ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಲಿ. ಕುಂದಾಪುರ ಶಾಖೆ ವತಿಯಿಂದ ಹಮ್ಮಿಕೊಂಡ ಕರೋನಾ ಜನ ಜಾಗೃತಿ ಅಭಿಯಾನಕ್ಕೆ ಕುಂದಾಪುರದ ಮಿನಿ ವಿಧಾನಸೌಧದಲ್ಲಿ ತಹಸೀಲ್ದಾರ್ ಆನಂದಪ್ಪ ನಾಯಕ್ ಹಾಗೂ ಕುಂದಾಪುರ ಠಾಣಾಧಿಕಾರಿ ಹರೀಶ್ ಆರ್. ನಾಯ್ಕ್ ಚಾಲನೆ ನೀಡಿದರು. ಈ ಸಂದರ್ಭ ಕುಂದಾಪುರ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಕುಂದಾಪುರ ಶಾಖಾ ವ್ಯವಸ್ಥಾಪಕ ಜಾನ್ಸನ್ ಮೇನೇಜಸ್, ಕಲ್ಯಾಣಪುರ ಶಾಖಾ ವ್ಯವಸ್ಥಾಪಕ ರೋಹಿತ್ ರೊಡ್ರಿಗಸ್ ಹಾಗೂ ಕುಂದಾಪುರ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿಗೆ ಸಮೀಪದ ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳ್ಳೂರು ಗ್ರಾಮದ ಕೆಲವೆಡೆ ನಾಟಿಯಾದ ಭತ್ತದ ಗದ್ದೆಯ ಮೇಲೆ ನೀರಿನಲ್ಲಿ ತೇಲಿಬಂದ ಅಂತರಗಂಗೆ ಕಳೆ ಹರಡಿಕೊಂಡಿರುವುದು ರೈತರನ್ನು ಕಂಗಾಲು ಮಾಡಿದೆ. ಅಲ್ಲಿನ ಕಾಕ್ತೋಟ, ನೀರಕೆರೆ, ಚಾಟಗೋಳಿ ಪ್ರದೇಶದ ಸಾಧಮ್ಮ ಶೆಟ್ಟಿ, ಸೂಲ್ಯಣ್ಣ ಶೆಟ್ಟಿ, ಸುಖೇಶ ದೇವಾಡಿಗ ಸೇರಿದಂತೆ ಹಲವರ ಸುಮಾರು ಹತ್ತಾರು ಎಕ್ರೆ ವಿಸ್ತಾರದ ಗದ್ದೆಗಳಲ್ಲಿ ಇದು ಕಂಡುಬಂದಿದೆ. ಕಾಕ್ತೋಟದಲ್ಲಿ ಜೇಡಿ ಮಣ್ಣು ತೆಗೆದ ಸ್ಥಳದಲ್ಲಿ ಮಳೆನೀರು ತುಂಬಿಕೊಂಡಾಗ ಅಂತರಗಂಗೆ ಎಂಬ ನೀರಿನ ಮೇಲೆ ತೇಲುವ ಕಳೆ ಹುಟ್ಟಿಕೊಳ್ಳುತ್ತಿದೆ. ಹೆಚ್ಚು ಮಳೆಯಾದಾಗ ತೋಡುಗಳ ಮೂಲಕ ಹರಿಯುವ ನೀರಿನಲ್ಲಿ ಇವು ತೇಲಿಹೋಗುತ್ತವೆ ಮತ್ತು ತೋಡಿನ ಪಕ್ಕದ ಗದ್ದೆಗಳಿಗೆ ನುಗ್ಗುವ ನೆರೆ ನೀರಿನೊಂದಿಗೆ ಗದ್ದೆಯನ್ನು ಆವರಿಸುತ್ತವೆ. ಮೇಲಿನ ಮೂರೂ ಪ್ರದೇಶಗಳಲ್ಲಿ ನೀರು ಹರಿಯುವ ತೋಡಿನ ಒಂದು ಕಡೆ ಇರುವ ಹಲವು ಗದ್ದೆಗಳಲ್ಲಿ ಈಗ ಇದು ಹರಡಿಕೊಂಡಿದೆ. ಈಗ ರೈತರು ಈ ಕಳೆಯನ್ನು ಸಂಗ್ರಹಿಸಿ ಹತ್ತಿರದಲ್ಲಿ ಹರಿಯುವ ನದಿಗೆ ಎಸೆಯುತ್ತಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರಸ್ತಕ ಸಾಲಿನ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆ ಅಡಿಯಲ್ಲಿ 2019 ನೇ ಸಾಲಿಗೆ ಅಂತರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾ ಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಮತ್ತು ಜಿಮ್ ಸ್ಥಾಪನೆಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ https://karunadu.karnataka.gov.in/dyes ಅಥವಾ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2521324, 94808-86467ಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತಕ ಸಾಲಿನ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ಉಪ್ಪಾರ ಮತ್ತು ಅದರ ಉಪಜಾತಿಗಳಿಗೆ ಸೇರಿದ ಜನರ ಆರ್ಥಿಕ ಆರ್ಥಿಕ ಅಭಿವೃದ್ಧಿಗಾಗಿ , ಸ್ವಯಂ ಉದ್ಯೋಗ ಸಾಲ ಯೋಜನೆ ಮತ್ತು ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ-ಸೌಲಭ್ಯ ಮತ್ತು ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 ಕೊನೆಯ ದಿನ ಆಗಿದೆ. ಅರ್ಜಿ ನಮೂನೆಯನ್ನು ಜಿಲ್ಲಾ ಕಛೇರಿ ಅಥವಾ ನಿಗಮದ ವೆಬ್ಸೈಟ್ನಲ್ಲಿ ಪಡೆದು ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಫೋಟೋ ಮತ್ತು ವಿದ್ಯಾರ್ಥಿಗಳ ವ್ಯಾಸಂಗದ ದಾಖಾಲಾತಿಗಳನ್ನು ನಿಗಮದ ವೆಬ್ಸೈಟ್ www.dbcdc.karnataka.gov.in ಮೂಲಕ ಸಲ್ಲಿಸಬಹುದು ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಳ ಅಭಿವೃದ್ಧಿ ನಿಗಮ (ನಿ), ಉಡುಪಿ ಜಿಲ್ಲಾ ಕಛೇರಿಗೆ ಸೆಪ್ಟೆಂಬರ್ 5 ರೊಳಗೆ ಸಲ್ಲಿಸಬಹುದು .
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.19ರ ಬುಧವಾರ 375 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 131, ಉಡುಪಿ ತಾಲೂಕಿನ 215 ಹಾಗೂ ಕಾರ್ಕಳ ತಾಲೂಕಿನ 27 ಮಂದಿಗೆ ಪಾಸಿಟಿವ್ ಬಂದಿದೆ. 2 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 99 ಸಿಂಥಮೇಟಿವ್ ಹಾಗೂ 276 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 195 ಪುರುಷರು, 180 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 205, ILI 67, ಸಾರಿ 5 ಪ್ರಕರಣವಿದ್ದು, 93 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 5 ಮಂದಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 111 ಮಂದಿ ಆಸ್ಪತ್ರೆಯಿಂದ ಹಾಗೂ 70 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. 1,608 ನೆಗೆಟಿವ್: ಈ ತನಕ ಒಟ್ಟು 59173 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 49432 ನೆಗೆಟಿವ್, 9041 ಪಾಸಿಟಿವ್ ಬಂದಿದ್ದು, 700 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ನವರು 90 ಸಾವಿರ ಅಧಿಕಾರಿ ಮತ್ತು ಗುಮಾಸ್ತ ಹುದ್ದೆಗಳಿಗೆ ನೇಮಕ ಮಾಡಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನದ ತರಬೇತಿಯನ್ನು ಆನ್ಲೈನ್ನಲ್ಲಿ ಆಯೋಜಿಸಲಾಗಿದೆ. ಆಸಕ್ತರು ಆಗಸ್ಟ್ 25 ರೊಳಗೆ ಬೆಳ್ಳಿಗೆ 10 ಗಂಟೆಯಿಂದ ಸಂಜೆ 4 ವರೆಗೆ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕುಲಸಚಿವ ಪ್ರೊ. ಲಿಂಗರಾಜಗಾಂಧಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತುತ ಸಾಲಿನ ಮಿಲಿಟರಿ ಪಿಂಚಣಿದಾರ ಕರ್ನಾಟಕದ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ನೀಡಲು ಒಂದನೇ ತರಗತಿಯಿಂದ ಅಂತಿಮ ಪದವಿ/ಡಿಪ್ಲೋಮಾ ಮತ್ತು ವೃತ್ತಿಪರ ಪದವಿವರೆಗೆ ಕರ್ನಾಟಕದಲ್ಲಿರುವ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 17ರ ನಂತರ ಅರ್ಜಿಯನ್ನು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇಲ್ಲಿಂದ ಪಡೆಯಬಹುದಾಗಿದೆ. ಇಂದರಿಂದ ಅಚಿತಿಮ ವರ್ಷದ ಪದವಿ/ಡಿಪ್ಲೊಮೋ ವರೆಗೆ ಅರ್ಜಿ ಸ್ವೀಕರಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದ್ದು, ವೃತಿಪರ ವ್ಯಾಸಾಂಗ ಮಾಡುತ್ತಿರುವವರಿಗೆ ಅರ್ಜಿ ಸ್ವೀಕರಿಸಲು ನವೆಂಬರ್ 30ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರನ್ನು ಸಂಪರ್ಕಿಸಬಹುದಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಆತ್ಮ ಯೋಜನೆಯಡಿ ಜಿಲ್ಲಾ, ತಾಲೂಕು ಶ್ರೇಷ್ಠ ಪ್ರಶಸ್ತಿ ಹಾಗೂ ಶ್ರೇಷ್ಠ ಆಸಕ್ತ ಗುಂಪು ಪ್ರಶಸ್ತಿಗೆ ಹನ್ನೆರಡು ವಿಭಾಗಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಯ್ಕೆಯಾದ ಜಿಲ್ಲೆಯ 10 ಮಂದಿ ರೈತರಿಗೆ ತಲಾ ರೂ.25,000/ ಹಾಗೂ ತಾಲೂಕು ಮಟ್ಟದ ಚಟುವಟಿಕೆಗಳಡಿ ಆಯ್ಕೆಯಾದ ಆಯಾಯ ತಾಲೂಕಿನ 5 ಮಂದಿ ರೈತರಿಗೆ ತಲಾ 10,000/- ನಗದು ವಿತರಿಸಲಾಗುವುದು. ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ರೈತರು ಭಾಗವಹಿಸಬಹುದಾದ ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳು: ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ, ಕೃಷಿ ಸಂಸ್ಕರಣೆ, ಹಾಗೂ ಅರಣ್ಯ ಕೃಷಿ, ಆಡು, ಕುರಿ, ಮೊಲ, ಇತ್ಯಾದಿ ಸಾಕಾಣಿಕೆ ಚಟುವಟಿಕೆಗಳಾಗಿವೆ. ಜಿಲ್ಲೆಗಳ ಪ್ರಗತಿಪರ ರೈತರ ಗುಂಪುಗಳ ಸಾಧನೆಗಳನ್ನು ಗುರುತಿಸಿ ಪುರಸ್ಕರಿಸುವ ನಿಟ್ಟಿನಲ್ಲಿ ರೈತರ ಗುಂಪುಗಳಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಮಣಿಪಾಲದಲ್ಲಿ ಪ್ರಸ್ತುತ ಸಾಲಿನ ಐ.ಟಿ.ಐ ಪ್ರವೇಶಾತಿಗೆ ಸರಕಾರಿ ಕೈಗಾರಿಕಾ ಸಂಸ್ಥೆಯಿಂದ ೨೦೨೦ ರ ಸಾಲಿನ ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ವೆಬ್ಸೈಟ್ www.emptrg.kar.nic.in ಮೂಲಕ ಆಗಸ್ಟ್ ೧೭ರಿಂದ ೩೧ರವರೆಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸ.ಕೈ.ತ.ಸಂಸ್ಥೆ, ಪ್ರಗತಿನಗರ ಮಣಿಪಾಲ ಇಲ್ಲಿಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 9448409355& 9740541554 ಗೆ ಸಂಪರ್ಕಿಸಲು ಸರಕಾರಿ ಕೈಗಾರಿಕಾ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸ್ತಕ ಸಾಲಿನ ಕೃಷಿ ಪ್ರಶಸ್ತಿ ರೈತರಿಗೆ ಉತ್ಪದನಾ ಬಹುಮಾನ ಕಾರ್ಯಕ್ರಮದಡಿ ಮುಂಗಾರು ಭತ್ತದ ಬೆಳೆಯಲ್ಲಿ ಬೆಳೆ ಸ್ವರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. ಭತ್ತದ ಬೆಳೆಯಲ್ಲಿ ರೈತರು ವಿವಿಧ ಹಂತದ ಬೆಳೆ ಸ್ವರ್ದೆಗೆ ಪ್ರವೇಶ ಶುಲ್ಕವನ್ನು ಪಾವತಿಸಿ ಅರ್ಜಿ,ಭೂ ಮಾಲೀಕತ್ವ ಕ್ಷೇತ್ರ ಕುರಿತ ಕಂದಾಯ ಇಲಾಖೆಯ ದಾಖಲಾತಿ ಅಥವಾ ಗುತ್ತಿಗೆ ಕರಾರು ಪತ್ರ ಗಳೊಂದಿಗೆ ಸೆಪ್ಟೆಂಬರ್ 15 ರೊಳಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು. ಎಂದು ಉಡುಪಿ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ► ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ – https://kundapraa.com/?p=40294 .
