ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೇವಲ ವೃತ್ತಿಗಾಗಿ ಸೇನೆಗೆ ಸೇರದೆ, ದೇಶಪ್ರೇಮದಿಂದ ಯುವಜನತೆ ಸೈನಿಕರಾಗಬೇಕಾಗಿದೆ. ಶ್ರೀಮಂತ ವರ್ಗದವರು ದೇಶ ಕಾಯುವ ಕಾಯಕಕ್ಕೆ ತಮ್ಮ ಮಕ್ಕಳನ್ನು ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಚಿಕ್ಕಂದಿನಿಂದಲೇ ಮಕ್ಕಳಿಗೆ ರಾಷ್ಟ್ರಪ್ರೇಮದ ಪಾಠವನ್ನು ಸರಿಯಾಗಿ ಹೇಳಿದರೆ ಮುಂದೆ ಅವರು ದೇಶಸೇವೆಗೆ ಸ್ವಯಂಪ್ರೇರಿತರಾಗಿ ಎದ್ದು ನಿಲ್ಲುತ್ತಾರೆ. ಈ ದಿಸೆಯಲ್ಲಿ ಪೋಷಕರು ಮತ್ತು ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕಿದೆ ಎಂದು ಕುಂದಾಪುರ ತಾಲೂಕು ಕಸಾಪ ಅಧ್ಯಕ್ಷ ಹೇಳಿದರು. ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ ಹಾಗೂ ಗೀತಾನಂದ ಫೌಂಡೇಷನ್ ಮಣೂರು ಇವರ ಜಂಟಿ ಆಶ್ರಯದಲ್ಲಿ ನಡೆದ ತಿಂಗಳ ಸಡಗರ ಸರಣಿಯ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾಡ ಗುಡ್ಡೇಅಂಗಡಿ ನಿವಾಸಿ ಮಾಜಿ ಸೈನಿಕರೂ ಹಿರಿಯರೂ ಆದ ವೆನೆಸಿಸ್ ಪಿರೇರಾ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಹಿಂದೆಲ್ಲಾ ಸೈನಿಕರ ಜೀವನ ದುಸ್ತರವಾಗಿತ್ತು. ಶಸ್ತ್ರಾಸ್ತ್ರಗಳ ಕೊರತೆ ಇತ್ತು, ಆದರೆ ಈಗ ನಮ್ಮ ದೇಶದ ಮೂರು ಸೇನೆಗಳು ಸದೃಢವಾಗಿದ್ದು,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಸಮಾನತೆ ಕಮ್ಮಿ ಮಾಡಿ, ಸಮಾನತೆ ಮೂಲಕ ಎಲ್ಲರಿಗೂ ಉತ್ತಮ ಜೀವನ ಕಾನೂನು ಮೂಲಕ ಸಿಗಬೇಕು. ಕೋರ್ಟಿಗೆ ಹೋಗುವವರ ಸಂಖ್ಯೆಗೆ ಅನುಗುಣವಾಗಿ ನ್ಯಾಯಾಲಯ, ನ್ಯಾದೀಶರು ಇಲ್ಲದಿದ್ದರಿಂದ ನ್ಯಾಯದಾನ ವಿಳಂಬ. ಉತ್ತಮ ಕಾನೂನು ವ್ಯವಸ್ಥೆಯಿಂದ ಸ್ವಾಸ್ಥ್ಯ ಸಮಾಜ ಹಾಗೂ ದೇಶಕಟ್ಟಲು ಸಾಧ್ಯ ಎಂದು ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಹೇಳಿದರು. ಕುಂದಾಪುರ ಕಾನೂನು ಸೇವೆಗಳ ಪ್ರಾಧಿಕಾರಿ, ವಕೀಲರ ಸಂಘ, ಅಭಿಯೋಗ ಇಲಾಖೆ, ತಾಲೂಕ್ ಆಡಳಿತ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜೆಸಿಐ ಆಶ್ರಯದಲ್ಲಿ ಕುಂದಾಪುರ ನ್ಯಾಯಾಲಯ ವಠಾರದಲ್ಲಿ ನಡೆದ ಕಾನೂನು ಅಭಿಯಾನ ಸಮಾರೋಪದಲ್ಲಿ ಮಾತನಾಡುತ್ತಿದ್ದರು. ನ್ಯಾಯಾಲಯದಲ್ಲಿ ಸಾಕಷ್ಟು ದೂರುಗಳು ಬಾಕಿಯುದ್ದು, ಅದರ ವಿಲೇವಾರಿಗೆ ಬೇಕಾಗುವಷ್ಟು ನ್ಯಾಯಾಲಯ, ನ್ಯಾಯಾದೀಶ, ಹಾಗೂ ಸಿಬ್ಬಂದಿ ಕೊರತೆಸಮಸ್ಯೆ ಪರಿಹಾರದ ದೃಷ್ಟಿಯಲ್ಲಿ ಸರ್ಕಾರ ಕಾನೂನು ಪ್ರಾಧಿಕಾರದ ಮೂಲಕ ದೂರುಗಳ ವಿಲೇವಾರಿ ಮಾಡುವ ಪ್ರಯತ್ನ ಮಾಡುತ್ತಿದೆ. ಲೋಕಾಯುಕ್ತ ಹಾಗೂ ಕಾನೂನು ಪ್ರಾಧಿಕಾರ ಜತೆಜತೆಯಾಗಿ ಹೆಚ್ಚಿನ ಹಾಕಬೇಕು ಎಂದು ಸಲಹೆ ಮಾಡಿದರು. ಉಡುಪಿ ಜಿಲ್ಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಭುತ್ವದ ಆಶಯಕ್ಕೆ ವಿರುದ್ಧವಾದ ಅಭಿವ್ಯಕ್ತಿಯನ್ನು ದಮನ ಮಾಡುತ್ತೇವೆ ಎಂಬ ಅಧಿಕಾರಯುತವಾದ ಧೋರಣೆಯ ನಡುವೆ ವ್ಯಂಗ್ಯಚಿತ್ರವೆಂಬುದು ದೊಡ್ಡ ಸವಾಲೇ ಆಗಿದೆ. ಕ್ರೀಯಾತ್ಮಕ ಮನಸ್ಸುಗಳಿಂದ ಮಾತ್ರ ಪ್ರಭುತ್ವದ ಅಹಂಕಾರವನ್ನು ದುರಹಂಕಾರದ ಮಟ್ಟಕ್ಕೇರದಂತೆ ವಿನಂಭ್ರತೆಯತ್ತ ಕೊಂಡೊಯ್ಯುವ ದಾರಿ ಮಾಡಿಕೊಡಲು ಸಾಧ್ಯವಿದೆ ಎಂದು ಸಮುದಾಯ ಕರ್ನಾಟಕದದ ಜೊತೆ ಕಾರ್ಯದರ್ಶಿ ವಿಮಲ ಕೆ. ಎಸ್ ಹೇಳಿದರು. ಶನಿವಾರ ಇಲ್ಲಿನ ಕಲಾಮಂದಿರದಲ್ಲಿ ವಿಭಿನ್ನ ಐಡಿಯಾಸ್ ಹಾಗೂ ಕಾರ್ಟೂನು ಕುಂದಾಪ್ರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಟೂನು ಹಬ್ಬದಲಿ ಸಮುದಾಯ ಕುಂದಾಪುರ ಸಹಯೋಗದೊಂದಿಗೆ ಹಮ್ಮಿಕೊಂಡ ಮಾಸ್ಟರ್ ಸ್ಟ್ರೋಕ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಭಿವ್ಯಕ್ತಿಯ ಜೊತೆಗೆ ಮೆದುವಾದ ಹಾಸ್ಯವನ್ನು ನೀಡುವ ಕುರುಂಬದಂತಿರುವ ಕಾರ್ಟೂನುಗಳ ಮೂಲಕ ಬಣ್ಣಗಳ ಪರಿಧಿಯನ್ನು ದಾಟಿ ಸಮಾಜದ ಅಂಕುಡೊಂಕುಗಳನ್ನು ತೋರಿಸುತ್ತಾ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವುದಕ್ಕೂ ಸಾಧ್ಯವಾಗಬೇಕಿದೆ. ಸೌಹಾರ್ದತೆ, ಸಮಾನತೆಯ ನಡುವೆ ಸಮಾನ ಸಂಬಂಧದ ಮನಸ್ಸುಗಳನ್ನು ಬೆಸೆಯುವ ಅಗತ್ಯವೂ ಇದೆ ಎಂಬದನ್ನು ಪ್ರತಿಪಾದಿಸಿದ ಅವರು, ಈ ಕ್ಷಣದ ಹಲವು ಘಟನೆಗಳಿಗೆ ತಕ್ಷಣ ಸ್ಪಂದಿಸುವ ವ್ಯಂಗ್ಯಚಿತ್ರಕಾರರು ತಮ್ಮ ತೃಪ್ತಿಗಾಗಿ ವ್ಯಂಗ್ಯಚಿತ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಮಾಜಿಕ ಜಾಲತಾಣಗಳಲ್ಲಿ ಯಾವುದನ್ನು ಹರಡಬೇಕು ಹಾಗೂ ಯಾವುದನ್ನು ಹರಡಬಾರದು ಎಂಬ ಪರಿವೆ ಇಲ್ಲದ್ದರಿಂದ ಉಂಟಾಗಿರುವ ಗೊಂದಲವನ್ನು ವ್ಯಂಗ್ಯಚಿತ್ರಗಳು ವಿಡಂಭನಾತ್ಮಕವಾಗಿ ಬಿಂಬಿಸಿದ್ದು, ಹಾಸ್ಯದ ಮೂಲಕ ನಮ್ಮ ನಮ್ಮ ಜವಾಬ್ದಾರಿಗಳನ್ನು ಅರಿತುಕೊಳ್ಳುವ ಅಗತ್ಯವೂ ಇದೆ ಎಂದು ಬೆಂಗಳೂರು ಅಭಿನಂದನ ಸಾಂಸ್ಕೃತಿಕ ಟ್ರಸ್ಟ್ನ ಅಧ್ಯಕ್ಷ, ಪತ್ರಕರ್ತ ರಾಘವೇಂದ್ರ ಕಾಂಚನ್ ಹೇಳಿದರು. ಅವರು ವಿಭಿನ್ನ ಐಡಿಯಾಸ್ ಹಾಗೂ ಕಾರ್ಟೂನು ಕುಂದಾಪ್ರ ಸಂಸ್ಥೆಯ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳ ಕಾರ್ಟೂನು ಹಬ್ಬ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು. ಕಾರ್ಟೂನು ಹಬ್ಬದ ಕೇವಲ ಸಂಭ್ರಮ ವಿನೋದಗಳಿಗೆ ಸೀಮಿತವಾಗಿರದೇ ಉತ್ತಮ ವಿಚಾರ ವಿನಿಮಯ ಹಾಗೂ ಸೃಜನಶೀಲ ಮನಸ್ಸುಗಳ ಸೃಷ್ಠಿಗೆ ಕಾರಣವಾಗಿದೆ. ಕಾರ್ಟೂನು ಬಗೆಗಿನ ಆಸಕ್ತಿರ ಹೊಸ ತಲೆಮಾರಿನ ಸೃಷ್ಠಿಗೂ ಕಾರಣವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಟೋರ್ಪೋಡೋಸ್ ಸ್ಪೋಟ್ಸ್ ಕ್ಲಬ್ನ ಗೌತಮ್ ಶೆಟ್ಟಿ, ಚಕ್ರವರ್ತಿ ಕ್ರಿಕೆಟ್ ಕ್ಲಬ್ನ್ ಕೋಚ್ ಪ್ರದೀಪ್ ವಾಜ್, ಬಾಲನಟಿ ಶ್ಲಾಘಾ ಸಾಲಿಗ್ರಾಮ ಉಪಸ್ಥಿತರಿದ್ದರು. ಕಾರ್ಟೂನು ಹಬ್ಬ ಹಾಗೂ ಸೈಂಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ ಕನ್ನಡ ಮಾಧ್ಯಮದಲ್ಲಿ ಹತ್ತನೇ ತರಗತಿಯವರೆಗೆ ಕಲಿತು ಬಳಿಕ ಇತರ ಪದವಿಗಳನ್ನು ಪಡೆದವರಿಗೆ ಡಿಸೆಂಬರ್ 3, 2017 ರಂದು ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಉದ್ಯೋಗಸಿರಿ” ವಿಶೇಷ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗಸಿರಿಯು ಆಳ್ವಾಸ್ ನುಡಿಸಿರಿಯ ಹಿನ್ನೆಲೆಯಲ್ಲಿ ವಿಶೇಷ ಮಹತ್ವ ಪಡೆದಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರಿಯು ಕಳೆದ ಹದಿನಾಲ್ಕು ವರ್ಷಗಳಿಂದ ಸಾಹಿತ್ಯಿಕ , ಬೌದ್ಧಿಕ , ಸಾಂಸ್ಕೃತಿಕ ಮತ್ತು ವೈಚಾರಿಕ – ಹೀಗೆ ವಿವಿಧ ಆಯಾಮಗಳಲ್ಲಿ ನಡೆಸಿಕೊಂಡು ಬರುತ್ತಿರುವ ” ಆಳ್ವಾಸ್ ನುಡಿಸಿರಿ ” ಸಮ್ಮೇಳನವು ರಾಷ್ಟ್ರೀಯ ನಾಡು – ನುಡಿಯ ಉತ್ಸವವಾಗಿದೆ . ಈ ನಿಟ್ಟಿನಲ್ಲಿ ಆಳ್ವಾಸ್ ನುಡಿಸಿರಿಯ ಪ್ರಯುಕ್ತ, ಕನ್ನಡ ಮಾಧ್ಯಮದಲ್ಲಿ ಒಂದರಿಂದ ಹತ್ತನೇ ತರಗತಿಯವರೆಗೆ ಕಲಿತು ತದನಂತರ ಇತರೆ ಪದವಿಗಳನ್ನು (ಡಿಗ್ರಿ, ಸ್ನಾತಕೋತ್ತರ , ಇತ್ಯಾದಿ ) ಪಡೆದ ಅಭ್ಯರ್ಥಿ ಗಳಿಗೆ ಡಿಸೆಂಬರ್ 3 ರಂದು ವಿಶೇಷ ಉದ್ಯೋಗ ಮೇಳವನ್ನು ನಡೆಸಲು ನಿರ್ಧರಿಸಲಾಗಿದೆ. ಉದ್ಯೋಗಸಿರಿಯು ಮಹತ್ತರ ಉದ್ದೇಶದ ಈಡೇರಿಕೆಗಾಗಿ ನಡೆಸಲ್ಪಡುವುದರಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಇಲ್ಲಿನ ಶ್ರೀ ಕುಂದೇಶ್ವರ ದೇವಸ್ಥಾನ ದೀಪೋತ್ಸವಕ್ಕೆ ಸಹಸ್ರಾರು ಭಕ್ತರ ಸಾಕ್ಷಿಯಾದರು. ಶುಕ್ರವಾರ ಬೆಳಗ್ಗೆಯಿಂದಲೇ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಿದ್ದು, ಸಂಜೆ ಪ್ರಣತಿ ದೀಪ ಬೆಳಗಿಸಲು ಸಹಸ್ರಾರು ಭಕ್ತರು ಕೈಜೋಡಿಸಿದರು. ಹಣತೆಯಿಂದ ಹಣತೆಗೆ ದೀಪ ಬೆಳಗಿಸಿ ಸಂಭ್ರಮಿಸಿದರು. ಶ್ರೀ ಕುಂದೇಶ್ವರ ದೇವಸ್ಥಾನಕ್ಕೆ ಐತಿಹಾಸಿಕ ಹಿನ್ನೆಲೆಯಿದ್ದು, ಕುಂದೇಶ್ವರ ರಾಜ ದೇವಸ್ಥಾನ ಪ್ರತಿಷ್ಠಾಪನೆ ಮಾಡಿದ್ದರಿಂದ ಕುಂದೇಶ್ವರ ಎಂಬ ಹೆಸರು ಬರಲು ಕಾರಣ ಎಂಬ ನಂಬಿಕೆಯಿದೆ. ಪ್ರಾತಕಾಲ ಪೂಜೆ, ರುದ್ರಾಭಿಷೇಕ ಹಾಗೂ ಶಿವನಿಗೆ ಪ್ರಿಯವಾದ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದಿದ್ದು, ಮಧ್ಯಾಹ್ನ ಮಹಾ ಅನ್ನಸಂತರ್ಣೆ ಕೂಡಾ ನಡೆಯಿತು. ಕುಂದೇಶ್ವರ ದೇವಸ್ಥಾನ ಬೀದಿ ದೀಪಾಲಂಕೃತವಾಗಿದ್ದು, ದೇವಸ್ಥಾನಕ್ಕೆ ಅಳವಡಿಸಿದ ಬಣ್ಣದ ದೀಪಗಳಿಂದ ಮತ್ತಷ್ಟು ಮೆರಗು ಬಂದಿತ್ತು. ಕುಂದೇಶ್ವರ ದೇವಸ್ಥಾನ ಪುಷ್ಕ್ಕರಣಿಗೆ ವಿಶೇಷ ವಿದ್ಯುತ್ ದೀಪ ಅಲಂಕಾರ ಮಾಡಿದ್ದು, ಪುಸ್ಕರಣಿಗೊಂದು ಹೊಸ ಕಳೆ ಮೂಡಿಸಿತ್ತು. ಹಾಗೆ ದೇವಸ್ಥಾನ ಬಳಿ ಇರುವ ಅಶ್ವಥಕಟ್ಟೆ ಬಳಿ ನಿರ್ಮಿಸಿದ ಬೃಹತ್ ಆಂಜನೇಯ ಮೂರ್ತಿ ಎಲ್ಲರ ಆಕರ್ಷಿಣೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 64ನೇ ಅಖಿಲ ಭಾರತ ಸಹಕಾರ ಸಪ್ತಾಹ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ, ಕಳೆದ 23 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿದ ಅಪೂರ್ವ ಸೇವೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರಿಗೆ ರಾಜ್ಯ ಮಟ್ಟದ ’ಉತ್ತಮ ಸಹಕಾರಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬಾಗಲಕೋಟೆಯ ಕಲಾಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರಿ ಪತ್ತಿನ ಮಹಾಮಂಡಲ ಬೆಂಗಳೂರು ಆಶ್ರಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಮಾಜಿ ಸಚಿವ ಹೆಚ್. ವೈ ಮೇಟಿ ಅವರು ಉತ್ತಮ ಸಹಕಾರಿ ಪ್ರಶಸ್ತಿ ಪ್ರದಾನ ಮಾಡಿದರು. ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಅಜೆಯ ಕುಮಾರ್ ಸರ್ ನಾಯಕ್, ಕರ್ನಾಟಕ ರಾಜ್ಯ ಸಹಕಾರಿ ಪತ್ತಿನ ಸಂಘಗಳ ಮಹಾಮಂಡಲದ ಅಧ್ಯಕ್ಷ ಸಿ.ಎಂ ಮರೇಗೌಡ, ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಲ ನಿ. ಅಧ್ಯಕ್ಷ ಡಾ ಶೇಖರ ಗೌಡ ಮಾಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವ್ಯಂಗ್ಯಚಿತ್ರಕಾರರಲ್ಲಿ ವಿಶೇಷವಾದ ಪ್ರತಿಭೆಯಿದ್ದು, ಅವರ ಸಮಾಜವನ್ನು ಭಿನ್ನವಾದ ಆಯಾಮದಿಂದ ನೋಡಿ ರೇಖೆಗಳ ಮೂಲಕ ತಮ್ಮ ಆಲೋಚನೆಯನ್ನು ಹರಿಬಿಡುತ್ತಾರೆ ಎಂದು ಖ್ಯಾತ ಸ್ತ್ರೀ ರೋಗ-ಹೆರಿಗೆ ತಜ್ಞೆ ಡಾ. ಪ್ರಮೀಳಾ ನಾಯಕ್ ಹೇಳಿದರು. ಇಲ್ಲಿನ ಕಲಾಮಂದಿರದಲ್ಲಿ ವಿಭಿನ್ನ ಐಡಿಯಾಸ್ ಹಾಗೂ ಕಾರ್ಟೂನು ಕುಂದಾಪ್ರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಟೂನು ಹಬ್ಬದಲ್ಲಿ ಸೈಂಟ್ ಮೇರಿಸ್ ಶಾಲೆ ೧೯೮೫-೮೬ ಬ್ಯಾಚ್ ಹಳೆ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಹಮ್ಮಿಕೊಂಡ ಕ್ಯಾರಿಕೇಚರ್ ಚಿತ್ರಿಸಿ ಸೈಂಟ್ ಮೇರಿಸ್ ಕನ್ನಡ ಮಾಧ್ಯಮ ಶಾಲೆಗೆ ನಿಧಿ ಸಂಗ್ರಹಿಸುವ ಕಾರ್ಯಕ್ರಮ ಚಿತ್ರನಿಧಿಗೆ ಚಾಲನೆ ನೀಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅಬುದಾಬಿ ಪ್ರೊಗ್ರೆಸ್ಸಿವ್ ಟೆಕ್ನಾಲಜಿ ಸರ್ವಿಸಸ್ನ ಮಹಮ್ಮದ್ ಅನ್ಸಾರ್, ವರದಿಗಾರ ಚಂದ್ರಶೇಖರ ಬೀಜಾಡಿ ಉಪಸ್ಥಿತರಿದ್ದರು. ಖ್ಯಾತ ಹೃದ್ರೋಗ ತಜ್ಞ ಡಾ. ಜಯಶಂಕರ್ ಮಾರ್ಲ ಹಾಗೂ ಖ್ಯಾತ ಮೂತ್ರಪಿಂಡತಜ್ಞ ಡಾ. ಇಸ್ತಿಯಾಕ್ ಅವರನ್ನು ಗೌರವಿಸಲಾಯಿತು. ಕಾರ್ಟೂನಿಷ್ಠ್ ಸತೀಶ್ ಆಚಾರ್ಯ ಅವರು ಡಾ. ಪ್ರಮೀಳಾ ನಾಯಕ್ ಅವರ ಪ್ರಥಮ ಲೈವ್ ಕ್ಯಾರಿಕೇಚರ್ ಚಿತ್ರಿಸಿದರು. ವಕೀಲ ರವಿಕುಮಾರ್ ಗಂಗೊಳ್ಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಶದ ಕಾನೂನು 18ನೇ ಶತಮಾನದಲ್ಲಿದ್ದರೇ, ಮನುಷ್ಯನ ಮನಸ್ಥಿತಿ 19ನೇ ಶತಮಾನದಲ್ಲಿದೆ. ಆದರೆ ಆತನ ಆಕಾಂಕ್ಷೆಗಳು 21ನೇ ಶತಮಾನದಲ್ಲಿದೆ. ಈ ಮೂರರ ತಿಕ್ಕಾಟದ ನಡುವೆ ಸಮಾಜವಿದೆ. ಬದಲಾದ ಸಮಾಜಕ್ಕೆ ತಕ್ಕಂತೆ ಸೈಬರ್ ಕ್ರೈಮ್ ಕಾನೂನು ಕೂಡ ಪ್ರಬಲವಾಗಿ ರೂಪುಗೊಂಡಿಲ್ಲ. ಸುಪ್ರಿಂ ಕೋರ್ಟ್ ಪಾರ್ಲಿಮೆಂಟ್ಗೆ ಕಾನೂನು ರಚಿಸಲು ನಿರ್ದೇಶನ ನೀಡಿದೆಯಾದರೂ, ಅಲ್ಲಿಯ ತನಕ ಅಸಹಾಯಕರಾಗಿ ಇರಬೇಕಾದ ಅನಿವಾರ್ಯತೆ ಇದೆ ಎಂದು ಚಿಕ್ಕಮಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಹೇಳಿದರು. ಅವರು ವಿಭಿನ್ನ ಐಡಿಯಾಸ್ ಹಾಗೂ ಕಾರ್ಟೂನು ಕುಂದಾಪ್ರ ಆಶ್ರಯದಲ್ಲಿ, ಕುಂದಾಪುರ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಹಯೋಗದೊಂದಿಗೆ ಇಲ್ಲಿನ ಕಲಾಮಂದಿರದಲ್ಲಿ ಶುಕ್ರವಾರ ಜರುಗಿದ ಕಾರ್ಟೂನು ಹಬ್ಬದಲ್ಲಿ ಸೈಬರ್ ಖಬರ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಇಂದಿನ ಏಳು ನಿಮಿಷದಲ್ಲಿ ಆಗುತ್ತಿದ್ದ ಡಾಟಾ ವರ್ಗಾವಣೆ ನೂರು ವರ್ಷದ ಹಿಂದೆ ವರ್ಗಾವಣೆ ಆಗಲು ೩೫ ವರ್ಷ ಬೇಕಾಗುತ್ತಿತ್ತು. ಅಷ್ಟು ವೇಗದಲ್ಲಿ ಜಗತ್ತು ಸಾಗುತ್ತಿದೆ. ಒಂದು ಗಂಟೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಸ್ತು, ನಿಷ್ಠೆ, ಪ್ರಾಮಾಣೆಕತೆಯ ಹಾದಿಯಲ್ಲಿ ಸಾಗಿದಾಗ ಮಹತ್ತರವಾದ ಸಾಧನೆಯನ್ನು ಮಾಡಲು ಸಾಧ್ಯ ಎಂಬುವುದಕ್ಕೆ ವಿದ್ಯಾರಂಗ ಮಿತ್ರ ಮಂಡಳಿಯು ಸಾಕ್ಷಿಯಾಗಿದ್ದು, ಸಮಾಜದಲ್ಲಿ ಪರಿವರ್ತನೆ ತರುವ ಹಾಗೂ ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಪ್ರಗತಿ ಕಾಣುವ ಆಶಯದ ಹೆಜ್ಜೆಗಳಲ್ಲಿ ಗಮನಾರ್ಹ ಸಾಧನೆ ಮಾಡಿರುವುದು ಪ್ರಶಂಸನೀಯ ಎಂದು ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಿ.ಕಿಶೋರ್ ಕುಮಾರ್ ಕುಂದಾಪುರ ಹೇಳಿದರು. ಅವರು ಕುಂದಾಪುರ ಖಾರ್ವಿಕೇರಿಯ ಶ್ರೀ ಮಹಾಕಾಳಿ ದೇವಸ್ಥಾನದ ಸಭಾಂಗಣದಲ್ಲಿ ಕುಂದಾಪುರದ ವಿದ್ಯಾರಂಗ ಮಿತ್ರ ಮಂಡಳಿ (ರಿ.) ಸುವರ್ಣ ಮಹೋತ್ಸವ ಸಮಿತಿಯ ಪದಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮುಖ್ಯ ಅತಿಥಿ ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಕಾಸ್ ಹೆಗ್ಡೆ ಮಾತನಾಡಿ ಸಮಾಜದ ಒಟ್ಟಾರೆ ಬೆಳವಣಿಗೆಗೆ ಪ್ರತಿಯೊಬ್ಬರ ಕೊಡುಗೆ ಅವಶ್ಯಕ. ಸಮಾಜದ ಬೆಳಕಾಗಿ ಉತ್ತಮ ಕಾರ್ಯ ಮಾಡುತ್ತಿರುವ ಸಂಸ್ಥೆಗೆ ಸರಕಾರದಿಂದ ಸಿಗಬಹುದಾದ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಕುಂದಾಪುರ ಖಾರ್ವಿಕೇರಿಯ ಶ್ರೀ ಮಹಾಕಾಳಿ ದೇವಸ್ಥಾನದ ಅಧ್ಯಕ್ಷ ಜಯಾನಂದ…
