ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: 2020-21 ನೇ ಸಾಲಿನಲ್ಲಿ ಡಾ| ಬಾಬು ಜಗಜೀವನ ರಾಮ ರವರ 113 ನೇ ಹಾಗೂ ಡಾ| ಬಿ.ಆರ್ ಅಂಬೇಡ್ಕರ್ ರವರ 129 ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಶಸ್ತಿ ನೀಡುವ ಬಗ್ಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೊತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ, 2020-21 ರ ಸಾಲಿನ ಡಾ| ಬಾಬು ಜಗಜೀವನ ರಾಮ ಹಾಗೂ ಡಾ| ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿರುತ್ತದೆ. ಜಿಲ್ಲೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳು ತಮ್ಮ ಸವಿವರವುಳ್ಳ ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆಯಿಂದ ಪಡೆದು ಭರ್ತಿ ಮಾಡಿ, ಮಾರ್ಚ್ 19 ರ ಒಳಗೆ ಉಪನಿರ್ದೇಶಕರು ಹಾಗೂ ಸದಸ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು. ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಮಾರ್ಚ್ 19 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಬೈಂದೂರು ತಾಲೂಕು ಕಚೇರಿ, ಮಾರ್ಚ್ 20 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಕಾಪು ತಾಲೂಕು ಕಚೇರಿ, ಮಾರ್ಚ್ 21 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಕುಂದಾಪುರ ಪ್ರವಾಸಿ ಮಂದಿರ, ಮಾರ್ಚ್ 23 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಕಾರ್ಕಳ ಪ್ರವಾಸಿ ಮಂದಿರ, ಮಾರ್ಚ್ 24 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಹೆಬ್ರಿ ತಾಲೂಕು ಕಚೇರಿ, ಮಾರ್ಚ್ 26 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಬ್ರಹ್ಮಾವರ ತಾಲೂಕು ಕಚೇರಿ, ಮಾರ್ಚ್ 30 ರಂದು ಬೆಳಿಗ್ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: 2019-20 ನೇ ಸಾಲಿನ ಸ್ವಯಂ ಉದ್ಯೋಗ, ಸಮೃದ್ಧಿ, ಉನ್ನತಿ, ಐರಾವತ, ಪ್ರೇರಣಾ, ಸ್ಪೂರ್ತಿ, ಭೂ ಒಡೆತನ, ಗಂಗಾ ಕಲ್ಯಾಣ ಯೋಜನೆಗಳಿಗೆ ಸಂಬಂಧಿಸಿದಂತೆ, ಅರ್ಹ ಸಫಾಯಿ ಕರ್ಮಚಾರಿ / ಮ್ಯಾನುವಲ್ ಸ್ಕಾವೆಂಜರ್ಸ್ ಹಾಗೂ ಅವರ ಅವಲಂಬಿತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳವರು ನಿಗಮದ ವೆಬ್ಸೈಟ್ www.ksskdc.kar.nic.in ಮುಖಪುಟ ಮೆನುವಿನಲ್ಲಿ ಆನ್ಲೈನ್ ಮೂಲಕ ಏಪ್ರಿಲ್ ೩೦ ರ ಒಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ ಇವರನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಆಶ್ರಯದಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿಜಯಾ ಕಾಲೇಜು, ಮೂಲ್ಕಿ ಇಲ್ಲಿನ ಪ್ರಾಧ್ಯಾಪಕರಾದ ಅಶ್ವಿನ್ ಎಂ ಅವರು ಮಾತನಾಡಿ ಸಂಸ್ಕೃತ ಭಾಷೆಯ ಹಾಗೂ ಸಂಸ್ಕೃತಿಯ ರಕ್ಷಕರಾಗೋಣ. ಸಂಸ್ಕೃತ ಭಾಷೆಯು ಭಾರತೀಯತೆಯನ್ನು ಉಳಿಸುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಸಂಸ್ಕೃತ ವಿಭಾಗ ಮುಖ್ಯಸ್ಥೆ ಡಾ.ಯಶವಂತಿ ಸ್ವಾಗತಿಸಿದರು. ಉಪನ್ಯಾಸಕಿ ಗಾಯತ್ರಿ ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಕೃತೋತ್ಸವ ಪ್ರಯುಕ್ತ ನಡೆದ ವಿವಿಧ ಸ್ಪರ್ಧಾ ವಿಜೇತರರಾದ ಮತ್ತು ಚಟುವಟಿಕೆಗಳಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿನಿ ಮೇಘನಾ ಪ್ರಭು ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಗ್ರಾಮ ಸರ್ಕಾರವನ್ನು ಸ್ಥಳೀಯ ಸ್ವಯಂ ಸರ್ಕಾರವಾಗಿ ರೂಪಿಸುವ ಮೂಲಕ ಗ್ರಾಮ ಸ್ವರಾಜ್ಯದ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವ ಬದಲು ಗ್ರಾಮ ಪಂಚಾಯತ್ ಮತ್ತು ಗ್ರಾಮಸಭೆಯ ಅಧಿಕಾರವನ್ನು ಕಿತ್ತುಕೊಂಡು ಇಡೀ ಪಂಚಾಯತ್ ರಾಜ್ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಹೊರಟಿರುವ ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ನಡೆಗಳನ್ನು ಕುಂದಾಪುರ ತಾಲೂಕು ಪಂಚಾಯತ್ ರಾಜ್ ಒಕ್ಕೂಟವು ತೀವ್ರವಾಗಿ ಖಂಡಿಸುತ್ತದೆ ಎಂದು ಪಂಚಾಯತ್ ರಾಜ್ ಒಕ್ಕೂಟದ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಹೇಳಿದರು. ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಸರ್ಕಾರದ ನಡೆಯ ಕುರಿತು ಚರ್ಚಿಸಲು ಕುಂದಾಪುರ ತಾಲೂಕು ಪಂಚಾಯತ್ ರಾಜ್ ಒಕ್ಕೂಟವು ಸೋಮವಾರ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಸಿತು. ಈಗ ಇರುವ ಗ್ರಾಮ ಸ್ವರಾಜ್ ಕಾಯ್ದೆಯು ಉತ್ತಮವಾದ ಕಾಯ್ದೆಯಾಗಿದ್ದು ಗ್ರಾಮ ಸ್ವರಾಜ್ ಸ್ಥಾಪನೆಗೆ ಪೂರಕವಾದ ಎಲ್ಲಾ ಅಂಶಗಳನ್ನು ಒಳಗೊಂಡಿದೆ. ಈ ಕಾಯ್ದೆಯ ತಿದ್ದುಪಡಿ ಸಮಯದಲ್ಲಿ ಕುಂದಾಪುರ ಪಂಚಾಯತ್ ರಾಜ್ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನವು…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಯಶಸ್ಸು ಸುಲಭಕ್ಕೆ ಸಿಗುವುದಿಲ್ಲ. ಅದರ ಹಿಂದೆ ತುಂಬಾ ಪರಿಶ್ರಮವಿದೆ. ಎಂದು ಪತ್ರಕರ್ತರಾದ ಲಕ್ಷ್ಮಿ ಮಚ್ಚಿನ ಅವರು ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಇಂಗ್ಲೀಷ್, ಮನಃಶಾಸ್ತ್ರ ಮತ್ತು ಪತ್ರಿಕೋದ್ಯಮ ವಿಭಾಗಗಳ ಸಹಯೋಗದಲ್ಲಿ ನಡೆದ ಸಂವೇದನಾ- ೨೦೨೦ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಸತತ ಪರಿಶ್ರಮ ಮತ್ತು ಕಾಯುವಿಕೆಯಲ್ಲಿ ಸಿಗುವಂತಹ ಅಪ್ಯಾಯಮಾನ ಖುಷಿ ಪರಿಪೂರ್ಣ ಯಶಸ್ಸಾಗಿದೆ. ಜೀವನದಲ್ಲಿ ಅವಕಾಶಗಳು ನಮಗೆ ಸಿಕ್ಕಾಗ ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಮತ್ತೆ ಆ ಅವಕಾಶಗಳು ನಮಗೆ ಒದಗಿ ಬರುವುದಿಲ್ಲ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ| ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಇಂಗ್ಲೀಷ್ ವಿಭಾಗ ಮುಖ್ಯಸ್ಥರಾದ ಮೀನಾಕ್ಷಿ ಎನ್,ಎಸ್ ಸ್ವಾಗತಿಸಿದರು. ಪತ್ರಿಕೋದ್ಯಮ ವಿಭಾಗದ ಸುಮಲತಾ ಪ್ರಾಸ್ರಾವಿಕವಾಗಿ ಮಾತನಾಡಿದರು. ಮನಃಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸವಿತಾ ಕೆ ವಂದಿಸಿದರು. ವಿದ್ಯಾರ್ಥಿನಿಯರಾದ ಕೀರ್ತಿ ಎಸ್, ಮೇಘನಾ ಪ್ರಭು ಮತ್ತು ಗೌತಮಿ ಗಾಣಿಗ ಅನಿಸಿಕೆ ವ್ಯಕ್ತಪಡಿಸಿದರು. ವಿದ್ಯಾರ್ಥಿನಿ ಪ್ರಿಯಾ ಮಂಜ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2019 ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಲೇಖಕರ ವಯೋಮಿತಿಯನ್ನು 18 ರಿಂದ 40 ವರ್ಷಕ್ಕೆ ಹೆಚ್ಚಿಸಲಾಗಿದೆ. ಅರ್ಜಿಗಳನ್ನು ಏಪ್ರಿಲ್ 15 ರ ಒಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು, ಇವರಿಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು, ದೂರವಾಣಿ ಸಂಖ್ಯೆ: 080-22484516 / 22017704 ನ್ನು ಸಂಪರ್ಕಿಸುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕೊರೊನಾ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಮುಂಜಾಗೃತ ಕ್ರಮವಾಗಿ ಸರಕಾರದ ಆದೇಶದಂತೆ ಉಡುಪಿ ಜಿಲ್ಲೆಯಲ್ಲಿ ಎಪ್ರಿಲ್ 4 ರಿಂದ 14 ರ ವರೆಗೆ ಹಮ್ಮಿಕೊಳ್ಳಲಾಗಿದ್ದ ಸೇನಾ ನೇಮಕಾತಿ ರ್ಯಾಲಿಯನ್ನು ರದ್ದುಗೊಳಿಸಿ, ಜನವರಿ 2021 ಕ್ಕೆ ಮುಂದೂಡಲಾಗಿದೆ. ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಅರ್ಜಿಯನ್ನು ಜನವರಿ 2021 ರ ಸೇನಾ ರ್ಯಾಲಿಯಲ್ಲಿ ಪರಿಗಣಿಸಲಾಗುತ್ತದೆ ಹಾಗೂ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಯ ಅರ್ಹತಾ ಮಾನದಂಡಗಳಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ, ಅಭ್ಯರ್ಥಿಗಳಲ್ಲಿ ಯಾವುದೇ ಗೊಂದಲ ಬೇಡ ಎಂದು ಮಂಗಳೂರು ಸೇನಾ ನೇಮಕಾತಿಯ ನಿರ್ದೇಶಕ ಕರ್ನಲ್ ಎಫ್.ಪಿ ದುಬಾಶ್ ಮಾಹಿತಿ ನೀಡಿದರು. ಅವರು ಸೋಮವಾರ ಡಾ| ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಸೇನಾ ನೇಮಕಾತಿ ರ್ಯಾಲಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿ, ಸೇನಾ ರ್ಯಾಲಿಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬಿಲ್ಲವ ಅಸೋಸಿಯೇಶನ್ ಬೆಂಗಳೂರು ರಿ. ನೇತೃತ್ವದಲ್ಲಿ ಬೈಂದೂರು ತಾಲೂಕು ಬಿಲ್ಲವರ ಸಂಘದ ಸಹಯೋಗದೊಂದಿಗೆ ಎ.19ರ ಭಾನುವಾರ ನಾಗೂರಿನ ಸಾಗರ ಸಭಾ ಭವನದಲ್ಲಿ ವಧು-ವರ ಅನ್ವೇಷಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸೋಮವಾರ ಬೈಂದೂರು ಪ್ರೆಸ್ಕ್ಲಬ್ನಲ್ಲಿ ಬೆಂಗಳೂರು ಬಿಲ್ಲವ ಅಸೋಸಿಯೇಶನ್ ಅಧ್ಯಕ್ಷ ಎಂ. ವೇದಕುಮಾರ್ ಮಾತನಾಡಿ, ಬೆಂಗಳೂರಿನಲ್ಲಿ ಪ್ರತಿವಾರ ವಧುವರ ಅನ್ವೆಷಣೆ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ದೂರದ ಊರುಗಳಿಂದ ಬರುವ ವಧು-ವರರು ಮತ್ತು ಅವರ ಹೆತ್ತವರಿಗೆ ತಂಗಲು ಸರಿಯಾದ ವ್ಯವಸ್ಥೆಯಿಲ್ಲದೆ ಆಗುತ್ತಿರುವ ಅನಾನುಕೂಲ ಹಾಗೂ ಆರ್ಥಿಕ ತೊಂದರೆಯನ್ನು ಗಮನಿಸಿ ಮಂಗಳೂರು, ಕಾಸರಗೋಡು, ಶಿವಮೊಗ್ಗ, ಉಡುಪಿ, ಕುಂದಾಪುರ ಮೊದಲಾದೆಡೆ ಪ್ರತ್ಯೇಕವಾಗಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಮೊದಲ ಭಾರಿಗೆ ಬೈಂದೂರು ತಾಲೂಕಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಸರಳ ಮದುವೆ, ದುಂದುವೆಚ್ಚ ಕಡಿತ, ವಧು-ವರರಲ್ಲಿ ಸಮನ್ವಯತೆಯ ಕೊರತೆ ನಿವಾರಿಸುವುದು ಮೊದಲಾದ ಸದುದ್ದೇಶಗಳೊಂದಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಬಿಲ್ಲವ ಸಮಾಜದ ವಧು ವರರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ಬಿಲ್ಲವ ಅಸೋಸಿಯೇಶನ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಬದುಕಿಗೆ ವಿಮುಖವಾಗಿ ಕಾರಂತರು ಇದ್ದವರಲ್ಲ. ಕಾರಂತರನ್ನು ಚಿರಸ್ಥಾಯಿಯನ್ನಾಗಿ ಉಳಿಸಿಕೊಳ್ಳುವುದಕ್ಕೆ ಸಂಘ ಸಂಸ್ಥೆಗಳನ್ನು ಕಟ್ಟುವ ಅಗತ್ಯವಿಲ್ಲ. ಅವರ ಸಾಹಿತ್ಯ ಕೃತಿಗಳೇ ಅವರನ್ನು ಚಿರಾಯುವಾಗಿ ಉಳಿಸುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಮ್ ಮೋಹನ್ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಶಿವರಾಮ ಕಾರಂತ ಪ್ರತಿಷ್ಠಾನ, ಮೂಡುಬಿದಿರೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ನಡೆದ ಶಿವರಾಮ ಕಾರಂತ ಪ್ರಶಸ್ತಿ, ಶಿವರಾಮ ಕಾರಂತ ಪುರಸ್ಕಾರ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಕೋಟ ಶಿವರಾಮ ಕಾರಂತರು ಸಾಹಿತ್ಯ ಕ್ಷೇತ್ರದಲ್ಲಿ ಪ್ರಭಾವಿಸಿದ ಪರಿ ದೊಡ್ಡದು. ವಿಚಾರ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದವರು ಕಾರಂತರು. ಅವರದ್ದು ಅಂಕುಶವಿಲ್ಲದ ವೈಚಾರಿಕ ಪ್ರಜ್ಞೆ. ಎಂದಿಗೂ ಜಾತಿ, ಧರ್ಮವನ್ನು ಭಿನ್ನತೆಯನ್ನು ಬೆಂಬಲಿಸಿದವರಲ್ಲ. ಕಾರಂತರ ಚಿಂತನೆ, ಸಾಹಿತ್ಯ ಎಂದಿಗೂ ಪ್ರಸ್ತುತ. ಅವರ ಜೀವನಾದರ್ಶವೇ ನಮ್ಮ ಬದುಕಿಗೆ ಪಾಠ ಎಂದರು. ಶಿವರಾಮ ಕಾರಂತ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಹಿರಿಯ ಸಾಹಿತಿ…
