Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ದಲಿತರ ಅಭಿವೃದ್ಧಿಯ ಸ್ಲೋಗನ್ ಅಡಿಯಲ್ಲಿ ಸಾಕಷ್ಟು ಸಂಘಟನೆಗಳು ಇದ್ದರೂ ದಲಿತರೂ ಇನ್ನೂ ಮುಖ್ಯವಾಹಿನಿಗೆ ಯಾಕೆ ಬರಲಾಗುತ್ತಿಲ್ಲ ಎನ್ನುವುದನ್ನು ಪ್ರತಿಯೊಬ್ಬ ದಲಿತನೂ ಅರಿತುಕೊಳ್ಳಬೇಕಾಗಿದೆ. ನಾಯಕರ ಹಿಂದೆ ಹೋಗುವ ಸಂಪ್ರದಾಯವನ್ನು ಬಿಟ್ಟು, ಸಮಗ್ರ ಶಿಕ್ಷಣವನ್ನು ಮೈಗೂಡಿಸಿಕೊಂಡು ತನ್ನ ಸ್ವಂತ ಕಾಲ ಮೇಲೆ ನಿಲ್ಲುವ ಜೀವನ ಶಿಕ್ಷಣವನ್ನು ಪಡೆದುಕೊಂಡಾಗ ದಲಿತರು ತಮ್ಮನ್ನು ತಾವು ಮುಖ್ಯವಾಹಿನಿಯತ್ತ ಸಾಗಲು ಸಾಧ್ಯ ಎಂದು ಕಾಳಾವರ ದಲಿತ ಜಾಗೃತಿ ಸಮಿತಿ ಅಧ್ಯಕ್ಷ ಮೋಹನಚಂದ್ರ ಕಾಳಾವರ ಹೇಳಿದ್ದಾರೆ. ಕಾಳಾವರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ದಲಿತ ಜಾಗೃತ ಸಮಿತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಂಬೇಡ್ಕರ್ ಭಾವಚಿತ್ರಕ್ಕೆ ಮೇಣದ ಬತ್ತಿ ಬೆಳಗಿಸಿ ಮಾನಾಡಿದ ಉಪನ್ಯಾಸಕ ಪತ್ರಕರ್ತ ಸುಧಾಕರ ವಕ್ವಾಡಿ, ಅಂಬೇಡ್ಕರ್ ಹಾಕಿಕೊಟ್ಟ ಮಾರ್ಗದಲ್ಲಿ ನಾವು ಸಾಗುವುದಕ್ಕೆ ಮೊದಲು ಅಂಬೇಡ್ಕರವರನ್ನು ಅರ್ಥ ಮಾಡಿಕೊಳ್ಳಬೇಕು. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಈ ಮೂರು ಪ್ರಮುಖ ಅಂಶಗಳಾದರೆ ಅಂಬೇಡ್ಕರ್ ಅವರ ಪಂಚ ಸೂತ್ರಗಳನ್ನು ದಲಿತ ನಾಯಕರು ದಲಿತರಿಗೆ ತಿಳಿಸಿ ಹೇಳಬೇಕು. ಸಂವಿಧಾನಬದ್ಧವಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಪಡುವರಿ ಗ್ರಾಪಂನ 2017-18ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ ಕೋಟೆಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಮಾರ್ಗದರ್ಶಿ ಅಧಿಕಾರಿ ಪ್ರಕಾಶ್ ಉಪಸ್ಥಿತಿಯಲ್ಲಿ ನಡೆಯಿತು. ಗ್ರಾಪಂ ಅಧ್ಯಕ್ಷೆ ದೀಪಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಸದಾಶಿವ ಪಡುವರಿ ಗ್ರಾಮಸಭೆಯ ಮಹತ್ವ ಹಾಗೂ ಗ್ರಾಮದ ಅಭಿವೃದ್ಧಿಯ ಸಾಧನೆ ಮತ್ತು ಮುಂದಿನ ದಿನಗಳಲ್ಲಿ ಕೈಗೊಂಡಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಈಪಂ ಸದಸ್ಯ ಸುರೇಶ್ ಬಟ್ವಾಡಿ, ತಾಪಂ ಸದಸ್ಯೆ ಗಿರಿಜಾ ಖಾರ್ವಿ, ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು. ಈ ಸಂದರ್ಭ ಶೇ.25ರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ವಿಶೇಷ ಸವಲತ್ತು ವಿತರಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ:ದೇಶದ ಅತಿ ದೊಡ್ಡ ತರಬೇತಿ ಸೊಸೈಟಿ ಎಂಬ ಹೆಗ್ಗಳಿಕೆಯಿರುವ ಇಂಡಿಯನ್ ಸೊಸೈಟಿ ಆಫ್ ಟ್ರೈನಿಂಗ್ ಎಂಡ್ ಡೆವಲಪ್ಮೆಂಟ್ನ 53 ನೇ ಶಾಖೆಯು (ಮಂಗಳೂರು-ಉಡುಪಿ) ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉದ್ಘಾಟನೆಗೊಂಡಿತು . ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಐಎಸ್ಟಿಡಿ ಬೆಂಗಳೂರು ಶಾಖೆಯ ಅಧ್ಯಕ್ಷೆ ಡಾ.ಮೀರಾ ವೆಂಕಟ್ ಭಾಗವಹಿಸಿ, ಆಳ್ವಾಸ್ನಲ್ಲಿ ಐಎಸ್ಟಿಡಿ ಶಾಖೆ ಪ್ರಾರಂಭವಾಗುವುದರ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ಟಿ.ಸಿ ಸುಜಿತ್ ಮಾತನಾಡಿ , ವಿದ್ಯಾರ್ಥಿಗಳು ಮಾನವ ಸಂಬಂಧಗಳನ್ನು ಬಲಪಡಿಸುವತ್ತ ವಿಶೇಷ ಗಮನ ಹರಿಸಬೇಕೆಂದರು.ಐಎಸ್ಟಿಡಿ ಸಲಹೆಗಾರ ವರಹಸ್ವಾಮಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ ವಿವೇಕ್ ಆಳ್ವ ಶುಭ ಹಾರೈಸಿದರು. ಮಂಗಳೂರು – ಉಡುಪಿ ಶಾಖೆಯ ಅಧ್ಯಕ್ಷ, ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ಡೀನ್ ಪೆÇ್ರ. ಪಿ ರಾಮಕೃಷ್ಣ ಚಡಗ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗುರುದತ್ತ ಸೋಮಯಾಜಿ ಕಾರ್ಯಕ್ರಮ ನಿರೂಪಿಸಿದರು. ಧರ್ಮಾನಂದ್ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ವಟುಗಳಿಗೆ ಉಪನಯನ ದೀಕ್ಷೆ ಅತ್ಯಂತ ಪವಿತ್ರ ಕಾರ್ಯವಾಗಿದೆ.ಈ ದೀಕ್ಷೆ ಪಡೆದ ವಟುಗಳು ಜೀವನ ಧರ್ಮಗಳ ಮೌಲ್ಯವನ್ನು ಅರಿತು ನಡೆಯಬೇಕು.ಆಚಾರ-ವಿಚಾರಗಳನ್ನು ಸರಿಯಾಗಿ ಪಾಲಿಸಬೇಕು ಎಂದು ಕುಂದಾಪುರ ವ್ಯಾಸರಾಜ ಮಠದ ಪುರೋಹಿತ ವಿಜಯ ಪೇಜತ್ತಾಯ ಹೇಳಿದರು. ಅವರು ಭಾನುವಾರ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಆಶ್ರಯದಲ್ಲಿ ಕುಂದಾಪುರ ವ್ಯಾಸರಾಜ ಮಠದಲ್ಲಿ ನಡೆದ ಸಮಾಜದ ವಟುಗಳಿಗೆ ಸಾಮೂಹಿಕ ಉಪನಯನ,ಸಾಮೂಹಿಕ ಸತ್ಯನಾರಾಯಣ ಪೂಜೆ,ಶ್ರೀ ರಾಮ ನವಮಿ ಆಚರಣೆಯ ಸಂದರ್ಭದಲ್ಲಿ ಧಾರ್ಮಿಕ ಸಂದೇಶ ನೀಡಿ ಮಾತನಾಡಿದರು. ಶ್ರೀ ರಾಮ ಒಬ್ಬ ಆದರ್ಶ ಪುರುಷ.ಶ್ರೀ ರಾಮ ತನಗೆ ಬಂದ ಕಷ್ಟವನ್ನು ನಗುಮೊಗದಿಂದ ಸ್ವೀಕರಿಸಿ,ನಂಬಿದ ಮೌಲ್ಯಗಳನ್ನು ಕಾಯ್ದುಕೊಂಡು ಬಂದವ.ಶ್ರೀ ರಾಮ ನವಮಿ ಆಚರಣೆಯ ಮೂಲಕ ಅವನ ಆದರ್ಶವನ್ನು ಪಾಲಿಸಬೇಕು ಎಂದರು.ಸಮಾಜದ ೩೬ ವಟುಗಳಿಗೆ ಉಪನಯನ ಮಾಡಲಾಯಿತು.ಇದೇ ಸಂದರ್ಭದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆಯ ಪ್ರಸಾದವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಅಧ್ಯಕ್ಷ ಕೆ.ಕೊಗ್ಗ ಗಾಣಿಗ,ಪ್ರಧಾನ ಕಾರ್ಯದರ್ಶಿ ಕೆ.ಭಾಸ್ಕರ್,ಕೋಶಾಧಿಕಾರಿ ಪರಮೇಶ್ವರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಉಪ್ಪಿನಕುದ್ರು ಗೊಂಬೆ ಯಾಟ ಅಕಾಡೆಮಿಯ ಗೊಂಬೆಮನೆಯಲ್ಲಿ ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ನಿರಂತರ ಸರಣಿ ಕಾರ್ಯಕ್ರಮದಡಿ ಕುಮಾರಿ ಕೃತಿಕಾ ಶೆಣೈ  ಕುಂದಾಪುರ ಇವರ ಸುಗಮ ಸಂಗೀತ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಇತ್ತೀಚೆಗೆ ಜರಗಿತು. ಸಭಾ ಕಾರ್ಯಕ್ರಮದಲ್ಲಿ ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್, ತಲ್ಲೂರು ಸುರೇಶ್, ಸಂತೋಷ್ ಕೋಣಿ, ವಸಂತಿ ಆರ್. ಪಂಡಿತ್, ವಸುಮತಿ ಪುರಾಣಿಕ್, ರಜನಿ ಪ್ರಭುರವರು ಉಪಸ್ಥಿತರಿದ್ದರು. ಕೃತಿಕಾ ಶೆಣೈ  ಇವರನ್ನು ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು. ಉಪ್ಪಿನಕುದ್ರು ದಿನೇಶ್ ದೇವಾಡಿಗ ಹಾಗೂ ತಂಡದವರಿಂದ ಭಜನಾ ಕಾರ್ಯಕ್ರಮ ನೆರವೇರಿತು. ತದನಂತರ ಕೃತಿಕಾ ಶೆಣೈ ಯವರ ಸುಮಧುರ ಸಂಗೀತ ನೆರೆದ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿತು. ಶಿಕ್ಷಕ ನಾಗೇಶ್ ಶ್ಯಾನುಭಾಗ್  ಕಾರ್ಯಕ್ರಮ ನಿರೂಪಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಸೈಂಟ್ ಮೇರಿಸ್ ಸಿರಿಯನ್ ಕಾಲೇಜು ಬ್ರಹ್ಮಾವರ ಮತ್ತು ಯು ಚಾನೆಲ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಬ್ರಹ್ಮಾವರದಲ್ಲಿ ಜರಗಿದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬಸ್ರೂರು ಶ್ರೀ ಶಾರದಾ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಶ್ರುತಿ ಬಿ. ಗಂಗೊಳ್ಳಿ ಅತ್ಯುತ್ತಮ ನಿರೂಪಕಿಯಾಗಿ ಆಯ್ಕೆಯಾಗಿ ಪ್ರಥಮ ಪ್ರಶಸ್ತಿ ಪಡೆದುಕೊಂಡಿದ್ದಾಳೆ. ಈಕೆ ಗಂಗೊಳ್ಳಿಯ ಗೀತಾ ಮತ್ತು ಬಿ.ಗಣೇಶ ಖಾರ್ವಿ ದಂಪತಿ ಪುತ್ರಿ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ಬಾರ್ ಅಸೋಸೀಯೇಶನ್ ನೂತನ ಪದಾಧಿಕಾರಿಗಳ ಆಯ್ಕೆಯ ಚುನಾವಣೆಯಲ್ಲಿ ಎ.ನಿರಂಜನ ಹೆಗ್ಡೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶಾಜಿ ಅಬ್ರಾಹಂ, ಪ್ರಧಾನ ಕಾರ್ಯದರ್ಶಿಯಾಗಿ ಎಚ್.ಪ್ರಮೋದ್ ಹಂದೆ, ಜತೆ ಕಾರ್ಯದರ್ಶಿಯಾಗಿ ಪಿಂಕಿ ಕರ್ವೆಲ್ಲೊ ಹಾಗೂ ಕೋಶಾಧಿಕಾರಿಯಾಗಿ ರಾಘವೇಂದ್ರ ಉಪ್ಪುಂದ ಆಯ್ಕೆಯಾಗಿದ್ದಾರೆ. ಬಾರ್ ಅಸೋಸೀಯೇಶ್‌ನ್ ಮಾಜಿ ಅಧ್ಯಕ್ಷರಾದ ಜಿ.ಸಂತೋಷ್‌ಕುಮಾರ ಶೆಟ್ಟಿ ಚುನಾವಣಾಧಿಕಾರಿಯಾಗಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ಮುಖ್ಯ ರಸ್ತೆಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜನ್ನು ಮೇಲ್ದರ್ಜೆಗೇರಿಸಿ ಪ್ರಥಮ ದರ್ಜೆ ಕಾಲೇಜ್ ಆಗಿಸುವಂತೆ ಒತ್ತಾಯಿಸಿ ಕುಂದಾಪುರ ಹೋರಾಟ ಸಮಿತಿ ವತಿಯಿಂದ ಶಿಕ್ಷಣ ಸಚಿವರಿಗೆ ಇಂಟಕ್ ಅಧ್ಯಕ್ಷ ರಾಕೇಶ್ ಮಲ್ಲಿಯವರ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಮುಖಂಡರಾದ ದಿನೇಶ್ ಬೆಟ್ಟ, ಲಕ್ಷ್ಮಣ ಮೊಗವೀರ, ಚಂದ್ರ ಪೂಜಾರಿ, ಧರ್ಮೇಂದ್ರ, ವಿನಾಯಕ, ಅಕಿಲೇಶ್, ನಿಶಾಂತ್ ಮುಂತಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬೈಂದೂರಿನ ಹೋಲಿಕ್ರಾಸ್ ಚರ್ಚಿನಲ್ಲಿ ಗರಿಗಳ ಭಾನುವಾರ ವನ್ನು ಧರ್ಮಗುರು ವಂದನೀಯ ರೋನಾಲ್ಡ್ ಮೀರಾಂದ ರವರ ನೇತ್ರತ್ವದಲ್ಲಿ ಭಕ್ತಿ ಪೂರ್ವಕವಾಗಿ ಆಚರಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡಬಿದಿರೆ: “ಯಾವುದೇ ವಿಚಾರವನ್ನು ಚರ್ಚಿಸದೆ, ಸಂಶ್ಲೇಷಿಸದೆ ನಿರ್ಧಾರ ತೆಗೆದುಕೊಳ್ಳುವುದರಿಂದ ನಮ್ಮ ಪ್ರಜಾಪ್ರಭುತ್ವಕ್ಕೆ ಭವಿಷ್ಯತ್ತಿನಲ್ಲಿ ಅಪಾಯ ಎದುರಾಗಬಹುದು ” ಎಂದು ಚಿಕ್ಕಮಗಳೂರಿನ ಪೊಲೀಸ್ ಅಧೀಕ್ಷಕ ಅಣ್ಣಾಮಲೈ ಅಭಿಪ್ರಾಯಪಟ್ಟರು. ಅದಾನಿ ಸಂಸ್ಥೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಮ್ ವಿದ್ಯಾರ್ಥಿ ವೇದಿಕೆ ಹಾಗೂ ದಿ ಹಿಂದೂ ಗ್ರೂಪ್ ಆಫ್ ಮೀಡಿಯಾ ಸಂಯುಕ್ತ ಆಶ್ರಯದಲ್ಲಿ ದಿ ಹಿಂದೂ- ಅಂತರ್-ಕಾಲೇಜು ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆಯನ್ನು ಆಯೋಜಿಸಿತ್ತು. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಚರ್ಚೆ ಎಂಬುದು ಈ ಪ್ರಜಾಪ್ರಭುತ್ವ ಹಾಗೂ ಪ್ರತಿಯೊಬ್ಬರ ಜೀವನದ ಭಾಗವಾಗಿದೆ. ಯಾವುದೇ ವೃತ್ತಿಯಲ್ಲಿ ನಾವು ತೊಡಗಿಸಿಕೊಂಡಿದ್ದರೂ, ಒಂದು ವಿಚಾರದಲ್ಲಿ ನಿರ್ಧಾರ ಕೈಗೊಳ್ಳುವ ಮುನ್ನ ಮಾತುಕತೆಯ ಮೂಲಕ ಅದನ್ನು ಚರ್ಚಿಸಬೇಕು. ಎಲ್ಲಾ ಆಯಾಮಗಳಿಂದ ಅದನ್ನು ಪರಿಗಣಿಸಿ ತೀರ್ಮಾನಿಸುವುದು ಅಗತ್ಯ. ಚರ್ಚೆಗಳಿಂದ ಯಾವುದೇ ವಿಚಾರದಲ್ಲಿ ಉತ್ತಮ ಫಲಿತಾಂಶ ಹೊರತರುವಲ್ಲಿ ನಾವು ಸಫಲರಾಗುತ್ತೇವೆ” ಎಂದು ಹೇಳಿದರು. “ಚರ್ಚಾಕೌಶಲ್ಯ ಇದ್ದಲ್ಲಿ ನಮ್ಮ ವಿಚಾರ ವಿನಿಮಯದಲ್ಲಿ ಪೂರ್ಣತೆಯನ್ನು…

Read More