ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವವಿನಾಯಕ ಪಿಯು ಕಾಲೇಜಿನ ವಿದ್ಯಾರ್ಥಿಗಳ ವಾಣಿಜ್ಯ ವಿಭಾಗ ವತಿಯಿಂದ ಬ್ಯಾಂಕ್ ಆಫ್ ಬರೋಡ ಕುಂಭಾಶಿ ಶಾಖೆಗೆ ಭೇಟಿ ನೀಡಿದರು. ಬ್ಯಾಂಕಿನ ಮ್ಯಾನೇಜರ್ ಬಿ. ಕರುಣಾಕರ್ ಶೆಟ್ಟಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಬ್ಯಾಂಕ್ ಎನ್ನುವುದು ಹಣವನ್ನು ಇಡುವ ಸುರಕ್ಷಿತ ಸ್ಥಳ, ಜನರಿಗೆ ಹಣವನ್ನು ಉಳಿಸುವ ಮತ್ತು ನಿರ್ವಹಿಸುವ, ಉಳಿತಾಯ ಖಾತೆ ತೆರೆಯುವ, ಸಾಲ ನೀಡುವ, ಬಡ್ಡಿಗಳಿಸಲು ಹಣವನ್ನು ಠೇವಣಿ ಇಡುವ, ಇಂಟರ್ನೆಟ್ ಬ್ಯಾಂಕಿಂಗ್, ಆನ್ಲೈನ್ ಬ್ಯಾಂಕಿಂಗ್ಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಮನೋಜ್ ಕುಮಾರ್, ಆಡಳಿತ ನಿರ್ದೇಶಕ ಹರೀಶ್ ಎನ್., ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೇಯ, ಸೌಜನ್ಯ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪ್ರಾರ್ಥನಾ ಕಾಮತ್ ಮತ್ತು ಸಾಕೇತ್ ವಂದಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂಸ ಉದ್ದಿ.ಕೋಟ: ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸಾಸ್ತಾನ ಇವರ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಹಾಗೂ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಇತ್ತೀಚಿಗೆ ಜರಗಿತು. ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೆರೆದ ಪರಿಸರದ ಗರ್ಭಿಣಿಯರು, ಬಾಣಂತಿಯರನ್ನು ಉದ್ದೇಶಿಸಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಘವೇಂದ್ರ ರಾವ್ ಮಾತನಾಡಿ, ನವಜಾತ ಶಿಶುವಿಗೆ ತಾಯಿಯ ಎದೆಹಾಲು ಅಮೃತ ಸಮಾನ, ಹೆರಿಗೆಯಾದ ಒಂದು ಗಂಟೆಯ ಒಳಗೆ ನೀಡುವ ಎದೆ ಹಾಲಿನಿಂದ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ತಿಳಿಸಿದರು. ಗರ್ಭಿಣಿ ಹಾಗೂ ಬಾಣಂತಿಯರಿಗೆ ಆರೋಗ್ಯ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ನೆರೆದಿದ್ದ ಎಲ್ಲಾ ತಾಯಂದಿರಿಗೆ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ವತಿಯಿಂದ ಪೌಷ್ಟಿಕ ಆಹಾರವನ್ನು ವಿತರಿಸಲಾಯಿತು. ಸಮಾರಂಭವನ್ನು ರೋಟರಿ ಅಧ್ಯಕ್ಷೆ ಕುಸುಮಾ ಮನೋಜ್ ಉದ್ಘಾಟಿಸಿ, ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ರೋಟರಿ ಕ್ಲಬ್ ವತಿಯಿಂದ ಶಿಶುವಿಗೆ ಹಾಲುಣಿಸುವಾಗ ತಾಯಂದಿರು ವಹಿಸಬೇಕಾದ ಎಚ್ಚರಿಕೆ ಕುರಿತು…
ಕುಂದಾಪ್ರ ಡಾಟ್ ಕಾಂ | ಯಾಕೂಬ್ ಖಾದರ್ ಗುಲ್ವಾಡಿ.ಚಿತ್ರರಂಗ ಎನ್ನುವುದು ಬರಿ ವೈಭವದ ಜಗತ್ತಷ್ಟೇ ಅಲ್ಲ; ಅದೊಂದು ಆಳವಾದ ಅಧ್ಯಯನ, ನಿರಂತರ ಚಿಂತನೆ ಮತ್ತು ಸಾಮಾಜಿಕ ಜವಾಬ್ದಾರಿಯ ಮಾಧ್ಯಮ ಎಂಬುದನ್ನು ತಮ್ಮ ಬರವಣಿಗೆ ಹಾಗೂ ನಿರ್ದೇಶನದ ಮೂಲಕ ಸಾಬೀತುಪಡಿಸಿದವರು ಡಾ. ಪ್ರದೀಪ್ ಕುಮಾರ್ ಶೆಟ್ಟಿ ಕೆಂಚನೂರು. ಬಾಲ್ಯದ ಗೆಳೆಯನಾಗಿ, ಅವರ ಈ ಶೈಕ್ಷಣಿಕ ಹಾಗೂ ಸೃಜನಶೀಲ ಹಾದಿಯನ್ನು ಹತ್ತಿರದಿಂದ ಕಂಡ ನನಗೆ, ಇಂದು ಅವನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪಡೆಯುತ್ತಿರುವ ಗೌರವಗಳು ಅತ್ಯಂತ ಹೆಮ್ಮೆಯ ಕ್ಷಣಗಳನ್ನು ತಂದಿತ್ತಿವೆ. ಇತ್ತೀಚೆಗಷ್ಟೇ ಪ್ರಕಟಗೊಂಡ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ (2024) ಯಲ್ಲಿ, ಡಾ. ಪ್ರದೀಪ್ ಬರಹದ ‘ನಾನಿರುವುದು ನಮಗಾಗಿ ನಾಡಿರುವುದು ನಮಗಾಗಿ: ಕನ್ನಡ ಸಿನಿಮಾದ ತತ್ವ ಮತ್ತು ರಾಜಕೀಯ’(ಮಿರರ್ ಪುಸ್ತಕ, ಕುಂದಾಪುರ) ಪ್ರಕಟಿಸಿರುವ ಕೃತಿಗೆ ಅತ್ಯುನ್ನತ “ಸ್ವರ್ಣ ಕಮಲ” ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಚಲನಚಿತ್ರ ಕುರಿತ ಅತ್ಯುತ್ತಮ ಕೃತಿಗೆ ನೀಡಲಾಗುವ ಈ ಪ್ರಶಸ್ತಿಯು ಕನ್ನಡ ಸಾಹಿತ್ಯ ಲೋಕಕ್ಕೆ ಹಾಗೂ ನಮ್ಮ ಕರಾವಳಿ ಭಾಗಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯ ಮೂಲಕ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ (ಕ್ಯಾಟರಿಂಗ್), ಅಂಗಡಿ, ಟೈಲರಿಂಗ್, ಟ್ಯಾಕ್ಸಿ ಹಾಗೂ ಹಸು ಸಾಕಾಣಿಕೆಯಂತಹ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ಒದಗಿಸುತ್ತಿದ್ದು ಯೋಜನೆಯ ಅಡಿಯಲ್ಲಿ 18 ರಿಂದ 65 ವರ್ಷದ ಒಳಗಿನ ಅಭ್ಯರ್ಥಿಗಳಿಗೆ ಕನಿಷ್ಠ 1 ಲಕ್ಷ ಹಾಗೂ ಗರಿಷ್ಠ 2 ಲಕ್ಷಗಳ ರೂ.ಗಳ ಸಾಲ-ಸಹಾಯಧನ ನೀಡಲಾಗುವುದು. ಇದರಲ್ಲಿ ಶೇ.20 ಸಬ್ಸಿಡಿ ಇದ್ದು ಉಳಿಕೆ ಶೇ.80 ಸಾಲದ ಮೊತ್ತಕ್ಕೆ ಶೇ. 4ರಷ್ಟು ಬಡ್ಡಿಯಂತೆ ಒಟ್ಟು 34 ಕಂತುಗಳಲ್ಲಿ ಸಾಲ ಮರು ಪಾವತಿಸಬಹುದಾಗಿದೆ. ಮಹಿಳೆಯರಿಗೆ ಶೇ. 33 ಹಾಗೂ ವಿಶೇಷಚೇತನರಿಗೆ ಶೇ. 5 ಮೀಸಲಾತಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದ್ದು ಆಸಕ್ತರು Ksbdb.karnataka.gov.in ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8762249230 ಸಂಪರ್ಕಿಸಬಹುದು ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗಡಿನಾಡು ಕಾಸರಗೋಡಿನ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ಸ್ಥಾಪಕ ಸಂಚಾಲಕರಾಗಿರುವ ಖ್ಯಾತ ಕನ್ನಡಪರ ಸಂಸ್ಥೆ ಕನ್ನಡ ಭವನದ ರಜತ ಸಂಭ್ರಮ – ಸಮಾರೋಪ ಕಾರ್ಯಕ್ರಮದಲ್ಲಿ ಬೆಳ್ಳಾರಿಯ ಖ್ಯಾತ ವರ್ಷಿಣಿ ಎಂಟರ್ಪ್ರೈಸಸ್ ಮಾಲಿಕರಾದ, ಸುಮಾರು 3500 ಉದ್ಯೋಗಾರ್ಥಿಗಳಿಗೆ ಅನ್ನದಾತರಾಗಿರುವ, ಸಾಮಾಜಿಕ ಧಾರ್ಮಿಕ ಕ್ಷೇತ್ರಗಳಲ್ಲಿ ಸೇವಾ ನಿರತರಾಗಿರುವ ಶ್ರೀ ಕೊತ್ವಾಲ್ ಪದ್ಮನಾಭ ಶೇರುಗಾರ್ ಅವರಿಗೆ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ ನಲ್ಲಿ “ಉದ್ಯೋಗ ರತ್ನ “ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಮ್ಮೇಳನ ಸರ್ವಾಧ್ಯಕ್ಷರಾದ ನಿವ್ರಿತ್ತ ಐ.ಎ. ಎಸ್ ಅಧಿಕಾರಿ, ಮಾಜಿ ಕರ್ನಾಟಕ ಸರಕಾರದ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಸೋಮಶೇಖರ್ ಐ. ಎ.ಎಸ್, ಶ್ರೀಮದ್ ಎಡನೀರು ಮಠ ಅದೀಶರಾದ ಶ್ರೀ ಸಚ್ಚಿದಾನಂದ ಭಾರತೀ ತೀರ್ಥರು, ಡಾ. ಬಾಲಕೃಷ್ಣ ಎಸ್. ಮದ್ದೋಡಿ ಎಮ್.ಐ.ಟಿ. ಮಣಿಪಾಲ್ ಸೇರಿ ಕನ್ನಡ ಭವನ ರೂವಾರಿಗಳಾದ ಡಾ. ವಾಮನ್ ರಾವ್ ಬೇಕಲ್ ಅವರು ಕೋತ್ವಲ್ ಪದ್ಮನಾಭ ಶೇರುಗಾರ್ ಅವರಿಗೆ ಪ್ರದಾನ ಮಾಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿ ಶಿಕ್ಷಣದ ಜೊತೆಗೆ ನಾಯಕತ್ವ, ಸಹಾಯ, ಸಹಕಾರ ಮನೋಭಾವದೊಂದಿಗೆ ದೇಶಪ್ರೇಮವನ್ನು ಬೆಳೆಸಿಕೊಳ್ಳಿ. ಆ ಮೂಲಕ ಮುಂದೆ ದೇಶದ ಒಳ್ಳೆಯ ಪ್ರಜೆಗಳಾಗುವುದರೊಂದಿಗೆ ಭವಿಷ್ಯದ ನಾಯಕರಾಗಿ ಎಂದು ಉಡುಪಿ ಜಿಲ್ಲೆಯ ಅಥ್ಲೇಟಿಕ್ ಅಸೋಸಿಯೇಶನ್ಸ್ ಅಧ್ಯಕ್ಷರಾದ ಲಯನ್ ಹರಿಪ್ರಸಾದ್ ರೈ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ 2026-27ನೇ ಸಾಲಿನ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭ ಅವರು ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವ ಮೂಲಕ ದೈಹಿಕ ಕ್ಷಮತೆಯೊಂದಿಗೆ ಮಾನಸಿಕ ಕ್ಷಮತೆಯನ್ನು ಮೈಗೂಡಿಸಿಕೊಳ್ಳಿ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಹೆಚ್ಚು ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು. ಆ ಮೂಲಕ ನಾಯಕತ್ವದೊಂದಿಗೆ ಸಮಾಜಮುಖಿಯಾಗಿ ಚಿಂತಿಸುವಂತಾಗಬೇಕು ಎಂದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೃಷಿಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡುವ ಉದ್ದೇಶದಿಂದ ಸ್ಥಳೀಯ ವಿಶ್ವ ವಿನಾಯಕ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಕೆಸರು ಗದ್ದೆಯಲ್ಲಿ ಭತ್ತದ ನಾಟಿ ನೆಡುವ ಕಾರ್ಯಕ್ರಮವನ್ನು ತೆಕ್ಕಟ್ಟೆ ಗ್ರಾಮದ ದ್ಯಾವಸ ಊರಿನ ಪಾರ್ವತಿ ಶೆಟ್ಟಿ ಅವರ ಗದ್ದೆಯಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಸ್ಥಳೀಯರು ಹಾಗೂ ರೈತರ ಮಾರ್ಗದರ್ಶನದಲ್ಲಿ ಕೆಸರು ಗದ್ದೆಗೆ ಇಳಿದು ಭತ್ತದ ನಾಟಿಯನ್ನು ನೆಟ್ಟರು. ನಾಟಿ ನೆಡುವ ವಿಧಾನ, ಕೃಷಿಯಲ್ಲಿ ಬಳಸುವ ಉಪಕರಣಗಳು ಹಾಗೂ ಭತ್ತದ ಬೆಳೆಯ ಆರೈಕೆಯ ಕುರಿತು ರೈತರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಸಂತೋಷದಿಂದ ನಾಟಿ ನೆಟ್ಟು ಕೃಷಿಯ ಅನುಭವವನ್ನು ಪಡೆದರು ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕೃಷಿಯ ಬಗ್ಗೆ ಆಸಕ್ತಿ ಹಾಗೂ ರೈತರ ಪರಿಶ್ರಮದ ಬಗ್ಗೆ ಗೌರವವನ್ನು ಹೆಚ್ಚಿಸಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಚರ್ಚ್ ರಸ್ತೆಯಲ್ಲಿ ವ್ಯಕ್ತಿಯೊರ್ವನನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಬಾರ್ಕೂರು ಕಳ್ಳೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಕೊಲೆಯಾದ ವ್ಯಕ್ತಿ. ಕುಂದಾಪುರಕ್ಕೆ ಎರಡನೇ ಪತ್ನಿಯೊಂದಿಗೆ ಕಾರಿನಲ್ಲಿ ಬಂದಿದ್ದಾಗ ಕುಂದಾಪುರ ಚರ್ಚ್ ಎದುರಿಗೆ ಶುಕ್ರವಾರ ಬೆಳಗಿನ ಜಾವ 03:30ರ ಸುಮಾರಿಗೆ ಈ ಘಟನೆ ನಡೆದಿದೆ. ಪಿಸ್ತೂಲ್ ಮೂಲಕ ಆರೋಪಿ ಗುಂಡು ಹೊಡೆದು ಪರಾರಿಯಾಗಿದ್ದು ತೀವ್ರ ರಕ್ತಸ್ರಾವದಿಂದ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಹಿಳೆ ಆರೋಪಿಯನ್ನು ಗುರುತು ಹಚ್ಚಿದ್ದು ಪರಾರಿಯಾದ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹಣಕಾಸು ಅಥವಾ ಬೇರೆ ಯಾವುದೇ ವ್ಯವಹಾರದಿಂದ ಈ ಕೊಲೆ ನಡೆದಿರಬಹುದೆಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಆಗಿದ್ದೇನು?ಗುರುವಾರ ರಾತ್ರಿ ರಾತ್ರಿ 11:45ರ ಸುಮಾರಿಗೆ ಆರೋಪಿ ಡೆರಿಕ್ನು, ಐವನ್ ಅವರಿಗೆ ಕರೆ ಮಾಡಿ ಚಟ್ಲಿ ಕೊಡುವ ವಿಚಾರದಲ್ಲಿ ಹಣ ಬರಲು ಬಾಕಿ ಇದ್ದು, ಈ ವಿಚಾರದಲ್ಲಿ ಡೆರಿಕ್ ನು ಮದ್ಯಸ್ಥಿಕೆ ವಹಿಸಿ ಹಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ದೇವಿ ಮಾರಿಕಾಂಬ ಸೌಹಾರ್ದ ಸಹಕಾರಿ ಸಂಘ ನಿ. ಕೋಡಿ ಕನ್ಯಾಣ ಇದರ ಐದನೇ ವಾರ್ಷಿಕ ಸಾಮಾನ್ಯ ಸಭೆ ಮಾರಿಕಾಂಬ ದೇಗುಲದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೃಷ್ಣ ಕೆ. ವಹಿಸಿದ್ದರು. ಸಂಘವು ವರದಿ ವರ್ಷದಲ್ಲಿ 10,33,194 ರೂ ಲಾಭವನ್ನು ಗಳಿಸಿದ್ದು ಸದಸ್ಯರಿಗೆ ಶೇಕಡಾ 9.5 ಡಿವಿಡೆಂಡ್ ನೀಡುವುದಾಗಿ ಅಧ್ಯಕ್ಷರಾದ ಕೃಷ್ಣ ಕೆ ಘೋಷಿಸಿದರು. ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ ಮತ್ತು ಕಲಾ ಕ್ಷೇತ್ರಗದಲ್ಲಿ ಸಾಧನೆಗೈದ ಸಾಧಕರಾದ ವಿಜಯ್ ನಾಯರಿ, ರಾಜೇಶ್ ಎನ್ ಕರ್ಕೇರ, ಸತೀಶ್ ಖಾರ್ವಿ ಹಾಗೂ ಪ್ರಕಾಶ್ ಖಾರ್ವಿ ಅವರುಗಳನ್ನು ಸನ್ಮಾನಿಸಲಾಯಿತು. ಅಶಕ್ತರಿಗೆ ಸಹಾಯಧನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಅರುಣ ಜಿ. ಕುಂದರ್ ಹಾಗೂ ನಿರ್ದೇಶಕರುಗಳಾದ ಪ್ರಭಾಕರ ಎನ್. ಬಂಗೇರ, ಹರ್ಷ ಕೆ.ಬಿ., ಶುಭಕರ ಕುಂದರ್, ಸುಧಾಕರ ಎಸ್. ಕಾಂಚನ್, ದಿನೇಶ್ ಪೂಜಾರಿ, ಸುಜಾತ ಎಸ್., ಪುಷ್ಪಲತಾ ಎಸ್. ಸುವರ್ಣ, ಗುಲಾಬಿ ಹಾಗೂ ಸಹಕಾರಿಯ ಕಾನೂನು ಸಲಹೆಗಾರರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿಕೋಟ: ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆಯು ಮಂಗಳವಾರ ಕೋಟತಟ್ಟು ಪಡುಕರೆಯ ಶ್ರೀ ಸದ್ಯೋಜಾತ ದೇಗುಲದ ಸಭಾಂಗಣದಲ್ಲಿ ಜರಗಿತು. ಸಂಘದ 2025-26ನೇ ಸಾಲಿನಲ್ಲಿ ರೂ 3,81,893.29 ನಿವ್ವಳ ಲಾಭ ಗಳಿಸಿದ್ದು ಅದರಲ್ಲಿ ಉತ್ಪಾದಕರಿಗೆ ಶೇ.65% ಬೋನಸ್ ರೂಪದಲ್ಲಿ 1 ಲೀಟರ್ ಹಾಲಿಗೆ ರೂ. 2.34 ಪೈಸೆ ಯಂತೆ ಹಾಗೂ ಶೇಕಡಾ 25 ಡಿವಿಡೆಂಟ್ ಒಟ್ಟಿಗೆ 1.85.900 ರೂ ಗಳನ್ನು ವಿಂಗಡಿಸಿ ಉತ್ಪಾದಕರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾದ ಬಗ್ಗೆ ಸಭೆಯ ಗನಮಕ್ಕೆ ತರಲಾಯಿತು. ಸಭೆಯಲ್ಲಿ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಂಘ ಮಂಗಳೂರು ಇದರ ವಿಸ್ತರಣಾಧಿಕಾರಿ ಉಮೇಶ್ ಕುಂದರ್ ಒಕ್ಕೂಟದಿಂದ ಸಿಗುವ ಸವಲತ್ತುಗಳ ಕುರಿತು ವಿವರವಾಗಿ ಸದಸ್ಯರಿಗೆ ತಿಳಿಸಿ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಉತ್ತಮ ಗುಣ ಮಟ್ಟದ ಹಾಲನ್ನು ನೀಡಿ ಸಂಘದ ಅಭಿವೃದ್ಧಿಗೆ ಸಹಕರಿಸಿ ಮುಂದಿನ ಪೀಳಿಗೆಗೆ ಹೈನುಗಾರಿಕೆಯಲ್ಲಿ ತೊಡಗಿಕೊಳ್ಳುವ ಕುರಿತು ಮಾಹಿತಿ ನೀಡಿದರು. ಸಾಸ್ತಾನ ಶಿಬಿರ ವ್ಯಾಪ್ತಿಯ ಪಶು ವೈದ್ಯಧಿಕಾರಿ ನಿಜಾಮ್ ಪಟೇಲ್ ರಾಸು ಸಾಕಾಣಿಕೆ…
