Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸೇವಾ ಸಂಗಮ ಶಿಶು ಮಂದಿರ ಮತ್ತು ಕಿರಿ ಭಜನಾ ಮಂಡಳಿಯ ಆಶ್ರಯದಲ್ಲಿ ಯೋಗ ಶಿಕ್ಷಕಿ ಕುಮಾರಿ ಗಗನಾ ಅವರಿಂದ ಮಹಿಳೆಯರಿಗೆ 21 ದಿನಗಳ ಯೋಗ ತರಭೇತಿ ಶಿಬಿರವನ್ನು ಪ್ರಾರಂಭಿಸಲಾಯಿತು. ಇದರ ಉದ್ಘಾಟನೆಯನ್ನು ಸೇವಾ ಸಂಗಮ ಶಿಶು ಮಂದಿರ ಬೈಂದೂರು ಇದರ ವ್ಯವಸ್ಥಾಪಕರಾದ ದಿನೇಶ್ ಕೆ ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು. ಶಿಶು ಮಂದಿರದ ಅಧ್ಯಕ್ಷರಾದ ಮಂಜುನಾಥ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಯೋಗ ಎಂದರೆ ಮನಸ್ಸು ಮತ್ತು ದೇಹವನ್ನು ಒಂದುಗೂಡಿಸುವ ಕ್ರಿಯೆ. ನಾವು ಸದಾ ಕ್ರೀಯಾಶೀಲರಾಗಿರ ಬೇಕಾದರೆ ಮತ್ತು ನಿರೋಗಿಯಾಗಿರ ಬೇಕಾದರೆ ಪ್ರತಿನಿತ್ಯ ಯೋಗ ಮಾಡುವುದರಿಂದ ಮಾತ್ರ ಸಾಧ್ಯ. ಎಂದು ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಡಿದರು. ಭಜನಾ ಮಂಡಳಿಯ ಅಧ್ಯಕ್ಷರಾದ ಸುಜಾತಾ ರಾವ್ ಸ್ವಾಗತಿಸಿದರು. ಕಾರ್ಯದರ್ಶಿಯವರಾದ ಆಶಾ ದಿನೇಶ್ ವಂದಿಸಿದರು ಮತ್ತು ಶಿಶು ಮಂದಿರದ ಉಪಾಧ್ಯಕ್ಷರಾದ ರವೀಂದ್ರ ಶಾನುಭೋಗ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿಶು ಮಂದಿರದ ಮಾತಾಜೀ ಕುಮಾರಿ ನಯನ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ಷೇತ್ರ ಪುರಾಣ ಇತಿಹಾಸವನ್ನು ಸಂಗ್ರಹಿಸಿ ರಂಗದಲ್ಲಿ ಸಾಕ್ಷಾತ್ಕಾರಗೊಂಡಾಗ ಕ್ಷೇತ್ರದ ಮಹಿಮೆ ಸಾರುವ ಜೊತೆಗೆ ನಮ್ಮ ಕಲೆ ಮತ್ತು ಸಂಸ್ಕೃತಿ ಭದ್ರವಾಗಿ ನೆಲೆಗೊಂಡು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ ಶ್ಲಾಘನೀಯ ಎಂದು ಡಾ.ರಾಜೇಶ್ ಕುಮಾರ ಶೆಟ್ಟಿ ಹೇಳಿದರು. ಅವರು ಕಾಳಾವರ ಶ್ರೀ ದೇವಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಹರಿದಾಸ ಕೆ.ಕೆ.ಕಾಳಾವರ್‌ಕಾರ್ ಅವರ ಕಥಾ ಚಿಂತನ‘ ಸಂಧ್ಯಾಶ್ರಯ’ ಮತ್ತು ಅವರು ರಚಿಸಿದ ಕಚ್ಚೂರು ಶ್ರೀ ಮಾಲ್ತಿ ದೇವಿ ಮಹಿಮೆ ಯಕ್ಷಗಾನ ಕೃತಿ ಬಿಡುಗಡೆ ಮತ್ತು ಪ್ರದರ್ಶನದ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತಾಡಿದರು. ಉಪನ್ಯಾಸಕ ಸುಧಾಕರ ವಕ್ವಾಡಿ ಪ್ರಸಂಗ ಪ್ರದರ್ಶನ ಉದ್ಘಾಟಿಸಿದರು. ಕುಂದಾಪುರದ ವಕೀಲರಾದ ಸತೀಶ್ಚಂದ್ರ ಕಾಳಾವರ್‌ಕಾರ್ ಪ್ರಸಂಗ ಕೃತಿ ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಶ್ರೀ ಹಟ್ಟಿಯಂಗಡಿ ಮೇಳದ ಯಜಮಾನ ರಂಜಿತ್ ಕುಮಾರ್ ಶೆಟ್ಟಿ ವಕ್ವಾಡಿ, ವಾದ್ಯ ವೃಂದ ಕಲಾತಂಡದ ಮಂಜುನಾಥ ದೇವಾಡಿಗ ಪ್ರಸಂಗ ಕರ್ತ ಹರಿದಾಸ್.ಕೆ.ಕೆ ಕಾಳಾವರ್‌ಕಾರ್ ಇವರನ್ನು ಊರಿನ ನಾಗರಿಕರು ಮತ್ತು ಮೇಳದ ವತಿಯಿಂದ ಸನ್ಮಾನಿಸಲಾಯಿತು. ಕೆ.ಕೆ.ಕಾಳಾವರ್‌ಕಾರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ನಾವುಂದ: ಜಯ ಕರ್ನಾಟಕ ಜಿಲ್ಲಾ ಯುವ ಘಟಕ ಮತ್ತು ಬೈಂದೂರು ತಾಲೂಕು ಯುವ ಘಟಕದ ಉದ್ಘಾಟನಾ ಸಮಾರಂಭ ಹಾಗೂ ಪದಗ್ರಹಣ ಸಮಾರಂಭ ನಾವುಂದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ನಡೆಯಿತು. ಜಯ ಕರ್ನಾಟಕದ ಸಂಘಟನೆಯ ರಾಜಾಧ್ಯಕ್ಷ ಎಚ್.ಎಸ್.ದೀಪಕ್ ಉದ್ಘಾಟಿಸಿ ಮಾತನಾಡಿ, ಯುವ ಘಟಕವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಎಚ್.ಎಸ್.ದೀಪಕ್, ನಮ್ಮ ಹಕ್ಕುಗಳನ್ನು ಪಡೆಯಬೇಕಾದರೆ ಸಂಘಟನೆ ಬಲಿಷ್ಠವಾಗಿರಬೇಕು. ಜಯ ಕರ್ನಾಟಕ ಸಂಘಟನೆ ಉತ್ತಮ ಸಂಘಟನೆಯಾಗಿದ್ದು, ಸಾಮಾನ್ಯ ಜನರಿಗೆ ನ್ಯಾಯ ಒದಗಿಸಲು ಹೋರಾಟಗಳನ್ನು ನಡೆಸಿಕೊಂಡು ಬರುತ್ತಿದೆ ಎಂದರು. ಸರಕಾರಿ ಆಸ್ಪತ್ರೆಗಳಲ್ಲಿ ಗರಿಷ್ಠ ಸೌಲಭ್ಯಕ್ಕಾಗಿ ಹೋರಾಟ ನಡೆಸಿದ ಪರಿಣಾಮ ಇಂದು ಸರಕಾರ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ವಿಶೇಷ ಆರೋಗ್ಯ ಪ್ಯಾಕೆಜ್ ಒದಗಿಸಿದೆ. ಈ ಸಂಘಟನೆಯ ಶಾಲನ್ನು ನೋಡಿದರೆ ಭ್ರಷ್ಟ ಅಧಿಕಾರಿ ವರ್ಗದವರು ಭಯಪಡುತ್ತಿದ್ದಾರೆ ಇದು ನಮ್ಮ ಸಂಘಟನೆಯಿಂದ ಸಾಧ್ಯವಾಗಿದೆ. ರಾಜ್ಯದ ಯಾವುದೇಪ್ರದೇಶದಲ್ಲಿ ನಮ್ಮ ಸದಸ್ಯರಿಗೆ ಅನ್ಯಾಯವಾದಲ್ಲಿ ತ್ವರಿತವಾಗಿ ಸ್ಪಂದಿಸುತ್ತೇವೆ ಎಂದರು. ಸಮಾರಂಭ ಅಧ್ಯಕ್ಷತೆಯನ್ನು ಜಯಕರ್ನಾಟಕ ಜಿಲ್ಲಾಧ್ಯಕ ಅಧ್ಯಕ್ಷ ಹಾಗೂ ಆಶ್ರಯದಾತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಂದು ದೇವರಾಜ ಅರಸು ಕರ್ನಾಟಕದ ಮುಖ್ಯಮಂತ್ರಿಯಾಗಿ ಉಳುವವನೇ ಹೊಲದೊಡೆಯ ಖಾಯಿದೆಯನ್ನು ಜಾರಿಗೊಳಿಸಿ ಭೂಮಿಯ ಹಕ್ಕನ್ನು ಬಡ ಗೇಣಿದಾರರಿಗೆ ನೀಡುವ ಮೂಲಕ ಆ ವರ್ಗಕ್ಕೆ ಭೂಮಾಲೀಕರ ಶೋಷಣೆಯಿಂದ ಮುಕ್ತಿ ಕೊಡಿಸಿ ಸ್ವಾವಲಂಭಿ ಬದುಕು ಬದುಕಲು ಹಾದಿ ಮಾಡಿಕೊಟ್ಟರೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ಅರ್ಧ ಗಂಟೆಯಲ್ಲಿ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಅನಾಥ ವೃದ್ಧರು, ಅಂಗವಿಕಲರು, ಖಾಯಿಲೆ ಪೀಡಿತರು, ಮಕ್ಕಳಿಲ್ಲದ ವಿಧವೆಯರು ಮುಂತಾದವರು ತಮ್ಮ ಹಸಿವು ನೀಗಿಸಿಕೊಳ್ಳಲು ಇನ್ನೊಬ್ಬರ ಮುಂದೆ ಕೈ ಚಾಚದೇ ಸ್ವಾಭಿಮಾನಿ ಬದುಕು ಬದುಕಲು ಹಾದಿ ಮಾಡಿಕೊಟ್ಟಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಓದುವ ಬಡವರ್ಗದ ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದೆಂದು ಕ್ಷೀರಭಾಗ್ಯ ಯೋಜನೆ ಜಾರಿಗೊಳಿಸಿದ್ದಾರೆ. ದೇಶಕ್ಕೆ ಅನ್ನ ಕೊಡುವ ರೈತ ಸತತ ಭರದಿಂದ ಕಂಗೆಟ್ಟು ಆತ್ಮಹತ್ಯೆಗೆ ತೊಡಗಿದಾಗ ಅವರ ೫೦,೦೦೦ ತನಕದ ಕೃಷಿ ಸಾಲ ಮನ್ನಾ ಮಾಡಿದ್ದಾರೆ. ಸ್ವತಂತ್ರ ಭಾರತದಲ್ಲಿ ಶೋಷಿತರ, ಧಮನಿತರ ಪರ ಯೋಜನೆಗಳನ್ನು ನೀಡಿದ ಏಕೈಕ ಪಕ್ಷ ಭಾರತೀಯ ರಾಷ್ಟ್ರೀಯ ಕಾಂಗ್ರೇಸ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮತದಾನವೆಂಬುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಎಂಬ ಅರಿವು ಮಾಯವಾಗಿದೆ. ದೂರವಾಗುತ್ತಿದೆ. ಚುನಾವಣೆ ಅಭ್ಯಥಿಯಾಗಬೇಕಾದರೇ ಹಣ ಬೇಕು ಎಂಬ ಭಾವನೆ ಎಲ್ಲರಲ್ಲಿಯೂ ಇದ್ದು, ಜನರಲ್ಲಿನ ಈ ಮನಸ್ಥಿತಿ ಬದಲಾಗಬೇಕಿದೆ. ಹಣದ ಬದಲಿಗೆ ಅರ್ಹತೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆರಿಸುವ ಕೆಲಸವಾದಾಗ ಪ್ರಜಾಪ್ರಭುತ್ವಕ್ಕೊಂದು ಅರ್ಥ ಬರುತ್ತದೆ ಎಂದು ನಿರ್ದೇಶಕ, ನಟ ರಾಜ್ ಬಲ್ಲಾಳ್ ಹೇಳಿದರು. ಅವರು ಬೈಂದೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಮತದಾನವೆಂಬುದು ಅಮೂಲ್ಯವಾದ ಕರ್ತವ್ಯ. ಒಂದು ಮತದಿಂದ ಏನೂ ಆಗದು ಎನ್ನುವ ಬದಲು ಅದೇ ಒಂದು ಮತ ಒಬ್ಬ ಅರ್ಹ ಅಭ್ಯರ್ಥಿಯನ್ನು ಗೆಲ್ಲುವಂತೆ ಇಲ್ಲವೇ ಸೋಲುವಂತೆ ಮಾಡಬಹುದು ಎಂಬ ಅರಿವೂ ಜನಸಾಮಾನ್ಯರಲ್ಲಿಯೂ ಮೂಡಬೇಕು. ಹಣ ಹಾಗೂ ಇತರೇ ಆಮಿಷಗಳಿಗೆ ಬಲಿಯಾಗದೇ ಅರ್ಹರು ಆಯ್ಕೆಯಾಗುವಂತೆ ಆಗಬೇಕು ಎಂಬ ಉದ್ದೇಶದಿಂದ ಮತದಾರರ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ರಾಜ್ಯದ ವಿವಿಧೆಡೆಗಳಲ್ಲಿ ಮತದಾರರ ಜಾಗೃತಿ ಅಭಿಯಾನ ಕೈಗೊಳ್ಳುವ ಉದ್ದೇಶವಿದ್ದು ಬೈಂದೂರು ವಿಧಾನಸಭಾ ಕ್ಷೇತ್ರದಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವೇಗದ ಹಾಗೂ ತಾಂತ್ರಿಕ ಬದುಕಿನ ನಡುವೆ ಭಾವನಾತ್ಮಕ ಸಂಬಂಧಗಳು ದೂರವಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಕುರಿತು ನೈತಿಕವಾದ ಮಾರ್ಗದರ್ಶನ ನೀಡಬೇಕಾದ ಅನಿವಾರ್ಯತೆಯಿದೆ. ಶಾಲೆಯಲ್ಲಿ ದೊರೆಯುವ ಸರಕಾರಿ ಸೌಲಭ್ಯಗಳನ್ನು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಪಂ ಸದಸ್ಯ ಶಂಕರ ಪೂಜಾರಿ ಹೇಳಿದರು. ಕಾಲ್ತೋಡು ಗ್ರಾಪಂ ವ್ಯಾಪ್ತಿಯ ಕಪ್ಪಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿ ಉದ್ಘಾಟಿಸಿ ಮಾತನಾಡಿದರು. ಸಭಾಧ್ಯಕ್ಷತೆವಹಿಸಿದ್ದ ಜಿಪಂ ಶಿಕ್ಷಣ ಹಾಗೂ ಆರೋಗ್ಯಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಮಾತನಾಡಿ, ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ದಿ ಶಿಕ್ಷಣದ ಗುರಿಯೆನಿಸಿದೆ. ಅದರ ಸಾಧನೆಗೆ ವಿದ್ಯಾರ್ಥಿ, ಶಿಕ್ಷಕ, ಪೋಷಕರ ಸಂಯೋಜಿತ ತ್ರಿಕೋನ ಸ್ಪಂದನೆ ಜತೆಗೆ ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಪಡಿಸುವ ಶಿಕ್ಷಣಾಭಿಮಾನಿಗಳು ಕೂಡಾ ಆಸಕ್ತಿವಹಿಸಿದರೆ ಮಾತ್ರ ಶಿಕ್ಷಣ ಸಂಸ್ಥೆಗಳು ಸುಸ್ಥಿತಿಯಲ್ಲಿ ಮುಂದುವರಿಯಲು ಸಾಧ್ಯ. ಪೋಷಕರು ಮಕ್ಕಳ ಭವಿಷ್ಯವನ್ನು ಶಾಲೆ ಮತ್ತು ಶಿಕ್ಷಕರಿಗೆ ಒಪ್ಪಿಸಿ ನಿಶ್ಚಿಂತರಾಗುವಂತಿಲ್ಲ. ಅವರು ಮಕ್ಕಳಿಗೆ ಒಳ್ಳೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಮಮತಾರನ್ನು ಮಾ.೦೫ರಂದು ಶಾಲೆಯಲ್ಲಿ ರಾತ್ರಿ ೮ರ ತನಕ ಕೂಡಿಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಲ್ಲದೇ ಇವರ ಮೇಲೆ ದೌರ್ಜನ್ಯ ಎಸಗಿ ದೈಹಿಕ ಹಲ್ಲೆ ಮಾಡಿದ್ದನ್ನು ಖಂಡಿಸಿ ಗುರುವಾರ ಶಾಲಾ ಸಮಯದ ನಂತರ ವಲಯದ ಶಿಕ್ಷಕ ಹಾಗೂ ಶಿಕ್ಷಕಿಯರು ಮತ್ತು ಸರ್ಕಾರಿ ನೌಕರರು ಕೈಗೆ ಕಪ್ಪು ಪಟ್ಟಿ ಧರಿಸಿ ತಮಗೆ ರಕ್ಷಣೆ ನೀಡುವಂತೆ ಕೋರಿ ತಾಲೂಕು ಕಛೇರಿ ಮುಂದೆ ಮೌನ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ, ಈ ಘಟನೆಯಿಂದ ವಲಯ ಸರ್ಕಾರಿ ನೌಕರರು ತಮ್ಮ ಕರ್ತವ್ಯ ನಿರ್ವಹಿಸಲು ಹೆದರುವಂತಹ ವಾತಾವರಣ ನಿರ್ಮಾಣವಾಗಿದೆ. ಅಲ್ಲದೇ ಮಾರ್ಚ್ ೭ರಂದು ಕೂಡಾ ವಿದ್ಯಾರ್ಥಿಗಳನ್ನು ಶಾಲೆಯ ಹೊರಗೆ ನಿಲ್ಲಿಸಿ ಕರ್ತವ್ಯ ನಿರತ ಶಿಕ್ಷಕರಿಗೆ ಅಡ್ಡಿಪಡಿದ್ದು ಕೂಡಾ ಕಾನೂನಿಗೆ ವಿರುದ್ಧವಾಗಿದೆ. ಎಸ್‌ಡಿಎಂಸಿ ಯವರು ಶಾಲೆಯ ರಜಾ ದಿನಗಳಲ್ಲಿಯೂ ಶಿಕ್ಷಕಿಯರಿಗೆ ಬರಹೇಳಿ ಮಾನಸಿಕವಾಗಿ ತೊಂದರೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಂಗಳೂರಿನ ಜಾನ್ಸನ್ ಕ್ರಿಕೆಟ್ ಕ್ಲಬ್‌ನ ೧೫ ನೇ ವರ್ಷಾಚರಣೆ ಪ್ರಯುಕ್ತ ಕುಂದಾಪುರದ ಗಾಂಧಿ ಮೈದಾನದಲ್ಲಿ ಆಯೋಜಿಸಿದ ಎರಡು ದಿನಗಳ ರಾಜ್ಯ ಮಟ್ಟದ ‘ಜಾನ್ಸನ್ ಟ್ರೋಫಿ’ ಕ್ರಿಕೆಟ್ ಪಂದ್ಯಾಟವನ್ನು ರಾತ್ರಿ ದಾಂಡೇಲಿಯ ಉದ್ಯಮಿ ಪ್ರಕಾಶ್ ಶೆಟ್ಟಿ ಗೈನಾಡಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ದೈನಂದಿನ ಬದುಕಿನಲ್ಲಿ ಕ್ರೀಡೆ ಮಹತ್ವದ ಪಾತ್ರ ವಹಿಸಿದ್ದು, ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ ಎಂದವರು ಹೇಳಿದರು. ಕ್ರೀಡಾ ಅಕಾಡೆಮಿ ಸ್ಥಾಪನೆ ಇಲ್ಲಿಯೂ ರಾಜ್ಯ, ರಾಷ್ಟ್ರ ಮಟ್ಟವನ್ನು ಪ್ರತಿನಿಧಿಸುವಂತಹ ಉತ್ತಮ ಕ್ರೀಡಾ ಪಟುಗಳಿದ್ದು, ಆದರೆ ಅವರಿಗೆ ಪ್ರೋತ್ಸಾಹದ ಕೊರತೆಯಿದೆ. ಅದಕ್ಕಾಗಿ ಕುಂದಾಪುರದಲ್ಲಿ ಕ್ರೀಡಾ ಅಕಾಡೆಮಿ ಸ್ಥಾಪಿಸಿದರೆ ಪ್ರಯೋಜನವಾಗಲಿದೆ. ಅದಕ್ಕೆ ಬೇಕಾದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಬಿಜೆಪಿ ರಾಜ್ಯ ಕಾರ‍್ಯಕಾರಣಿ ಸದಸ್ಯ ಬಿ.ಎಂ. ಸುಕುಮಾರ್ ಶೆಟ್ಟಿ ಭರವಸೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಶಿಕ್ಷಣದ ಜತೆಗೆ ಕಲೆ, ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದರೆ ನಿಮ್ಮ ಬೆಳವಣಿಗೆಗೆ ಇನ್ನಷ್ಟು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದ ಶಾಸಕ ವಿನಯ್ ಕುಮಾರ್ ಸೊರಕೆಯವರು ತಮ್ಮ ಕ್ಷೇತ್ರಕ್ಕೆ ಸರಕಾರದಿಂದ ೧೮೦೦ ಕೋಟಿ ರೂ.ಗೂ ಮೀರಿ ಅನುದಾನವನ್ನು ತಂದರೆ, ಉಡುಪಿ ಕ್ಷೇತ್ರದ ಶಾಸಕ ಪ್ರಮೋದ್ ಮಧ್ವರಾಜ್ ಅವರು 1900 ಕೋಟಿ ಗೂ ಮೀರಿ ಅನುದಾನ ತಂದಿದ್ದಾರೆ. ಹಾಗೆಯೇ ಬೈಂದೂರಿನ ಶಾಸಕ ಗೋಪಾಲ ಪೂಜಾರಿಯವರು ೧೮೦೦ ಕೋಟಿಗೂ ಹೆಚ್ಚು ಅನುದಾನವನ್ನು ಕ್ಷೆತ್ರದ ಅಭಿವೃದ್ಧಿಗೆ ವ್ಯಯಿಸಿದ್ದಾರೆ. ಆದರೆ ಕುಂದಾಪುರ ಕ್ಷೇತ್ರದ ಶಾಸಕರು ಹೆಚ್ಚುವರಿ ಅನುದಾನ ತರಲು ಯಾವುದೇ ಪ್ರಯತ್ನ ಪಡದ ಕಾರಣಕ್ಕೆ ಈ ಕ್ಷೇತ್ರ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದೆ. ಇಲ್ಲಿಗೆ ಬಂದ ಅನುದಾನ ೨೦೦ ಕೋಟಿಗೂ ಮೀರಿಲ್ಲದಿರುವುದು ನಮ್ಮ ಮಾಜಿ ಶಾಸಕ ಹಾಲಾಡಿಯವರು ಅದೆಷ್ಟು ನಿಷ್ಕ್ರೀಯರು ಎನ್ನುವುದನ್ನು ಪ್ರತಿಭಿಂಬಿಸುತ್ತದೆ ಎಂದು ಕಾಂಗ್ರೇಸ್ ಪ್ರಚಾರ ಸಮಿತಿ ಅಧ್ಯಕ್ಷ ವಿಕಾಸ್ ಹೆಗ್ಡೆ ಹೇಳಿದ್ದಾರೆ. ಅವರುಆನಗಳ್ಳಿಯಲ್ಲಿ ನಡೆದ ಹಂಗಳೂರು ತಾಲೂಕು ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಯುವ ಮುಖಂಡ ಕೋಡಿ ಸುನಿಲ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇದುವರೆಗೂ ಯಾವ ಮುಖ್ಯ ಮಂತ್ರಿಗಳಿಗೂ ಟಿಪ್ಪು ನೆನಪಾಗಲಿಲ್ಲ. ಸಿದ್ದರಾಮಯ್ಯ ಮೈಯಲ್ಲಿ ಟಿಪ್ಪು ರಕ್ತ ಹರಿಯುತ್ತಿದೆ ಎನ್ನುವ ಹಾಗೆ ಕ್ರೂರಿ, ಮತಾಂಧರಿ, ಹಿಂದೂ ವಿರೋಧಿ, ಟಿಪ್ಪು ಜಯಂತಿಯನ್ನು ಆಚರಿಸಿದ್ದರು. ಮುಸ್ಲಿಂರ ಓಟಿಗಾಗಿ, ಅವರನ್ನು ಸಂತೃಪ್ತಿಪಡಿಸುವುದಕ್ಕಾಗಿ ಮುಗ್ಧ ಮುಸ್ಲಿಂರ ಮೇಲಿನ ಕೇಸುಗಳನ್ನು ವಾಪಾಸು ತೆಗೆದುಕ್ಕೊಳ್ಳುತ್ತವೆ ಎನ್ನುತ್ತಾರೆ ಹಾಗಾದರೆ ನೀವು ಅಮಾಯಕರ ಮೇಲು ಕೇಸು ದಾಖಲಿಸುತ್ತಿದ್ದಿರಾ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಈಶ್ವರಪ್ಪ ರಾಜ್ಯ ಸರಕಾರವನ್ನು ಪ್ರಶ್ನಿಸಿದರು. ಮಂಗಳೂರು ಚಲೋ ಜನ ಸುರಕ್ಷಾ ಯಾತ್ರೆಯ ಅಂಗವಾಗಿ ಉಪ್ಪುಂದದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಕೋಮುವಾದ ಸಹಿಸಲ್ಲ, ಅಗತ್ಯಬಿದ್ದರೆ ಆರ್‌ಎಸ್‌ಎಸ್‌ನ್ನು ಮಟ್ಟ ಹಾಕುತ್ತೇನೆ ಎಂದು ಸಿಎಂ ಬೊಬ್ಬಿಡತ್ತಿದ್ದಾರೆ, ಆದರೆ ಇಂದಿರಾ ಗಾಂಧಿಗೆ ಆರ್‌ಎಸ್‌ಎಸ್‌ನ್ನು ಮಟ್ಟ ಹಾಕಲು ಸಾಧ್ಯವಾಗಿಲ್ಲ, ಈಗ ನಿಮ್ಮಿಂದ ಆಗುತ್ತದೆಯೇ ಎಂದು ಪ್ರಶ್ನಿಸಿದರು. ಸಿದ್ಧರಾಮಯ್ಯಗೆ ಬೇಕಾಗಿರುವುದು ಕುರ್ಚಿ, ಯಾವುದೇ ರಾಷ್ಟ್ರ ಭಕ್ತರು ಕೊಲೆಯಾದರು ಬೇಸರವಿಲ್ಲ, ಹಿಂದು-ಮುಸ್ಲಿಂ ಹೊಡೆದಾಡಿದರು ಚಿಂತೆ ಇಲ್ಲ, ಕರ್ನಾಟಕದ ಆರೂವರೆ…

Read More