ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕರ್ನಾಟಕದ ಪಂಚಾಯತ್ರಾಜ್ ವ್ಯವಸ್ಥೆ ಸದೃಢವಾಗಿ ಬೆಳೆದು ಇಡೀ ದೇಶಕ್ಕೆ ಮಾದರಿಯಾಗಿದೆ. ಇದನ್ನು ಇನ್ನಷ್ಟು ಬಲಪಡಿಸಲು ನಿಟ್ಟಿನಲ್ಲಿ ರಾಜ್ಯ ಸರಕಾರ ಎಲ್ಲ ರೀತಿಯ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅವರು ಶನಿವಾರ ಕೋಟತಟ್ಟ ಗ್ರಾಮ ಪಂಚಾಯತ್ ಹಾಗೂ ಡಾ. ಶಿವರಾಮ ಕಾರಂತರ ಪ್ರತಿಷ್ಠಾನದ ವತಿಯಿಂದ ಶನಿವಾರ ಕೋಟ ವಿವೇಕ ಕಾಲೇಜಿನ ಕ್ರೀಡಾಂಗಣದಲ್ಲಿ ಅವಿಭಜಿತ ದ.ಕ. ಜಿಲ್ಲೆಗಳ ಪಂಚಾಯತ್ರಾಜ್ ಮತ್ತು ನಗರ ಸ್ಥಳೀಯಾಡಳಿತ ಜನಪ್ರತಿನಿಧಿಗಳ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹೊಳಪು-2019’ ಉದ್ಘಾಟಿಸಿ ಮಾತನಾಡುತಿದ್ದರು. ಅಧಿಕಾರ ವಿಕೇಂದ್ರೀಕರಣದ ಆಶಯ ಬಹಳ ದೊಡ್ಡದು. ಗ್ರಾಮಸಭೆಗಳ ಮಟ್ಟದಿಂದಲೇ ಆಯಾ ಪ್ರದೇಶಗಳಿಗೆ ಅಗತ್ಯವಾದ ಯೋಜನೆಗಳು ರೂಪುಗೊಳ್ಳಬೇಕು. ಸ್ಥಳೀಯ ಸಂಸ್ಥೆಗಳಿಗೆ ಆರ್ಥಿಕ ಮತ್ತು ಕಾರ್ಯನಿರ್ವಹಣಾ ಸ್ವಾತಂತ್ರ್ಯ ಇರಬೇಕು. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು, ತ್ಯಾಜ್ಯ ವಿಲೇವಾರಿ, ರಸ್ತೆಗಳು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು. ಪಂಚಾಯತ್ರಾಜ್ ವ್ಯವಸ್ಥೆ ಅಧಿಕಾರ ವಿಕೇಂದ್ರೀಕರಣ ಆಗಿದೆಯೇ ಅಥವಾ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೀನುಗಾರರ ಸಾಲ ಮನ್ನಾದ ಬಗ್ಗೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಕೆಲವೇ ದಿನಗಳಲ್ಲಿ ಉಡುಪಿ ಜಿಲ್ಲೆಯ 20,197 ಮೀನುಗಾರರ 55 ಕೋಟಿ ರೂ ಸಾಲ ಸಂಪೂರ್ಣ ಮನ್ನಾ ಆಗಲಿದ್ದು, ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಅವರು ಶನಿವಾರ ವಂಡ್ಸೆ ಪ್ರೌಢಶಾಲಾ ವಠಾರದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 387 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿ ವೀನುಗಾರರ ಸಾಲಮನ್ನ ವಿಳಂಬವಾಗಿರುವ ಬಗ್ಗೆ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ಮಹಿಳಾ ಸಬಲೀಕರಣದ ಉದ್ಧೇಶದಿಂದ, ಸ್ತ್ರೀಶಕ್ತಿ ಸಂಘಗಳನ್ನು ಬಲಗೊಳಿಸಲು ಈ ಬಾರಿಯ ಬಜೆಟ್ ನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಘೋಷಣೆ ಮಾಡಲಾಗುವುದು ಎಂದು ಬೈಂದೂರು ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೆತ್ರವನ್ನಾಗಿ ಅಭಿವೃದ್ದಿಪಡಿಸುವ ಉದ್ದೇಶದಿಂದ ನಡೆಯುತ್ತಿರುವ 387 ಕೋಟ ರೂ ಮೊತ್ತದ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಿಂದ ಕೂಡಿರುವಂತೆ ಅನುಷ್ಠಾನಗೊಳಿಸುವಂತೆ ಸೂಚಿಸಿದ ಮುಖ್ಯಮಂತ್ರಿಗಳು, ತಮ್ಮ ಸರ್ಕಾರದ ಅವಧಿಯಲ್ಲಿ ಕಳಪೆ ಕಾಮಗಾರಿಗಳನ್ನು ನಿರ್ಮಿಸಲು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರ್ವರ ಸಹಕಾರವಿದ್ದಾಗ ಮಾತ್ರ ಸರಕಾರಿ ಶಾಲೆ ಪ್ರಗತಿ ಸಾಧಿಸಲು ಸಾಧ್ಯ. ಮೂಲಭೂತ ಸೌಕರ್ಯ, ನುರಿತ ಅಧ್ಯಾಪಕ ವರ್ಗ, ಎಸ್ಡಿಎಂಸಿ, ಹಳೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಪರಸ್ಪರ ಹೊಂದಾಣಿಕೆಯಿಂದ ಮುಂದುವರಿದರೆ ಶಾಲೆಯನ್ನು ಮಾದರಿಯನ್ನಾಗಿ ರೂಪಿಸುವುದು ಕಷ್ಟಸಾಧ್ಯವಲ್ಲ ಎಂದು ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಟಿ. ನಾರಾಯಣ ಹೆಗ್ಡೆ ಹೇಳಿದರು. ಅವರು ಶುಕ್ರವಾರ ಜರುಗಿದ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ವಾರ್ಷಿಕೋತ್ಸವ ಉತ್ತಮ ವೇದಿಕೆ. ಶಾಲಾ ವಾರ್ಷಿಕೋತ್ಸವ ಎಂದರೆ ಊರಿನವರಿಗೊಂದು ಹಬ್ಬದ ವಾತಾವರಣ ಎಂದರು. ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯ ಬಾಬು ಶೆಟ್ಟಿ ತಗ್ಗರ್ಸೆ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಸದಸ್ಯೆ ಮಾಲಿನಿ ಕೆ., ಬೈಂದೂರು ಗ್ರಾಮ ಪಂಚಾಯತ್ ಸದಸ್ಯೆ ಭಾಗೀರಥಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೈಂದೂರು ವಲಯ ಅಧ್ಯಕ್ಷ ವಿಶ್ವನಾಥ ಪೂಜಾರಿ, ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ಕುಮಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿದ್ಯುನ್ಮಾನ ಜಗತ್ತು ಕೊಡಮಾಡುತ್ತಿರುವ ತಾಂತ್ರಿಕ ಸೌಲಭ್ಯಗಳನ್ನು ಬದುಕಿನೊಳಗಿನ ಆಯ್ಕೆಯನ್ನಾಗಿಸಿಕೊಳ್ಳದೆ, ಬದುಕಿನ ಅನಿವಾರ್ಯತೆಯನ್ನಾಗಿಸಿಕೊಂಡಿರುವ ಮನುಕುಲ ತನ್ನೊಳಗಿನ ತಂತ್ರಜ್ಞಾನಕ್ಕೂ ಮೀರಿದ ಅಧಿಕ ಜ್ಞಾನದ ಕುರಿತು ಅರಿವನ್ನು ಹೊಂದಿಲ್ಲದಿರುವುದು ದುರಂತ. ತಂತ್ರಜ್ಞಾನದ ದಾಸರಾಗದೆ, ಅಂತರ್ಗತ ಜ್ಞಾನದಿಂದ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸುವಂತಾಗಬೇಕು ಎಂದು ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ| ರಘು ನಾಯ್ಕ್ ಹೇಳಿದರು. ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ’ಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿದರು. ಎಡೇರಿ ವಿಜಯ ಬ್ಯಾಂಕ್ನ ನಿವೃತ್ತ ಅಧಿಕಾರಿ ಮಂಜಯ್ಯ ಶೆಟ್ಟಿ ಬೆಳ್ಳಾಡಿ ಅಧ್ಯಕ್ಷತೆ ವಹಿಸಿದ್ದರು. ಕಾಲ್ತೋಡು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಧ್ಯಕ್ಷ ನಾಗಯ್ಯ ಶೆಟ್ಟಿ, ವಲಯ ಅಂಚೆ ಅಧಿಕಾರಿ ಜನಾರ್ಧನ್ ನಾಯಕ್, ಕೆಳಮನೆ ರಾಘವೇಂದ್ರ ಪೂಜಾರಿ, ಕಾಲ್ತೋಡು ಪ್ರವೀಣ್ ಪೂಜಾರಿ, ವಾಣಿಜ್ಯ ಉಪನ್ಯಾಸಕಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ರತ್ತೂಬಾಯಿ ಜನತಾ ಪ್ರೌಢಶಾಲೆ 1970ರಲ್ಲಿ ಜನತಾ ಗರ್ಲ್ಸ್ ಹೈಸ್ಕೂಲ್ ಎಂಬ ಹೆಸರಿನೊಂದಿಗೆ ಆರಂಭಗೊಂಡು ಇಂದು ಜನತಾ ಪ್ರೌಢಶಾಲೆಯಾಗಿ ಮುನ್ನಡೆಯುತ್ತಿದ್ದು, ಜನವರಿ 3 ಹಾಗೂ 4ರಂದು ಸುವರ್ಣ ಸಂಭ್ರಮವನ್ನು ಆಚರಿಸಲಾಗುತ್ತಿದೆ ಎಂದು ಶ್ರೀ ವಿ.ವಿ.ವಿ ಮಂಡಳಿ ರಿ. ಹೆಮ್ಮಾಡಿ ಇದರ ಅಧ್ಯಕ್ಷ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಬೈಂದೂರಿನ ರತ್ತೂಬಾಯಿ ಜನತಾ ಪ್ರೌಢಶಾಲೆಯ ಸುವರ್ಣ ಸಂಭ್ರಮ – 2020 ಪೂರ್ವಭಾವಿಯಾಗಿ ಹಮ್ಮಕೊಂಡ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಜನವರಿ 3ರಂದು ಗೌರಿಗದ್ದೆ ದತ್ತಾಶ್ರಮದ ಶ್ರೀ ವಿನಯ ಗುರೂಜಿ ಅವರು ಸುವರ್ಣ ಸಂಭ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದು, ಸಮಾರೋಪ ಕಾರ್ಯಕ್ರಮದಲ್ಲಿ ಪದ್ಮವಿಭೂಷಣ ಡಾ. ಬಿ. ಎಂ. ಹೆಗ್ಡೆ ಅವರು ಭಾಗವಹಿಸಲಿದ್ದಾರೆ. ಎರಡೂ ದಿನವೂ ವಿವಿಧ ಅತಿಥಿ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹಳೆ ವಿದ್ಯಾರ್ಥಿಗಳೊಂದಿಗೆ ಸ್ನೇಹ ಸಮ್ಮಿಲನ, ಶಿಕ್ಷಕರೊಂದಿಗೆ ಸಂವಾದ, ಶೈಕ್ಷಣಿಕ ವಿಚಾರಗೋಷ್ಠಿ, ಶೈಕ್ಷಣಿಕ ವಸ್ತು ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೌಡದಲ್ಲಿ ಶಾಲಾ ವಾರ್ಷಿಕೋತ್ಸವ ಬಿದಿಗೆ ಸಂಭ್ರಮದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ್ ಸದಸ್ಯರಾದ ಸುಪ್ರೀತಾ ಉದಯ್ ಕುಲಾಲ್ ಇವರು ನೆರವೇರಸಿದರು. ಕಾರ್ಯಕ್ರಮದ ಅದ್ಯಕ್ಷತೆಯನ್ನು ತಾಲೂಕು ಪಂಚಾಯತ್ ಸದಸ್ಯರಾದ ಸವಿತಾ ಮೊಗವೀರ ಇವರು ವಹಿಸಿ ಶಾಲೆಯ ಬೇಡಿಕೆಗಳಿಗೆ ಕೂಡಲೆ ಸ್ಪಂದಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಪವಿತ್ರ ಆರ್ ಅಡಿಗ ಇವರು ಮಖ್ಯ ಅತಿಥಿಯಾಗಿ ಶಾಲೆಯನ್ನು ಉತ್ತಮವಾಗಿ ಪ್ರಗತಿ ಪಥದತ್ತ ಸಾಗಲು ಅಧ್ಯಾಪಕರ ಜೊತೆ ವಿಧ್ಯಾಭಿಮಾನಿಗಳ ಸಹಕಾರ ಅತ್ಯಗತ್ಯ ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕುಂದಾಪುರ ವಲಯ ಮುಖ್ಯೋಪಾದ್ಯಾಯರ ಸಂಘದ ಅಧ್ಯಕ್ಷರು ಹಾಗು ಪ್ರಭಾರ ಶಿಕ್ಷಣ ಸಂಯೋಜಕರಾಗಿರುವ ಸೂರಪ್ಪ ಹೆಗ್ಡೆ, ಕುಂದಾಪುರ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಸದಾರಾಮ್ ಶೆಟ್ಟಿ, ಕೆನೆರಾ ಬ್ಯಾಂಕ್ ನಿವೃತ್ತ ಚೀಫ್ ಮ್ಯಾನೇಜರ್ ಚಂದ್ರಶೇಖರ ಅಡಿಗ ಹೆಗ್ದೆಜೆಡ್ಡು, ಶಾಲಾ ಎಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಡಿ.26: ತಾಲೂಕಿನ ಕನ್ಯಾನ ಕಲ್ಕಂಬ ಎಂಬಲ್ಲಿ ಡಿ.17ರಂದು ಹಗಲು ಹೊತ್ತಿನಲ್ಲಿಯೇ ನಡೆದ ಜೋರ್ಮಕ್ಕಿ ಬಾಬು ಶೆಟ್ಟಿಯವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಕುಂದಾಪುರ ಉಪವಿಭಾಗದ ಎಎಸ್ಪಿ ಹರಿರಾಂ ಶಂಕರ್ ನೇತ್ರತ್ವದ ಪೊಲೀಸರ ತಂಡ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಬಾಬು ಶೆಟ್ಟಿ ಕೊಲೆ ಪ್ರಕರಣಕ್ಕೆ ವೈಯುಕ್ತಿಕ ದ್ವೇಷವೇ ಕಾರಣ. ಈ ಹಿಂದೆ ಹರೀಶ್ ಶೆಟ್ಟಿ ಹಾಗೂ ಸಂತೋಷ್ ಶೆಟ್ಟಿಗೆ ಚೂರಿ ಇರಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ನೇರಳಕಟ್ಟೆ ನಿವಾಸಿ ತೇಜಪ್ಪ ಶೆಟ್ಟಿ ಹಾಗೂ ಬಾಬು ಶೆಟ್ಟಿ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಬಾಬು ಶೆಟ್ಟಿಯನ್ನು ಕೊಲ್ಲಬೇಕು ಎಂದು ತೀರ್ಮಾನಿಸಿದ ತೇಜಪ್ಪ ಶೆಟ್ಟಿ ಸಂಚು ರೂಪಿಸಿದ್ದರು. ಕೊಲೆ ನಡೆದ ದಿನ ಮಧ್ಯಾಹ್ನ ಬಾಬು ಶೆಟ್ಟಿಗೆ ಕರೆ ಮಾಡಿದ ಆರೋಪಿಗಳು ಗೊಬ್ಬರ ಸಾಗಾಟ ಮಾಡಬೇಕಿದ್ದು ಅದನ್ನು ತೋರಿಸುತ್ತೇವೆ ಕರೆಸಿ, ಬೈಕಿನಲ್ಲಿ ಬಂದ ಬಾಬು ಶೆಟ್ಟಿಯನ್ನು ಮಾರಣಾಂತಿಕವಾಗಿ ಹಲ್ಲೆ ಮಾಡಿ ಕೊಲೆಗೈದಿದ್ದರು. ಆರೋಪಿಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಕ್ರಿಸ್ತನ ಜನನ ಮತ್ತು ಜೀವನ ಶೋಷಿತರ ಉದ್ಧಾರಕ್ಕಾಗಿ. ಪ್ರಾಮಾಣಿಕತೆ ಮತ್ತು ಬಡ ಜನರ ಕಷ್ಟದಲ್ಲಿ ಗುರುತಿಸಿಕೊಳ್ಳುವುದೆ ನಿಜವಾದ ಆಚರಣೆ ಎಂದು ಮಂಗಳೂರಿನ ಧರ್ಮಗುರುಗಳಾದ ವಂದನೀಯ ಎಫ್. ಎಕ್ಸ್. ಗೋಮ್ಸ್ ಹೇಳಿದರು. ಆಳ್ವಾಸ್ ಕಾಲೇಜಿನ ರತ್ನಾಕರವರ್ಣಿ ವೇದಿಕೆಯಲ್ಲಿ ನಡೆದ 2019 ಸಾಲಿನ ಆಳ್ವಾಸ್ ಕ್ರಿಸ್ಮಸ್ ಆಚರಣೆಯ ಪ್ರಾರ್ಥನ ಕೂಟದಲ್ಲಿ ಬೈಬಲ್ ವಾಚನ ಹಾಗೂ ಸಂದೇಶವನ್ನು ನೀಡಿದರು. ಪ್ರೀತಿಸುವ, ಹಂಚುವ, ಕ್ಷಮಿಸುವ ಮತ್ತು ನಗುವ ಪ್ರತಿ ದಿನವೂ ಹಬ್ಬವಿದ್ದಂತೆ. ಮದರ್ ತೆರೆಸಾ ಮತ್ತು ಮಹಾತ್ಮಾ ಗಾಂಧಿಯಂತ ವ್ಯಕ್ತಿತ್ವಗಳು ಹುಟ್ಟಿಕೊಂಡಾಗ ಶೋಷಿತರಿಗೆ ನೆಲೆಯಾಗಿತ್ತು. ಇಂದು ಸಮಾಜದಲ್ಲಿ ಇಂತಹ ವ್ಯಕ್ತಿತ್ವಗಳ ಸಂಖ್ಯೆ ಸಾವಿರ ಲಕ್ಷಗಳಲ್ಲಿ ಮೂಡಿಬರಲಿ. ಆಗ ಕ್ರಿಸ್ತನ ಜೀವಿತದ ಧ್ಯೇಯ ಸಾರ್ಥಕವಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಮೂಡುಬಿದಿರೆಯ ಕೋರ್ಪುಸ್ ಕ್ರಿಸ್ತಿ ಚರ್ಚನ ಧರ್ಮಗುರುಗಳಾದ ಅತಿ ವಂದನೀಯ ಪಾವ್ಲ್ ಸಿಕ್ವೇರ ಕ್ರಿಸ್ಮಸ್ ಸಂದೇಶ ನೀಡುತ್ತಾ, ಕ್ರಿಸ್ಮಸ್ ಒಂದು ಸಂತೋ?ವನ್ನು ಹಂಚುವ ಹಬ್ಬ. ಈ ಆಚರಣೆಯ ಪ್ರತಿಯೊಂದು ಅಂಶಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಲೆ ಸಂಗೀತದ ಆಸ್ವಾದನೆಯಿಂದ ಮನಸ್ಸು ಉಲ್ಲಾಸಗೊಳ್ಳುವುದಲ್ಲದೇ ಸದಾ ಚಟುವಟಿಕೆಯಿಂದ ಕೂಡಿರಲು ಸಾಧ್ಯವಾಗುತ್ತದೆ. ಸೃಜನಶೀಲ ಕಲೆಗಳು ಸೂಕ್ಷ್ಮಕಾಯದ ಬೆಳವಣಿಗೆ ಪೂರಕವಾದವುಗಳು ಎಂದು ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಧ್ಯಾಯ ಬಿ. ವಿಶ್ವೇಶ್ವರ ಅಡಿಗ ಹೇಳಿದರು. ಅವರು ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ರಂಗಮಂಟಪದಲ್ಲಿ ಬುಧವಾರ ಲಾವಣ್ಯ ರಿ. ಬೈಂದೂರು ಆಶ್ರಯದಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ರಿ. ಉಪ್ಪುಂದ, ವಿ. ಆರ್. ಬಾಲಚಂದ್ರ ಮುಂಬೈ ಅವರ ಸಹಯೋಗದೊಂದಿಗೆ ಆಯೋಜಿಸಲಾದ ರಂಗಕರ್ಮಿ ಬಿ. ಸೀತಾರಾಮ ಶೆಟ್ಟಿ ಕೂರಾಡಿ ಸಂಸ್ಮರಣೆಯ ನೀನಾಸಂ ತಿರುಗಾಟ – 2019 ನಾಟಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ಲಾವಣ್ಯ ರಿ. ಬೈಂದೂರು ಅಧ್ಯಕ್ಷ ಎಚ್. ಉದಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಧ್ಯಾಯರಾ ಜನಾರ್ದನ ಉಪಸ್ಥಿತರಿದ್ದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ.ಜಿ ಮೋಹನದಾಸ್ ಅವರನ್ನು ಅಭಿನಂಧಿಸಲಾಯಿತು. ಲಾವಣ್ಯದ ಗಿರೀಶ್ ಬೈಂದೂರು ಸ್ವಾಗತಿಸಿ, ಕಾರ್ಯದರ್ಶಿ ಮೂರ್ತಿ ಬೈಂದೂರು ವಂದಿಸಿದರು. ಸುಬ್ರಹ್ಮಣ್ಯ ಜಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಅಸೋಡು ಪ್ರೆಂಡ್ಸ್ ಅವರು ಆಯೋಜಿಸಿದ ಪ್ರೊ. ಡಾ. ಅಸೋಡು ಅನಂತರಾಮ ಶೆಟ್ಟಿ ವೃತ್ತ ಹಾಗೂ ಹೈಮಾಸ್ಟ್ ವಿದ್ಯುತ್ ದೀಪವನ್ನು ಹಂಗಳೂರಿನ ಸೂಪರ್ ಗ್ರೇಡ್ ಇಲೆಕ್ಟ್ರಿಕಲ್ ಕಂಟ್ರ್ಯಾಕ್ಟರ್ ಶ್ರೀ ಕೆ. ಆರ್. ನಾಯ್ಕ್ ಉದ್ಘಾಟಿಸಿದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಎ. ಎ. ಶೆಟ್ಟಿಯವರು ಮಾತನಾಡಿ, ಹೆತ್ತವರು ಮಕ್ಕಳಿಗೆ ಓದಿನೊಂದಿಗೆ ಸಂಗೀತಾ, ಸಾಹಿತ್ಯ ಮತ್ತು ಕಲೆಗಳ ಕುರಿತು ಆಸಕ್ತಿಯನ್ನು ಬೆಳೆಸಬೇಕು. ವಿದ್ಯಾರ್ಥಿಗಳಿಗೆ ಯಾವುದೇ ಭಾಷಾ ಮಾಧ್ಯಮ ತೊಡಕಾಗುವುದಿಲ್ಲ, ಆದರೆ ಓದಿನೊಂದಿಗೆ ಸಂಸ್ಕಾರಯುತವಾದ ಜೀವನ ಕೌಶಲ್ಯಗಳನ್ನು ರೂಪಿಸಿಕೊಳ್ಳುವುದು ಬಹಳ ಮುಖ್ಯ. ಅಸೋಡಿನ ಏಕೋಪಾಧ್ಯಾಯ ಕನ್ನಡ ಮಾಧ್ಯಮ ಶಾಲೆಯಲ್ಲಿ ಗುರುಕುಲ ಶಿಕ್ಷಣ ಪದ್ಧತಿಯಲ್ಲಿ ಶಿಕ್ಷಣ ಪಡೆದಿದ್ದು ನನಗೆ ಅಂತರಾಷ್ಟ್ರೀಯ ಖ್ಯಾತಿಯ ವೈದ್ಯನಾಗಲು ಸಾಧ್ಯವಾಯಿತು. ಗುರುವಿನ ಮಾರ್ಗದರ್ಶನ ಮತ್ತು ನಿರ್ದಿಷ್ಟ ಗುರಿಯಿಂದ ಯುವಜನತೆ ಮಾಹಾನ್ ಸಾಧನೆ ಮಾಡಲು ಸಾಧ್ಯ ಎಂದರು. ಕಾಳಾವಾರ ಗ್ರಾಮ ಪಂಚಾಯತ್ನ ಅಧ್ಯಕ್ಷ ಸುಖಾನಂದ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಅಸೋಡು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಎಚ್.…
