Author: ನ್ಯೂಸ್ ಬ್ಯೂರೋ

ನರೇಂದ್ರ ಎಸ್ ಗಂಗೊಳ್ಳಿ. ಕುಂದಾಪ್ರ ಡಾಟ್ ಕಾಂ ಲೇಖನ. ಒಬ್ಬ ವ್ಯಕ್ತಿಗೆ ಹೊಟ್ಟೆ ಹಸಿಯಲು ಆರಂಭವಾಗಿದೆ ಎಂದಿಟ್ಟುಕೊಳ್ಳಿ. ಹೋಟೆಲನ್ನು ಹುಡುಕಿ ದುಡ್ಡುಕೊಟ್ಟು ತಿನ್ನಬಲ್ಲ ತಾಕತ್ತೂ ಇದೆ. ಸುತ್ತಮುತ್ತಲಲ್ಲಿ ಹಲವಾರು ಹೋಟೆಲುಗಳು ಕಾಣಿಸುತ್ತಿವೆ. ಈ ನಡುವೆ ಸರ್ಕಾರಿ ಎಂದು ಬೋರ್ಡು ಹಾಕಿಕೊಂಡ ಹೋಟೆಲ್ಲೊಂದು ಬನ್ನಿ ನಮ್ಮ ಹೋಟೆಲ್ಲಿಗೆ ಬನ್ನಿ. ತಿಂಡಿ ಇನ್ನೂ ರೆಡಿಯಾಗಿಲ್ಲ. ಆದರೆ ನೀವು ಬಂದ ಮೇಲೆ ನೀವು ಆರ್ಡರ್ ಕೊಟ್ಟ ಮೇಲೆ ಅದನ್ನು ತಯಾರಿಸಲು ಬೇಕಾಗುವ ಸಮಾಗ್ರಿ ದಿನಸಿಗಳನ್ನು ಮಾರುಕಟ್ಟೆಯಿಂದ ಖರೀದಿಸಿ ತಂದು ನಿಮಗೆ ರುಚಿಕರವಾದ ತಿಂಡಿಯನ್ನು ಬಡಿಸುತ್ತೇವೆ ಎಂದು ಪ್ರಲಾಪಿಸುತ್ತಿದ್ದರೆ ಯಾವುದಾದರೂ ಗ್ರಾಹಕ ಆ ಹೋಟೆಲನ್ನು ನಂಬಿಕೊಂಡು ಬರುತ್ತಾನೆಯೆ? ಖಂಡಿತಾ ಇಲ್ಲ ಎನ್ನುವುದು ಈ ಜಗತ್ತಿನ ಅಪ್ಪಟ ನಿರಕ್ಷರಕುಕ್ಷಿಗೂ ಗೊತ್ತು. ಯಾಕೆಂದರೆ ಇದು ಕಾಮನ್ ಸೆನ್ಸ್. ಆದರೆ ಇಷ್ಟೊಂದು ಚಿಕ್ಕ ಕಾಮನ್ ಸೆನ್ಸ್ ಕೂಡ ನಮ್ಮ ಸರಕಾರದ ಶೈಕ್ಷಣಿಕ ವರ್ಗದ ಆಡಳಿತಾಧಿಕಾರಿಗಳಲ್ಲಿ ಮತ್ತು ಅದಕ್ಕೆ ಸಂಬಂಧಿಸಿದ ಸಚಿವರುಗಳಲ್ಲಿ ಇಲ್ಲದೇ ಹೋಗಿರುವುದು ನಿಜಕ್ಕೂ ದೊಡ್ಡ ವಿಪರ‍್ಯಾಸ. ನೀವೇ ಗಮನಿಸಿ ನೋಡಿ. ಶಿಕ್ಷಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಕ್ಷಣ ಇಲಾಖೆ ಅವೈಜ್ಞಾನಿಕವಾಗಿ ಹೆಚ್ಚುವರಿ ಶಿಕ್ಷಕರನ್ನು ಗುರುತಿಸುತ್ತಿದ್ದು ಇದು ಸರ್ಕಾರಿ ಶಾಲೆಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ವಂಡ್ಸೆ ಸರ್ಕಾರಿ ಶಾಲೆಯನ್ನು ಉಳಿಸಿಕೊಳ್ಳುವ ಸಲುವಾಗಿ ಸಾಕಷ್ಟು ಪ್ರಯತ್ನ ಮಾಡಿ ಬೇರೆ ಬೇರೆ ಕಡೆಗಳಿಂದ ಮಕ್ಕಳನ್ನು ಶಾಲೆಗೆ ದಾಖಲಾತಿ ಮಾಡುವ ಕೆಲಸ ಆಗಿದೆ. ಆದರೆ ಈಗಿನ ವಿದ್ಯಾರ್ಥಿಗಳ ಸಂಖ್ಯೆಗೆ ಇನ್ನೂ ಶಿಕ್ಷಕರ ಅವಶ್ಯಕತೆ ಇರುವಾಗ ಇದ್ದ ಶಿಕ್ಷರನ್ನೇ ಹೆಚ್ಚುವರಿ ಶಿಕ್ಷಕರೆಂದು ವರ್ಗಾವಣೆಗೆ ಮುಂದಾಗಿರುವುದು ಅವೈಜ್ಞಾನಿಕವಾಗಿದೆ ಎಂದು ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಹೇಳಿದರು. ಎಂದು ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಹೇಳಿದರು. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇಲ್ಲಿ ನಡೆದ ವಂಡ್ಸೆ ಗ್ರಾಮ ಪಂಚಾಯತ್‌ನ ಪ್ರಥಮ ಸುತ್ತಿನ ಗ್ರಾಮ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡಿದರು. ವಂಡ್ಸೆ ಗ್ರಾಮ ಪಂಚಾಯತ್‌ನಲ್ಲಿ ಸೋಮವಾರದಿಂದಲೇ ಬಾಪೂಜಿ ಸೇವಾಕೇಂದ್ರ ಆರಂಭವಾಗಿದ್ದು ಇಲ್ಲಿ ಪಹಣಿ ಪತ್ರ ಸೇರಿದಂತೆ ಕಂದಾಯ ಇಲಾಖೆಯ ೩೯ ಸೇವೆಗಳನ್ನು ಪಡೆಯಲು ಅವಕಾಶವಿದ್ದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮನೆ, ನಿವೇಶನ ರಹಿತರು ನಿವೇಶನ ಹಕ್ಕು ಪತ್ರಕ್ಕಾಗಿ ಒತ್ತಾಯಿಸಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿ ಹಲವಾರು ವರ್ಷಗಳಾದರೂ ನಿವೇಶನ ಹಕ್ಕು ಪತ್ರ ವಿತರಣೆಗೆ ವಿಳಂಬ ಧೋರಣೆ ಅನುಸರಿಸುತ್ತಿರುವುದನ್ನು ಖಂಡಸಬೇಕಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರ ಸಂಘದ ರಾಜ್ಯ ಅಧ್ಯಕ್ಷ ನಿತ್ಯಾನಂದ ಸ್ವಾಮಿ ಹೇಳಿದರು. ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ ನವದೆಹಲಿಗೆ ಸಂಯೋಜಿಸಲ್ಪಟ್ಟ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಸಮಿತಿಯ ವಿಸ್ಕೃತ ಸಭೆಯು ಕುಂದಾಪುರ ಕಾರ್ಮಿಕ ಭವನದಲ್ಲಿ ಜರುಗಿತ್ತು. ಕೃಷಿ ಕೂಲಿಕಾರರ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಅಧ್ಯಕ್ಷ ಯು. ದಾಸಭಂಡಾರಿ ಅಧ್ಯಕ್ಷತೆಯನ್ನು ವಹಿಸಿದ್ದರು. ಸಿಐಟಿಯು ಮುಖಂಡರಾದ ಎಚ್. ನರಸಿಂಹ, ಮಹಾಬಲ ವಡೇರ ಹೋಬಳಿ, ಸುರೇಶ ಕಲ್ಲಾಗರ, ಉಪಸ್ಥಿತರಿದ್ದರು. ಕೃಷಿ ಕೂಲಿಕಾರರ ಸಂಘದ ಮುಖಂಡರಾದ…

Read More

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಮಳೆಗಾಲದಲ್ಲಿ ಪ್ರತಿಯೊಂದಕ್ಕೂ ಆ ತೊರೆಯನ್ನು ದಾಟಿಯೇ ನಡೆಯಬೇಕು. ಶಾಲೆಗೆ ಹೋಗುವ ಪುಟಾಣಿಗಳು ಹೊಂಡಾಗುಂಡಿ ದಾರಿ ಸವೇಸಿ ಹಳ್ಳ ದಾಟುವುದು ಅನಿವಾರ್ಯ. ಇತಿಹಾಸ ಪ್ರಸಿದ್ಧ ದೇವಾಲಯವೊಂದಕ್ಕೆ ತೆರಳಲೂ ಭಕ್ತರು ಇದೇ ಮಾರ್ಗವನ್ನು ಹಾದುಹೋಗಬೇಕು. ಇದು ವಂಡ್ಸೆ ಗ್ರಾಮದ ಅತ್ರಾಡಿ ಬಳಿಯ ತೊರೆಯಿಂದಾದ ದುಸ್ಥಿತಿ. ಬೈಂದೂರು ವಿಧಾನ ಸಭಾ ಕ್ಷೇತ್ರ ವಂಡ್ಸೆ ಗ್ರಾಮ ಅಡಿಕೆಕೊಡ್ಲುವಿಗೆ ತೆರಳುವಲ್ಲಿ ಇರುವ  ತೊರೆ ಮಳೆಗಾದಲ್ಲಿ ಅಗ್ನಿ ಪರೀಕ್ಷೆ ನಡೆಸುತ್ತಿದ್ದರೆ, ಬೇಸಿಗೆಯಲ್ಲಿ ಸತ್ತು ಮಲಗುತ್ತದೆ. ವಂಡ್ಸೆ ಮೂಲಕ ಆತ್ರಾಡಿ ಹೋಗುವ ದಾರಿಗೆ ಅಡ್ಡವಾಗಿ ತೊರೆಯ ಹೋರಿದೆ. ದಿನ ನಿತ್ಯ ಸಾರ್ವಜನಿಕರು, ಶಾಲಾ ಮಕ್ಕಳು ತೊರೆಯಲ್ಲಿ ಸರ್ಕಸ್ ಮಾಡಿ ದಾಟಿಬೇಕು. ಬೇಸಿಗೆಯಲ್ಲಿ ಅಡ್ಡಿಯಿಲ್ಲ. ಮಳೆಗಾದಲ್ಲಿ ಎಚ್ಚರ ತಪ್ಪಿದರೆ ದೇವರೇ ಕಾಪಾಡಬೇಕು. ಈ ದಾರಿ ಇತಿಹಾಸ ಪ್ರಸಿದ್ಧ ಶ್ರೀ ವನದುರ್ಗಾ ಪರಮೇಶ್ವರಿ ಕಾನಮ್ಮ ದೇವಸ್ಥಾನಕ್ಕೂ ಸಂಪರ್ಕ ಕಲ್ಪಸುತ್ತದೆ. ನಿತ್ಯ ಶಾಲಾ ಮಕ್ಕಳು ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದಾರೆ. ವಂಡ್ಸೆ, ಅಡಿಕೆಕೊಡ್ಲು ಆತ್ರಾಡಿ ಸಮೀಪ ಬೆಸೆಯುವ ದಾರಿಯೂ ಹೌದು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅನ್ನದಾತ ರೈತ ತಾಯಿಯ ಸಮಾನವಾಗಿದ್ದು, ರೈತರನ್ನು ಗೌರವಿಸಿ, ಬೆಂಬಲಿಸಿ ಸಹಾಯ ಮಾಡುವುದರ ಮೂಲಕ ರೋಟರಿ ಜಿಲ್ಲಾ ರೈತಮಿತ್ರ ಯೋಜನೆ ಯಶಸ್ವಿಯೊಳಿಸೋಣ ಎಂದು ರೋಟರಿ ಸನ್‌ರೈಸ್ ಸ್ಥಾಪಕಾಧ್ಯಕ್ಷ ದಿನಕರ ಆರ್. ಶೆಟ್ಟಿ ಹೇಳಿದರು. ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಆಶ್ರಯದಲ್ಲಿ ರೈತಮಿತ್ರ ಕಾರ್ಯಕ್ರಮದ ಅಂಗವಾಗಿ ರೈತರಾದ ಕೋಟಿ ಪೂಜಾರಿ ಮತ್ತು ನಾರಾಯಣ ಆಚಾರ್ ಅವರನ್ನು ಸನ್ಮಾನಿಸಿ ಮಾತನಾಡಿದರು. ರೋಟರಿ ಸನ್‌ರೈಸ್ ಅಧ್ಯಕ್ಷ ಕೆ. ನರಸಿಂಹ ಹೊಳ್ಳ ಕ್ಲಬ್ ಪರವಾಗಿ ಉಚಿತ ಗೊಬ್ಬರ ರೈತರಿಗೆ ಹಂಚಿದರು. ರೈತರೊಂದಿಗೆ ಸಂವಾದದಲ್ಲಿ ಮತ್ತು ಕೃಷಿ ಕಾರ್ಯದಲ್ಲಿ ರೋಟರಿ ಸದಸ್ಯರು ಪಾಲ್ಗೊಂಡರು. ರೋಟರಿ ಸನ್‌ರೈಸ್ ನಿಕಟ ಪೂರ್ವಾಧ್ಯಕ್ಷ ದಿನಕರ ಪಟೇಲ್, ಸದಸ್ಯರಾದ ಕೆ.ಹೆಚ್. ಚಂದ್ರಶೇಖರ್, ರಾಜಶೇಖರ್ ಹೆಗ್ಡೆ, ಬಿ.ಎಂ. ಚಂದ್ರಶೇಖರ್, ಗಜಾನನ ಭಟ್, ರಾಮಕೃಷ್ಣ ಐತಾಳ್, ಉಲ್ಲಾಸ್, ಸುಬ್ಬರಾವ್, ಶಿವಾನಂದ, ದಿನೇಶ್ ಗೋಡೆ, ಸದಾನಂದ ಉಡುಪ, ರಾಜು ಪೂಜಾರಿ, ಮಂಜುನಾಥ ಕೆ.ಎಸ್., ಡುಂಡಿರಾಜ್, ಕಾರ್ಯದರ್ಶಿ ನಾಗೇಶ್ ನಾವಡ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕೆರಿಯರ್ಸ್ ಕೋಚಿಂಗ್ ಸಂಸ್ಥೆಯಲ್ಲಿ ತರಬೇತಿ ಪಡೆದ ಮೂವರು ವಿದ್ಯಾರ್ಥಿಗಳು ಚಾರ್ಟಡ್ ಅಕೌಂಟೆಂಟ್ ಅರ್ಹತಾ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀಣರಾಗಿ ವಿಶಿಷ್ಟ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಎಂ. ನಂದೀಶ್ ರಾಮ ಶೆಟ್ಟಿ 123, ಕಾರ್ತಿಕ್ 116, ವಿಶ್ವನ್ 111 ಅಂಕಗಳನ್ನು ಪಡೆದು ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ. ಉತ್ತಿರ್ಣ ವಿದ್ಯಾರ್ಥಿಗಳಿಗೆ ಕೆರಿಯರ್ಸ್ ಕೋಚಿಂಗ್ ಸಂಸ್ಥಾಪಕರಾದ ಸಿ.ಎ ರಾಜೇಶ್ ಶೆಟ್ಟಿ ಹಾಗೂ ಸಹ ಸಂಸ್ಥಾಪಕರಾದ ಪ್ರತಾಪಚಂದ್ರ ಶೆಟ್ಟಿ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇರುವ ಶಿಕ್ಷಕರನ್ನು ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನೆವದಲ್ಲಿ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಹೊಸಮಠ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಪೋಷಕರು ಶಾಲೆಗೆ ಬೀಗ ಜಡಿದು ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು. ಶಾಲಾ ಮಕ್ಕಳು ತರಗತಿ ಬಹಿಷ್ಕರಿಸಿ ರಾಜ್ಯ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿ ಖಂಡಿಸಿ ತಮ್ಮ ಪೋಷಕರೊಂದಿಗೆ ಪ್ರತಿಭಟನೆ ನಡೆಸಿದರು. ಶಿಕ್ಷಕಿರನ್ನು ಹೆಚ್ಚುವರಿ ಶಿಕ್ಷಕರ ನೆವದಲ್ಲಿ ವರ್ಗಾವಣೆ ಮಾಡಿ, ಮಕ್ಕಳ ವಿದ್ಯಭ್ಯಾಸಕ್ಕೆ ತೊಂದರೆಯಾಗುತ್ತಿದ್ದು, ಇಲ್ಲಿರುವ ಶಿಕ್ಷಕರನ್ನು ಇಲ್ಲಿಯೇ ಉಳಿಸಿ ಮಕ್ಕಳ ವಿದ್ಯಭ್ಯಾಸಕ್ಕೆ ಅನುವು ಮಾಡಿಕೊಡಬೇಕೆಂದು ಪೋಷಕರು ಆಗ್ರಹಿಸಿದರು. ಸರಕಾರಿ ಶಾಲೆ ಉಳಿಸಿಕೊಳ್ಳಬೇಕು ಎಂದು ಸರ್ಕಾರ ಹಲವಾರು ಯೋಜನೆ ರೂಪಿಸುತ್ತಿದೆ. ಆದರೆ ಹೆಚ್ಚುವರಿ ಶಿಕ್ಷಕರ ನೆವದಲ್ಲಿ ಶಿಕ್ಷಕರನ್ನು ವರ್ಗಾವಣೆ ಮಾಡಿ ಮಕ್ಕಳ ವಿದ್ಯಭ್ಯಾಸದ ಮೇಲೆ ಶಿಕ್ಷಣ ಇಲಾಖೆ ಚೆಲ್ಲಾಟವಾಡುತ್ತಿದೆ ಎಂದು ಪೋಷಕರು ಆರೋಪಿಸಿದ್ದಾರೆ. ವರ್ಗಾವಣೆ ಆದೇಶ ಹಿಂಪಡೆಯಬೇಕು ಇಲ್ಲವಾದಲ್ಲಿ ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವುದಿಲ್ಲವೆಂದು ಪ್ರತಿಭಟನಾಕಾರರು ಎಚ್ಚರಿಸಿದರು. ಮಧ್ಯಾಹ್ನದವರೆಗೂ ಶಿಕ್ಷಣಾಧಿಕಾರಿ ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ಮಕ್ಕಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯತ್‌ನಲ್ಲಿ ಆ ಭಾಗದ ಗ್ರಾಮಸ್ಥರ ಅನುಕೂಲಕ್ಕಾಗಿ ಸರಕಾರ ಬಾಪೂಜಿ ಸೇವಾ ಕೇಂದ್ರ ಆರಂಭಿಸಿದೆ. ನಾಡ ಗ್ರಾಮದಲ್ಲಿ ಶುಕ್ರವಾರ ಚಾಲನೆ ನೀಡಿದ್ದು, ಈ ಬಗ್ಗೆ ಇನ್ನು ಮುಂದೆ ಪ್ರತೀ ಶುಕ್ರವಾರ ಜನಸಾಮಾನ್ಯರ ಸಮಸ್ಯೆಗಳನ್ನು ಪರಿಹರಿಸಲು ಆಂದೋಲನದ ರೀತಿಯಲ್ಲಿ ೨೬ ಪಂಚಾಯತ್ ವ್ಯಾಪ್ತಿಯಲ್ಲಿ ಕೆಲಸ ಮಾಡಲಾಗುವುದು ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಬೈಂದೂರು ಶಾಸಕರ ಕಚೇರಿಯಲ್ಲಿ ರಾಷ್ಟ್ರೀಯ ಕುಟುಂಬ ನೆರವು ಯೋಜನೆಯಡಿಯಲ್ಲಿ 21 ಫಲಾನುಭವಿಗಳಿಗೆ ತಲಾ 20 ಸಾವಿರ ಚೆಕ್ ವಿತರಿಸಿ ಮಾತನಾಡಿದರು. ಸರಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಒಂದೇ ಸೂರಿನಡಿ ೧೦೦ ಸೌಲಭ್ಯ ಒದಗಿಸುವ ವ್ಯವಸ್ಥೆ ಈ ಯೋಜನೆಯಲ್ಲಿದೆ. ಕ್ಷೇತ್ರವನ್ನು ಪೋಡಿಮುಕ್ತ ಮಾಡುವುದೇ ಮುಂದಿನ ಗುರಿಯಾಗಿದೆ ಎಂದರು. ಫಲಾನುಭವಿಗಳಿಗೆ ಪಹಣಿ ಪತ್ರ, ಸ್ಥಳನಕ್ಷೆ ಪಂಚಾಯತ್‌ನಲ್ಲಿಯೇ ನೀಡಲಾಗುತ್ತದೆ. ಇದರಿಂದ ದೂರದವರಿಗೆ ತಾಲೂಕು ಕೇಂದ್ರದಲ್ಲಿರುವ ತಹಶೀಲ್ದಾರರ ಕಚೇರಿ ಅಲೆದಾಟ ತಪ್ಪಿದಂತಾಗುತ್ತದೆ. ಇದರಿಂದ ಸಮಯದ ಜತೆಗೆ ಹಣವೂ ಉಳಿತಾಯವಾಗುತ್ತದೆ. ಗ್ರಾಪಂ ಆಸ್ಥಿಗಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇರುವ ಶಿಕ್ಷಕರನ್ನು ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನೆವದಲ್ಲಿ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಆನಗಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಪೋಷಕರು ಶಾಲೆಗೆ ಬೀಗ ಹಾಕಿ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು. ಶಾಲಾ ಮಕ್ಕಳು ತರಗತಿ ಬಹಿಷ್ಕರಿಸಿ ರಾಜ್ಯ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿ ಖಂಡಿಸಿ ತಮ್ಮ ಪೋಷಕರೊಂದಿಗೆ ಪ್ರತಿಭಟನೆ ನಡೆಸಿದರು. ಶಿಕ್ಷಕಿರನ್ನು ಹೆಚ್ಚುವರಿ ಶಿಕ್ಷಕರ ನೆವದಲ್ಲಿ ವರ್ಗಾವಣೆ ಮಾಡಿ, ಮಕ್ಕಳ ವಿದ್ಯಭ್ಯಾಸಕ್ಕೆ ತೊಂದರೆಯಾಗುತ್ತಿದ್ದು, ಇಲ್ಲಿರುವ ಶಿಕ್ಷಕರನ್ನು ಇಲ್ಲಿಯೇ ಉಳಿಸಿ ಮಕ್ಕಳ ವಿದ್ಯಭ್ಯಾಸಕ್ಕೆ ಅನುವು ಮಾಡಿಕೊಡಬೇಕೆಂದು ಪೋಷಕರು ಆಗ್ರಹಿಸಿದರು. ಸರಕಾರಿ ಶಾಲೆ ಉಳಿಸಿಕೊಳ್ಳಬೇಕು ಎಂದು ಸರ್ಕಾರ ಹಲವಾರು ಯೋಜನೆ ರೂಪಿಸುತ್ತಿದೆ. ಆದರೆ ಹೆಚ್ಚುವರಿ ಶಿಕ್ಷಕರ ನೆವದಲ್ಲಿ ಶಿಕ್ಷಕರನ್ನು ವರ್ಗಾವಣೆ ಮಾಡಿ ಮಕ್ಕಳ ವಿದ್ಯಭ್ಯಾಸದ ಮೇಲೆ ಶಿಕ್ಷಣ ಇಲಾಖೆ ಚೆಲ್ಲಾಟವಾಡುತ್ತಿದೆ ಎಂದು ಪೋಷಕರು ಆರೋಪಿಸಿದ್ದಾರೆ. ವರ್ಗಾವಣೆ ಆದೇಶ ಹಿಂಪಡೆಯಬೇಕು ಇಲ್ಲವಾದಲ್ಲಿ ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವುದಿಲ್ಲವೆಂದು ಪ್ರತಿಭಟನಾಕಾರರು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರು ಪಾಲ್ಗೊಂಡಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರದ ಮಾಜಿ ಅಧ್ಯಕ್ಷ ರಾಘವೇಂದ್ರ ಕೆ.ಸಿ. ಅವರು ನೂತನ ರೋಟರಿ ಜಿಲ್ಲೆ ೩೧೮೨ ಇದರ ವಲಯ ರೋಟರ‍್ಯಾಕ್ಟ್ ಪ್ರತಿನಿಧಿಯಾಗಿ ಆಯ್ಕೆಗೊಂಡಿದ್ದಾರೆ. ಇತ್ತಿಚಿಗೆ ಕಾರ್ಕಳದಲ್ಲಿ ನಡೆದ ರೋಟರ‍್ಯಾಕ್ಟ್ ಜಿಲ್ಲಾ ಅಧಿವೇಶನದಲ್ಲಿ ಅವರು ಅಧಿಕಾರ ಸ್ವೀಕರಿಸಿದರು. ನೂತನ ರೋಟರ‍್ಯಾಕ್ಟ್ ಪ್ರತಿನಿಧಿಯಾಗಿ ಆಯ್ಕೆಗೊಂಡ ರಾಘವೇಂದ್ರ ಕೆ.ಸಿ ಅವರನ್ನು ಕುಂದಾಪುರ ರೋಟರ‍್ಯಾಕ್ಟ್ ಕ್ಲಬ್‌ನ ಸದಸ್ಯರು ಅಭಿನಂದಿಸಿದ್ದಾರೆ.

Read More