Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ನವರಾತ್ರಿಯ ಅಂಗವಾಗಿ ಪ್ರಸಿದ್ಥ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದ ಸಹಸ್ರಾರು ಭಕ್ತರು ವಿಜಯದಶಮಿಯಂದು ತಮ್ಮ ಮಕ್ಕಳಿಗೆ ವಿದ್ಯಾರಂಭ ಮಾಡಿಸಿದರು. ಶ್ರೀ ಮೂಕಾಂಬಿಕಾ ದೇವಸ್ಥಾನದ ಪ್ರಾಂಗಣದ ಸರಸ್ವತಿ ಮಂಟಪದ ಮುಂಭಾಗದಲ್ಲಿ ಮಕ್ಕಳಿಗೆ ಪ್ರಾಥಃಕಾಲದಿಂದಲೇ ಅಕ್ಷರಾಭಾಸ ಮಾಡಿಸಲಾಯಿತು. ಹೆತ್ತವರು ಕಾಲಿನ ಮೇಲೆ ಮಕ್ಕಳನ್ನು ಕುರಿಸಿಕೊಂಡು ವಿದ್ಯಾರಂಭ ಮಾಡಿಸಲಾಗುತ್ತದೆ. ಅರ್ಚಕರು ಚಿನ್ನದಿಂದ ಮಗುವಿನ ನಾಲಗೆಯ ಮೇಲೆ ಓಂ ಎಂದು ಬರೆಯುತ್ತಾರೆ, ಬಳಿಕ ಹೆತ್ತವರು ಮಗುವಿನ ಬೆರಳಿಂದ ಅಕ್ಕಿ ತುಂಬಿದ ಹರಿವಾಣದಲ್ಲಿ ಓಂ ಎಂದು ಬರೆಯಿಸಿ ಬಳಿಕ ಮಾತೃಭಾಷೆಯಲ್ಲಿ ಅ,ಆ,ಇ ಬರೆಸುವ ಮೂಲಕ ಅಕ್ಷರಾಭ್ಯಾಸ ಮಾಡಿಸಲಾಗುತ್ತದೆ. ಇದರಿಂದ ಮಕ್ಕಳ ನಾಲಿಗೆಯ ಮೇಲೆ ಸರಸ್ವತಿ ದೇವಿ ನೆಲೆಸಿ ಅವರ ಶೈಕ್ಷಣಿಕ ಭವಿಷ್ಯ ಸಮೃದ್ಧಿಯಾಗುತ್ತದೆ ಎಂಬ ನಂಬಿಕೆ ಭಕ್ತರದ್ದು. ನವಾನ್ನಪ್ರಾಶನ: ಎಳೆಯ ಕಂದಮ್ಮಗಳಿಗೆ ನವಾನ್ನಪ್ರಾಶನದ ಮೂಲಕ ಮೊದಲ ಭಾರಿಗೆ ಅನ್ನವನ್ನು ತಿನ್ನಿಸಲಾಗುತ್ತದೆ. ಶ್ರೀ ಮೂಕಾಂಬಿಕೆಯ ಸನ್ನಿಧಿಯಲ್ಲಿ ಅನ್ನಾಹಾರ ಆರಂಭಿಸಿದ ಮಗು ಮುಂದೆ ಯಾವುದೇ ರೀತಿಯ ಅನಾರೋಗ್ಯದಿಂದ ಬಳಲುವುದಿಲ್ಲ ಎಂಬುದು ನಂಬಿಕೆ. ಈ ಬಾರಿ ಕೊಲ್ಲೂರಿನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಕುಂದಾಪುರ ತಾಲೂಕು ಸಮಿತಿ ಮತ್ತು ಯಡ್ತರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರ ಹೋರಾಟ ಸಮಿತಿಗಳ ನೇತೃತ್ವದಲ್ಲಿ ಯಡ್ತರೆ ಗ್ರಾಮದ ಬಡನಿವೇಶನ ರಹಿತರಿಂದ ನಿವೇಶನ ಹಕ್ಕು ಪತ್ರ ಕೋರಿಕೆಗೆ ಒತ್ತಾಯಿಸಿ ಸ್ವೀಕರಿಸಿದ ೨೬೪ ಅರ್ಜಿಗಳನ್ನು ಸ್ಥಳೀಯ ಗ್ರಾಮ ಪಂಚಾಯತ್ ಕಛೇರಿಗೆ ಸಾಮೂಹಿಕವಾಗಿ ಹಸ್ತಾಂತರಿಸುವ ಹೋರಾಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಜರಗಿದ ನಿವೇಶನ ರಹಿತ ಅರ್ಜಿದಾರರ ಸಮಾವೇಶವನ್ನು ಉದ್ಘಾಟಿಸಿದ ನಿವೇಶನ ರಹಿತರ ಹೋರಾಟ ಸಮಿತಿಯ ಮುಖಂಡ ಗಣೇಶ ತೊಂಡೆಮಕ್ಕಿ ಮಾತನಾಡುತ್ತಾ ಯಡ್ತರೆ ಗ್ರಾಮದ ಬಡ ನಿವೇಶನ ರಹಿತರ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿ ನಿವೇಶನ ರಹಿತರ ಪಟ್ಟಿಯನ್ನು ಸಿದ್ಧಪಡಿಸಬೇಕು ಹಾಗೂ ನಿವೇಶನ ರಹಿತರಿಗಾಗಿ ಒಟ್ಟು ಎಷ್ಟು ಸರಕಾರಿ ಜಮೀನು ಅಗತ್ಯವಿದೆ ಎಂಬುದಕ್ಕೆ ಕಂದಾಯ ಇಲಾಖೆಗೆ ಪ್ರಸ್ಥಾವನೆ ಕಳುಹಿಸಬೇಕು ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿಯವರಲ್ಲಿ ಒತ್ತಾಯಿಸಿದರು. ಸಿಐಟಿಯು ಕುಂದಾಪುರ ತಾಲೂಕು ಅಧ್ಯಕ್ಷ ಎಚ್. ನರಸಿಂಹ ಮುಖಂಡರಾದ ಸುರೇಶ್ ಕಲ್ಲಾಗರ…

Read More

ಸುನಿಲ್ ಹೆಚ್. ಜಿ. ಬೈಂದೂರು ಕುಂದಾಪುರ: ಕಾಲ ಉರುಳಿದ ಹಾಗೇ ನಮ್ಮ ಆಸಕ್ತಿಯೂ ಬದಲಾಗುತ್ತದೆ. ಹೊಸತನಕ್ಕೆ ತುಡಿಯುವ ಈ ಬದಲಾವಣೆಯೊಂದಿಗೆ ನಮ್ಮ ಕಲೆ, ಸಂಸ್ಕೃತಿ ಸಂಪ್ರದಾಯಗಳ ಪೈಕಿ ಕೆಲವು ಹೊಸ ಆಯಾಮ ಪಡೆದು ಮತ್ತೆ ನಮ್ಮ ಮುಂದೆ ಬಂದರೆ, ಇನ್ನು ಕೆಲವು ಮರೆಯಾಗಿಬಿಡುತ್ತವೆ. ಆದರೆ ಅಪರೂಪಕ್ಕೊಂದು ಸಂಸ್ಥೆಗಳು ಈ ಮರೆಯಾಗುವ ಕಲೆಗಳಿಗೆ ಮರುಜೀವ ತುಂಬುವ ಪ್ರಯತ್ನವನ್ನು ಮಾಡುತ್ತಲೇ ಬರುತ್ತವೆ. ಹೌದು. ಕಲಾಕ್ಷೇತ್ರ ಕುಂದಾಪುರ ಅಂಥಹದ್ದೊಂದು ಭಿನ್ನ ಕಾರ್ಯಕ್ರಮವನ್ನು ಕುಂದಾಪುರದಲ್ಲಿ ಕಳೆದ ಕೆಲವು ವರ್ಷಗಳಿಂದ ಆಯೋಜಿಸುತ್ತಿದೆ. ಹಿಂದೆಲ್ಲ ನವರಾತ್ರಿಯ ಸಮಯದಲ್ಲಿ ರಾತ್ರಿಯ ವೇಳೆಗೆ ಹೆಚ್ಚಾಗಿ ಕಂಡುಬರುತ್ತಿದ್ದ ಹುಲಿವೇಷ ಇಂದು ಕುಂದಾಪುರ ಭಾಗದಲ್ಲಿ ಅಪರೂಪವೆನಿಸಿಕೊಳ್ಳುತ್ತಿರುವುದಲ್ಲದೇ, ವ್ಯಾವಹಾರಿಕ ತಿರುವನ್ನು ಪಡೆದಿದೆ. ಹೊಸಬರು ಬರುತ್ತಿಲ್ಲ. ಕಲಿಯುವವರ್ಯಾರು, ಕುಣಿಯುವವರ್ಯಾರು ಪ್ರಶ್ನೆ. ಕುಣಿದರೂ ಅದು ಪಟ್ಟಣ, ದನಿಗಳ ಮನೆಗಳಿಗಷ್ಟೇ ಸೀಮಿತವಾಗಿದೆ. ಹೀಗಿರುವಾಗ ಹಳೆಯ ದಿನಗಳನ್ನೊಮ್ಮೆ ಮೆಲಕು ಹಾಕಿದರೆ ಎಷ್ಟು ಚಂದವಿರುತ್ತೆಂಬ ಆಲೋಚನೆಯೊಂದಿಗೆ ಆಯೋಜಿಸಿದ ಹುಲಿವೇಷ ಕುಂದಾಪುರ ಮಟ್ಟಿಗೆ ವಿಶೇಷವಾಗಿಯೇ ಮೂಡಿಬಂದಿತ್ತು. (ಕುಂದಾಪ್ರ ಡಾಟ್ ಕಾಂ ವರದಿ) ನವರಾತ್ರಿಯ ಎಲ್ಲಾ ವೇಷಗಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾಲೇಜಿನ ವಾರ್ಷಿಕ ಸಂಚಿಕೆ ‘ದರ್ಶನ’ಕ್ಕೆ ತನ್ನದೇ ಆದ ಶೈಲಿ ಮತ್ತು ಇತಿಹಾಸವಿದೆ. ಇಂದಿನವರೆಗೆ ಅದು ತನ್ನತನವನ್ನು ಉಳಿಸಿಕೊಂಡ ರೀತಿ ಅದೇ ದೊಡ್ಡ ಇತಿಹಾಸವಾಗುತ್ತದೆ ಎಂದು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಆಡಳಿತಾಧಿಕಾರಿಗಳಾದ ಡಾ. ಹೆಚ್. ಶಾಂತಾರಾಮ್ ಹೇಳಿದರು. ಅವರು ಇಲ್ಲಿನ ಭಂಡರ್ಕಾರ್ಸ್ ಕಾಲೇಜಿನಲ್ಲಿ ಸಾಕಷ್ಟು ಬೆಳವಣಿಗೆಯನ್ನು ಜೊತೆಗೆ ಶಿರ್ಷಿಕೆಗೆ ತಕ್ಕ ಹಾಗೆ ಅದರ ಗುಣಮಟ್ಟವನ್ನು ಉಳಿಸಿಕೊಂಡಿದ್ದೇವೆ. : ಕಾಲೇಜಿನ ೨೦೧೬-೧೭ನೇ ಸಾಲಿನ ವಾರ್ಷಿಕ ಸಂಚಿಕೆ “ದರ್ಶನ” ವನ್ನು ಅನಾವರಣಗೊಳಿಸಿ ಮಾತನಾಡಿದರು. ಕಾಲೇಜಿನ ವಾರ್ಷಿಕ ಸಂಚಿಕೆ ಸಂಸ್ಥೆಯ ಚಟುವಟಿಕೆಗಳಿಗೆ ಹಿಡಿದ ಕನ್ನಡಿ. ಸಂಸ್ಥೆಯ ಸರ್ವೋತುಮುಖ ಬೆಳವಣಿಗೆಯನ್ನು ಹಿಡಿದಿಡುವಲ್ಲಿ ವಾರ್ಷಿಕ ಸಂಚಿಕೆ ಅತಿಮುಖ್ಯವೆನಿಸುತ್ತದೆ. ಈ ದಿಸೆಯಲ್ಲಿ ಅದರ ಗುಣಮಟ್ಟವನ್ನು ಉಳಿಸಿಕೊಂಡು ಮುಂದುವರಿಯಬೇಕು. ಹಾಗಾಗಿ ಬಹುಮಾನಕ್ಕಿಂತ ಅದರಲ್ಲಿನ ವಸ್ತುವಿಷ್ಯಗಳಲ್ಲಿನ ಗುಣಮಟ್ಟಕ್ಕೆ ಪ್ರಾಮುಖ್ಯತೆಯನ್ನು ಕೊಡಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ವಾರ್ಷಿಕ ಸಂಚಿಕೆ “ದರ್ಶನ” ದ ಕಾರ್ಯನಿರ್ವಾಹಕ ಸಂಪಾದಕರಾದ ಡಾ.ಹಯವದನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕೋಟ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯ ಅಂಗವಾಗಿ ಅಕ್ಟೋಬರ್ ೧೦ರಂದು ನಟ, ನಿರ್ಮಾಪಕ, ನಿರ್ದೇಶಕ ಪ್ರಕಾಶ್ ರೈ ಅವರಿಗೆ ಕಾರಂತ ಹುಟ್ಟೂರ ಪ್ರಶಸ್ತಿ ವಿತರಣೆ ಮಾಡಲಿದ್ದೇವೆ. ೧೩ ವರ್ಷದ ಕಾರ್ಯಕ್ರಮದ ಅಂಗವಾಗಿ ಅಕ್ಟೋಬರ್ 1ರಿಂದ 10ರ ವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಈ ಬಾರಿ ವಿಶೇಷವಾಗಿ ಕಾರಂತರಿಗೆ ಪಂಚನಮನ ಸಲ್ಲಿಸು ವಿಭಿನ್ನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೋಟ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ಅಧ್ಯಕ್ಷ ಆನಂದ ಸಿ.ಕುಂದರ್ ಹೇಳಿದರು. ಅವರು ಕೋಟ ಡಾ.ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ಅಕ್ಟೋಬರ್ ೧ ರಿಂದ ೧೦ರ ವರೆಗೆ ನಡೆಯಲಿರುವ ಕಾರಂತೋತ್ಸವ ತಂಬೆಲರು 2017ರ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಕಾರ್ಯಕ್ರಮ ಕಾರ್ಯ ಸ್ವರೂಪಗಳ ಬಗ್ಗೆ ನಡೆದ ಸಭೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಮಾತನಾಡಿದರು. ಅಕ್ಟೋಬರ್ ೧ರಂದು ಮಕ್ಕಳ ಹಬ್ಬದ ಮೂಲಕ ತಂಬೆಲರು ಕಾರ್ಯಕ್ರಮ ಉದ್ಘಾಟನೆಗೊಳ್ಳಿದ್ದು, ಪ್ರತಿದಿನ ಸಂಜೆ ೫.೩೦ರಿಂದ ಪ್ರಾದೇಶಿಕ ಮತ್ತು ಪ್ರಶಸ್ತಿ ವಿಜೇತ ಚಲನಚಿತ್ರಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಪ್ರತಿಯೊಂದು ಸಂಬಂಧಗಳು ಉಳಿದುಕೊಳ್ಳುವುದು ಪರಸ್ಪರ ನಂಬಿಕೆಯ ಆಧಾರದ ಮೇಲೆ. ವಿಮರ್ಶೆಗೆ ಅವಕಾಶ ನೀಡುವಂತಹ ನಂಬಿಕೆಗಳನ್ನು ಪ್ರತಿಯೊಬ್ಬರೂ ಹೊಂದಿರಬೇಕು ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ಕೋಟೇಶ್ವರದ ರೋಟರಿ ಭವನದಲ್ಲಿ ರೋಟರಿ ಕ್ಲಬ್ ಕೋಟೇಶ್ವರ ಮತ್ತು ಆನ್ಸ್ ಕ್ಲಬ್ ಕೋಟೇಶ್ವರ ವತಿಯಿಂದ ನಡೆದ ಕುಟುಂಬ ಸಮ್ಮಿಲನ ಕಾರ‍್ಯಕ್ರಮದಲ್ಲಿ ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿದರು. ಮನಸ್ಸಿನಲ್ಲಿ ಸಂಬಂಧಗಳ ಬಗೆಗೆ ಅಸಹ್ಯವನ್ನು ತುಂಬುವ ಟಿವಿ ಧಾರಾವಾಹಿಗಳನ್ನು ಬದಿಗಿಟ್ಟು ಮನೆಗಳಲ್ಲಿ ನಮ್ಮ ನಡುವೆಯೇ ಪ್ರೀತಿಯ ಮಾತುಕತೆ ಕುಶಲೋಪರಿಗಳಿಗೆ ಹೆಚ್ಚಿನ ಪ್ರಾಧಾನ್ಯತೆಯನ್ನು ನೀಡಬೇಕು. ದಂಪತಿಗಳು ಪರಸ್ಪರರ ವೈಯಕ್ತಿಕ ಬದುಕುಗಳನ್ನು ಗೌರವಿಸುವ ವಿಶಾಲ ಮನೋಭಾವನೆಯನ್ನು ಹೊಂದಬೇಕು.ಪ್ರೀತಿಯ ಮಾತು ಸಂಬಂಧಗಳ ಬೆಳವಣಿಗೆಗೆ ಸಹಕಾರಿ ಎಂದು ಅವರು ಹೇಳಿದರು. ರೋಟರಿ ಅಧ್ಯಕ್ಷ ಎನ್ ಪ್ರಕಾಶ್ ಆಚಾರ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಆನ್ಸ್ ಅಧ್ಯಕ್ಷೆ ಶ್ರೀಮತಿ ಪ್ರಕಾಶ್ ಆಚಾರ್, ಆನ್ಸ್ ಕಾರ‍್ಯದರ್ಶಿ ಅಕ್ಷತಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲಕರ ವಿಭಾಗದ ಟೆನ್ನಿ ಕಾಯ್ಟ್ ಕ್ರೀಡಾ ಕೂಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾವು ಪಡೆದ ಟ್ರೋಫಿಯೊಂದಿಗೆ. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ, ಆಂಗ್ಲ ಬಾಷಾ ಉಪನ್ಯಾಸಕ ಥಾಮಸ್ ಕೆ.ಪಿ ಉಪಸ್ಥಿತರಿದ್ದಾರೆ.ಗಣೇಶ್ ಖಾರ್ವಿ, ಅಭಿಷೇಕ್ ಮತ್ತು ರೋಶನ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ವಿಜೇತರನ್ನು ಕಾಲೇಜಿನ ಆಡಳಿತ ಮಂಡಳಿ ಅಭಿನಂದಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಶುಕ್ರವಾರ ಶರನ್ನವರಾತ್ರಿಯ ಮಹಾ ನವಮಿಯಂದು ಸುಹೂಮೂರ್ತದಲ್ಲಿ ಪುಷ್ಪರಥೋತ್ಸವ ನಡೆಯಿತು. ಪ್ರಾರಂಬಿಕ ಹಂತದಲ್ಲಿ ದೇವಿಯ ಉತ್ಸವಮೂರ್ತಿಯನ್ನು ರಥದಲ್ಲಿ ಕುಳ್ಳಿರಿಸಿ ದೆವಾಲಯದ ಒಳಪ್ರಾಂಗಣದಲ್ಲಿ ಒಂದುಸುತ್ತು ಬರುತ್ತಿದ್ದಂತೆ ಶ್ರೀ ಮೂಕಾಂಬಿಕೆಯ ಸ್ತೋತ್ರಪಠಿಸಿ ದೇವಿಯ ದರ್ಶನ ಪಡೆದು ಕಣ್ತುಂಬಿಕೊಂಡು ಪುಳಕಿತರಾದರು. ರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಭಕ್ತವೃಂದ ’ಅಮ್ಮಾ, ದೇವಿ, ನಾರಾಯಣಿ’ ಎಂಬಿತ್ಯಾದಿ ಉದ್ಘೋಷದಿಂದ ಮೈಮರೆತು ಭಕ್ತಿಪರವಶರಾದರು. ನವರಾತ್ರಿಯ ಮಹಾನವಮಿಯಂದು ಪ್ರಸಾದ ರೂಪವಾಗಿ ದೊರಕುವ ಈ ನಾಣ್ಯ ಭಾಗ್ಯವನ್ನು ದಯಪಾಲಿಸುತ್ತದೆ ಹಗೂ ಆರ್ಥಿಕ ಸ್ಥಿತಿ-ಗತಿಗಳನ್ನು ಭದ್ರಪಡಿಸುತ್ತದೆ ಎನ್ನುವ ನಂಬಿಕೆ ಭಕ್ತರಲ್ಲಿ ಇಂದಿಗೂ ಅಚಲವಾಗಿದ್ದು, ಇದಕ್ಕಾಗಿ ಮಹಾನವಮಿಯ ರಥೋತ್ಸವ ಸಂದರ್ಭದಲ್ಲಿ ದೇವಸ್ಥಾನದ ಪೌಳಿಯ ಒಳ ಪ್ರಾಂಗಾಣದಲ್ಲಿ ಲಕ್ಷಾಂತರ ಜನರು ಮಹಾನವಮಿಯಂದು ನಡೆಯುವ ಶ್ರೀದೇವಿಯ ರಥೋತ್ಸವಕ್ಕಾಗಿ ಕಾಯುತ್ತಾರೆ. ಇದರಲ್ಲಿ ಕೇರಳಿಗರೆ ಹೆಚ್ಚು ಎನ್ನುವುದು ವಿಶೇಷ. ಈ ಸಂದರ್ಭ ಸಹಸ್ರ-ಸಹಸ್ರ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಿಗೆ ದೇವಳದ ವ್ಯವಸ್ಥಾಪನಾ ಸಮಿತಿ, ಆಡಳಿತ ಮಂಡಳಿ, ಅರ್ಚಕವೃಂದ ಹಾಗೂ ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ಸಹಕರಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅಡಿಗರ ಕಾವ್ಯ ಸಾಂದ್ರ ಅನುಭವ ಮತ್ತು ವಿಚಾರಗಳನ್ನು ಹೊಂದಿದ್ದು. ನಮ್ಮ ಪ್ರಾದೇಶಿಕ ನುಡಿಗಟ್ಟು, ಪುರಾಣ, ಸಾಹಿತ್ಯ, ಯಕ್ಷಗಾನ-ತಾಳ ಮದ್ದಳೆಗಳ ಹಿನ್ನೆಲೆಯಿಲ್ಲದೆ, ಸುಲಭವಾಗಿ ಆಸ್ವಾಧಿಸುವುದು ಕಷ್ಟ. ಅಡಿಗರ ಕಾವ್ಯಾ ಸ್ವಾಹನೆಗೆ ಇಲ್ಲಿನ ಸ್ವಂತಃ ಕವಿಗಳೂ, ವಿಚಾರವಂತರೂ ಆದ ಉಪ್ಪುಂದ ಚಂದ್ರ ಶೇಖರ ಹೊಳ್ಳರ ಕಾವ್ಯ ಪ್ರವೇಶಿಕೆ ಅಡಿಗರ ಶತಾಬ್ದಿ ವರ್ಷಕ್ಕೆ ಪ್ರಮುಖ ಕಾಣೆಕೆ ಎಂದು ಡಾ. ಪ್ರೋ. ಕನರಾಡಿ ವಾದಿರಾಜ ಭಟ್ ಹೇಳಿದರು. ಖಂಬದಕೋಣೆ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾಹಿತ್ಯ ಸಪ್ತಾಹ ಕಾರ್ಯಕ್ರಮದಲ್ಲಿ ಅಡಿಗರ ಕಾವ್ಯ ಪ್ರವೇಶಿಕೆ ಅಡಿಗರ ಕಾವ್ಯದ ಆಸ್ವಾದನೆ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು. ಪ್ರಾಂಶುಪಾಲೆ ಜಯಲಕ್ಮ್ಷೀ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭ ಕವಿ ಅಡಿಗರ ವಿದ್ಯಾರ್ಥಿ ಪ್ರೋ ಕನರಾಡಿಯವರಿಗೆ ಅಡಿಗ ಜನ್ನ ಶತಾಬ್ಧಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಾಧ್ಯಮ ಭಾರತಿ ಬೆಂಗಳೂರಿನ ನಿರ್ದೇಶಕ ಎಂ. ಜಯರಾಮ ಅಡಿಗರು ಪ್ರಾಸ್ತಾವಿಸಿದರು. ಸಾಹಿತಿ ಯು. ರಮೇಶ ವೈದ್ಯ, ಪ್ರಸಾರ ಭಾರತಿ ನಿರ್ದೇಶಕ ಎಂ. ಜಯರಾಮ ಅಡಿಗ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಷ್ಟ್ರೀಕೃತ ಬ್ಯಾಂಕುಗಳಂತೆ ಆಧುನಿಕ ವ್ಯವಸ್ಥೆಗಳನ್ನು ಅಳವಡಿಸಿಕೊಂಡು ಸಕಾಲದಲ್ಲಿ ಗ್ರಾಹಕರಿಗೆ ಉತ್ತಮ ಸೇವೆ ಕೊಡುವ ಉದ್ದೇಶದಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರಂಭಗೊಂಡ ಸಹಕಾರಿ ಸಂಘಗಳು ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚಿನ ಸೌಲಭ್ಯಗಳ ಜತೆಗೆ ಬ್ಯಾಂಕಿಂಗ್ ಸೇವೆ ನೀಡುತ್ತಿದೆ ಎಂದು ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ನಾವುಂದದಿಂದ ಕುಂದಾಪುರ ಶಾಸ್ತ್ರಿಸರ್ಕಲ್ ಬಳಿಯ ಗೋವಿಂದ್ರಾಯ ಕಾಂಪ್ಲೆಕ್ಸ್‌ಗೆ ಸ್ಥಳಾಂತರಗೊಂಡ ಗೋಪಾಲಕೃಷ್ಣ ವಿವಿಧೋದ್ಧೇಶ ಸೇವಾ ಸಹಕಾರಿ ಸಂಘದ ನೂತನ ಪ್ರಧಾನ ಕಛೇರಿ ಉದ್ಘಾಟಿಸಿ ಮಾತನಾಡಿದರು. ಸೇವೆಗೆ ಇನ್ನೊಂದು ಹೆಸರು ಸಹಕಾರಿಯಾಗಿದ್ದು, ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿನ ಜನರಿಗೆ, ಕೃಷಿಕರಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಭಾಗದ ಸಹಕಾರಿ ಸಂಸ್ಥೆಗಳು ಆರ್ಥಿಕ ಹಾಗೂ ಸಾಮಾಜಿಕವಾಗಿ ತೊಡಗಿಸಿಕೊಂಡಿದೆ. ಎಲ್ಲಾ ವರ್ಗದ ಜನರನ್ನು ಉತ್ತಮ ರೀತಿಯಲ್ಲಿ ಸ್ಪಂದಿಸುವ ಜತೆಗೆ ಉದ್ಯೋಗಾವಕಾಶಗಳು ಕೂಡಾ ಹೆಚ್ಚಲು ಸಹಕಾರಿಯಾಗುತ್ತಿದೆ. ಕೇವಲ ಲಾಭದ ದೃಷ್ಠಿಗಿಂತ ಮುಖ್ಯವಾಗಿ ಸಹಕಾರಿ ತತ್ವಗಳನ್ನು ಅಳವಡಿಸಿಕೊಂಡು ಸೇವೆಗೆ ಹೆಚ್ಚು ಮಹತ್ವ ಕೊಡುವುದರ ಮೂಲಕ…

Read More