ಕುಂದಾಪ್ರ ಡಾಟ್ ಕಾಂ ಸುದ್ದಿ ಯುವಕರೇ ಬಹುಸಂಖ್ಯಾತರಿರುವ ನಮ್ಮ ದೇಶದಲ್ಲಿ ಮಾದಕದ್ರವ್ಯ ವ್ಯಸನ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಯುವಜನತೆಯೇ ಹೆಚ್ಚು ವ್ಯಸನಕ್ಕೆ ಬಲಿಯಾಗುತ್ತಿರುವುದು ಖೇದಕರ. ಕಣ್ಣಿಗೆ ಕಾಣದೆ ಆಂತರಿಕವಾಗಿ ನಡೆಯುತ್ತಿರುವ ಈ ದಾಳಿಯನ್ನು ತಡೆಗಟ್ಟುವುದು ಇಂದಿನ ಅಗತ್ಯ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರ್ಗಿ ಹೇಳಿದರು. ಅವರು ಉಡುಪಿ ಜಿಲ್ಲಾ ಪೊಲೀಸ್ ಕುಂದಾಪುರ ಉಪವಿಭಾಗ, ಕುಂದಾಪುರ ತಾಲೂಕು ಪತ್ರಕರ್ತರ ಸಂಘ ಹಾಗೂ ಹಲವಾರು ಸಂಘಸಂಸ್ಥೆಗಳ ಸಂಯುಕ್ತಾ ಶ್ರಯದಲ್ಲಿ ಕುಂದಾಪುರ ಬೋರ್ಡ್ ಹೈಸ್ಕೂಲ್ ಮೈದಾನದಲ್ಲಿ ಮಾದಕದ್ರವ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಸೆ ನೋ ಟುಡ್ರಗ್ಸ್ಅಭಿಯಾನದ ಅಂಗವಾಗಿ ಆಯೋಜಿಸಿದ್ದ ಸೈಕ್ಲಾಥಾನ್ನ ಸಮಾರೋಪ ಸಮಾರಂಭ ವನ್ನುದ್ದೇಶಿಸಿ ಮಾತನಾಡಿದರು. ಸುಮಾರು ೨೫ ಕಿ.ಮೀ ಅಧಿಕ ದೂರಗಳ ಕಾಲ ಸೈಕಲ್ಜಾಥಾ ನಡೆಯಿತು. ಕುಂದಾಪುರ ಉಪವಿಭಾಗದ ಸಹಾಯಕಆಯುಕ್ತ ಟಿ. ಭೂಬಾಲನ್, ತಹಸೀಲ್ದಾರ್ ತಿಪ್ಪೇಸ್ವಾಮಿ, ಡಿವೈಎಸ್ಪಿ ಬಿ. ಪಿ ದಿನೇಶ್ಕುಮಾರ್, ಸರ್ಕಲ್ಇನ್ಸ್ಪೆಕ್ಟರ್ ಮಂಜಪ್ಪ, ಪರಮೇಶ್ವರ ಗುನಗಾ, ಕುಂದಾಪುರ ಪಿಎಸ್ಐ ಹರೀಶ್ಆರ್, ಕಂಡ್ಲೂರು ಪಿಎಸ್ಐ ಶ್ರೀಧರ ನಾಯ್ಕ್, ಬೈಂದೂರು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಖಾಸಗಿ ಸಾರಿಗೆ ಕ್ಷೇತ್ರದಲ್ಲಿ ಹೆಸರಾಗಿರುವ ಶ್ರೀ ದುರ್ಗಾಂಬ ಸಾರಿಗೆ ಸಂಸ್ಥೆಯ ಪಾಲುದಾರರಲ್ಲಿ ಓರ್ವರಾದ ಸುನಿಲ್ ಚಾತ್ರ (42) ಅವರು ಶುಕ್ರವಾರ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಮಲಶಿಲೆ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದೇವಳದ ಆಡಳಿತ ಮೊಕ್ತೇಸರ ಸಚ್ಚಿದಾನಂದ ಚಾತ್ರ ಅವರ ದ್ವಿತೀಯ ಪುತ್ರರಾದ ಇವರು ಬಸ್ಸಿನ ವ್ಯವಹಾರ ನಿಮಿತ್ತ ತಮಿಳುನಾಡಿಗೆ ತೆರಳಿದ್ದು ಬೆಂಗಳೂರಿಗೆ ವಾಪಾಸಾಗುತ್ತಿರುವ ವೇಳೆ ದುರ್ಘಟನೆ ಸಂಭವಿಸಿದೆ. ಶುಕ್ರವಾರ ಅಪರಾಹ್ನ 3.30ರ ವೇಳೆಗೆ ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯ ಪಾರಾಮತಿ ವೆಲ್ಲೂರು ಕ್ರಾಸ್ ಬೈಪಾಸ್ ಬಳಿ ಇವರು ಪಯಣಿಸುತ್ತಿದ್ದ ಪಜೋರೊ ಕಾರಿಗೆ ಅಡ್ಡಬಂದ ಸೈಕಲ್ ಸವಾರರನ್ನು ತಪ್ಪಿಸುವ ಭರದಲ್ಲಿ ನಿಯಂತ್ರಣ ತಪ್ಪಿ ಮಗುಚಿಬಿದ್ದು ತಲೆಗೆ ಗಂಭೀರ ಏಟು ತಗುಲಿ ಸುನಿಲ್ ಸ್ಥಳದಲ್ಲೇ ಮೃತಪಟ್ಟರು. ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಸರಳ ಸಜ್ಜನಿಕೆ, ಮುಗ್ಧತೆಯ ಪ್ರತೀಕವಾಗಿದ್ದ ಇವರ ಅಕಾಲಿಕ ಅಗಲುವಿಕೆ ಕುಂದಾಪುರಕ್ಕೆ ಭಾರಿ ಆಘಾತ ನೀಡಿದೆ. 1993-94 ಭಂಡಾರ್ಕಾರ್ಸ್ ಕಾಲೇಜಿನ ಪಿಯುಸಿ ವ್ಯಾಟ್ಸ್ ಆ್ಯಪ್ ಗ್ರೂಪ್ ಮೂಲಕ ಸದ್ದಿಲ್ಲದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರಯಾಣಿಕರ ಕೊರತೆಯ ಕಾರಣ ರದ್ದಾಗಿರುವ ಕಾಸರಗೋಡು-ಕಣ್ಣೂರು-ಬೈಂದೂರು ಮೂಕಾಂಬಿಕಾ ರೋಡ್ ರೈಲನ್ನು ಸೂಕ್ತ ಮಾರ್ಪಾಡಿನೊಂದಿಗೆ ಪುನರಾರಂಭಿಸಬೇಕು ಎಂದು ರಾಷ್ಟ್ರೀಯ ರೈಲು ಬಳಕೆದಾರರ ಸಮಾಲೋಚನಾ ಸಮಿತಿಯ ಸದಸ್ಯ ಕೆ. ವೆಂಕಟೇಶ ಕಿಣಿ ಬೈಂದೂರು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಉತ್ತರ ಮಲಬಾರು ಮತ್ತು ಕರಾವಳಿ ಕರ್ನಾಟಕದ ದೀರ್ಘಕಾಲದ ಜನಾಗ್ರಹದ ಫಲವಾಗಿ ಈ ರೈಲನ್ನು ಆರಂಭಿಸಿದಾಗ ಅದು ಯಾತ್ರಾಸ್ಥಳವಾದ ಕೊಲ್ಲೂರಿಗೆ ಸುಲಭ ಸಂಪರ್ಕ ಸೌಲಭ್ಯ ಎಂದು ಈ ಪ್ರದೇಶದ ಜನರು ಸಂಭ್ರಮ ಪಟ್ಟಿದ್ದರು. ಆದರೆ ಅದು ತಾತ್ಕಾಲಿಕವಾಯಿತು. ಈ ರೈಲಿಗೆ ಪ್ರಯಾಣಿಕರ ಬೆಂಬಲ ದೊರೆಯದಿರುವುದಕ್ಕೆ ಎರಡು ಕಾರಣಗಳಿವೆ. ಅದು ಮಂಗಳೂರು ಸೆಂಟ್ರಲ್ ಸ್ಪರ್ಷಿಸದೆ ಮಂಗಳೂರು ಜಂಕ್ಷನ್ ಮೂಲಕ ಸಂಚರಿಸುವಂತೆ ಮಾಡಿರುವುದು ಮೊದಲ ಮತ್ತು ಪ್ರಮುಖ ಕಾರಣ. ಈ ನಿಟ್ಟಿನಲ್ಲಿ ಮತ್ತೆಮತ್ತೆ ಮಾಡಿಕೊಂಡ ಮನವಿಗಳು ವ್ಯರ್ಥವಾಗಿದ್ದುವು. ಈಗಲಾದರೂ ಆ ರೈಲನ್ನು ಸಾಂಪ್ರದಾಯಿಕ ರೈಲು ಬದಲಿಗೆ ಡೆಮು ಆಗಿ ಮೇಲ್ದರ್ಜೆಗೇರಿಸಿದರೆ ಅದು ಮಂಗಳೂರು ಸೆಂಟ್ರಲ್ ಮೂಲಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪರಿಸರದ ಹಸಿರು ಕ್ಷೀಣಿಸಿ ಜನರ ಬದುಕಿನ ಮೇಲೆ ಆಗುತ್ತಿರುವ ದುಷ್ಪರಿಣಾಮ ತಡೆಯಲು ಪರಿಸರ ಪ್ರೇಮಿಗಳು ನಡೆಸುತ್ತ ಬಂದಿರುವ ವಿವಿಧ ಅಭಿಯಾನಗಳ ಸಾಲಿಗೆ ಇದೀಗ ಬೀಜಗಣಪ ಸೇರ್ಪಡೆ ಆಗಲಿದೆ. ಸದ್ಯ ಮರವಂತೆ ಕೇಂದ್ರಿತವಾಗಿ ನಡೆಯುವ ಈ ಅಭಿಯಾನದ ಆರಂಭಕ್ಕೆ ಜನಪ್ರಿಯ ಹಬ್ಬವಾದ ಗಣೇಶ ಚತುರ್ಥಿಯ ಮುಹೂರ್ತ ನಿಗದಿಯಾಗಿದೆ. ಗಣೇಶ ವಿಗ್ರಹಗಳನ್ನು ನಿರ್ಮಿಸುವ ಅಲ್ಲಿನ ಕಲಾವಿದ ಸತೀಶ ಮಧ್ಯಸ್ಥ ಅದಕ್ಕಾಗಿ ಬೀಜಗಣಪತಿಯ ಮೂರ್ತಿಗಳನ್ನು ಸಿದ್ಧಪಡಿಸುವುದರಲ್ಲಿ ನಿರತರಾಗಿದ್ದಾರೆ. ಇಂತಹ ಕೆಲಸ ಆರಂಭವಾಗಿರುವ ಸುದ್ದಿ ತಿಳಿದು ಮಧ್ಯಸ್ಥರ ಮನೆಗೆ ಹೋದ ’ಪ್ರಜಾವಾಣಿ’ಗೆ ಅವರು ಬಿಡುವು ಮಾಡಿಕೊಂಡು ಅಭಿಯಾನದ ವಿವರ ನೀಡಿದರು. ಸಾಸ್ತಾನದ ವಿನಯಚಂದ್ರ ಈಗಾಗಲೆ ಹಲವೆಡೆ ಬೀಜದುಂಡೆಗಳ ಅಭಿಯಾನ ನಡೆಸಿ ಸುದ್ದಿ ಮಾಡಿದ್ದಾರೆ. ಒಂದೆರಡು ಕಡೆ ಸತೀಶ ಮಧ್ಯಸ್ಥ ಅವರ ಜತೆಯಾಗಿದ್ದರು. ಆಗ ಅವರಿಗೆ ಬೀಜಗಣಪ ಅಥವಾ ಜೀವಗಣಪ ಯೋಜನೆ ಹೊಳೆಯಿತು. ಅವರ ’ಮಿಶನ್ ಅರ್ಥ್’ ಸಂಸ್ಥೆಯ ಗೆಳೆಯರು ಈಗ ಅದರ ಅನುಷ್ಠಾನಕ್ಕೆ ಮುಂದಾಗಿದ್ದಾರೆ. ಬೀಜ ಗಣಪ ತಯಾರಿ ಹೇಗೆ?…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಳೆದ ಐದು ದಿನಗಳ ಹಿಂದೆ ಸ್ಕೂಟರ್ ಹಾಗೂ ಲಾರಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಘಟನೆ ಹೆಮ್ಮಾಡಿಯಲ್ಲಿ ವರದಿಯಾಗಿದೆ. ಹೆಮ್ಮಾಡಿ ನಿವಾಸಿ ಸದಾನಂದ ಪೈ ಹಾಗೂ ವಿಜಯಲಕ್ಷ್ಮೀ ಪೈಯವರ ಏಕೈಕ ಪುತ್ರ ವಾಸುದೇವ ಪೈ(25) ಸಾವನ್ನಪ್ಪಿದ ದುರ್ದೈವಿ. ಮಣಿಪಾಲದ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವಾಸುದೇವ ಪೈ ಶುಕ್ರವಾರ ಬೆಳಗ್ಗೆ ಮನೆಯಿಂದ ಕೆಲಸಕ್ಕೆ ತೆರಳುತ್ತಿರುವಾಗ ಹೆಮ್ಮಾಡಿ ಸಮೀಪದ ಜಾಲಾಡಿಯಲ್ಲಿ ಲಾರಿ ಢಿಕ್ಕಿಯಾಗಿತ್ತು. ಅಪಘಾತದ ತೀವ್ರತೆಗೆ ವಾಸುದೇವ್ ಅವರ ಕಾಲಿಗೆ ತೀವ್ರವಾದ ಗಾಯಗಳಾಗಿದ್ದರಿಂದ ಅವರನ್ನು ಕುಂದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿತ್ತು. ಕುಂದಾಪ್ರ ಡಾಟ್ ಕಾಂ ಸುದ್ದಿ. ಐದು ದಿನಗಳ ಕಾಲ ಸಾವು-ಬದುಕಿನ ಹೋರಾಟ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಿದ ಬಳಿಕ ಕೋಮಾಕ್ಕೆ ಜಾರಿದ್ದರು. ಐದು ದಿನಗಳ ಕಾಲ ಸಾವು-ಬದುಕಿನ ಹೋರಾಟ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾದಕ ವ್ಯಸನಕ್ಕೆ ಒಳಗಾಗಿರುವ ವ್ಯಕ್ತಿಗಳು ಸಮಾಜಕ್ಕೆ ಮಾರಕ. ಹಾಗಾಗಿ ಮಾದಕದ್ರವ್ಯದ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು ಮತ್ತು ಮಾದಕ ದ್ರವ್ಯಗಳ ಬಳಕೆಯ ಬಗ್ಗೆ ಪೊಲೀಸರ ಗಮನಕ್ಕೆ ತಂದು ಅದರ ನಿರ್ನಾಮಕ್ಕೆ ಸಹಕರಿಸುವುದು ಅಗತ್ಯ ಎಂದು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪ್ರಕಾಶ್ ಖಂಡೇರಿ ಹೇಳಿದರು. ಅವರು ಉಡುಪಿ ಜಿಲ್ಲಾ ಪೊಲೀಸ್, ಕುಂದಾಪುರ ಪೊಲೀಸ್ ಠಾಣೆ ಹಾಗೂ ತಾಲೂಕು ಕಾರ್ಯನಿತರ ಪತ್ರಕರ್ತರ ಸಂಘದ ಅಶ್ರಯದಲ್ಲಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಮಾದಕ ವ್ಯಸನ ವಿರೋಧಿ ಮಾಸಾಚರಣೆ ಅಂಗವಾಗಿ ಹಮ್ಮಿಕೊಂಡ ’ವಾಕಾಥಾನ್’ಗೆ ಚಾಲನೆ ನೀಡಿ ಮಾತನಾಡಿದರು. ಕುಂದಾಪುರ ಡಿವೈಎಸ್ಪಿ ಬಿ.ಪಿ ದಿನೇಶ್ ಕುಮಾರ್, ಲಯನ್ಸ್ ಕ್ಲಬ್ನ ಡಾ. ಶಿವಕುಮಾರ್, ನವಿನ್ಕುಮಾರ್ ಶೆಟ್ಟಿ, ಕುಂದಾಪುರ ಎಸೈ ಹರೀಶ್ ಆರ್, ಕಂಡ್ಲೂರು ಎಸೈ ಶ್ರೀಧರ್, ಬೈಂದೂರು ಎಸೈ ತಿಮ್ಮೇಶ್, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು, ತಾಲೂಕು ಅಧ್ಯಕ್ಷ ಶಶಿಧರ ಹೆಮ್ಮಾಡಿ, ಕಾರ್ಯದರ್ಶಿ ನಾಗರಾಜ ರಾಯಪ್ಪನಮಠ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೆಸಿಐ ಶಿರೂರು ಇದರ ಸಾತ್ ಸುರ್ ಪರಿಸರ ಸ್ನೇಹಿ ಜೆಸಿಐ ಸಪ್ತಾಹದ ಎರಡನೇ ದಿನದ ಕಾರ್ಯಕ್ರಮದ ಅಂಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆಸರಕೊಡಿಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸಾರಂಗ ಯೂಸೂಫ್ ಇವರನ್ನು ಗುರುತಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜೆಸಿಐ ಶಿರೂರು ಇದರ ಅಧ್ಯಕ್ಷ ಪಾಂಡುರಂಗ ಅಳ್ವೆಗದ್ದೆಯವರು ಮಾತನಾಡಿ, ಸಾರಂಗ ಯೂಸೂಫ್ ರವರು ಆದರ್ಶ ಶಿಕ್ಷಕರಾಗಿ ಜನಾನುರಾಗಿಯಾಗಿ ಬಹುಮುಖ ಪ್ರತಿಭಾ ಸಂಪನ್ನರಾಗಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿದವರು, ಇಂತಹ ಸರಳ ವ್ಯಕ್ತಿತ್ವದ ಆದರ್ಶ ಶಿಕ್ಷಕರನ್ನು ಗುರುತಿಸುವುದರಿಂದ ಅವರ ಮಾರ್ಗದರ್ಶನ ಎಲ್ಲರಿಗೂ ದೊರೆಯುವಂತೆ ಆಗುತ್ತದೆ ಎಂದು ನುಡಿದರು. ಕಾರ್ಯಕ್ರಮದಲ್ಲಿ ಭಾರತೀಯ ಭೂ ಸೈನ್ಯದ ಸೈನಿಕ ಉಮೇಶ ಶೆಟ್ಟಿ ಮುಖ್ಯ ಅಥಿತಿಗಳಾಗಿ ಉಪಸ್ಥಿತರಿದ್ದರು. ಮೋಹನ ರೇವಣ್ಕರ್, ಪ್ರಸಾದ ಪ್ರಭು , ಹರೀಶ ಶೇಟ್, ಗಿರೀಶ ಮೇಸ್ತ, ಪ್ರಕಾಶ ಮಾಕೋಡಿ, ನಾಗೇಶ ಕೆ, ನಾಗೇಂದ್ರ ಪ್ರಭು, ವಿನೋದ ಮೇಸ್ತ, ರಮೇಶ ನಾಯ್ಕ, ಹಾಲೇಶ ಇತರರು ಉಪಸ್ಥಿತರಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೆಸಿಐ ಶಿರೂರು ವತಿಯಿಂದ ವಿಶ್ವದೀಪ ಕಲಾ ಸಂಸ್ಥೆಯ ಸಭಾಭವನದಲ್ಲಿ ಜೆಸಿಐ ಶಿರೂರು ಸಪ್ತ ಸ್ವರಗಳು ಪರಿಸರ ಸ್ನೇಹಿ ಜೆಸಿಐ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮೊದಲ ಕಾರ್ಯಕ್ರಮವಾಗಿ ಯೋಗ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡು, ದೀಪ ಬೆಳಗುವುದರ ಮೂಲಕ ವಿಶ್ವದೀಪ ಕಲಾ ಸಂಸ್ಥೆಯ ಮುಖ್ಯಸ್ಥರಾದ ಹನುಮಂತ ನಾಯ್ಕ ಚಾಲನೆ ನೀಡಿದರು. ಶಿರೂರು ಜೆಸಿಐ ಅಧ್ಯಕ್ಷರಾದ ಪಾಂಡುರಂಗ ಅಳ್ವೆಗದ್ದೆ ಅಧ್ಯಕ್ಷತೆ ವಹಿಸಿ ಯೋಗ ಶಿಬಿರದ ಮಹತ್ವ, ದಿನನಿತ್ಯದ ಜೀವನದಲ್ಲಿ ಯೋಗ, ಪ್ರಾಣಾಯಾಮ, ಧ್ಯಾನ ಇದರ ಮಹತ್ವದ ಕುರಿತು ಸವಿವರವಾದ ಮಾಹಿತಿ ನೀಡಿ ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದುಕೊಂಡು ಉತ್ತಮ ಆರೋಗ್ಯವಂತರಾಗಿ ಎಂದು ಕರೆ ನೀಡಿದರು. ಸುರೇಶ ಮಾಕೋಡಿ ವಿನೋದ ಮೇಸ್ತ, ನಾಗೇಂದ್ರ ಪ್ರಭು ವೇದಿಕೆಯಲ್ಲಿ ಮುಖ್ಯ ಅಥಿತಿಯಾಗಿ ಉಪಸ್ಥಿತರಿದ್ದರು. ಕೃಷ್ಣ ಪೂಜಾರಿ ಸ್ವಾಗತಿಸಿದರು. ಹರೀಶ ಗವಾಳಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನೇತೃತ್ವದಲ್ಲಿ ತೈಲ ಬೆಲೆ ಏರಿಕೆ ವಿರೋಧಿಸಿ ಪ್ರತಿಪಕ್ಷಗಳು ಕರೆ ನೀಡಿದ್ದ ಭಾರತ್ ಬಂದ್ಗೆ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಕುಂದಾಪುರ ಪೇಟೆ, ಬೈಂದೂರು ಪೇಟೆ ಸೇರಿದಂತೆ ಪ್ರಮುಖ ಜನನಿಬಿಡ ಸ್ಥಳಗಳಲ್ಲಿ ಬಂದ್ ಯಶಸ್ವಿಯಾಗಿದ್ದರೇ ಗ್ರಾಮೀಣ ಭಾಗಗಳಲ್ಲಿ ಜನಜೀವನ ಎಂದಿನಂತೆಯೇ ಸಾಗಿತ್ತು. ಖಾಸಗಿ ಹಾಗೂ ಸರಕಾರಿ ಬಸ್ಗಳು ರಸ್ತೆಗಿಳಿಯಲಿಲ್ಲ. ಕಾಂಗ್ರೆಸ್ ಹಾಗೂ ಕಮ್ಯುನಿಸ್ಟ್ ಸಂಘಟನೆಗಳಿಗೆ ಸೇರಿದ್ದ ರಿಕ್ಷಾ ಹಾಗೂ ಇತರ ಬಾಡಿಗೆ ವಾಹನಗಳು ಬಂದ್ ಬೆಂಬಲಿಸಿ ರಸ್ತೆಗೆ ಇಳಿದಿರಲಿಲ್ಲ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಲಾರಿ, ಟ್ರಕ್ ಹಾಗೂ ಪ್ರವಾಸಿ ವಾಹನಗಳ ಓಡಾಟ ಎಂದಿನಂತೆ ಇರುವುದು ಕಂಡುಬಂತು. ಕುಂದಾಪುರದಲ್ಲಿ ಭಾಗಶಃ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದು ಕಂಡುಬಂತು. ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ವಿದ್ಯಾರ್ಥಿಗಳ ಓಡಾಟವಿರಲಿಲ್ಲ. ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು ತೆರೆದಿದ್ದರು ಜನಸಂಚಾರ ವಿರಳವಾಗಿತ್ತು. ಕುಂದಾಪುರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ಮೆರವಣಿಗೆ ನಡೆಸಿ ಅಂಗಡಿ, ಮುಗ್ಗಟ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪೆಟ್ರೋಲ್. ಡೀಸಿಲ್, ಅನಿಲ ಸೇರಿದಂತೆ ಜೀವನಾವಶ್ಯಕ ಸಾಮಗ್ರಿಗಳ ಬೆಲೆ ಏರಿಕೆ ವಿರೋಧಿಸಿ ನೀಡಲಾದ ಭಾರತ್ ಬಂದ್ ಕರೆ ಅಂಗವಾಗಿ ಬೈಂದೂರಿನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಸೋಮವಾರ ಕೆಲಕಾಲ ಹೆದ್ದಾರಿ ತಡೆ ನಡೆಸಿದರು. ಹೆದ್ದಾರಿ ಮೇಲೆ ಕುಳಿತು ಕೇಂದ್ರ ಸರ್ಕಾರ ಮತ್ತು ಪ್ರಧಾನ ಮಂತ್ರಿ ಮೋದಿ ವಿರುದ್ಧ ಘೋಷಣೆ ಕೂಗಿದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನ್ಕುಮಾರ್, ಧುರೀಣರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ರಿಯಾಜ್ ಅಹಮದ್, ಎಸ್. ರಾಜು ಪೂಜಾರಿ, ಜೆಡಿಎಸ್ ನಾಯಕ ರವಿ ಶೆಟ್ಟಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಗಗನಕ್ಕೇರಿರುವುದರಿಂದ, ಅದರ ಫಲವಾಗಿ ಅನ್ಯ ಜೀವನಾವಶ್ಯಕ ವಸ್ತುಗಳ ಬೆಲೆಯೂ ಹೆಚ್ಚುತ್ತಿರುವುದರಿಂದ ಜನ ಸಾಮಾನ್ಯದ ಬದುಕು ದುಸ್ತರವಾಗಿದೆ. ದೇಶದ ಅಭಿವೃದ್ಧಿಯೊಂದಿಗೆ ಬೆಲೆ ಹತೋಟಿಯ ಭರವಸೆ ನೀಡಿ ಅಧಿಕಾರಕ್ಕೇರಿದ ಬಿಜೆಪಿ ನೇತೃತ್ವದ ಮೋದಿ ಸರ್ಕಾರ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಯಾವುದನ್ನೂ ಈಡೇರಿಸಿಲ್ಲ. ರೂಪಾಯಿ ಬೆಲೆ…
