Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೇಂದ್ರದ ಪರ್ವತ ಮಾಲಾ ಯೋಜನೆಯಡಿ ಅನುಷ್ಠಾನಗೊಳ್ಳಲಿರುವ ನೂತನ ಕೇಬಲ್ ಕಾರ್ ಯೋಜನೆಯನ್ನು ಶೀಘ್ರವೇ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೊಡಚಾದ್ರಿಯಿಂದ ಕೊಲ್ಲೂರಿನವರೆಗೆ ಕೇಬಲ್ ಕಾರ್ ನಿರ್ಮಾಣಕ್ಕೆ ಇರುವ ತೊಡಕುಗಳನ್ನು ಪರಿಹರಿಸಲು ಪ್ರವಾಸೋಧ್ಯಮ ಇಲಾಖೆ, ಅರಣ್ಯ ಇಲಾಖೆ, ರಾಷ್ಟೀಯ ಹೆದ್ದಾರಿ ಅಧಿಕಾರಿಗಳ ಜೊತೆಗೆ ಸೇರಿ ಪರಿಹರಿಸಿ, ಕನಿಷ್ಠ ಒಂದು ತಿಂಗಳ ಅವಧಿಯಲ್ಲಿ ಡಿಪಿಆರ್ ಮಂಜೂರಾತಿ ಪಡೆಯುವುದಾಗಿ ಸಂಸದ ಬಿ. ವೈ. ರಾಘವೇಂದ್ರ ತಿಳಿಸಿದ್ದಾರೆ. ಶನಿವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕೊಡಚಾದ್ರಿಯ ಸರ್ವಜ್ಞ ಪೀಠದಿಂದ – ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ತನಕ ಕೇಬಲ್ ಕಾರ್ ಅಳವಡಿಸಿವ ಕಾಮಗಾರಿಗೆ ಕೇಂದ್ರದ ಭೂ ಸಾರಿಗೆ ಮಂತ್ರಾಲಯದ ನ್ಯಾಶನಲ್ ಹೈವೇ ಲಾಜಿಸ್ಟಿಕ್ ಮ್ಯಾನೇಜ್ಮೆಂಟ್ (NHLML) ಅಧಿಕಾರಿಗಳ ತಂಡವು ಡಿಪಿಆರ್ ಮತ್ತು ಪತನ ನಕ್ಷೆಯನ್ನು ಅಂತಿಮಗೊಳಿಸಲು ಹಾಗೂ ಡಿಪಿಆರ್ ಅನುಮೋದನೆಗೆ ಇರುವ ತೊಡಕುಗಳ ಬಗ್ಗೆ ಅಭ್ಯಾಸ ಮಾಡಿ, ಪರಿಶೀಲಿಸುವ ನಿಟ್ಟಿನಲ್ಲಿ ಎರಡು ದಿನದ ಸರ್ವೇ ಕಾರ್ಯ ಮತ್ತು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕೇಬಲ್ ಕಾರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಯೊಬ್ಬರಲ್ಲಿಯೂ ಪರಿಸರ ಕಾಳಜಿ ಇದ್ದಾಗ ಮಾತ್ರ ಪರಿಸರ ಸ್ನೇಹಿ ಸಮಾಜ ನಿಮಾ೯ಣ ಮಾಡಲು ಸಾಧ್ಯವಿದೆ. ಮೊದಲು ನಾವು ಬದಲಾಗಬೇಕು. ಪರಿಸರ ಪೂರಕ ವಸ್ತುಗಳ ಬಳಕೆಯಿಂದ ನಮ್ಮ ಆರೋಗ್ಯದ ಜತೆಯಲ್ಲಿ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು ಅವಕಾಶವಿದೆ ಎಂದು ಪತ್ರಕರ್ತ ಗಣೇಶ್ ಐಶ್ವರ್ಯ ಬೀಜಾಡಿ ಹೇಳಿದರು. ಕೋಟೇಶ್ವರ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸಕಾ೯ರಿ ಪ್ರಥಮ ದಜೆ೯ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಬಿಬಿಎ ವಿದ್ಯಾಥಿ೯ಗಳಿಂದ ಕಾಲೇಜಿನ ಸಭಾಭವನದಲ್ಲಿ ಜರುಗಿದ ಪರಿಸರ ಸ್ನೇಹಿ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ಎಸ್.ನಾಯಕ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದು ಪರಿಸರವನ್ನು ಮಾಲಿನ್ಯ ಮತ್ತು ನಾಶಪಡಿಸುವಂತಹ ಕೆಲಸಗಳು ನಡೆಯುತ್ತಿವೆ. ಪ್ರಕೃತಿ ದತ್ತವಾದ ಸಂಪನ್ಮೂಲಗಳನ್ನು ಕಾಪಾಡಿಕೊಂಡು ಮತ್ತು ನೈಸಗಿ೯ಕ ವಸ್ತುಗಳನ್ನು ವೃದ್ಧಿಸಿಕೊಳ್ಳಬೇಕಾಗಿರುವುದು ನಮ್ಮ ಕರ್ತವ್ಯ. ಶಿಕ್ಷಣ ಸಂಸ್ಥೆ ಎನ್ನುವುದು ಕೇವಲ ಪ್ರಮಾಣ ಪತ್ರಗಳನ್ನು ಉತ್ಪಾದಿಸುವ ಪ್ಯಾಕ್ಟರಿಯಾಗಬಾರದು. ವಿದ್ಯಾಥಿ೯ಗಳಲ್ಲಿ ಸಮಾಜಮುಖಿ ಚಿಂತನೆಗಳನ್ನು ಬಿತ್ತಿಸಲು ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿವೃತ್ತ ಮುಖ್ಯ ಶಿಕ್ಷಕ ಕಂದಾವರ ಕಂಗೊಳ್ಳಿಮನೆ ಕೆ ಪ್ರಭಾಕರ ಹೆಗ್ಡೆ (89) ಅಲ್ಪಕಾಲದ ಅಸೌಖ್ಯದಿಂದಾಗಿ ಸೋಮವಾರ ಬೆಳಗ್ಗೆ ಅಂಪಾರು ಕಂಚಾರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. 39 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಅವರು ಅಂಪಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿದ್ದರು. ರಾಮಾಯಣ ವಾಚಕರಾಗಿದ್ದ ಅವರು ಪರಿಸರದ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರೀಯವಾಗಿದ್ದ ಅವರು ಅಪಾರ ಜನಮನ್ನಣೆ ಪಡೆದಿದ್ದರು. ಮೃತರಿಗೆ ಪುತ್ರ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕಿರಣ್ ಹೆಗ್ಡೆ ಅಂಪಾರು ಹಾಗೂ ಬಂಧು-ಬಳಗದವರಿದ್ದಾರೆ. ವಿಧಾನಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮುಂತಾದವರು ಮೃತರ ಮನೆಗೆ ತೆರಳಿ ಅಂತಿಮ ನಮನ ಸಲ್ಲಿಸಿದ್ದಾರೆ. ಶೃದ್ದಾಂಜಲಿ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಶ್ವದಲ್ಲಿ ಕೋಟ್ಯಾಂತರ ಜನರು ಕಣ್ಣಿನ ವಿವಿಧ ದೋಷಗಳಿಂದ ಬಳಲುತ್ತಿದ್ದು, ಅನೇಕರು ದೃಷ್ಟಿಯನ್ನು ಕಳೆದು ಕೊಂಡಿದ್ದಾರೆ. ಹೀಗಾಗಿ ಜನರು ಕಣ್ಣಿನ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕು. ಕಾಲಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವುದರಿಂದ ಕಣ್ಣಿನ ದೋಷಗಳನ್ನು ನಿವಾರಿಸಿಕೊಳ್ಳಲು ಸಾಧ್ಯವಿದೆ. ಕಣ್ಣಿನ ಆರೋಗ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸಿ, ಕಣ್ಣಿನ ತಪಾಸಣಾ ಶಿಬಿರಗಳ ಮೂಲಕ ಜನರ ಪಾಲಿಗೆ ಬೆಳಕಾಗಬೇಕಾದದ್ದು ಸಂಘ ಸಂಸ್ಥೆಗಳ ಕರ್ತವ್ಯವಾಗಿದೆ ಎಂದು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಹೇಳಿದರು. ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನ ಟ್ರಸ್ಟ್ ಬಸ್ರೂರು ಮತ್ತು ಜಿಎಸ್‌ಬಿ ಸಮಾಜ ಬಸ್ರೂರು ಇವರ ಜಂಟಿ ಆಶ್ರಯದಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆ ಸಹಯೋಗದೊಂದಿಗೆ ಬಸ್ರೂರು ಮಂಡಿಕೇರಿಯ ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಸಭಾಭವನದಲ್ಲಿ ನಡೆದ ಉಚಿತ ನೇತ್ರ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಟಿ.ನಾರಾಯಣ ಪೈ ಅಧ್ಯಕ್ಷತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ತಾಲೂಕು ಮಟ್ಟದಲ್ಲಿ ಜಯಗಳಿಸಿದ ಎರಡು ತಂಡಗಳ ಸಹಿತ ಒಟ್ಟು 14 ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದು ಸುಮಾರು 200 ಕ್ಕೂ ಹೆಚ್ಚಿನ ಆಟಗಾರರು ಭಾಗವಹಿಸಿದರು.ಲೀಗ್ ಹಂತದ ರೋಚಕ ಹೋರಾಟದ ಬಳಿಕ ಸೆಮಿಫೈನಲ್ ನಲ್ಲಿ ಚೇತನಾ ಉಡುಪಿ ಟೊರ್ಪೆಡೋಸ್ ಕುಂದಾಪುರ ತಂಡವನ್ನು ಹಾಗೂ ಕಲಾಕಿರಣ ಕೊರಂಗ್ರಪಾಡಿ ತಂಡ ಇಲೆವೆನ್ಸ್ ಬೆಳ್ಮಣ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶ ಪಡೆದರು. ಫೈನಲ್ ಪಂದ್ಯ ರವಿವಾರ ನಡೆಯಲಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೆರ್ಕಟ್ಟೆ ದಾರುಲ್ ಉಲಮ್ ಮದ್ರಾಸದ ವಿದ್ಯಾರ್ಥಿ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮದಲ್ಲಿ ಸೀನಿಯರ್ ವಿಭಾಗದ ಉರ್ದು ನಾತ್ತ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿ ಸಿರಾಜುಲ್ ಉಲೂಂ ಮದ್ರಾಸದ 8ನೇ ತರಗತಿ ವಿದ್ಯಾರ್ಥಿ ನವಾಝ್ ಎಸ್.ಜೆ.ಎಂ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮದಲ್ಲಿ ಸೀನಿಯರ್ ವಿಭಾಗದ ಕ್ಯಾಲಿಗ್ರಫಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗೆ ಸಿರಾಜುಲ್ ಉಲೂಂ ಮದ್ರಾಸದ ಗುರುಗಳು ಅಭಿನಂದಿಸಿದ್ದಾರೆ.

Read More

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ ಹಾಗೂ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ., ಉಪ್ಪುಂದ ಇವರುಗಳ ಸಂಯುಕ್ತ ಆಶ್ರಯದಲ್ಲಿ “69ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಸಮಾರೋಪ ಹಾಗೂ ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವ ಧನ ವಿತರಣಾ ಸಮಾರಂಭ”

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಶ್ವದಾದ್ಯಂತ ಸದ್ದು ಮಾಡುತ್ತಾ, ಭಾರತೀಯ ಚಿತ್ರರಂಗದಲ್ಲಿ ಹತ್ತಾರು ದಾಖಲೆಗಳನ್ನು ಬರೆದ ಕರಾಳಿಯ ಮಣ್ಣಿನ ಕಥೆಯ ಎಳೆಯನ್ನು ಒಳಗೊಂಡ ‘ಕಾಂತಾರ’ ಸಿನಿಮಾ 50 ದಿನಗಳನ್ನು ಪೂರೈಸಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ದುಬೈ ಪ್ರವಾಸದಲ್ಲಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಪ್ರಗತಿ ರಿಷಬ್ ಶೆಟ್ಟಿ ಅವರು ದಂಪತಿಗಳು ಶುಕ್ರವಾರ ದುಬೈನ ಹಯತ್ ರೆಜೆನ್ಸಿ ಥಿಯೇಟರ್’ನಲ್ಲಿ ಅಭಿಮಾನಿಗಳೊಂದಿಗೆ ಸಿನಿಮಾ ವೀಕ್ಷಿಸಿ 50 ದಿನಗಳ ಗೆಲುವನ್ನು ಸಂಭ್ರಮಿಸಿದರು. ಈ ವೇಳೆ ಫಾರ್ಚೂನ್ ಗ್ರೂಪ್ಸ್ ಪ್ರವರ್ತಕ, ನಮ್ಮ ಕುಂದಾಪ್ರ ಕನ್ನಡ ಬಳಗದ ಗೌರವಾಧ್ಯಕ್ಷರಾದ ವಕ್ವಾಡಿ ಪ್ರವೀಣ ಕುಮಾರ್ ಶೆಟ್ಟಿ, ಅಬುದಾಬಿ ಕನ್ನಡ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ, ಉದ್ಯಮಿ ಹರೀಶ್ ಶೇರಿಗಾರ್, ಕನ್ನಡ ಪಾಠಶಾಲಾ ಮುಖ್ಯಸ್ಥರಾದ ಶಶಿಧರ್ ನಾಗರಾಜಪ್ಪ, ಯುಎಇನ ಓಎಂಜಿ ಸಿನಿಮಾ ವಿತರಕರಾದ ಸೆಂಥಿಲ್ ಹಾಗೂ ಈಶ್ವರಿದಾಸ್ ಶೆಟ್ಟಿ ದುಬೈ ಕನ್ನಡಿಗ ಮಲ್ಲಿಕಾರ್ಜುನ ಗೌಡ ಮೊದಲಾದವರು ಉಪಸ್ಥಿತರಿದ್ದರು. ಥಿಯೇಟರಿನಲ್ಲಿ 300ಕ್ಕೂ ಹೆಚ್ಚು ಅಭಿಮಾನಿಗಳು ಹಾಗೂ ಹಿತೈಷಿಗಳೊಂದಿಗೆ ಸಂಪೂರ್ಣ ಸಿನಿಮಾ ವೀಕ್ಷಿಸಿದ ರಿಷಬ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ನೇತೃತ್ವದಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ 2022ರಲ್ಲಿ ತಾಲೂಕಿನ ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸಂಸ್ಥೆಗೆ ಉತ್ತಮ ಸೌಹಾರ್ದ ಸಹಕಾರಿ ಸಂಘ ಪ್ರಶಸ್ತಿ ಪ್ರದಾನಿಸಲಾಯಿತು. ರಾಜ್ಯ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಹಾಗೂ ಕಾರ್ಯದರ್ಶಿ ಕಿಟ್ಟಣ್ಣ ರೈ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ರಾಜ್ಯ ಸಹಕಾರಿ ಮಾರಾಟ ಮಹಾಮಂಡಳ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕರಾದ ವೇದವ್ಯಾಸ ಡಿ. ಕಾಮತ್, ಮಂಗಳೂರು ಕ್ಷೇತ್ರ ಶಾಸಕರಾದ ಯು.ಟಿ. ಖಾದರ್, ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕುಮಾರ್…

Read More