ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯ ಬೈಂದೂರು, ಕುಂದಾಪುರ, ಕಾರ್ಕಳ, ಬ್ರಹ್ಮಾವರ ಶೈಕ್ಷಣಿಕ ವಲಯಗಳಲ್ಲಿ ತಲಾ 2 ರಂತೆ ಪ್ರೌಢಶಾಲಾ ಗ್ರೇಡ್ 2 ಶ್ರೇಣಿಯ ಮತ್ತು ಉಡುಪಿ ವಲಯದಲ್ಲಿ 1 ಹುದ್ದೆ ಒಟ್ಟು 9 ಹುದ್ದೆಗಳು ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಶ್ರೇಣಿಯ ತಲಾ 1 ರಂತೆ ಬೈಂದೂರು ಮತ್ತು ಉಡುಪಿ ಶೈಕ್ಷಣಿಕ ವಲಯಗಳಲ್ಲಿ ಒಟ್ಟು 2 ಹುದ್ದೆಗಳನ್ನು ಬಾಹ್ಯ ಸಂಪನ್ಮೂಲದಿಂದ ನೇರಗುತ್ತಿಗೆ ಆಧಾರದಲ್ಲಿ ವಿಶೇಷ ಸಂಪನ್ಮೂಲ ಶಿಕ್ಷಕ (ಬಿ.ಐ.ಇ.ಆರ್.ಟಿ) ರನ್ನು ನೇಮಕಮಾಡಿಕೊಳ್ಳುವರೇ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರೌಢಶಾಲಾ ವಿಭಾಗಕ್ಕೆ ರೆಗ್ಯುಲರ್ ಬಿ.ಇಡಿ ಜೊತೆಗೆ ವಿಶೇಷ ಬಿ.ಇಡಿ ಹಾಗೂ ಪ್ರಾಥಮಿಕ ವಿಭಾಗಕ್ಕೆ ವಿಶೇಷ ಡಿ.ಇಡಿ ತರಬೇತಿ ಪಡೆದ ಶಿಕ್ಷಕರು ಆರ್ಸಿಐ ನೋಂದಣಿ ಮಾಡಿದವರು, ಮಾರ್ಚ್ 5 ರ ಮಧ್ಯಾಹ್ನ 1.30 ರ ಒಳಗೆ ಪೂರ್ಣ ವಿವರಗಳು ಹಾಗೂ ದಾಖಲೆಗಳೊಂದಿಗೆ ತಮ್ಮ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಲಿಖಿತ ಅರ್ಜಿಯನ್ನು ಸಲ್ಲಿಸುವಂತೆ ಜಿಲ್ಲಾ ಸಮಗ್ರ ಶಿಕ್ಷಣ ಅಭಿಯಾನ ಸಾ. ಶಿ. ಇಲಾಖೆಯ ಉಪನಿರ್ದೇಶಕರು,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಹಂಗಾರಕಟ್ಟೆಯ ಚೇತನಾ ಪ್ರೌಢಶಾಲೆಯಲ್ಲಿ ಮಾರ್ಚ್ 14 ಮತ್ತು 15 ರಂದು ನಡೆಯುವ, ಉಡುಪಿ ಜಿಲ್ಲಾ 14 ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಪೂರ್ವಭಾವಿ ಸಭೆಯು ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು ಅವರ ಅಧ್ಯಕ್ಷತೆಯಲ್ಲಿ, ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಗತ್ಯವಿರುವ ಪೊಲೀಸ್, ಅಗ್ನಿಶಾಮಕ ಹಾಗೂ ಆರೋಗ್ಯ ವ್ಯವಸ್ಥೆ ಕುರಿತಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂದಪಟ್ಟ ಇಲಾಖೆಗಳಿಗೆ ಸೂಚಿಸಿದ ಅಪರ ಜಿಲ್ಲಾಧಿಕಾರಿ, ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರಿಗೆ ಓಓಡಿ ಸೌಲಭ್ಯ ನೀಡುವ ಕುರಿತಂತೆ ಹಾಗೂ ಸಮ್ಮೇಳನಕ್ಕೆ ಆಸಕ್ತ ಶಾಲಾ ಮಕ್ಕಳನ್ನು ಕರೆತರುವ ಕುರಿತಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಸಮ್ಮೇಳನದಲ್ಲಿ ಸುಮಾರು 2000 ಮಂದಿ ಭಾಗವಹಿಸಲಿದ್ದು, ಅವರ ಊಟೋಪಚಾರದ ಕುರಿತಂತೆ ಜಿಲ್ಲೆಯ ದೇವಾಲಯಗಳಿಂದ ಅಗತ್ಯ ನೆರವು ನೀಡಲಾಗುವುದು ಎಂದ ಅಪರ ಜಿಲ್ಲಾಧಿಕಾರಿ, ಸಮ್ಮೇಳನದಲ್ಲಿ ಯಾವುದೇ ಕೊರತೆಯಾಗದಂತೆ ಅಗತ್ಯ ಕ್ರಮ ವಹಿಸುವಂತೆ ಸಂಘಟಕರಿಗೆ ಸೂಚಿಸಿದರು. ಜಿಲ್ಲಾ ಕನ್ನಡ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಭಾರತೀಯ ಸೇನೆಯಲ್ಲಿ ಸೇರ್ಪಡೆಯಾಗುವ ಜಿಲ್ಲೆಯ ಅಭ್ಯರ್ಥಿಗಳ ಸಂಖ್ಯೆ ಅತ್ಯಂತ ಕಡಿಮೆ ಇದ್ದು, ಜಿಲ್ಲೆಯಿಂದ ಸೇನೆಗೆ ಸೇರಲು ಆಸಕ್ತರಿರುವ ಅಭ್ಯರ್ಥಿಗಳಿಗೆ ಅಗತ್ಯ ಮಾಹಿತಿ ಮತ್ತು ತರಬೇತಿಯನ್ನು ಜಿಲ್ಲಾಡಳಿತದ ವತಿಯಿಂದ ಉಚಿತವಾಗಿ ನೀಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ. ಉಡುಪಿ ಅಜ್ಜರಕಾಡು ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಏಪ್ರಿಲ್ 4 ರಿಂದ 14 ರ ವರೆಗೆ ನಡೆಯಲಿರುವ ಸೇನಾ ನೇಮಕಾತಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿರುವ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ, ಮಾರ್ಚ್ 15 ರಿಂದ 31 ರವರೆಗೆ ಉಚಿತ ತರಬೇತಿ ಮತ್ತು ಮಾಹಿತಿ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 12 ರ ಒಳಗೆ ಬೆಳಗ್ಗೆ 9.00 ರಿಂದ ಸಂಜೆ 5 ರ ವರೆಗೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಮೊ.ಸಂಖ್ಯೆ. 9480886467 ಅವರನ್ನು ಫೋನ್ ಮೂಲಕ ಅಥವಾ ಖುದ್ದಾಗಿ ಸಂಪರ್ಕಿಸಿ ಹೆಸರು…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸಂವೇದನಾ ಪ್ರಥಮ ದರ್ಜೆ ಕಾಲೇಜಿನ ಮೂರನೆಯ ವಾರ್ಷಿಕೋತ್ಸವ ಹಾಗೂ ಕುವೆಂಪು ವಿಶ್ವವಿದ್ಯಾನಿಲಯದ ದೂರಶಿಕ್ಷಣ ಕೇಂದ್ರದ ಉದ್ಘಾಟನಾ ಸಮಾರಂಭ ಮಾರ್ಚ್ ಒಂದು, ರವಿವಾರ ಜರುಗಿತು. ಉದ್ಘಾಟಕರಾಗಿ ಕುಂದಾಪುರ ತಾಲೂಕು ಕಸಾಪ ಅಧ್ಯಕ್ಷರಾದ ಡಾ. ಕಿಶೋರಕುಮಾರ ಶೆಟ್ಟಿ ಆಗಮಿಸಿ ಶುಭಾಶಯ ಕೋರಿದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್ ಬೈಂದೂರು ಶಾಖೆಯ ಪ್ರಬಂಧಕರಾದ ಪರಮೇಶ್ವರ ಪೂಜಾರಿ, ವಿಶ್ರಾಂತ ಉಪನ್ಯಾಸಕರಾದ ಪಿ. ಶೇಷಪ್ಪಯ್ಯ ಹೆಬ್ಬಾರ್, ಸಂಸ್ಥೆಯ ಉಪಾಧ್ಯಕ್ಷರಾದ ಡಾ. ಅನಿಲ ಶೆಟ್ಟಿ, ಕಾರ್ಯದರ್ಶಿ ರವೀಂದ್ರ ಎಚ್, ಪ್ರಾಂಶುಪಾಲರಾದ ಸಂಧ್ಯಾ ಭಟ್ ಭಾಗವಹಿಸಿದ್ದರು. ವಾಗ್ಜೋತಿ ಶ್ರವಣದೋಷವುಳ್ಳ ಮಕ್ಕಳ ಶಾಲೆಯ ಮುಖ್ಯ ಶಿಕ್ಷಕರಾದ ರವೀಂದ್ರ ಎಚ್ ಅವರನ್ನು ಸನ್ಮಾನಿಸಲಾಯಿತು. ಸಂವೇದನಾ ಕಾಲೇಜಿನ ಅಧ್ಯಕ್ಷರಾದ ಡಾ. ಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಅಶ್ವಿನಿ ಆರ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ವಿನಯಾ ವರದಿ ವಾಚಿಸಿದರು. ಸಂಧ್ಯಾ ಭಟ್ ಸ್ವಾಗತಿಸಿ, ಉಪನ್ಯಾಸಕಿ ದಿವ್ಯಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ನಾಕಟ್ಟೆ ಶ್ರೀ ಕೋಟಿ ಚೆನ್ನಯ ಪಂಜುರ್ಲಿ ಗರಡಿಯಲ್ಲಿ ಪರಿವಾರ ಶಕ್ತಿಗಳ ನೂತನ ಬಾಲಾಲಯದಲ್ಲಿ ನಿಧಿ ಕುಂಭ ಸ್ಥಾಪನೆಯ ಧಾರ್ಮಿಕ ಕಾರ್ಯಕ್ರಮಗಳು ಆಗಮ ಪಂಡಿತರಾದ ಕೇಂಜ ಶ್ರೀಧರ ತಂತ್ರಿಗಳ ನೇತೃತ್ವದಲ್ಲಿ ಜರುಗಿತು. ಧಾರ್ಮಿಕ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ್ ಪೂಜಾರಿ, ಶಿರೂರು ಬಿಲ್ಲವ ಸಂಘದ ಅಧ್ಯಕ್ಷ ಚಿಕ್ಕು ಪೂಜಾರಿ, ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ಸ್ಥಳೀಯರಾದ ಜಗನ್ನಾಥ ಶೆಟ್ಟಿ ನಾಕಟ್ಟೆ, ಆನಂದ ಶೆಟ್ಟಿ ನಾಕಟ್ಟೆ, ನಾಗರಾಜ ಗಾಣಿಗ ಬಂಕೇಶ್ವರ, ವಿನಾಯಕ ರಾವ್ ಮರವಂತೆ, ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ವೆಂಕಟ ಪೂಜಾರಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಅರ್ಚಕ ಕುಟುಂಬದ ಮಂಜುನಾಥ ಮೇಲ್ಹಿತ್ಲು, ಮುತ್ತಯ್ಯ ಪೂಜಾರಿ, ಅಣ್ಣಪ್ಪ ಪೂಜಾರಿ ಯಡ್ತರೆ, ಚಂದ್ರ ಪೂಜಾರಿ, ವಾಸ್ತುಶಿಲ್ಪಿಗಳು ಮೊದಲಾದವರು ಇದ್ದರು. ಭಕ್ತಾಧಿಗಳು ಚಿನ್ನ, ಬೆಳ್ಳಿ, ಪಂಚಲೋಹ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಂಸತ್ತು ಈಚೆಗೆ ಸ್ವೀಕರಿಸಿದ ಪೌರತ್ವ ತಿದ್ದುಪಡಿ ಕಾಯಿದೆಯ ಕುರಿತು ದೇಶದ ನಿರ್ದಿಷ್ಟ ವರ್ಗದ ಹಿತಾಸಕ್ತಿಯ ರಕ್ಷಣೆಗಾಗಿ ಮತ್ತು ರಾಜಕೀಯ ಕಾರಣಗಳಿಗಾಗಿ ಜನರಲ್ಲಿ ತಪ್ಪು ಕಲ್ಪನೆಯನ್ನು ಬಿತ್ತಲಾಗುತ್ತಿದೆ. ಜನರು ಅದರ ಕುರಿತಾದ ಸತ್ಯವನ್ನು ತಿಳಿದುಕೊಳ್ಳಬೇಕು ಮತ್ತು ಅಂತಹ ಹುನ್ನಾರದ ವಿರುದ್ಧ ಜಾಗೃತರಾಗಬೇಕು ಎಂದು ವಿಕ್ರಮ ಪತ್ರಿಕೆಯ ಸಂಪಾದಕ ವೃಷಾಂಕ್ ಭಟ್ ಹೇಳಿದರು. ಹಿಂದು ಸಂಘಟನೆಗಳ ಆಶ್ರಯದಲ್ಲಿ ಭಾನುವಾರ ನಾವುಂದದಲ್ಲಿ ನಡೆದ ಸಿಎಎ ಮತ್ತು ಎನ್ಆರ್ಸಿ ಸಮರ್ಥನಾ ಸಮಾವೇಶದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು. ಪಾಕಿಸ್ತಾನ, ಬಾಂಗ್ಲಾ, ಅಪಘಾನಿಸ್ತಾನದಲ್ಲಿ ಧಾರ್ಮಿಕ ಕಾರಣಗಳಿಗಾಗಿ ದೌರ್ಜನ್ಯಕ್ಕೊಳಗಾಗಿ 2014ರ ಡಿಸೆಂಬರ್ 21ರ ಮೊದಲು ಭಾರತಕ್ಕೆ ಬಂದಿರುವ ಮುಸ್ಲಿಮೇತರ 6 ಧರ್ಮಗಳ ಅಲ್ಪಸಂಖ್ಯಾತರಿಗೆ ದೇಶದ ಪೌರತ್ವ ನೀಡಲು ಅವಕಾಶ ಕಲ್ಪಿಸುವ ಕಾಯಿದೆ ಇದಾಗಿದೆ. ಅಕ್ರಮವಾಗಿ ಭಾರತಕ್ಕೆ ಬಂದಿರುವ ಅಂತಹ ವಲಸಿಗರಿಗೆ ಮಾತ್ರ ಇದು ಅನ್ವಯವಾಗುವುದೇ ಹೊರತು ಯಾವುದೇ ಕಾರಣಕ್ಕೂ ಭಾರತೀಯ ಪ್ರಜೆಗಳಿಗೆ ಇದು ಅನ್ವಯವಾಗದು ಎಂದು ಅವರು ಹೇಳಿದರು. ಆ ದೇಶಗಳಲ್ಲಿ ಇಸ್ಲಾಂ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಸ್ಪರ್ಧಾತ್ಮಕ ಪರೀಕ್ಷೆಗೆ ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿದಾಗ ಸಾಧನೆ ಮಾಡಲು ಸಾಧ್ಯ.ಆದ್ದರಿಂದ ವಿದ್ಯಾರ್ಥಿಗಳು ಸಮಯ ಹಾಳು ಮಾಡದೆ ನಮ್ಮ ಗುರಿ ಕಡೆಗೆ ಮನಸ್ಸು ಕೇಂದ್ರಿಕರಿಸಿಕೊಂಡು ಹೆಚ್ಚಿನ ಅಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕೆಂದು ಮಡಿಕೇರಿಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಗೌರವ್ ಶೆಟ್ಟಿ ಹೇಳಿದರು ಅವರು ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್,ಕೋಟದಲ್ಲಿ ವಿ-ಶೈನ್ ತರಬೇತಿ ಸಂಸ್ಥೆ ಆಸರೆಯಲ್ಲಿ ನಡೆಯುತ್ತಿರುವ ಕರ್ನಾಟಕ ಲೋಕಸೇವಾ ಆಯೋಗವು ಕರೆದಿರುವ 2000 ಕ್ಕೂ ಮಿಕ್ಕಿ ಪ್ರಥಮ ದರ್ಜೆ ಸಹಾಯಕರು ಮತ್ತು ದ್ವೀತಿಯ ದರ್ಜೆ ಸಹಾಯಕ ಹುದ್ದೆಯ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡುತ್ತಿದ್ದರು. ವಿ-ಶೈನ್ ಸಂಸ್ಥೆಯ ಹರೀಶ್ ಕುಮಾರ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿಯೇ ಓದಿನಲ್ಲಿ ಹೆಚ್ಚಿನ ಕಡೆ ಗಮನ ಹರಿಸಿ ಅಲ್ಲದೇ ಜ್ಞಾನ ಹೆಚ್ಚಿಸುವ ಪುಸ್ತಕವನ್ನು ಹೆಚ್ಚಾಗಿ ಓದಬೇಕು ಇದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ತಿಳಿಸಿದರು. ಈ ಸಂದರ್ಭದಲ್ಲಿ ವಿ-ಶೈನ್ ನ ಗಿರೀಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಮಾರ್ಚ್ 02 : ಇಲ್ಲಿನ ಮಿನಿವಿಧಾನಸೌಧದಲ್ಲಿ ವ್ಯಕ್ತಿಯೋರ್ವ ಏಕಾಏಕಿ ಪಾಕಿಸ್ತಾನ ಪರ ಘೋಷಣೆ ಕೂಗಿ ಬಂಧಿತನಾದ ಘಟನೆ ನಡೆದಿದೆ. ಬಂಧಿತನನ್ನು ತಾಲೂಕಿನ ಕೋಡಿ ನಿವಾಸಿ ರಾಘವೇಂದ್ರ ಗಾಣಿಗ (42) ಎಂದು ತಿಳಿದುಬಂದಿದ್ದು, ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಬೆಳಿಗ್ಗೆ ತಾಲೂಕು ಕಛೇರಿಗೆ ಆಗಮಿಸಿದ ಆತ ಪಾಕಿಸ್ತಾನ್ ಜಿಂದಾಬಾದ್, ಜಿಹಾದಿ ಜಿಂದಾಬಾದ್ ಎಂದು ಘೋಷಣೆ ಕೂಗಲು ಆರಂಭಿಸಿದ್ದಾನೆ. ಅಲ್ಲಿದ್ದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕುಂದಾಪುರ ಪೊಲೀಸ್ ಪಿಎಸೈ ಹರೀಶ್ ಆರ್. ಹಾಗೂ ಸಿಬ್ಬಂಧಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಆಪಾದಿತನ್ನು ಬಂಧಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ರಾಘವೇಂದ್ರ ಗಾಣಿಗ ಪದವೀಧರನಾಗಿದ್ದು ಖಾಸಗಿ ಶಾಲೆಯಲ್ಲಿ ಹಿಂದಿ ಶಿಕ್ಷಕನಾಗಿದ್ದ. ಆದರೆ ಎಂಟು ವರ್ಷಗಳ ಹಿಂದೆ ಕೆಲಸ ಬಿಟ್ಟು ಮನೆಯಲ್ಲಿಯೇ ಇದ್ದ. ಮದುವೆಯಾಗಿದ್ದು ಪತ್ನಿ, ಪುತ್ರಿಯನ್ನು ತೊರೆದು ತಂದೆ ತಾಯಿಯೊಂದಿಗೆ ವಾಸವಾಗಿದ್ದ ಎನ್ನಲಾಗಿದೆ. ರಾಘವೇಂದ್ರ ಮಾನಸಿಕ ಅವಸ್ಥನಾಗಿದ್ದು, ಕಳೆದ ಎಂಟು ವರ್ಷಗಳಿಂದ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಕೂಡ ತಂದೆ ತಾಯಿಯೊಂದಿಗೆ ಕುಂದಾಪುರದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಉಪವಿಭಾಗದ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧೆಡೆಗಳಲ್ಲಿ ನಡೆಸಲಾಗುತ್ತಿದ್ದ ರಿಕ್ರಿಯೇಶನ್ ಕ್ಲಬ್ಗಳ ಮೇಲೆ ಭಾನುವಾರ ಸಂಜೆ ದಾಳಿ ನಡೆಸಿರುವ ಪೊಲೀಸರು ಜುಗಾರಿ ಆಟದಲ್ಲಿ (ಗ್ಯಾಂಬ್ಲಿಂಗ್) ತೊಡಗಿದ್ದ ೩೫ಕ್ಕೂ ಅಧಿಕ ಜುಗಾರಿಕೋರರನ್ನು ವಶಕ್ಕೆ ಪಡೆದು, ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ನಗದು, ಮೊಬೈಲ್, ಕಾರು, ಬೈಕುಗಳನ್ನು ವಶಕ್ಕೆ ಪಡೆದಿದ್ದಾರೆ. ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೇಶ್ವರ ಗ್ರಾಮದ ಕಾಗೇರಿಯಲ್ಲಿರುವ ರಿಕ್ರಿಯೇಶನ್ ಕ್ಲಬ್ನಲ್ಲಿ ಜುಗಾರಿ ಆಡುತ್ತಿದ್ದ ಹದಿಮೂರು ಮಂದಿ, ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀ ಲಕ್ಷ್ಮೀ ಕ್ಲಬ್ನಲ್ಲಿ ಇಸ್ಪೀಟ್ ಆಡುತ್ತಿದ್ದ ಹನ್ನೊಂದು ಮಂದಿ, ಸಿದ್ದಾಪುರ ಗ್ರಾಮ ದೊಟ್ಟಿನಬೇರು ಶಾಂತ ರಿಕ್ರಿಯೇಷನ್ ಕ್ಲಬ್ನಲ್ಲಿ ಜುಗಾರಿ ಆಡುತ್ತಿದ್ದ ಏಳು ಮಂದಿ ಹಾಗೂ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಯಡ್ತರೆ ಗ್ರಾಮದ ಎಂಜಿ ರಿಕ್ರಿಯೇಷನ್ ಕ್ಲಬ್ನಲ್ಲಿ ಜುಗಾರಿ ಆಡುತ್ತಿದ್ದ ಹನ್ನೊಂದು ಮಂದಿಯನ್ನು ದಾಳಿಯ ವೇಳೆ ವಶಕ್ಕೆ ಪಡೆಯಲಾಗಿತ್ತು. ಕುಂದಾಪುರ ತಾಲೂಕಿನ ಗೋಳಿಯಂಗಡಿ, ಸಿದ್ದಾಪುರ, ಕೋಟೇಶ್ವರ ಕಾಗೇರಿ, ಬೈಂದೂರು ತಾಲೂಕಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡಿಬಿದಿರೆ: ಮಾಧ್ಯಮಗಳು ದೇಶಕ್ಕಾಗಿ ಕಾರ್ಯ ನಿರ್ವಹಿಸಬೇಕು ಹೊರತು ಪಕ್ಷ ಮತ್ತು ಸಿದ್ಧಾಂತಗಳಿಗಲ್ಲ ಎಂದು ಸುವರ್ಣ ನ್ಯೂಸ್ ಸುದ್ದಿ ವಾಹಿನಿಯ ಪ್ರಚಲಿತ ವಿದ್ಯಮಾನಗಳ ಸಂಪಾದಕ ಜಯಪ್ರಕಾಶ್ ಶೆಟ್ಟಿ ಹೇಳಿದರು. ಅವರು ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಭಾಗ ಮತ್ತು ಪದವಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ‘ಮಾಧ್ಯಮ ಮತ್ತು ಹವಮಾನಕ್ರಮ’ ಎಂಬ ವಿಚಾರದ ಕುರಿತು ನಡೆದ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ‘ಮೀಡಿಯಾ ಬಝ್- 2020’ ಮಾಧ್ಯಮೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಸಕಾರಾತ್ಮಕವಾಗಿ ಸಮಾಜದ ತೊಡಕುಗಳನ್ನು ಹೋಗಲಾಡಿಸಲು ಮಾಧ್ಯಮವನ್ನು ಅಸ್ತ್ರವಾಗಿ ಬಳಸಬೇಕು. ಮಾಧ್ಯಮಗಳಿಗೆ ಯುವಕರು ಪತ್ರಕರ್ತರಾಗಿ ಬರಬೇಕು ಹೊರತಾಗಿ ಕಾರ್ಯಕರ್ತರಾಗಿ ಅಲ್ಲ. ಪತ್ರಕರ್ತರು ಸಮಾಜದ ಬಗೆಗಿನ ಕಳಕಳಿಯನ್ನು ಹೊಂದಿರಬೇಕು. ಆಗ ಮಾಧ್ಯಮದ ಮೂಲಕ ಸಮಾಜವನ್ನು ಪರಿವರ್ತಿಸಬಹುದು ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ ಮಂಗಳೂರಿನ ಆಶಾ ಚ್ಯಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ.ಆಶಾ ಜ್ಯೋತಿ ರೈ, ಮಾಧ್ಯಮಗಳು ಸಮಾಜವನ್ನು ಎಲ್ಲಾ ಕ್ಷೇತ್ರಗಳಲ್ಲಿಯೂ ಉನ್ನತೀಕರಿಸುವ ಕಾರ್ಯವನ್ನು ಮಾಡಬೇಕು. ಪರಿಸರ ಸಂಬಂಧಿ ಕಾರ್ಯಗಳ ಕುರಿತಾದ ಅರಿವನ್ನು ಮೂಡಿಸುವ…
