ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಭಿನವ ಕಲಾತಂಡದ ಕರ್ಕಾಟಿ ಅಮಾಸಿ ಕಲಾತ್ಮಕ ಕಿರುಚಿತ್ರ ಬಿಡುಗಡೆ ಹಾಗೂ ಅಭಿನವ ಪ್ರಶ್ನಾವಳಿ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ವಿಶ್ವ ಕುಂದಾಪುರ ಕನ್ನಡ ದಿನಾಚರಣೆಯನ್ನು ಇಲ್ಲಿನ ಶ್ರೀ ಕಾರ್ತಿಕೇಯ ಕೃಪಾ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆ. ರಾಮಚಂದ್ರ ಉಡುಪ, ಕಲಾತಂಡದಿಂದ ಪ್ರದರ್ಶಿಸಲ್ಪಟ್ಟ ರತ್ನ ಶಾಮಿಯಾನ ನಾಟಕ ಅದೊಂದು ಯಶಸ್ವೀ ನಾಟಕ, ಕರೋಣ ಕಾರಣದಿಂದ ಪ್ರದರ್ಶನದಿಂದ ವಂಚಿತರಾದರೂ ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಹಲವಾರು ಹಾಸ್ಯ ಚಿತ್ರಗಳು, ಕಿರುಚಿತ್ರ ಹಾಗೂ ತಮ್ಮ ತಂಡದ ಕಲಾವಿದರು ಮಾತ್ರವಲ್ಲದೆ ಬೇರೆ ತಂಡಗಳ ಕಲಾವಿದರನ್ನು ಕೂಡಿಕೊಂಡು ಕಲಾತ್ಮಕ ಕಿರುಚಿತ್ರಗಳನ್ನು ಮಾಡಿ ಜನ ಮನ್ನಣೆಗೆ ಪಾತ್ರವಾಗಿದೆ ಎಂದು ಶ್ಲಾಘಿಸಿದರು. ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ ನ ಪೂರ್ವಧ್ಯಕ್ಷರಾದ ಎ. ಎಸ್. ಏನ್. ಹೆಬ್ಬಾರ್ ಕಿರುಚಿತ್ರ ಬಿಡುಗಡೆಗೊಳಿಸಿ ಮಾತನಾಡಿ, ಇದೊಂದು ಅಭೂತ ಪೂರ್ವ ಕಿರುಚಿತ್ರ ಇದನ್ನು ನೋಡಿದಷ್ಟು ಇನ್ನೊಮ್ಮೆ ನೋಡಬೇಕಿನಿಸುವಷ್ಟು ಸಂದೇಶದ ಹಂದರವಿದೆ ಎಂದು ಹರ್ಷ ವ್ಯಕ್ತಪಡಿಸಿ, ಅಭಿನವ ಕಲಾ ತಂಡದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಗ್ಗರ್ಸೆ ನಿವಾಸಿ ನಿವೃತ್ತ ಪ್ರಾಂಶುಪಾಲ ಬಾಳ್ಕುದ್ರು ರಘುರಾಮ ಶೆಟ್ಟಿ (88) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಶಿಕ್ಷಣ ಕ್ಷೇತ್ರಕ್ಕೆ ಕಾಲಿರಿಸಿದ ಇವರು ಅನೇಕ ಸರ್ಕಾರಿ ವಿದ್ಯಾ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ಕೊನೆಯಲ್ಲಿ ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ನಂತರ ಇಲ್ಲಿಯೇ ನಿವೃತ್ತಿಯಾಗಿದ್ದರು. 1986-87ನೇ ಸಾಲಿನಲ್ಲಿ ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಇವರು ಬೈಂದೂರು ತಾಲೂಕು ರಚನಾ ಹೋರಾಟ ಸಮಿತಿ ಸದಸ್ಯರಾಗಿದ್ದರು. ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಹಾಗೂ ಸಂಘ-ಸಂಸ್ಥೆಗಳಲ್ಲಿ ಸಕ್ರೀಯವಾಗಿದ್ದ ಇವರು ಜೀವಿತದ ಕೊನೆಯ ತನಕ ಆಸಕ್ತ ಮಕ್ಕಳಿಗೆ ಪಾಠ, ಉಪನ್ಯಾಸ ನೀಡುತ್ತಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮಾಜ ಕಲ್ಯಾಣ ಇಲಾಖೆ ಅನಾವಶ್ಯಕ ಖರ್ಚಿಗೆ ಕಡಿವಾಣ ಹಾಕಿ ಮೂಲಭೂತ ಸೌಲಭ್ಯ ಹೆಚ್ಚಿಸಲು ಆದ್ಯತೆ ನೀಡಲು ಉದ್ದೇಶಿಸಲಾಗಿದೆ. ಪರಿಶಿಷ್ಟ ಜಾತಿಯ ಕುಟುಂಬದ ಮನೆ ನಿರ್ಮಾಣಕ್ಕೆ ಇದ್ದ ಅನುದಾನವನ್ನು 5 ಲಕ್ಷಕ್ಕೆ ಹೆಚ್ಚಿಸುವ ನಿರ್ಧಾರಕ್ಕೆ ಬರಲಾಗಿದೆ. ಈ ಹಿಂದೆ ಇದ್ದ 1.70 ಲಕ್ಷ ಅನುದಾನದಲ್ಲಿ ಉತ್ತಮ ಮನೆ ನಿರ್ಮಾಣ ಸಾಧ್ಯವಿಲ್ಲ ಎನ್ನುವ ಕಾರಣದಿಂದ ಈ ನಿರ್ಧಾರ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಮಂಗಳವಾರ ಕುಂದಾಪುರ ಬಿಜೆಪಿ ಕಚೇರಿಯಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ, ರಾಜ್ಯದಲ್ಲಿ 25 ಲಕ್ಷ ಪರಿಶಿಷ್ಟ ಕುಟುಂಬಗಳಿದ್ದು, ಸರ್ವೇ ನಡೆಸಿ ಮನೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಒಂದು ವರ್ಷ ಅನಗತ್ಯ ವೆಚ್ಚಕ್ಕೆ ಕಡಿವಾಣ, ಅನಿವಾರ್ಯ ಅಲ್ಲದ ಯೋಜನೆ ತಡೆ ಹಿಡಿಯಲಾಗುವುದು. ಪರಿಶಿಷ್ಟ ಸಮಾಜ ಮುಖ್ಯವಾಹಿನಿಗೆ ತರಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು. ಸಾಮಾನ್ಯನಾಗಿದ್ದ ನನಗೆ ಸಮಾಜ ಕಲ್ಯಾಣ ಇಲಾಖೆಯ ದೊಡ್ಡ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಶೇ.100 ಫಲಿತಾಂಶ ದಾಖಲಿಸುವ ಮೂಲಕ ಉತ್ತಮ ಸಾಧನೆ ಮಾಡಿದೆ. ಪರೀಕ್ಷೆಗೆ ಹಾಜರಾದ ಒಟ್ಟು 48 ವಿದ್ಯಾರ್ಥಿಗಳ ಪೈಕಿ 16 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 25 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಭಾರ್ಗವ ಮಧ್ಯಸ್ಥ 617 ಅಂಕ ಗಳಿಸುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಮಾನ್ಯತಾ ವಿ.ಶೇಟ್ (608), ವೈಷ್ಣವಿ ಕೋಟೆಗಾರ್ (607), ಪ್ರಿಯಾಂಕ ಕೆ.ಬೈಂದೂರು (606), ಕೀರ್ತಿ ಭಟ್ (604), ಅಮೀಕ್ಷಾ ಡಿ.ನಾಯ್ಕ್ (603) ಮತ್ತು ಬಿ.ಸಾಹೀಲ್ (602) ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಲ್ಯಾಕ್ ಫಂಗಸ್ಗೆ ಔಷಧಿಯನ್ನು ಸಂಶೋಧಿಸಿದ ಗಂಗೊಳ್ಳಿ ಮೂಲದ ಬಿ.ಶ್ರೀಕಾಂತ ಪೈ ಮುಂಬೈ ಅವರನ್ನು ಕುಂದಾಪುರ ತಾಲೂಕಿನ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಪರವಾಗಿ ಗೌರವಿಸಿ ಅಭಿನಂದಿಸಲಾಯಿತು. ದೇವಸ್ಥಾನಕ್ಕೆ ಭೇಟಿ ನೀಡಿದ ಬಿ.ಶ್ರೀಕಾಂತ ಪೈ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಡಾ.ಕಾಶೀನಾಥ ಪೈ ಹಾಗೂ ಕೆ.ಗಣೇಶ ಪ್ರಭು ಅವರಿಗೆ ಶ್ರೀದೇವರ ಪ್ರಸಾದ ನೀಡಿ ಸನ್ಮಾನಿಸಿ ಗೌರವಿಸಿದರು. ಬಿ. ಗೋವಿಂದ್ರಾಯ ಪೈ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾದ ಎಸ್.ದಿನಕರ ಶೆಣೈ, ಎಸ್.ಗೋಪಾಲಕೃಷ್ಣ ಪೈ, ಎಸ್. ಗೋಪಾಲಕೃಷ್ಣ ಪೈ, ಎಂ.ವಿಶ್ವನಾಥ ಪೈ, ಎಸ್.ಪ್ರಭಾಕರ ಪೈ, ಎಂ.ಅನಂತ ಪೈ, ಬಿ.ಗಣೇಶ ಪೈ, ಯು.ಕಮಲಾಕ್ಷ ಪೈ, ಅರುಣ್ ಶೆಣೈ, ಪತ್ರಕರ್ತ ಬಿ. ರಾಘವೇಂದ್ರ ಪೈ, ಬಿ. ರಾಜೇಶ ಪೈ, ದೇವಸ್ಥಾನದ ಅರ್ಚಕರು ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ ರಾಜ್ಯದ ಕ್ರೀಡಾ ಪೋಷಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿರುತ್ತದೆ. ಕಳೆದ ಮೂರು ವರ್ಷಗಳಿಂದ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಕ್ಷೇತ್ರದಲ್ಲಿ ಸಾಧನೆಗೈದ ಕ್ರೀಡಾ ಪೋಷಕರು ಆಗಸ್ಟ್ 25 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ; 0820-2521324, 94808-86467 ನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2020ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ 2020ನೇ ಸಾಲಿನ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಕ್ರೀಡಾ ಪಟುಗಳು ಅರ್ಜಿ ನಮೂನೆಯನ್ನು ಆಗಸ್ಟ್ 25 ರೊಳಗೆ ಸಲ್ಲಿಸುವಂತೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸುಮಾರು ಹದಿನೈದು ವರ್ಷಗಳಿಂದ ಮುಚ್ಚಿರುವ ಹಾಗೂ ನೈಪಥ್ಯಕ್ಕೆ ಸರಿಯುತ್ತಿರುವ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯನ್ನು ಉಳಿಸಿಕೊಳ್ಳುವ ಹೋರಾಟ ಸಾಕಷ್ಟು ಬಾರಿ ನಡೆದಿದ್ದು ಇದೀಗ ಹೊಸ ಆಡಳಿತದ ಮಂಡಳಿ ಈ ನಿಟ್ಟಿನಲ್ಲಿ ಒಂದಷ್ಟು ಪೂರಕ ಚಟುವಟಿಕೆಯಲ್ಲಿ ತೊಡಗಿದೆ. ಹೀಗಾಗಿ ಸಕ್ಕರೆ ಕಾರ್ಖಾನೆಯ ಅಳಿವು-ಉಳಿವಿನ ಸಾಧ್ಯತೆಗಳ ಕುರಿತು ಚರ್ಚೆ ನಡೆಸುವ ಸಲುವಾಗಿ ಬ್ರಹ್ಮಾವರ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಾರ್ಖಾನೆ ಆಡಳಿತ ಮಂಡಳಿಯೊಂದಿಗೆ ಮಾಧ್ಯಮ ಸಂವಾದ ಕಾರ್ಯಕ್ರಮ ಬ್ರಹ್ಮಾವರದ ಮದರ್ ಪ್ಯಾಲೇಸ್ ಸಭಾಂಗಣದಲ್ಲಿ ಜರಗಿತು. ಕಾರ್ಖಾನೆ ಆಡಳಿತ ಮಂಡಳಿಯ ಅಧ್ಯಕ್ಷ ಬಕಾಡಿ ಸುಪ್ರಸಾದ್ ಶೆಟ್ಟಿ ಮಾತನಾಡಿ, ರಾಜ್ಯದಲ್ಲಿ 152 ಸಂಸ್ಥೆಗಳು ಎಥೆನಾಲ್ ಘಟಕ ಸ್ಥಾಪನೆಗೆ ಹೆಸರು ನೊಂದಾಯಿಸಿಕೊಂಡಿದ್ದು ಇದರಲ್ಲಿ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯೂ ಒಂದು. ಎಥೆನಾಲ್ ಘಟಕ ಸ್ಥಾಪನೆಗೆ ಸರಕಾರದಿಂದ ದೊಡ್ಡ ಮಟ್ಟದ ಸಹಕಾರ ದೊರೆಯುತ್ತದೆ ಹಾಗೂ ಅರ್ಥಿಕ ಸಂಸ್ಥೆಗಳು ನೆರವು ನೀಡಬೇಕೆಂಬ ಸೂಚನೆ ಇದೆ. ಘಟಕಕ್ಕೆ ಅಗತ್ಯವಿರುವ ಜಾಗ ಹಾಗೂ ಮೂಲಸೌಕರ್ಯಗಳು ನಮ್ಮಲ್ಲಿ ಇದೆ. ಹೀಗಾಗಿ ಸಕ್ಕರೆ ಉತ್ಪಾದನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಶ್ರೀ ಇಂದುಧರ ದೇವಸ್ಥಾನದ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸಂದೇಶ ಜಿ.ಟಿ. ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶಶಿಧರ ಜಿ.ಟಿ., ಕಾರ್ಯದರ್ಶಿಯಾಗಿ ಸುದೀಪ ಜಿ.ಎನ್., ಜತೆ ಕಾರ್ಯದರ್ಶಿಯಾಗಿ ಸಂದೇಶ ಎಸ್.ಎಸ್., ಖಜಾಂಚಿಯಾಗಿ ರಾಘವೇಂದ್ರ ಜಿ.ಟಿ., ಕಾರ್ಯಕಾರಿ ಸಮಿತಿ ಸದಸ್ಯರಾಗಿ ಚಂದ್ರ ಜಿ.ಬಿ., ಶ್ರೀನಿವಾಸ ಬಿ., ಮಿಥುನ್, ಚೆನ್ನ ಜಿ.ಟಿ., ಜಗದೀಶ ಜಿ.ಟಿ., ಚೇತನ್, ಮಹೇಶ್, ಸುಂದರ ಬಿ., ಶಿವ ಜಿ.ಟಿ., ಅಣ್ಣಯ್ಯ ಎಂ.ಜಿ., ನರಸಿಂಹ ಎಂ.ಜಿ. ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಟೀಮ್ ಕುಂದಾಪುರಿಯನ್ಸ್ ತಂಡದಿಂದ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಕುಂದಾಪ್ರ ಕನ್ನಡ ದಿನಾಚರಣೆಯಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕುಂದಾಪುರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪರಿಶ್ರಮದಿಂದಲೇ ಬದುಕು ಕಟ್ಟಿಕೊಂಡ ಉದ್ಯಮಿ ಗೋವಿಂದ ಬಾಬು ಪೂಜಾರಿ ಶೆಫ್ಟಾಕ್ ಪುಡ್ & ಹಾಸ್ಪಿಟಾಲಿಟಿ ಸಂಸ್ಥೆಯಿಂದ ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದಾರೆ. ಕರೋನಾ ಸಂದರ್ಭದಲ್ಲಿ ಸಾವಿರಾರು ಬಡ ಕುಟುಂಬಗಳಿಗೆಪುಡ್ ಕಿಟ್ ವಿತರಿಸಿದ್ದಾರೆ. ಹೂಟ್ಟೂರಿನಲ್ಲಿ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಸೂರಿಲ್ಲದವರಿಗೆ ಮನೆ ನಿರ್ಮಿಸಿಕೊಟ್ಟು ಬಡಕುಟುಂಬಗಳಿಗೆ ನೆರಳಾಗಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಕುಡಿಯುವ ನೀರಿನ ದಾಹ ತೀರಿಸಿದ್ದು ಸೇರಿದಂತೆ ಹತ್ತಾರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಶಸ್ತಿ ಪ್ರದಾನದ ವೇಳೆ ಗಣ್ಯರು, ಟೀಮ್ ಕುಂದಾಪುರಿಯನ್ಸ್ ತಂಡದ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪಡುಕೇರಿ ಒಂಭತ್ತು ದಂಡಿಗೆ ಶ್ರೀ ಚಿಕ್ಕಮ್ಮದೇವಿ ದೇವಸ್ಥಾನದ ಮಹಿಳಾ ಮಂಡಳಿಯ 2021-22ನೇ ನೂತನ ಅಧ್ಯಕ್ಷೆಯಾಗಿ ಸುನಂದ ಸುರೇಶ್ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷೆಯಾಗಿ ಸೆಲ್ವಿ, ಕಾರ್ಯದರ್ಶಿಯಾಗಿ ನೂತನ ನಾಗರಾಜ್, ಖಜಾಂಚಿಯಾಗಿ ಗಾಯತ್ರಿ ಪ್ರಶಾಂತ್ ಆಯ್ಕೆಯಾಗಿದ್ದಾರೆ. ಸದಸ್ಯರಾಗಿ ರಾಜೇಶ್ವರಿ, ಸುಜಾತ, ವಿಜಯ, ಶುಭಾ, ಸುನೀತ, ಮಂಜುಳಾ, ಅಶ್ವಿನಿ, ಜ್ಯೋತಿ, ವಸಂತಿ, ಕಾವೇರಿ, ಕನಕಮಾಲಿನಿ, ಜ್ಯೋತಿ ಕೆ., ನಾಗರತ್ನ, ರಮಾ ಬೋಳಾರ್, ನಿರ್ಮಲಾ, ಪೂರ್ಣಿಮಾ, ಗೀತಾ, ವೀಣಾ, ಶ್ಯಾಮಲ, ಪದ್ಮಕ್ಕ, ಲಲಿತಾ, ಗೀತಾ, ಪ್ರಮೀಳಾ, ಪ್ರಭಾವತಿ, ಮಾಲಿನಿ, ಸವಿತಾ, ಶಾಲಿನಿ, ಅನ್ನಪೂರ್ಣ, ಚಂದ್ರಕಲಾ, ವಿದ್ಯಾ, ಗೀತಾ, ರಾಜೀವಿ, ಪದ್ಮ, ಗೀತಾ, ಪ್ರೇಮಾ, ಜಮುನ, ಕಲ್ಯಾಣಿ, ಜ್ಯೋತಿ, ಪರಿಮಳ, ವಸಂತಿ, ಶಾಂತಿ, ವಿಶಾಲಾಕ್ಷಿ, ಶ್ಯಾಮಲ, ವಾರೀಜಾ, ಲಕ್ಷ್ಮೀ, ಗೌರಿ, ರಮಾ, ಚೇತನಾ, ಕಾಂಚನ, ಸುನೀತಾ, ಚಂದ್ರಕಲಾ, ಕಲ್ಯಾಣಿ, ಮಂಜುಳಾ ಆಯ್ಕೆಯಾಗಿದ್ದಾರೆ.
