ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಗುಳ್ಳಾಡಿ ಗ್ರಾಮದ ಮಂಜಿ ಎನ್ನುವವರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ್ದ3 ತಿಂಗಳ ಗರ್ಭ ಧರಿಸಿದ್ದ ಗೋವನ್ನು ರಾತ್ರಿ ಸಮಯದಲ್ಲಿ ಕೊಟ್ಟಿಗೆ ನುಗ್ಗಿ ಹಗ್ಗವನ್ನು ಕೊಯ್ದು ಗೋ ಕಳ್ಳರು ಕದ್ದೊಯ್ದಿದ್ದಾರೆ . ಮಂಜಿಯವರು ತೀರ ಬಡ ಕುಟುಂಬ ದವರಾಗಿದ್ದು ತಮ್ಮ ಸೊಸೆ ಮತ್ತು ಮೊಮ್ಮಗಳೊಂದಿದೆಗೆ ವಾಸವಿದ್ದು ತಮ್ಮ ಜೀವನೋಪಾಯಕ್ಕೆ ಹೈನುಗಾರಿಕೆಯನ್ನು ನಂಬಿಕೊಂಡಿದ್ದು ಇಗ ಇದ್ದೋಂದ ಗೋವು ಕಳ್ಳತನವಾದುದರಿಂದ ತಂಬಾ ನೊಂದಿದ್ದಾರೆ, ಈ ಕುರಿತು ಕೋಟ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರಾವಳಿ ಜಿಲ್ಲೆಗಳ ಜಾನಪದ ಕ್ರೀಡೆ ಕಂಬಳವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಒಟ್ಟು ಒಂದು ಕೋಟಿ ರೂ. ಸಹಾಯಧನ ನೀಡಲು ಕರ್ನಾಟಕ ರಾಜ್ಯ ಸರಕಾರದ ಆದೇಶಿಸಿದೆ. ಕಂಬಳ ಕ್ರೀಡೆಗೆ ಪ್ರೋತ್ಸಾಹ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಸಹಾಯಧನ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಮಗದ ಮೂಲಕ ಅನುದಾನ ಬಿಡುಗಡೆಗೊಳ್ಳಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ಪ್ರತಿ ಕಂಬಳಕ್ಕೆ 5 ಲಕ್ಷದಂತೆ ಒಟ್ಟು 50 ಲಕ್ಷ ರೂ. ಮತ್ತು ಉಡುಪಿ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ಪ್ರತಿ ಕಂಬಳಕ್ಕೆ 5 ಲಕ್ಷ ರೂ.ಗಳಂತೆ ಒಟ್ಟು 50 ಲಕ್ಷ ರೂ.ಗಳನ್ನು ನೀಡಲಾಗುತ್ತದೆ. ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ.ಯೋಗೇಶ್ವರ ಅವರು ಕೆಲವು ದಿನಗಳ ಹಿಂದೆ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಎರಡು ದಿನಗಳ ಭೇಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಬೀದರ್ ಜಿಲ್ಲೆಯ ಸಾಹಿತ್ಯಿಕ ಮತ್ತು ಸಾಂಸ್ಕ್ರತಿಕ ಪ್ರತಿಷ್ಠಾನ ಹಾಗೂ ಮಂದಾರ ಕಲಾ ವೇದಿಕೆ ಕೊಡಮಾಡುವ 2021ನೇ ಸಾಲಿನ ಕಾಯಕ ಚೂಡಾಮಣಿ ರತ್ನ ಪ್ರಶಸ್ತಿಗೆ ಕೊಲ್ಲೂರಿನ ಮಾವಿನಕಾರು ಗ್ರಾಮದ ಭರತ್ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಜಿಲ್ಲೆಯ ಹಲವಾರು ಊರುಗಳಲ್ಲಿ ನಿರ್ಗತಿಕರ, ವಿಶೇಷಚೇತನರ ಆಶ್ರಮಗಳಿಗೆ ದುಡಿಮೆಯ ಹಣದಲ್ಲಿ ಊಟೋಪಚಾರ, ಬಟ್ಟೆ ಔಷಧ ಹಾಗೂ ಕೆಲವೊಮ್ಮೆ ಆಸ್ಪತ್ರೆ ಖರ್ಚನ್ನೂ ಭರಿಸಿದ್ದಾರೆ. ಈಗಲೂ ಹಲವಾರು ನಿರ್ಗತಿಕರು, ವೃದ್ಧರು ಇವರ ಆಶ್ರಯದಲ್ಲಿದ್ದಾರೆ. ಫಲಾಪೇಕ್ಷೆಯಿಲ್ಲದ ಇವರ ಈ ಸಮಾಜಸೇವೆ ಗುರುತಿಸಿ ಈ ಪ್ರಶಸ್ತಿಯನ್ನು ಬೀದರ್ನಲ್ಲಿ ಭಾನುವಾರ ನಡೆಯುವ ಸಮಾರಂಭದಲ್ಲಿ ಪ್ರಧಾನಿಸಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಜಿ. ದೇಶಪಾಂಡೆ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ತಾಲೂಕಿನ ಅಲ್ಬಾಡಿ-ಆರ್ಡಿಯ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ರಚಿಸಿದ ಪರೀಕ್ಷಾ ಪೇ ಚರ್ಚಾ ವಿಡಿಯೋ ದೇಶಾದ್ಯಂತ ಸದ್ದು ಮಾಡಿದೆ. ಪ್ರಧಾನಿ ಮೋದಿ ಅವರ ಮಹಾತ್ವಕಾಂಕ್ಷೆಯ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಪ್ರೇರಣೆ ನೀಡುವ ಪ್ರಮೋಶನಲ್ ವಿಡಿಯೋಕ್ಕೆ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ದೊರೆತಿದೆ. 2.52 ನಿಮಿಷಗಳಿರುವ ಈ ವಿಡಿಯೋವನ್ನು ಮುಖ್ಯ ಶಿಕ್ಷಕ ಶೇಖರ ಶೆಟ್ಟಿಗಾರ್ ಅವರ ಮಾರ್ಗದರ್ಶನದಲ್ಲಿ ಮಾಡಲಾಗಿದೆ. ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಸುರೇಶ್ ಮರಕಾಲ ಸೈಬರಕಟ್ಟೆ ಅವರ ನಿರ್ದೇಶನದಲ್ಲಿ ಹಾಗೂ ಎಲ್ಲಾ ಶಿಕ್ಷಕರ ಸಹಯೋಗದೊಂದಿಗೆ ನಿರ್ಮಿಸಲಾಗಿದೆ. ಐದು ವಿದ್ಯಾರ್ಥಿನಿಯರು ಸೇರಿದಂತೆ ಇಬ್ಬರು ವಿದ್ಯಾರ್ಥಿಗಳು ವಿಡಿಯೋ ಮೂಲಕ ಅರ್ಜಿ ಸಲ್ಲಿಸಲು ವೀಕ್ಷಕರಿಗೆ ಸ್ಪೂರ್ತಿಯ ಸಂದೇಶ ನೀಡಿದ್ದಾರೆ. ಈ ವಿಡಿಯೋ ಈಗಾಗಲೇ ಡಿಡಿ ಇಂಡಿಯಾ ಸೇರಿದಂತೆ ಡಿಡಿ ನ್ಯೂಸ್, ಡಿಡಿ ಚಂದನ ಟಿ.ವಿ, ಡಿಡಿ ನ್ಯೂಸ್ ಟ್ವಿಟ್ಟರ್ನಲ್ಲಿ ಪ್ರಸಾರ ಮಾಡಲಾಗಿದೆ. ಈ ಮೂಲಕ ಗ್ರಾಮೀಣ ಶಾಲೆಯ ಶಿಕ್ಷಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಂಗಳೂರು ವಿದ್ಯಾನಗರದಲ್ಲಿ ಮಾ.13, 14ರಂದು ನಡೆದ 2ನೇ ರಾಜ್ಯ ಮಟ್ಟದ ಮಾಸ್ಟರ್ಸ್ಸ್ಪೋಟ್ಸ್ 2021 ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲಾ ಪೋಲಿಸ್ ಇಲಾಖೆಯ ಸಿಬ್ಬಂದಿ ಬಿಜೂರು ಶಂಕರ ಪೂಜಾರಿ ಕಾಡಿನತಾರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಂಕರ ಪೂಜಾರಿ ಅವರು 40ರಿಂದ 45 ವರ್ಷದೊಳಗಿನ ವಯೋಮಿತಿಯಲ್ಲಿ ನಡೆದ 100ಮೀಟರ್ ಹಾಗೂ 200 ಮೀಟರ್ ಓಟದ ಸ್ಪರ್ಧೆಯಲ್ಲಿ 2 ಬೆಳ್ಳಿ ಪದಕ ಪಡೆದುಕೊಂಡು ಹೈದರಬಾದ್ನಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಮೂಲತಃ ಬಿಜೂರಿನವರಾದ ಶಂಕರ ಪೂಜಾರಿ ಅವರು ಪ್ರಸ್ತುತ ಯಡ್ತಾಡಿ ಸೈಬ್ರಕಟ್ಟೆಯಲ್ಲಿ ವಾಸಿಸುತ್ತಿದ್ದಾರೆ. ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಬೆಂಗಾವಲು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಂಕರ ಪೂಜಾರಿ ಅವರನ್ನು ಹಿರಿಯ ಅಧಿಕಾರಿಗಳು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಶದ ಜನಸಂಖ್ಯೆಯ ಶೇಕಡಾ 50 ಭಾಗ ಮಹಿಳೆಯರು ಇದ್ದು, ಸಮಾಜದಲ್ಲಿ ಆಥಿ೯ಕ, ಸಮಾಜಿಕ,ದೌಜ೯ನ್ಯ ಲೈಂಗಿಕ ಕಿರುಕುಳ ಇತ್ಯಾದಿ ಶೋಷಣೆಗೆ ಒಳಗಾಗುತ್ತಿದ್ದು ಇಂತಹ ದೌಜ೯ನ್ಯಗಳವಿರುದ್ಧ ಮಹಿಳೆಯರು ಸಂಘಟಿತ ಹೋರಾಟಕ್ಕೆ ಮುಂದಾಗ ಬೇಕು ಎಂದು ಜನವಾದಿ ಮಹಿಳಾ ಸಂಘದ ರಾಜ್ಯಾಧ್ಯಕ್ಷೆ ದೇವಿ ಅಭಿಪ್ರಾಯ ಪಟ್ಟರು. ಅವರು ಬೈಂದೂರು ಸಿಐಟಿಯು ಕಚೇರಿ ಸಭಾಂಗಣದಲ್ಲಿ ಜರಗಿದ ತಾಲೂಕು ಜನವಾದಿ ಮಹಿಳಾ ಸಂಘಟನೆಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸಿಐಟಿಯು ತಾಲೂಕು ಸಂಚಾಲಕಿ ಸಿಂಗಾರಿ ನಾವುಂದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜನವಾದಿ ಮಹಿಳಾ ಸಂಘಟನೆಯ ಮುಖಂಡರಾದ ಶೀಲಾವತಿ ಹಡವು,ಜಯಶ್ರೀ ಪಡುವರಿ,ನಾಗರತ್ನ ನಾಡ, ನಾಗರತ್ನ ಪಡುವರಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜನವಾದಿ ಮಹಿಳಾ ಸಂಘಟನೆಯ ಬೈಂದೂರು ತಾಲೂಕು ಸಂಚಾಲಕ ಸಮಿತಿಗೆ ನಾಗರತ್ನ ನಾಡ, ಮನೋರಮ ಭಂಡಾರಿ, ನಾಗರತ್ನ ಪಡುವರಿ, ಜಯಶ್ರೀ ಪಡುವರಿ, ವಸಂತಿ ಯಡ್ತರೆ, ಸಾವಿತ್ರಿ ಹೆಮ್ಮಾಡಿ, ಸರಸ್ವತಿಬೈಂದೂರು,ಸಿಂಗಾರಿ ನಾವುಂದ, ಶೋಭಾ.ವಿ.ನಾಯಕ್ ಮುಬಾರಕ್ ಶಿರೂರು ಇವರನ್ನು ನವಾ೯ನುಮತದಿಂದ ಆಯ್ಕೆ ಮಾಡಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ನೀರೇಶ್ವಾಲ್ಯ ಮಹಾಲಿಂಗೇಶ್ವರ ಸಾಂಸ್ಕೃತಿಕ ಸಂಘ ರಿ .ದೊಡ್ಡೋಣಿ ಕೋಟೇಶ್ವರ ವತಿಯಿಂದ 14ನೇ ವರ್ಷದ ಮಹಾ ಶಿವರಾತ್ರಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕೋಟೇಶ್ವರ ಎನ್ ಆರ್ ಆಚಾರ್ಯ ಆಸ್ಪತ್ರೆಯ ಭಾಸ್ಕರ್ ಆಚಾರ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಅಂಗವಿಕಲತೆಯಿಂದ ಬಳಲುತ್ತದ್ದರು ನೂರಾರು ಜನರಿಗೆ ಸ್ಪೂರ್ತಿಯಾಗಿರುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಲಲಿತಾ ಕೊರೊಡಿ ಹಾಗೂ ಕೋಟೀಲಿಂಗೇಶ್ವರ ದೇವಸ್ಥಾನದ ತಟ್ಟಿರಾಯ ಹೊತ್ತು ಕುಣಿವ ತೆರೆಮರೆಯ ವ್ಯಕ್ತಿಗಳಾದ ಶ್ರೀಧರ ದೇವಾಡಿಗ ಹಾಗು ಸುಬ್ರಹ್ಮಣ್ಯ ಗಾಣಿಗ್ ಇವರನ್ನು ಗುರುತಿಸಿ ಗೌರವಿಸಲಾಯಿತು. ಮುಖ್ಯ ಅಥಿತಿಗಳಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಿತ್ರ ಕ್ಲಿನಿಕ್ನ ಡಾ ಅಶೋಕ ಶೆಟ್ಟಿ , ಕೋಟೇಶ್ವರ ಪಂಚಾಯತ್ನ ಅಧ್ಯಕ್ಷರಾದ ಕೃಷ್ಣ ಗೊಲ್ಲ ಬೀಜಾಡಿ ಗ್ರಾಮ ಪಂಚಾಯತ್ ನ ಸದಸ್ಯರಾದ ಪ್ರಸನ್ನ ದೇವಾಡಿಗ, ಶ್ರೀ ನೀರೇಶ್ವಾಲ್ಯ ಸಾಂಸ್ಕೃತಿಕ ಸಂಘದ ಗೌರವಾಧ್ಯಕ್ಷರಾದ ಉಮೇಶ್ ಎಮ್ ಕುಮಾರ್ ದೊಡ್ಡೋಣಿ, ಅಧ್ಯಕ್ಷರಾದ ರಾಘವೇಂದ್ರ ಪೂಜಾರಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷರು ರಾಘವೇಂದ್ರ ಪೂಜಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಂಗಳೂರಿನಲ್ಲಿ ಜನ ಮನ್ನಣೆ ಗಳಿಸಿರುವ ಮಯೂರ ಸಮೂಹ ಸಂಸ್ಥೆಗಳು ಇದೀಗ ಕುಂದಾಪುರದಲ್ಲಿ ಆಹಾರೋದ್ಯಮ ಸಂಸ್ಥೆಗಳನ್ನು ಆರಂಭಿಸುತ್ತಿದ್ದು, ಮಾರ್ಚ್ 19ರಂದು ಬೆಳಿಗ್ಗೆ 10-30ಕ್ಕೆ ಶುಭಾರಂಭಗೊಳ್ಳಲಿದೆ ಎಂದು ಮಯೂರ ಗ್ರೂಫ್ನ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕರಾದ ಗೋಪಾಡಿ ಶ್ರೀನಿವಾಸ ರಾವ್ ತಿಳಿಸಿದ್ದಾರೆ. ಜಿ.ಎಸ್.ಆರ್ ಸ್ಕ್ವೇರ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಂದಾಪುರ ಪುರಸಭಾ ರಸ್ತೆಯಲ್ಲಿರುವ ಜಿ.ಎಸ್.ಆರ್ ಸ್ಕ್ವೇರ್ನ ಎರಡನೇ ಮತ್ತು ಮೂರನೇ ಮಹಡಿಯಲ್ಲಿ ಕೇಕ್ವಾಲ ಬೇಕರಿ ಉತ್ಪನ್ನಗಳ ಮತ್ತು ಈಶಾನ್ಯ ದೇಶಿಯ ಆಹಾರ, ಐಸ್ ಕ್ರೀಮ್, ಸ್ಮೂತೀಸ್’ ಇತ್ಯಾದಿ ಖಾದ್ಯಗಳು ಕುಂದಾಪುರದ ಜನರ ಸೇವೆಗೆ ಲಭ್ಯವಾಗಲಿದೆ ಎಂದರು. ಆಹಾರೋತ್ಪಾದನೆಯಲ್ಲಿ ಅಂತರಾಷ್ಟ್ರೀಯ ಗುಣಮಟ್ಟ, ಸ್ವಚ್ಛತೆ ಮತ್ತು ಪರಿಶುದ್ದತೆಗೆ ಮೊದಲ ಆದ್ಯತೆ, ಕೈಗೆಟಕುವ ದರ, ತೆರೆದಿಟ್ಟ ಪಾಕಶಾಲೆ, ಕಣ್ಣೆದುರೆ ಮಾಡಿಕೊಡುವ ಕೇಕ್ಗಳು ಮುಂತಾದ ವಿಶಿಷ್ಟತೆಗಳನ್ನು ಹೊಂದಿರುವ ಕೇಕ್ವಾಲ ಮತ್ತು ಈಶಾನ್ಯ ಸ್ಟ್ರೀಟ್ ಫುಡ್ ಕೆಫೆ ವಿಶೇಷತೆಯಾಗಿದೆ ಎಂದರು. ಗ್ರಾಹಕರ ಬಗ್ಗೆ ಹೆಚ್ಚು ಕಾಳಜಿ ವಹಿಸುವ ಮಯೂರ ಗ್ರೂಫ್ಸ್ ಶುಚಿತ್ವಕ್ಕೆ ಮೊದಲ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಂಡ್ಸೆ ತಿರುಮಲ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ , ಕಲಶಾಭಿಷೇಕ ಮತ್ತು ವಾರ್ಷಿಕ ಜಾತ್ರೆ ಸಂಪನ್ನಗೊಂಡಿತು. ವೇದಮೂರ್ತಿ ಶಾರ್ಕೆ ರಾಮಕೃಷ್ಣ ಭಟ್ ನೇತೃತ್ವದಲ್ಲಿ ಪಂಚವಿಂಶತಿ, ಕಲಶ ಸ್ಥಾಪನೆ , ಪರಿವಾರಕ್ಕೆ ಕಲಶ, ಅಧಿವಾಸ ಹೋಮ, ಕಲಾತತ್ವ ಹೋಮ ಮತ್ತು ನಾನಾ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಅದೇ ದಿನ ಮದ್ಯಾಹ್ನ 2.30ರಿಂದ ಯಕ್ಷಗಾನ ತಾಳಮದ್ದಲೆ ರಾವಣ ಮೋಕ್ಷ ಕಾರ್ಯಕ್ರಮ ಸಂಜೆ 7 ಗಂಟೆಯಿಂದ ಶ್ರೀ ರಾಘವೇಂದ್ರ ಭಜನಾ ಮಂಡಳಿ ವಂಡ್ಸೆಯ ತಂಡದಿಂದ ಭಜನಾ ಕಾರ್ಯಕ್ರಮ ಹಾಗೂ ರಾತ್ರಿ 8.30 ಕ್ಕೆ ರಂಗಪೂಜೆ ನಡೆಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದರೆ: ಔಷಧೀಯ ಸಸ್ಯಗಳ ಮಹತ್ವದ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಇಂತಹ ಬೆಲೆ ಬಾಳುವ ವಸ್ತುಗಳ ಬಗ್ಗೆ ಜ್ಞಾನ ಇರದಿದ್ದರೆ, ಅದನ್ನು ರಕ್ಷಣೆ ಮಾಡಲಾಗುವುದಿಲ್ಲ ಎಂದು ಐಎಫ್ಎಸ್ ಅಧಿಕಾರಿ, ಹೆಚ್ಚುವರಿ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಕರ್ನಾಟಕ ರಾಜ್ಯ ಔಷಧಿಯ ಸಸ್ಯಗಳ ಪ್ರಾಧಿಕಾರದ ಸಿಇಒ ಸುದರ್ಶನ್ ಜಿ.ಎ ಹೇಳಿದರು. ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಸಾಂಪ್ರದಾಯಿಕ ಔಷಧಗಳ ಆರ್ಕೈವ್ (ಎಟಿಎಂಎ) ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಕರ್ನಾಟಕ ರಾಜ್ಯ ಔಷಧೀಯ ಸಸ್ಯಗಳ ಪ್ರಾಧಿಕಾರದ ಸಹಯೋಗದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮುಂಚೂಣಿಯ ಅರಣ್ಯ ಸಿಬ್ಬಂದಿಗಳಿಗೆ ನಡೆದ ಔಷಧಿಯ ಸಸ್ಯಗಳ ಕುರಿತ ಮಾಹಿತಿ ಕಾರ್ಯಾಗಾರದ ಉದ್ಘಾಟಕರಾಗಿ ಮಾತನಾಡಿದ ಅವರು, ಅರಣ್ಯಾಧಿಕಾರಿಗಳು, ಅರಣ್ಯ ಸಿಬ್ಬಂದಿಗಳನ್ನು ಒಟ್ಟುಗೂಡಿಸಿ ಇಂತಹ ಮಾಹಿತಿ ಕಾರ್ಯಾಗಾರಗಳನ್ನು ಮಾಡುವುದು ಅವಶ್ಯಕ. ಈ ಮೂಲಕ ರೈತರಿಗೆ ಸಸ್ಯಗಳನ್ನು ನೀಡುವಾಗ ಅದರ ಮಹತ್ವ ಹಾಗೂ ಇದರಿಂದ ರೈತರಿಗೆ ಆಗುವ ಲಾಭಗಳ ಬಗ್ಗೆ ಮಾಹಿತಿ ನೀಡಬಹುದು’…
