ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರದ ವತಿಯಿಂದ ಕಾರ್ಯಾಚರಿಸುತ್ತಿರುವ ಮೈಸೂರಿನ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಅಂಧ ಮಕ್ಕಳಿಗೆ ಮತ್ತು ಶ್ರವಣದೋಷವುಳ್ಳ ಮಕ್ಕಳಿಗೆ ಶಿಕ್ಷಕರಾಗಲು 2 ವರ್ಷಗಳ ವಿಶೇಷ ಡಿ.ಎಡ್ ತರಬೇತಿಗೆ, ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ. 50 (ಎಸ್.ಸಿ, ಎಸ್.ಟಿ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ.45) ಅಂಕಗಳೊಂದಿಗೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳಿಂದ ವೆಬ್ಸೈಟ್ https://nber-rehabcouncil.gov.in/ ನಲ್ಲಿ ಅರ್ಜಿ ಅಹ್ವಾನಿಸಲಾಗಿದೆ. ತರಬೇತಿ ಕಾರ್ಯಕ್ರಮಗಳು:D.Ed.Spl.Ed(VI)- Helen Keller Govt. Teachers Training Centre for Visually Handicapped – KK016.. D.Ed.Spl.Ed(HI)–Govt. Teachers Training Centre for Hearing Handicapped -KK015 ತರಬೇತಿ ಕಾರ್ಯಕ್ರಮಗಳು ರೆಗ್ಯೂಲರ್ ಆಗಿದ್ದು, ವಿಕಲಚೇತನರು ಸೇರಿದಂತೆ ಸಾಮಾನ್ಯ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಗಳು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ಬೋಧನ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಜುಲೈ 12 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು (ತರಬೇತಿ) ರವರ ಕಛೇರಿ, ಅಂಧ ಹಾಗೂ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಳ್ಳಿಹೊಳೆ ಗ್ರಾಮದ ಸುಳ್ಳೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಕುಬೇರಪ್ಪ (49) ಸೋಮವಾರ ಬೆಳಿಗ್ಗೆ ಶಾಲೆಗೆ ಹೋಗುವಾಗ ಕಮಲಶಿಲೆ ಎಂಬಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಅವರು ಚಿತ್ರದುರ್ಗದ ನಿವಾಸಿಯಾಗಿದ್ದು, ಹೊಸಂಗಡಿ ಕೆಪಿಸಿ ಕಾಲನಿಯ ಸರಕಾರಿ ಕ್ವಾರ್ಟಸ್ನಲ್ಲಿ ವಾಸವಾಗಿದ್ದರು. ಸೋಮವಾರ ತಮ್ಮ ಬೈಕ್ನಲ್ಲಿ ಸುಳ್ಳೋಡು ಶಾಲೆಗೆ ಹೊರಟಿದ್ದ ಅವರು ಕಮಲಶಿಲೆಯ ಪಾರೆ ಬಳಿ ಬೈಕನ್ನು ರಸ್ತೆಯ ಬದಿಯಲ್ಲಿಟ್ಟು ರೈನ್ ಕೋಟ್ ಸಮೇತ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 22 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಕಳೆದ 4 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿ ಮುಂಭಡ್ತಿ ಹೊಂದಿ ಸುಳ್ಳೋಡು ಶಾಲೆಗೆ ವರ್ಗಾವಣೆಗೊಂಡಿದ್ದರು. ಕುಬೇರಪ್ಪ ಅವರು ಹೊಸಂಗಡಿಯ ಕೆಪಿಸಿ ಕಾಲನಿಯಲ್ಲಿ ಹಿಟ್ಟಿನ ಗಿರಣಿ ಮಾಡಿಕೊಂಡಿದ್ದರು. ಅವರು ಸಂಬಂಧಿಕರ ಮದುವೆಗೆ ಮತ್ತು ಇನ್ನಿತರ ಸಾಕಷ್ಟು ಸಾಲ ಮಾಡಿಕೊಂಡಿದ್ದು, ಹಲವು ಸಾಲಗಾರರಿಗೆ ಜಾಮೀನು ಹಾಕಿದ್ದರು. ಸಾಂಸಾರಿಕ ಜೀವನಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಹೊಸಬೆಂಗ್ರೆ ಅಂಗನವಾಡಿ ಕೇಂದ್ರದಲ್ಲಿ ಕೇಂದ್ರ ಸರ್ಕಾರದ ಪೋಷಣ್ ಅಭಿಯಾನದಡಿ ಆರೋಗ್ಯ ತಪಾಸಣೆ ಕಾರ್ಯಕ್ರಮ ಜರಗಿತು. ಇದೇ ವೇಳೆ ಅಂಗನವಾಡಿ ಪುಟಾಣಿಗಳಿಗೆ ಶಿಶುಅಭಿವೃದ್ಧಿ ಯೋಜನೆ ಬ್ರಹ್ಮಾವರ ಇಲಾಖೆಯಿಂದ ನೀಡಿರುವ ಪುಸ್ತಕ, ಕ್ರೇಯನ್ಸ್, ಸ್ತ್ರಿಶಕ್ತಿ ಸಂಘದವರು ನೀಡಿರುವ ಬ್ಯಾಗ್, ಸ್ಥಳೀಯರು ದೀಪಾ ಆರ್. ಖಾರ್ವಿ ಹಾಗೂ ವಸಂತಿ ಅಂಗನವಾಡಿ ಕೇಂದ್ರಕ್ಕೆ ಶಾಲಾಪೂರ್ವ ಶಿಕ್ಷಣಕ್ಕೆ ಬೇಕಾಗುವ ಸಾಮಗ್ರಿ, ಗಡಿಯಾರವನ್ನು ಕೋಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾಖಾರ್ವಿ ಅಧ್ಯಕ್ಷತೆಯಲ್ಲಿ ಹಸ್ತಾಂತರಿಸಿಕೊಂಡಿತು. ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣ ಪೂಜಾರಿ ಪಿ., ಹಾಗೂ ಸತೀಶ್ ಜಿ. ಕುಂದರ್, ಬಾಲಾವಿಕಾಸ ಸಮಿತಿಯ ಅಧ್ಯಕ್ಷೆ ಸುಲೋಚನಾ, ಸದಸ್ಯರಾದ ನಿರ್ಮಲ, ಆಶಾ ಕಾರ್ಯಕರ್ತೆ ಜ್ಯೋತಿ, ಆರೋಗ್ಯ ಕೇಂದ್ರದ ಪರಸಪ್ಪ, ಸಂಜೀವಿನಿ ಅಧ್ಯಕ್ಷೆ ಪೂರ್ಣಿಮ, ಅಂಗನವಾಡಿ ಕಾರ್ಯಕರ್ತೆ ಯಮುನಾ ಎಲ್ ಕುಂದರ್,ಸ್ತ್ರೀ ಶಕ್ತಿ ಸಂಘದವರು, ತಾಯಂದಿರು, ಪೋಷಕರು ಉಪಸ್ಥಿತರಿದ್ದರು. ಇದೇ ವೇಳೆ ಆರೋಗ್ಯ ತಪಾಸಣೆಯಲ್ಲಿ ಮಹಿಳೆಯರ ಬಿ.ಪಿ ಶುಗರ್ ತಪಾಸಣೆ ಮಾಡಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಒಪ್ಟಮ್ (Optimizing Training and Mentoring) ತರಬೇತಿ ಕಾರ್ಯಕ್ರಮವು ಇತ್ತೀಚಿಗೆ ನಡೆಯಿತು. ಒಟ್ಟು 65 ವಿದ್ಯಾರ್ಥಿಗಳು ಈ 45 ದಿನಗಳ ಕೌಶಲ್ಯಾಭಿವೃದ್ಧಿ ತರಬೇತಿಗೆ ಸೇರಿದ್ದು, ಪ್ರಸಿದ್ಧ ತರಬೇತುದಾರರಾದ ಶ್ರೀಮತಿ ವಿನಯಾ ಗೌಡ ಅವರ ಮಾರ್ಗದರ್ಶನದಲ್ಲಿ ತರಬೇತಿ ನೀಡಲಾಗುತ್ತಿದೆ. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ಶುಭಕರಾಚಾರಿ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಾಶಯಗಳೊಂದಿಗೆ ತರಬೇತಿಯ ಮಹತ್ವವನ್ನು ವಿವರಿಸಿದರು. ಸ್ಪರ್ಧಾತ್ಮಕ ಉದ್ಯೋಗ ಕ್ಷೇತ್ರದಲ್ಲಿ ಈ ತರಬೇತಿಯು ಹೇಗೆ ಪರಿಣಾಮಕಾರಿ ಎಂದು ವಿವರಿಸುತ್ತಾ, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು. ಈ ತರಬೇತಿ ಕಾರ್ಯಕ್ರಮ ಕಳೆದ ವರ್ಷದ ಭರ್ಜರಿ ಯಶಸ್ಸಿನ ಹಿನ್ನೆಲೆ ಹೊಂದಿದೆ. ಆ ಸಮಯದಲ್ಲಿ ಭಂಡಾರ್ಕರ್ಸ್ ಕಾಲೇಜಿನಿಂದ ಭಾಗವಹಿಸಿದ ಎಲ್ಲ 34 ವಿದ್ಯಾರ್ಥಿಗಳಿಗೂ ಉದ್ಯೋಗದ ಅವಕಾಶ ಲಭ್ಯವಾಗಿದ್ದು, ಈ ಯಶಸ್ಸಿಗೆ ಶಿಕ್ಷಕ ಜಯರಾಜ್ ಹಾಗೂ ಸ್ಥಾನಾಭಿವೃದ್ಧಿ ಅಧಿಕಾರಿ ರಾಜೇಂದ್ರ ಹೊಬ್ಳಿದಾರ್ ಅವರ ಸಹಕಾರ ಪ್ರಮುಖವಾಗಿದೆ. ಇದೇ ಆದರ್ಶದೊಂದಿಗೆ ಪ್ರಾರಂಭವಾಗಿರುವ ಈ ತರಬೇತಿ ಕಾರ್ಯಕ್ರಮವು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ರತ್ತು ಬಾಯಿ ಜನತಾ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವನ್ನು ವಿತರಿಸಲಾಯಿತು. ಸಮವಸ್ತ್ರದ ದಾನಿಗಳಾದ ರಾಮ್ ದಾಸ್ ಗುಡೆ ಮನೆ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ರಾಜು ಎಸ್. ಪೂಜಾರಿ, ಮುಖ್ಯ ಅದ್ಯಾಪಕರಾದ ಆನಂದ್ ಮದ್ದೋಡಿ, ಪೋಷಕ ಪ್ರತಿನಿಧಿಗಳು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ಧರು. ಪ್ರಕಾಶ್ ಮಾಕೋಡಿ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿಯಾದ ಚೈತ್ರಾ ಯಡ್ತರೆ ಸ್ವಾಗತಿಸಿ, ಗುರುರಾಜ್ ಎಸ್. ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪ್ರಕೃತಿಯಲ್ಲಿ ಅಸಮತೋಲನ ಇದು ಮನುಕುಲದ ಮೇಲೆ ಸಾಕಷ್ಟು ಪರಿಣಾಮ ಬೀರುವಂತೆ ಮಾಡಿದೆ ಇದಕ್ಕೆ ನಾವುಗಳೇ ಕಾರಣ. ಅದಕ್ಕೆ ಹೆಚ್ಚು ಹೆಚ್ಚು ಗಿಡ ನೆಟ್ಟು ಪೋಷಿಸುವ ಕೆಲಸ ಆಗಲಿ ಎಂದು ಉಡುಪಿ ಅರಣ್ಯ ಇಲಾಖೆಯ ಅಧಿಕಾರಿ ವಾರಿಜಾಕ್ಷಿ ಹೇಳಿದರು. ಅವರು ಮಣೂರು ಪಡುಕರೆ ವ್ಯಾಪ್ತಿಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ, ಸಮುದ್ಯತಾ ಗ್ರೂಪ್ಸ್ ಕೋಟ, ಸುವರ್ಣ ಎಂಟರ್ಪ್ರೈಸ್ ಬ್ರಹ್ಮಾವರ ಇವರ ಸಹಭಾಗಿತ್ವದಡಿ 267ನೇ ಭಾನುವಾರ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ವಿಶಿಷ್ಟ ರೀತಿಯ ಮಹಿಳಾ ಹಸಿರು ಜೀವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಪಂಚವರ್ಣ ಸಂಘಟನೆ ಪರಿಸರಕ್ಕೆ ಪೂರಕವಾಗಿ ವಿನೂತನ ಮಾದರಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಇದು ಪ್ರೇರಣೆ ನೀಡುವ ಕಾರ್ಯಕ್ರಮವಾಗಿದೆ ಇಂತಹ ಕಾರ್ಯಕ್ರಮ ಎಲ್ಲೆಡೆ ಪಸರಿಸಬೇಕು ಎಂದು ಆಶಿಸಿದರು. ವಿಶೇಷವಾಗಿ ಮಹಿಳಾ ಮಂಡಲದ ಪದಾಧಿಕಾರಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಶಿಕ್ಷಕ-ರಕ್ಷಕ ಸಮಿತಿಯ 2025-26ನೇ ಸಾಲಿನ ಪ್ರಥಮ ಸಭೆ ಗಂಗೊಳ್ಳಿ ಎಸ್.ವಿ. ಪದವಿಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣದಲ್ಲಿ ನಡೆಯಿತು. ಶಾಲಾ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶಾಂತಿ ಡಿಕೋಸ್ಟ ಶಾಲಾ ನಿಯಮಗಳ ಮಾಹಿತಿ ನೀಡಿದರು. ಈ ವೇಳೆ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ, ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್, ಶಿಕ್ಷಕ-ರಕ್ಷಕ ಸಮಿತಿ ಉಪಾಧ್ಯಕ್ಷ ಜಿ.ವಿಠಲ ಶೆಣೈ, ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು, ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಕೆಜಿ ವಿಭಾಗದ ಉಸ್ತುವಾರಿ ಶಿಕ್ಷಕಿ ದಿವ್ಯಶ್ರೀ ಸ್ವಾಗತಿಸಿದರು. ಶಿಕ್ಷಕಿ ಗೀತಾ. ಸಹಶಿಕ್ಷಕಿ ಉಷಾ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಡುಪಿ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ ಉಡುಪಿ ವಲಯ ಇವರ ಸಹಯೋಗದಲ್ಲಿ ಇತ್ತೀಚೆಗೆ ಹಿರಿಯಡ್ಕದಲ್ಲಿ ನಡೆದ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಕಾರ್ಯಗಾರ 2025 ರಲ್ಲಿ ಗಂಗೊಳ್ಳಿಯ ಸಾಕ್ಸೋಫೋನ್ ಮತ್ತು ಚಿತ್ರಕಲಾ ಬಾಲ ಪ್ರತಿಭೆ ಸಂಜಿತ್ ಎಮ್. ದೇವಾಡಿಗ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಮ್ಮು-ಕಾಶ್ಮೀರ ಸರಕಾರದ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಪ್ರಸಾದ್, ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರಾದ ಮಂಜುನಾಥ ಭಟ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಲೋಕೇಶ್ ಸಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಅಶೋಕ್ ಕಾಮತ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಯಲ್ಲಮ್ಮ ಕೃಷಿ ಅರ್ಥಶಾಸ್ತ್ರಜ್ಞರಾದ ಎನ್. ಎಸ್. ಶೆಟ್ಟಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳಾದ ಯೋಗ ನರಸಿಂಹ ಸ್ವಾಮಿ ಕೆ. ಎಂ., ಶಾಲಾ ಶಿಕ್ಷಣ ಇಲಾಖೆಯ ನಾಗರಾಜ್, ಎಸ್ಡಿಎಂಸಿ ಉಪಾಧ್ಯಕ್ಷರಾದ ಬಿಎಲ್ ವಿಶ್ವಾಸ ಭಟ್, ಉಪ ಪ್ರಾಂಶುಪಾಲ ಪ್ರಕಾಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಉಡುಪಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯಲ್ಲಿ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲೂ, ಬಿ.ಲಿಬ್.ಐ.ಎಸ್.ಸ್ಸಿ ಮತ್ತು ಎಲ್ಲಾ ಬಿ.ಎಸ್ಸಿ, ಸ್ನಾತಕೋತ್ತರ ಪದವಿಗಳಾದ ಎಂ.ಎ/ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್.ಡಬ್ಲೂ, ಎಂ.ಲಿಬ್ ಐ.ಎಸ್.ಸ್ಸಿ ಮತ್ತು ಎಲ್ಲಾ ಎಂಎಸ್ಸಿ ಪದವಿಗಳು ಮತ್ತು ಡಿಪ್ಲೋಮಾ, ಪಿಜಿ ಡಿಪ್ಲೋಮಾ, ಸರ್ಟಿಫಿಕೇಟ್ ಕೋರ್ಸ್ಗಳಿಗೆ ಪ್ರವೇಶಾತಿಗಳು ನಡೆಯುತ್ತಿದ್ದು, ಆಸಕ್ತರು ಪ್ರಾದೇಶಿಕ ಕೆಂದ್ರದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರೈಸ್ತ, ಜೈನ, ಭೌದ್ದ, ಸಿಖ್ ಹಾಗೂ ಪಾರ್ಸಿ ವಿದ್ಯಾರ್ಥಿಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮಿತಿ ಇರುವವರು ಅಗತ್ಯ ದಾಖಾಲಾತಿ ಒದಗಿಸಿದಲ್ಲಿ ಉಚಿತ ಪ್ರವೇಶಾತಿಗೆ ಅವಕಾಶವಿರುತ್ತದೆ. ಹೆಚ್ಚಿನ ವಿವರಗಳಿಗೆ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ www.ksoumysuru.ac.in ಅನ್ನು ವೀಕ್ಷಿಸಬಹುದಾಗಿದೆ ಉಡುಪಿ ಪ್ರಾದೇಶಿಕ ಕೇಂದ್ರದ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿ ಪದ್ಮಶಾಲಿಗರ ಮೂಲ ಕ್ಷೇತ್ರ ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ “ಚಿತ್ರಸಿರಿ” ಚಿತ್ರಕಲಾ ಸ್ಪರ್ಧೆ ಮತ್ತು ಸಾಸ್ತಾನ ಮಠದ ತೋಟದ ಕುಟುಂಬಿಕರಿಂದ ನಡೆದ 233ನೇ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಸ್ಕೂಲ್ ಲೀಡರ್ ಚಲನಚಿತ್ರ ಕಲಾವಿದರನ್ನು ಆದಿತ್ಯವಾರದಂದು ಗೌರವಿಸಲಾಯಿತು. “ಚಿತ್ರಸಿರಿ” ಸ್ಪರ್ಧೆಯಲ್ಲಿ ಐದನೇ ತರಗತಿಯೊಳಗಿನ ನಿನಾದ್, ಆಶ್ಲೇಶ್, ದಿಕ್ಷೀತ್ 6 ರಿಂದ 10 ನೇ ತರಗತಿಯೊಳಗಿನ ಸಿಂಚನಾ, ನಮ್ರತಾ, ವಿಮರ್ಶ್ ಪಿಯುಸಿಯಿಂದ ಪದವಿವರೆಗಿನ ಸ್ಪರ್ಧೆಯಲ್ಲಿ ಪ್ರಜ್ಞಾ, ಮೇಘನಾ, ಪ್ರಜ್ವಲ್ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ನಿರ್ಣಾಯಕರಾಗಿ ಡಾ. ಜಯರಾಮ್ ಶೆಟ್ಟಿಗಾರ್, ಶಂಕರನಾರಾಯಣ ಶೆಟ್ಟಿಗಾರ್ ಕಾರ್ಕಡ, ವಿಠಲ ಶೆಟ್ಟಿಗಾರ್ ಸಗ್ರಿ ಭಾಗವಹಿಸಿದ್ದರು. ನೀಲಾವರ ಕುಟುಂಬಿಕರು ಬಹುಮಾನದ ಪ್ರಾಯೋಜಕರಾಗಿದ್ದರು. ಇದೇ ಸಂದರ್ಭದಲ್ಲಿ ಸ್ಕೂಲ್ ಲೀಡರ್ ಚಲನಚಿತ್ರದ ನಟರಾದ ಅಶ್ವಿನಿ, ಶ್ರೀಜಯ್, ರಿತ್ವಿಕ್ ಮತ್ತು ಶಿಲ್ಪ ಕಲಾ ಸಾಧಕ ಯೊಗೀಂದ್ರ ಶ್ರೀವತ್ಸ ಅವರನ್ನು ಸನ್ಮಾನಿಸಲಾಯಿತು. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಹೆಚ್.ಎ. ಗೋಪಾಲ್ ಅವರು ಸಾಧಕರಿಗೆ ತನ್ನ…
