Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂಬೇಡ್ಕರ್ ಜಯಂತಿಯಂದು ಸಮುದಾಯ ಕುಂದಾಪುರ ಸಂಘಟನೆಯ ನೇತೃತ್ವದಲ್ಲಿ ಸಂಘಟಿಸಲಾದ ‘ಅಂಬೇಡ್ಕರ್ ಅರಿವು’ ಅಭಿಯಾನಕ್ಕೆ ಪಡುಕೋಣೆಯಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭ ಆದಿವಾಸಿ ಸಂಘಟನೆಯ ಜಿಲ್ಲಾ ಸಂಚಾಲಕ ಶ್ರೀಧರ್ ನಾಡ, ಅಧ್ಯಕ್ಷರು ಜನ ಸೇವಾ ಟ್ರಸ್ಟ್ ನಾಡ, ಪಡುಕೋಣೆಯ ಫಿಲಿಪ್ ಡಿಸಿಲ್ವಾ, ಸಮುದಾಯ ಕುಂದಾಪುರ ಕಾರ್ಯದರ್ಶಿ ಸದಾನಂದ ಬೈಂದೂರು ಮಹಿಳಾ ಸಂಘಟನೆ ಮುಖಂಡೆ ಶೀಲಾವತಿ, ಕೃಷಿಕೂಲಿಕಾರರ ಸಂಘಟನೆಯ ನಾಗರತ್ನ ನಾಡ, ಮಕ್ಕಳ ಬೇಸಿಗೆ ಶಿಬಿರ ನಿರ್ದೇಶಕ ವಾಸುದೇವ ಗಂಗೇರ ಮತ್ತು ಸಮುದಾಯದ ಸದಸ್ಯರು, ಡಿವೈಎಫ್ಐ ಸಂಘಟನೆಯ ಸದಸ್ಯರು ಮತ್ತು ಬೇರೆ ಬೇರೆ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಡಿ.ವೈ.ಎಫ್.ಐ ಅಧ್ಯಕ್ಷರಾದ ನಾಗರಾಜ ಕುರು ಎಲ್ಲರನ್ನೂ ಸ್ವಾಗತಿಸಿದರು. ಸಮುದಾಯದ ರವಿ ಕಟ್ಕೆರೆ ಕಾರ್ಯಕ್ರಮ ನಿರೂಪಿಸಿದರು. ಭಾರತ ದೇಶದ ಪ್ರಜೆಗಳ ಮಟ್ಟಿಗೆ ಧರ್ಮಗ್ರಂಥವೇ ಆಗಿರಬೇಕಾದ ಸಂವಿಧಾನವನ್ನು ಮಕ್ಕಳು ಓದಿನಲ್ಲಿ ಅರಿಯುವಂತಾಗಬೇಕು. ಮಕ್ಕಳ ಓದಿಗೆ ನಿಲುಕಬಲ್ಲ, ಅಂಬೇಡ್ಕರ್ ಅವರ ಕುರಿತಾದ ಪುಸ್ತಕಗಳನ್ನು ಶಾಲೆಗಳಿಗೆ ವಿತರಿಸಿ, ಸೂಕ್ತ ಚಟುವಟಿಕೆಗಳ ಮೂಲಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ಕಾರಣೀಕ ಕ್ಷೇತ್ರವಾಗಿದ್ದು, ದೇಶ ವಿದೇಶಗಳಲ್ಲಿರುವ ಸಹಸ್ರಾರು ಭಕ್ತರು ಶ್ರೀದೇವರನ್ನು ನಂಬಿಕೊಂಡಿದ್ದಾರೆ. ಭಕ್ತರ ಇಷ್ಟಾರ್ಥಗಳನ್ನು ಕರುಣಿಸುವ ಶ್ರೀ ಮಹಾಂಕಾಳಿ ಅಮ್ಮನವರ ಶಿಲಾಮಯ ದೇವಸ್ಥಾನದ ನಿರ್ಮಾಣ ಕಾರ್ಯ ಉತ್ತಮ ರೀತಿಯಲ್ಲಿ ಸದ್ಭಕ್ತರ ಸಹಕಾರದಿಂದ ನಡೆಯಲಿ. ಶ್ರೀದೇವರ ಅನುಗ್ರಹ ಆಶೀರ್ವಾದದಿಂದ ಗ್ರಾಮದ ಅಭಿವೃದ್ಧಿ ಹಾಗೂ ನಂಬಿದ ಭಕ್ತರಿಗೆ ಸನ್ಮಂಗಲವಾಗಲಿ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು. ಅವರು ಗುರುವಾರ ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ಅಮ್ಮನವರ ನೂತನ ಶಿಲಾಮಯ ದೇವಸ್ಥಾನ ನಿರ್ಮಾಣ ಕಾರ್ಯದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಪುರೋಹಿತರಾದ ರವೀಶ ಭಟ್ ನೇತೃತ್ವದಲ್ಲಿ ಶಿಲಾನ್ಯಾಸದ ಧಾರ್ಮಿಕ ವಿಧಿವಿಧಾನಗಳು ನೆರವೇರಿತು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಶಂಕರ ಖಾರ್ವಿ, ಜೀಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ ಖಾರ್ವಿ, ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉದ್ಯಮಿ ಶೇಷಯ್ಯ ಕೋತ್ವಾಲ್, ಎಂ.ಎಂ.ಮಡಿವಾಳ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಮೀನುಗಾರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಅಧಿಕಾರಿಗಳಿಗೆ ಅಧಿಕಾರ ಶಾಶ್ವತವಲ್ಲ. ತಮ್ಮ ಅಧಿಕಾರಾವಧಿಯಲ್ಲಿ ಜನರಿಗೆ ನೀಡುವ ಸೇವೆ, ಕರ್ತವ್ಯದಲ್ಲಿ ತೋರಿಸುವ ಶಿಸ್ತು, ಪ್ರಾಮಾಣಿಕತೆ ಶಾಶ್ವತವಾಗಿ ಜನರ ಮನಸ್ಸಿನಲ್ಲಿ ಉಳಿಯುತ್ತದೆ. ಧರ್ಮಸ್ಥಳ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂದರ್ಭ ಸದಸ್ಯರಿಂದ ದೊರೆಯುವ ಪ್ರೀತಿ, ವಿಶ್ವಾಸ ಅವಿಸ್ಮರಣೀಯ. ಮುಖ್ಯವಾಗಿ ಬೈಂದೂರು ತಾಲೂಕಿನಲ್ಲಿ ಸೇವೆ ಸಲ್ಲಿಸಲು ಅವಕಾಶ ದೊರಕಿರುವುದು ಜೀವನದಲ್ಲಿ ಮರೆಯಲಾರದ ಕ್ಷಣ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ನ ಉಡುಪಿ ಜಿಲ್ಲೆ ಹಿರಿಯ ಜಿಲ್ಲಾ ನಿರ್ದೇಶಕ ಗಣೇಶ ಬಿ. ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ತಾಲೂಕು ಜನಜಾಗೃತಿ ವೇದಿಕೆ ಹಾಗೂ ತಾಲೂಕು ಭಜನಾ ಪರಿಷತ್ ವತಿಯಿಂದ ವಲಯ ಮೇಲ್ವಿಚಾರಕರ ಸಹಯೋಗದೊಂದಿಗೆ ತ್ರಾಸಿಯ ಅಣ್ಣಪ್ಪಯ್ಯ ಸಭಾಭವನದಲ್ಲಿ ಸೋಮವಾರ ಜರಗಿದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಕೇಂದ್ರ ಸಮಿತಿ ಅಧ್ಯಕ್ಷ ರಘುರಾಮ ಕೆ.ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕೊಪ್ಪಳ ಪ್ರಾದೇಶಿಕ ನಿರ್ದೇಶಕರಾಗಿ…

Read More

ನಮ್ಮ ಸೌಂದರ್ಯವನ್ನು ಹೆಚ್ಚುಸಲು ಸುಂದಾರವಾದ ಕೂದಲು ಹೆಚ್ಚಿನ ಪಾತ್ರ ವಹಿಸುತ್ತದೆ. ಆರೋಗ್ಯಕರ ಮತ್ತು ಸುಂದರವಾದ ಕೂದಲು ನಿಮ್ಮನ್ನು ಹೆಚ್ಚು ಆಕರ್ಷಕವಾಗಿ ಮಾಡುತ್ತದೆ ಮನುಷ್ಯರಲ್ಲಿ ಸುರುಳಿಯಾಕಾರದ ಕೂದಲು, ತೆಳ್ಳನೆಯ ಕೂದಲು, ಎಣ್ಣೆಯುಕ್ತ ಕೂದಲು, ಒಣ ಕೂದಲು ಹೀಗೆ ಹಲವಾರು ರೀತಿಯ ಕುದಲನ್ನು ಹೊಂದಿರುತ್ತಾರೆ. ಆದರೆ ನಿಶ್ಚಿತ ಕೂದಲ ರಕ್ಷಣೆಯ ಸಲಹೆಗಳು ಎಲ್ಲವು ಎಲ್ಲರ ಕೂದಲಿಗೆ ಸರಿ ಹೊಂದುವುದಿಲ್ಲ. ಪ್ರತಿಯೊಬ್ಬರು ಹೊಳೆಯುವ, ಉದ್ದ ಮತ್ತು ಸುಂದರವಾದ ಕೂದಲನ್ನು ಬಯಸುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಹಲವಾರು ವಿಭಿನ್ನ ಪ್ರಯೋಗಳನ್ನು ಉಪಯೋಗಿಸಿ ನಿಮ್ಮ ಸುಂದರವಾದ ಕೂದಲನ್ನು ಹಾಳು ಮಾಡಿಕೊಂಡಿರಬಹುದು. ಹೀಗೆ ನಿಮ್ಮ ಕೂದಲ ಆರೈಕೆಯಲ್ಲಿ ಈ ಕೆಳಗಿನ ತಪ್ಪುಗಳನ್ನು ಎಂದಿಗೂ ಮಾಡಬೇಡಿ. ತೊಳೆಯುವ ಮೊದಲು ಬಾಚದೇ ಇರುವುದು:ಕೆಲವು ಸೋಮಾರಿ ಹುಡಿಗಿಯರು ತೊಳೆಯುವ ಮೊದಲು ಅವರು ಎಂದಿಗೂ ಕೂದಲನ್ನು ಬಾಚಿಕೊಳ್ಳುವುದಿಲ್ಲ ಇದರಿಂದ ಕೂದಲು ಹೆಚ್ಚು ಸಿಕ್ಕು ಸಿಕ್ಕಾಗಿ ಹೆಚ್ಚಿನ ಕೂದಲು ಉದುರುವ ಸಾಧ್ಯತೆ ಇದೆ. ಆದುದರಿಂದ ಸಾಧ್ಯವಾದಷ್ಟು ಕೂದಲನ್ನು ಬಾಚಿ ಸ್ಪ್ಲಿಟ್ ಎಂಡ್ಸ್:ನೀವು ಸ್ಪ್ಲಿಟ್ ಎಂಡ್ಸ್ ಗಳನ್ನು ಹೊಂದಿದ್ದರೆ, ಆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಎಂಕಾಂ ಅಂತಿಮ ಸ್ನಾತಕೋತ್ತರ ಪರೀಕ್ಷೆಯಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ತೃತೀಯ ರಾಂಕ್ ಪಡೆದ ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವಗ೯ಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಪುತ್ರಿ ಸ್ವಾತಿ ಪೂಜಾರಿ ಅವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ವಿದ್ಯಾಥಿ೯ಯ ಮನೆಗೆ ತೆರಳಿ ಸನ್ಮಾನಿಸಲಾಯಿತು. ಸನ್ಮಾನಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸಂಟ್ ಆಳ್ವ ಮಾತನಾಡಿ, ತಂದೆ ತಾಯಿಯ ಸರಳ ಸಜ್ಜನಿಕೆ ಆಚಾರ-ವಿಚಾರಗಳಿಂದ ಪ್ರಭಾವಿತರಾಗಿ, ಯಾವತ್ತು ಸಚಿವರ ಪುತ್ರಿ ಎಂದು ಹೇಳಿಕೊಳ್ಳದೆ ಕಾಲೇಜಿಗೆ ದೊಡ್ಡ ಕೀರ್ತಿ ತಂದು ಕೊಟ್ಟು ನಮ್ಮ ಎಲ್ಲಾ ವಿಧ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ ಎಂದರು. ಸನ್ಮಾನ ಸ್ವೀಕರಿಸಿ, ಮಾತನಾಡಿದ ಸ್ವಾತಿ ಪೂಜಾರಿ ಮಾತನಾಡಿ ನನ್ನ ಯಶಸ್ವಿಗೆ ಕಾರಣೀಕತ೯ರಾದ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ನನ್ನ ಎಲ್ಲಾ ಮಿತ್ರರಿಗೂ ವಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು. ಕಾಲೇಜಿನ ಐಕ್ಯೂಎಸಿ ಸಂಚಾಲಕರಾದ ಡಾ. ಸಿ. ಜಯರಾಮ್ ಶೆಟ್ಟಿಗಾರ ಕಾಯ೯ಕ್ರಮವನ್ನು ಸಂಯೋಜಿಸಿದ್ದರು. ಪ್ರೊ. ಸೋಫಿಯಾ ಡಯಾಸ್.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಕುಂದಾಪುರದ ಪದವಿಪೂರ್ವ ಕಾಲೇಜು ಕವಿ ಮುದ್ದಣ ವೇದಿಕೆಯಲ್ಲಿ ಗುರುವಾರ ಹದಿನೈದನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ’ತುರಾಯಿ’ ಅನ್ವೇಷಣೆಯ ಪ್ರತಿಬಿಂಬ ಇದರ ಸಾಂಸ್ಕೃತಿಕ ಕಾರ್ಯಕ್ರಮ ಮೂಲಕ ಚಾಲನೆ ನೀಡಿ, ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಜಿಲ್ಲಾ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಪ್ರೊ. ಎ.ವಿ.ನಾವಡ ಮತ್ತು ಗಾಯತ್ರಿ ವಿ.ನಾವಡ ದಂಪತಿ ದೀಪ ಬೆಳಗಿಸಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಡಾ. ಉಮೇಶ್ ಪುತ್ರನ್, ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಕೋಶಾಧಿಕಾರಿ ಮನೋಹರ ಪಿ., ಶಿಕ್ಷಕರಾದ ಮಂಜುನಾಥ, ಸತ್ಯನಾ ಕೊಡೇರಿ, ಅನಂತಕೃಷ್ಣ ಕೊಡ್ಗಿ, ಅಧ್ಯಕ್ಷ ಪುಂಡಲೀಕ ನಾಯಕ್ ಮುಂತಾದವರು ಇದ್ದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾಮಕೃಷ್ಣ ಹೆಗಡೆ ಹಿಲ್ಲೂರು, ಸುನೀಲ್ ಭಂಡಾರಿ ಕಡತೋಕ, ಶ್ರೀಕಾಂತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂಬೇಡ್ಕರ್ ಕಾಲದಲ್ಲಿ ಆಸ್ಪೃಶ್ಯತೆ, ವರ್ಗ ಸಂಘರ್ಷ, ಸಮಾಜದಲ್ಲಿ ಇದ್ದ ವೈಪರೀತ್ಯಗಳ ಮೆಟ್ಟಿನಿಂತು ಸಂವಿಧಾನ ರಚಿಸಿ, ದೇಶಕ್ಕೆ ಸಂವಿಧಾನ ನೀಡಿದ ಅಂಬೇಡ್ಕರ್ ಸಾಗಿಬಂದ ಹಾದಿ ಸುಲಭದ್ದಾಗಿರಲಿಲ್ಲ. ಭಾರತ ಶಕ್ತಿಯುತ ದೇಶವಾಗಿ ಬೆಳೆಯಲು ಅಂಬೇಡ್ಕರ್ ಅವರ ಸಂವಿಧಾನ ಕಾರಣವಾಗಿದೆ ಎಂದು ಕುಂದಾಪುರ ಉಪವಿಭಾಗಾಧಿಕಾರಿ ಕೆ. ರಾಜು ಅಭಿಪ್ರಾಯಪಟ್ಟರು. ಕುಂದಾಪುರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಂಘಟನೆ ಆಶ್ರಯದಲ್ಲಿ ತಾಲೂಕು ಪಂಚಾಯಿತಿ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಗುರುವಾರ ನಡೆದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಉದ್ಘಾಟಿಸಿ ಮಾತನಾಡಿ ನಾವು ಅಂಬೇಡ್ಕರ್ ಅವರು ಸಾಗಿಬಂದ ದಾರಿಯಲ್ಲಿ ಸಾಗುವ ಮೂಲಕ ನಮ್ಮಿಂದಾದ ಕೊಡುಗೆ ದೇಶಕ್ಕೆ ನೀಡಿದರೆ ಅಂಬೇಡ್ಕರ್ ಜಯಂತಿಗೊಂದು ಅರ್ಥಬರುತ್ತದೆ ಎಂದರು. ಕುಂದಾಪುರ ಪುರಸಭೆ ಅಧ್ಯಕ್ಷ ವೀಣಾ ಭಾಸ್ಕರ ಮೆಂಡನ್ ಅಧ್ಯಕ್ಷತೆ ವಹಿಸಿದ್ದರು. ಲೇಖಕ ಮಂಜುನಾಥ ಹಿಲಿಯಾಣ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಕುರಿತು ಉಪನ್ಯಾಸ ಮಾಡಿದರು. ದಲಿತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಲಾವಿದ ಅಥವಾ ತಂಡ ಇವೆರಡನ್ನು ತುಲನೆ ಮಾಡಿ ನೋಡಿದಾಗ ಯಾವುದು ಮುಖ್ಯ ಎಂಬ ಸಂಘರ್ಷ ಹುಟ್ಟಿಕೊಳ್ಳುತ್ತದೆ. ಆದರೆ ನಾವೆಲ್ಲರೂ ಕಲೆಗೆ ಶರಣಾದಾಗ ಮಾತ್ರ ಸಂಘಟನೆ ವಿಭಜನೆಯಾಗದೇ ಮುನ್ನಡೆಯುತ್ತದೆ. ಇಂದಿನ ದಿನಗಳಲ್ಲಿ ಮನಸ್ಸುಗಳನ್ನು ಕಟ್ಟುವ ಕೆಲಸ ಮಾಡಬೇಕಾಗಿದೆ. ಹಿರಿಯರು ನೀಡಿದ ಧನಾತ್ಮಕ ಸಲಹೆಗಳನ್ನು ವಿಮರ್ಶಿಸಿ ಅರಿತಾಗಲೇ ಹೊಸ ಬದುಕಿನತ್ತ ಸಾಗಲು ಸಾಧ್ಯವಾಗುತ್ತದೆ ಎಂದು ರಂಗಭೂಮಿ ಉಡುಪಿ ಇದರ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ ಹೇಳಿದರು. ಇಲ್ಲಿನ ಶಾರದಾ ವೇದಿಕೆಯಲ್ಲಿ ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಲಾವಣ್ಯ ಬೈಂದೂರು ವತಿಯಿಂದ ಐದು ದಿನಗಳ ಕಾಲ ನಡೆದ ರಂಗಪಂಚಮಿ-2022 ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಇಂದಿನ ಕಾಲಘಟ್ಟದಲ್ಲಿ ಆಧುನಿಕತೆ ಹಾಗೂ ಹಿಂದಿನ ವ್ಯವಸ್ಥೆಯನ್ನು ಸರಿದೂಗಿಸಿಕೊಂಡು ಹೋಗುವ ಅನಿವಾರ್ಯತೆಯಿದೆ. ಸಂಸ್ಥೆ ಹಿಂದಿನ ಕಷ್ಟದ ದಿನಗಳನ್ನು ಹಾಗೂ ಅದರ ಕಲ್ಪನೆಗಳನ್ನು ಮತ್ತು ನಡೆದು ಬಂದ ರಹದಾರಿಯನ್ನು ಮುಂದಿನ ದಿನಗಳಲ್ಲಿ ಸಂಸ್ಥೆಯನ್ನು ಮುನ್ನೆಡೆಸುವವರು ನೆನಪಿಟ್ಟುಕೊಂಡು ಆಗಾಗ ಸಿಂಹಾಲೋಕನ ಮಾಡಿಕೊಳ್ಳುವುದು ಅತ್ಯವಶ್ಯಕ. ಹಳೆಯದನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.11: ಕುಂದಾಪುರ ಪುರಸಭಾ ವ್ಯಾಪ್ತಿಯ ವಾಸ್ತವ್ಯ, ವಾಣಿಜ್ಯ ಕಟ್ಟಡ ಹಾಗೂ ಖಾಲಿ ನಿವೇಶನಗಳ ಮಾಲೀಕರು ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯನ್ನು ಏಪ್ರಿಲ್ 30 ರ ಒಳಗೆ ಪಾವತಿಸಿದಲ್ಲಿ ಆಸ್ತಿ ತೆರಿಗೆ ಮೇಲೆ ಶೇ. 5 ರಷ್ಟು ರಿಯಾಯಿತಿಯನ್ನು ಪಡೆಯಬಹುದಾಗಿದೆ. ಜೂನ್ 30 ರ ವರೆಗೆ ದಂಡ ರಹಿತವಾಗಿ ಆಸ್ತಿ ತೆರಿಗೆ ಪಾವತಿಸಬಹುದಾಗಿದ್ದು, ಜುಲೈ 1 ರ ನಂತರ ಪಾವತಿಸಿದ್ದಲ್ಲಿ ತಿಂಗಳಿಗೆ ಶೇ. 2 ರ ದಂಡವನ್ನು ವಿಧಿಸಲಾಗುವುದು. ಆದ್ದರಿಂದ ಸಾರ್ವಜನಿಕರು ಏ. 30 ರ ಒಳಗೆ ಆಸ್ತಿ ತೆರಿಗೆ ಪಾವತಿಸಿ, ಇದರ ಸದುಪಯೋಗ ಪಡೆದುಕೊಳ್ಳುವಂತೆ ಪುರಸಭೆ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More