Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಉಡುಪಿ: ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ 2026ರ ಆಗಸ್ಟ್ 1 ರಿಂದ 31ರ ವರೆಗೆ ಶೇ. ಶೇ.50ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದ್ದು, ಆನ್‌ಲೈನ್ www.kuvempubhashabharathi.karnataka.gov.in ಹಾಗೂ ಉಡುಪಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಛೇರಿಯಲ್ಲಿ ಕೂಡ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಮಾರಾಟ ಮಾಡಲಾಗುತ್ತಿದ್ದು, ಓದುಗರು ಪುಸ್ತಕಗಳನ್ನು ಖರೀದಿಸಿ, ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 0820-2986168 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿ ಯಂತ್ರೋಪಕರಣಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್ ಪ್ರತಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ರೂ. 100 ಚಾಪಾ ಕಾಗದದೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದಾಗಿದೆ. ಸದ್ರಿ ಸೌಲಭ್ಯದ ಪ್ರಯೋಜನ ಪಡೆಯಲು ರೈತರು ಕಡ್ಡಾಯವಾಗಿ ಫ್ರೂಟ್ಸ್ ಐ.ಡಿಯನ್ನು ಹೊಂದಿರಬೇಕು. ರೈತರು ಈಗಾಗಲೇ ಫ್ರೂಟ್ಸ್ ಐ.ಡಿಯನ್ನು ಹೊಂದಿದ್ದಲ್ಲಿ ಅಥವಾ ಹೊಂದರದೇ ಇದ್ದಲ್ಲಿ ತಮ್ಮ ಎಲ್ಲಾ ಆರ್.ಟಿ.ಸಿ ಗಳನ್ನು ಫ್ರೂಟ್ಸ್ ಐ.ಡಿಗೆ ಜೋಡಣೆ ಮಾಡಿಕೊಳ್ಳುವಂತೆ ಕುಂದಾಪುರ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಅ.01: ನಗರದ ಚರ್ಚ್ ರಸ್ತೆಯಲ್ಲಿ ವ್ಯಕ್ತಿಯೊರ್ವನನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಡೇರಿಕ್‌ ಕ್ರಾಸ್ಟಾ ಎಂಬಾತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಭಟ್ಕಳ ತಾಲೂಕು ಬೆಳಕೆ ಗ್ರಾಮದ ಹೇರಬುಡಿಕೆ ಎಂಬಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಕುಂದಾಪುರ ಚರ್ಚ್ ಎದುರಿಗೆ ಶುಕ್ರವಾರ ಬೆಳಗಿನ ಜಾವ 03:30ರ ಸುಮಾರಿಗೆ ಪಿಸ್ತೂಲ್ ಮೂಲಕ ಆರೋಪಿ ಗುಂಡು ಹೊಡೆದು ಪರಾರಿಯಾಗಿದ್ದು ತೀವ್ರ ರಕ್ತಸ್ರಾವದಿಂದ ಬಾರ್ಕೂರು ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಸ್ಥಳದಲ್ಲೇ ಮೃತಪಟ್ಟಿದ್ದರು. ಈ ವೇಳೆ ಐವನ್‌ ಅವರೊಂದಿಗಿದ್ದ ಎರಡನೇ ಪತ್ನಿ ಎನ್ನಲಾದ ಮಹಿಳೆ ಆರೋಪಿಯನ್ನು ಗುರುತು ಹಚ್ಚಿದ್ದರು. ಆರೋಪಿಯ ಪತ್ತೆಗೆ ಪೊಲೀಸರು ಮೂರು ವಿಶೇಷ ತಂಡವನ್ನು ರಚಿಸಿದ್ದರು. ಕುಂದಾಪುರ ಚರ್ಚ್‌ ರಸ್ತೆಯ ನಿವಾಸಿಯಾದ ಡೇರಿಕ್‌ ಕ್ರಾಸ್ತಾ, ಹಣಕಾಸು ಅಥವಾ ಬೇರೆ ಯಾವುದೇ ವ್ಯವಹಾರದಿಂದ ಈ ಕೊಲೆ ನಡೆದಿರಬಹುದೆಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಶನಿವಾರ ಆರೋಪಿಯನ್ನು ಬಂಧಿಸಲಾಗಿದ್ದು, ತನಿಕೆ ಪ್ರಗತಿಯಲ್ಲಿದೆ. ಇದನ್ನೂ ಓದಿ: ಕುಂದಾಪುರ: ನಡು ರಸ್ತೆಯಲ್ಲೇ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಹಲವಾರು ಕ್ರಿಮಿನಲ್ ಪ್ರಕರಣಗಳಿಗೆ, ಅಪಘಾತಗಳಿಗೆ ಮಾದಕ ದ್ರವ್ಯ ಕಾರಣವಾಗುತ್ತಿದೆ. ಯುವ ಜನತೆ ಇತ್ತೀಚಿಗೆ ಪಬ್, ಬಾರ್, ಗಾಂಜಾ, ಅಫೀಮು ಮೊದಲಾದ ದುಶ್ಚಟಗಳಿಗೆ ದಾಸರಾಗುತ್ತಿದ್ದು, ಅದರ ಮೂಲಕ ಅನೇಕ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸಿರುವುದು ಕಂಡು ಬಂದಿದೆ. ಹೀಗಾಗಿ ಯಾರು ಕೂಡ ತಪ್ಪು ದಾರಿ ಹಿಡಿದು ಇಡೀ ಮನೆಯನ್ನು ಸ್ಮಶಾನ ಮಾಡಬಾರದೆಂಬ ಉದ್ದೇಶದಿಂದ ಮಾದಕ ವಸ್ತು ಹಾಗೂ ಮಾದಕ ದ್ರವ್ಯಗಳ ಬಗ್ಗೆ ಮಾಹಿತಿಯನ್ನು ನೀಡಿ, ಜಾಗೃತಿ ಮೂಡಿಸುವ ಕೆಲಸವನ್ನು ಸರಕಾರ ಮತ್ತು ಇನ್ನಿತರ ಸಂಘ ಸಂಸ್ಥೆಗಳು ನಿರಂತರವಾಗಿ ಮಾಡುತ್ತಿದೆ ಎಂದು ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಪವನ್ ನಾಯಕ್ ಹೇಳಿದರು. ಅವರು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತಾಲೂಕು, ಜನಜಾಗೃತಿ ವೇದಿಕೆ ತ್ರಾಸಿ ವಲಯ ಮತ್ತು ಎಸ್. ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಡಿ ಕನ್ಯಾಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 32 ವರ್ಷಗಳ ದೀರ್ಘ ಸೇವೆ ಸಲ್ಲಿಸಿದ ನಿವೃತ್ತರಾದ ವಿಜಯ ಕೆ. ನಾಯರಿ ಅವರಿಗೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯಿಂದ  ನಿವೃತ್ತಿ ಸನ್ಮಾನ ಸಮಾರಂಭವನ್ನು ಶುಕ್ರವಾರ ಶಾಲಾ ಸಭಾಂಗಣದಲ್ಲಿ ಜರಗಿತು. ನಿವೃತ್ತ ಶಿಕ್ಷಕ ವಿಜಯ ನಾಯರಿ ಅವರನ್ನು ಸನ್ಮಾನಿಸಿ ಗೌರವಿಸಿ ಬಿಳ್ಕೋಡುಗೆ ಗೌರವ ನೀಡಲಾಯಿತು. ಸಹದ್ಯೋಗಿ ಬಂಧುಗಳು, ಅಭಿಮಾನಿಗಳು, ಗ್ರಾಮಸ್ಥರು, ದೈಹಿಕ ಶಿಕ್ಷಕರ ಸಂಘ ಬ್ರಹ್ಮಾವರ, ಶ್ರೀ ರಾಮಪ್ರಸಾದಿತ ಯಕ್ಷಗಾನ ಮಂಡಳಿ ಕೋಡಿ ಕನ್ಯಾಣ ಅವರುಗಳ ವತಿಯಿಂದ ಗೌರವಿಸಲಾಯಿತು. ಇದೇ ವೇಳೆ ವರ್ಗಾವಣೆಗೊಂಡ ಶಿಕ್ಷಕಿ ರಮಣಿ ಅವರನ್ನು ಗೌರವಿಸಿಕೊಳ್ಳಲಾಯಿತು. ಸಮಾರಂಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ, ಉದ್ಯಮಿ ಶಿವ ಕರ್ಕೇರ, ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೃಷ್ಣ ಕಾಂಚನ್, ಕೋಟ ಮೂರ್ತೆದಾರ ಸಹಕಾರಿ ಸಂಘದ ಅಧ್ಯಕ್ಷ ಕೊರಗ ಪೂಜಾರಿ, ಕೋಡಿ ಪಂಚಾಯತ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ಆತ್ಮಯೋಜನೆಯಡಿ ಇಲಾಖೆಯ ಇತರೆ ಯೋಜನೆಗಳಾದ ಕೃಷಿ ಪ್ರಶಸ್ತಿ, ಕೃಷಿ ಪಂಡಿತ ಪ್ರಶಸ್ತಿಗೆ ಸಮಾನಾಂತರವಾಗಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿ ರೈತರ ಸಾಧನೆಯನ್ನು ಗುರುತಿಸಿ ಪುರಸ್ಕರಿಸುವ ಕಾರ್ಯಕ್ರಮವಿರುತ್ತದೆ. ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಯ್ಕೆಯಾದ ಜಿಲ್ಲೆಯ ಒಟ್ಟಾರೆ 10 ಮಂದಿ ರೈತರಿಗೆ (ತಲಾ ರೂ. 25,000/-) ಹಾಗೂ ತಾಲ್ಲೂಕು ಮಟ್ಟದ ಪ್ರಶಸ್ತಿಯನ್ನು ಆಯ್ಕೆಯಾದ ಆಯಾ ತಾಲ್ಲೂಕಿನ ಒಟ್ಟಾರೆ ೫ ಮಂದಿ ರೈತರಿಗೆ (ತಲಾ ರೂ. 10,000/-) ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ತೀರ್ಮಾನದಂತೆ ವಿತರಿಸಲಾಗುವುದು. ಸದರಿ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸ ಬಯಸುವ ರೈತರು ಹಾಗೂ ರೈತ ಮಹಿಳೆಯರು ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ ೩೧.೦೮.೨೦೨೬ ರೊಳಗೆ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿರುತ್ತದೆ. ತಡವಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ಪಂಡಿತ ಪ್ರಶಸ್ತಿಗೆ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್.ಐ.ಡಿ ಬಳಸಿಕೊಂಡು ಆಗಸ್ಟ್ 31 ರ ಒಳಗಾಗಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ರಾಜ್ಯ ವಲಯ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಕಂಬೈನ್ಡ್ ಹಾರ್ವೆಸ್ಟರ್ ಹಬ್ ರಚನೆಗೆ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಪಹಣಿ, ಆಧಾರ್ ಪ್ರತಿ, ಬ್ಯಾಂಕ್ ಖಾತೆಯ ವಿವರದ ಪ್ರತಿ, ನಿಗಧಿತ ಛಾಪಾ ಕಾಗದದಲ್ಲಿ ಹಬ್ ಪರಭಾರೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ಪತ್ರ ಇತ್ಯಾದಿ ಅಗತ್ಯ ದಾಖಲಾತಿಗಳೊಂದಿಗೆ ನಿಗಧಿತ ನಮೂನೆಯಲ್ಲಿ ವಿವರ ಭರ್ತಿ ಮಾಡಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಆಗಸ್ಟ್ 19ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮನೆಯ ಕಾಪಾಟಿನಲ್ಲಿರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊಳಹಳ್ಳಿ ಗ್ರಾಮದ ಮಾವಿನಕಟ್ಟೆಯ ಭಾರತಿ ಜೂ.1ರಂದು ಮದುವೆ ಕಾರ್ಯಕ್ರಮಕ್ಕೆ ಹೋಗಿ ವಾಪಾಸ್ಸು ಬಂದು ಚಿನ್ನಾಭರಣಗಳನ್ನು ಮನೆಯ ಗೋಡ್ರೇಜ್‌ನಲ್ಲಿ ಇಟ್ಟಿದ್ದರು. ಜು.27ರಂದು ಕಾಪಾಟು ತೆರೆದು ನೋಡಿದಾಗ ಕಳವಾಗಿರುವುದು ಕಂಡುಬಂದಿದೆ. ಕಾಪಾಟಿನಲ್ಲಿದ್ದ 7 ಚಿನ್ನದ ಬಳೆ, 7 ಉಂಗುರಗಳು , 7ಕಿವಿ ಓಲೆ, ಒಂದು ಜೊತೆ ಜುಮಕಿ, 3 ಬ್ರಾಸ್‌ಲೈಟ್, ಕರಿಮಣಿ ಸರ, ನೆಕ್ಲೇಸ್, ಮುತ್ತಿನ ಸರ, ಕೆಂಪು ಹರಳಿನ ಸರ, 2 ಚಿನ್ನದ ಚೈನು ಸೇರಿದಂತೆ ಒಟ್ಟು 30ಲಕ್ಷ ರೂ. ಮೌಲ್ಯದ 320 ಗ್ರಾಂ ಚಿನ್ನಾಭರಣವನ್ನು ಭಾರತಿಯ ಸ್ನೇಹಿತನಾದ ಚೇತನ್ ಶೆಟ್ಟಿ ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಾಹಿತ್ಯವೆಂಬುದು ಮನಸ್ಸಿನ ಅತ್ಯಂತ ಸಂತೋಷ ಮತ್ತು ನೆಮ್ಮದಿ. ಮಾನವ ಜೀವನವನ್ನು ಸುಂದರ ಮತ್ತು ಸಾರ್ಥಕ ಮೌಲಯ್ಯುತವಾಗಿಸುತ್ತದೆ. ಸಾಹಿತ್ಯವು ಕೇವಲ ಮನರಂಜನೆಗೆ ಮಾತ್ರವಲ್ಲ ಸಮಾಜಕ್ಕೆ ದಾರಿದೀಪವಾಗುತ್ತದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ನುಡಿದರು. ಅವರು ಭಾನುವಾರ ಕಾರಂತ ಥೀಂ ಪಾರ್ಕ್‌ನಲ್ಲಿ ಜ್ಞಾನಗಂಗಾ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗ ಬೈಂದೂರು, ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಇವರ ಸಹಕಾರದಲ್ಲಿ ನಡೆದ ರಾಜ್ಯ ಮಟ್ಟದ ಸಾಹಿತ್ಯ ಸೌರಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅಭ್ಯಾಗತರಾಗಿ ಕೋಟ ಅಮೃತೇಶ್ವರಿ ಕ್ಷೇತ್ರದ ಧರ್ಮದರ್ಶಿ ಆನಂದ ಸಿ. ಕುಂದರ್ ಸಾಹಿತ್ಯವು ಜೀವನದ ಕನ್ನಡಿ ಅದು ಮನಸ್ಸನ್ನು ತಿದ್ದಿ ಸಮಾಜವನ್ನು ರೂಪಿಸಿ ಸಂಸ್ಕೃತಿಯನ್ನು ಉಳಿಸಿ ಮಾನವತೆಯನ್ನು ಬೆಳೆಸುವ ಮಹತ್ವದ ಸಾಧನವಾಗಿದೆ ಎಂದರು. ಜೊತೆಗೆ ಈ ರೀತಿಯ ಸಾಹಿತ್ಯ ಕುಟುಂಬದ ಮೂಲಕ ಸಾಹಿತ್ಯದ ಬೆಳವಣಿಗೆ ಪರಿಪೂರ್ಣವಾಗುತ್ತದೆ ಎಂದು ನುಡಿದರು. ಸಮಾರಂಭದ ಅಧ್ಯಕ್ಷತೆ…

Read More