Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮರವಂತೆ: ಮರವಂತೆಯ ಮಹಾರಾಜಸ್ವಾಮಿ ವರಾಹ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಕುರು ರಾಮಚಂದ್ರ ಹೆಬ್ಬಾರ್ ಆಯ್ಕೆಯಾಗಿದ್ದಾರೆ. ಸೋಮವಾರ ದೇವಸ್ಥಾನದಲ್ಲಿ ಸಮಿತಿಯ ಸದಸ್ಯರು ಸಭೆಸೇರಿ ಈ ಆಯ್ಕೆ ಮಾಡಿದರು. ಇದರ ಪೂರ್ವದಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ತು ಆಯ್ಕೆ ಮಾಡಿದ ಹೆಬ್ಬಾರ್ ಸೇರಿ ೯ ಜನರನ್ನು ಜಿಲ್ಲಾ ಹಿಂದು ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿದ್ದರು. ನೇಮಕಗೊಂಡ ಸದಸ್ಯರು : ಶಿವಾನಂದ ಮೊವಾಡಿ, ತ್ರಾಸಿ, ಶ್ರೀಮತಿ ಆಚಾರ್ಯ ಮರವಂತೆ, ನೀಲಾವತಿ ಖಾರ್ವಿ ಮರವಂತೆ, ಕೆ. ಎಂ. ಜನಾರ್ದನ ಮರವಂತೆ, ಚಂದ್ರ ಮೊಗವೀರ ಪಡುಕೋಣೆ, ನಾಡ, ಲಕ್ಷ್ಮಣ ಪೂಜಾರಿ ಹಡವು, ನಾರಾಯಣ ದೇವಾಡಿಗ ಮರವಂತೆ, ಪ್ರಧಾನ ಅರ್ಚಕ ನರಸಿಂಹ ಅಡಿಗ ತ್ರಾಸಿ, .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಬದುಕಿನ ಕೌಶಲ್ಯವನ್ನು ಕಲಿಸುವುದು ನಿಜವಾದ ಶಿಕ್ಷಣ ಎನ್ನಿಸಿಕೊಳ್ಳುತ್ತದೆ.ಸಾಹಿತ್ಯ ಬಗೆಗಿನ ಆಸಕ್ತಿ ಎನ್ನುವುದು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆಯನ್ನು ಬೆಳೆಸಿ ಅವರನ್ನು ನಿರಂತರವಾಗಿ ಕ್ರಿಯಾಶೀಲರನ್ನಾಗಿಸಲು ಸಹಾಯ ಮಾಡುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಕುಂದಾಪುರ ಘಟಕದ ಅಧ್ಯಕ್ಷರಾದ ಡಾ. ಸುಬ್ರಮಣ್ಯ ಭಟ್ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಶಾಲೆಯ ಸುವರ್ಣ ಮಹೋತ್ಸವದ ಅಂಗವಾಗಿ ಹೊರತರಲಾದ ವಿಶೇಷ ಸಂಚಿಕೆ ‘ಹೊಂಬೆಳಕು’ ಬಿಡುಗಡೆಗೊಳಿಸಿ ಮಾತನಾಡಿದರು. ಇಂತಹ ಸಂಚಿಕೆಗಳ ಮೂಲಕ ಇತಿಹಾಸವನ್ನು ದಾಖಲಿಸುವ ಪ್ರಯತ್ನಗಳ ಜೊತೆಗೆ ಪ್ರತಿಭೆಯನ್ನು ಪೋಷಿಸುವ ಕೆಲಸ ಆಗುತ್ತದೆ. ಕನ್ನಡದ ನಾಡು ನುಡಿಯ ಕಾಳಜಿಯೂ ಪ್ರೇರಣೆಗೊಳ್ಳುತ್ತದೆ ಎಂದು ಅವರು ಹೇಳಿದರು. ಪ್ರಧಾನ ಸಂಪಾದಕ ನರೇಂದ್ರ ಎಸ್ ಗಂಗೊಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿ ಸಂಚಿಕೆಯನ್ನು ಹೊರತರಲು ಸಹಕರಿಸಿದ ಎಲ್ಲರ ಸಹಕಾರವನ್ನು ಸ್ಮರಿಸಿ ಅಭಿನಂದಿಸಿದರು. ಸುವರ್ಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ರಾಜು ದೇವಾಡಿಗ, ಹೊಂಬೆಳಕು ಸಂಪಾದಕ ಮಂಡಳಿಯ ಸದಸ್ಯರಾದ ಅಬ್ದುಲ್ ಸಲಾಂ, ಗಣೇಶ್ ಹೆಬ್ಬಾರ್, ಸಂಧ್ಯಾ ಪಟೇಲ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಾವುದೇ ಆರ್ಥಿಕ ಸಂಸ್ಥೆಯ ಬೆಳವಣಿಗೆಯು ಆ ಸಂಸ್ಥೆಯ ಕಾರ್ಯನೀತಿ ಹಾಗೂ ಸಂಸ್ಥೆಯ ಸಿಬ್ಬಂದಿಗಳ ಕಾರ್ಯಕ್ಷಮತೆಯ ಮೇಲೆ ಅವಲಂಬಿತವಾಗಿದೆ. ಸಂಸ್ಥೆಯ ದೂರದೃಷ್ಟಿತ್ವ ಹಾಗೂ ಗ್ರಾಮೀಣ ಪ್ರದೇಶದ ಜನರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶ, ಶಿಸ್ತುಬದ್ಧ ಆಡಳಿತ ಹಾಗೂ ಅತ್ಯುತ್ತಮ ಸೇವೆ ಮೊದಲಾದವುಗಳಿಂದ ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗಿದೆ ಎಂದು ಉಪ್ಪುಂದ ಶ್ರೀ ವರಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಹೇಳಿದರು. ಶ್ರೀ ವರಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ೨೦೧೭-೧೮ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ದೂರದ ಮುಂಬೈ, ಹೈದರಾಬಾದ್, ಪುಣೆ ಹಾಗೂ ಬೆಂಗಳೂರಿನಲ್ಲಿ ಲಾಭದಾಯಕ ಉದ್ಯಮ ನಡೆಸುತ್ತಿದ್ದರೂ ಕೂಡಾ ನಮ್ಮೂರಿನ ಜನರಿಗೆ ಸಾಮಾಜಿಕ ಮತ್ತು ಆರ್ಥಿಕವಾಗಿ ಸ್ಪಂದಿಸುವ ಉದ್ದೇಶದಿಂದ ಊರಿನಲ್ಲಿ ಸಹಕಾರಿ ಸಂಘವನ್ನು ಆರಂಭ ಮಾಡಲಾಗಿದೆ. ಅಲ್ಲದೇ ಶ್ರೀ ವರಲಕ್ಷ್ಮೀ ಟ್ರಸ್ಟ್ ಮೂಲಕವೂ ಶೈಕ್ಷಣಿಕ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಂಘದ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸಹಾಯಹಸ್ತ ನೀಡಲಾಗುತ್ತಿದೆ. ಇದೊಂದು ಆತ್ಮತೃಪ್ತಿಗಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿಸ್ತುಬದ್ದ ಜೀವನ ಶೈಲಿ. ಸರಳ ಸಜ್ಜನಿಕೆಯ ವ್ಯಕ್ತಿತ್ವ. ಸಾಮಾಜಿಕ ಕಳಕಳಿಯಿಂದ ಹಳ್ಳಿಯ ಜನರ ಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಜನಾನುರಾಗಿ ಹೊಸ್ಕೋಟೆ ಡಾಕ್ಟರ್ ಅವರ ನೂರು ವರ್ಷದ ಬದುಕೇ ಅತಿದೊಡ್ಡ ಸಾಧನೆ ಎಂದು ಕೊಲ್ಲೂರು ದೇವಳದ ಮಾಜಿ ಆಡಳಿತ ಧರ್ಮದರ್ಶಿ ಬಿ. ಎಂ. ಸುಕುಮಾರ್ ಶೆಟ್ಟಿ ಹೇಳಿದರು. ಹೊಸ್ಕೋಟೆ ವಿಜಯಕೃಪಾದ ರಘುವೀರ ಭಂಡಾರ್‌ಕಾರ್ ಸ್ಮರಣ ವೇದಿಕೆಯಲ್ಲಿ ಗುರುವಾರ ಸಂಜೆ ಡಾ. ಸದಾನಂದ ಗಣಪತಿ ರಾವ್ ಹೊಸ್ಕೋಟೆ (ಹೊಸ್ಕೋಟೆ ಡಾಕ್ಟರ್) ಇವರ ಶತ ಸಂವತ್ಸರದ ಸಂಭ್ರಮಾಚರಣೆಯ ಪ್ರಯುಕ್ತ ನಡೆದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ನಿಸ್ವಾರ್ಥ ಸೇವೆಯಿಂದ ಮಾತ್ರ ತೃಪ್ತಿಯ ಜೀವನ ಪಡೆಯಲು ಸಾಧ್ಯ. ಈ ನೆಲೆಯಲ್ಲಿ ಶ್ರೀಮಂತ ಹಾಗೂ ಸುಸಂಸ್ಕೃತ ರಾವ್‌ಬಹದೂರ್ ವಂಶದಲ್ಲಿ ಜನಿಸಿದರೂ ಹಣದ ವ್ಯಾಮೋಹಕ್ಕೆ ಒಳಗಾಗದೇ ಜನಸೇವೆಯಲ್ಲಿಯೇ ದೇವರನ್ನು ಕಂಡುಕೊಂಡು ಇತಿಹಾಸ ಸೃಷ್ಠಿಸಿದ ಈ ಭಾಗದ ಪ್ರಸಿದ್ದ ವೈದ್ಯರಾಗಿದ್ದಾರೆ. ಲೌಕಿಕ ಆಸೆ ಆಮಿಷಗಳ ದಾಸರಾಗದ ಇವರು ’ವೈದ್ಯೋ ನಾರಾಯಣೋ ಹರಿಃ’ ಎಂಬ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಡೂರು- ಕುಂಜ್ಙಾಡಿ(ಕುಂದಾಪುರ) ಶ್ರೀ ಹ್ಯಾಗೂಳಿ ದೈವಸ್ಥಾನ ಆಶ್ರಯದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 12ನೇ ವರ್ಷದ ಗಣೇಶೋತ್ಸವದ ಅಂಗವಾಗಿ ನಿವೃತ್ತಿ ಹೊಂದಿದ ಜಡ್ಕಲ್ ಘಟಕದ ಉಪ ವಲಯ ಅರಣ್ಯಾಧಿಕಾರಿ ಶ್ರೀ. ಪಿ ಸುಬ್ರಾಯ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಾರಾಯಣ ರಾವ್, ಪ್ರದೀಪ ಶೆಟ್ಟಿ, ಶೇಖರ ಗೌಡ, ವಿಠ್ಠಲ ಶೆಟ್ಟಿ, ನರಸಿಂಹ ಶೆಟ್ಟಿ, ರಾಜಾರಾಮ್ ಶೆಟ್ಟಿ, ನಾರಾಯಣ ಅಧ್ಯಾಪಕರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀರಾಮ ಕೆಡಿಟ್ ಕೋ- ಅಪರೇಟಿವ್ ಸೊಸೈಟಿ ಲಿ ಬೈಂದೂರು ಶಾಖೆ ಸ್ಥಳಾಂತರ ಮತ್ತು ಸ್ವಂತ ಕಟ್ಟಡದ ಉದ್ಘಾಟನಾ ಸಮಾರಂಭ ನಡೆಯಿತು. ಬೈಂದೂರು ಮಾಜಿ ಶಾಸಕರ ಮತ್ತು ವಿಧಾನಸಭಾ ಕ್ಷೇತ್ರದ ಸದಸ್ಯರಾದ ಕೆ.ಲಕ್ಷ್ಮೀನಾರಾಯಣ ಉದ್ಘಾಟನೆ ಮಾಡಿದರು. ಭದ್ರತಾ ಕೊಠಡಿ ಉದ್ಘಾಟನೆಯನ್ನು ರಕ್ಷಾ ಚಾರಿಟೇಬಲ್ ಟ್ರಸ್ಟ್ ಕುಂದಾಪುರ ಅಧ್ಯಕ್ಷರು ಚಂದ್ರಶೇಖರ ಉದ್ಘಾಟನೆ ಮಾಡಿದರು. ಕೆ.ನಾಗರಾಜ್ ರಾವ್ ಅಧ್ಯಕ್ಷರು ಶ್ರೀರಾಮ ಕೆಡಿಟ್ ಕೋ- ಅಪರೇಟಿವ್ ಸೊಸೈಟಿ ಲಿ ಕುಂದಾಪುರ ಇವರು ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಸುರೇಶ್ ಬಟವಾಡಿ ಜಿ.ಪಂ ಸದಸ್ಯ, ಸಹಕಾರ ಸಂಘಗಳ ಉಪ ನಿಬಂಧಕ ಪ್ರವೀಣ ಬಿ ನಾಯಕ್, ಶ್ರೀ ರಾಮಕ್ಷತ್ರಿಯ ಸಂಘ ಬೈಂದೂರು ಅಧ್ಯಕ್ಷ ಗೋಪಾಲ ನಾಯ್ಕ್, ಆಡಳಿತ ಮಂಡಳಿಯ ಸದಸ್ಯರಾದ ಸತೀಶ್ ನರಸಿಂಹ ಶೇರುಗಾರ್, ಎನ್.ವಿ ದಿನೇಶ್, ಅಶೋಕ್ ಬೆಟ್ಟಿನ್, ಕೆ ರಾಮನಾಥ್ ನಾಯ್ಕ್, ಶ್ರೀಧರ ಪಿ.ಎಸ್., ಮಂಜುನಾಥ ಮದ್ದೋಡಿ, ಗೋಪಾಲಕೃಷ್ಣ ಕಲ್ಮಕ್ಕಿ, ವಿಶ್ವನಾಥ ಹವಲ್ದಾರ್, ಕೆ.ಚಂದ್ರಶೇಖರ ಕೊತ್ವಲ್, ರಾಜೇಶ್ ರಾವ್, ಬಿ.ರಾಧಾಕೃಷ್ಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿಗೆ ಸಮೀಪದ ಕಿರಿಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ನಡೆದ ಬಸ್ ಹಾಗೂ ಬೈಕ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮರವಂತೆ ಗಾಡಿಮನೆ ವೆಂಕಪ್ಪ ಖಾರ್ವಿಯವರ ಪುತ್ರ ಶ್ರೀಕಾಂತ ಖಾರ್ವಿ(24) ಮೃತ ದುರ್ದೈವಿ ಯುವಕ. ಬೈಕ್‌ಗೆ ಸರ್ಕಾರಿ ಬಸ್ ಮುಖಾಮುಖಿ ಢಿಕ್ಕಿ ಹೊಡೆದಿದ್ದರಿಂದ, ಆಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ಶ್ರೀಕಾಂತ ಖಾರ್ವಿಯನ್ನು ಸ್ಥಳೀಯರು ಆಪತ್ಭಾಂಧವ ಆಂಬುಲೆನ್ಸ್ ಆಸ್ಪತ್ರೆಗೆ ಸಾಗಿಸಲು ಪ್ರಯತ್ನ ನಡೆಸಿದರಾದರೂ ಅಷ್ಟರಲ್ಲಾಗಲೇ ಕೊನೆಯುಸಿರೆಳೆದಿದ್ದರು. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಬೈಂದೂರು 2016-17ನೇ ಸಾಲಿನಲ್ಲಿ 294 ಕೋಟಿಯಷ್ಟು ವ್ಯವಹಾರ ನಡೆಸಿ 73.15 ಲಕ್ಷ ರೂ. ಲಾಭಗಳಿಸಿದ್ದು, ಸಂಸ್ಥೆಯ ಸದಸ್ಯರಿಗೆ ಶೇ.13ರಷ್ಟು ಡಿವಿಡೆಂಟ್ ನೀಡಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಸೋಮವಾರ ಬೈಂದೂರಿನ ಪ್ರಧಾನ ಕಛೇರಿಯಲ್ಲಿ ಜರುಗಿದ 15ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಆರ್ಥಿಕ ವರ್ಷದ ಅಂತ್ಯಕ್ಕೆ ಸಂಘವು 29.85 ಕೊಟಿ ರೂ. ಠೇವಣಿ ಸಂಗ್ರಹಿಸಿ, 25.23 ಕೋಟಿ ರೂ. ಸಾಲ ನೀಡಿ ಒಟ್ಟು 294 ಕೋಟಿ ರೂ. ವಹಿವಾಟು ನಡೆಸಿದೆ ಎಂದ ಅವರು ಪ್ರಧಾನ ಕಛೇರಿ ಸೇರಿದಂತೆ ಆರು ಶಾಖೆಗಳನ್ನು ಹೊಂದಿ ಉತ್ತಮ ವ್ಯವಹಾರ ನಡೆಸುತ್ತಿದ್ದು, ಕುಂದಾಪುರದಲ್ಲಿ ಸ್ವಂತ ಕಟ್ಟಡದಲ್ಲಿ ಕಛೇರಿ ತೆರೆಯುವ ಯೋಜನೆಯಿದೆ. ಪ್ರತಿವರ್ಷ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿದ್ದು ಈ ಭಾರಿ 1,71,000 ರೂ ವಿದ್ಯಾರ್ಥಿ ವೇತನ ನೀಡಲಾಗಿದೆ ಎಂದರು. ಸಂಸ್ಥೆಯ ಕಾರ್ಯವ್ಯಾಪ್ತಿಯಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ಪ್ರತಿಭಾವಂತ ಬಡ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಕೃತಿಯಲ್ಲಿರುವ ಹಲವು ಬಗೆಯ ಸಸ್ಯ ಪ್ರಭೇದಗಳು ಹಲವು ಪ್ರಯೋಜನಕಾರಿಯಾಗಿವೆ ಅದರಂತೆ ಶಿವನ ಸಾನಿಧ್ಯವಿರುವ ಬಿಲ್ವ ವೃಕ್ಷವನ್ನು ಸ್ಪರ್ಶಿಸುವುದರಿಂದಲೇ ಪಾಪ ಕ್ಷಯಿಸುವುದು. ಅಂತಹ ಸಸ್ಯ ಪ್ರಭೇದಗಳನ್ನು ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮದಾಗಿರಬೇಕು ಎಂದು ಹಂಗಾರಕಟ್ಟೆ ಬಾಳೆಕುದ್ರು ಶ್ರೀ ಮಠದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿವರು ನುಡಿದರು. ಅವರು ಕೋಟೇಶ್ವರ ಸಮೀಪದ ಶಾಂತಿಧಾಮ ಗುರುಕುಲ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಲ್ವ ಸಸಿಗಳನ್ನು ವಿತರಿಸಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಹರಿಹರ ಸೇವಾ ಬಳಗದ ಅಧ್ಯಕ್ಷ ಎನ್. ಮೋಹನ್ ಆಚಾರ್ಯ, ಸುದ್ದಿಮನೆ ಸಂಪಾದಕ ಸಂತೋಷ ಕೋಣಿ, ವ್ಯಾಪಾರೋದ್ಯಮಿ ವಿಠಲ ಪೈ ಉಪಸ್ಥಿತರಿದ್ದರು. ಶಾಲಾ ಅಧ್ಯಕ್ಷರಾದ ಕೃಷ್ಣರಾಯ ಶ್ಯಾನುಭಾಗ್ ಸ್ವಾಗತಿಸಿ, ವಂದಿಸಿದರು.

Read More

  ಮೂಕಜ್ಜಿ, ಅಡಿಗ, ಶ್ರೀಧರರ ಶತಮಾನದ ಸ್ಮೃತಿ ಹಬ್ಬ. ನಾಗೂರು ಒಡೆಯರ ಮಠ ಗೋಪಾಲಕೃಷ್ಣ ಕಲಾಮಂದಿರದ ಬಳವಾಡಿ ಮಹಾಲಕ್ಷ್ಮೀ ಹೆಬ್ಬಾರತಿ ಸಭಾವರಣದಲ್ಲಿ ಅಗಸ್ಟ್ 27ರ ರವಿವಾರ ಬೆಳಿಗ್ಗೆಯಿಂದ ಸಂಜೆಯ ತನಕ. *** ಕಾರ್ಯಕ್ರಮದ ವಿವರ

Read More