Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಬ್ರಹ್ಮಾವರ ರುಡ್‌ಸೆಟ್ ಇವರ ಆಶ್ರಯದಲ್ಲಿ ಗಂಗೊಳ್ಳಿ ಇಗರ್ಜಿಯ ವ್ಯಾಪ್ತಿಯ ಮಹಿಳೆಯರಿಗೆ ಗಂಗೊಳ್ಳಿ ಇಗರ್ಜಿಯ ಸಭಾಂಗಣದಲ್ಲಿ ಆಯೋಜಿಸಲಾಗಿರುವ 10 ದಿನದ ಸ್ವ ಉದ್ಯೋಗ ತರಬೇತಿ ಕಾರ್ಯಾಗಾರವನ್ನು ಗಂಗೊಳ್ಳಿ ಕೊಸೆಸಾಂವ್ ಅಮ್ಮನವರ ಇಗರ್ಜಿಯ ಧರ್ಮಗುರು ರೆ.ಫಾ. ಅಲ್ಬರ್ಟ್ ಕ್ರಾಸ್ತಾ ಬುಧವಾರ ಉದ್ಘಾಟಿಸಿದರು. ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಪಾಪಾ ನಾಯಕ್, ಉಪನ್ಯಾಸಕ ಕರುಣಾಕರ ಜೈನ್, ತರಬೇತಿ ಶಿಕ್ಷಕಿ ಅಶ್ವಿನಿ ದೇಸಾಯಿ, ಸಂಪದ ಸಂಸ್ಥೆಯ ಸಂಯೋಜಕಿ ಜುಡಿತ್ ಡಿಸೋಜ, ಸುಗಮ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಪ್ರಮೀಳಾ ಡೆಸಾ, ಅಮೃತಾ ಮಹಾ ಸಂಘದ ಅಧ್ಯಕ್ಷೆ ಆಶಾ ರೆಬೆರೊ, ಕಾರ್ಯದರ್ಶಿ ಪ್ಲೊಸಿ ಬ್ರಗಾಂಜ, ಸ್ತ್ರೀ ಸಚೇತಕಿ ಜ್ಯೋತಿ ಎ.ಸಿ., 18 ಆಯೋಗದ ಸಂಯೋಜಕಿ ಪ್ರೀತಿ ಫೆರ್ನಾಂಡಿಸ್ ಮತ್ತಿತರರು ಉಪಸ್ಥಿತರಿದ್ದರು. ಘಟಕದ ಅಧ್ಯಕ್ಷೆ ಆಶಾ ರೆಬೆರೊ ಸ್ವಾಗತಿಸಿದರು. ಪ್ರೀತಿ ಫೆರ್ನಾಂಡಿಸ್ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಪ್ಲೊಸಿ ಬ್ರಗಾಂಜ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು:  ಕರ್ನಾಟಕ ಸರ್ಕಾರದ ಅರಣ್ಯ, ಪರಿಸರ ಮತ್ತು ಜೀವಿ ಶಾಸ್ತ್ರ ಸಚಿವಾಲಯದ ಅಧಿಸೂಚನೆಯಂತೆ ಉಡುಪಿ ಜಿಲ್ಲಾ ಪಂಚಾಯತ್ ಕರ್ನಾಟಕ ರಾಜ್ಯ ಸರಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸುತ್ತೋಲೆಯಂತೆ ಪ್ಲಾಸ್ಟಿಕ್ ಮುಕ್ತ ಉಡುಪಿ ಜಿಲ್ಲೆ ಮಾಡುವ ಉದ್ಧೇಶದಿಂದ ಮೊದಲ ಹಂತದಲ್ಲಿ ಉಡುಪಿ ಜಿಲ್ಲೆಯ ಆರು ಗ್ರಾಮ ಪಂಚಾಯತ್‌ಗಳನ್ನು ಆಯ್ಕೆ ಮಾಡುಕೊಂಡು ನಿಷೇಧಿತ ಪ್ಲಾಸ್ಟಿಕ್‌ನ್ನು ಕಡ್ಡಾಯವಾಗಿ ನಿರ್ಬಂಧಿಸಿ, ಪರಿಣಾಮಕಾರಿ ಅನುಷ್ಟಾನಕ್ಕೆ ಯೋಜನೆ ರೂಪಿಸಿದ್ದು, ಆಯ್ದ ಆರು ಪಂಚಾಯತ್‌ಗಳಲ್ಲಿ ಒಂದಾದ ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜ.26ರಂದು ಪ್ಲಾಸ್ಟಿಕ್ ಮುಕ್ತಗ್ರಾಮ ಘೋಷಣೆ ಮಾಡಲಾಗಿದ್ದು, ನೋಡೆಲ್ ಅಧಿಕಾರಿಗಳಿಂದ ಅಂಗಡಿ-ಮುಂಗಟ್ಟುಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಫೆ.6ರಂದು ವಂಡ್ಸೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿರುವ ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿ ಡಾ|ನಾಗಭೂಷಣ ಉಡುಪ ಅವರ ನೇತೃತ್ವದಲ್ಲಿ ಜನತೆಯಲ್ಲಿ ಅರಿವು ಮೂಡಿಸಲಾಯಿತು. ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸರಬರಾಜು, ಸಂಗ್ರಹಣೆ, ಸಾಗಾಣಿಕೆ, ಮಾರಾಟ, ಬಳಕೆ ಮತ್ತು ವಿತರಣೆ ಮಾಡಿದರೆ ಗ್ರಾಮ ಪಂಚಾಯತ್ ಬೈಲಾದಂತೆ…

Read More

ಕುಂದಾಪ್ರ ಡಾಟ್ ಕಾಂ ಲೇಖನ ಸ್ವಸ್ಥ ಜಗತ್ತನ್ನು ನಿರ್ಮಿಸುವಲ್ಲಿ ಭಾರತ ನೀಡಿದ ಅತ್ಯುತ್ತಮ ಕೊಡುಗೆ ಯೋಗ. ಇತ್ತೀಚಿನ ವರ್ಷಗಳಲ್ಲಿ ಇದು ಎಷ್ಟೊಂದು ಪ್ರಚಾರ ಪಡೆದಿದೆಯೆಂದರೆ ವಿದೇಶಿ ಪ್ರವಾಸಿಗರ ತಂಡ ಈ ವಿಜ್ಞಾನವನ್ನು ಅಭ್ಯಸಿಸಲಿಕ್ಕಾಗಿ ಭಾರತಕ್ಕೆ ಬರುತ್ತಿದ್ದಾರೆ. ಅಂತಹ ಒಂದು ಗುಂಪು- ಶಿವರಾಮ ಅನ್ನುವ ಫ್ರಾನ್ಸ್‌ನಲ್ಲಿ ಜನಿಸಿ ಕೆನಡಾದಲ್ಲಿ ಬೆಳೆದ ಒಬ್ಬ ಆಧ್ಯಾತ್ಮಿಕ ವ್ಯಕ್ತಿಯ ನೇತೃತ್ವದಲ್ಲಿ ಈಗ ಕುಂದಾಪುರದಲ್ಲಿ ಇದೆ. ಸುಮಾರು 24 ಮಂದಿ ಇರುವ (ಫ್ರಾನ್ಸ್, ಕೆನಡಾ, ಅಮೇರಿಕಾ, ಜಪಾನ್, ಟ್ಯುನೇಷಿಯಾ, ಬೆಲ್ಜಿಯಂ……) ಈ ಯೋಗ ರಿಟ್ರೀಟ್ ತಂಡಕ್ಕೆ ಭಾರತೀಯ ಶಾಸ್ತ್ರೀಯ ಕಲೆಗಳಲ್ಲಿ ಅತೀವ ಆಸಕ್ತಿ. ಭಾರತೀಯ ಪರಂಪರೆಯನ್ನು ಉದ್ದೀಪನಗೊಳಿಸಲು ಸ್ಥಾಪಿಸಲ್ಪಟ್ಟ ಕುಂದಾಪುರದ ಸಾಧನಾ ಕಲಾ ಸಂಗಮ ನಾರಾಯಣ ಐತಾಳರ ನೇತೃತ್ವದಲ್ಲಿ, ಶಾಸ್ತ್ರೀಯ ಕಲೆಗಳನ್ನು ಮುಂದುವರೆಸುವ ಪ್ರಯತ್ನದಲ್ಲಿ ಒಳ್ಳೆಯ ಹೆಸರು ಮಾಡಿದೆ. ಶಾಸ್ತ್ರೀಯ ಗಾಯನ, ವಾದನ, ನರ್ತನಗಳಲ್ಲಿ ಪ್ರತಿಭೆಯನ್ನು ಹೊಂದಿರುವ ಶಿಕ್ಷಕರು/ವಿದ್ಯಾರ್ಥಿಗಳು ಈ ಸಂಸ್ಥೆಯಲ್ಲಿದ್ದಾರೆ. ಇವರ ಆಶ್ರಯದಲ್ಲಿ ಇತ್ತೀಚೆಗೆ ಮೇಲೆ ತಿಳಿಸಿದ ಯೋಗ ರಿಟ್ರೀಟ್ ತಂಡಕ್ಕೆ ಒಂದು ಭರತನಾಟ್ಯ ಕಾರ‍್ಯಕ್ರಮ ಸಂಸ್ಥೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಲ್ಲಿನ ಯುವ ರೆಡ್‌ಕ್ರಾಸ್ ಘಟಕ ಹಾಗೂ ಭಾರತೀಯ ರೆಡ್‌ಕ್ರಾಸ್ ಘಟಕ ಕುಂದಾಪುರ ಮತ್ತು ಬೈಂದೂರು ಇವರ ಸಹಯೋಗದೊಂದಿಗೆ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಜಯಕರ ಶೆಟ್ಟಿ, ಅಧ್ಯಕ್ಷರು, ಭಾರತೀಯ ರೆಡ್‌ಕ್ರಾಸ್ ಘಟಕ ಕುಂದಾಪುರ ಇವರು ರೆಡ್‌ಕ್ರಾಸ್ ಸಂಸ್ಥೆಯ ಮೂಲಭೂತ ತತ್ವಗಳಾದ ಮಾನವೀಯತೆ, ಪಕ್ಷಪಾತರಾಹಿತ್ಯ, ತಾಟಸ್ಥ್ಯ, ಸ್ವಾತಂತ್ರ್ಯ, ಸ್ವಯಂಸೇವೆ, ಏಕತೆ ಮತ್ತು ವಿಶ್ವವ್ಯಾಪಕತೆ ಮತ್ತು ಸೇವಾ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ಡಾ. ಸೋನಿ ಡಿಕೋಸ್ಟಾ, ಅಮೃತೇಶ್ವರಿ ಆಯುರ್ವೇದಿಕ್ ಕಾಲೇಜು, ಕುಂದಾಪುರ ಇವರು ಬೆಂಕಿ ಅನಾಹುತ, ರಕ್ತಸ್ರಾವ, ನೀರಿನ ಅವಘಡ ತುರ್ತಾಗಿ ಮಾಡಬೇಕಾದ ಪ್ರಥಮ ಚಿಕಿತ್ಸೆಯ ವಿಧಾನಗಳನ್ನು ಮತ್ತು ಹಾಗೂ ಬಹುಮುಖ್ಯವಾಗಿ ಹೃದಯಾಘಾತದ ಸಂದರ್ಭದಲ್ಲಿ ಮಾಡಬೇಕಾದ ಸಿ.ಪಿ.ಆರ್. ವಿಧಾನವನ್ನು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಿಕೊಟ್ಟರು. ಡಾ. ಕೀರ್ತಿ ಪಾಲನ್ ಪ್ರಥಮ ಚಿಕಿತ್ಸೆ ತರಬೇತುದಾರರು, ರೆಡ್‌ಕ್ರಾಸ್ ಸಂಸ್ಥೆ, ಉಡುಪಿ. ಇವರು, ಮೂಳೆ ಮುರಿತದ ನಿರ್ವಹಣೆ ಮತ್ತು ಬ್ಯಾಂಡೇಜ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಉಡುಪಿ ಜಿಲ್ಲೆಯಲ್ಲಿ COTPA 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕುಂದಾಪುರ ತಾಲೂಕಿನ ಬೈಂದೂರು ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ದಾಳಿ ನಡೆಸಿ ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 20 ಪ್ರಕರಣ ದಾಖಲಿಸಿ ರೂ. 2400 ದಂಡ ವಸೂಲಿ ಮಾಡಲಾಯಿತು. ಅದರಂತೆ ಸೆಕ್ಷನ್ 4, 6 (ಎ) ಮತ್ತು 6(ಬಿ) ನಾಮಫಲಕಗಳನ್ನು ದಾಳಿಯಲ್ಲಿ ವಿತರಿಸಲಾಯಿತು. ಹಾಗೂ ಎಲ್ಲಾ ಅಂಗಡಿ, ಹೋಟೇಲ್‌ಗಳಲ್ಲಿ ಆಹಾರ ಸುರಕ್ಷತಾ ಪರವಾನಿಗೆಯನ್ನು ಪರೀಕ್ಷಿಸಲಾಯಿತು. ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ, ಕೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಉಮೇಶ್ ನಾಯಕ್, ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಉಡುಪಿ ಹಿರಿಯ ಆರೋಗ್ಯ ಸಹಾಯಕ ಸತೀಶ್ ರಾವ್, ಹಿರಿಯ ಆರೋಗ್ಯ ಸಹಾಯಕ ರಮೇಶ್ ಶೆಟ್ಟಿ, ಕುಂದಾಪುರ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ದತ್ತಾತ್ರೇಯ, ಜಿಲ್ಲಾ ಎನ್.ಸಿ.ಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಪೊಲೀಸ್ ಠಾಣೆಯ ನೂತನ ಪೊಲೀಸ್ ಉಪ ನಿರೀಕ್ಷಕರಾಗಿ ಸಂಗೀತಾ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಗುಲ್ಬರ್ಗದವರಾದ ಸಂಗೀತಾ ಅವರು ಬಿಎ ಶಿಕ್ಷಣ ಮುಗಿಸಿ ಪೊಲೀಸ್ ವೃತ್ತಿಗೆ ಸೇರ್ಪಡೆಯಾಗಿದ್ದರು. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಹಾಗೂ ಉಡುಪಿ ಟೌನ್ ಪೊಲೀಸ್ ಠಾಣೆಯಲ್ಲಿ ತಲಾ ನಾಲ್ಕು ತಿಂಗಳು ಪ್ರೋಬೇಷನರಿ ಅವಧಿ ಪೂರ್ಣಗೊಳಿಸಿ ಇದೀಗ ಬೈಂದೂರಿನ ನೂತನ ಠಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ಇಲ್ಲಿನ ಠಾಣಾಧಿಕಾರಿಯಾಗಿದ್ದ ತಿಮ್ಮೇಶ್ ಬಿ.ಎನ್. ಅವರು ಮಲ್ಪೆ ಠಾಣೆಗೆ ವರ್ಗಾವಣೆಗೊಂಡ ಬಳಿಕ, ಇಲ್ಲಿ ಠಾಣಾಧಿಕಾರಿ ಹುದ್ದೆ ಖಾಲಿಯಿದ್ದು, ಎಎಸ್‌ಎ ಮಹಾಬಲ ಅವರು ತಾತ್ಕಾಲಿಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಂಸ್ಕೃತಿಕ ಪ್ರಜ್ಞೆ ದೇಶದ ಅಭಿವೃದ್ಧಿಗೆ ಪೂರಕವಾಗಿ, ಪ್ರೇರಕವಾಗಿ ಕೆಲಸಮಾಡುತ್ತದೆ. ಕಲೆ, ಚರಿತ್ರೆ, ಪಾರಂಪರಿಕ ಜ್ಞಾನ ಹಿರಿಯ ಬಳುವಳಿಯಾಗಿದ್ದು, ಇವೆಲ್ಲದರ ಜೊತೆಗೆ ಸಂಸ್ಕಾರ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಸಾಂಸ್ಕೃತಿಕ ಸಂಘಟನೆಗಳ ಪಾತ್ರ ದೊಡ್ಡದು ಎಂದು ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಾಂತಾನಂದ ಶೆಟ್ಟಿ ಹೇಳಿದರು. ಅವರು ಪರಿಶಿಷ್ಟ ಪಂಗಡದ ರಂಗತಂಡ ಸಂಚಲನ ರಿ. ಹೊಸೂರು ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಭಾನುವಾರ ಹೊಸೂರಿನ ಕೆ.ವಿ ಸುಬ್ಬಣ್ಣ ವನರಂಗದಲ್ಲಿ ಆಯೋಜಿಸಲಾದ ಹನ್ನೆರಡನೇ ವರ್ಷದ ವಾರ್ಷಿಕ ಸಂಭ್ರಮ ವನಸಿರಿಯಲ್ಲೊಂದು ರಂಗಸುಗ್ಗಿ ಎರಡನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು. ನಿವೃತ್ತ ಯೋಧ ಸಂಜೀವ ನಾಯ್ಕ್ ಹುಲ್ಕಡಿಕೆ ಅವರನ್ನು ಸನ್ಮಾನಿಸಲಾಯಿತು. ಯಡ್ತರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೂಕಾಂಬು ದೇವಾಡಿಗ ಅಧ್ಯಕ್ಷತೆ ವಹಿಸಿ ಮಾತನಾಡಿ ಯಾವುದೇ ಕೆಲಸವಿರಲಿ ಅದನ್ನು ಧೈರ್ಯವಾಗಿ ಮಾಡಿ. ಬದುಕಿನಲ್ಲಿ ಸಾಧನೆ ಮಾಡುತ್ತಾ ನಾವು ಬೆಳೆಯುವುದರ ಜೊತೆಗೆ ತಂದೆ ತಾಯಿಯರು ಹೆಮ್ಮೆ ಪಡುವಂತೆ ಮಾಡುವುದು ಮಾಡಬೇಕು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನೆನಪು ಮೂವೀಸ್ ಕೋಟ ಅವರ ಸುಗಂಧಿ ಚಲನಚಿತ್ರ ವಿಶೇಷ ಚಲನಚಿತ್ರ ವಿಭಾಗದಲ್ಲಿ ಆಯ್ಕೆಯಾಗಿದೆ.ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಜಿ.ಮೂರ್ತಿ ಅವರು ನಿರ್ದೇಶಿಸಿ,ಸಾಹಿತಿ ನರೇಂದ್ರ ಕುಮಾರ್ ನಿರ್ಮಾಪಕರಾಗಿರುವ ಚಿತ್ರಕ್ಕೆ ಪ್ರವೀಣ್ ಗೋಡ್ಖಿಂಡಿ ಸಂಗೀತವಿದ್ದು,ಪಿ.ಕೆ ದಾಸ್ ಕ್ಯಾಮರಾ ಕೈಚಳಕ ಮತ್ತು ಸಂಜೀವ ರೆಡ್ಡಿ ಸಂಕಲನ ಕೆಲಸ ನಿರ್ವಹಿಸಿದ್ದಾರೆ.ರವಿ ಪೂಜಾರಿ ಮತ್ತು ಖಾನ್ ಸಂಗೀತ ಮತ್ತು ನರೇಂದ್ರ ಕುಮಾರ್ ಮತ್ತು ಸತೀಶ್ ವಡ್ಡರ್ಸೆ ಅವರ ಸಂಭಾಷಣೆವಿದೆ.ಈ ಚಿತ್ರದಲ್ಲಿ ಮಗುವಿನ ಪಾತ್ರದಲ್ಲಿ ಸಾಸ್ತಾನದ ವೈಷ್ಣವಿ ಅಡಿಗ ಕಾಣಿಸಿಕೊಂಡಿದ್ದು,ತಾಯಿಯ ಪಾತ್ರದಲ್ಲಿ ವಿನಯ ಪ್ರಸಾದ್ ,ಗುರುವಿನ ಪಾತ್ರದಲ್ಲಿ ಬನ್ನಂಜೆ ಸಂಜೀವ್ ಸುವರ್ಣ ಅವರು ಅಭಿನಯಿಸಿದ್ದಾರೆ,ಅಲ್ಲದೇ ಕೋಟ ಪರಿಸರದ ೫೦ ಕ್ಕೂ ಹೆಚ್ಚು ಕಲಾವಿದರು ಈ ಚಲನಚಿತ್ರದಲ್ಲಿ ನಟಿಸಿದ್ದು ಪ್ರಮುಖರಾದ ಅಂಬಲಪಾಡಿಯ ಡಾ.ವಿಜಯ್ ಬಲ್ಲಾಳ್,ಕೋಟದ ಉದ್ಯಮಿ ಆನಂದ್ ಸಿ ಕುಂದರ್, ನೀಲಾವರ ಸುರೇಂದ್ರ ಅಡಿಗ ಸಹ ಮೊದಲ ಬಾರಿಗೆ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.ಕಾರ್ಯಕಾರಿ ನಿರ್ಮಾಪಕರಾಗಿ ಪ್ರಶಾಂತ್ ಕುಂದರ್, ಸಹ ನಿರ್ಮಾಪಕರಾಗಿ ಪ್ರಕಾಶ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ದಿನಾಂಕ 20.01.2020 ರ ಸೋಮವಾರದಂದು ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಸದರಿ ಶಾಲೆಯಲ್ಲಿ ಬೆಳಿಗ್ಗೆ 11-೦೦ ಗಂಟೆಗೆ ಪ್ರಧಾನಮಂತ್ರಿಯವರ ’ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದನೇರ ಪ್ರಸಾರವನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋರಿಸಲಾಯಿತು. 1೦ ನೇ ತರಗತಿಯ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯವನ್ನು ಹೋಗಲಾಡಿಸಲು ಭಾರತ ಸರ್ಕಾರಕೈಗೊಂಡ ಈ ಕಾರ್ಯಕ್ರಮದಲ್ಲಿಎಲ್ಲಾ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಿದರು. ಪ್ರಧಾನಮಂತ್ರಿಯವರು ವಿದ್ಯಾರ್ಥಿಗಳೊಡನೆ ನಡೆಸಿದ ಈ ಸಂವಾದಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ಬಹಳ ಆಸಕ್ತಿಯಿಂದ ತೊಡಗಿಸಿಕೊಂಡು.ಪ್ರೇರಣೆಯನ್ನು ಪಡೆದರು.ಮುಂಬರುವ ಪರೀಕ್ಷೆಯ ಹಿನ್ನೆಲೆಯಲ್ಲಿ ನಡೆಸಲಾದ ಬಹಳ ಚೆನ್ನಾಗಿ ಮುಡಿಬಂದಿ ಪ್ರಧಾನಮಂತ್ರಿಯವರ ಉತ್ತರ ವಿದ್ಯಾರ್ಥಿಗಳಿಗೆ ಬಹಳ ಸ್ಫೂರ್ತಿದಾಯಕವಾಗಿತ್ತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ರಮ್ಯಶ್ರೀ ಶೆಟ್ಟಿ ಇವರು ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಬಿ.ಕಾಂ. ಪದವಿ ಐದನೇ ಮತ್ತು ಆರನೇ ಸೆಮಿಸ್ಟರ್ ಫಿನಾನ್‌ಶಿಯಲ್ ಅಕೌಂಟಿಂಗ್ ಪರೀಕ್ಷೆಯಲ್ಲಿ ೩೦೦ಕ್ಕೆ ೩೦೦ ಅಂಕ ಗಳಿಸಿ ಅಖಿಲ ಭಾರತ ಚಾರ್ಟೆಡ್ ಅಕೌಂಟೆಂಟ್ ಇನ್‌ಸ್ಟಿಟ್ಯೂಶನ್‌ನ ಚಿನ್ನದ ಪದಕ ಪಡೆದಿದ್ದಾರೆ.

Read More