತ ಸಂಸ್ಕೃತ ಪ್ರಾಧ್ಯಾಪಕ, ಕುಂದೇಶ್ವರ ದೇವಸ್ಥಾನದ ಮಾಜಿ ಧರ್ಮದರ್ಶಿ ಡಾ. ಎಚ್. ವಿ. ನರಸಿಂಹಮೂರ್ತಿ ಅವರು ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಬಹುಭಾಷಾ ವಿದ್ವಾಂಸ, ನಿಗರ್ವಿ, ಸದಾ ನಗುಮೊಗದ ಡಾ. ಎಚ್.ವಿ.ನರಸಿಂಹ ಮೂರ್ತಿಕನ್ನಡ ಮತ್ತು ಸಂಸ್ಕೃತ ಭಾಷೆಯಲ್ಲಿ ೭೦ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಅವರ ನೂರಾರು ಲೇಖನಗಳು ನಾಡಿನ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಕುಂದಾಪುರದ ಕುಂದೇಶ್ವರ ದೇವಸ್ಥಾನದ ಅಭಿವೃದ್ಧಿಯಲ್ಲಿ ಡಾ. ಎಚ್. ವಿ. ನರಸಿಂಹಮೂರ್ತಿ ಅವರ ಕೊಡುಗೆ ಗಣನೀಯವಾದದ್ದು. ಶೃಂಗೇರಿ ಶಾರದಾ ಪೀಠದ ಪ್ರಾಂತೀಯ ಧರ್ಮಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ಕುಂದಾಪುರದ ಹತ್ತಾರು ಸಂಸ್ಥೆಗಳಲ್ಲಿ ಡಾ. ಮೂರ್ತಿ ಸಕ್ರಿಯರಾಗಿದ್ದರು. ಚಿಕ್ಕಮಗಳೂರು ಜಿಲ್ಲೆಯ ತೋಟದೂರು ಗ್ರಾಮದ ಮಾವಿನಕುಡಿಯವರಾದ ಡಾ. ಎಚ್. ವಿ. ನರಸಿಂಹಮೂರ್ತಿ ಅವರು ಭಂಡಾರ್ಕರ್ಸ್ ಕಾಲೇಜಿನಲ್ಲಿ ಉಪನ್ಯಾಸ ವೃತ್ತಿ ಆರಂಭಿಸಿದ ಬಳಿಕ ಕುಂದಾಪುರದ ಕೋಟೇಶ್ವರದಲ್ಲಿ ನೆಲೆಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳ ಪೈಕಿ ಬೈಂದೂರು ತಾಲೂಕಿನಲ್ಲಿ ಅತಿ ಹೆಚ್ಚು ಕಬ್ಬಡ್ಡಿ ಪಂದ್ಯಾಟಗಳು ಪ್ರತಿ ವರ್ಷ ನಡೆಯುತ್ತಿದ್ದು, ಉತ್ತಮ ಕ್ರೀಡಾಪಟುಗಳು ಈ ಭಾಗದಲ್ಲಿದ್ದಾರೆ. ಕಬ್ಬಡ್ಡಿ ಅಸೋಸಿಯೆಷನ್ ಮೂಲಕ ಅಂತಹ ಪ್ರತಿಭೆಗಳನ್ನು ಬೆಳಕಿಗೆ ತರುವ ಪ್ರಯತ್ನವಾಗಬೇಕಿದೆ ಎಂದು ಉಡುಪಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಕಾರ್ಯದರ್ಶಿ ಆರೂರು ತಿಮ್ಮಪ್ಪ ಶೆಟ್ಟಿ ಹೇಳಿದರು. ಅವರು ಬೈಂದೂರು ಶಾರದಾ ಕನ್ವೆನ್ಷನ್ ಹಾಲ್ನಲ್ಲಿ ಬೈಂದೂರು ತಾಲೂಕು ಅಮೇಚ್ಯೂರ್ ಕಬಡ್ಡ ಅಸೋಸಿಯೇಷನ್ ರಚನೆಗೆ ಪೂರ್ವಭಾವಿಯಾಗಿ ಆಯೋಜಿಸಲಾಗಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿ ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಬೆಳಕಿಗೆ ತರುವಲ್ಲಿ ಅಮೇಚೂರ್ ಕಬ್ಬಡ್ಡಿ ಅಸೋಸಿಯೇಷನ್ ಕಾಯೋನ್ಮುಖವಾಗಿದ್ದು, ಜಿಲ್ಲೆಯ ಪ್ರತಿ ತಾಲೂಕಿನಲ್ಲಿಯೂ ವ್ಯವಸ್ಥಿತವಾಗಿ ಕಬಡ್ಡಿ ಕ್ರೀಡೆ ಆಯೋಜನೆ ಹಾಗೂ ಹೊಸ ಪ್ರತಿಭೆಗಳಿಗೆ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಅವಕಾಶ ದೊರೆಯುವಂತೆ ಮಾಡುವುದೇ ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ ಎಂದರು. ಈ ಸಂದರ್ಭ ಬೈಂದೂರು ತಾಲೂಕು ಅಮೇಚ್ಯೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷರನ್ನಾಗಿ ಪ್ರಥ್ವಿ ಕ್ರೀಡಾ ಸಂಘದ ಜಯಾನಂದ ಹೋಬಳಿದಾರ್ ಅವರನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊಟೇಶ್ವರದ ಶ್ರೀ ಕಾಳವಾರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾದ್ಯಾಪಕ ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಸುಬ್ರಹ್ಮಣ್ಯ ಎ. ಅವರು ಮಂಡಿಸಿದ ಅಧ್ಯಯನ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್ಡಿ ಪದವಿ ನೀಡಿದೆ. ಸುಬ್ರಹ್ಮಣ್ಯ ಅವರು ‘ಖಜಾನೆ ಹೊಣೆಗಾರಿಕೆ ಮತ್ತು ಆಯವ್ಯಯ ನಿರ್ವಹಣೆ ಮಸೂದೆ – 2003 ನಂತರದಲ್ಲಿ ಕೇಂದ್ರ ಸರಕಾರದ ಖಜಾನೆ ನೀತಿ ಪರಿಪಾಲನೆ: ಒಂದು ಸಮಗ್ರ ಅಧ್ಯಯನ’ ಎಂಬ ವಿಷಯದ ಕುರಿತು ಮಂಗಳೂರು ವಿಶ್ವವಿದ್ಯಾನಿಲಯದ ಪ್ರೊ ಅರಬಿ ಅವರ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ್ದರು. ಸುಬ್ರಹ್ಮಣ್ಯ ಅವರು ಬೈಂದೂರು ಪಡುವರಿಯ ಅಪ್ಪಯ್ಯನ ಮನೆ ದಿ. ವೆಂಕಟರಮಣ ಹಾಗೂ ಲಕ್ಷ್ಮೀ ಅವರ ಪುತ್ರ.
