Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗಾಣಿಗ ಸಮಾಜ ಸೇವಾ ಸಂಘ, ತಗ್ಗರ್ಸೆ ಗ್ರಾಮ ಇದರ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭವು ಚಂದಣ ಶ್ರೀ ಸೋಮಲಿಂಗೇಶ್ವರ ದೇವಸ್ಥಾನ ಜರುಗಿತು. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರಮೇಶ ಗಾಣಿಗ ಕೊಲ್ಲೂರು ಇವರು ಉದ್ಘಾಟಿಸಿದರು. ನೂತನ ಅಧ್ಯಕ್ಷರಾದ ರಾಜು ಗಾಣಿಗ ಹುಳುವಾಡಿಯವರಿಗೆ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ ಇದರ ಅಧ್ಯಕ್ಷರಾದ ಪ್ರಭಾಕರ ಗಾಣಿಗ ಕುಂಭಾಶಿ ಪದಗ್ರಹಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ನಾಗರಾಜ್ ಗಾಣಿಗ ಬೈಂದೂರು, ಗಾಣಿಗ ಯುವ ಸಂಘಟನೆ, ಬೈಂದೂರು ವಲಯದ ಅಧ್ಯಕ್ಷರಾದ ಗಣೇಶ ಗಾಣಿಗ ಉಪ್ಪುಂದ, ಗ್ರಾಮ ಪಂಚಾಯತ್ ಸದಸ್ಯರಾದ ಭವಾನಿ, ನಾಗರಾಜ್ ಹಾಲಂಬೇರು, ಗೌರವಾಧ್ಯಕ್ಷರಾದ ಗೋವಿಂದ ಗಾಣಿಗ ಹೆಗ್ಗೇರಿ, ಭಜನಾ ಮಂಡಳಿ ಅಧ್ಯಕ್ಷರಾದ ರಂಗ ಗಾಣಿಗ ಮತ್ತು ಸಮಾಜ ಬಾಂದವರು ಉಪಸ್ಥಿತರಿದ್ದರು. ನೂತನ ಕಾರ್ಯದರ್ಶಿ ವೀರಭದ್ರ ಗಾಣಿಗ ಹಾಲಂಬೇರು ಸ್ವಾಗತಿಸಿ, ತಗ್ಗರ್ಸೆ ತಿಮ್ಮಪ್ಪ ಗಾಣಿಗ ಮತ್ತು ನೂತನ ಖಜಾಂಚಿ ಗಣೇಶ್ ಗಾಣಿಗ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜರ ಕಾಲದಿಂದ ಇಂದಿನತನಕವೂ ಕಲಾ ಪ್ರಕಾರಗಳು ಆಶ್ರಯದಲ್ಲಿಯೇ ಬೆಳೆದು ಬರುತ್ತಿವೆ. ಆದರೆ ಕಲೆಗೆ ಸ್ವಾಯತ್ತತೆ ದೊರೆಯುವ ಅವಕಾಶ ಮಾಡಿಕೊಟ್ಟಾಗ ಅದು ಮತ್ತುಷ್ಟು ಗಟ್ಟಿಗೊಳ್ಳುತ್ತವೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕ್ ಹೇಳಿದರು. ಅವರು ಸುರಭಿ ರಿ. ಬೈಂದೂರು ಹಾಗೂ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಿ. ಬೈಂದೂರು ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ರಂಗ ಸುರಭಿ ೨೦೨೦ – ಶಿಶಿರ ನಾಟಕೋತ್ಸವದ ಮೂರನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು. ಚಂಡೆ ಹಾಗೂ ತಬಲ ವಾದಕ ಗೋಪಾಲಕೃಷ್ಣ ಜೋಷಿ ಉಪ್ಪುಂದ ಅವರನ್ನು ಸನ್ಮಾನಿಸಲಾಯಿತು. ರತ್ತೂಬಾಯಿ ಜನತಾ ಪ್ರೌಢಶಾಲೆಯ ಮುಖ್ಯೋಪಧ್ಯಾಯ ಮಂಜು ಕಾಳಾವರ ಅಧ್ಯಕ್ಷತೆ ವಹಿಸಿದ್ದರು. ಉಪ್ಪುಂದದ ವೈದ್ಯ ಎ.ಎಸ್. ಉಡುಪ, ಸುರಭಿ ಬೈಂದೂರು ಅಧ್ಯಕ್ಷ ಸತ್ಯನಾ ಕೊಡೇರಿ, ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಉಪ್ಪುಂದ ಉಪಸ್ಥಿತರಿದ್ದರು. ನಿರ್ದೇಶಕ ಸುಧಾಕರ ಪಿ. ಕಾರ್ಯಕ್ರಮ ನಿರೂಪಿಸಿದರು. ಬಳಿಕ ರಂಗಾಯಣ ಮೈಸೂರು ಪ್ರಸ್ತುತಿಯ, ಶರವಣ್ ಕುಮಾರ್ ರಚಿಸಿ ನಿರ್ದೇಶಿಸಿದ ರೆಕ್ಸ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಉಪ್ಪುಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ಈಗ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ಎನ್.ಕೆ ಬಿಲ್ಲವ ಹಾಗೂ ಅವರ ಪತ್ನಿ ಜ್ಯೋತಿ ಅವರನ್ನು ಶಾಲೆಯ ಶಿಕ್ಷಕರು, ಎಸ್.ಡಿ.ಎಂ.ಸಿ ಸದಸ್ಯರು ಸನ್ಮಾನಿಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಸುನೀತಾ ಅಧ್ಯಕ್ಷತೆ ವಹಿಸಿದ್ದರು. ಎನ್.ಕೆ ಬಿಲ್ಲವರ ಬಗ್ಗೆ ಮುಖ್ಯಶಿಕ್ಷಕರಾದ ವೆಂಕ್ಟ ಉಪ್ಪಾರರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಹಶಿಕ್ಷಕರಾದ ಭಾರತಿ ಸ್ವಾಗತಿಸಿದರು, ಭಾಸ್ಕರ್ ಪ್ರಭು ಹಾಗೂ ಸಂತೋಷ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ರಾಘವೇಂದ್ರ ದೇವಾಡಿಗ ಸಹಕರಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಿಲ್ಲಾ ಪಂಚಾಯಿತಿ, ಹೇರೂರು ಗ್ರಾಮ ಪಂಚಾಯಿತಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಉಪ್ಪುಂದ ರೈತಸಿರಿ ಸ್ವಸಹಾಯ ಸಂಘಗಳ ಒಕ್ಕೂಟ, ಮೇಕೋಡು, ಕಿರಿಮಂಜೇಶ್ವರ, ಕೊಡೇರಿ, ಖಂಬದಕೋಣೆ, ಹೇರಂಜಾಲು ಹಾಲು ಉತ್ಪಾದಕರ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಹೇರೂರಿನ ಮೇಕೋಡು ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆದ ಜಾನುವಾರು ಪ್ರದರ್ಶನ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ ‘ಕೇವಲ ಕೃಷಿ ಅವಲಂಬಿಸಿರುವ ರೈತರಿಗೆ ವರ್ಷವಿಡೀ ದುಡಿಮೆ ಇಲ್ಲ. ಅದಕ್ಕಾಗಿ ಹೈನುಗಾರಿಕೆಯನ್ನು ಮಾಡಬೇಕು’ ಎಂದು ಶಾಸಕ ಸಲಹೆ ನೀಡಿದರು. ‘ಹಾಲಿನ ಉತ್ಪಾದನಾ ವೆಚ್ಚ ಸರಿದೂಗಿಸುವ ಬೆಲೆ ಇಲ್ಲ. ಹೈನುಗಾರರಿಗೆ ಸರ್ಕಾರ ಪ್ರತಿ ಲೀಟರ್‌ಗೆ ?೫ ಪ್ರೋತ್ಸಾಹ ಧನ ನೀಡುತ್ತಿದೆ. ಆದರೂ, ಅವರಿಗೆ ನಿರೀಕ್ಷಿಸಿದ ಪ್ರತಿಫಲ ಸಿಗುತ್ತಿಲ್ಲ. ಆದುದರಿಂದ ಒಕ್ಕೂಟ ಸರಬರಾಜು ಮಾಡುವ ಪಶು ಆಹಾರದ ಬೆಲೆ ಕಡಿಮೆ ಮಾಡಬೇಕು. ಪಶುವೈದ್ಯರು ಅವರಿಗೆ ಉತ್ತಮ ಸೇವೆ ನೀಡಬೇಕು’ ಎಂದ ಅವರು ‘ಈ ಪ್ರದೇಶದಲ್ಲಿನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಶಾಂತಿ ಸೌಹಾರ್ದದ ವಾತಾವರಣ ನೆಲೆಸಿದ್ದು, ಎಲ್ಲಾ ವರ್ಗಗಳ ಜನರ ಸಹಕಾರದಿಂದ ಗಂಗೊಳ್ಳಿಗೆ ಅಂಟಿಕೊಂಡಿದ್ದ ಕೋಮು ಸೂಕ್ಷ್ಮ ಪ್ರದೇಶ ಎಂಬ ಹಣೆಪಟ್ಟಿ ಕಳಚಿ ಹೋಗುತ್ತಿದೆ. ಈ ಭಾಗದ ಯುವಕರು ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಗಂಗೊಳ್ಳಿಯ ಕಾರಣೀಕ ಕ್ಷೇತ್ರವಾಗಿರುವ ಶ್ರೀ ಹಾಲುಮಕ್ಕಿ ಜಟ್ಟಿಗ ದೇವಸ್ಥಾನದಲ್ಲಿ ಹತ್ತು ಸಮಸ್ತರ ಸೇವೆ ಬಯಲಾಟ ಅಪೂರ್ವವಾಗಿದ್ದು, ಇದನ್ನು ಮುನ್ನಡೆಸಿಕೊಂಡು ಬಂದಿರುವ ಸಮಿತಿಯ ಸದಸ್ಯರು ಅಭಿನಂದನಾರ್ಹರು ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ರಾಮ ಪೈ ಮಠದ ಸಮೀಪದಲ್ಲಿರುವ ಶ್ರೀ ಹಾಲುಮಕ್ಕಿ ಜಟ್ಟಿಗ ದೇವಸ್ಥಾನದ ಪ್ರಯುಕ್ತ ಹತ್ತು ಸಮಸ್ತರ ಸೇವೆ ಬಯಲಾಟದ ಬೆಳ್ಳಿ ಹಬ್ಬ ಸಮಾರಂಭದ ಅಂಗವಾಗಿ ದೇವಸ್ಥಾನದ ವಠಾರದಲ್ಲಿ ಶುಕ್ರವಾರ ಜರಗಿದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು. ಗಂಗೊಳ್ಳಿಯ ಪಂಚಗಂಗಾವಳಿ ಸೌಹಾರ್ದ ಕೋ-ಆಪರೇಟಿವ್ ಅಧ್ಯಕ್ಷ ರಾಜು ದೇವಾಡಿಗ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ’ ಸುದ್ದಿ ಬೈಂದೂರು: ರೈತರು ಬೆಳೆದ ಬೆಳೆಗೆ ಹಾಪ್‌ಕಾಮ್ಸ್ ಮಾರಾಟ ಮಳಿಗೆಯಲ್ಲಿ ಲಾಭದಾಯಕ ಧಾರಣೆ ದೊರೆಯಬೇಕು. ಜಿಲ್ಲೆಯ ಹೊರಗಿನ ಉತ್ಪನ್ನ ಮತ್ತು ಇಲ್ಲಿನ ಬೆಳೆಗಳ ದರಗಳಲ್ಲಿ ವ್ಯತಾಸವಿದ್ದು, ಸ್ಥಳೀಯ ರೈತರಿಗೆ ಯಾವುದೇ ಕಾರಣಕ್ಕೆ ನಷ್ಟವಾಗದಂತೆ ನೋಡಿಕೊಳ್ಳಬೇಕು ಎಂದು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು. ಮಂಗಳೂರಿನ ಜಿಲ್ಲಾ ಹಾಪ್‌ಕಾಮ್ಸ್ ಮಾರುಕಟ್ಟೆ, ರಾಜ್ಯ ತೋಟಗಾರಿಕಾ ಮಾರಾಟ ಮಹಾಮಂಡಲ ವತಿಯಿಂದ 2014–15ನೇ ಸಾಲಿನ ರಾಜ್ಯವಲಯ ಯೋಜನೆಯಡಿ ಉಳಿಕೆಯಾಗಿರುವ ಅನುದಾನದಿಂದ ಉಪ್ಪುಂದ ಪೇಟೆಯಲ್ಲಿ ನಿರ್ಮಿಸಿರುವ ನೂತನ ಹಾಪ್‌ಕಾಮ್ಸ್ ಮಾರಾಟ ಮಳಿಗೆಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಇಂದು ಸಾವಯವ ಮತ್ತು ರಸಗೊಬ್ಬರ ನಡುವೆ ಸಮತೋಲನ ಕಾಪಾಡುವ ಅಗತ್ಯವಿದೆ. ಸಾಧ್ಯವಾದಷ್ಟೂ ಸಾವಯವ ಕೃಷಿಗೆ ಮರಳುವುದು ಅನಿವಾರ್ಯವೆನಿಸಿದೆ. ರೈತರಿಗೆ ತರಬೇತಿ ನೀಡಬೇಕು. ಕೃಷಿಯೊಂದಿಗೆ ತೋಟಗಾರಿಕೆ, ಹೈನುಗಾರಿಕೆ, ಕೋಳಿಸಾಕಣೆ ನಡೆಸುವುದಲ್ಲದೇ, ಕಡಿಮೆ ವೆಚ್ಚದಲ್ಲಿ ಆರೋಗ್ಯ ನೀಡುವ ಪಪ್ಪಾಯಿ, ನುಗ್ಗೆ, ಬಸಳೆ, ತೊಂಡೆ, ಸೌತೆ, ಬಾಳೆ ಬೆಳೆಸಿ ಮನೆಯ ಖರ್ಚಿಗೆ ಬಳಸಿಕೊಂಡು ಸ್ವಾವಲಂಬನೆ ಸಾಧಿಸಬೇಕು’ ಎಂದರು. ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷ ಲಕ್ಷ್ಮೀನಾರಾಯಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಂಗೀತ, ಕಲೆ, ಸಂಸ್ಕೃತಿಯ ಉಪಾಸನೆ ಇದ್ದಲ್ಲಿ ಮನುಷ್ಯ ಮನುಷ್ಯನಾಗಿರುತ್ತಾನೆ. ಅಂತಹದ್ದೊಂದು ಪ್ರಕ್ರಿಯೆಯಲ್ಲಿ ತೊಡಗಿಕೊಂಡಿರುವ ಸಂಘ ಸಂಸ್ಥೆಗಳನ್ನು ಪ್ರೋತ್ಸಾಹಿಸುವುದು ಪ್ರಜ್ಞಾವಂತ ಸಮಾಜದ ಜವಾಬ್ದಾರಿಯಾಗಿದೆ ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಕೆ. ಸುಬ್ರಹ್ಮಣ್ಯ ಶೆಟ್ಟಿ ಹೇಳಿದರು. ಅವರು ಸುರಭಿ ರಿ. ಬೈಂದೂರು ಹಾಗೂ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಿ. ಬೈಂದೂರು ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ರಂಗ ಸುರಭಿ ೨೦೨೦ – ಶಿಶಿರ ನಾಟಕೋತ್ಸವ ಎರಡನೇ ದಿನದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತೀಯ ಜೀವವಿಮಾ ಅಭಿವೃದ್ಧಿ ಅಧಿಕಾರಿ ಸೋಮನಾಥನ್ ಆರ್, ಬೈಂದೂರು ಶಿಶುಮಂದಿರದ ಅಧ್ಯಕ್ಷ ಮಂಜುನಾಥ ಶೆಟ್ಟಿ, ಬೈಂದೂರು ಡಾ. ಬಿ.ಆರ್ ಅಂಬೇಡ್ಕರ್ ಸಂಘದ ಅಧ್ಯಕ್ಷ ಲಕ್ಷ್ಮಣ ಯಡ್ತರೆ, ಬೈಂದೂರು ಮಾದರಿ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ರವೀಂದ್ರ ಶ್ಯಾನುಭಾಗ್, ಉದ್ಯಮಿ ಕೆ.ಎ ಸತೀಶ್ ಉಡುಪಿ, ಸುರಭಿ ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಉಪ್ಪುಂದ, ಸಂಘಟನಾ ಕಾರ್ಯದರ್ಶಿ ಲಕ್ಷ್ಮಣ ವೈ. ಕೊರಗ ಉಪಸ್ಥಿತರಿದ್ದರು. ಗಾಯಕಿ ಗೀತಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಮಕ್ಕಳಿಗೆ ಬಾಲ್ಯದಲ್ಲೇ ಉತ್ತಮ ಆತ್ಮವಿಶ್ವಾಸವನ್ನು ಮೂಡಿಸಬೇಕು ನಿಮ್ಮೊಳಗೆ ಅದ್ಬುತವಾದ ಒಂದು ಶಕ್ತಿ ಅದನ್ನು ಬಳಸಿಕೊಂಡು ಎನು ಬೇಕಾದರೂ ಮಾಡಬಹುದು ಎನ್ನುವುದನ್ನು ಹೇಳಿಕೊಡಿ, ಆಗ ಅವರು ಜೀವನದಲ್ಲಿ ಯಶಸ್ವಿಯಾಗುತ್ತಾರೆ ಎಂದು ಪತ್ರಕರ್ತ ರವಿಬೆಳಗೆರೆ ತಿಳಿಸಿದರು. ಅವರು ಕೋಟ ಮೂಡುಗಿಳಿಯಾರಿನ ಜನಸೇವಾ ಟ್ರಸ್ಟ್ ಆಶ್ರಯದಲ್ಲಿ ಶನಿವಾರ ಮೂಡುಗಿಳಿಯಾರು ಶಾಲಾ ಮೈದಾನದಲ್ಲಿ ಜರಗಿದ ಅದ್ದೂರಿಯ ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮ ‘ಅಭಿಮತ ಸಂಭ್ರಮ’ದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕೀರ್ತಿ ಕಲಶ ಪ್ರಶಸ್ತಿಗೆ ಭಾಜನರಾದ ಯೋಗರಾಜ್ ಭಟ್ಟರು ಕನ್ನಡ ಚಿತ್ರರಂಗದ ಮಾಂತ್ರಿಕ ಸ್ವರೂಪಿ ಸಾಹಿತಿ. ಸ್ವಂತ ಪರಿಶ್ರಮದ ಮೂಲಕ ಯಶಸ್ಸು ಸಾಧಿಸಿದ ಸಾಧಕ. ಇವರ ಪ್ರತಿಯೊಂದು ಸಾಲುಗಳು ಜೀವನೋತ್ಸಹವನ್ನು ತುಂಬುತ್ತದೆ ಎಂದರು. ಹುಟ್ಟೂರ ಗೌರವ ಸಂತಸ ತಂದಿದೆ: ಈ ಸಂದರ್ಭ ಚಿತ್ರ ಸಾಹಿತಿ ಯೋಗರಾಜ್ ಭಟ್ ಅವರಿಗೆ ಜನಸೇವಾ ಟ್ರಸ್ಟ್‌ನ ಕೀರ್ತಿ ಕಳಸ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಭಟ್ಟರು, ನಾನು ಮೂಲತಃ ಮಂದಾರ್ತಿಯವನು ಹೀಗಾಗಿ ಈ ಪ್ರದೇಶ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಲಾ ಪ್ರಕಾರಗಳಿಗೆ ಪ್ರೋತ್ಸಾಹ ನೀಡಿ ಅದು ಬಹುಕಾಲ ಉಳಿಯುವಂತೆ ಮಾಡುವುದು ನಾಗರಿಕ ಸಮಾಜದ ಕರ್ತವ್ಯವಾಗಿದೆ ಎಂದು ಮಾಜಿ ಜಿಲ್ಲಾ ರೋಟರಿ ಗವರ್ನರ್ ಎ. ಅಭಿನಂದನ್ ಶೆಟ್ಟಿ ಹೇಳಿದರು. ಅವರು ಸುರಭಿ ರಿ. ಬೈಂದೂರು ಹಾಗೂ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಿ. ಬೈಂದೂರು ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ರಂಗ ಸುರಭಿ ೨೦೨೦ – ಶಿಶಿರ ನಾಟಕೋತ್ಸವಕ್ಕೆ ಡೋಲು ಭಾರಿಸಿ ಚಾಲನೆ ನೀಡಿ ಮಾತನಾಡಿ ಕಲೆ ಹಾಗೂ ಕಲಾಕಾರರಿಗೆ ಯಾವುದಾದರೂ ವೇದಿಕೆ ಅಥವಾ ಸಮೂಹದ ಮೂಲಕ ಜೀವ ಕೊಡದಿದ್ದರೆ ಅದು ನಶಿಸುವುದಲ್ಲದೇ ಒಂದು ಪರಂಪರೆಯೂ ಮಾಯವಾಗುತ್ತದೆ ಎಂದು ಹೇಳಿದರು. ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ ಕಾರ್ಯಕ್ರಮ ಆಯೋಜನೆ ಸುಲಭ ಸಾಧ್ಯವಲ್ಲ. ವೇದಿಕೆ ಸೃಷ್ಟಿಸುವ ಮೂಲಕ ಕಲಾವಿದರಿಗೊಂದು ಅವಕಾಶ ಹಾಗೂ ಪ್ರೇಕ್ಷಕರಿಗೆ ಮನೋರಂಜನೆ ಏಕಕಾಲದಲ್ಲಿ ದೊರೆತಂತಾಗುವುದು ಎಂದರು. ಬೈಂದೂರು ಸಿಟಿ ಜೆಸಿಐ ಸ್ಥಾಪಕಾಧ್ಯಕ್ಷ ಮಣಿಕಂಠ ಎಸ್., ಉದ್ಯಮಿ ಪ್ರಸಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ, ಪ್ರತಿಭಾವಂತ ಕಲಾವಿದ ಗೌತಮ್ ಕೆ. ಅವರ ಎಲ್ಲಿರುವ ನಾನು ಆಲ್ಬಂ ಸಾಂಗ್ ಫೆ. 11ರ ಬೆಳಿಗ್ಗೆ 10ಗಂಟೆಗೆ ಬಿಡುಗಡೆಗೊಳ್ಳಲಿದೆ. ಆಳ್ವಾಸ್ ಕಾಲೇಜಿನ ಶಿವರಾಮ ಕಾರಂತ ವೇದಿಕೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ ಆಲ್ಬಂ ಸಾಂಗ್ ಬಿಡುಗಡೆಗೊಳಿಸಲಿದ್ದಾರೆ. ಆಲ್ಬಂ ಸಾಂಗ್ ನಿರ್ದೇಶನ, ನಟನೆ ಹಾಗೂ ಹಾಡುಗಾರಿಕೆಯಲ್ಲಿ ಗೌತಮ್ ಕೆ. ಇದ್ದರೇ, ದಿಲೀಪ್ ಮರೀಚಿ ಸಾಹಿತ್ಯ ಬರೆದಿದ್ದು, ರಾಜೇಶ್ ನಾಯ್ಕ್ ಹಾಗೂ ಭರತ್ ಕ್ಯಾಮರಾದಲ್ಲಿ ಸಹಕರಿಸಿದ್ದಾರೆ. ನಿತೀಶ್ ಚಿತ್ರಕಥೆಯಲ್ಲಿ ಸಹಕರಿಸಿದ್ದರೆ, ರೆಲ್ವಿನ್ ಮೆಲ್ರಿನ್ ಸಂಕಲನ ಮಾಡಿದ್ದಾರೆ. ಸಹಕಲಾವಿದರಾದ ಶ್ರೇಯಾ ಗೌತಮ್ ನಟಿಸಿದ್ದಾರೆ. ಬಿಡುಗಡೆಯಾದ ಬಳಿಕ ಉಷಾಕಾಮ್ಯ ಪ್ರೊಡಕ್ಷನ್ಸ್ ಯುಟ್ಯೂಬ್ ಚಾನೆಲ್‌ನಲ್ಲಿ  (https://www.youtube.com/channel/UCfRKolvXC7K9Wt_a4eIYn6w/videos) ಲಭ್ಯವಾಗಲಿದೆ.

Read More