ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: 2018ನೇ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಗರಿಷ್ಠ ವಿದ್ಯಾರ್ಥಿಗಳ ತೇರ್ಗಡೆಯೊಂದಿಗೆ ಅತ್ಯುನ್ನತ ಸಾಧನೆ ಮಾಡಿದೆ. ಇಂಜಿನಿಯರಿಂಗ್, ಬಿ.ಎಸ್ ಅಗ್ರಕಲ್ಚರ್, ವಟರ್ನರಿ ಸೈನ್ಸ್, ಬಿ.ಫಾರ್ಮ, ಡಿ.ಫಾರ್ಮ, ಬಿ.ಎಸ್ ಅಗ್ರಿಕಲ್ಚರ್ ಪ್ರಾಕ್ಟಿಕಲ್, ವೆಟರರ್ನರಿ ಸೈನ್ಸ್ ಪ್ರಾಕ್ಟಿಕಲ್ ವಿಷಯಗಳನ್ನು ಸೇರಿ 1ರಿಂದ 100 ಒಳಗಡೆ 99 ರ್ಯಾಂಕ್, 200 ಒಳಗಡೆ 224, 300 ಒಳಗಡೆ 312 ರ್ಯಾಂಕ್, 400 ಒಳಗಡೆ 412 ರ್ಯಾಂಕ್, 500 ಒಳಗಡೆ 498 ರ್ಯಾಂಕ್ ಗಳಿಸಿದೆ. ಇಂಜಿನಿಯರಿಂಗ್ ವಿಭಾಗದಲ್ಲಿ ಶಶಾಂಕ್ ಡಿ. 12ನೇ ರ್ಯಾಂಕ್, ಕಾರ್ತಿಕ್ ಎಸ್.ಮರಾಠೆ 59ನೇ ರ್ಯಾಂಕ್, ಬಿ.ಎಸ್ ಅಗ್ರಿಕಲ್ಚರ್(ಪ್ರಾಕ್ಟಿಕಲ್)- ಮೆಲಿಶಾ ರೊಡ್ರಿಗಸ್ 2ನೇ ರ್ಯಾಂಕ್, ಹಲ್ಲೆಪ್ಪ ಗೌಡ 10ನೇ ರ್ಯಾಂಕ್, ವಟರ್ನರಿ ಸೈನ್ಸ್(ಪ್ರಾಕ್ಟಿಕಲ್) ದರ್ಶನ್ 4ನೇ ರ್ಯಾಂಕ್, ಬಿಎಸ್ ಅಗ್ರಿಕಲ್ಚರ್ನಲ್ಲಿ ಸೌರವ್ ಪಪತಿ 7ನೇ ಹಾಗೂ ಪ್ರಸನ್ನ ಭಟ್ 10ನೇ ರ್ಯಾಂಕ್ ಪಡೆದಿದ್ದಾರೆ. ರ್ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಪುರಸಭೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಖಾರ್ವಿಕೇರಿ ವಾರ್ಡಿನಲ್ಲಿ ಸ್ವಚ್ಛತಾ ಕಾರ್ಯವನ್ನು ಆಯೋಜಿಸಲಾಯಿತು. ಪುರಸಭಾ ಅಧ್ಯಕ್ಷರಾದ ವಸಂತಿ ಮೋಹನ್ ಸಾರಂಗ, ಉಪಾಧ್ಯಕ್ಷರಾದ ರಾಜೇಶ್ ಕಾವೇರಿ, ಪುರಸಭಾ ಮುಖ್ಯಾಧಿಕಾರಿಯಾದ ಶ್ರೀಮತಿ ವಾಣಿ ವಿ. ಆಳ್ವ, ಹಿರಿಯ ಆರೋಗ್ಯ ನಿರೀಕ್ಷಕರಾದ ಶರತ್ ಎಸ್ ಖಾರ್ವಿ, ಕಿರಿಯ ಆರೋಗ್ಯ ನಿರೀಕ್ಷಕರಾದ ರಾಘವೇಂದ್ರ ಮಂಜುನಾಥ ನಾಯ್ಕ, ಪೌರಕಾರ್ಮಿಕರು ಮತ್ತು ಸದ್ರಿ ವಾರ್ಡಿನ ಸಾರ್ವಜನಿಕರು ಭಾಗವಹಿಸಿ ಉತ್ತಮ ಪ್ರತಿಕ್ರಿಯೆ ನೀಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಸರತಿಯಲ್ಲಿ ಮಳೆ ಹಾಗೂ ಬಿಸಿಲಿನ ತಾಪದ ಅನುಭವವಾಗದಂತೆ ಹೊರ ಪೌಳಿಯಲ್ಲಿ ಸರತಿ ಸಾಲಿನ ನೆರಳಿಗೆ ’ಗಾಲ್ವ ನೂಮ್ ಶೀಟ್’ನ ಚಪ್ಪರ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಭಕ್ತರ ಆಶ್ರಯಕ್ಕೆ ಸಮರ್ಪಣೆಯಾಗಿದೆ. ತಮಿಳುನಾಡಿನ ಭಕ್ತರೋರ್ವರ ಕಾಣಿಕೆಯ ಅನುದಾನದೊಡನೆ ಮಿಕ್ಕುಳಿದ ಹಣವನ್ನು ಕ್ರೋಢಿಕರಿಸಿ ರೂ. 11 ಲಕ್ಷ ವೆಚ್ಚದಲ್ಲಿ ’ಗಾಲ್ವ ಲೂಮ್ ಶೀಟ್’ನಿಂದ ಆಕರ್ಷಣೀಯ ನೆರಳಿನ ಚಪ್ಪರ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗಿದೆ. ದೇಶದ ನಾನಾ ಕಡೆಯಿಂದ ಆಗಮಿಸುವ ಸಹಸ್ರಾರು ಸಂಖ್ಯೆಯ ಭಕ್ತರಿಗೆ ದೇವಿ ದರ್ಶನಕ್ಕೆ ಗಂಟೆಗಟ್ಟಲೇ ಬಿಸಿಲು ಹಾಗೂ ಮಳೆಯಲ್ಲಿ ನಿಲ್ಲಬೇಕಾದ ಪ್ರಸಂಗವನ್ನು ಅರಿತ ಭಕ್ತರೋರ್ವರು ನೆರಳಿನ ಚಪ್ಪರದ ನಿರ್ಮಾಣಕ್ಕೆ ದೇಣಿಗೆ ನೀಡುವುದರ ಮೂಲಕ ಭಕ್ತರಿಗೆ ನೆರವಾಗಿರುತ್ತಾರೆ. ವರ್ಷಂಪ್ರತಿಯ ರಥೋತ್ಸವದ ಸಂದರ್ಭದಲ್ಲಿ ರಥ ಸಂಚಾರಕ್ಕೆ ನೆರಳಿನ ಚಪ್ಪರವನ್ನು ತೆಗೆಯುವ ಅನಿವಾರ್ಯತೆ ಇರುವುದರಿಂದ ಅದಕ್ಕೆ ಪೂರಕವಾದ ವ್ಯವಸ್ಥೆಯನ್ನು ’ಗಾಲ್ವ ಲೂಮ್ ಶೀಟ್’ ನಲ್ಲಿ ಅಳವಡಿಸಲಾಗಿದ್ದು ಯಾವುದೇ ಕ್ಷಣದಲ್ಲಿ ಅದನ್ನು ಬೇರ್ಪಡಿಸುವ ವ್ಯವಸ್ಥೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಪುರಸಭಾ ಸಭಾಂಗಣದಲ್ಲಿ ಪುರಸಭಾಧ್ಯಕ್ಷೆ ವಸಂತಿ ಮೋಹನ್ ಸಾರಂಗ ಅಧ್ಯಕ್ಷತೆಯಲ್ಲಿ ಮಾಸಿಕ ಸಾಮಾನ್ಯ ಸಭೆ ಜರುಗಿತು. ಈ ಸಭೆಯನ್ನು ಉದ್ದೇಶಿಸಿ ಪುರಸಭಾ ಸದಸ್ಯೆ ಗುಣರತ್ನಾ ಅವರು ಮಾತನಾಡಿ ಪುರಸಭೆಯ ವ್ಯಾಪ್ತಿಯಲ್ಲಿ ಮನೆ ಕಟ್ಟಲು ಅನುಮತಿ ನೀಡುವುದು ಪುರಸಭೆಯ ಆಡಳಿತದ ಜವಾಬ್ದಾರಿಯಾಗಿದ್ದು, ಆದರೆ ಇಲ್ಲಿ ಅವರ ಹೆಸರಲ್ಲಿ ಜಾಗವಿಲ್ಲದಿದ್ದರೂ, ಮನೆ ಕಟ್ಟಲು ಅನುಮತಿ ನೀಡಲಾಗಿದೆ. ಇಂತಹದ್ದೆ ಪ್ರಕರಣವೊಂದು ತಮ್ಮ ವಾರ್ಡ್ ವ್ಯಾಪ್ತಿಯಲ್ಲಿದ್ದು, ಆದರೆ ಅವರಿಗೆ ಕಾನೂನು ಪ್ರಕಾರ ಲೈಸೆನ್ಸ್ ನೀಡಲಾಗಿಲ್ಲ. ಆದರೆ ಈಗ ಮತ್ತೂಂದು ಪ್ರಕರಣದಲ್ಲಿ ನೀಡಲಾಗಿದೆ. ಅದರಲ್ಲಿ ಮುಖ್ಯಾಧಿಕಾರಿ ಸಹಿ ಕೂಡ ಇದೆ ಎಂದು ತಿಳಿಸಿದರು. ಈ ವಿಷಯದ ಕುರಿತಂತೆ ಮಾತನಾಡಿದ ಮುಖ್ಯಾಧಿಕಾರಿ ವಾಣಿ ಬಿ. ಆಳ್ವ ಅವರು, ಈ ಬಗ್ಗೆ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎನ್ನುವ ಭರವಸೆ ನೀಡಿದರು. ಸಭೆಯಲ್ಲಿ ಹಾಜರಿದ್ದ ಸಂಚಾರಿ ಪೊಲೀಸ್ ಎಸ್ಐ ಸುದರ್ಶನ್ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿ ಪಾರ್ಕಿಂಗ್ ಸ್ಥಳಾವಕಾಶ ಕಡಿಮೆಯಿದೆ ಎಂದಾಗ, ಮಧ್ಯಪ್ರವೇಶಿಸಿದ ಸದಸ್ಯರು, ಎಕ್ಸ್ಪ್ರೆಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಇಲ್ಲಿಯ ರೋಟರಿ ಸಭಾಂಗಣದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿ.ಎಸ್.ವಿ.ಎಸ್ ಅಸೋಷಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ವಿದ್ಯಾರ್ಥಿ ಜೀವನ ಎನ್ನುವುದು ಮನುಷ್ಯನ ವ್ಯಕ್ತಿತ್ವ ರೂಪಿಸುವಲ್ಲಿ ಬಹಳ ಪ್ರಾಮುಖ್ಯತೆಯನ್ನು ವಹಿಸುತ್ತದೆ. ಶಿಸ್ತು ಸಂಯಮ ಗೌರವ ಛಲ ಇತ್ಯಾದಿಗಳ ಮೂಲಕ ನಾವು ಗುರಿಯನ್ನು ತಲುಪಲು ನಿರಂತರ ಪರಿಶ್ರಮ ಪಟ್ಟರೆ ಗೆಲುವು ನಮ್ಮದಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಸರಸ್ವತಿ ವಿದ್ಯಾಲಯ ಕಾಲೇಜಿನ ಕಾರ್ಯದರ್ಶಿ ಎನ್ ಸದಾಶಿವ ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಉಪನ್ಯಾಸಕ ಭಾಸ್ಕರ್ ಶೆಟ್ಟಿ ವಿದ್ಯಾಲಯ ಬಳಗವನ್ನು ಪರಿಚಯಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಶಿಸ್ತು ಪಾಲನೆ ನೀತಿ ನಿಯಮಗಳ ಬಗೆಗೆ ಮಾಹಿತಿ ನೀಡಿದರು.ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ದೊರೆಯುವ ವಿವಿಧ ಸೌಲಭ್ಯಗಳ ಬಗೆಗೆ ಉಪನ್ಯಾಸಕರಾದ ಸುಜಯೀಂದ್ರ ಹಂದೆ. ಪ್ರವೀಣ್ ಕಾಮತ್, ನರೇಂದ್ರ ಎಸ್ ಗಂಗೊಳ್ಳಿ ಮತ್ತು ಕಛೇರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಕ್ಷೇತ್ರದ ಅಭಿವೃದ್ಧಿ ಕುರಿತು ಹಲವು ಚಿಂತನೆಗಳಿವೆ. ಜನರ ಸೇವಕನಾಗಿ ಕ್ಷೇತ್ರದ ಅಭಿವೃದ್ದಿಗೆ ಹಗಲಿರುಳು ಶ್ರಮಿಸುತ್ತೇನೆ ಮತ್ತು ಯಾವುದೇ ಸಮಸ್ಯೆಗಳಿದ್ದರೂ ಕೂಡ ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ನನ್ನನು ಸಂಪರ್ಕಿಸಬಹುದಾಗಿದೆ ಮತ್ತು ಕ್ಷೇತ್ರದ ಜನರ ಸೇವೆಗೆ ಸದಾ ಬದ್ದನಾಗಿದ್ದೇನೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರು ಹೇಳಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ನೂತನ ಶಾಸಕರ ಕಛೇರಿಯನ್ನು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಕ್ಷೇತ್ರ ರಸ್ತೆ, ಆಸ್ಪತ್ರೆ, ಕುಡಿಯುವ ನೀರಿನ ಸಮರ್ಪಕ ಪೂರೈಕೆ ಬಗ್ಗೆ ಯೋಜನೆ ರೂಪಿಸುತ್ತೇನೆ. ಮಳೆಗಾಲದಲ್ಲಿ ಐ.ಆರ್.ಬಿ ಕಾಮಗಾರಿಯಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಇದನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಜಿ.ಪಂ ಸದಸ್ಯರಾದ ಬಾಬು ಶೆಟ್ಟಿ, ಶಂಕರ ಪೂಜಾರಿ, ಸುರೇಶ್ ಬಟ್ವಾಡಿ,…
ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಕುಂದಾಪುರದ ಹೆಮ್ಮೆಯ ಸಂಸ್ಥೆಯಾದ ಸಾಧನ ಕಲಾ ಸಂಗಮ ರಿ, 2009 ಪ್ರಾರಂಭವಾಗಿ, ಈ ವರ್ಷ ತನ್ನ ದಶಮಾನ ವರ್ಷ ಆಚರಣೆಯ ಸಂಭ್ರಮದಲ್ಲಿದೆ. ಕರಾವಳಿಯಲ್ಲೆ ವಿಶಿಷ್ಟ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಸಂಸ್ಥೆ ಒಂದೇ ಸೂರಿನಡಿ ಭಾರತೀಯ ಲಲಿತ ಕಲೆಗಳ ವಿವಿಧ ಪ್ರಕಾರವನ್ನು ಆಸಕ್ತ ಸಾಧಕರಿಗೆ ಉಣಬಡಿಸುತ್ತಿದೆ. ಈ ದಶಮಾನ ವರ್ಷಾಚರಣೆಯನ್ನು ಅರ್ಥ ಪೂರ್ಣವಾಗಿಸಲು, ಈ ವರ್ಷ ಪೂರ್ತಿ ನಿರಂತರ ಲಲಿತಕಲೆಗಳಿಗೆ ಸಂಭಂದಪಟ್ಟ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಗಿದೆ. ನಮ್ಮ ಹೆಮ್ಮೆಯ ಕಾರ್ಯಕ್ರಮಗಳಾದ ಗಜವರ್ಣ, ಸಂಕಲನ ಹಾಗೂ ತ್ರಿಮಧುರದ ಜೊತೆಯಲ್ಲಿ ನಿಮ್ಮ ವೇದಿಕೆ – ನಮ್ಮ ಪ್ರತಿಭೆಗಳು, ನಿಮ್ಮಂಗಳದಲ್ಲಿ ಚಿತ್ರಕಲೆ, ನವಸಾಹಿತ್ಯ ವೇದಿಕೆ ಕಥಾ ಕಮ್ಮಟ, ಉಡುಪಿ ಜಿಲ್ಲಾ ಮಟ್ಟದ ಭಾವಗಾನ ಸ್ಪರ್ಧೆ, ಹೀಗೆ ಹಲವಾರು ಸರಣಿ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಗಿದೆ. ಹಲವಾರು ಕಲಾವಿದರ ಕೊಡುಗೆಯಿಂದ ಈ ಸಂಸ್ಥೆಯು ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಮುಖ್ಯವಾಗಿ ಹಿಂದುಸ್ಥಾನಿ ಸಂಗೀತದಲ್ಲಿ ವಿದ್ವಾನ್ ಗಜಾನನ ಹೆಬ್ಬಾರ್, ಹಿನ್ನೆಲೆ ಗಾಯನದಲ್ಲಿ ಶ್ರೀಮತಿ ಕೆ. ಎಸ್. ಸುರೇಖಾ, ಬೆಂಗಳೂರೂ,…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಹಟ್ಟಿಕುದ್ರುವಿನಲ್ಲಿ ಶ್ರೀ ಪಂಜುರ್ಲಿ ಚಿಕ್ಕಮ್ಮ ಹೈಗುಳಿ ಸಪರಿವಾರ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವದಲ್ಲಿ ಆಶೀರ್ವಚನ ನೀಡಿದ ಶ್ರೀ ಮಠ ಬಾಳೆಕುದ್ರು ಹಂಗಾರಕಟ್ಟೆ ಪರಮಪೂಜ್ಯ ಸ್ವಾಮೀಜಿಯವರಾದ ನೃಸಿಂಹಾಶ್ರಮ ಸ್ವಾಮಿಜಿಯವರು ಶ್ರದ್ಧಾ ಕೇಂದ್ರಗಳಾದ ಮಠ ಮಂದಿರ ದೇವಸ್ಥಾನಗಳ ಮೂಲಕ ಆದ್ಯಾತ್ಮಿಕ ಚಿಂತನೆಗಳನ್ನು ಹೆಚ್ಚಿಸಿಕೊಂಡಲ್ಲಿ ಜೀವನದಲ್ಲಿ ಉನ್ನತಿ ಹೊಂದಲು ಸಾಧ್ಯ. ಭಾರತದಲ್ಲಿ ಹಲವಾರು ದೇವರುಗಳು ಅವತಾರ ಎತ್ತಿದ್ದು ವಿದೇಶಿಯರು ಕೂಡ ಸಾಧನೆಗೋಸ್ಕರ ನಮ್ಮಲ್ಲಿ ಬರುತ್ತಿರುವುದು ಭಾರತದ ವೈಶಿಷ್ಠ್ಯ ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ಬಸ್ರೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿಗಳಾದ ಬಿ.ಅಪ್ಪಣ್ಣ ಹೆಗ್ಡೆ ವಹಿಸಿದ್ದರು. ವಿಶ್ವ ಹಿಂದೂ ಪರಿಷತ್ನ ದಕ್ಷಿಣ ಪ್ರಾಂತ ಮಠ ಮಂದಿರಗಳ ಸಂಪರ್ಕ ಪ್ರಮುಖರಾದ ಕೆ.ಪ್ರೇಮಾನಂದ ಶೆಟ್ಟಿ ಧಾರ್ಮಿಕ ಪ್ರವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಹಟ್ಟಿಯಂಗಡಿ ಸಿದ್ದಿವಿನಾಯಕ ದೇವಸ್ಥಾನದ ಬಾಲಚಂದ್ರ ಭಟ್, ಬಾರ್ಕೂರು ಏಕನಾಥೇಶ್ವರಿ ದೇವಸ್ಥಾನ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ನರಸಿಂಹ ದೇವಾಡಿಗ ,ಬಸ್ರೂರು ವ್ಯವಸಾಯ ಸೇವಾ ಸಂಘದ ಅಧ್ಯಕ್ಷರಾದ ಗೋಪಾಲ ಪೂಜಾರಿ, ಶ್ರೀ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಮುದ್ರತೀರ ನಿಯಂತ್ರಣ ವಲಯಗಳಿಗೆ ಸಂಬಂಧಿಸಿದ 2011ರ ಅಧಿಸೂಚನೆಯನ್ನು ತಿದ್ದುಪಡಿ ಮಾಡಲು ಉದ್ದೇಶಿಸಿ ಕೇಂದ್ರ ಸರ್ಕಾರ ಸಿದ್ಧಪಡಿಸಿದ ಕರಡಿನಲ್ಲಿ 3ನೆ ವಲಯದಲ್ಲಿ ಅಭಿವೃದ್ಧಿ ನಿಷೇಧಿತ ಪ್ರದೇಶವನ್ನು ಈಗಿನ 200 ಮೀಟರಿನಿಂದ 50 ಮೀಟರಿಗೆ ಇಳಿಸಲಾಗಿದೆ. ಆದರೆ ಅಲ್ಲಿನ ಜನಸಾಂದ್ರತೆ ಚದರ ಕಿಲೋಮೀಟರಿಗೆ 2161ಕ್ಕಿಂತ ಅಧಿಕ ಇದ್ದರಷ್ಟೆ ಈ ರಿಯಾಯಿತಿ ಅನ್ವಯವಾಗುತ್ತದೆ ಎಂಬ ಶರ್ತ ವಿಧಿಸಲಾಗಿದೆ. ಇದರಿಂದ ಜಿಲ್ಲೆಯ ಯಾವುದೇ ಗ್ರಾಮೀಣ ಪ್ರದೇಶಕ್ಕೆ ಲಾಭವಾಗುವುದಿಲ್ಲ ಮಾತ್ರವಲ್ಲ ಕಡಲತೀರ ಪ್ರವಾಸೋದ್ಯಮಕ್ಕೂ ಇದು ಅನುಕೂಲವೆನಿಸದು ಎನ್ನುತ್ತಾರೆ ಬೈಂದೂರಿನ ಬೆಸುಗೆ ಫೌಂಡೇಶನ್ ಅಧ್ಯಕ್ಷ ಕೆ. ವೆಂಕಟೇಶ ಕಿಣಿ. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯವು ಕಡಲತೀರಗಳನ್ನು ಹೊಂದಿರುವ ದೇಶದ ರಾಜ್ಯಗಳ ಮತ್ತು ಕೇಂದ್ರಾಧೀನ ಪ್ರದೇಶಗಳ ಮನವಿ ಹಾಗೂ ಡಾ. ಶೈಲೇಶ್ ನಾಯಕ್ ಸಮಿತಿಯ ವರದಿ ಅನುಸರಿಸಿ ಏಪ್ರಿಲ್ 18ರಂದು ಕರಡು ತಿದ್ದುಪಡಿ ಪ್ರಕಟಿಸಿದೆ. ಇದಕ್ಕೆ ಈ ತಿಂಗಳ 18ರ ಮುನ್ನ ಆಕ್ಷೇಪಣೆ, ಸಲಹೆ ಸಲ್ಲಿಸಬಹುದಾಗಿದೆ. ಕರಡು ಅಧಿಸೂಚನೆಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳಿಗೆ ತೀರಪ್ರದೇಶದ…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಡಾ.ಬಿ.ಆರ್.ಅಂಬೇಡ್ಕರ್ಯುವಕ ಮಂಡಲ ಮೇಲ್ಗಂಗೊಳ್ಳಿ ಇದರ 21ನೇ ವಾರ್ಷಿಕೋತ್ಸವ , ಅಮೃತಾ ಯುವತಿ ಮಂಡಲ ಮತ್ತು ಅರ್ಚನಾ ಮಹಿಳಾ ಮಂಡಲ ಮೇಲ್ಗಂಗೊಳ್ಳಿ ಇವರ 25ನೇ ವಾರ್ಷಿಕೋತ್ಸವ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ರವರ 127ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಗಂಗೊಳ್ಳಿಯ ಮೇಲ್ಗಂಗೊಳ್ಳಿ ಸರಕಾರಿ ಕಿರಿಯ ಪ್ರಾಥಮಿಕ (ಹವೇ) ಶಾಲಾ ವಠಾರದಲ್ಲಿ ಜರಗಿತು. ತ್ರಾಸಿ ಯುವಕ ಮಂಡಲದ ಅಧ್ಯಕ್ಷ ಮಿಥುನ್ ಎಂ.ಡಿ.ಬಿಜೂರು ಧ್ವಜಾರೋಹಣ ನೆರವೇರಿಸಿದರು. ಗಂಗೊಳ್ಳಿ ಪತ್ರಕರ್ತ ಗಣೇಶ ಪಿ. ಛದ್ಮವೇಷ ಸ್ಪರ್ಧೆಯನ್ನು ಉದ್ಘಾಟಿಸಿದರು. ಸಂಜೆ ಜರಗಿದ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ಗಂಗೊಳ್ಳಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಸೀತಾರಾಮ ಶೆಟ್ಟಿ ವಹಿಸಿದ್ದರು. ಕುಂದಾಪುರದ ವಕೀಲೆ ಅಂಜಲಿ ಹುಂಡೇಕರ್, ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸಂಸ್ಥೆಯ ಸಿಇಒ ಶಿವಾನಂದ ಪೂಜಾರಿ ಶುಭ ಹಾರೈಸಿದರು. ರಾಜೇಶ ತ್ರಾಸಿ ಬಹುಮಾನ ವಿತರಿಸಿದರು. ಇದೇ ಸಂದರ್ಭ ವ್ಯಂಗ್ಯ ಚಿತ್ರಕಾರ ಜಿ.ಭಾಸ್ಕರ ಕಲೈಕಾರ್, ಸಾಹಿತ್ಯ ರತ್ನ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಾ, ಉರಗ ಸಾಧಕ ಗುರುರಾಜ್ ಗಂಗೊಳ್ಳಿ ಇವರನ್ನು…
