Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಭಟ್ಕಳ: ಇಲ್ಲಿನ ಹನುಮಾನನಗರದ ಮಮತಾ ದೇವೇಂದ್ರ ನಾಯ್ಕ್ ಅವರು ಮಂಡಿಸಿರುವ ‘ಕೆಲವು ಪ್ರಮುಖ ಆವರ್ತಕ ಸಂಯುಕ್ತಗಳ ಸಂಶ್ಲೇಷಣೆ, ಗುಣಲಕ್ಷಣ ಮತ್ತು ಜೈವಿಕ ಮೌಲ್ಯಮಾಪನ’ (Synthesis, Characterization And Biological Evaluation Of Some Novel Heterocyclic Compounds) ಸಂಶೋಧನಾ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಪಿಎಚ್ಡಿ ಪದವಿ ಪ್ರದಾನ ಮಾಡಿದೆ. ಅವರು ಕುವೆಂಪು ವಿಶ್ವವಿದ್ಯಾಲಯದ ರಸಾಯನಶಾಸ್ತ್ರದ ಸಂಶೋಧನೆ ಮತ್ತು ಸ್ನಾತಕೋತ್ತರ ಅಧ್ಯಯನ ವಿಭಾಗದ ಯಾದವ ಬೋಡ್ಕೆ ಅವರ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ್ದರು. ಮಮತಾ ನಾಯ್ಕ್ ಅವರು ಪ್ರಸ್ತುತ ಭಟ್ಕಳದ ಸಿದ್ದಾರ್ಥ ಪದವಿಪೂರ್ವ ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಸಾಧನೆಗೆ ಕುಟುಂಬಸ್ಥರು, ಹನುಮಾನನಗರದ ನಾಮಧಾರಿ ಸಮಾಜ, ಯುವಕ ಮಂಡಲ, ಜೈ ಹನುಮಾನ್ ಯುವಕ ಮಂಡಲ, ಜೈ ಹನುಮಾನ್ ಸ್ಪೋರ್ಟ್ಸ್ ಕ್ಲಬ್ ಹಾಗೂ ಊರಿನ ಮುಖಂಡರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ತಾಲೂಕು ಕೊಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರಿಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿಕಾರರ ಸಮಾವೇಶ ಜರಗಿತು. ಅಖಿಲ ಭಾರತ ಕೃಷಿಕೂಲಿಕಾರರ ಸಂಘ(AIAWU)ದ ಜಿಲ್ಲಾ ಪ್ರಧಾನ ಕಾಯ೯ದಶಿ೯ ವೆಂಕಟೇಶ್ ಕೋಣಿ ಸಮಾವೇಶ ಉದ್ಘಾಟಿಸಿ ಮಾತನಾಡಿ, ಕೊಲ್ಲೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಉದ್ಯೊಗ ಚೀಟಿಗಾಗಿ ಕೂಲಿಕಾರರು ಸಲ್ಲಿಸಿದ ಅಜಿ೯ಗೆ ಅನುಸಾರವಾಗಿ ಈ ಕೂಡಲೇ ಉದ್ಯೊಗ ಚೀಟಿ ಕೊಟ್ಟು,ನರೇಗಾ ಕೆಲಸ ಕೊಡಲು ಕ್ರಮ ವಹಿಸಬೇಕು ಎಂದು ಸ್ಥಳೀಯಾಡಳಿತವನ್ನು ಆಗ್ರಹಿಸಿದರು. ಈ ಸಂದರ್ಭ ಕೊಲ್ಲೂರು ಕಟ್ಟಡ ಮತ್ತು ಇತರೆ ನಿಮಾ೯ಣ ಕಾಮಿ೯ಕ ಸಂಘದ ಅಧ್ಯಕ್ಷ ನರಸಿಂಹ ಆಚಾರ್, ಮಧು, ಅಂಬಿಕಾ ಬಾಳಿಗ, ಡಾ. ಬಿ. ವಿ. ಬೇಬಿ ಹಾಲ್ಕಲ್ ಉಪಸ್ಥಿತರಿದ್ದರು. ರೇಣುಕಾ ಧನ್ಯವಾದ ಗೈದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಪ್ರಸಿದ್ಧ ಮೂಡಗಲ್ಲು ಕೇಶವನಾಥೇಶ್ವರ ದೇವಸ್ಥಾನಕ್ಕೆ ಮಂಗಳವಾರ ಕನ್ನಡದ ಖ್ಯಾತ ನಟ, ನಿರ್ದೇಶಕರುಗಳಾದ ರಕ್ಷಿತ್ ಶೆಟ್ಟಿ, ರಿಷಭ್ ಶೆಟ್ಟಿ ಭೇಟಿ ನೀಡಿದರು. ಕುಟುಂಬಿಕರೊಂದಿಗೆ ದೇವಸ್ಥಾನಕ್ಕೆ ಮೊದಲ ಭಾರಿಗೆ ಆಗಮಿಸಿದ್ದ ರಕ್ಷಿತ್ ಶೆಟ್ಟಿ ಪೂಜೆ ಸಲ್ಲಿಸಿದರು. ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರ ಕರೆಯ ಮೇರೆಗೆ ರಕ್ಷಿತ್ ಶೆಟ್ಟಿ ಆಗಮಿಸಿದ್ದರು. ಈ ಸಂದರ್ಭ ಪ್ರದೀಪ್ ಶೆಟ್ಟಿ, ದಿವ್ಯಾಧರ ಶೆಟ್ಟಿ, ಸುಹಾಸ್ ಶೆಟ್ಟಿ ಮೊದಲಾದವರು ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತ್ ಪೆಟ್ರೋಲಿಯಂ ಕಂಪೆನಿ ಲಿ. ನೂತನ ಗ್ರಾಹಕ ಅನುಕೂಲ ವ್ಯವಸ್ಥೆ ‘ಫ್ಯೂಯಲ್ ಕಾರ್ಟ್’ ವಾಹನದ ಮೂಲಕ ಡೀಸೆಲ್ ಇಂಧನ ಕರೆಯ ಮೇರೆಗೆ ಉದ್ಯಮಗಳಿಗೆ ತಲುಪಿಸುವ ಸೌಲಭ್ಯವನ್ನು ಬಿಪಿಸಿಎಲ್‌ನ ಜನರಲ್ ಮೆನೇಜರ್ ಟಿ. ಎನ್. ರಾಮಕೃಷ್ಣನ್ ಉದ್ಘಾಟಿಸಿದರು. ಕಾಲಕ್ಕೆ ಅನುಗುಣವಾಗಿ ಇಂಧನ ಸರಬರಾಜು ಮಾಡುವ ವ್ಯವಸ್ಥೆಯಲ್ಲೂ ಗ್ರಾಹಕರ ಅನುಕೂಲ ಸೌಲಭ್ಯದ ಕಡೆ ಗಮನ ಹರಿಸುತ್ತಿದ್ದೇವೆ. ಕೈಗಾರಿಕೋದ್ಯ ಮಿಗಳು ಸಹಿತ ಹೆಚ್ಚು ಇಂಧನ ಉಪಯೋಗಿಸುವವರಿಗೆ ತುಂಬ ಅನುಕೂಲ ಮಾಡಿಕೊಡುವ ‘ಫ್ಯೂಯಲ್ ಕಾರ್ಟ್’ ಎಂಬ ಸಂಚಾರಿ ಇಂಧನ ಸರಬರಾಜು ಮಾಡುವ ವ್ಯವಸ್ಥೆ ಪರಿಚಯಿಸುತ್ತಿದ್ದೇವೆ. ಮಹಾಲಸಾ ಮೋಟಾರ್ ಫ್ಯೂಯಲ್ಸ್ ಈ ಯೋಜನೆ ಅಳವಡಿಸುವಲ್ಲಿ ಮುತುವರ್ಜಿ ವಹಿಸಿ ಬಿಪಿಸಿಎಲ್ ಕಂಪೆನಿಯ ಉದ್ದೇಶ ಈಡೇರಿಸುತ್ತಿದೆ ಎಂದು ಹೇಳಿದರು. ಈ ಸಂದರ್ಭ ಕಂಪೆನಿಯ ಟೆರಿಟೆರಿ ಮೆನೇಜರ್ ಸಚಿನ್ ಕುಲಕರ್ಣಿ, ಕೋ ಒರ್ಡಿನೇಟರ್ ಗೋರಕ್‌ನಾಥ್, ಉಡುಪಿ ವಿಭಾಗದ ಸೇಲ್ಸ್ ಆಫೀಸರ್ ಶ್ರಾವ್ಯ, ಹಲವು ಉದ್ಯಮಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಕುಂಭಾಸಿ ಪ್ರಭು ಕುಟುಂಬದವರು ಉಪಸ್ಥಿತರಿದ್ದರು. ಕೆ. ಪ್ರಜ್ಞೇಶ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಮ ಪಂಚಾಯಿತಿಗಳಿಗೆ ಕೇಂದ್ರದ 15ನೇ ಹಣಕಾಸು ಆಯೋಗ ನಿಗದಿಗೊಳಿಸಿದ ಅನುದಾನ ವೆಚ್ಚಕ್ಕೆ ವಿಧಿಸಿದ ನಿರ್ಬಂಧಗಳು ಗ್ರಾಮದ ಅಗತ್ಯಗಳಿಗೆ ವೆಚ್ಚ ಮಾಡಲು ತಡೆಯಾಗುವುದರಿಂದ ಅವುಗಳನ್ನು ಸಡಿಲಿಸಬೇಕು ಎಂದು ಶಿರೂರು ಗ್ರಾಮ ಪಂಚಾಯಿತಿ ಸದಸ್ಯ ನಾಗೇಶ್ ಅಳ್ವೆಗದ್ದೆ ಆಗ್ರಹಿಸಿದ್ದಾರೆ. ಇದು ಗ್ರಾಮ ಪಂಚಾಯಿತಿಗಳ ಜನಸಂಖ್ಯೆ ಆಧರಿಸಿ ನಿಗದಿಯಾಗುವ ದೊಡ್ಡ ಮೊತ್ತದ ಅನುದಾನ. ಈ ಬಾರಿಯ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಇದರ ಶೇ40 ಅನಿರ್ಬಂಧಿತ ಮತ್ತು ಶೇ 60 ನಿರ್ಬಂಧಿತ ಅನುದಾನ. ನಿರ್ಬಂಧಿತ ಅನುದಾನದ ಶೇ30 ಕುಡಿಯುವ ನೀರು, ಶೇ 30 ನೈರ್ಮಲ್ಯ ಹಾಗೂ ತ್ಯಾಜ್ಯ ನಿರ್ವಹಣೆ ಹೊರತಾಗಿ ಅನ್ಯ ಉದ್ದೇಶಗಳಿಗೆ ವೆಚ್ಚ ಮಾಡುವಂತಿಲ್ಲ. ಶೇ 40ರ ಅನಿರ್ಬಂಧಿತ ಭಾಗವನ್ನು ಅಗತ್ಯ ಅಭಿವೃದ್ಧಿ ಕಾರ್ಯಗಳಿಗೆ ಬಳಸಬಹುದಾದರೂ ಅದರಲ್ಲಿ ಶೇ 25 ಪರಿಶಿಷ್ಟ ಜಾತಿ, ಪಂಗಡದ ಮೂಲ ಸೌಕರ್ಯ ಅಭಿವೃದ್ಧಿಗೆ ಮೀಸಲಿಡಬೇಕು. ರೂ 50 ಲಕ್ಷ ಅನುದಾನ ಪಡೆಯುವ ಗ್ರಾಮ ಪಂಚಾಯಿತಿ ರೂ 15ಲಕ್ಷವನ್ನು ಮಾತ್ರ ಗ್ರಾಮದ ಮೂಲ ಸೌಕರ್ಯ ಅಭಿವೃದ್ಧಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಬೆಂಗಾವಲು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಂಕರ ಪೂಜಾರಿ ಕಾಡಿನತಾರು ಅವರು ಮುಖ್ಯಮಂತ್ರಿ ಚಿನ್ನದ ಪದಕದೊಂದಿಗೆ ಪಡೆದ 10,000 ರೂ. ಮೊತ್ತವನ್ನು ವಿಲ್ಸ್‌ನ್ ಡಿಸೀಸ್ ಖಾಯಿಲೆಯಿಂದ ಬಳಲುತ್ತಿರುವ ಕೋಟದ ಬಾಲಕಿಯ ಲಿವರ್ ಟ್ರಾನ್ಸ್‌ಪ್ಲ್ಯಾಂಟ್ ಚಿಕಿತ್ಸೆಗೆ ಮಂಗಳವಾರ ಹಸ್ತಾಂತರಿದರು. ಈ ಸಂದರ್ಭ ಕೋಟ ಅಮೃತೇಶ್ವರಿ ದೇವಸ್ಥಾನದ ಮೆನೇಜರ್ ಗಣೇಶ್ ಹೊಳ್ಳ, ಮಗುವಿನ ಅಜ್ಜಿ, ಅರ್ಚಕರಾದ ಅಮೃತ್ ಜೋಗಿ, ಪಡುಕೆರೆ ಪೊಲೀಸ್ ಸಿಬ್ಬಂದಿ ಪ್ರಶಾಂತ್ ಉಪಸ್ಥಿತರಿದ್ದರು. ಬಾಲಕಿಯ ಚಿಕಿತ್ಸೆಗೆ ಬೇಕಿದೆ ನೆರವುಕೋಟ ಅಮೃತೇಶ್ವರಿ ದೇವಸ್ಥಾನದ ಸಮೀಪ ವಾಸಿಸುತ್ತಿರುವ ದಾಮೋದರ ಹಾಗೂ ದೀಕ್ಷಾ ದಂಪತಿಗಳ ಪುತ್ರಿ ಮಾನ್ಯ ಜೋಗಿ (೬) ವಿಲ್ಸ್‌ನ್ ಡಿಸೀಸ್‌ನಿಂದ ಬಳಲುತ್ತಿದ್ದು, ಬೆಂಗಳೂರಿನ ಆಸ್ಟರ್ ಇಂಟಿಗ್ರೆಟೆಡ್ ಲಿವರ್ ಕೇರ್ ಆಸ್ಪತ್ರೆಯ ವೈದ್ಯರಲ್ಲಿ ತೋರಿಸಿದಾಗ ಲಿವರ್ ಟ್ರಾನ್ಸ್‌ಪ್ಲ್ಯಾಂಟ್ ಚಿಕಿತ್ಸೆಯ ಅಗತ್ಯವಿರುದಾಗಿ ತಿಳಿಸಿದ್ದಾರೆ. ಚಿಕಿತ್ಸೆಗೆ ಸುಮಾರು 15ರಿಂದ 20 ಲಕ್ಷ ರೂ. ಹಣದ ಅವಶ್ಯಕತೆಯಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಕ್ಕೆ 15 ದಿನಗಳ ಒಳಗೆ ಭರಿಸುವುದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೊಳೆಗೆ ಸ್ನಾನಕ್ಕೆಂದು ತೆರಳಿದ ಯುವಕರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಆರ್ಡಿ ಗ್ರಾಮದ ಗಂಟುಬೀಳು ಎಂಬಲ್ಲಿ ಸೋಮವಾರ ನಡೆದಿದೆ. ಅಲ್ಬಾಡಿ ಗ್ರಾಮದ ನಿವಾಸಿ ಮೋಹನ ನಾಯ್ಕ್ (22) ಹಾಗೂ ಸುರೇಶ ನಾಯ್ಕ್ (19) ಮೃತ ದುರ್ದೈವಿಗಳು. ಅಲ್ಬಾಡಿ ಗ್ರಾಮದ ನಿವಾಸಿಗಳಾದ ದಿ. ಕಾಳ ನಾಯ್ಕ್ ಅವರ ಪುತ್ರ ಮೋಹನ ನಾಯ್ಕ್ (22) ಹಾಗೂ ಮಹಾಬಲ ನಾಯ್ಕ್ ಅವರ ಪುತ್ರ ಸುರೇಶ (19) ಸಾವನ್ನಪ್ಪಿದ ದುರ್ದೈವಿಗಳು. ಆಗಿದ್ದೇನು?ಅಲ್ಬಾಡಿ ಗ್ರಾಮದ ನಿವಾಸಿಗಳಾದ ದಿ. ಕಾಳ ನಾಯ್ಕ್ ಅವರ ಪುತ್ರ ಮೋಹನ ನಾಯ್ಕ್ (22) ಹಾಗೂ ಮಹಾಬಲ ನಾಯ್ಕ್ ಅವರ ಪುತ್ರ ಸುರೇಶ (19) ಅವರೊಂದಿಗೆ ಗಾರೆ ಕೆಲಸಕ್ಕೆ ಆರ್ಡಿ ಗ್ರಾಮದ ಗಂಟುಬೀಳು ಎಂಬಲ್ಲಿರುವ ಮನೆಯೊಂದಕ್ಕೆ ಕೆಲಸಕ್ಕೆಂದು ತೆರಳಿದ್ದರು. ಮಧ್ಯಾಹ್ನ ಸುಮಾರು 1.30ರ ವೇಳೆಗೆ ಕೆಲಸ ಮುಗಿಸಿ, ಸ್ನಾನಕ್ಕೆಂದು ಆ ಮನೆಯ ಸಮೀಪವೇ ಇದ್ದ ಹೊಳೆಗೆ ತೆರಳಿ ನೀರಿಗೆ ಇಳಿದ ಇಬ್ಬರೂ ಮುಳುಗಿ ಸಾವನ್ನಪ್ಪಿದ್ದಾರೆ. ಹೊಳೆ ಸುಮಾರು 15 ಅಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಸದಸ್ಯತ್ವ ಅಭಿಯಾನವು ರಾಜ್ಯಾದ್ಯಂತ ‘ಒಗ್ಗಟ್ಟಿನಲ್ಲಿ ಬಲವರ್ಧನೆ, ಭಿನ್ನ ಧ್ವನಿಯ ರಕ್ಷಣೆ’ ಎಂಬ ಘೋಷಾ ವಾಕ್ಯದಡಿ ಪ್ರಾರಂಭವಾಗಿದ್ದು, ಇದರ ಭಾಗವಾಗಿ ಜಿಲ್ಲಾ ಸದಸ್ಯತ್ವ ಅಭಿಯಾನಕ್ಕೆ ಕುಂದಾಪುರದಲ್ಲಿ ಚಾಲನೆ ನೀಡಲಾಯಿತು. ಉಡುಪಿ ಜಿಲ್ಲಾ ಮುಖಂಡರಾದ ನವಾಜ್ ಶೇಕ್ ಸದಸ್ಯತ್ವ ಕೂಪನ್ ವಿದ್ಯಾರ್ಥಿಗಳಿಗೆ ನೀಡುವ ಮುಖಾಂತರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ಝೀಶಾನ್ ಹಾಗೂ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಯಡ್ತರೆ ರಾಹುತನಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಭಟ್ಕಳ ತಾಲೂಕಿನ ಜಾಲಿಯ ಮಂಜುನಾಥ ನಾಯ್ಕ್ (44) ದಾರುಣವಾಗಿ ಮೃತಪಟ್ಟಿದ್ದಾರೆ. ಬೈಕ್ ಸವಾರ ಉಪ್ಪುಂದ ಕರ್ಕಿಕಳಿ ನಿವಾಸಿ ಕಿರಣ್ (21) ಗಂಭೀರ ಗಾಯಗೊಂಡಿದ್ದಾನೆ. ಘಟನೆಯ ವಿವರ:ಟೆಂಪೋ ಟ್ರ್ಯಾಕ್ಸ್ ಮೂಲಕ ಧರ್ಮಸ್ಥಳಕ್ಕೆ ತೆರಳಿ ಊರಿಗೆ ಹಿಂತಿರುಗುತ್ತಿದ್ದ ಭಟ್ಕಳ ಜಾಲಿಯ ತಂಡವೊಂದು ರಾಹುತನಕಟ್ಟೆ ಬಳಿ ವಾಹನ ನಿಲ್ಲಿಸಿದ್ದು, ಅವರಲ್ಲಿ ಮಂಜುನಾಥ್ ನಾಯ್ಕ್ ಎಂಬುವವರು ರಾಷ್ಟ್ರೀಯ ಹೆದ್ದಾರಿಯ ಎದುರು ಬದಿ ಇದ್ದ ಮೀನಿನ ಅಂಗಡಿಗೆ ತೆರಳುತ್ತಿದ್ದ ಸಂದರ್ಭ ಬೈಂದೂರು ಕಡೆಯಿಂದ ಬುಲೆಟ್ ಬೈಕಿನಲ್ಲಿ ಬಂದ ಯುವಕ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಅಫಘಾತದ ರಭಸಕ್ಕೆ ರಸ್ತೆ ದಾಟುತ್ತಿದ್ದ ವ್ಯಕ್ತಿಯು ಬದಿಗೆ ಎಸೆಯಲ್ಪಟ್ಟು ಅಲ್ಲಿಯೇ ಮೃತಟ್ಟಿದ್ದಾರೆ. ಬುಲೆಟ್ ಬೈಕ್ ಸವಾರ ಡಿವೈಡರ್ ಬದಿಗೆ ಬಿದ್ದಿದ್ದು, ಗಂಭೀರ ಗಾಯಗೊಂಡಿದ್ದ ಆತನನ್ನು ಚಿಕಿತ್ಸೆಗಾಗಿ ಕುಂದಾಪುರಕ್ಕೆ ಕೊಂಡೊಯ್ಯಲಾಗಿದೆ. ಬೈಂದೂರು ಪೊಲೀಸ್ ಪಿಎಸೈ ಪವನ್ ನಾಯಕ್ ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಂಕಣಿ ಖಾರ್ವಿ ಸಮಾಜದ ಪರವಾಗಿ ಶ್ರೀ ಮಹಾಕಾಳಿ ದೇವಳದ ಅಧ್ಯಕ್ಷರಾದ ಜಯಾನಂದ ಖಾರ್ವಿ ಮುಂದಾಳತ್ವದಲ್ಲಿ ಇಲ್ಲಿನ ಕೋಡಿ ಕಿನಾರೆಯಲ್ಲಿ ಸಾಂಪ್ರದಾಯಿಕ ಸಮುದ್ರ ಪೂಜೆ ಇತ್ತೀಚೆಗೆ ಜರುಗಿತು. ದೇವಳದ ಪ್ರದಾನ ಅರ್ಚಕರಾದ ಸುಮಂತ್ ಭಟ್ ಪೋರೋಹಿತ್ಯದಲ್ಲಿ ಜರುಗಿದ ಧಾರ್ಮಿಕ ಪೂಜಾ ಕಾರ್ಯದಲ್ಲಿ ಉಪಾಧ್ಯಕ್ಷರಾದ ಪಿ.ಗಣಪತಿ ಖಾರ್ವಿ ಮದ್ದುಗುಡ್ಡೆ, ಮುಕ್ತೇಸರಾದ ಆನಂದ ನಾಯ್ಕ್ , ಸಲಹೆಗಾರರಾದ ಪ್ರಕಾಶ್.ಆರ್ ಖಾರ್ವಿ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ನಾಮದೇವ ಖಾರ್ವಿ ಸಹಿತ ಆಡಳಿತ ಮಂಡಳಿಯ ಸದಸ್ಯರು, ಸಾರ್ವಜನಿಕರು ಹಾಜರಿದ್ದರು. ಕಾರ್ಯಕ್ರಮದ ಸಂಯೋಜನೆಯನ್ನು ಆಡಳಿತ ಮಂಡಳಿಯ ಸದಸ್ಯರಾದ ಸುನಿಲ್ ಖಾರ್ವಿ ತಲ್ಲೂರು ನೆರವೇರಿಸಿದರು.

Read More