Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ವಿವಿಧ ಕ್ಷೇತ್ರಗಳಲ್ಲಿ ಪುರಸ್ಕೃತರಾದ ಗೃಹರಕ್ಷಕ ಅಧಿಕಾರಿಗಳು ಹಾಗೂ ಗೃಹರಕ್ಷಕರಿಗೆ ಜಿಲ್ಲಾ ಸಮಾದೇಷ್ಟ ಡಾ. ಪ್ರಶಾಂತ್ ಶೆಟ್ಟಿ ಅಧ್ಯಕ್ಷತೆಯಲ್ಲಿ, ಉಡುಪಿ ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ಬುಧವಾರ ಸನ್ಮಾನ ಸಮಾರಂಭ ನಡೆಯಿತು. ಅಧ್ಯಕ್ಷತೆ ವಹಿಸಿದ ಡಾ.ಪ್ರಶಾಂತ್ ಶೆಟ್ಟಿ ಮಾತನಾಡಿ, ತಮ್ಮ ಉತ್ತಮ ಸೇವೆ ಹಾಗೂ ಪರಿಶ್ರಮ ತಮಗೆ ಕೀರ್ತಿಯನ್ನು ತಂದುಕೊಡುವುದರೊಂದಿಗೆ ಇಲಾಖೆಗೆ ಹಾಗೂ ಉಡುಪಿ ಜಿಲ್ಲೆಗೆ ಕೀರ್ತಿಯನ್ನು ತಂದುಕೊಟ್ಟಿದೆ. ಇನ್ನು ಮುಂದೆಯೂ ತಮ್ಮಿಂದ ಉತ್ತಮ ರೀತಿಯ ಸೇವೆಯನ್ನು ಇಲಾಖೆ ಬಯಸುತ್ತದೆ ಎಂದು ಶುಭ ಹಾರೈಸಿದರು. ಸಮಾರಂಭದಲ್ಲಿ ಉತ್ತಮ ಸೇವೆಗಾಗಿ ರಾಷ್ಟ್ರಪತಿಗಳ ಪದಕ ಪಡೆದಿರುವ ಬ್ರಹ್ಮಾವರ ಘಟಕದ ಘಟಕಾಧಿಕಾರಿ ಮಂಜುನಾಥ್ ಶೆಟ್ಟಿಗಾರ್, ಮಾನ್ಯ ಮುಖ್ಯಮಂತ್ರಿಗಳ ಪದಕ ಪಡೆದಿರುವ ಕಾಪು ಘಟಕದ ಘಟಕಾಧಿಕಾರಿ ಲಕ್ಷ್ಮಿನಾರಾಯಣ್ ರಾವ್ ಹಾಗೂ ಜನವರಿ ೭ ರಿಂದ ೧೮ ರ ವರೆಗೆ ಬೆಂಗಳೂರಿನ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಅಕಾಡೆಮಿಯಲ್ಲಿ ನಡೆದ ರಾಜ್ಯ ಮಟ್ಟದ ಗೃಹರಕ್ಷಕರ ಪ್ರಥಮ ಚಿಕಿತ್ಸೆ ಚಿಕಿತ್ಸೆ ತರಬೇತಿಯಲ್ಲಿ ಚಿನ್ನದ ಪದಕ ಪಡೆದ…

Read More

ಕುಂದಾಪ್ರ ಡಾಟ್ ಕಾಂ ವರದಿ ಬೈಂದೂರು : ನಾವುಂದ ಗ್ರಾಮದ ಸೌಪರ್ಣಿಕಾ ತಟದ ಅರೆಹೊಳೆ ಶ್ರೀ ಮಹಾಲಿಂಗೇಶ್ವರ-ಮಹಾಗಣಪತಿ ದೇವಸ್ಥಾನದಲ್ಲಿ ಮಾಘ ಪೌರ್ಣಿಮೆಯಂದು ನಡೆಯುವ ಶ್ರಿ ಮನ್ಮಾಹಾರಥೋತ್ಸವದ ವೇಳೆ ಎಂಟು ದಿನ ಗ್ರಾಮದ ವಿವಿಧೆಡೆ ನಡೆಯುವ ಕಟ್ಟಳೆಯ ವಸಂತ ಪೂಜೆಗೆ ದೇವರ ಉತ್ಸವ ಮೂರ್ತಿಯನ್ನು ಪಲ್ಕಕ್ಕಿಯಲ್ಲಿ ಕೊಂಡೊಯ್ಯುವುದು ಅನೂಚಾನವಾಗಿ ಬಂದ ಸಂಪ್ರದಾಯ. ೨೫ ವರ್ಷಗಳ ಹಿಂದೆ ಪಲ್ಲಕ್ಕಿ ಹೊರಲು ಸಿಬ್ಬಂದಿ ಹಿಂದೆ ಸರಿದಾಗ ಅಸ್ತಿತ್ವಕ್ಕೆ ಬಂದುದು ’ಪಲ್ಲಕ್ಕಿ ಫ್ರೆಂಡ್ಸ್’ ಎಂಬ ಯುವಪಡೆ. ಸಂಪ್ರದಾಯಕ್ಕೆ ಚ್ಯುತಿ ಬರುವುದೆಂದು ಚಿಂತಿತರಾದ ಅಂದಿನ ಆಡಳಿತ ಮೊಕ್ತೇಸರ ಯಜ್ಞನಾರಾಯಣ ಮಂಜ, ದೇವರ ಸೇವೆಯ ಹೊಣೆ ಹೊರಬೇಕು ಎಂದು ಊರಿನ ವಿಪ್ರ ಯುವಕರ ಮನ ಒಲಿಸಿದರು. ಮೊದಲ ವರ್ಷದಿಂದಲೇ ಯುವಕರು ಈ ಕಾಯಕದಲ್ಲಿ ಧನ್ಯತೆ ಕಂಡುಕೊಂಡರು. ತಮ್ಮನ್ನು ’ಅರೆಹೊಳೆ ಪಲ್ಲಕ್ಕಿ ಫ್ರೆಂಡ್ಸ್’ ಎಂದು ಗುರುತಿಸಿಕೊಂಡು ಸಂಘಟನೆಯ ರೂಪ ಪಡೆದರು. ಅಲ್ಲಿಂದ ಇಂದಿನ ವರೆಗೆ ದೇವರ ಈ ವಿಶಿಷ್ಟ ಗ್ರಾಮಸಂಚಾರಕ್ಕೆ ಚ್ಯುತಿ ಬಂದಿಲ್ಲ. ಮುಂದೆ ವರು ತಮ್ಮ ಸೇವೆಯನ್ನು ಊರಿನ ಅನ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2019-20 ನೇ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ಇಚ್ಛಿಸುವವರು ಆನ್‌ಲೈನ್ ಮುಖಾಂತರ ಅಗತ್ಯ ದಾಖಲೆಗಳೊಂದಿಗೆ www.kacdc.karnataka.gov.in ನಲ್ಲಿ ಮಾರ್ಚ್ 12 ರ ಒಳಗೆ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಮಾತ್ರ ಸ್ವೀಕರಿಸಲಾಗುವುದು. ನಿಗಮದ ಯೋಜನೆಗಳಿಗೆ ಅವಶ್ಯವಿರುವ ಸಾಮಾನ್ಯ ಅರ್ಹತೆಗಳು: ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು, ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ಆಧಾರ್ ಕಾರ್ಡ್ ಹೊಂದಿರಬೇಕು. ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು: ಈ ಯೋಜನೆಯಲ್ಲಿ ಸಣ್ಣ ವ್ಯಾಪಾರ, ಸ್ವಯಂ ಉದ್ಯೋಗ ಇತ್ಯಾದಿ ವ್ಯಾಪಾರ ಚಟುವಟಿಕೆಗಳಿಗೆ ಸಾಲ ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ 3 ಲಕ್ಷ ರೂ.ಗಳ ಮಿತಿಯ ಒಳಗಿರಬೇಕು. ಅರ್ಜಿದಾರರು 18 ವರ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಉಡುಪಿ ಜಿಲ್ಲೆಯ ಕೃಷಿ ಇಲಾಖೆಯ ಮಣ್ಣು ಆರೋಗ್ಯ ಕೇಂದ್ರಕ್ಕೆ ಬೇಕಾದ ಪ್ರಯೋಗಶಾಲಾ ವಿಶ್ಲೇಷಕರು, ಪ್ರಯೋಗಾಲಯ ಸಹಾಯಕರು, ಪ್ರಯೋಗಶಾಲಾ ಪರಿಚಾರಕರು ಹಾಗೂ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಪಡೆಯುವ ಬಗ್ಗೆ ಇ-ಪ್ರೊಕ್ಯೂರ್‌ಮೆಂಟ್ ಟೆಂಡರ್ ದಸ್ತಾವೇಜಿನಲ್ಲಿ ತಿಳಿಸಿರುವ ನಿಬಂಧನೆಗಳು ಮತ್ತು ಷರತ್ತುಗಳಿಗೆ ಒಳಪಟ್ಟು ಟೆಂಡರ್‌ನ್ನು ಆಹ್ವಾನಿಸಲಾಗಿದೆ. ಇಚ್ಛೆಯುಳ್ಳ ಸಂಸ್ಥೆಯವರು ಟೆಂಡರ್ ಅರ್ಜಿಯನ್ನು ಇ-ಪೇಮೆಂಟ್ ಮುಖಾಂತರ ಸಲ್ಲಿಸಬೇಕು. ಭರ್ತಿ ಮಾಡಿದ ಇ-ಟೆಂಡರ್‌ಗಳನ್ನು ಮಾರ್ಚ್ 19 ರ ಸಂಜೆ 4 ಗಂಟೆ ಮುಂಚಿತವಾಗಿ www.karnataka public procurement portal ನಲ್ಲಿ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. ಇ-ಟೆಂಡರ್‌ನ್ನು ಮಾರ್ಚ್ 20 ರ ಸಂಜೆ 4 ಗಂಟೆಗೆ ತೆರೆಯಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯಲ್ಲಿ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಈಗಿನಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ಸೂಚಿಸಿದ್ದಾರೆ. ಅವರು ಬುಧವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಕಳೆದ ಬಾರಿ ಬೇಸಿಗೆಯಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ತಲೆದೋರಿದ ನೀರಿನ ಸಮಸ್ಯೆ ಕುರಿತು ಪ್ರಸ್ತಾಪಿಸಿದ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್, ಈ ಬಾರಿ ಮೇ ಅಂತ್ಯದವರೆಗೂ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಉಡುಪಿ ನಗರಸಭೆಯ ಪೌರಾಯುಕ್ತರಿಗೆ ಸೂಚಿಸಿದ ಅವರು, ನೀರಿನ ಕಡಿತಗೊಳಿಸುವ ನಿರ್ಣಯ ಕೈಗೊಳ್ಳುವ ಮೊದಲು ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಿ, ಸಾರ್ವಜನಿಕರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ, ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕಾರ್ಯ ತತ್ಪರರಾಗಿ ಎಂದು ತಿಳಿಸಿದರು. ಬೇಸಿಗೆ ಸಮಯದಲ್ಲಿ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಟ್ಯಾಂಕರ್ ಮೂಲಕ ನೀರು ವಿತರಿಸುವ ಕುರಿತಂತೆ ಆಪ್ ಅಭಿವೃದ್ದಿಪಡಿಸಲಾಗಿದ್ದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಪ್ರಕೃತಿಯು ನಮ್ಮ ಅವಶ್ಯಕತೆಗಳನ್ನು ಪೂರೈಸುತ್ತಿದ್ದು, ಅದರ ರಕ್ಷಣೆ ನಮ್ಮ ಜವಬ್ದಾರಿ. ಮಾಧ್ಯಮಗಳು ಪರಿಸರದ ಪ್ರತಿಯೊಂದು ಸೂಕ್ಷ್ಮ ವಿಚಾರಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಕರ್ತವ್ಯವನ್ನು ನಿಭಾಯಿಸಬೇಕು ಎಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡ್‌ನ ಆದಾಯತೆರಿಗೆಯ ಡೈರೆಕ್ಟರ್ ಜನರಲ್ ನರೋತ್ತಮ್ ಮಿಶ್ರ ಹೇಳಿದರು. ಅವರು ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಹಾಗೂ ಪದವಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ಎರಡು ದಿನಗಳ ಕಾಲ ನಡೆಯಲಿರುವ ‘ಮೀಡಿಯಾ ಆಂಡ್ ಕ್ಲೈಮೇಟ್ ಆಕ್ಷನ್’ ಎಂಬ ವಿಚಾರದ ಕುರಿತು ನಡೆದ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ‘ಮೀಡಿಯಾ ಬಝ್ – ೨೦೨೦’ ಮಾಧ್ಯಮೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಕೃತಿ ಮಾತೆಯನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಹೊಣೆಯಾಗಿದೆ. ಏಕೆಂದರೆ ಪ್ರಕೃತಿಯು ಸಮತೋಲನದಲ್ಲಿದ್ದರೆ ನಾವು ಬದುಕಲು ಸಾಧ್ಯ. ಪ್ರಕೃತಿ ಮುನಿಸಿಕೊಂಡರೆ ಬದುಕು ಸರ್ವನಾಶವಾಗುವುದುಖಚಿತ. ಪ್ರಕೃತಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಯಾವ ರೀತಿಯಲ್ಲಿ ನಾವು ಕಾರ್ಯ ನಿರ್ವಹಿಸಬಹುದು ಎಂಬುದನ್ನು ಮಾಧ್ಯಮಗಳ ಮೂಲಕ ಜನರಲ್ಲಿ ಅರಿವು ಮೂಡಿಸಬೇಕು. ನಕಾರಾತ್ಮಕ ವಿಚಾರಗಳನ್ನು ಬದಿಗೊತ್ತಿ ಪ್ರತಿಯೊಂದು ಸೂಕ್ಷ್ಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮೊದಲು ನಿಮ್ಮ ಬಗ್ಗೆ ನಂಬಿಕೆ ಇಡಬೇಕು. ಜೀವನದಲ್ಲಿ ಸಕಾರಾತ್ಮಕ ಆಲೋಚನೆಗಳನ್ನು ಬೆಳೆಸಿಕೊಳ್ಳಿ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು  ಇಲ್ಲಿನ ಭಂಡಾರ್ಕಾರ‍್ಸ್ ಕಾಲೇಜಿನಲ್ಲಿ ಯುಥ್ ರೆಡ್ ಕ್ರಾಸ್ ವಿಂಗ್ ಎನ್.ಎಸ್.ಎಸ್ ಮತ್ತು ರುಡಸೆಟ್ ಬ್ರಹ್ಮಾವರ ಮತ್ತು ಆಸರೆ ಸಂಸ್ಥೆ ಇವರ ಸಹಯೋಗದಲ್ಲಿ ನಡೆದ ಮಾಹಿತಿ ಕಾಯಾಗಾರದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಸಕಾರಾತ್ಮಕ ಆಲೋಚನೆಗಳಿದ್ದಾಗ ಆತ್ಮಸ್ಥೈರ್ಯ ಹೆಚ್ಚುತ್ತದೆ. ಸ್ಪರ್ಧೆ ಇದ್ದಾಗ ಮತ್ತಷ್ಟು ಪರಸ್ಪರರ ಮಧ್ಯೆ ಸ್ಪರ್ಧೆ ಏರ್ಪಡುತ್ತದೆ. ಆಗ ಸ್ಪರ್ಧೆಯ ಮಟ್ಟವನ್ನು ಅರ್ಥ ಮಾಡಿಕೊಳಳಬೇಕು. ಅಲ್ಲದೇ ಸೇವೆಗೆ ಸೇರಿದ ಮೇಲೆ ಇನ್ನ್ನ್ಷ್ಟು ಸ್ಪರ್ಧೆ ಎದುರಾಗುತ್ತದೆ. ಜೊತೆಗೆ ಜನಸಾಮಾನ್ಯರ ಮಟ್ಟಕ್ಕೆ ನಮ್ಮ ಸೇವೆ ತಲುಪಬೇಕು ಎನ್ನುವುದುಆಶಯವಾಗಿರಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ರುಡಸೆಟ್ ಬ್ರಹ್ಮಾವರ ಇದರ ಪ್ರಾಂಶುಪಾಲ ಕರುಣಾಕರ ಜೈನ್ ಸ್ವ-ಉದ್ಯೋಗದ ಕುರಿತು ಉದಾಹರಣೆ ಸಹಿತ ಮಾಹಿತಿ ತಿಳಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕುಂದಾಪುರ ತಾಲೂಕಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಂದು ಹೇಳಬೇಕಾದ್ದನ್ನು ನೇರವಾಗಿ ಹೇಳುವ, ವಿರೋಧಿಸಬೇಕಾದ್ದನ್ನು ಸ್ಪಷ್ಟ ಧ್ವನಿಯಲ್ಲಿ ವಿರೋಧಿಸುವ ಸ್ವಾತಂತ್ರ್ಯ ಕಳೆದುಕೊಂಡಿದ್ದೇವೆ. ಸ್ವತಂತ್ರರು ಎನ್ನುತ್ತಲೇ ಬಂಧಿಗಳಾಗಿಯೇ ಬದುಕುತ್ತಿದ್ದೇವೆ. ಇಂತಹ ಸಂಧಿಗ್ಧತೆಯ ನಡುವೆ ಗಟ್ಟಿಯಾದ ಧನಿಯಲ್ಲಿ ವಿವರಿಸುವ, ಒಪ್ಪುವ ಹಾಗೂ ವಿರೋಧಿಸುವ ಶಕ್ತಿಯಿರುವುದು ಕಲಾ ಮಾಧ್ಯಮಕ್ಕೆ ಮಾತ್ರ ಎಂದು ಮಂಗಳೂರು ಅರೆಹೊಳೆ ಪ್ರತಿಷ್ಠಾನದ ಅರೆಹೊಳೆ ಸದಾಶಿವ ರಾವ್ ಹೇಳಿದರು. ಅವರು ಪರಿಶಿಷ್ಟ ಪಂಗಡದ ರಂಗತಂಡ ಸಂಚಲನ ರಿ. ಹೊಸೂರು ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಮಂಗಳವಾರ ಹೊಸೂರಿನ ಕೆ.ವಿ ಸುಬ್ಬಣ್ಣ ವನರಂಗದಲ್ಲಿ ಆಯೋಜಿಸಲಾದ ಹನ್ನೆರಡನೇ ವರ್ಷದ ವಾರ್ಷಿಕ ಸಂಭ್ರಮ ವನಸಿರಿಯಲ್ಲೊಂದು ರಂಗಸುಗ್ಗಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಹಿಂದಿನಿಂದಲೂ ಕಲೆಯನ್ನು ಬೆಳೆಸಿಕೊಂಡು ಬಂದ್ದದ್ದು ಶ್ರಮಿಕ ವರ್ಗ. ಗ್ರಾಮೀಣ ಪ್ರದೇಶಗಳಲ್ಲಿ ಗಟ್ಟಿಯಾಗಿ ಉಳಿದುಕೊಂಡಿದೆ. ಕಲೆ ಸರ್ವವ್ಯಾಪಿಯಾಗಿದ್ದು ಸಮಾಜಕ್ಕೆ ಎಲ್ಲವನ್ನೂ ಸಶಕ್ತವಾಗಿ ತಲುಪಿಸುವ ಶಕ್ತಿ ಹೊಂದಿದೆ ಎಂದರು. ಸಹಕಾರಿ ರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತ ಎಸ್. ರಾಜು ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯತ್ ಸದಸ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ರಿಚರ್ಡ ಅಲ್ಮೇಡಾ ಮೆಮೋರಿಯಲ್ ಕಾಲೇಜ್ ನಾವುಂದ ಇದರ ಉದ್ಯೋಗ ಮಾರ್ಗದರ್ಶನ ಘಟಕದ ಆಶ್ರಯದಲ್ಲಿ ಅಂತಿಮ ಬಿ.ಕಾಂ ವಿದ್ಯಾರ್ಥಿಗಳಿಗೆ ನಂದಿ ಟೋಯೊಟಾ ಕಂಪೆನಿ ಬೆಂಗಳೂರು ಅವರು ಕ್ಯಾಂಪಸ್ ಆಯ್ಕೆ ಕಾರ‍್ಯಕ್ರಮವನ್ನು ಹಮ್ಮಿಕೊಳ್ಳಲಾಗಿತು. ಈ ಕಾರ‍್ಯಕ್ರಮದ ಉದ್ಘಾಟನೆಯನ್ನು ಮಾಡಿದ ಸಂಸ್ಥೆಯ ಪ್ರಧಾನ ಸಂಚಾಲಕರಾದ ಸಿಲ್ವೆಸ್ಟರ್ ಡಿ’ಅಲ್ಮೇಡಾರವರು, ವಿದ್ಯಾರ್ಥಿಗಳಿಗೆ ಇದರ ಪ್ರಯೋಜನವನ್ನು ಪಡೆಯಲು ಹಾರೈಸಿದರು. ಪ್ರಾಂಶುಪಾಲರಾದ ಪ್ರೋ. ಜಿ.ಎಸ್.ಹೆಗಡೆ ಪ್ರಾಸ್ತಾವಿಕವಾಗಿ ಈ ಕಾರ‍್ಯಕ್ರಮದ ಪ್ರಯೋಜನವನ್ನು ಪಡೆಯಬೇಕೆಂದು ತಿಳಿಸಿದರು. ನಂದಿ ಟೋಯೊಟಾ ಕಂಪೆನಿಯ ಮನವ ಸಂಪನ್ಮೂಲ ವಿಭಾಗದ ಮುಖ್ಯಸ್ಠರಾದ ಅಖಿನ ಸೈಮನ್ ಹಾಗೂ ಶಕುಲ್ ರವರು ಆಯ್ಕೆಯ ವಿವಿಧ ಹಂತಗಳನ್ನು ನಡೆಸಿಕೊಟ್ಟರು. ಕಾಲೇಜಿನ ಕೆಲವು ವಿದ್ಯಾರ್ಥಿಗಳು ಆಯ್ಕೆ ಆಗಿದ್ದಾರೆ. ಉದ್ಯೋಗ ಮಾರ್ಗದರ್ಶನ ಘಟಕದ ಅಧ್ಯಾಪಕ ಸಲಹೆಗಾರರಾದ ರಾಮದಾಸ್ ಪ್ರಭು ಕಾರ‍್ಯಕ್ರಮವನ್ನು ಸಂಯೋಜಿಸಿದರು. ಅಂತಿಮ ಬಿ.ಕಾಂ ವಿಧ್ಯಾರ್ಥಿನಿ ಡೆಲಿನಾ ನಿರೂಪಿಸಿದರು, ಸುಶ್ಮಿತಾ ಸ್ವಾಗತಿಸಿದರು, ಶ್ರೀದೇವಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲೆ ತೋಟಗಾರಿಕೆ ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಉಡುಪಿ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನವು ಫೆ. 29 ರಿಂದ ಮಾರ್ಚ್ 2 ರ ವರೆಗೆ ಉಡುಪಿ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ ಕ್ಷೇತ್ರದ ರೈತ ಸೇವಾ (ಪುಷ್ಪ ಹರಾಜು) ಕೇಂದ್ರದ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹಲೋತ್ ತಿಳಿಸಿದ್ದಾರೆ. ಅವರು ತೋಟಗಾರಿಕಾ ಇಲಾಖೆಯಲ್ಲಿ ನಡೆದ ಫಲಪುಷ್ಪ ಪ್ರದರ್ಶನ ಕುರಿತ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ತೋಟಗಾರಿಕೆ ಫಲಪುಷ್ಪ ಪ್ರದರ್ಶನವನ್ನು ಫೆ. 29 ರಂದು ಸಂಜೆ 4.30 ಕ್ಕೆ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು. ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಸಮುದ್ರ ನೀರಿನಲ್ಲಿ ವಾಸಿಸುವ ಜಲಚರಗಳ ಆಕೃತಿಗಳನ್ನು ತಯಾರಿಸುವುದು ಮುಖ್ಯ ವಿಷಯವಾಗಿರುತ್ತದೆ. ಪ್ರಮುಖವಾಗಿ…

Read More