ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಮಿಡ್ ಟೌನ್ ಕುಂದಾಪುರ ಹಾಗೂ ಇಂಚರ ಇಕೋ ಕ್ಲಬ್ ಇವರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸ್ಕತ್ತೂರಿನಲ್ಲಿ ವನ ಮಹೋತ್ಸವ ಕಾರ್ಯಕ್ರಮ ನಡೆಯಿತು. ರೋಟರಿ ಕ್ಲಬ್ ಮಿಡ್ ಟೌನ್ ಕುಂದಾಪುರ ಅಧ್ಯಕ್ಷರಾದ ರೊ. ನಳಿನ್ ಕುಮಾರ್ ಶೆಟ್ಟಿ ಹಾಗೂ ನಿಯೋಜಿತ ಅಧ್ಯಕ್ಷರಾದ ರೊ. ಎಚ್ ರವೀಶ್ಚಂದ್ರ ಶೆಟ್ಟಿ ಜೊತೆಯಾಗಿ ಹೊಂಗೆ ಗಿಡಗಳನ್ನು ನೆಡುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ವಿಠಲ ಕುಲಾಲ ವಹಿಸಿದ್ದರು. ರೋಟರಿ ಕ್ಲಬ್ ಮಿಡ್ ಟೌನ್ ಕುಂದಾಪುರದ ಪೂರ್ವಾಧ್ಯಕ್ಷರು ಹಾಗೂ ವಲಯ 1 ರ ನಿಯೋಜಿತ ಸಹಾಯಕ ಗವರ್ನರ್ ರೊ. ಜಯಪ್ರಕಾಶ್ ಶೆಟ್ಟಿ ವೈ, ಕಾರ್ಯದರ್ಶಿ ರೊ. ನಿರಂಜನ್ ಶೆಟ್ಟಿ , ಹುಣಸೆಮಕ್ಕಿ ಸಮೂಹ ಸಂಪನ್ಮೂಲ ವ್ಯಕ್ತಿ ರಾಜೀವ ಕುಲಾಲ, ಶಾಲಾ ಎಸ್ ಡಿ ಎಂ ಸಿ ಸದಸ್ಯರು, ಸಹಶಿಕ್ಷಕರಾದ ಸಂಜೀವ ಎಂ, ಜಯಲಕ್ಷ್ಮಿ ಬಿ., ವಿಜಯಾ ಆರ್,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಇನ್ಫೋಸಿಸ್ ವತಿಯಿಂದ ಉಡುಪಿ ಜಿಲ್ಲಾಡಳಿತಕ್ಕೆ ಸುಮಾರು 70 ಲಕ್ಷ ರೂ. ಮೌಲ್ಯದ 10 ಆಕ್ಸಿಜನ್ ಕಾನ್ಸನ್ಟ್ರೇಟರ್ ಹಾಗೂ 10 ವೆಂಟಿಲೇಟರ್ಗಳನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಹಸ್ತಾಂತರಿಸಲಾಯಿತು. ನಂತರ ಮಾತನಾಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಇನ್ಫೋಸಿಸ್ ವತಿಯಿಂದ ಕೋವಿಡ್ ಮೊದಲನೇ ಅಲೆಯ ಸಂದರ್ಭದಲ್ಲೂ ಸಹ ಜಿಲ್ಲಾಡಳಿತದ ಮನವಿಗೆ ಕೂಡಲೇ ಸ್ಪಂದಿಸಿ ಅಗತ್ಯವಿದ್ದ ಅರೋಗ್ಯ ಸಾಮಗ್ರಿಗಳನ್ನು ನೀಡಲಾಗಿದ್ದು, ಕೋವಿಡ್ 2 ನೇ ಅಲೆಯ ಈ ಸಮಯದಲ್ಲೂ ಸಹ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿ, ಅಕ್ಸಿಜನ್ ಕಾನ್ಸನ್ಟ್ರೇಟರ್ ಮತ್ತು ವೆಂಟಿಲೇಟರ್ಗಳನ್ನು ನೀಡಿದ್ದು, ಸಂಸ್ಥೆಯ ಮುಖ್ಯಸ್ಥರಿಗೆ ಜಿಲ್ಲಾಡಳಿತ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು. ಪ್ರಸ್ತುತ ನೀಡಿರುವ ಉಪಕರಣಗಳಲ್ಲಿ ಉಡುಪಿ ಜಿಲ್ಲಾಸ್ಪತ್ರೆಗೆ 5 ವೆಂಟಿಲೇಟರ್ ಮತ್ತು ಅಕ್ಸಿಜನ್ ಕಾನ್ಸನ್ಟ್ರೇಟರ್, ಕುಂದಾಪುರ ತಾಲೂಕು ಆಸ್ಪತ್ರೆಗೆ 2 ವೆಂಟಿಲೇಟರ್ ಮತ್ತು ಅಕ್ಸಿಜನ್ ಕಾನ್ಸನ್ಟ್ರೇಟರ್, ಕಾರ್ಕಳ ತಾಲೂಕು ಆಸ್ಪತ್ರೆಗೆ 3 ವೆಂಟಿಲೇಟರ್ ಮತ್ತು ಅಕ್ಸಿಜನ್ ಕಾನ್ಸನ್ಟ್ರೇಟರ್ಗಳನ್ನು ನೀಡಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸರಕಾರದ ಉಚಿತ ಲಸಿಕಾ ಅಭಿಯಾನದ ಪೂರ್ಣ ಸದುಪಯೋಗವನ್ನು ಪಡೆದುಕೊಂಡಿರುವ ಭಂಡಾರ್ಕಾರ್ಸ್ ಕಾಲೇಜು ೧೮ ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಯಶಸ್ವಿಯಾಗಿ ಲಸಿಕೆ ನೀಡಿದ್ದು ಈ ಬಗ್ಗೆ ಪೋಷಕರಿಂದ ಮೆಚ್ಚುಗೆಗೆ ಪಾತ್ರವಾಗಿದೆ. ಉಡುಪಿ ಜಿಲ್ಲಾ ಆಸ್ಪತ್ರೆ, ಕುಂದಾಪುರ ತಾಲೂಕಾ ಆಸ್ಪತ್ರೆ, ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕ ಮತ್ತು ಭಂಡಾರ್ಕಾರ್ಸ್ ಕಾಲೇಜಿನ ಸಹಯೋಗದಲ್ಲಿ ಜೂನ್ 25ರಿಂದ ಮೂರು ದಿನಗಳ ಕಾಲ ಉಚಿತ ಲಸಿಕಾ ಅಭಿಯಾನ ವನ್ನು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಸರಕಾರದ ಈ ಅಭಿಯಾನದ ಸದುಪಯೋಗವನ್ನು ಕಾಲೇಜಿನ ಹೆಚ್ಚಿನ ವಿದ್ಯಾರ್ಥಿಗಳಿಗೆ ತೆಗೆದುಕೊಂಡರು. ಒಟ್ಟು ಮೂರು ದಿನಗಳ ಕಾಲ ನಡೆದ ಈ ಅಭಿಯಾದಲ್ಲಿ ಮೊದಲನೇ ದಿನ ೪೬೦ ಎರಡನೇ ದಿನ ೧೦೫೧ ಮತ್ತು ಮೂರನೇ ದಿನ ೪೫೧ ಮಂದಿ ಮೊದಲನೇ ಮತ್ತು ಕೆಲವರು ಎರಡನೇ ಡೋಸ್ನ್ನು ತೆಗೆದುಕೊಂಡಿದ್ದಾರೆ. ಉದ್ಘಾಟನೆ: ಕಾರ್ಯಕ್ರಮವನ್ನು ಕುಂದಾಪುರ ತಾಲೂಕಾ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ರಾಬರ್ಟ ರೆಬೆಲ್ಲೋ ಉದ್ಘಾಟಿಸಿ ಮಾತನಾಡಿ ವ್ಯಾಕ್ಸಿನ ತೆಗೆದುಕೊಂಡಾಗ ಕೋವಿಡ್ ಸಾಂಕ್ರಾಮಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ,ಜು.1: ಉಡುಪಿ ಜಿಲ್ಲಾ ಪಂಚಾಯತಿ ಸಂಬಂಧಿಸಿದಂತೆ ಚುನಾವಣಾ ಕ್ಷೇತ್ರಗಳ ಮೀಸಲಾತಿಯು ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಗೊಂಡಿದೆ. ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಜುಲೈ 8ರ ಒಳಗೆ ಕಾರ್ಯದರ್ಶಿಗಳು, ರಾಜ್ಯ ಚುನಾವಣಾ ಆಯೋಗ, 1ನೇ ಮಹಡಿ, ಕೆ.ಎಸ್.ಸಿ.ಎಂ.ಎಫ್ ಕಟ್ಟಡ ಹಿಂಭಾಗ, ನಂ8, ಕನ್ನಿಂಗ್ ಹ್ಯಾಂ ರಸ್ತೆ, ಬೆಂಗಳೂರು – 560052 ಇಲ್ಲಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ತಿಳಿಸಲಾಗಿದೆ. ಇದನ್ನೂ ಓದಿ: ► ಉಡುಪಿ ಜಿಲ್ಲೆ – ತಾಲೂಕು ಪಂಚಾಯತಿ ಚುನಾವಣಾ ಕ್ಷೇತ್ರದ ಮೀಸಲಾತಿ ಪ್ರಕಟ – https://kundapraa.com/?p=49636 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಜು.1: ಉಡುಪಿ ಜಿಲ್ಲೆಯ ತಾಲೂಕು ಪಂಚಾಯತಿ ಚುನಾವಣಾ ಕ್ಷೇತ್ರಗಳ ಮೀಸಲಾತಿಯು ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಗೊಂಡಿದೆ. ಉಡುಪಿ ತಾಲೂಕು ಪಂಚಾಯತಿಯ 11 ಕ್ಷೇತ್ರ, ಕಾಪು ತಾಲೂಕು ಪಂಚಾಯತಿಯ 10 ಕ್ಷೇತ್ರ, ಬ್ರಹ್ಮಾವರ ತಾಲೂಕು ಪಂಚಾಯತಿಯ 13 ಕ್ಷೇತ್ರ, ಬೈಂದೂರು ತಾಲೂಕು ಪಂಚಾಯತಿಯ 9 ಕ್ಷೇತ್ರ, ಕುಂದಾಪುರ ತಾಲೂಕು ಪಂಚಾಯತಿಯ 19 ಕ್ಷೇತ್ರ, ಕಾರ್ಕಳ ತಾಲೂಕು ಪಂಚಾಯತಿಯ 13 ಕ್ಷೇತ್ರ, ಹೆಬ್ರಿ ತಾಲೂಕು ಪಂಚಾಯತಿಯ 11 ಕ್ಷೇತ್ರಗಳಿಗೆ ಮೀಸಲಾಯಿ ಪ್ರಕಟವಾಗಿದೆ. ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಜುಲೈ 8ರ ಒಳಗೆ ಕಾರ್ಯದರ್ಶಿಗಳು, ರಾಜ್ಯ ಚುನಾವಣಾ ಆಯೋಗ, 1ನೇ ಮಹಡಿ, ಕೆ.ಎಸ್.ಸಿ.ಎಂ.ಎಫ್ ಕಟ್ಟಡ ಹಿಂಭಾಗ, ನಂ8, ಕನ್ನಿಂಗ್ ಹ್ಯಾಂ ರಸ್ತೆ, ಬೆಂಗಳೂರು – 560052 ಇಲ್ಲಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ತಿಳಿಸಲಾಗಿದೆ. ಇದನ್ನೂ ಓದಿ: ► ಉಡುಪಿ ಜಿಲ್ಲಾ ಪಂಚಾಯತಿ ಚುನಾವಣಾ ಕ್ಷೇತ್ರದ ಮೀಸಲಾತಿ ಪ್ರಕಟ – https://kundapraa.com/?p=49642 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮೀನುಗಾರರ ಒಕ್ಕೂಟದ ವತಿಯಿಂದ ನಾಡದೋಣಿ ಮೀನುಗಾರರು ಸಮುದ್ರ ಪೂಜೆ ಹಾಗೂ ಕಡಲಿಗೆ ಬಾಗಿನ ಅರ್ಪಿಸಿ, ಈ ಮೀನುಗಾರಿಕೆ ಋತುವಿನಲ್ಲಿ ಸುರಕ್ಷಿತ ಹಾಗೂ ಸಮೃದ್ಧ ಮತ್ಸ್ಯಸಂಪತ್ತನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು. ಪ್ರತೀ ವರ್ಷದ ಸಂಪ್ರದಾಯದಂತೆ ನಾಡದೋಣಿ ಮೀನುಗಾರರು ಕಡಲಿಗೆ ಮೀನುಗಾರಿಕೆಗೆ ಇಳಿಯುವ ಮುನ್ನ ಮರವಂತೆಯ ಶ್ರೀ ಮಹಾರಾಜಸ್ವಾಮಿ ವರಾಹ ದೇವಸ್ಥಾನದ ಬಳಿ ಸಮುದ್ರ ಪೂಜೆ ಸಲ್ಲಿಸುವುದು ವಾಡಿಕೆ. ಸಂಪ್ರದಾಯದಂತೆ ಗುರುವಾರ ಬೆಳಿಗ್ಗೆ ಶ್ರೀ ಮಹಾರಾಜಸ್ವಾಮಿ ವರಾಹ ದೇವಸ್ಥಾನದಲ್ಲಿ ಶ್ರೀದೇವರಿಗೆ ಪೂಜೆ ಸಲ್ಲಿಸಿ, ದೇವಸ್ಥಾನದ ಸಮೀಪದ ತೀರದಲ್ಲಿ ಸಮುದ್ರ ದೇವತೆಯ ಲಿಂಗ ರಚಿಸಿ ಪೂಜೆ ಮಾಡಿದ ಬಳಿಕ ಸಮುದ್ರ ಪೂಜೆ ನಡೆಯಿತು. ಅರ್ಚಕ ನರಸಿಂಹ ಅಡಿಗ ಅವರು ಸಮುದ್ರ ಪೂಜೆಯ ವಿಧಿ ವಿಧಾನಗಳನ್ನು ನೆರವೇರಿಸಿದರು. ಸಮುದ್ರ ಪೂಜೆಯ ಬಳಿಕ ಉತ್ತಮ ಮೀನುಗಾರಿಕಾ ಋತುವಿನ ನಿರೀಕ್ಷೆಯೊಂದಿಗೆ ನಾಡದೋಣಿ ಮೀನುಗಾರರು ಕಡಲಿಗೆ ಇಳಿಯುತ್ತಾರೆ. ಈ ಸಂದರ್ಭದಲ್ಲಿ ಮರವಂತೆಯ ಶ್ರೀ ಮಹಾರಾಜಸ್ವಾಮಿ ವರಾಹ ದೇವಸ್ಥಾನದ ಧರ್ಮದರ್ಶಿ ರಾಮಚಂದ್ರ ಹೆಬ್ಬಾರ್, ಗಂಗೊಳ್ಳಿ ವಲಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕನ್ನಡ ಚಿತ್ರರಂಗದ ಭರವಸೆಯ ನಟ ರಕ್ಷಿತ್ ಶೆಟ್ಟಿ ವಿರುದ್ಧ ಟಿವಿ ಕಾರ್ಯಕ್ರಮವೊಂದರಲ್ಲಿ ಅವಾಚ್ಯ ಪದಗಳನ್ನು ಬಳಸಿ ತೇಜೋವಧೆ ಮಾಡಿರುವುದನ್ನು ಖಂಡಿಸಿ ಖಾಸಗಿ ವಾಹಿನಿಯೊಂದರ ವಿರುದ್ಧ ತಾಲೂಕಿನ ಶಂಕರನಾರಾಯಣ ಠಾಣೆಯಲ್ಲಿ ದೂರು ನೀಡಲಾಗಿದೆ. ನಟ ರಕ್ಷಿತ್ ಶೆಟ್ಟಿಯನ್ನು ನಿಂದಿಸುವ ಉದ್ದೇಶದಿಂದಲೇ ಕಾರ್ಯಕ್ರಮ ರೂಪಿಸಿದ್ದಾರೆಂದು ಆರೋಪಿಸಿ ಬುಧವಾರ ರಾತ್ರಿಯಿಂದಲೇ ರಕ್ಷಿತ್ ಶೆಟ್ಟಿ ಅಭಿಮಾನಿಗಳು ತಮ್ಮ ಆಕ್ರೋಶ ಹೊರಹಾಕುತ್ತಿದ್ದು ಇದೀಗ ಶಂಕರನಾರಾಯಣದ ಭರತ್ ತಲ್ಲಂಜೆ ಎಂಬುವವರು ಠಾಣೆಯಲ್ಲಿ ದೂರು ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ. ದೂರಿನ ಸಾರಾಂಶವೇನು? ಬುಧವಾರ ಸಂಜೆ 7:30ಕ್ಕೆ ಪಬ್ಲಿಕ್ ಟಿವಿ ವಾಹಿನಿಯಲ್ಲಿ ಪ್ರಸಾರಗೊಳ್ಳುತ್ತಿರುವ ಸಿನಿ ಅಡ್ಡ ಕಾರ್ಯಕ್ರಮದಲ್ಲಿ ರಕ್ಷಿತ್ ಶೆಟ್ಟಿ ಅವರು ರಸ್ತೆ ಬದಿಯಲ್ಲಿ ಪಾನಿಪುರಿ ಮಾರಲಿಕ್ಕೂ ನಾಲಾಯಕ ಎಂದು ಅಪಪ್ರಚಾರ ಮಾಡಿರುತ್ತಾರೆ. ರಕ್ಷಿತ್ ಶೆಟ್ಟಿಯವರ ತೆಜೋವಧೆ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಪ್ರಸರಣ ಮಾಡಿರುತ್ತಾರೆ ಮಹೇಶದೇವ ಶೆಟ್ಟಿ ಎಂಬುವರು ಪ್ರೊಗ್ರಾಮ್ ಪ್ರೊಡ್ಯೂಸರ್ ಆಗಿ, ದಿವ್ಯಜ್ಯೋತಿ ಎಂಬುವರು ನಿರೂಪಕಿಯಾಗಿ ಈ ಕಾರ್ಯಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಜೂನ್ 28 ರಿಂದ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ನ್ನು ಅಭಿವೃದ್ಧಿ ಪಡಿಸಲಾಗಿರುತ್ತದೆ. ರೈತರು ಗೂಗಲ್ ಪ್ಲೇ-ಸ್ಟೋರ್ನಿಂದ ಅಥವಾ https://play.google.com/store/apps/details id=com.csk.Khariffarmer2021.cropsurvey ಲಿಂಕ್ ಬಳಸಿ, Kharif Season Farmer Crop Survey 2021-22 ಆ್ಯಪ್ನ್ನು ಡೌನ್ಲೋಡ್ ಮಾಡಿಕೊಂಡು ಆರ್ಥಿಕ ವರ್ಷ ಹಾಗೂ ಋತುವನ್ನು ದಾಖಲಿಸಬೇಕು. ನಂತರ ಆಧಾರ್ QR Codeನ್ನು Scan ಮಾಡಿ ಅಥವಾ ಆಧಾರ್ನಲ್ಲಿರುವಂತೆ ಮಾಹಿತಿಯನ್ನು ದಾಖಲಿಸಿ, ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸುವುದರಿಂದ ಮೊಬೈಲ್ ಸಂಖ್ಯೆಗೆ ಓ.ಟಿ.ಪಿ ಬರುತ್ತದೆ. ಈ ಓ.ಟಿ.ಪಿ ನ್ನು ದಾಖಲಿಸಿ, ಮಾಸ್ಟರ್ ವಿವರ ಡೌನ್ಲೋಡ್ ಮಾಡಿಕೊಂಡು ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್, ಹಿಸ್ಸಾ, ಮಾಲೀಕನ ಹೆಸರು ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಿ, ನಂತರ ಸರ್ವೆ ನಂಬರ್ಗಳಡಿ ರೇಖೆಯೊಳಗೆ ನಿಂತು ವಿವರವನ್ನು ದಾಖಲಿಸಿ ಫೋಟೋ ತೆಗೆದು ಮಾಹಿತಿಯನ್ನು ಅಪ್ಲೋಡ್ ಮಾಡಬೇಕು. ಬೆಳೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿನ ಬ್ಯಾಂಕುಗಳು ಗೃಹಸಾಲ, ಸಣ್ಣ ಹಾಗೂ ಮಧ್ಯಮ ಉದ್ಯಮಕ್ಕೆ, ಶಿಕ್ಷಣ ಹಾಗೂ ಆದ್ಯತಾ ವಲಯದವರಿಗೆ ಸಾಲ ನೀಡುವ ಯೋಜನೆಗೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ಪ್ರಗತಿಯನ್ನು ಸಾಧಿಸಬೇಕು ಎಂದು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಬ್ಯಾಂಕ್ಗಳಲ್ಲಿ ಸಾರ್ವಜನಿಕರ ಠೇವಣಿ ಹಣ ಬ್ಯಾಂಕುಗಳು ನೀಡುವ ಸಾಲದ ಅನುಪಾತವು ಆರ್.ಬಿ.ಐ ಸೂಚಿಸಿರುವ ಠೇವಣಿ ಹಣದ ಶೇಕಡಾ 60 ರಷ್ಟು ಹಣವನ್ನು ಸಾಲ ನೀಡುವ ಮೂಲಕ ನಿರ್ಧಿಷ್ಟ ಗುರಿ ಸಾಧಿಸಬೇಕು. ಆದರೆ ಜಿಲ್ಲೆಯಲ್ಲಿ ನಿಗದಿತ ಗುರಿಗಿಂತ ಸ್ವಲ್ಪ ಕಡಿಮೆ ಇದೆ. ಇದರಲ್ಲಿ ಪ್ರಗತಿಯನ್ನು ಸಾಧಿಸಬೇಕು ಎಂದು ಸೂಚನೆ ನೀಡಿದರು. ವಾಣಿಜ್ಯ ಬ್ಯಾಂಕುಗಳು ಸಮಾಜದಲ್ಲಿನ ಜನರು ಆರ್ಥಿಕ ಚಟುವಟಿಕೆ ಸೇರಿದಂತೆ ಮತ್ತಿತರೆ ಕಾರ್ಯಗಳಿಗೆ ನೀಡುವ ವಿವಿಧ ಸಾಲ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್ ಇದರ ವತಿಯಿಂದ ಬಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಟೀಮ್ ಹಾಗೂ ಫೇಸ್ ಶೀಲ್ಡ್ನ್ನು ಹಸ್ತಾಂತರಿಸಲಾಯಿತು. ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಟೀಮ್ ಹಾಗೂ ಫೇಸ್ ಶೀಲ್ಡ್ ಹಸ್ತಾಂತರಿಸಿದರು. ಜಿಲ್ಲಾಧಿಕಾರಿ ಸದಾಶಿವ ಪ್ರಭು ಮಾತನಾಡಿ,ಅವರು ಕೋವಿಡ್ ನಿಯಂತ್ರಣದಲ್ಲಿ ಪ್ರತಿಯೊಬ್ಬ ನಾಗರೀಕರ ಜವಬ್ದಾರಿ ಅತ್ಯಂತ ಮುಖ್ಯವಾಗಿದೆ.ನಮ್ಮ ಕುಂದಾಪ್ರ ಕನ್ನಡ ಬಳಗ ಕಳೆದ ಹಲವು ವರ್ಷಗಳಿಂದ ಊರಿನ ಸಮಸ್ಯೆಗೆ ಮತ್ತು ವಿದೇಶದಲ್ಲಿ ಕುಂದಾಪುರ ಕನ್ನಡಿಗರಿಗೆ ಸ್ಪಂದಿಸುವ ಮೂಲಕ ಉತ್ತಮ ಸ್ಪಂದನೆ ನೀಡುತ್ತಿದೆ ಎಂದರು. ಈ ಸಂದರ್ಭ ಉಡುಪಿ ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರೇಮಾನಂದ, ಬೈಂದೂರು ತಹಶೀಲ್ದಾರ ಶೋಭಾಲಕ್ಷ್ಮಿ ಎಚ್.ಎಸ್, ಬೈಂದೂರು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಂದಿನಿ, ಪಟ್ಟಣ ಪಂಚಾಯತ್ ಅಧಿಕಾರಿ ನವೀನ್, ನಮ್ಮ ಕುಂದಾಪ್ರ ಕನ್ನಡ ಬಳಗದ ಶೀನ ದೇವಾಡಿಗ, ಸುಧಾಕರ ಶೆಟ್ಟಿ ಹುಂತರ್ಕಿ, ಪ್ರಕಾಶ ಹಾಗೂ ಆರೋಗ್ಯ ಇಲಾಖೆಯ…
