ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಿಲ್ಲವ ಸಮಾಜ ಸೇವಾಸಂಘ ರಿ. ಯಡ್ತರೆ ಬೈಂದೂರು ಇದರ ವಾರ್ಷಿಕೋತ್ಸವದ ಅಂಗವಾಗಿ ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಎಲ್ಲೆಡೆ ಪಸರಿಸುವ ನಿಟ್ಟಿನಲ್ಲಿ ಗುರು ಸಂದೇಶ ಜಾಥಾ ಹಾಗೂ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಶೋಭಾಯಾತ್ರೆಯ ಬಳಿಕ ಬೈಂದೂರಿನ ವತ್ತಿನಕಟ್ಟೆ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಬಿಲ್ಲವ ಸಮಾಜ ಶ್ರೀ ಸತ್ಯನಾರಾಯಣ ಮಹಾಪೂಜೆ, ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು. ಶ್ರೀ ಸತ್ಯನಾರಾಯಣ ದೇವರನ್ನು ಪ್ರತಿಷ್ಟಾಪಿಸಿ ಪ್ರಾರ್ಥನೆ ಸಲ್ಲಿಸಲಾಯಿತು. ಅರ್ಚಕ ಕೃಷ್ಣ ಮೂರ್ತಿ ನಾವುಡ ಅವರು ಪೂಜಾಧಿಗಳನ್ನು ನೆರವೇರಿಸಿದರು. ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ನೂರಾರು ಮಂದಿ ಸಮಾಜ ಬಾಂಧವರು, ಭಕ್ತಾದಿಗಳು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಬಳಿಕ ಸಂಘದ ಸದಸ್ಯರಿಂದ ಭಜನಾ ಕಾರ್ಯಕ್ರಮ ನೆರವೇರಿತು. ವಾರ್ಷಿಕೋತ್ಸವ ಪ್ರಯುಕ್ತ ನಡೆದ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ ದೊಟ್ಟಯ್ಯ ಪೂಜಾರಿಯವರು ವಹಿಸಿದ್ದರು ಮುಖ್ಯ ಅಥಿತಿಗಳಾಗಿ ಮಾಜಿ ಶಾಸಕರಾದ ಕೆ ಗೋಪಾಲ ಪೂಜಾರಿ, ಜಿಲ್ಲಾ ಪಂಚಾಯತ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಲೆಯಲ್ಲಿ ತೊಡಗಿಸಿಕೊಂಡ ಪ್ರತಿಯೊಬ್ಬರಲ್ಲೂ ಸಹೃದಯಿ ಮನೋಭಾವ ಬೆಳೆದಿರುತ್ತದೆ. ಕಲಾವಿದ ಕಲೆಯಲ್ಲಿನ ಸದ್ಗುಣಗಳನ್ನು ಬದುಕಿನಲ್ಲಿಯೂ ಅಳವಡಿಸಿಕೊಂಡು ಬೆಳೆಯುತ್ತಾನೆ ಎಂದು ಜ್ಯೋತಿಷಿ ಮಹೇಂದ್ರ ಭಟ್ ಬೈಂದೂರು ಹೇಳಿದರು. ಅವರು ಬೈಂದೂರು ಶಾರದಾ ವೇದಿಕೆಯಲ್ಲಿ ಶನಿವಾರ ಲಾವಣ್ಯ ರಿ. ಬೈಂದೂರು ಇದರ ೪೨ನೇ ವಾರ್ಷಿಕೋತ್ಸವ ಹಾಗೂ ದಿ. ಕೂರಾಡಿ ಸೀತಾರಾಮ ಶೆಟ್ಟಿ ಸಂಸ್ಮರಣೆಯ ನಾಟಕೋತ್ಸವದಲ್ಲಿ ನಟ ನಿರ್ದೇಶಕ ರಾಜೇಂದ್ರ ಕಾರಂತರ ನಾಟಕ ಕೃತಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ರಂಗಭೂಮಿಯಿಂದ ಪ್ರತಿಯೊಬ್ಬರೂ ಬದುಕಿನ ಪಾಠಗಳನ್ನು ಕಲಿಯುತ್ತಾರೆ. ಪ್ರೌಡಿಮೆಯನ್ನು ಬೆಳೆಸಿಕೊಳ್ಳುತ್ತಾರೆ. ಅಂತವರು ಸಮಾಜದಲ್ಲಿಯೂ ಉತ್ತಮ ರೀತಿಯಲ್ಲಿ ಬದುಕುತ್ತಾರೆ ಎಂದರು. ಲಾವಣ್ಯದ ಗೌರವಾಧ್ಯಕ್ಷ ಯು. ಶ್ರೀನಿವಾಸ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಸಿವಿಲ್ ಇಂಜಿನಿಯರ್ ಗುರುರಾಜ್ ರಾವ್ ಶುಭಾಶಂಸನೆಗೈದರು. ರಂಗ ಕಲಾವಿದ ಕೃಷ್ಣಮೂರ್ತಿ ಉಡುಪ ಕಬ್ಸೆ ಅವರನ್ನು ಸನ್ಮಾನಿಸಲಾಯಿತು. ಪ್ರಜಾವಾಣಿ ತುಮಕೂರು ಬ್ಯೂರೋ ಮುಖ್ಯಸ್ಥ ಎನ್. ಸಿದ್ದೇಗೌಡ ತುಮಕೂರು, ಉದ್ಯಮಿ ರಾಮ ಸೋಡಿತಾರ್, ಕುಂದಾಪ್ರ ಡಾಟ್ ಕಾಂ ಸಂಪಾದಕ ಸುನಿಲ್ ಹೆಚ್. ಜಿ. ಬೈಂದೂರು, ಅರಣ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ದೇವಲ್ಕುಂದ ಗ್ರಾಮದ ಎನ್.ಟಿ.ಎಸ್. ಸಾಗರ ಪ್ಯಾಲೇಸ್ನಲ್ಲಿ ಭಾನುವಾರ ನಡೆದ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ ಪದಪ್ರದಾನ ಮತ್ತು ಕಾರ್ಯಕರ್ತರ ಸಮಾವೇಶವನ್ನು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನೇಶ್ ಗುಂಡುರಾವ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಐದು ವರ್ಷ ಪೂರೈಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷದ ಕೇಂದ್ರ ಸರ್ಕಾರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ನೀಡಿದ ಯಾವುದೇ ಆಶ್ವಾಸನೆಗಳನ್ನು ಈಡೇರಿಸಿಲ್ಲ. ಚುನಾವಣೆ ಬಂದೊಡನೆ ಹಿಂದುತ್ವ ಮತ್ತು ರಾಮಮಂದಿರ ನಿರ್ಮಾಣದ ವಿಚಾರವನ್ನು ಎತ್ತಿಕೊಂಡು ಜನರ ಭಾವನೆಗಳನ್ನು ಕೆರಳಿಸಿ ಇನ್ನೊಮ್ಮೆ ಅಧಿಕಾರ ಹಿಡಿಯುವ ಹುನ್ನಾರ ನಡೆಸಿದೆ. ದೇಶದ ಮತದಾರರನ್ನು ಅವರು ಸೃಷ್ಟಿಸಿರುವ ಭ್ರಮಾಲೋಕದಿಂದ ಹೊರತರು ಸವಾಲು ಕಾಂಗ್ರೆಸ್ ಪಕ್ಷದ ಮುಂದಿದೆ ಎಂದು ಹೇಳಿದರು. ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನರಿಗೆ ಹಲವು ಪ್ರಗತಿಪರ ಮತ್ತು ಕ್ರಾಂತಿಕಾರಕ ಕಾರ್ಯಕ್ರಮಗಳನ್ನು ನೀಡಿತ್ತು. ಹಗರಣಮುಕ್ತ ಆಡಳಿತ ನೀಡಿತ್ತು. ಉಡುಪಿ ಜಿಲ್ಲೆಯ ಪಕ್ಷದ ಎಲ್ಲ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಅಭೂತಪೂರ್ವ ಅಭಿವೃದ್ಧಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರತಿಭೆಯನ್ನು ಹೊರ ತೆಗೆಯುವುದೇ ವಿದ್ಯಾಭ್ಯಾಸ. ಅಕ್ಷರ ಜ್ಞಾನ ಓದುವುದಕ್ಕೋ ಬರೆಯುವುದಕ್ಕೋ ತಿಳುವಳಿಕೆಯೇ ಹೊರತು ಅದು ಜಗತ್ತಿನ ಅರಿವಲ್ಲ. ಪ್ರತಿಯೊಬ್ಬ ವ್ಯಕ್ತಿಯಲ್ಲಿ ಜೀವ ಯೋಗ್ಯತೆಗಳಿರುತ್ತದೆ. ತನ್ನ ಅರಿವೇ ತನಗೆ ಗುರು ಎಂದು ಅರಿತಾಗ ಮಾತ್ರ ಪ್ರಪಂಚದಲ್ಲಿ ಭೃಷ್ಟಾಚಾರ, ಅತ್ಯಾಚಾರ, ಗಲಭೆ ಇರುವುದಿಲ್ಲ. ಅವಾಗಲೇ ವಿಶ್ವಶಾಂತಿ ಸಾಧ್ಯ ಎಂದು ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಹೇಳಿದರು. ವತ್ತಿನೆಣೆ ಕ್ಷಿತಿಜ ನೇಸರಧಾಮದಲ್ಲಿ ಶನಿವಾರ ಬೈಂದೂರು ರೋಟರಿ ಕ್ಲಬ್ ವತಿಯಿಂದ ನಡೆದ ವಿಶ್ವ ಅರಿವು ಮತ್ತು ಶಾಂತಿ ದಿನಾಚರಣೆಯಲ್ಲಿ ಪ್ರಧಾನ ಭಾಷಣಕಾರರಾಗಿ ಉಪನ್ಯಾಸ ನೀಡಿದರು. ಇಂದಿನ ಕಾಲಘಟ್ಟದಲ್ಲಿ ಜಗತ್ತು ಅಂಗೈಯಲ್ಲಿದ್ದರೆ ಬೆರಳು ಅದರ ನಿಯಂತ್ರಣ ಮಾಡುತ್ತದೆ. ಕಳೆದ ೧೫೦ ವರ್ಷಕ್ಕೂ ಹೆಚ್ಚು ಅಮೇರಿಕಾದ ಚಿಕಾಗೋನಲ್ಲಿ ನಡೆದ ಸಮಾರಂಭದಲ್ಲಿ ಭಾರತೀಯ ಸನ್ಯಾಸಿ ಸ್ವಾಮಿ ವಿವೇಕಾನಂದರ ಭಾಷಣದಿಂದ ಸಾಹೋದರ್ಯ ಹುಟ್ಟಿಕೊಂಡಿತು. ಹಾಗೆಯೇ ರೋಟರಿ ಕೂಡಾ ಚಿಕಾಗೋನಲ್ಲಿ ಹುಟ್ಟಿದ ಸಂಸ್ಥೆಯಾದರೂ ವಿಶ್ವ ಭಾತೃತ್ವವನ್ನು ಸಾರುತ್ತಿದೆ. ಇದು ಒಂದು ರೀತಿಯಲ್ಲಿ ಕೊಟ್ಟು ಪಡೆಯುವ ವಿಧಾನವಾಗಿದ್ದರೂ…
ಕುಂದಾಪ್ರ ಡಾಟ್ ಕಂ ಸುದ್ದಿ. ಕುಂದಾಪುರ: ಮುಂದಿನ ಹತ್ತು ದಿನಗಳೊಳಗೆ ಭಾರತೀಯ ಜನತಾ ಪಕ್ಷದ ಚುನಾವಣಾ ಪೂರ್ವ ಸಿದ್ಧತೆಯಾಗಿ ಹಮ್ಮಿಕೊಳ್ಳಲಾಗುತ್ತಿರುವ ನಾಲ್ಕೈದು ಕಾರ್ಯಕ್ರಮಗಳನ್ನು ನಡೆಸಬೇಕಾಗಿದ್ದು ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಬೂತ್ ಮಟ್ಟದಲ್ಲಿ ಸಕ್ರಿಯರಾಗಬೇಕು ಆ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಕರೆಕೊಟ್ಟರು. ಭಾರತೀಯ ಜನತಾ ಪಕ್ಷದ ಮಹಾ ಸಂಪರ್ಕ ಅಭಿಯಾನವನ್ನು ಕುಂದಾಪುರದಲ್ಲಿ ಭಾನುವಾರ ಬೆಳಿಗ್ಗೆ ಪಕ್ಷದ ಕಚೇರಿಯಲ್ಲಿ ಚಾಲನೆಗೊಳಿಸಿ ಬಳಿಕ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷವು ದೇಶಾದ್ಯಂತ ನಿಗಧಿತ ಸಮಯದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಏಕಕಾಲದಲ್ಲಿ ನಡೆಯುವಂತೆ ಸೂಚಿಸಲಾಗಿದೆ. ಅದರಂತೆ ಫೆಬ್ರವರಿ ೨೬ರಂದು ಸಂಜೆ ಪ್ರತಿಯೊಂದು ಬೂತ್ ಮಟ್ಟದಲ್ಲಿಯೂ ’ಕಮಲಜ್ಯೋತಿ’ಯನ್ನು ಬೆಳಗಿಸಬೇಕು ಮತ್ತು ಅದರ ಫೋಟೋ ತೆಗೆದು ಪಕ್ಷದ ಕಚೇರಿಗೆ ಕಳುಹಿಸಬೇಕು. ಫೆಬ್ರುವರಿ ೨೮ರಂದು ನರೇಂದ್ರ ಮೋದಿಯವರು ವಿಡಿಯೋ ಮೂಲಕ ಮನ್ ಕೀ ಬಾತ್ ಕಾರ್ಯಕ್ರಮ ನಡೆಸಿಕೊಡಲಿದ್ದು, ಅವರನ್ನು ನೋಡುವ ಅವಕಾಶವನ್ನು ಮತದಾರರು ಬಳಸಿಕೊಳ್ಳಲು ಕ್ರಮ, ಮಾರ್ಚ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಆಯ್ಕೆಯಾದ ವರ್ಷದೊಳಗೆ ಕ್ಷೇತ್ರ ವ್ಯಾಪ್ತಿಯ ಸಮಗ್ರ ಅಭಿವೃದ್ಧಿ ಕಾರ್ಯಗಳಿಗಾಗಿ ನಾನಾ ಇಲಾಖೆಯಿಂದ ಸುಮಾರು ೧೪೭ ಕೋಟಿ ರೂ. ಅನುದಾನ ಮಂಜೂರಾತಿ ದೊರೆತಿದೆ ಎಂದು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ತಿಳಿಸಿದ್ದಾರೆ. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು ೨ ಸಾವಿರ ಹೆಕ್ಟೇರ್ ಭೂಪ್ರದೇಶದಕ್ಕೆ ನೀರುಣಿಸುವ ಬಹುಬೇಡಿಕೆಯ ಸಿದ್ದಾಪುರ-ಸೌಕೂರು ಏತ ನೀರಾವರಿ ಯೋಜನೆಗೆ ಪ್ರಥಮ ಹಂತದಲ್ಲಿ ೫೦ ಕೋಟಿ ರೂ. ಬಜೆಟ್ನಲ್ಲಿ ಅನುಮೋದನೆ ದೊರೆತಿದೆ, ಲೋಕೊಪಯೋಗಿ ಇಲಾಖೆಯಿಂದ ಹೆಮ್ಮಾಡಿ-ನೆಂಪು ರಸ್ತೆ ದ್ವಿಪಥ ಕಾಮಗಾರಿಗೆ ೧೦ ಕೋಟಿ, ಅಂಪಾರು, ಶಂಕರನಾರಾಯಣ, ಈಡೂರು, ಹಾಲ್ಕಲ್ ರಸ್ತೆ ಅಗಲೀಕರಣ ಹಾಗೂ ವೃತ್ತ ರಚನೆಗೆ ೧೨ ಕೋಟಿ, ಕ್ಷೇತ್ರ ವ್ಯಾಪ್ತಿಯ ಶಾಲಾ ಮಕ್ಕಳಿಗೆ ಚಿಕ್ಕ ಹಳ್ಳ ದಾಟಲು ೭೯ ಕಾಲು ಸಂಕ ರಚನೆಗೆ ೪ ಕೋಟಿ, ಮೇಕೋಡು-ಚಾಟಕುಳಿ, ನಾಗೂರು-ಹಳಗೇರಿ ರಸ್ತೆ, ಕೆಪ್ಪೆಕೆರೆ-ಹೊರ್ಲಿಮಕ್ಕು-ಹೊಸಾಡು, ಬಂಡಾರಕೇರಿ, ಹೇರಂಜಾಲು- ದಾರಿಮಕ್ಕಿ, ವಸ್ರೆ-ಹುಲ್ಕಡ್ಕಿ, ಗೋಳಿಬೇರು-ಅತ್ಯಾಡಿ, ನಾಯ್ಕನಕಟ್ಟೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕ್ಷೇತ್ರದ ಜನರ ನೀರಾವರಿ ಸೌಕರ್ಯವನ್ನು ಒದಗಿಸಲುವ ನಿಟ್ಟಿನಲ್ಲಿ ರಾಜ್ಯದ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವ ನೇತೃತ್ವದಲ್ಲಿ ರಾಜ್ಯದ ನೀರಾವರಿ ಸಚಿವರನ್ನು ಭೇಟಿಯಾಗಿ ಶಿವಮೊಗ್ಗ ಕ್ಷೇತ್ರಕ್ಕೆ ನಾಲ್ಕು ನೀರಾವರಿ ಯೋಜನೆಗೆ ಅನುಮೋದನೆ ಪಡೆದುಕೊಳ್ಳಲಾಗಿದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು. ಅವರು ಬೈಂದೂರು ಪ್ರವಾಸಿ ಮಂದಿರದಲ್ಲಿ ಆದಿತ್ಯವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ನೀರಾವರಿ ಯೋಜನೆಯ ಪೈಕಿ ಸುಮಾರು ೧೨೦ ಕೋಟಿ ರೂ. ವೆಚ್ಚದ ಸಿದ್ಧಾಪುರ ಸೌಕೂರು ನೀರಾವರಿ ಯೋಜನೆಗೆ ಈಗಾಗಲೇ ಜೆಟ್ನಲ್ಲಿ ಐವತ್ತು ಕೋಟಿ ರೂ. ಮೀಸಲಿರಿಸಲಾಗಿದ್ದು ಆರಂಭಿಕ ಹಂತದ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಬೈಂದೂರು ಕ್ಷೇತ್ರದ ಉಪ್ಪುಂದ-ಮಡಿಕಲ್ ಬಂದರು ಅಭಿವೃದ್ಧಿಗೆ ೧೨೦ ಕೋಟಿ, ಮರವಂತೆ ಬಂದರು ೨ನೇ ಹಂತದ ಕಾಮಗಾರಿಗೆ ೩೮ ಕೋಟಿ, ಶಿರೂರು ಅಳ್ವೆಗದ್ದೆ ಬಂದರು ಎರಡನೇ ಹಂತದ ಕಾಮಗಾರಿಗೆ ೯೮ ಕೋಟಿ ಅಗತ್ಯವಿದ್ದು ಕೇಂದ್ರ ಕೃಷಿ ಮಂತ್ರಿಯನ್ನು ಶಾಸಕರೊಂದಿಗೆ ಭೇಟಿಯಾಗಿ ಅನುದಾನ ನೀಡುವಂತೆ ಮನವಿ ಮಾಡಿಕೊಂಡಿದ್ದು,…
ಸುಬ್ರಹ್ಮಣ್ಯ ಹೆಬ್ಬಾಗಿಲು, ದೋಹಾ – ಕುಂದಾಪ್ರ ಡಾಟ್ ಕಾಂ ಪದ್ಮಶ್ರೀ ವಿಜೇತೆ, ಸುಪ್ರಸಿದ್ಧ ಚಲನಚಿತ್ರ ತಾರೆ, ಕರ್ನಾಟಕದ ತುಳುನಾಡಿನ ಅಪ್ಸರೆ, ಶ್ರೀಮತಿ ಐಶ್ವರ್ಯ ರೈ ಬಚ್ಚನ್ ಅವರು, ದೋಹಾದಲ್ಲಿ ಏರ್ಪಡಿಸಿದ್ದ 2019ನೇ ಸಾಲಿನ ’ಆಭರಣ ಮತ್ತು ಹಡಿಯಾರಗಳ ಪ್ರದರ್ಶನ’ವನ್ನು ಉದ್ಘಾಟಿಸಲು ಆಗಮಿಸಿದ್ದರು. ಕನ್ನಡಿಗರ ಪ್ರತಿನಿಧಿಯಾಗಿ ಹಾಗೂ ಭಾರತೀಯ ಸಮುದಾಯದ ಹಿತನಿಧಿ ಸಂಘದ ಸಹ-ಕಾರ್ಯದರ್ಶಿಯಾಗಿ ನಾನು ಶ್ರೀಮತಿ ರೈ ಇವರನ್ನು ಭೇಟಿಯಾಗಿ ಹರ್ಷದಿಂದ ಶುಭಾಶಯ ಕೋರಿದೆ. ಮೂಲತಃ ತುಳು ಕುಟುಂಬದವರಾದ ರೈ ಅವರು ಜನಿಸಿದ್ದು ಮಂಗಳೂರಿನಲ್ಲಿ, ನನ್ನ ಜನ್ಮಸ್ಥಳವಾದ ಕುಂದಾಪುರದಿಂದ ಸಮೀಪ. ಅವರು ಗಿರಿಶಿಖರದಷ್ಟು ಎತ್ತರಕ್ಕೆ ತಮ್ಮ ಜೀವನದಲ್ಲಿ ಏರಿರುವರು, ನಟನೆಯಲ್ಲಿ, ಹೆಸರು ಗಳಿಸುವಲ್ಲಿ ಹಾಗು ಯಶಸ್ಸಿನಲ್ಲಿ. ಅವರಷ್ಟಲ್ಲದಿದ್ದರೂ, ಅಳಿಲು ಸೇವಕನಂತೆ ಕತಾರಿನ ಅನಿವಾಸಿ ಭಾರತೀಯ ಸಮಾಜಕ್ಕೆ ನನ್ನ ಕೈಲಾದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿರುವುದನ್ನು ಅವರಿಗೆ ಹೇಳಿದಾಗ, ಅವರು ಸಂತಸಗೊಂಡು ನನಗೆ ಅಭಿನಂದಿಸಿದರು. ಇಂತಹ ವ್ಯಕ್ತಿತ್ವವನ್ನು ಭೇಟಿ ನೀಡಿದುದೆ ನನ್ನ ಸೌಭಾಗ್ಯವೆಂದು ಪರಿಗಣಿಸುತ್ತೇನೆ. ಐಶ್ವರ್ಯ ರೈ ಬಚ್ಚನ್ ಅವರು 1992ನೇ ಸಾಲಿನಲ್ಲಿ ಚಲನಚಿತ್ರ ರಂಗಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಇಂಡಿಯನ್ ಫೆಡೆರೇಶನ್ ಆಫ್ ವರ್ಕಿಂಗ್ ಜರ್ನಲಿಸ್ಟ್ ಸಂಸ್ಥೆ ನವದೆಹಲಿ ಇವರ ಸಂಯೋಜಿತ ಸಂಸ್ಥೆಯಾದ, ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯಿಂದ ಅಧಿಕೃತ ಮಾನ್ಯತೆ ಹೊಂದಿದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ನ ಉಡುಪಿ ಜಿಲ್ಲಾ ಘಟಕ ಅಸ್ತಿತ್ವಕ್ಕೆ ಬಂದಿದೆ. ನೂತನ ಉಡುಪಿ ಜಿಲ್ಲಾ ಪತ್ರಕರ್ತರ ಯೂನಿಯನ್ ಗೆ ಅಧ್ಯಕ್ಷ ರಾಗಿ ಕೆ.ಶಶಿಧರ್ ಹೆಮ್ಮಣ್ಣ ( ದೂರದರ್ಶನ ಉಡುಪಿ ಜಿಲ್ಲಾ ಪ್ರತಿನಿಧಿ) ಕಾರ್ಯದರ್ಶಿಯಾಗಿ ಶಿಜಿತ್ ಕುಮಾರ್ ( ಫೋಕಸ್ ಟಿವಿ) ಸಂಚಾಲಕರಾಗಿ ಆಸ್ಟ್ರೋ ಮೋಹನ್ (ಉದಯವಾಣಿ), ಜನಾರ್ಧನ್ ಕೊಡವೂರು (ವಿಜಯವಾಣಿ) ಹಾಗು ಗೌರವ ಅಧ್ಯಕ್ಷರಾಗಿ ಯು.ಎಸ್ ಶೆಣೈ (ಕುಂದಪ್ರಭ) ಆಯ್ಕೆಯಾಗಿದ್ದಾರೆ. ಯೂನಿಯನ್ ಗೆ ಜೊತೆ ಕಾರ್ಯದರ್ಶಿಗಳಾಗಿ ಸುರೇಶ್ ಏರ್ಮಾಳ್ , ಸತೀಶ್ ಕುಮಾರ್. ಉಪಾಧ್ಯಕ್ಷರುಗಳಾಗಿ ಡಾ.ಸುಧಾಕರ ನಂಬಿಯಾರ್ , ಡಾ. ಆಕಾಶ್ ರಾಜ್, ಖಜಾಂಚಿ ಶ್ರೇಯಸ್.ಕೆ, ರಾಜ್ಯ ಸಂಘದ ಪ್ರತಿನಿಧಿಯಾಗಿ ರೂಪೇಶ್ ಕಲ್ಮಾಡಿ ಕಾನೂನು ಸಲಹೆಗಾರರಾಗಿ ರವಿಕಿರಣ್ ಮುರ್ಡೇಶ್ವರ, ಶಾಂತರಾಮ್ ಶೆಟ್ಟಿ ಮತ್ತು ಕಾರ್ಯಕಾರಿ ಮಂಡಳಿ ಸದಸ್ಯರಾಗಿ ಸುಕುಮಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ದೇವಾಡಿಗ ಸಂಘ ಪೂಜೆ ವತಿಯಿಂದ ಆಯ್ಕೆ ಮಾಡಲಾದ ದೇವಾಡಿಗ ಯಶಸ್ವಿ ಮಹಿಳೆ ಪುರಸ್ಕಾರಕ್ಕೆ ಉಡುಪಿ ಜಿಲ್ಲಾ ಪಂಚಾಯತಿ ಸದಸ್ಯೆ ಗೌರಿ ದೇವಾಡಿಗ ಆಯ್ಕೆಯಾಗಿದ್ದಾರೆ. ದೇವಾಡಿಗ ಸಂಘ ಪುಣೆ ವಾರ್ಷಿಕೋತ್ಸವ ಸಮಾರಂಭ ಫೆ. 24ರಂದು ನಡೆಯಲಿದ್ದು ಪ್ರಶಸ್ತಿ ಪ್ರದಾನಿಸಲಾಗುತ್ತದೆ.
