Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋಣಿಯ ಮಾತಾ ಮಾಂಟೆಸ್ಸೋರಿಯ ಪುಟಾಣಿಗಳಿಂದ ’ಕಲಾಂ’ರಿಗೊಂದು ’ಸಲಾಂ’ ಕಾರ್ಯಕ್ರಮ ಜರುಗಿತು. ದೇಶ ಕಂಡ ಅಪ್ರತಿಮ ವಿಜ್ಞಾನಿ, ಸರಳ ಸಜ್ಜನಿಕೆಯ ಸರದಾರ, ಜನರ ರಾಷ್ಟ್ರಪತಿ ಎಂದು ಖ್ಯಾತರಾದ ಎ.ಪಿ.ಜೆ ಅಬ್ದುಲ್ ಕಲಾಂರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ನಮಿಸುವುದರ ಮೂಲಕ ಮಾತಾ ಮಂಟೊಸೊರಿಯ ಚಿಣ್ಣರು ಕಲಾಂರಿಗೆ ಗೌರವ ಸಲ್ಲಿಸಿದರು. ಆ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್‌ಚಂದ್ರ ಶೆಟ್ಟಿ ಚಿತ್ತೂರು ಇವರು ಮಾತನಾಡಿ, ಕಲಾಂ ಜಿಯವರ ಬದುಕಿನ ಆದರ್ಶಗಳು ನಮಗೆ ದಾರಿ ದೀಪವಾಗಬೇಕು. ಅವರ ಹೆಜ್ಜೆಯ ಗುರುತುಗಳು ನಮ್ಮ ಯಶಸ್ಸಿನ ಪಥವಾಗಬೇಕು ಎಂದರು. ಕಲಾಂ ರ ಬಾಲ್ಯದ ಕಥೆಗಳನ್ನು ಪುಟಾಣಿಗಳಿಗೆ ವಿವರಿಸಿದ ಅವರು ನೀವೂ ಕೂಡ ಕಲಾಂ ರಂತಾಗಬೇಕು ಎಂದು ಕರೆ ನೀಡಿದರು. ಆ ಸಂದರ್ಭದಲ್ಲಿ ಮಾತಾ ಮೊಂಟೆಸರಿಯ ಪ್ರಾಶುಂಪಾಲರು, ಶಿಕ್ಷಕಿಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದದಲ್ಲಿರುವ ಮಂತ್ರಾಲಯ ಶಾಖಾ ಮಠದದಲ್ಲಿ ಶ್ರಿಗುರು ಸಾರ್ವಭೌಮ ಶ್ರೀ ರಾಘವೇಂದ್ರ ಸ್ವಾಮಿಗಳ ೩೪೬ನೇ ಆರಾಧನ ಮಹೋತ್ಸವ ವೈಭವದಿಂದ ನಡೆಯಿತು. ಬೆಳಿಗ್ಗೆಯಿಂದ ಪಂಚಾಮೃತ ಅಭಿಷೇಕ, ಅರ್ಚನೆ, ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಿತು. ಸುಮಾರು ಎರಡು ಸಾವಿರಕ್ಕೂ ಅಧಿಕ ಭಕ್ತಾದಿಗಳು ಮಠಕ್ಕೆ ಆಗಮಿಸಿ ಗುರುಗಳ ಪಾದಪೂಜೆಗೈದು ಸಂತೃಪ್ತರಾದರು. ಮಧ್ಯಾಹ್ನ ಮಹಾಅನ್ನಸಂತರ್ಪಣೆ ಹಾಗೂ ರಾತ್ರಿ ವಿಶೇಷ ಹೂವಿನ ಪೂಜೆ, ಪಲ್ಲಕ್ಕಿ ಸೇವೆ ನಡೆಯಿತು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ನಾವುಂದ ಗ್ರಾಮದ ಪಡುವಾಯಿನ ಮನೆ ಎಂಬಲ್ಲಿ ಒಬ್ಬಂಟಿಯಾಗಿ ನೆಲೆಸಿದ್ದ ಮಾಧವ ಪೂಜಾರಿ (62) ಎಂಬುವವರನ್ನು ಹಣ ಹಾಗೂ ಚಿನ್ನದ ಆಸೆಗೆ ಕಡಿದು ಕೊಲೆಗೈದು ಬಂಧಿತನಾಗಿದ್ದ ನರಸಿಂಹ ನಾಯ್ಕ್ (47) ಎಂಬಾತನಿಗೆ ಇಂದು ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಪ್ರಕಾಶ್ ಕೆ. ಅವರು ಕೊಲೆ ಆರೋಪಿಗೆ ಕೊನೆಯುಸಿರಿರುವ ತನಕ ಜೀವಾವಧಿ ಶಿಕ್ಷೆ ಹಾಗೂ 80 ಸಾವಿರ ರೂ. ದಂಡ ವಿಧಿಸಿದೆ. 2016 ಮಾಚ್ 19ರಂದು ಒಬ್ಬಂಟಿಯಾಗಿ ವಾಸಿಸುತ್ತಿದ್ದ ಮಾಧವ ಪೂಜಾರಿ ಅವರನ್ನು ಕೊಲೆಗೈದಿದ್ದ ನರಸಿಂಹ ನಾಯ್ಕ್ ಎಂಬುವವನನ್ನು ಪೊಲೀಸರು ಮೂರು ದಿನದಲ್ಲಿ ಬಂಧಿಸಿದ್ದರು. ಕೊಲೆ ಮಾಡಲು ಬಳಸಿದ್ದ ಕತ್ತಿ ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು. ಆತನ ಮುಖದ ಮೇಲಿದ್ದ ಗಾಯದ ಗುರುತು, ಕತ್ತಿನಲ್ಲಿದ್ದ ರಕ್ತದ ಕಲೆ ಮಾದರಿ ಹಾಗೂ ಬನಿಯಾನ್‌ನಲ್ಲಿದ್ದ ಮೃತ ವ್ಯಕ್ತಿಯ ರಕ್ತದ ಕಲೆ ಪ್ರಕರಣಕ್ಕೆ ಪೂರಕ ಸಾಕ್ಷ್ಯ ಒದಗಿಸಿದ್ದವು. ಈ ಹಿಂದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಮನುಷ್ಯನಲ್ಲಿನ ಅನುಭವದ ಹೂರಣವನ್ನು ಹೊರತರುವಲ್ಲಿ ಕಾಲೇಜಿನ ವಾರ್ಷಿಕ ಸಂಚಿಕೆಗಳು ಬಹಳ ಸಹಕಾರಿ. ವ್ಯವಹಾರಿಕ ಬದುಕಿನಲ್ಲಿ ಉದ್ಯಮಶೀಲತೆಯ ಜೊತೆಗೆ ಕ್ರಿಯಾಶೀಲತೆ ಮತ್ತು ಸೃಜನ ಶೀಲತೆಯನ್ನು ಬೆಳೆಸಿಕೊಳ್ಳಲು ಅವು ಸಹಾಯ ಮಾಡುತ್ತವೆ ಎಮದು ಕೋಟೇಶ್ವರ ವರದರಾಜ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ರಾಜೇಂದ್ರ ನಾಯಕ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಕಳೆದ ಸೋಮವಾರ ನಡೆದ ಸಮಾರಂಭದಲ್ಲಿ ಕಾಲೇಜಿನ ವಾರ್ಷಿಕ ಸಂಚಿಕೆ ದೃಷ್ಟಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಗಳು ಸಾಹಿತ್ಯಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮುಖೇನ ತಮ್ಮ ಜ್ಞಾನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕು ಎಂದು ಅವರು ಹೇಳಿದರು. ಮುಖ್ಯ ಅತಿಥಿಗಳಾಗಿ ಜಿ.ಎಸ್.ವಿ.ಎಸ್ ಅಸೋಷಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ , ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕಾರ‍್ಯದರ್ಶಿ ಎನ್ ಸದಾಶಿವ ನಾಯಕ್ ಉಪಸ್ಥಿತರಿದ್ದರು.ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಉಪನ್ಯಾಸಕ ಸುಜಯೀಂದ್ರ ಹಂದೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಆಂಗ್ಲ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ., ಬೈಂದೂರು: ಧರ್ಮಶ್ರೀ ರಿಲೀಫ್ ಫೌಂಡೇಶನ್ ಮಟ್ನಕಟ್ಟೆ ಕೆರ್ಗಾಲ್ ಇವರಿಂದ ನಾಯ್ಕನಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ಕೊಡುಗೆಯಾಗಿ ನೀಡಲಾಯಿತು. ಆ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಈಶ್ವರ ಶೇರೆಗಾರ್, ಗ್ರಾಮಪಂಚಾಯತ್ ಅಧ್ಯಕ್ಷರಾದ ಸೋಮು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಾಜು ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ರಾಘವೇಂದ್ರ ಪೂಜಾರಿ, ದೈಹಿಕ ಶಿಕ್ಷಕರಾದ ವಿಷ್ಣು ಕೆ.ಬಿ., ಹಳೆವಿದ್ಯಾರ್ಥಿ ಸಂಘದವರು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

Read More

ಮಾತು ಕಥೆ ಖಾದ್ಯದೊಂದಿಗೆ ಜರುಗಿತು ಸಸ್ಯಾಮೃತ ಸಂಭ್ರಮ. ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ತಾಲೂಕಿನ ವಕ್ವಾಡಿ ಗುರುಕುಲ ಶಿಕ್ಷಣ ಸಂಸ್ಥೆಯಲ್ಲಿ ತುಂಬೆಲ್ಲಾ ಭಾನುವಾರ ವಿವಿಧ ಖಾದ್ಯಗಳ ಘಮ. ಸಾಂಪ್ರದಾಯಿಕ ಹಾಗೂ ಔಷಧಿಯ ಗುಣಗಳುಳ್ಳ ಸಸ್ಯಗಳಿಂದ ತಯಾರಾದ ವಿವಿಧ ಬಗೆಯ ಸವಿಯಾದ ಶುಚಿರುಚಿಯಾದ ತಿನಿಸುಗಳು ಬಾಯಲ್ಲಿ ನೀರುರಿಸುತ್ತಿದ್ದವು. ಗುಣಮಟ್ಟದ ಶಿಕ್ಷಣದೊಂದಿಗೆ ಸದಾ ಹೊಸತನ ಆಲೋಚನೆಗಳನ್ನು ಅಚ್ಚುಕಟ್ಟಾಗಿ ಅನುಷ್ಠಾನಗೊಳಿಸುವ ಬಾಂಡ್ಯ ಎಜ್ಯುಕೇಶನ್ ಟ್ರಸ್ಟ್‌ನ ವಕ್ವಾಡಿಯ ಗುರುಕುಲ ವಿದ್ಯಾಸಂಸ್ಥೆ ಪಠ್ಯದ ಜತೆಗೆ ಆಹಾರ, ಕ್ರೀಡೆ, ಸಂಸ್ಕ್ರತಿ, ಕಲೆ, ಸಾಹಿತ್ಯ, ಆರೋಗ್ಯ ಮೊದಲಾದ ಪಠ್ಯೇತರ ಕಾರ‍್ಯಕ್ರಮಗಳನ್ನೂ ನಿಯಮಿತವಾಗಿ ಆಯೋಜಿಸಿ ವಿದ್ಯಾರ್ಥಿಗಳಲ್ಲೊಂದು ನಾವಿನ್ಯತೆಯನ್ನು ತುಂಬುತ್ತಾ ಬದುಕಿನ ಪಾಠ ಕಲಿಸುತ್ತಿದೆ. ಆಷಾಢ ಮಾಸದ ಆಸುಪಾಸಿನಲ್ಲಿ ದೇಸಿ ಶೈಲಿಯ ಆಹಾರ ಕ್ರಮದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ’ಸಸ್ಯಾಮೃತ’ ಆಯೋಜಿಸಿದ್ದ ಕಾರ್ಯಕ್ರಮ ಸಂಸ್ಥೆಯ ಕ್ರೀಯಾಶೀಲ ಪ್ರಯೋಗಗಳಲ್ಲೊಂದು. ಸಸ್ಯ ಪದಾರ್ಥಗಳ ಸವಿ: ಶುಂಠಿ ಲಿಂಬು ಕಷಾಯ, ಕಣಲೆ – ಧಾರೆಹುಳಿ, ಉಪ್ಪಿನಕಾಯಿ, ಈರುಳ್ಳಿ ಸೊಪ್ಪಿನ ಕೋಸಂಬರಿ, ಸಾಂಬಾರ್ ಸೊಪ್ಪಿನ ಚಟ್ನಿ, ಕೆಸುವಿನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಮಹಿಳಾ ಮಂಡಳದ ವತಿಯಿಂದ ಸ್ವರ್ಣಮುಖಿ ರಂಗ ಮಂದಿರದಲ್ಲಿ ಮಕ್ಕಳಿಗೆ ಮುದ್ದು ರಾಧಾಕೃಷ್ಣ ಸ್ಪರ್ಧೆ ನಡೆಸಲಾಯಿತು. ತೀರ್ಪುಗಾರರಾಗಿ ಕೊಲ್ಲೂರು ಪ್ರಾಥಮಿಕ ಶಾಲಾ ಶಿಕ್ಷಕರಾದ ಕೃಷ್ಣ ಜಿ ಹಾಗೂ ಮಹಿಳಾ ಮಂಡಳದ ಮಾಜಿ ಅಧ್ಯಕ್ಷರಾದ ಲಲಿತಾಹಂದೆ ಯವರು ಹಾಗೂ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಗ್ರೀಷ್ಮಾ ಗಿರಿಧರ ಬಿಢೆ ಹಾಗೂ ಕೊಲ್ಲೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನೇತ್ರಾವತಿ ಆಚಾರಿ ಮತ್ತು ಮಹಿಳಾ ಮಂಡಳದ ಅಧ್ಯಕ್ಷೆಯಾದ ಶ್ರೀಮತಿ ಪ್ರಸನ್ನ ಶರ್ಮಾ ಹಾಗೂ ಉಪಾಧ್ಯಕ್ಷರಾದ ಲತಾ ಹಾಗೂ ಕಾರ್ಯದರ್ಶಿ ಸುಶೀಲಾ ಹೆಬ್ಬಾರ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಕೊಲ್ಲೂರು ಜೀಪು ಚಾಲಕ ಹಾಗೂ ರಿಕ್ಷಾ ಚಾಲಕರು ಮತ್ತು ಟ್ಯಾಕ್ಸಿ ಚಾಲಕರ ವತಿಯಿಂದ ಮತ್ತು ವಿಧಾತ್ರಿ ವಸತಿಗೃಹದ ಮಾಲಿಕರು ಬಹುಮಾನ ವಿತರಣೆಯ ಪ್ರಾಯೋಜಕರಾಗಿದ್ದು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಲೇಖನ. ಕರಾವಳಿ ಭಾಗದಲ್ಲಿ ಮುಖ್ಯವಾಗಿ ಗೌಡಸಾರಸ್ವತ ಬ್ರಾಹ್ಮಣ ಸಮಾಜದ ಮುತ್ತೈದೆಯರಿಗೆ ವರ್ಷದ ಉಳಿದ ಎಲ್ಲ ಮಾಸಗಳಿಗಿಂತ ಶ್ರಾವಣಮಾಸ ಪ್ರಮುಖವಾದದ್ದು. ಅದಕ್ಕೆ ಕಾರಣ ಅವರು ಶ್ರಾವಣಮಾಸ ಪೂರ್ತಿ ಶುಕ್ರವಾರ ಹಾಗೂ ಭಾನುವಾರ ಮಾಡುವ ಚೂಡಿ ಪೂಜೆ. ಮುತ್ತೈದೆಯರು ಚೂಡಿ ಪೂಜೆ ಮಾಡುವುದು ತುಳಸಿ ಗಿಡಕ್ಕೆ. ತುಳಸಿಯ ತೌರುಮನೆ ಗಂಗಾನದಿ ಎನ್ನುವ ನಂಬಿಕೆಯೂ ಇದೆ. ಇದು ಕರಾವಳಿ ಭಾಗದಲ್ಲಿ ಆಚರಿಸಲ್ಪಡುವ ವಿಶಿಷ್ಟವಾದ ಸಂಪ್ರದಾಯಗಳಲ್ಲೊಂದು. ಮನೆಯ ಮುಂದೆ ತುಳಸಿಕಟ್ಟೆ ಕಟ್ಟಿ, ಅದರಲ್ಲಿ ಹುಲುಸಾಗಿ ಬೆಳೆದ ತುಳಸಿಗಿಡ ನೆಟ್ಟು ಪ್ರತಿದಿವಸ ಅದರ ದರ್ಶನ ಮಾಡುತ್ತಿದ್ದರೆ ಸರ್ವದೋಷಗಳ ನಿವಾರಣೆಯಾಗುವುದಂತೆ. ಯಾವುದೇ ರೀತಿಯ ಅನಿಷ್ಟ, ಕೆಟ್ಟ ದೃಷ್ಟಿ ಇದ್ದರೂ ಪರಿಹಾರವಾಗುವುದೆನ್ನುವ ನಂಬಿಕೆ ಶ್ರದ್ಧಾವಂತರಿಗಿದೆ. ಇದರಿಂದ ಅನೇಕ ಆರೋಗ್ಯದ ಲಾಭಗಳೂ ಉಂಟು. ತುಳಸಿ ಎಲೆಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಶರೀರದೊಳಗಿನ ಕಲ್ಮಶವೆಲ್ಲವೂ ವಿಸರ್ಜನೆಯಾಗಿ ಶರೀರ ಸ್ವಚ್ಛವಾಗುವುದು. ತುಳಸಿಯಿಂದ ಮನೆಯ ಸುತ್ತಲಿನ ವಾತಾವರಣದಲ್ಲಿ ಪರಿಶುದ್ಧ ಪ್ರಾಣವಾಯು ಆಮ್ಲಜನಕ ವಿಪುಲವಾಗಿ ದೊರಕುತ್ತದೆ. ಅಲ್ಲದೆ ತುಳಸಿ ಕ್ರಿಮಿನಾಶಕವೂ ಹೌದು! ಚರ್ಮರೋಗ, ವಾತ, ಗಂಟಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಮೀನುಗಾರಿಕೆ ಮುಗಿಸಿ ದಡಕ್ಕೆ ಬರುತ್ತಿದ್ದ ಮೀನುಗಾರನೋರ್ವ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಭಾನುವಾರ ಮಧ್ಯಾಹ್ನ ಗಂಗೊಳ್ಳಿಯ ಖಾರ್ವಿಕೇರಿ ಎಂಬಲ್ಲಿ ನಡೆದಿದೆ. ಗಂಗೊಳ್ಳಿ ಖಾರ್ವಿಕೇರಿ ನಿವಾಸಿ ಜಿ.ನಾಗರಾಜ ಖಾರ್ವಿ (೪೫) ಮೃತಪಟ್ಟ ಮೀನುಗಾರ. ಅವರು ಭಾನುವಾರ ಮಧ್ಯಾಹ್ನ ದೋಣಿಯಲ್ಲಿ ಮೀನುಗಾರಿಕೆ ಮುಗಿಸಿಕೊಂಡು ವಾಪಾಸು ಬರುತ್ತಾ ಸಮುದ್ರದ ದಡದಲ್ಲಿ ದೋಣಿಯಲ್ಲಿ ಏಕಾಏಕಿ ಕುಸಿದು ಬಿದ್ದರು. ಕೂಡಲೇ ಕುಂದಾಪುರದ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಗಂಗೊಳ್ಳಿ ಕೊಂಕಣಿ ಖಾರ್ವಿ ಮಾರ್ಕೇಟಿಂಗ್ ಸಮಿತಿ, ಗಂಗೊಳ್ಳಿ ಕೊಂಕಣಿ ಖಾರ್ವಿ ಸಮಾಜದ ನಿರ್ದೇಶಕರಾಗಿ, ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾಗಿ, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯ ಶಿಕ್ಷಕ-ರಕ್ಷಕ ಸಮಿತಿ ಸದಸ್ಯರಾಗಿ, ಖಾರ್ವಿಕೇರಿ ಶ್ರೀ ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರ ಸಂಘದ ಕೋಶಾಧಿಕಾರಿಯಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಬೈಂದೂರು 2016-17ನೇ ಸಾಲಿನಲ್ಲಿ ಒಟ್ಟು 41 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿ 44.34 ಲಕ್ಷ ರೂ. ಲಾಭಗಳಿಸಿದೆ. ಹಿಂದಿನ ಆರ್ಥಿಕ ವರ್ಷಗಳಿಗಿಂತ ಸಂಸ್ಥೆಯು ಉತ್ತಮ ಪ್ರಗತಿ ಸಾಧಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು. ಭಾನುವಾರ ಸಂಘದ ಪ್ರಧಾನ ಕಛೇರಿಯಲ್ಲಿ ಜರುಗಿದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಸಹಕಾರಿಯು 2016-17ನೇ ಸಾಲಿನಲ್ಲಿ ರೂ. 9.19 ಕೋಟಿ ಠೇವಣಿ ಹೊಂದಿದ್ದು 9.53 ಕೋಟಿ ಸಾಲ ನೀಡಿ ಪ್ರಸ್ತುತ ವರ್ಷದಲ್ಲಿ 41 ಕೋಟಿಯಷ್ಟು ವಹಿವಾಟು ನಡೆಸಿದೆ. ಸದಸ್ಯರಿಗೆ ಶೇ.13 ಡಿವಿಡೆಂಟ್ ಘೋಷಿಸಿದೆ ಎಂದರು. ಕಳೆದ ಸಾಲಿನ ಕಾರ್ಯಯೋಜನೆಯಲ್ಲಿ ನಿಗದಿಪಡಿಸಿದ ಠೇವಣಿ, ಸಾಲ, ಅನುತ್ಪಾದಕ ಸಾಲ, ಸುಸ್ತಿ ಸಾಲ ಹಾಗೂ ಮುಂಗಡ ಲಾಭಗಳಿಕೆಯಲ್ಲಿ ನಿಗದಿತ ಗುರಿಯನ್ನು ಮೀರಿ ಸಂಸ್ಥೆ ಮುನ್ನಡೆಯುತ್ತಿದ್ದರೇ, ಗ್ರಾಹಕರ ಸಹಕಾರ, ನಿಧಿಗಳ ಸಮರ್ಪಕ ನಿರ್ವಹಣೆ, ಸಾಲಗಳ ವಿತರಣೆ ಹಾಗೂ ಸಮಯೋಜಿತ ಹೂಡಿಕೆಗಳಿಂದಾಗಿ ಸಂಘವು ನಿರೀಕ್ಷೆಗೂ…

Read More