Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಬಿ.ಎಸ್.ಡಬ್ಲೂ ಹಾಗೂ ಫುಡ್ ಆಂಡ್ ನ್ಯೂಟ್ರೀಷನ್ ವಿಭಾಗದ ವತಿಯಿಂದ ‘ಅನ್ವೇಷಣಾ’ ರಿಸರ್ಚ್ ಫೋರಂ ಉದ್ಘಾಟನಾ ಕಾರ್ಯಕ್ರಮವು ಸುಂದರಿ ಆನಂದ ಆಳ್ವ ಕ್ಯಾಂಪಸ್‌ನಲ್ಲಿ ಜರುಗಿತು. ಆಳ್ವಾಸ್ ಕಾಲೇಜಿನ ಸಂಶೋಧನಾ ವಿಭಾಗದ ಸಂಯೋಜಕ ಡಾ. ಸುಕೇಶ್ ಮಾತನಾಡಿ, ಸಂಶೋಧನೆಯ ಹಲವು ಆಯಾಮಗಳ ಬಗ್ಗೆ ಮಾಹಿತಿ ನೀಡಿದರು. ಸಂಶೋಧನೆಯ ಕೌಶಲ್ಯ ತರಗತಿಯಲ್ಲಿ ಪಾಠ ಕೇಳುವುದರಿಂದ ಬರುವುದಲ್ಲ, ಪರಸ್ಪರ ಚರ್ಚಿಸಿ ಪ್ರಶ್ನೆಗಳು ಹುಟ್ಟಿಕೊಂಡಾಗ, ಉತ್ತರವನ್ನು ಸಂಶೋಧನೆಯ ಮೂಲಕ ಕಂಡುಕೊಳ್ಳಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದರು. ಸಂಶೋಧನೆಯ ಪ್ರಕ್ರಿಯೆಗೆ ಹೆಚ್ಚಿನ ಒದು ಅಗತ್ಯ ಎಂದು ತಿಳಿಸಿದರು. ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕುರಿಯನ್ ವಿದ್ಯಾರ್ಥಿಗಳು ಪರಸ್ಪರ ಚರ್ಚೆ ನಡೆಸುವುದರಿಂದ ಯಾವುದೇ ವಿಷಯದ ಆಳ-ಅಗಲ ತಿಳಿಯಲು ಸಾಧ್ಯ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ತಿಳಿಸಿದರು. ಪದವಿ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥೆ ಡಾ. ಮಧುಮಾಲ ಕೆ. ಹಾಗೂ ಫುಡ್ ಆಂಡ್ ನ್ಯೂಟ್ರೀಷನ್ ವಿಭಾಗದ ಮುಖ್ಯಸ್ಥೆ ಆಶಿತಾ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಉಡುಪಿ, ರಾಷ್ಟೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ, ತಾಲೂಕು ಆರೋಗ್ಯ ಅಧಿಕಾರಿಗಳ ಕಛೇರಿ, ಕುಂದಾಪುರ, ತಾಲೂಕು ಆಯುಷ್ ಘಟಕ, ಕುಂದಾಪುರ ಇವರ ಆಶ್ರಯದಲ್ಲಿ ಮತ್ತು ರೋಟರಿ ಕುಂದಾಪುರ ರಿವರ್ ಸೈಡ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಸಹಭಾಗಿತ್ವದಲ್ಲಿ ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ಯೋಗ ತರಬೇತಿ ಶಿಬಿರ ಕುಂದಾಪುರದ ಮಿನಿ ವಿಧಾನ ಸೌಧದ ಆವರಣದಲ್ಲಿ ಜರಗಿತು. ಶಿಬಿರ ಉದ್ಘಾಟಿಸಿ ಮಾತನಾಡಿದ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಯೋಗ ಭಾರತೀಯ ಸಂಸ್ಕೃತಿಯಲ್ಲಿ ಅಮೂಲ್ಯ ವಾದ ಪದ್ಧತಿ, ಜಗತ್ತಿಗೆ ಮಹತ್ತರ ಕೊಡುಗೆಯನ್ನು ದೇಶ ಕೊಟ್ಟಿದೆ. ವಿಜ್ಞಾನ, ತಂತ್ರಜ್ಞಾನ, ಗಣಿತದಿಂದ ಹಿಡಿದು ಹಲವು ವಲಯಗಳಲ್ಲಿ ಕೊಡುಗೆಯನ್ನು ಕೊಟ್ಟಿದೆ. ಅದರಲ್ಲಿ ಯೋಗವು ಒಂದು, ಆಧ್ಯಾತ್ಮ ಯೋಗದ ಒಂದು ಭಾಗ. ನಮಗೆ ಏಕಾಗ್ರತೆ, ಸಕಾರಾತ್ಮಕ ಯೋಚನೆ ಮಾಡಲು ಮತ್ತು ಲವಲವಿಕೆಯಿಂದಿರಲು ಸಹಾಯ ಮಾಡುತ್ತವೆ. ಯೋಗಾಸನವು ಸೌಮ್ಯವಾದ ವ್ಯಾಯಾಮವಾಗಿದ್ದು ಅದು ನಿಮ್ಮ ಮನಸ್ಸನ್ನು ಶಾಂತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತ ಸಂವಿಧಾನ ಅರ್ಪಣಾ ದಿನವನ್ನ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ಘರ್ಜನೆ ಜಿಲ್ಲಾ ಕಚೇರಿಯಲ್ಲಿ ಮಾಲಾರ್ಪಣಾ ಮಾಡಿ ಸಂವಿಧಾನ ಅರ್ಪಣಾ ದಿನವನ್ನ ಆಚರಿಸಲಾಯಿತು. ರಾಜ್ಯ ಸಂಚಾಲಕ ಉದಯ್ ಕುಮಾರ್ ತಲ್ಲೂರು ಮಾಲಾಪರ್ಣೆ ಮಾಡಿ, ಸಂವಿಧಾನ ಹಂತ,ಹಂತವಾಗಿ ಬದಲಾವಣೆ ಮಾಡುತ್ತಿದ್ದು ದಲಿತರು ಹಿಂದುಳಿದ ವರ್ಗ ಅಲ್ಪ ಸಂಖ್ಯಾತರು ಎಚ್ಚೆತ್ತುಕೊಳ್ಳಬೇಕೆಂದು ಕರೆ ನೀಡಿದರು. ಜಿಲ್ಲಾ ಸಂಚಾಲಕ ಚಂದ್ರ ಅಲ್ತಾರ್, ತಾಲೂಕು ಸಂಘಟನಾ ಸಂಚಾಲಕ ಕೆ.ಎಸ್ ವಿಜಯ್, ಗೋಪಾಲ ವಿ.ಬೈಂದೂರು ತಾಲೂಕು ಸಂಚಾಲಕ ಚಂದ್ರಮ ತಲ್ಲೂರು, ಸಂದೇಶ್ ನಾಡ, ಸಂತೋಷ್ ಕುಮಾರ್ ಕಿರಿಮಂಜೇಶ್ವರ, ನಗರ ಶಾಖೆ ಸಂಚಾಲಕ ಸುರೇಶ್ ಬಾಬು, ಹಾಗೂ ತಲ್ಲೂರು ಶಾಖೆಯ ಉದಯ್ ಕೆ.ಮತ್ತು ಅರುಣ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಿರಿಯ ವ್ಯಂಗ್ಯಚಿತ್ರಕಾರ ಪಂಜು ಗಂಗೊಳ್ಳಿ ಅವರು ಸಂಪಾದಿಸಿರುವ ‘ಕುಂದಾಪ್ರ ಕನ್ನಡ ನಿಘಂಟು’ನ್ನು ತಲ್ಲೂರು ಫ್ಯಾಮಿಲಿ ಟ್ರಸ್ಟ್ ಸ್ಥಾಪಿಸಿರುವ ಹಿಗ್ಗು – ಅರಿವಿನ ಮಾಲೆ ಪುಸ್ತಕ ದತ್ತಿಯ ಚೊಚ್ಚಲ ಗ್ರ್ಯಾಂಟ್‌ಗೆ ಆಯ್ಕೆಮಾಡಲಾಗಿದೆ ಎಂದು ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನ ಆಡಳಿತ ಟ್ರಸ್ಟಿ ಸುರೇಶ್ ತಲ್ಲೂರು ತಿಳಿಸಿದ್ದಾರೆ. ಅವರು ಶುಕ್ರವಾರ ಕುಂದಾಪುರದಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಹಿಗ್ಗು – ಅರಿವಿನ ಮಾಲೆ ಪುಸ್ತಕ ದತ್ತಿ ಯೋಜನೆಯಡಿ 2 ಲಕ್ಷ ರೂ.ಗಳ ದತ್ತಿಯನ್ನು ನಿಘಂಟು ಪ್ರಕಾಶನಕ್ಕೆ ನೀಡಲಾಗುತ್ತದೆ. ಮುಂಬೈನ ಬುಸಿನೆಸ್ ಇಂಡಿಯಾ ಪತ್ರಿಕೆಯಲ್ಲಿ ಕಾರ್ಟೂನಿಷ್ಠ್ ಆಗಿರುವ ಪಂಜು ಗಂಗೊಳ್ಳಿ ಅವರು ಸುಮಾರು 10,000 ಮಿಕ್ಕಿದ ಕುಂದಾಪ್ರ ಕನ್ನಡದ ಪದಗಳು ಮತ್ತು 1,700ಕ್ಕೂ ಮಿಕ್ಕಿದ ನುಡಿಗಟ್ಟುಗಳು, ಕುಂದಾಪ್ರ ಕನ್ನಡದ ರೀತಿ ರಿವಾಜು, ಕಟ್ಟುಪಾಡು, ಆಚರಣೆಗಳ ಮಾಹಿತಿ ಒಳಗೊಂಡಿರುವ ಅಂದಾಜು 700 ಪುಟಗಳಾಗುಷ್ಟು ಸಾಂಸ್ಕೃತಿಕ ಶಬ್ದಕೋಶವನ್ನು ಸಿದ್ದಪಡಿಸಿದ್ದಾರೆ. ಈ ಪುಸ್ತಕಕ್ಕೆ ದತ್ತಿನಿಧಿ ನೀಡಿ ಪ್ರಕಾಶಿಸುವ ಮೂಲಕ ವಿಶ್ವವಿದ್ಯಾನಿಲಯ ಮಾಡಬೇಕಾದ ಕೆಲಸವನ್ನು ಟ್ರಸ್ಟ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನೂತನ ಬೈಂದೂರು ತಾಲೂಕು ರಚನೆಗೊಂಡು ಮೂರು ವರ್ಷ ಕಳೆದು, ತಾಲೂಕು ಪಂಚಾಯತ್ ರಚನೆಗೊಂಡು ಮೂರು ತಿಂಗಳು ಕಳೆದಿದೆ. ಇಷ್ಟರ ನಂತರವೂ ಬೈಂದೂರಿನಲ್ಲಿ ತಾಲೂಕು ಪಂಚಾಯತಿಗಾಗಿ ಒಂದು ಸುಸಜ್ಜಿತ ಕಟ್ಟಡವಿಲ್ಲ. ತಾಲೂಕು ಪಂಚಾಯತ್ ಸಾಮಾನ್ಯ ಸಭೆಯನ್ನು ಕುಂದಾಪುರದಲ್ಲಿ ನಡೆಸುವುದು ಸರಿಯಲ್ಲ ನಡೆಸುತ್ತಿರುವುದು ಸರಿಯಲ್ಲ. ಇದು ಕುಂದಾಪುರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಬೈಂದೂರು ತಾಲೂಕಿನ 3ನೇ ಸಾಮಾನ್ಯ ಸಭೆಯಲ್ಲಿ ಕೇಳಿಬಂದ ಮಾತುಗಳು. ಸದಸ್ಯ ಜಗದೀಶ್ ದೇವಾಡಿಗ ಕುಂದಾಪುರದಲ್ಲಿ ಸಭೆ ನಡೆಸುತ್ತಿರುವುದಕ್ಕೆ ಆಪ್ಷೇಕಿಸಿ, ಬೈಂದೂರಿನಲ್ಲಿಯೇ ಮುಂದಿನ ಸಭೆ ನಡೆಸುವಂತೆ ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷ ಮಹೇಂದ್ರ ಪೂಜಾರಿ ಬೈಂದೂರು ತಾಲೂಕು ಪಂಚಾಯತಿಗೆ ಮೂಲಭೂತ ಸೌಕರ್ಯಗಳ ಕೊರತೆ ಇದ್ದು, ಸಭಾಂಗಣದ ವ್ಯವಸ್ಥೆ ಇಲ್ಲ. ಖಾಸಗಿ ಸಭಾಂಗಣದಲ್ಲಿ ಸಭೆ ನಡೆಸಿದರೆ ಗೌಪ್ಯತೆಗೆ ಧಕ್ಕೆಯಾಗಲಿದೆ. ಎ2 ತಂತ್ರಾಂಶವೂ ಪೂರ್ಣ ಪ್ರಮಾಣದಲ್ಲಿ ಹಸ್ತಾಂತರವಾಗಿಲ್ಲ. ಈ ಬಗ್ಗೆ ಕ್ಷೇತ್ರದ ಶಾಸಕರಿಗೂ ಮನವಿ ಸಲ್ಲಿಸಿದ್ದೇವೆ ಎಂದು ಸ್ಪಷ್ಟನೆ ನೀಡಿದರು. ಗ್ರಾಮಸ್ಥರಿಗಿಲ್ಲ ಪಡಿತರ: ಸದಸ್ಯೆ ಗಿರಿಜಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾಂಗ್ರೆಸ್ ಮುಕ್ತ ಭಾರತವಾಗಬೇಕಾದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಮುಕ್ತ ಪಂಚಾಯತಿಗಳು ಆಗಬೇಕು. ಮುಂದಿನ ದಿನಗಳಲ್ಲಿ ಪಂಚಾಯತ್ಗಳಿಗೆ ಅದ್ಬುತ ಶಕ್ತಿ ಬರಲಿದೆ. ಸ್ವರಾಜ್ಯ ಸಂಕಲ್ಪ ಈಡೇರಲಿದೆ. ಆ ಹಿನ್ನೆಲೆಯಲ್ಲಿ ಬಿಜೆಪಿ ಪಂಚಸೂತ್ರಗಳ ಅಡಿಯಲ್ಲಿ ಪಂಚಾಯತಿ ಚುನಾವಣೆಯಲ್ಲಿ ಗೆಲ್ಲುತ್ತೇವೆ. ಮುಂದೆ ತಾ.ಪಂ., ಜಿ.ಪಂ.ಚುನಾವಣೆಯಲ್ಲಿಯೂ ಜಯಭೇರಿ ಭಾರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಬಿಜೆಪಿ ಕರ್ನಾಟಕದ ವತಿಯಿಂದ ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ನಡೆದ ಗ್ರಾಮ ಸ್ವರಾಜ್ಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಪಕ್ಷದ ಸಾಮಾನ್ಯ ಕಾರ್ಯಕರ್ತ ನಾಯಕನಾಗುವುದೆ ಪಂಚಾಯತ್ ಚುನಾವಣೆ. ಅದನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ಗ್ರಾಮ ಮಟ್ಟದಲ್ಲಿ ಸಾಧನೆ, ವಿಚಾರಧಾರೆಯ ಪರಿಶ್ರಮದ ಮೂಲಕ ಗೆಲುವು ಸಾಧಿಸುವುದು ಈ ಗ್ರಾಮ ಸ್ವರಾಜ್ಯ ಯಾತ್ರೆ. ರಾಮರಾಜ್ಯ ಮಹತ್ಮಾ ಗಾಂಧಿಯವರ ಕನಸು. ದೆಹಲಿ, ಮುಂಬಯಿ ಬೆಳೆದರೆ ರಾಮರಾಜ್ಯವಾಗದು. ಹಳ್ಳಿಗಳಲ್ಲಿಯೂ ಸ್ವರಾಜ್ಯದ ಕಲ್ಪನೆಯ ಬೆಳೆಯಬೇಕು ಎನ್ನುವುದು ಗಾಂಧಿಯವರ ಆಶಯವಾಗಿತ್ತು. ಆದರೆ ಕಾಂಗ್ರೆಸ್ ಪಕ್ಷ ಅಧಿಕಾರ, ಕುಟುಂಬ ರಾಜಕೀಯ ಲಾಲಸೆಯಿಂದಲೇ ಮುಂದುವರಿಯಿತು. ಇದೀಗ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಟ್ಕಳ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್‌ನ ಮುಂಭಾಗದ ಟಯರ್ ಸ್ಪೋಟಗೊಂಡು ಪಕ್ಕದ ರಸ್ತೆಗೆ ಪಲ್ಟಿಯಾದ ಘಟನೆ ಹೆಮ್ಮಾಡಿಯಲ್ಲಿ ನಡೆದಿದೆ. ಘಟನೆಯಲ್ಲಿ ಟ್ಯಾಂಕರ್ ಚಾಲಕ ಹಾಗೂ ಕ್ಲೀನರ್‌ಗೆ ಸಣ್ಣಪುಟ್ಟ ಗಾಯಗಳಾಗಿದೆ. ವೇಗವಾಗಿ ಬರುತ್ತಿದ್ದ ಟ್ಯಾಂಕರ್ ಮುಂಭಾಗದ ಟಯರ್ ಸ್ಪೋಟಗೊಂಡು ಹೆಮ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಮಧ್ಯದಲ್ಲಿರುವ ಬೀದಿದೀಪಕ್ಕೆ ಡಿಕ್ಕಿಯಾಗಿ ಪಕ್ಕದ ರಸ್ತೆಗೆ ಅಡ್ಡಲಾಗಿ ಮಗುಚಿ ಬಿದ್ದಿದೆ. ಗಾಯಗೊಂಡ ಚಾಲಕನನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ಸಂಚಾರಕ್ಕೆ ಅನುವುಮಾಡಿಕೊಟ್ಟರು.  

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ನೊಂದಾಯಿತ ಸಾಂಸ್ಕೃತಿಕ ಸಂಘ ಸಂಸ್ಥೆಗಳು ಏರ್ಪಡಿಸುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ, ಅಸಂಘಟಿತ ತಂಡಗಳು / ಏಕವ್ಯಕ್ತಿ ಕಲಾವಿದರಿಗೆ ವಾದ್ಯ ಪರಿಕರ / ವೇಷಭೂಷಣ ಖರೀದಿಗೆ ಹಾಗೂ ಚಿತ್ರಕಲೆ ಮತ್ತು ಶಿಲ್ಪಕಲೆಗಳ ಏಕವ್ಯಕ್ತಿ / ತಂಡದ ಕಲಾವಿದರಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಧನಸಹಾಯ ನೀಡಲು Sevasindhu.karnataka.gov.in  ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 27 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22230282 / 080-22279954 ಸಂಪರ್ಕಿಸುವಂತೆ ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರ ಪ್ರಕಟನೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಸ್ವಚ್ಚ ಭಾರತ ಫ್ರೆಂಡ್ಸ್ ಸದಸ್ಯ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಹಳೆ ವಿದ್ಯಾರ್ಥಿ ಮಣಿಪಾಲ ಆರೋಗ್ಯ ಕಾರ್ಡ ಅಧಿಕೃತ ಪ್ರತಿನಿಧಿ ರಕ್ಷಿತ ಕುಮಾರ ವಂಡ್ಸೆಯವರು ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರವರ್ತಿತ ನಾರಾಯಣ ವಿಶೇಷ ಮಕ್ಕಳ ಶಾಲೆಯ ಸುಮಾರು 37 ಮಕ್ಕಳಿಗೆ ಮಣಿಪಾಲ ಆರೋಗ್ಯ ಕಾರ್ಡುಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು. ರಕ್ಷಿತ ಕುಮಾರ ಮಾತನಾಡಿ, ಮಣಿಪಾಲ ಆರೋಗ್ಯ ಕಾರ್ಡುಗಳನ್ನು ಈ ಹಿಂದೆ ಉಡುಪಿ ಸಂತೆಕಟ್ಟೆಯಲ್ಲಿರುವ ಕೃಷ್ಣಾನುಗ್ರಹ ಅರ್ಹಸಂಸ್ಥೆ ಮತ್ತು ದತ್ತು ಸ್ವೀಕಾರ ಕೇಂದ್ರದ ಮಕ್ಕಳಿಗೆ ಉಚಿತವಾಗಿ ನೀಡಲಾಗಿದೆ. ತಮ್ಮ ದುಡಿಮೆಯ ಸ್ವಲ್ಪ ಹಣವನ್ನು ಪ್ರತಿ ವರ್ಷ ಇಂತಹ ವಿಶೇಷ ಮಕ್ಕಳ ಶಾಲೆ ಸಂಸ್ಥೆಗೆ ಕೊಡುವ ಉದ್ದೇಶವಾಗಿರುತ್ತದೆ. ಎಂದು ಹೇಳಿದರು. ಈ ಸಂದರ್ಭದಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ ತಲ್ಲೂರು ,ಟ್ರಸ್ಟಿ ಮನೋರಮ ತಲ್ಲೂರು, ಶಿಕ್ಷಕರು, ಪ್ರಾಂಶುಪಾಲರು,  ಶಿಕ್ಷಕೇತರ ಸಿಬ್ಬಂದಿಗಳು, ಮತ್ತು ಪೋಷಕರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ, ಜನ ವಿರೋಧಿ ನೀತಿಗಳ ವಿರುದ್ಧ ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆಯಂತೆ ಬೈಂದೂರಿನ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್‌ನಲ್ಲಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಯಿತು. ಐಕ್ಯ ಹೋರಾಟವನ್ನು ತೀವ್ರಗೊಳಿಸುವ ಮೂಲಕ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯನ್ನು ನಿರಾಕರಿಸಿ ಪ್ರತಿರೋಧಿಸಲು ಮತ್ತು ಪರಿಹಾರ ಹಾಗೂ ಪರ್ಯಾಯ ರೂಪಿಸಲು ಮುಂದಾಗಬೇಕೆಂದು ಸಿಐಟಿಯು ಮುಖಂಡ ರಾಜೀವ ಪಡುಕೋಣೆ ಮುಷ್ಕರವನ್ನು ಉದ್ದೇಶಿಸಿ ಮಾತನಾಡಿದರು. ಸಿಐಟಿಯು ಮುಖಂಡ ವೆಂಕಟೇಶ್ ಕೋಣಿ, ಸುಶೀಲ ನಾಡಾ ಸಭೆಯನ್ನುಧ್ಧೇಶಿಸಿ ಮಾತನಾಡಿದರು. ಉದಯ ಗಾಣಿಗ, ಮಂಜು ಪಡುವರಿ, ಜಯಶ್ರೀ ಪಡುವರಿ, ಅಮ್ಮಯ್ಯ ಬಿಜೂರು, ಮಾಧವ, ಶ್ರೀಧರ ಉಪ್ಪುಂದ, ನಾಗರತ್ನ ನಾಡಾ, ಸಿಂಗಾರಿ ನಾವುಂದ, ರಾಮ ಖಂಬದಕೋಣೆ ಮುಷ್ಕರದಲ್ಲಿ ಉಪಸ್ಥಿತರಿದ್ದರು. ಸಿಐಟಿಯು ಮುಖಂಡ ಗಣೇಶ್ ತೊಂಡೆಮಕ್ಕಿ ಸ್ವಾಗತಿಸಿದರು. ರೊನಾಲ್ಡ್ ರಾಜೇಶ್ ವಂದಿಸಿದರು.

Read More