Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಉದಯ ಕುಮಾರ್ ಎಂ.ಪಿ ಅವರು ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ನೀಡಲಾಗುವ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೈಂದೂರು ಮಯ್ಯಾಡಿಯವರಾದ ಉದಯ ಕುಮಾರ್ ಅವರು ನ್ಯೂ ಇಂಗ್ಲಿಷ್ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಗಣಿತ ಶಾಸ್ತ್ರ ಉಪನ್ಯಾಸಕರಾಗಿ ಸೇವೆ ಆರಂಭಿಸಿ ನಂತರ ಆರ್ ಎನ್ ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೇವೆ ಸಲ್ಲಿಸಿದ್ದರು. 2009ರಲ್ಲಿ ಸರಕಾರಿ ಸೇವೆಗೆ ಸೇರಿ ಸರಕಾರಿ ಪದವಿ ಪೂರ್ವ ಕಾಲೇಜು ಮುಂಡುಗೋಡುವಿನಲ್ಲಿ ಸೇವೆ ಸಲ್ಲಿಸಿ, ಪ್ರಸ್ತುತ ಬೈಂದೂರು ಸ.ಪ.ಪೂ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬೈಂದೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಎಮ್.ಪಿ.ನಾಗಪ್ಪ ಶೇರುಗಾರ್ ಹಾಗೂ ಕಮಲ ಇವರ ಪುತ್ರರಾದ ಉದಯ ಕುಮಾರ್ ಅವರು ಪ್ರಾಥಮಿಕ ಶಿಕ್ಷಣ ವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿ.ಪ್ರಾ ಶಾಲೆ ಮಯ್ಯಾಡಿಯಲ್ಲಿ ಪೂರೈಸಿ, ಫ್ರೌಡ ಶಿಕ್ಷಣವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಹಾಗೂ ಸರಕಾರಿ…

Read More

ಉದ್ಯಮಿ ಯು. ಬಿ ಶೆಟ್ಟಿ ಅವರೊಂದಿಗೆ ಕುಂದಾಪ್ರ ಡಾಟ್ ಕಾಂ ಮಾತುಕತೆ ► ಸಮಾಜದ ಕೆಲಸ ಮಾಡಲು ಜನಪ್ರತಿನಿಧಿಯೇ ಆಗಬೇಕೆಂದಿಲ್ಲ ► ಶ್ರದ್ಧೆ, ನಿಷ್ಠೆಯಿಂದ ಯಾವುದೇ ಕೆಲಸ ಮಾಡಿದರೂ ಗೆಲುವಿದೆ. ► ಹಸಿದವರಿಗೆ ಸಹಾಯ ಮಾಡಿದರೆ ಸುಖ ನಿದ್ರೆ ► ನಾವೆಲ್ಲೇ ಇದ್ದರೂ ಹುಟ್ಟೂರೇ ಸ್ವರ್ಗ ► ಶಿಸ್ತು ಹಾಗೂ ಸಮಯಪ್ರಜ್ಞೆ ಬದುಕಿನಲ್ಲಿ ಎತ್ತರಕ್ಕೇರಲು ಸಹಕಾರಿ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೂರಾರು ದೈವ ದೇವರುಗಳಿಗೆ ಮೂರ್ತರೂಪ ನೀಡಿದ ಹಿರಿಯ ಶಿಲ್ಪಿ ಉಪ್ಪುಂದದ ರತ್ನಾಕರ ಎಸ್. ಗುಡಿಗಾರ್ ಅವರು ಅವರಿಗೆ 2021ನೇ ಸಾಲಿನ ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಉಪ್ಪುಂದ ನ್ಯೂ ಜನತಾ ಕಾಲೋನಿ ನಿವಾಸಿಯಾಗಿರುವ ರತ್ನಾಕರ ಗುಡಿಗಾರ್ ಅವರು ಕಳೆದ 60 ವರ್ಷಗಳಿಂದ ವಂಶಪಾರಂಪರ್ಯವಾಗಿ ಬಂದ ಮರದಿಂದ ದೇವರ ಮೂರ್ತಿ ಕೆತ್ತನೆ ಕಾಯಕವನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ತಮ್ಮ 84 ವರ್ಷದ ವಯಸ್ಸಿನಲ್ಲಿಯೂ ಸೇವಾ ಕಾರ್ಯವನ್ನು ಮುಂದುವರಿಸಿರುವ ಗುಡಿಗಾರರು, ವರ್ಷಕ್ಕೆ 150ಕ್ಕೂ ಹೆಚ್ಚು ದೇವರ ಮೂರ್ತಿ ಕೆತ್ತನೆ ಮಾಡುತ್ತಿದ್ದಾರೆ. ದೆಹಲಿ, ಭೂಪಾಲ್, ಚೆನೈ ಹಾಗೂ ರಾಜ್ಯದ ವಿವಿಧೆಡೆ ಇವರ ಕೆತ್ತನೆಯ ಮೂರ್ತಿಗಳು ಪೂಜಿಸಲ್ಪಡುತ್ತಿದೆ. ಉಡುಪಿ ಜಿಲ್ಲೆಯ ನೂರಾರು ದೈವಸ್ಥಾನಗಳ ದೇವರ ಮೂರ್ತಿಯನ್ನು ಕೆತ್ತನೆ ಮಾಡಿ ಪ್ರಸಿದ್ಧಿ ಪಡೆದಿದ್ದಾರೆ. ಒಂದು ಅಡಿಯಿಂದ 28 ಅಡಿಯ ತನಕದ ಮೂರ್ತಿಯನ್ನು ಅವರು ಕೆತ್ತನೆ ಮಾಡಿದ್ದಾರೆ. ರತ್ನಾಕರ ಗುಡಿಗಾರ ಸೇವೆಯನ್ನು ಗುರುತಿಸಿ ಸಾಂಪ್ರದಾಯಿಕ ಶಿಲ್ಪ ವಿಭಾಗದಲ್ಲಿ ಗೌವರ ಪ್ರಶಸ್ತಿಗೆ ಆಯ್ಕೆಮಾಡಲಾಗಿದ್ದು, ಪ್ರಶಸ್ತಿಯು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಖ್ಯಾತ ಉದ್ಯಮಿ, ಸಂಘಟಕ, ಮೊಳಹಳ್ಳಿ ಬಾಲಕೃಷ್ಣ ಶೆಟ್ಟಿ (70 ವ) ತೀವ್ರ ಹೃದಯಾಘಾತದಿಂದ ಪುಣೆಯಲ್ಲಿ ಅಸುನೀಗಿದ್ದಾರೆ. ಕಳೆದ 2 ದಿನಗಳ ಹಿಂದೆ ಹೃದಯ ಸಂಬಂಧಿ ನೋವು ಕಾಣಿಸಿಕೊಂಡಿದ್ದು, ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಿಮಾಲಯ ಬೆವರಿಚನ್ ಗೋವಾದ ಆಡಳಿತ ನಿರ್ದೇಶಕರಾಗಿದ್ದ ಅವರು ಬಿ.ಕೆ ಬಿನ್ಜಿಲ್ ಹಾಗೂ ಅಕ್ಷಯ್ ಆರ್ಗ್ಯಾನಿಕ್ ಪ್ರೈ. ಲಿ ಸಂಸ್ಥೆಯನ್ನು ಆರಂಭಿಸಿ ನೂರಾರು ಜನರಿಗೆ ಉದ್ಯೋಗದಾತರಾಗಿದ್ದರು. ಪುಣೆಯನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿಸಿಕೊಂಡು ಅಲ್ಲಿಯೇ ನೆಲೆಸಿದ್ದರು. ಪುಣೆ ಬಂಟರ ಸಂಘದ ಅಧ್ಯಕ್ಷರಾಗಿ, ಪುಣೆಯ ಬೋಟ್ ಕ್ಲಬ್ಬಿನ ಅಧ್ಯಕ್ಷರಾಗಿ, ಪುಣೆ ನಗರದ ಕಾಂಗ್ರೆಸ್ ಕಾರ್ಯರ್ಕಾರಿ ಸಮಿತಿ ಸದಸ್ಯರಾಗಿ ಸಾಮಾಜಿಕ ರಂಗದಲ್ಲಿ ಗುರುತಿಸಿಕೊಂಡಿದ್ದರು. ಅವರಿಗೆ ಇತ್ತಿಚಿಗೆ ಮೊಳಹಳ್ಳಿಯಲ್ಲಿ ಹುಟ್ಟೂರ ಸನ್ಮಾನ ಜರುಗಿತ್ತು. ಮೃತರು ಪತ್ನಿ ಶಶಿ, ಪುತ್ರರಾದ ಅಕ್ಷಯ, ಆದರ್ಶ ಹಾಗೂ ಕುಟುಂಬಿಕರನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಯಡ್ತರೆ ಸಸಿಹಿತ್ಲು ಮನೆ ನಿವಾಸಿ, ಪ್ರಥಮ ದರ್ಜೆ ಗುತ್ತಿಗೆದಾರ ಮುತ್ತಯ್ಯ ಪೂಜಾರಿ (70) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅಪಾರ ದೈವಭಕ್ತರಾಗಿದ್ದ ಮುತ್ತಯ್ಯ ಪೂಜಾರಿ ಅವರು, ಯಡ್ತರೆ ಬಿಲ್ಲವ ಸಂಘದ ಸ್ಥಾಪಕಾಧ್ಯಕ್ಷರಾಗಿ, ಯಡ್ತರೆ ತೆಂಗು ಬಾಳೆ ಸೊಸೈಟಿಯ ಮಾಜಿ ಅಧ್ಯಕ್ಷರಾಗಿ ಸೇವಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಕಾಂಗ್ರೆಸ್ ಮುಖಂಡ ಸುಬ್ರಹ್ಮಣ್ಯ ಪೂಜಾರಿ ಸೇರಿದಂತೆ ನಾಲ್ವರು ಗಂಡು, ಮೂವರು ಹೆಣ್ಣು ಮಕ್ಕಳು ಹಾಗೂ ಬಂಧುಗಳನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯಡಮೊಗ್ಗೆಯ ಬಿಜೆಪಿ ಕಾರ್ಯಕರ್ತ ಉದಯ ಗಾಣಿಗ ಕೊಲೆ ಪ್ರಕರಣದ ಆರೋಪಿಗಳಲ್ಲೋರ್ವರಾದ ಬಿಜೆಪಿ ಮುಖಂಡ ಬಾಲಚಂದ್ರ ಭಟ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಬಾಲಚಂದ್ರ ಭಟ್ ಘಟನೆ ನಡೆದು ನಾಲ್ಕು ದಿನಗಳ ಬಳಿಕ ಪೊಲೀಸರಿಂದ ಬಂಧನಕ್ಕೊಳಗಾಗಿದ್ದರು. ಪೊಲೀಸರು ಚಾರ್ಜ್ ಶೀಟ್ ಹಾಕಿದ್ದರು. ಉಚ್ಛ ನ್ಯಾಯಾಲಯದಲ್ಲಿಯೂ ಅವರಿಗೆ ಜಾಮೀನು ದೊರಕಿರಲಿಲ್ಲ. ಹದಿನಾಲ್ಕು ತಿಂಗಳ ಬಳಿಕ ಸುಪ್ರೀಂ ಜಾಮೀನು ನೀಡಿದೆ. ಪ್ರಕರಣದ ಪ್ರಮುಖ ಆರೋಪಿ ಪ್ರಾಣೇಶ್ ಯಡಿಯಾಳ್ ಹಾಗೂ ಇತರರಿಗೆ ಇನ್ನೂ ಜೈಲಿನಲ್ಲಿದ್ದಾರೆ. ಆರೋಪಿ ಬಾಲಚಂದ್ರ ಭಟ್ ಪರವಾಗಿ ಸುಪ್ರೀಂ ಕೋರ್ಟಿನಲ್ಲಿ ವಕೀಲ ದೇವದತ್ತ್ ಕಾಮತ್ ವಾದಿಸಿದ್ದರು. ಇದನ್ನೂ ಓದಿ:► ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣದ ತನಿಕೆ ಸಿಬಿಐಗೆ ವಹಿಸಲಿ: ಡಿ.ಕೆ ಶಿವಕುಮಾರ್ – https://kundapraa.com/?p=49788 .► ಯಡಮೊಗೆ ಕೊಲೆ ಪ್ರಕರಣ: ಒಟ್ಟು 6 ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇನ್ನೂ ಕೆಲವರು ಭಾಗಿಯಾಗಿರುವ ಶಂಕೆ – https://kundapraa.com/?p=49133 .► ಯಡಮೊಗೆಯ ಉದಯ ಗಾಣಿಗರ ಕುಟುಂಬಕ್ಕೆ ಬೈಂದೂರು ಮಂಡಲ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಕುಂದಾಪುರ ಪುರಸಭಾ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಸೋಮವಾರ ಜರುಗಿದ ಸಾಮಾನ್ಯ ಸಭೆಯಲ್ಲಿ ಕುಂದಾಪುರ ಒಳಚರಂಡಿಯ ಅವ್ಯವಸ್ಥೆ, ರಾಷ್ಟ್ರೀಯ ಹೆದ್ದಾರಿ ನಿರ್ಲಕ್ಷ್ಯ, ಬೀದಿ ನಾಯಿ ಕಾಟ ತಪ್ಪಿಸಲು ಸಂತಾನ ಹರಣ ಚಿಕಿತ್ಸೆ ಹಾಗೂ ಪುರಸಭೆ ಸುವರ್ಣ ಮಹೋತ್ಸವ ಆಚರಿಸುವ ಬಗ್ಗೆ ಪ್ರಮುಖ ಚರ್ಚೆಯಾದವು. ಪುರಸಭೆಯ ಹಿರಿಯ ಸದಸ್ಯ ಮೋಹನದಾಸ ಶೆಣೈ ಮಾತನಾಡಿ ಸಮಗ್ರ ಒಳಚರಂಡಿ ಯೋಜನೆ, ಸಮಗ್ರ ಕುಡಿಯುವ ನೀರು ಪೂರೈಕೆ ಯೋಜನೆಗಾಗಿ ಅಗೆಯಲಾದ ರಸ್ತೆಗಳು ಪ್ರಸ್ತುತ ಯಾವ ಸ್ಥಿತಿಗೆ ತಲುಪಿವೆ ಎಂಬುದನ್ನು ಖಾತ್ರಿ ಪಡಿಸಲು ಪುರಸಭೆ ಅಧಿಕಾರಿಗಳು ಕಛೇರಿ ಬಿಟ್ಟು ಒಮ್ಮೆ ನಗರ ಸುತ್ತಾಡಿ ಬನ್ನಿ. ಜನರು ಅನುಭವಿಸುತ್ತಿರುವ ಗೋಳು ಏನೆಂದು ಆಗ ಅರ್ಥವಾಗುತ್ತದೆ. ಪ್ರತಿಯೊಂದು ರಸ್ತೆಗಳು ಹದಗೆಟ್ಟಿವೆ. ವಿಪರೀತ ಮಳೆಯ ಕಾರಣಕ್ಕೆ ಹದಗೆಟ್ಟಿವೆ ಎಂಬುದರಲ್ಲಿ ಅರ್ಥವಿಲ್ಲ. ಮಳೆಗೆ ಮೊದಲೆ ಕೆಟ್ಟು ಹೋಗಿತ್ತು. ಈಗ ಮತ್ತಷ್ಟು ಹದಗೆಟ್ಟು ಹೋಗಿದೆ ಎಂದು ಹೇಳಿದರು. ಪುರಸಭೆ ಅಧ್ಯಕ್ಷೆ ವೀಣಾ ಬಿ. ಮೆಂಡನ್ ಪ್ರತಿಕ್ರಿಯಿಸಿ ಈಗಾಗಲೇ ವಾರ್ಡ್ ಸದಸ್ಯರ ಕೋರಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ರತ್ತೂಬಾಯಿ ಜನತಾ ಪ್ರೌಢಶಾಲೆ ಬೈಂದೂರು ಆಶ್ರಯದಲ್ಲಿ ನಡೆದ ಬೈಂದೂರು ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಕೊಲ್ಲೂರು ಬಾಲಕಿಯರ ಕಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ಬಿದ್ಕಲ್ಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು , ಬೋಧಕ, ಬೋಧಕೇತರ ವೃಂದದವರು ಮತ್ತು ಹಳೆ ವಿದ್ಯಾರ್ಥಿಗಳು ಮತ್ತು ಊರವರು ಅಭಿನಂದನೆ ಸಲ್ಲಿಸಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕರಾದ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು. ರತ್ತೂಬಾಯಿ ಜನತಾ ಪ್ರೌಢಶಾಲೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಶ್ರೀ ವಿವಿವಿ ಮಂಡಳಿ ಉಪಾಧ್ಯಕ್ಷ ಎಸ್. ರಾಜು ಪೂಜಾರಿ ಅವರು ವಿಜೇತರಿಗೆ ಬಹುಮಾನ ವಿತರಿಸಿದರು. ಈ ವೇಳೆ ಉಡುಪಿ ಅರಣ್ಯ ಸಂಚಾರಿದಳದ ಎಸಿಎಫ್ ಶ್ರೀಧರ ಪಿ., ಉದ್ಯಮಿಗಳಾದ ವೆಂಟರಮಣ ಬಿಜೂರು, ಕೃಷ್ಣಯ್ಯ ಮದ್ದೋಡಿ, ಕ್ಷೇತ್ರ ಶಿಕ್ಷಣ ಪರಿವೀಕ್ಷಣಾ ಅಧಿಕಾರಿ ಚಂದ್ರಶೇಖರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಗೊಂಬೆ ಸೂತ್ರಧಾರ ಹಾಗೂ ಅರ್ಥಧರಿ, ಹಿರಿಯ ಗೊಂಬೆಯಾಟ ಕಲಾವಿದ ಹೆಮ್ಮಾಡಿ ಹೇಮಾಪುರ ನಿವಾಸಿ ನಾರಾಯಣ ಬಿಲ್ಲವ (63) ಅನಾರೋಗ್ಯದಿಂದ ಸೋಮವಾರ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ನಾರಾಯಣ ಬಿಲ್ಲವ ಅವರು ಕಳೆದ 43 ವರ್ಷದಿಂದ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಖಾಯಂ ಕಲಾವಿದರಾಗಿದ್ದು, ಹತ್ತು ಹಲವು ವಿದೇಶದಲ್ಲಿ ನಡೆದ ಗೊಂಬೆಯಾಟ ಪ್ರದರ್ಶನಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಅರ್ಥ ಹೇಳುತ್ತಿದ್ದರು. ಕನ್ನಡ, ಕೊಂಕಣಿ, ಇಂಗ್ಲಿಷ್, ಹಿಂದಿ ಭಾಷೆಯಲ್ಲಿ ಹಿಡಿತ ಹೊಂದಿದ್ದ ಅವರು ಗೊಂಬೆಯಾಟದ ಸೂತ್ರಧಾರಿ ಹಾಗೂ ಅರ್ಥದಾರಿಯಾಗಿ ಜನ ಮಾನಸದಲ್ಲಿ ನೆಲೆಯೂರಿದ್ದರು. ಉಪ್ಪಿನಕುದ್ರು ಗೊಂಬೆಯಾಟದ ಸಂಸ್ಥಾಪಕ ಕೊಗ್ಗ ದೇವಣ್ಣ ಕಾಮತ್ ಅವರ ಒಡನಾಡಿಯಾಗಿದ್ದು, ಅವರೊಟ್ಟಿಗೂ ತಿರುಗಾಟ ಮಾಡಿದ್ದ ಅವರು, ಮುಂದೆ ಕೊಗ್ಗ ಕಾಮತ್ ಅವರ ಪುತ್ರ ಭಾಸ್ಕರ ಕೊಗ್ಗ ಕಾಮತ್ ಜೊತೆ ಕಲಾವಿದರಾಗಿ ಮುಂದುವರಿದಿದ್ದರು. ಓದಿದ್ದು ಸ್ವಲ್ಪವಾದರೂ ಇಂಗ್ಲಿಷ್, ಹಿಂದಿ ಭಾಷೆಯ ಅವರ ಹಿಡಿತ ನಿಜಕ್ಕೂ ಅಬ್ದುತ ವಾಗಿತ್ತು. ಕೊಂಕಣಿ ಭಾಷೆ ನಿರ್ಗಳವಾಗಿ ಹರಿದು ಬರುತ್ತಿತ್ತು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರತಿಭೆಗಳಿಗೆ ಸರಿಯಾದ ಸಮಯದಲ್ಲಿ ಪ್ರೋತ್ಸಾಹ ದೊರೆತಾಗ ಅವರು ಇನ್ನಷ್ಟು ಬೆಳೆಯಲು ಸಾಧ್ಯವಾಗುತ್ತದೆ. ಶಿಕ್ಷಣ ಇಲಾಖೆಯ ಮೂಲಕ ನಡೆಯುವ ಸ್ವರ್ಧೆಯಲ್ಲಿ ಭಾಗವಹಿಸುವ ಎಷ್ಟೋ ವಿದ್ಯಾರ್ಥಿಗಳು ಮುಂದೆ ಉತ್ತಮ ಕ್ರೀಡಾಪಟುವಾಗಿ ಹೊರಹೊಮ್ಮಿದ ಉದಾಹರಣೆಗಳಿವೆ ಎಂದು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಹೇಳಿದರು. ಅವರು ಸೋಮವಾರ ರತ್ತೂಬಾಯಿ ಜನತಾ ಪ್ರೌಢಶಾಲೆಯ ಸಹಯೋಗದೊಂದಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಆಯೋಜಿಸಿದ ಪ್ರೌಢಶಾಲಾ ಬಾಲಕ – ಬಾಲಕಿಯರ ಕಬಡ್ಡಿ 2022 ಪಂದ್ಯಾಟ ಉದ್ಘಾಟಿಸಿ ಕ್ರಿಡಾಪಟುಗಳಿಗೆ ಶುಭಹಾರೈಸಿದರು. ಶ್ರೀ ವಿ.ವಿ.ವಿ. ಮಂಡಳಿ ಉಪಾಧ್ಯಕ್ಷರಾದ ಎಸ್. ರಾಜು ಪೂಜಾರಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಡಯಟ್ ಪ್ರಾಂಶುಪಾಲರಾದ ಗೋವಿಂದ ಮಡಿವಾಳ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಯಾನಂದ ಹೋಬಳಿದಾರ್, ಬೈಂದೂರು ಸೈಂಟ್ ಥಾಮಸ್ ಶಾಲೆಯ ಪ್ರಾಂಶುಪಾಲರಾದ ಜಾನ್ ನೆಲಿವಿಲ್ಲಾ, ಶ್ರೀ ವಿ.ವಿ.ವಿ. ಮಂಡಳಿ…

Read More