Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಪ್ರವಾಸಕ್ಕೆಂದು ಆಗಮಿಸಿದ್ದ ಹಾವೇರಿ ಮೂಲದ ವಿದ್ಯಾರ್ಥಿಯೋರ್ವ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ಶಿರೂರು ಸಂಕದಗುಂಡಿ ಹೊಳೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಹಾವೇರಿ ಸಮೀಪದ ಕೃಷಿ ನಗರದ ನಿವಾಸಿ ಆಯುಷ್ (16) ಎಂದು ಗುರುತಿಸಲಾಗಿದೆ. ಹಾವೇರಿ ಸಮೀಪದ ಕೃಷಿ ನಗರದ ಒಟ್ಟು 7 ಜನ ಮುರುಡೇಶ್ವರ, ಕನ್ಯಾಕುಮಾರಿ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ಶಿರೂರು ಸಂಕದಗುಂಡಿ ಹೊಳೆ ಬಳಿ ವಿಶ್ರಾಂತಿಗೆ ತಮ್ಮ ವಾಹನ ನಿಲ್ಲಿಸಿದ್ದರು. ಈ ಸಂದರ್ಭ ಮನೆಯವರೆಲ್ಲ ಊಟದ ತಯಾರಿಯಲ್ಲಿರುವ ವೇಳೆ ಇಬ್ಬರು ಮಕ್ಕಳು ಪಕ್ಕದಲ್ಲಿರುವ ಹೊಳೆಗೆ ಸ್ನಾನಕ್ಕೆ ತೆರಳಿದ್ದರು. ಶಿರೂರು ಸಂಕದಗುಂಡಿ ಹೊಳೆಯ ಆಳ ಇರುವ ಜಾಗದಲ್ಲಿ ಈಜಲು ತೆರಳಿದ ಕಾರಣ ನೀರಿನ ಆಳ ತಿಳಿಯದೆ ಬಾಲಕ ಮುಳುಗಿದ್ದಾನೆ. ತತ್‌ಕ್ಷಣ ಇನ್ನೊಬ್ಬ ಮನೆಯವರಿಗೆ ವಿಷಯ ತಿಳಿಸಿದ್ದು, ಬದುಕಿಸುವ ಪ್ರಯತ್ನ ಮಾಡಿದರು ಕೂಡ ಫಲ ನೀಡಿಲ್ಲ. ಅಜ್ಜನ ಜತೆ ಪ್ರವಾಸಕ್ಕೆ ಹೊರಟಿದ್ದಬಾಲಕನ ನತಂದೆ, ತಾಯಿ ಗುಜರಾತ್‌ನಲ್ಲಿ ಸಣ್ಣವ್ಯವಹಾರ ನಡೆಸುತ್ತಿದ್ದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಅಸ್ಸಾಂ ಮೂಲದ ಕಾರ್ಮಿಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಸಂಭವಿಸಿದೆ. ಭಕ್ಸಾ ಜಿಲ್ಲೆಯ ತಾಮ್ಮಲ್ಪು‌ರ್ ಭಗಲಾಮರಿ ನಿವಾಸಿ ಅಲೊಂಗಬ‌ರ್ ಬೊರೊ ಮೃತಪಟ್ಟ ವ್ಯಕ್ತಿ. ಅವರು ಸೋಮವಾರ ಕೆಲಸಕ್ಕೆ ಹೋಗದೆ ವಿಶ್ರಾಂತಿ ಪಡೆಯುತ್ತಿದ್ದರು. ಬಳಿಕ ಅವರು ಹೊರಗಡೆ ತೆರಳಿದ್ದು, ಬಹಳ ಹೊತ್ತಾದರೂ ವಾಪಸ್ ಬಂದಿರಲಿಲ್ಲ. ಬಳಿಕ ಅವರನ್ನು ಹುಡುಕಲು ತೆರಳಿದಾಗ, ಕಾರ್ಖಾನೆಯ ಸಮೀಪ ಹಾಡಿಯೊಂದರಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈತ ಮೂರು ವರ್ಷಗಳ ಹಿಂದೆ ಪತ್ನಿಯನ್ನು ಕಳೆದುಕೊಂಡಿದ್ದು, ಒಬ್ಬ ಮಗನ ಜವಾಬ್ದಾರಿ ಅವರ ಮೇಲಿತ್ತು. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರಸ್ತೆ ಬದಿಯಲ್ಲಿ ನಿಂತಿರುವ ಹುಡುಗಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿರುವ ಘಟನೆ ಕಿರಿಮಂಜೇಶ್ವರ ರಾ.ಹೆದ್ದಾರಿ 66ರಲ್ಲಿ ಸಂಭವಿಸಿದೆ. ಸಮೀಕ್ಷಾ (15) ಗಾಯಗೊಂಡ ಹುಡುಗಿ. ಕಿರಿಮಂಜೇಶ್ವರ ಗ್ರಾಮದ ನೂರಿ ಐಸ್ ಪ್ಯಾಕ್ಟರಿ ಎದುರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದ ಕಾರು ಮತ್ತೊಂದು ವಾಹನವನ್ನು ಓವ‌ರ್ ಟೇಕ್ ಮಾಡುವಾಗ ರಸ್ತೆಯ ಬದಿಯಲ್ಲಿ ನಿಂತಿರುವ ಸಮೀಕ್ಷಾಗೆ ಢಿಕ್ಕಿ ಹೊಡೆದ ಪರಿಣಾಮ ತೀವ್ರ ಸ್ವರೂಪದ ಗಾಯಗಾಳಾಗಿದ್ದು ಸ್ಥಳೀಯರು, ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಶಿಕ್ಷಕ, ಪೋಷಕರ ಮಹಾಸಭೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಬೈಂದೂರು ಶಾಸಕ ಗುರುರಾಜ ಗಂಟೆಹೊಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಳೆದ ಬಾರಿ ಬೈಂದೂರು ಕ್ಷೇತ್ರದಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆಯಾಗಿರುವ ಸಂತೃಪ್ತಿಯಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಮತ್ತು ಪೋಷಕರ ಪಾತ್ರ ಬಹುಮುಖ್ಯವಾಗಿದೆ.ಬದಲಾಗುತ್ತಿರುವ ವ್ಯವಸ್ಥೆಯಲ್ಲಿ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗಿದೆ.ಶೈಕ್ಷಣಿಕವಾಗಿ ಅವಶ್ಯವಿರುವ ಪ್ರೋತ್ಸಾಹ ನೀಡಬೇಕು.ಎಲ್ಲರ ಸಹಕಾರದಲ್ಲಿ ಪ್ರಸಕ್ತ ಸಾಲಿನಲ್ಲಿ ಉತ್ತಮ ಶೈಕ್ಷಣಿಕ ಸಾಧನೆ ನಮ್ಮೆಲ್ಲರ ಜವಬ್ದಾರಿಯಾಗಿದೆ ಎಂದರು. ಎಸ್.ಡಿ.ಎಮ್.ಸಿ ಅಧ್ಯಕ್ಷ ಉಮೇಶ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೇಶಕ ಸದಸ್ಯರಾದ ಸದಾಶಿವ ಡಿ. ಪಡುವರಿ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ,ಕಾಲೇಜಿನ ಪ್ರಾಂಶುಪಾಲರು ಹಾಗೂ ಎಸ್.ಡಿ.ಎಮ್.ಸಿ ಸರ್ವ ಸದಸ್ಯರು ಹಾಜರಿದ್ದರು. ಈ ಸಂದರ್ಭದಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಹಾಗೂ ವರ್ಗಾವಣೆಗೊಂಡ ಶಾಲೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪದವಿಯ ನಂತರ ಉನ್ನತ ಶಿಕ್ಷಣ ಉದ್ಯೋಗಗಳ ಜೊತೆಗೆ ಉದ್ಯಮಶೀಲತೆಯನ್ನು ಬೆಳಸಿಕೊಳ್ಳುವ ಮೂಲಕ ಅವಕಾಶವನ್ನು ಸೃಷ್ಟಿಸಿಕೊಳ್ಳಿ ಆಮುಖೇನ ಸಮಾಜಕ್ಕೆ ಕೊಡುಗೆಯನ್ನು ನೀಡಿ ಎಂದು ಶ್ರೀ ಶಾರದಾ ಕಾಲೇಜು ಬಸ್ರೂರಿನ ನಿವೃತ್ತ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಮುಂದೆಯೂ ಸಂಸ್ಥೆಯೊಡನೆ ಉತ್ತಮ ಸಂಬಂಧವನ್ನು ಬೆಳೆಸಿಕೊಳ್ಳುವ ಮೂಲಕ ಮಾರ್ಗದರ್ಶನವನ್ನು ಪಡೆದುಕೊಳ್ಳಿ ಎಂದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಕಾಲೇಜಿನ ಆಡಳಿತ ನಿಕಾಯಕ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಸ್ವಾಗತಿಸಿ, ಪ್ರಸ್ತಾಪಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ವಿ. ಭಟ್, ವ್ಯವಹಾರ ಆಡಳಿತ ವಿಭಾಗದ ಸಹ ಪ್ರಾಧ್ಯಾಪಕ ಪ್ರವೀಣ್ ಮೊಗವೀರ ಗಂಗೊಳ್ಳಿ, ಗಣಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಸೇವಾಸಂಗಮ ಶಿಶುಮಂದಿರ ಇದರ ಪ್ರಾರಂಭೋತ್ಸವ ಸೋಮವಾರ ಹಿಂದೂ ಸಂಪ್ರದಾಯದಂತೆ ಪುಟಾಣಿಗಳನ್ನು ಸ್ವಾಗತಿಸಲಾಯಿತು. ಶಿಶುಮಂದಿರಕ್ಕೆ ಪುಟಾಣಿಗಳನ್ನುಆಗಮಿಸುತ್ತಿದ್ದಂತೆ ಮಾತಾಜಿ ಸಹನಾ ಹಾಗೂ ಶಿಶುಮಂದಿರದ ಸ್ಥಾನೀಯ ಸಮಿತಿ ಪದಾಧಿಕಾರಿಗಳು ದೀಪ ಬೆಳಗಿಸಿ ಆರತಿ ಬೆಳಗಿದರು. ಪೋಷಕರು ಪುಟಾಣಿಗಳಿಗೆ ಪುಷ್ಭ ಸಿಂಚನಗೈದರು. ನಂತರ ಭಾರತಮಾತೆಗೆ ದೀಪ ಬೆಳಗಿಸಿ ಪುಟಾಣಿಗಳು ನಮಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಶಿಶುಮಂದಿರದ ಅಧ್ಯಕ್ಷ ಶ್ರೀಕಾಂತ್ ಶೆಣೈ ಭಾರತೀಯ ಪರಂಪರೆಯ ಶಿಕ್ಷಣ ವ್ಯವಸ್ಥೆ ಸೇವಾಸಂಗಮ ಶಿಶುಮಂದಿರದಲ್ಲಿ ಸಂಪ್ರದಾಯಬದ್ಧವಾಗಿ ನೀಡಲಾಗುತ್ತಿದೆ.ಮಕ್ಕಳ ಪ್ರಾರಂಭಿಕ ದಿನಗಳ ಶಿಕ್ಷಣ ಸಂಸ್ಕಾರ ನೀಡುವಲ್ಲಿ ಆದ್ಯತೆ ನೀಡಬೇಕು ಈ ನಿಟ್ಟಿನಲ್ಲಿ ಪೋಷಕರಿಗೆ ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಸಮಿತಿಯ ಹಿರಿಯ ಸದಸ್ಯೆ ವಸುಧಾ ಪ್ರಭು, ಪ್ರಮೀಳಾ, ಅಮೃತ್ ಜೋಗಿ, ರವೀಂದ್ರ ಕೋಟ, ರೇಣುಕಾ ಮಯ್ಯ,ಮಾತಾಜಿ ಸಹನಾ, ಸಹಾಯಕಿ ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಮಿತಿ ಕಾರ್ಯದರ್ಶಿ ಕಲಾವತಿ ಅಶೋಕ್ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕಳೆದ 39 ವರ್ಷಗಳಿಂದ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಪುಟಾಣಿಗಳಲ್ಲಿ ಭಾರತೀಯ ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರಗಳನ್ನು ಬೆಳೆಸುವ ಉದ್ದೇಶದಿಂದ ಮಕ್ಕಳ ಬೆಳವಣಿಗೆಗೆ ಪೂರಕವಾದ ಶಿಕ್ಷಣವನ್ನು ನೀಡುತ್ತಿದೆ. ಮಕ್ಕಳ ಶಿಕ್ಷಣಕ್ಕೆ ಯಾವುದೇ ರೀತಿಯ ಚ್ಯುತಿ ಬಾರದಂತೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಶು ಮಂದಿರ ಶ್ರಮಿಸಲಿದೆ ಎಂದು ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಸಂಚಾಲಕ ಡಾ. ಕಾಶೀನಾಥ ಪೈ ಹೇಳಿದರು. ಅವರು ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ನಗರ ಜಯವಂತ ನಾಯಕ್ ಸಭಾಭವನದಲ್ಲಿ ಸೋಮವಾರ ಜರಗಿದ 2026-27ನೇ ಸಾಲಿನ ಶಿಶು ಮಂದಿರ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶಿಶು ಮಂದಿರದ ಅಧ್ಯಕ್ಷ ಬಿ. ರಾಘವೇಂದ್ರ ಪೈ ಅಧ್ಯಕ್ಷತೆ ವಹಿಸಿದ್ದರು. ಶಿಶು ಮಂದಿರದಕ್ಕೆ ಆಗಮಿಸಿದ ಪುಟಾಣಿಗಳ ಕಾಲುಗಳನ್ನು ತೊಳೆದು, ಕುಂಕುಮದ ತಿಲಕವನ್ನಿಟ್ಟು, ಆರತಿ ಬೆಳಗಿ ಸಂಪ್ರದಾಯಬದ್ಧವಾಗಿ ಅದ್ದೂರಿಯಾಗಿ ಸ್ವಾಗತಿಸಿಕೊಳ್ಳಲಾಯಿತು. ಶಿಶು ಮಂದಿರದ ಸದಸ್ಯರಾದ ಶ್ರೀನಿವಾಸ ಎಂ., ಉಷಾ ಪಿ.ಮಡಿವಾಳ, ಭಾಸ್ಕರ ಎಚ್.ಜಿ.,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ  ಅತಿ ಕ್ಲಿಷ್ಟಕರವೆನಿಸಿದ ಪರೀಕ್ಷೆಗಳಲ್ಲೊಂದಾದ ಜೆಇಇ ಅಡ್ವಾನ್ಸ್ – 2026ನೇ ಸಾಲಿನ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ನಾಗದೇವ್ ಎಂ.ಜಿ. ರಾಷ್ಟ್ರಮಟ್ಟದಲ್ಲಿ 196 ನೇ ರ‍್ಯಾಂಕ್‌ ಪಡೆದುಕೊಂಡಿದ್ದಾರೆ.  ಫಲಿತಾಂಶದ ವಿವರ:ನಾಗದೇವ್ ಎಂ.ಜಿ. 196, ಖುಷಿ ರಾಜ ವಿ. 648, ದಿಶಾಂತ್ ಎಂ.1207, ರಶ್ಮಿ ಆರ್. ಎಚ್. 1754, ಧನುಷ್ ಎಚ್. ಎ. 2193, ನಯನ ಡಿ. ಗೊಂಡ 2638, ಸೃಜನಾ ಎಸ್. 3618, ಶಶಾಂಕ್ ಡಿ. ಎಸ್. 3800, ಹೃತಿಕ್ ಮಹೇಶ್ 3803, ತೇಜಸ್ ಆರ್. ಬಿ. 5124, ಸುಜನ್ ಕೆ. ಎಚ್. 5377, ವಿಶ್ವಾಸ್ ಕೆ. ಎನ್. 5549, ಧ್ರುವ ವಿ. ಬಿ. 6057, ನಮಿತ್ ಕೆ. ಹೆಗ್ಡೆ 8164, ಪ್ರಥಮ್ ಟಿ. 10982,  ಧ್ರುಶ್ 11103, ನೀನಾದ್ ರಾಜೇಶ್ ನಾಯ್ಕ್ 12563, ಸಂವಿತ್ ಎ. ಗೋಕರ್ಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಕಾಮರ್ಸ್, ಮ್ಯಾನೇಜ್‌ಮೆಂಟ್ ಮತ್ತು ಐಟಿ ಅಸೋಸಿಯೇಷನ್ ವತಿಯಿಂದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಭೇಟಿಯನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳನ್ನು ಕುಂದಾಪುರದ ಕೋಸ್ಟಲ್ ಇಂಡಸ್ಟ್ರೀಸ್‌ ಪ್ರೈವೇಟ್ ಲಿಮಿಟೆಡ್ (ಕೋಸ್ಟಲ್ ಕ್ಯಾಶ್ಯೂಸ್) ಸಂಸ್ಥೆಗೆ ಭೇಟಿ ನೀಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕರಾದ ವಿನೋದ್ ಅವರು ಗೋಡಂಬಿ ಬೀಜಗಳ ಸಂಸ್ಕರಣೆಯ ಸಂಪೂರ್ಣ ಪ್ರಕ್ರಿಯೆಯ ಕುರಿತು ವಿದ್ಯಾರ್ಥಿಗಳಿಗೆ ವಿವರವಾದ ಮಾಹಿತಿ ನೀಡಿದರು. ಗೋಡಂಬಿ ಬೀಜಗಳನ್ನು ಎಲ್ಲಿಂದ ಸಂಗ್ರಹಿಸಲಾಗುತ್ತದೆ, ಅವುಗಳನ್ನು ವಿವಿಧ ಹಂತಗಳ ಸಂಸ್ಕರಣೆಗೆ ಹೇಗೆ ಒಳಪಡಿಸಲಾಗುತ್ತದೆ, ಗುಣಮಟ್ಟದ ಆಧಾರದ ಮೇಲೆ ಹೇಗೆ ವಿಂಗಡಿಸಲಾಗುತ್ತದೆ ಹಾಗೂ ಅಂತಿಮವಾಗಿ ಉತ್ತಮ ಗುಣಮಟ್ಟದ ಉತ್ಪನ್ನವಾಗಿ ಹೇಗೆ ತಯಾರಿಸಲಾಗುತ್ತದೆ ಎಂಬುದನ್ನು ವಿವರಿಸಿದರು. ಈ ಕೈಗಾರಿಕಾ ಭೇಟಿಯಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೀತಿ ಹೆಗ್ಡೆ, ಸತೀಶ್ ಶೆಟ್ಟಿ, ರಜತ್ ಬಂಗೇರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬದುಕಿನಲ್ಲಿ ಭರವಸೆ ಕಳಕೊಳ್ಳದೇ ಕನಸುಗಳ ಬೆನ್ನತ್ತಿ ಪ್ರಯತ್ನದ ಬೆವರು ಸುರಿಸಿದರೆ ಪರಿಪೂರ್ಣತೆಯನ್ನು ಸಾಧಿಸಬಹುದು. ಬಡತನ, ಸೋಲು, ನೋವು, ನಿರಾಸೆಗಳ ನಡುವೆಯೂ ಛಲ ಮತ್ತು ದಿಟ್ಟತನದಿಂದ ಸವಾಲುಗಳನ್ನು ಎದುರಿಸಿದಲ್ಲಿ ಸಮೃದ್ಧಿಯ ಬದುಕು ನಮ್ಮದಾಗುತ್ತದೆಂದು ಅರಣ್ಯ ಗುತ್ತಿಗೆದಾರ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಜೆ.ಪಿ. ಶೆಟ್ಟಿ ಕಟ್ಕೆರೆ ಹೇಳಿದರು. ಅವರು ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿ ಸೇವಾ ನಿವೃತ್ತಿ ಹೊಂದಿದ ಪ್ರಾಂಶುಪಾಲ ರಾಮರಾಯ ಆಚಾರ್ಯ ಹಾಗೂ ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಶೇಖರ ಬಿ. ಅವರನ್ನು ಸನ್ಮಾನಿಸಿ ಮಾತನಾಡಿದರು. ಸೇವಾ ನಿವೃತ್ತಿ ಹೊಂದಿದ ಪ್ರಾಧ್ಯಾಪಕರು ಹಲವು ಇಲ್ಲಗಳ ನಡುವೆ ತಾವು ಸಾಧನೆ ಗೈದ ಬದುಕಿನ ಹಿನ್ನೋಟವನ್ನು ಸ್ಮರಿಸಿ ಜೀವನದ ಯಶೋಗಾಥೆಯನ್ನು ಅರುಹಿ ಸ್ವಾಭಿಮಾನ ಹಾಗೂ ಸ್ವಾವಲಂಬನೆಯ ಬದುಕನ್ನು ಕಟ್ಟಿಕೊಳ್ಳಿರೆಂದು ವಿದ್ಯಾರ್ಥಿಗಳಿಗೆ ಹಿತನುಡಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ಧ ಕಾಲೇಜಿನ ನಿಯೋಜಿತ ಪ್ರಾಂಶುಪಾಲ ನಾಗರಾಜ ವೈದ್ಯ ಎಂ.…

Read More