Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಡೆಂಗ್ಯೂ ಜ್ವರ ವೈರಸ್‌ನಿಂದ ಉಂಟಾಗುವ ಖಾಯಿಲೆಯಾಗಿದ್ದು, ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಸೊಳ್ಳೆಗಳ ನಿಯಂತ್ರಣ ಕ್ರಮದಿಂದದಿಂದ ಡೆಂಗಿ ಜ್ವರ, ಮಲೇರಿಯಾ, ಫೈಲೇರಿಯಾ, ಚಿಕನ್‌ಗುನ್ಯ, ಮೆದುಳು ಜ್ವರ ಮತ್ತು ಕಾಲರಾ ರೋಗವನ್ನು ನಿಯಂತ್ರಿಸಬಹುದಾಗಿದೆ ಎಂದು ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ ಹೇಳಿದರು. ಡೆಂಗ್ಯೂ ಜ್ವರ ನಿಯಂತ್ರಣದ ಬಗ್ಗೆ ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಂದ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರದೊಂದಿಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಆರೋಗ್ಯ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ಮನೆಯ ಪರಿಸರವನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು. ನಮ್ಮ ಮನೆಯ ಸುತ್ತಮುತ್ತ ಎಲ್ಲಿಯೂ ನೀರು ನಿಲ್ಲದಂತೆ ಡೆಂಗ್ಯೂ ಜ್ವರ ನಿಯಂತ್ರಣ ಎಲ್ಲರ ಜವಾಬ್ದಾರಿಯಾಗಿದ್ದು ಸೊಳ್ಳೆಗಳು ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಡ್ರಮ್, ಬ್ಯಾರೆಲ್, ಮಣ್ಣಿನ ಮಡಿಕೆ, ಉಪಯೋಗಿಸದ ಒರಳುಕಲ್ಲು ಮುಂತಾದ ಕಡೆ ಶೇಖರವಾಗುವ ನೀರಿನಲ್ಲಿ ಉತ್ಪತ್ತಿಯಾಗುವುದರಿಂದ ಈ ರೀತಿ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದ ಅವರು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಶತಮಾನೋತ್ಸವ ಸಮಿತಿ ವತಿಯಿಂದ ಶಾಲೆಗೆ ಶಾಲಾ ವಾಹನ ಹಸ್ತಾಂತರಿಸಲಾಗಿದ್ದು, ಈ ಮೂಲಕ ಎರಡು ಸ್ವಂತ ಶಾಲಾ ವಾಹನವನ್ನು ಹೊಂದಿರುವ ಬೈಂದೂರು ವಲಯದ ಪ್ರಥಪ್ರಥಮ ಶಾಲೆ ಎಂಬ ಹೆಗ್ಗಳಿಕೆಗೆ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾತ್ರವಾಗಿದೆ. ಶಾಲೆಯ ವಠಾರದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ನಾರಾಯಣ ಟಿ.ಪೂಜಾರಿ ಅವರು ಶತಮಾನೋತ್ಸವ ಸಮಿತಿ ವತಿಯಿಂದ ಶಾಲಾ ವಾಹನವನ್ನು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣ ಕೆ.ಗುಜ್ಜಾಡಿ ಮತ್ತು ಶಾಲೆಯ ಮುಖ್ಯ ಶಿಕ್ಷಕ ಆನಂದ ಜಿ. ಅವರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು. ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಯಮುನಾ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ ಎಲ್.ಮೇಸ್ತ, ಶಿವಮೊಗ್ಗದ ಉದ್ಯಮಿ ವಿನೋದ ಭಂಡಾರಿ, ಪ್ರಕಾಶ ಪೂಜಾರಿ, ಶತಮಾನೋತ್ಸವ ಸಮಿತಿ ಕಾರ್ಯದರ್ಶಿ ರಾಜೀವ ಶ್ರೀಯಾನ್, ಗ್ರಾಪಂ ಉಪಾಧ್ಯಕ್ಷ ರಾಜು ಪೂಜಾರಿ, ಗ್ರಾಪಂ ಸದಸ್ಯರಾದ ಹರೀಶ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ‘ಬಾಲವನದ ಜಾದೂಗಾರ’ ಎಂಬ ಕಿರುಚಿತ್ರದ ಚಿತ್ರೀಕರಣಕ್ಕೆ ಕರ್ನಾಟಕದ ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಚಾಲನೆ ನೀಡಿದರು. ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಂತ ಥೀಂ ಪಾರ್ಕ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು “ಕಾರಂತರು ವಿವಿಧ ಕ್ಷೇತ್ರಗಳಲ್ಲಿ ಪರಿಣಾಮಕಾರಿಯಾಗಿ ಸಾಧನೆ ಮಾಡಿದವರು. ಮಕ್ಕಳಿಗಾಗಿಯೂ ಹಲವು ಕೃತಿಗಳನ್ನು ರಚಿಸಿದ್ದಾರೆ. ಅವರ ಚಿಂತನೆಯ ಮೂಲಕ ಮಕ್ಕಳಲ್ಲಿ ಉತ್ತಮ ಪ್ರಭಾವ ಉಂಟಾಗುವುದಾದರೆ ಅದು ಹೆಮ್ಮೆಯ ವಿಷಯ. “ಬಾಲವನದ ಜಾದೂಗಾರ” ಚಿತ್ರದಲ್ಲಿ ತುಂಟ ವಿದ್ಯಾರ್ಥಿಯೊಬ್ಬ ಕಾರಂತರ ಪ್ರಭಾವದಿಂದಲೇ ಉತ್ತಮ ವಿದ್ಯಾರ್ಥಿಯಾಗಿ ಪರಿವರ್ತನೆ ಹೊಂದುವ ಕತೆ ಇದೆ. ಈ ಚಿತ್ರ ಕನ್ನಡದಲ್ಲಿ ನಿರ್ಮಾಣಗೊಂಡು ಬೇರೆ ಭಾಷೆಗಳಿಗೂ ಭಾಷಾಂತರಗೊಂಡು ಯಶಸ್ಸು ಗಳಿಸುವಷ್ಟು ಚೆನ್ನಾಗಿ ಬರಲಿ ಎಂದು ಆಶಿಸುತ್ತೇವೆ. ಸರಕಾರದಿಂದ ಸಿಗಬಹುದಾದ ನೆರವಿನ ಬಗ್ಗೆ ನಾನು ಪ್ರಯತ್ನಿಸುತ್ತೇನೆ” ಎಂದು ಶುಭ ಹಾರೈಸಿದರು. ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ ಸಿ. ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲವ್ ಜಿಹಾದ್ ತಡೆಗೆ ಪ್ರತಿ ಗ್ರಾಮ ಮಟ್ಟದಲ್ಲಿ ಬಜರಂಗದಳ, ವಿಶ್ವಹಿಂದೂ ಪರಿಷತ್ ಹಾಗೂ ದುರ್ಗಾವಾಹಿನಿ ಮೂಲಕ ಟಾಸ್ಕ್‌ಪೋರ್ಸ್ ರಚಿಸಿ, ಲವ್ ಜಿಹಾದ್ ವಿರುದ್ದ ಹೋರಾಟ ನಡೆಸಲಾಗುತ್ತದೆ. ಹಿಂದೂ ಹೆಣ್ಣು ಮಕ್ಕಳು ಎಚ್ಚರಿಕೆಯಿಂದ ಇರುವಂತೆ ಎಂದು ಬಜರಂಗದಳ ಪ್ರಾಂತ್ಯ ಸಂಚಾಲಕ ಸುನೀಲ್ ಕೆ. ಆರ್. ಎಚ್ಚರಿಸಿದರು. ಇತ್ತಿಚಿಗೆ ಆತ್ಮಹತ್ಯೆ ಮಾಡಿಕೊಂಡ ಉಪ್ಪಿನಕುದ್ರು ಶಿಲ್ವಾ ದೇವಾಡಿಗ ಸಾವಿಗೆ ನ್ಯಾಯ ಹಾಗೂ ಜನಜಾಗೃತಿಗಾಗಿ ಮಂಗಳವಾರ ಕುಂದಾಪುರ ಶಾಸ್ತ್ರಿ ವೃತ್ತದ ಬಳಿ ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ಕುಂದಾಪುರ ಪ್ರಖಂಡದಿಂದ ಹಮ್ಮಿಕೊಂಡ ಪ್ರತಿಭಟನಾ ಮೆರವಣಿಗೆ ಸಭೆಯಲ್ಲಿ ಮಾತನಾಡಿ, ಇಸ್ಲಾಂ ಧರ್ಮಕ್ಕೆ ಮತಾಂತರ ಪ್ರಚೋದನೆಯೇ ಶಿಲ್ವಾ ಆತ್ಮಹತ್ಯೆಗೆ ಕಾರಣವಾಗಿದ್ದು, ಇದೊಂದು ವ್ಯವಸ್ಥಿತ ಕೊಲೆ ಎಂದು ಅಭಿಪ್ರಾಯಪಟ್ಟರು. ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಮಾತನಾಡಿ, ಕರಾವಳಿ ಪ್ರದೇಶದ ಸಾಕಷ್ಟು ಕುಟುಂಬಗಳು ಲವ್ ಜಿಹಾದ್ ಕಾರಣದಿಂದ ಕಣ್ಣೀರು ಸುರಿಸುತ್ತಿವೆ. ಈವತ್ತು ಅದಕ್ಕೆ ಕುಂದಾಪುರವೂ ಸೇರಿಕೊಂಡಿದೆ. ಇನ್‌ಗ್ರಾಮ್, ಫೇಸ್‌ಬುಕ್ ವಾಟ್ಸ್‌ಅಪ್‌ನಿಂದ ಆದಷ್ಟು ಅಂತರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುಜಿಡಿ ಕಾಮಗಾರಿಗಾಗಿ ರಸ್ತೆ ತುಂಡಿರಿಸಿ ಬಳಿಕ ಹಾಕಿರುವ ತೇಪ ಸಮರ್ಪಕವಾಗಿಲ್ಲ. ಚೇಂಬರ್ ಕೂಡಾ ಕೆಲವು ಕಡೆ ರಸ್ತೆಯಿಂದ ಮೇಲೆ, ಕೆಳಗೆ ಅಳವಡಿಸಲಾಗಿದೆ. ಈ ರಸ್ತೆಯಲ್ಲಿಯೇ ಸಂಚರಿಸುವುದೇ ಸಮಸ್ಯೆಯಾಗಿದೆ ಯುಜಿಡಿ ಕಾಮಗಾರಿ ಬಗ್ಗೆ ಅಧಿಕಾರಿಗಳ ಜೊತೆ ಸಭೆ, ಸಾಮಾನ್ಯ ಸಭೆಯಲ್ಲಿ ನಡೆದ ಚರ್ಚೆಗಷ್ಟೇ ಸೀಮಿತವಾಗಿದೆ ಎಂದು ಆಡಳಿತ ಪಕ್ಷದ ಸದಸ್ಯ ಸಂತೋಷ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು. ಕುಂದಾಪುರ ಪುರಸಭೆ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಯಲ್ಲಿ ಅವರು ಮಾತನಾಡಿ ಕಾಲಮಿತಿಯೊಳಗೆ ಯುಜಿಡಿ ಕಾಮಗಾರಿ ಸರಿಪಡಿಸುವಂತೆ ಒತ್ತಾಯಿಸಿದರು. ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಉತ್ತರಿಸಿ, ಸಂಚಾರಕ್ಕೆ ಎಲ್ಲೆಲ್ಲಿ ರಸ್ತೆ ಯೋಗ್ಯವಾಗಿಲ್ಲವೋ ಅಲ್ಲಲ್ಲಿ ತುರ್ತು ದುರಸ್ತಿಮಾಡಿ, ಬಿಲ್ ಗುತ್ತಿಗೆದಾರರಿಗೆ ನೀಡುವ ವ್ಯವಸ್ಥೆ ಮಾಡಲಾಗುತ್ತದೆ ಎಂದರು. ಯುಜಿಡಿ ಕಾಮಗಾರಿ ನಡೆಸಿ, ಸಂಚಾರ ಸಮಸ್ಯೆ ಮಾಡಿದ ಗುತ್ತಿಗೆದಾರರ ವಿರುದ್ದ ದೂರು ದಾಖಲಿಸುವಂತೆ ಸಂತೋಷ್ ಶೆಟ್ಟಿ ಒತ್ತಾಯಿಸಿದ್ದು, ಅದಕ್ಕೆ ಆಡಳಿತ ಹಾಗೂ ವಿರೋಧ ಸದಸ್ಯರು ದನಿ ಗೂಡಿಸಿದರು. ವಿರೋಧ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಮಿತ್ರ ಪತ್ರಿಕೆಯ ಸಂಪಾದಕ ಟಿ.ಪಿ. ಮಂಜುನಾಥ ಅವರು ಸಂಜೆಪ್ರಭ ಮಾಧ್ಯಮ ಸೇವಾರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜೂನ್.4ರಂದು ಸಂಜೆಪ್ರಭ ಪತ್ರಿಕೆಯ ದಶಮ ಸಂಭ್ರಮದ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಟಿ. ಪಿ. ಮಂಜುನಾಥ ಅವರಿಗೆ ಸಂಜೆಪ್ರಭ ಮಾಧ್ಯಮ ಸೇವಾರತ್ನ ಪ್ರಶಸ್ತಿ ಪ್ರದಾನಿಸಲಾಗುತ್ತಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಉಪ್ಪಿನಕುದ್ರುವಿನ ಯುವತಿ ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿಂತೆ ಪ್ರಮುಖ ಆರೋಪಿ ಅಝೀಝ್ (32) ಹಾಗೂ ಆತನಿಗೆ ಸಹಕರಿಸಿದ ರಹೀಮ್ (34) ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ‌. ಮೃತ ಯುವತಿ ಶಿಲ್ಪಾ, ಅಜೀಜ್ ಎಂಬಾತನ ಜವಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು. ಅಜೀಜ್​​ ಕೆಲಸದ ಆಕೆ ವೇಳೆ ಪುಸಲಾಯಿಸಿ ಸ್ನೇಹ ಬೆಳೆಸಿಕೊಂಡಿದ್ದಲ್ಲದೇ, ಲೈಂಗಿಕವಾಗಿ ಬಳಸಿಕೊಂಡು ವಿಡಿಯೋ ಮಾಡಿಕೊಂಡಿದ್ದ. ಬಳಿಕ ಮತಾಂತರವಾಗಿ ಮದುವೆ ಮಾಡುಕೊಳ್ಳುವಂತೆ ಶಿಲ್ಪಾಗೆ ಅಝೀಜ್ & ಆತನ ಹೆಂಡತಿ ಒತ್ತಾಯ ಮಾಡಿದ್ದು ಇದರಿಂದಲೇ ಶಿಲ್ಪಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು ಎನ್ನಲಾಗಿದೆ. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಫಲಿಸದೆ ಶಿಲ್ಪಾ ಸಾವನ್ನಪ್ಪಿದ್ದಳು. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಅಝೀಜ್‌ ಮತ್ತು ಆತನ ಪತ್ನಿ ಸಲ್ಮಾ ವಿರುದ್ದ ಆತ್ಮಹತ್ಯೆ ಪ್ರಚೋದನೆ ಪ್ರಕರಣ ದಾಖಲಾಗಿತ್ತು. ಅದರಂತೆ ಕೆಲ ದಿನಗಳಿಂದ ತಲೆಮರೆಸಿಕೊಂಡಿದ್ದ ಅಝೀಜ್‌ನನ್ನು ಸೋಮವಾರ ಬೆಳಿಗ್ಗೆ ಹೆಮ್ಮಾಡಿಯಲ್ಲಿ ವಶಕ್ಕೆ ಪಡೆದುಕೊಂಡು ಬಳಿಕ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ವಿದ್ಯಾ ಸಂಸ್ಥೆಗಳು ಕೋಡಿ ಕುಂದಾಪುರ ಇವರು ಪ್ರಾರಂಭಿಸಿದ ” ಸ್ವಚ್ಛ ಕಡಲ ತೀರ – ಹಸಿರು ಕೋಡಿ” ಅಭಿಯಾನ 2022 5ನೇ ಹಂತ ಕೋಡಿಯಲ್ಲಿ ದಿನಾಂಕ 29-05-2022 ರವಿವಾರ ನಡೆಯಿತು. ವಿದ್ಯಾರ್ಥಿಗಳು, ಶಿಕ್ಷಕರು ,ಆಡಳಿತ ಮಂಡಳಿಯ ಸದಸ್ಯರು, ರಕ್ಷಕ- ಶಿಕ್ಷಕ ಸಂಘದ ಸದಸ್ಯರು, ಪೋಷಕರು , ಪ್ರಾಕ್ತನ ವಿದ್ಯಾರ್ಥಿಗಳು, ಊರಿನ ಪ್ರಮುಖರು ಹಾಗೂ ಮಹಾಜನರು ಮತ್ತು ನಿಸರ್ಗ ಪ್ರಿಯರು ಈ ಅಭಿಯಾನದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಕೋಡಿಯ ಕಡಲ ತೀರವನ್ನು ಸ್ವಚ್ಛಗೊಳಿಸಿದರು. ಈ ಕಾರ್ಯಕ್ಕೆ ಸಹಕಾರ ನೀಡುತ್ತಿರುವ ಕುಂದಾಪುರ ಪುರಸಭೆಯ ಚೀಫ್ ಆಫೀಸರ್ ಹಾಗೂ ಪದಾಧಿಕಾರಿಗಳಿಗೆ ಮತ್ತು ಎಲ್ಲಾ ಸಿಬ್ಬಂದಿವರ್ಗದವರಿಗೆ ಬ್ಯಾರೀಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಅಧ್ಯಕ್ಷರಾದ ಹಾಜಿ ಕೆ ಎಂ ಅಬ್ದುಲ್ ರೆಹಮಾನ್ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ. ನಾವಿರುವ ಪ್ರದೇಶದ ಸ್ವಚ್ಛತೆಯನ್ನು ಕಾಪಾಡುವ ಜವಾಬ್ದಾರಿಯನ್ನು ತಿಳಿಸುವ ಕಾರ್ಯ ನಿರಂತರವಾಗಿ ಈ ಅಭಿಯಾನದ ಮೂಲಕ ನಡೆಯುತ್ತಿರುವದರ ಕುರಿತು ಹರ್ಷ ವ್ಯಕ್ತ ಪಡಿಸುತ್ತಾ ಇದರಲ್ಲಿ ಪಾಲ್ಗೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರ್ನಾಡ್ ಸದಾಶಿವರಾಯರು ಸ್ವಾತಂತ್ರ್ಯ ಹೋರಾಟಕ್ಕಾಗಿ ತನ್ನೆಲ್ಲಾ ಶ್ರೀಮಂತಿಕೆ ಧಾರೆಯೆರೆದರೆ, ಅವರ ಪತ್ನಿ ಸ್ವಾತಂತ್ರ್ಯ ಹೋರಾಟಗಾರರ ಹಸಿವು ನೀಗಿಸಲು ಧಾರೆ ಸೀರೆ ತ್ಯಾಗ ಮಾಡಿದರು. ಮಹಿಳೆಯರು ಮಾಂಗಲ್ಯವನ್ನೇ ತ್ಯಾಗ ಮಾಡಿದರು. ಇದು ಕರಾವಳಿಗರ ಕೊಡುಗೆಯಾಗಿದೆ. ಸ್ವಾಂತ್ರ್ಯಕ್ಕಾಗಿ ತ್ಯಾಗ, ಹೋರಾಟ ಮಾಡಿದ ಎಲ್ಲರ ನೆನಪಿಸಿಕೊಳ್ಳುವುದೇ ಅಮೃತ ಭಾರತಿಗೆ ಕನ್ನಡದ ಆರತಿ ಉದ್ದೇಶ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಾಲೂಕು ಆಡಳಿತ ಆಶ್ರಯದಲ್ಲಿ ಭಾರತ ಸ್ವಾತಂತ್ರ್ಯದ ಅಮೃತಮಹೋತ್ಸವ ಅಂಗವಾಗಿ ಬಸ್ರೂರು ಶ್ರೀ ಶಾರದಾ ಕಾಲೇಜ್ ಆವರಣದಲ್ಲಿ ಶನಿವಾರ ನಡೆದ ಅಮೃತ ಭಾರತಿಗೆ ಕನ್ನಡ ಆರತಿ ಉದ್ಘಾಟಿಸಿ ಮಾತನಾಡಿದರು. ಸ್ವಾತಂತ್ರಕ್ಕಾಗಿ ತಮ್ಮ ಇಡೀ ಜೀವನ ಮುಡಿಪಾಗಿಟ್ಟವರ, ದುಡಿದವರ, ಮಡಿದವರ ಹೋರಾಟ ನೆನಪಿಸಿಕೊಂಡು ನಾವು ಸ್ವಾತಂತ್ರ್ಯದ ನಂತರ ಎಷ್ಟು ಹೆಜ್ಜೆ ಮುಂದಿಟ್ಟಿದ್ದೇವೆ ಎನ್ನುವುದ ಯೋಚಿಸಿದರೆ ನಮ್ಮ ದೂರಗಾಮಿತ್ವ, ಕ್ರಮಿಸುವ ದೂರ ಬಹಳಷ್ಟಿದೆ ಎಂದು ಅನ್ನಿಸುತ್ತಿದೆ. ಸ್ವಾತಂತ್ರ್ಯ ನಂತರ ಅನೇಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.28: ಭಾರತ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಯುವ ಜನರಿಗೆ ಅರಿವು ಮೂಡಿಸುವ ಹಾಗೂ ಅವರಲ್ಲಿ ದೇಶಪ್ರೇಮ, ದೇಶಾಭಿಮಾನ ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಹೇಳಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇತಿಹಾಸ ಗೊತ್ತಿದ್ದಲ್ಲಿ ಮಾತ್ರ ಯಾರೊಬ್ಬರು ಇತಿಹಾಸವನ್ನು ಸೃಷ್ಠಿಸಲು ಸಾಧ್ಯ ನಮ್ಮ ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸದ ಬಗ್ಗೆ ಪ್ರತಿಯೊಬ್ಬರು ತಿಳಿಯುವುದರೊಂದಿಗೆ ದೇಶ ಪ್ರೇಮವನ್ನು ಹಾಗೂ ದೇಶಾಭಿಮಾನವನ್ನು ಬೆಳೆಸಿಕೊಂಡು ನಾವು ಪಡೆದಿರುವ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಹೋಗಬೇಕಿದೆ ಎಂದರು. ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡಲು ಅನೇಕ ಮಹಾನ್ ನಾಯಕರುಗಳಾದ ಜಾನ್ಸಿ ರಾಣಿ ಲಕ್ಷಿö್ಮÃ ಬಾಯಿ, ತಾಂತ್ಯಾ ಟೋಪಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಬಾಲಾ ಗಂಗಾಧರ ತಿಲಕ, ಸುಭಾಸ್…

Read More