Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಹಿತ್ಯದ ರಚನೆ ಸ್ವಹಿತಾಸಕ್ತಿಯಿಂದ ಕೂಡಿರದೆ, ಅದರಿಂದ ಸಮಾಜ ಸುಧಾರಣೆ ಹಾಗೂ ವ್ಯಕ್ತಿತ್ವ ವಿಕಸನವಾಗಬೇಕೆಂಬ ತುಡಿತ ಪ್ರತಿಯೊಬ್ಬ ಶ್ರೇಷ್ಠ ಸಾಹಿತಿಯದ್ದಾಗಿರುತ್ತದೆ. ಮೌಲ್ಯಾಧಾರಿತ ಬರಹಗಳು ಜಾತಿ, ಧರ್ಮದ ಎಲ್ಲೆ ಮೀರಿ ಸಾರ್ವಕಾಲಿಕವಾಗಿ ಪ್ರಸ್ತುತವಾಗಿರುತ್ತವೆ. ಸಾಮಾಜಿಕ ಕಳಕಳಿಯಿಂದ ಕೂಡಿದ ಸಾಹಿತ್ಯ ರಚಿಸಿದ ಮೊಗೇರಿ ಗೋಪಾಲಕೃಷ್ಣ ಅಡಿಗರ ದೂರದೃಷ್ಟಿ ಇಂದಿನ ಯುವಪೀಳಿಗೆಗೆ ದಾರಿದೀಪವಾಗಿದೆ ಎಂದು ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್ ಹೇಳಿದರು. ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಬೈಂದೂರು ಇವರ ಸಹಯೋಗದಲ್ಲಿ ನಡೆದ ಪ್ರೋ. ಮೊಗೇರಿ ಗೋಪಾಲಕೃಷ್ಣ ಅಡಿಗರ ಜನ್ಮ ಶತಾಬ್ದ ಸರಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಧುನಿಕತೆಯ ಮೋಡಿಯಲ್ಲಿ ಇಂದು ಯುವಜನಾಂಗ ಕಲೆ, ಸಾಹಿತ್ಯ, ಸಂಗೀತ ಮೊದಲಾದುವುಗಳಿಂದ ದೂರವಾಗುತ್ತಿದೆ. ಸ್ಪಷ್ಟವಾದ ಗುರಿಯಾಗಲೀ, ಪರಿಪೂರ್ಣವಾದ ಜ್ಞಾನಪ್ರಾಪ್ತಿ ಕಡೆಗಾಗಲೀ ಯೋಚಿಸದೆ ಕೇವಲ ಪದವಿ ಪಡೆಯುವ ವ್ಯಾಮೋಹ ಹೆಚ್ಚುತ್ತಿದೆ. ಬದುಕಿನಲ್ಲಿ ಹೋರಾಟದ ಮನೋಭಾವನೆ ಬೆಳೆಸಿಕೊಂಡು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶಾಸ್ತ್ರಿ ವೃತ್ತದಲ್ಲಿ ಕುಂದಾಪುರ ಪೊಲೀಸ್ ಠಾಣಾಧಿಕಾರಿ ನಾಸೀರ್ ಹುಸೇನ್ ಅವರ ವಿರುದ್ಧ ಹಿಂದೂ ಜಾಗರಣಾ ವೇದಿಕೆ ಸೇರಿದಂತೆ ಪರಿವಾರ ಸಂಘಟನೆಗಳು ಆಯೋಜಿಸಿದ್ದ ಪ್ರತಿಭಟನೆಗೆ ಪೊಲೀಸರು ತಡೆಯೊಡ್ಡಿದ್ದು, ಪೂರ್ವನುಮತಿಯಿಲ್ಲದೇ ಪ್ರತಿಭಟನೆಗೆ ಮಾಡುತ್ತಿದ್ದಾರೆಂಬ ಕಾರಣವೊಡ್ಡಿ ಪ್ರತಿಭಟನೆಗೆ ಮುಂದಾದ ಮುಖಂಡರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದ ಘಟನೆ ನಡೆಯಿತು. [quote bgcolor=”#ffffff” arrow=”yes” align=”right”]ಪ್ರಕರಣದ ಹಿನ್ನೆಲೆ ಏನು? ಉಡುಪಿಯ ಕಾಲೇಜೊಂದರಲ್ಲಿ ಓದುತ್ತಿರುವ ಕಾಪು ಮೂಲದ ಅನ್ಯಕೋಮಿನ ಮೂವರು ಯುವತಿಯರು ಹಾಗೂ ಇಬ್ಬರು ಯುವಕರು ಕಾರಿನಲ್ಲಿ ಬೈಂದೂರಿಗೆ ತೆರಳಿ ಅಲ್ಲಿಂದ ಮರವಂತೆಗೆ ಬಂದಿದ್ದರು. ಮರವಂತೆ ಬೀಚ್ ಬಳಿ ವಿದ್ಯಾರ್ಥಿಗಳ ವರ್ತನೆಯನ್ನು ಗಮನಿಸುತ್ತಿದ್ದ ಸಂಘಟನೆ ಕಾರ‍್ಯಕರ್ತರು, ಅವರು ಕಾರಿನಲ್ಲಿ ಹಿಂದಿರುಗುತ್ತಿದ್ದಾಗ ಹಿಂಬಾಲಿಸಿ ಕೋಟೇಶ್ವರ ಸಂಘಟನೆಗೆ ಮಾಹಿತಿ ನೀಡಿದ್ದರು. ಕೋಟೇಶ್ವರದಲ್ಲಿ ಕಾರ್ಯಕರ್ತರು ಕಾರನ್ನು ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದರು. ವಿಚಾರಣೆ ಬಳಿಕ ವಿದ್ಯಾರ್ಥಿಗಳ ತಪ್ಪಿಲ್ಲ ಎಂದು ಪೊಲೀಸರು ತಿಳಿಸಿದಾಗ, ಸಂಘಟನೆಯ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಸಂದರ್ಭ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೈಸೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ನೆಟ್‌ಬಾಲ್ ಪಂದ್ಯಾವಳಿಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ಬಾಲಕ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳೊಂದಿಗೆ ದೈಹಿಕ ಶಿಕ್ಷಣ ಉಪನ್ಯಾಸಕರಾದ ಸುಕೇಶ್ ಶೆಟ್ಟಿ ಹೊಸಮಠ ಮತ್ತು ಗ್ರಾಮ ಪಂಚಾಯತ್ ಸದಸ್ಯರಾದ ಪ್ರಕಾಶ್ ಪೂಜಾರಿ ಹಾಗೂ ಸಂಸ್ಥೆಯ ಹಳೆ ವಿದ್ಯಾರ್ಥಿ ಅವಿನಾಶ್ ಆಚಾರ್ಯ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಇಲ್ಲಿನ ಪ್ರತಿಷ್ಠಿತ ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸಾಯನ್ಸ್ ಕಾಲೇಜಿಗೆ ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಸಮಿತಿ (ನ್ಯಾಕ್)ಯಿಂದ 4 ಅಂಕದಲ್ಲಿ 3.32 ಅಂಕದೊಂದಿಗೆ ‘ಎ’ ಶ್ರೇಣಿ ದೊರೆತಿದ್ದು ಕಾಲೇಜಿನ ಕೀರ್ತಿ ಮುಕುಟಕ್ಕೊಂದು ಗರಿ ಸೇರಿದಂತಾಗಿದೆ. ಈ ಬಗ್ಗೆ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಪ್ರಾಂಶುಪಾಲರಾದ ಡಾ. ಎನ್. ಪಿ ನಾರಾಯಣ ಶೆಟ್ಟಿ ಮಾತನಾಡಿ, ಕಾಲೇಜಿನ ಸಮಗ್ರ ಗುಣಮಟ್ಟವನ್ನು ಪರಿಶೀಲಿಸಿ ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಸಮಿತಿ ’ಎ’ ಶ್ರೇಣಿಯ ಮಾನ್ಯತೆ ನೀಡಿದೆ. ಇದರೊಂದಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಸ್ವಾಯತ್ತ ಕಾಲೇಜುಗಳನ್ನು ಹೊರತುಪಡಿಸಿದರೆ, ಭಂಡಾರ್ಕಾರ್ಸ್ ಅತ್ಯುತ್ತಮ ಗುಣಮಟ್ಟ ಹೊಂದಿರುವ ಕಾಲೇಜು ಎಂಬ ಕೀರ್ತಿಯನ್ನು ಗಳಿಸಿಕೊಂಡಿದೆ ಎಂದು ತಿಳಿಸಿದರು. ಭಂಡಾರ್ಕಾರ್ಸ್ ಕಾಲೇಜಿನ ಸಮಗ್ರ ಶೈಕ್ಷಣಿಕ ಗುಣಮಟ್ಟ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ಪರಿಗಣಿಸಿ ನ್ಯಾಕ್ ಸಮಿತಿ ಅಂಕಗಳನ್ನು ನೀಡುತ್ತದೆ. ಕಳೆದ ಆರು ವರ್ಷಗಳ ಹಿಂದೆ ಕಾಲೇಜಿಗೆ ‘ಎ’ ಗ್ರೇಡ್‌ನೊಂದಿಗೆ 3.24 ಅಂಕಗಳೊಂದಿಗೆ ನ್ಯಾಕ್ ಮಾನ್ಯತೆ ದೊರತಿತ್ತು. ಈ ಭಾರಿ ಮರುಮೌಲ್ಯಮಾಪನದಲ್ಲಿ ನ್ಯಾಕ್‌ನಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಖಿಲ ಭಾರತೀಯ ರಾಹುಲ್ ಗಾಂಧಿ ಬ್ರಿಗೇಡ್ ಕಾಂಗ್ರೆಸ್ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ರಟ್ಟಾಡಿಯ ಸಂಪತ್ ಕುಮಾರ್ ಶೆಟ್ಟಿ ಅವರು ನೇಮಕಗೊಂಡಿದ್ದಾರೆ. ಜಿಲ್ಲಾ ಯುವ ಕಾಂಗ್ರೆಸ್ ಸಂಘಟನೆಯಲ್ಲಿ ಸಕ್ರಿಯವಾಗಿರುವ ಸಂಪತ್ ಕುಮಾರ್ ಶೆಟ್ಟಿ ಅವರನ್ನು ಅಖಿಲ ಭಾರತೀಯ ರಾಹುಲ್ ಗಾಂಧಿ ಬ್ರಿಗೇಡ್ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಚೇತನ್ ಚಾಮನ್ ಅವರು ಆಯ್ಕೆ ಮಾಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಸಿದ್ದಾಪುರ: ಹುಟ್ಟಿದ ಪ್ರತಿಯೊಬ್ಬರಿಗೂ ಸಾಮಾಜಿಕ ಋಣಗಳು ಇರುತ್ತವೆ. ಒಬ್ಬೋಬರು ಒಂದೊಂದು ರೀತಿಯಲ್ಲಿ ಋಣಗಳನ್ನು ತೀರಿಸುತ್ತಾರೆ. ಸಮಾಜದಿಂದ ಸಾಕಷ್ಟು ಪಡೆದಿದ್ದೇವೆ. ಸಮಾಜದಿಂದ ಪಡೆದುದರಲ್ಲಿ ಸ್ವಲ್ಪವಾದರು ಸಮಾಜಕ್ಕೆ ಕೊಡಬೇಕು. ಕೊಡುವುದರಲ್ಲಿ ಇರುವ ಸುಖ ಪಡೆಯುದರಲ್ಲಿ ಇಲ್ಲ ಎಂದು ಎಂದು ಬೆಳ್ವೆ ಸಂದೇಶ್ ಕಿಣಿ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಅಧ್ಯಕ್ಷ ಬಿ. ಸತೀಶ್ ಕಿಣಿ ಬೆಳ್ವೆ ಅವರು ಹೇಳಿದರು. ಅವರು ಬೆಳ್ವೆ ಸಂದೇಶ್ ಕಿಣಿ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ (ರಿ.) ಬೆಳ್ವೆ, ಲಯನ್ಸ್ ಕ್ಲಬ್ ಸಂತೆಕಟ್ಟೆ, ಕಸ್ತೂರ್ಬಾ ಹಾಸ್ಪಿಟಲ್ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಫೌಂಡೇಶನ್ ಸಭಾಂಗಣದಲ್ಲಿ ಸೆ.೧೦ರಂದು ನಡೆದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದರು. ಸಂಘ-ಸಂಸ್ಥೆಗಳು ಜನರ ಆರೋಗ್ಯ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಮಹತ್ವವನ್ನು ಪಡೆಯುತ್ತವೆ. ಜನತೆ ಇಂತಹ ಕಾರ್ಯಕ್ರಮಗಳಲ್ಲಿ ದೊರೆಯುವ ಸೌಲಭ್ಯಗಳ ಸದುಪಯೋಗ ಪಡೆಯ ಬೇಕು. ಉಚಿತವಾಗಿ ನೀಡುವ ಆರೋಗ್ಯ ತಪಾಸಣೆ ಹಾಗೂ ವೈದ್ಯಕೀಯ ಸೇವೆಗಳ ಬಗ್ಗೆ ಜನತೆ ಕೀಳರಿಮೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೆದೂರಿನ ಪ್ರತಿಭಾನ್ವಿತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿ ನಿರಂಜನ ಶೆಟ್ಟಿಗೆ ವೈದ್ಯಕೀಯ ಶಿಕ್ಷಣಕ್ಕೋಸ್ಕರ ರೂ ೧ ಲಕ್ಷವನ್ನು ಕುಂದಾಪುರ ಲಯನ್ಸ್ ಹಾಗೂ ಲಯನೆಸ್ ಕ್ಲಬ್ ವತಿಯಿಂದ ನೀಡಲಾಯಿತು. ಚೆಕನ್ನು ಹಿರಿಯ ವೈದ್ಯ ಹಾಗೂ ಹಿರಿಯ ಸದಸ್ಯ ಲಯನ್ ಡಾ| ಎಂ. ವಿ. ಕುಲಾಲ ಹಸ್ತಾಂತರಿಸಿದರು. ಸಮಾರಂಭದಲ್ಲಿ ಅತಿಥಿ ಡಾ| ಆದರ್ಶ ಹೆಬ್ಬಾರ್, ಕ್ಲಬಿನ ಅಧ್ಯಕ್ಷ ಲಯನ್ ಎ.ಮೋಹನ ಶೆಟ್ಟಿ, ಕಾರ್ಯದರ್ಶಿ ನವೀನ ಕುಮಾರ ಶೆಟ್ಟಿ, ಕೋಶಾಧಿಕಾರಿ ಪ್ರಜ್ಞೇಶ್ ಪ್ರಭು, ಲಯನಸ್ ಕ್ಲಬ್‌ನ ಅಧ್ಯಕ್ಷೆ ಭವಾನಿ ಶೆಟ್ಟಿ, ಕಾರ್ಯದರ್ಶಿ ವಿಜಯಲಕ್ಷ್ಮಿ ಎನ್. ಶೆಟ್ಟಿ, ಕೋಶಾಧಿಕಾರಿ ವಿನಯ ಪ್ರಭುರವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಕ್ಷಣ ಕ್ಷೇತ್ರದಲ್ಲಿ ತನ್ನ ವೈಶಿಷ್ಟ್ಯತೆಯೊಂದಿಗೆ ಜಾಗತಿಕ ಮನ್ನಣೆಗೆ ಪಾತ್ರವಾದ ಮೊಂಟೆಸ್ಸೋರಿ ಶಿಕ್ಷಣದ ತಜ್ಞೆ ಮೊಂಟೆಸ್ಸೋರಿ ಯುನೈಟೆಡ್ ಎನ್ನುವ ಸಂಸ್ಥೆಯನ್ನು ಹುಟ್ಟು ಹಾಕಿ ಸಾವಿರಾರು ಮೊಂಟೆಸ್ಸೋರಿ ಶಿಕ್ಷಕಿಯರನ್ನು ರೂಪಿಸುತ್ತಿರುವ ಸಾಧಕಿ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಪಡೆದ ಶಿಕ್ಷಕಿ, ಬೆಂಗಳೂರಿನ ಮುನಿರಾ ಅಕ್ತರ್ ಅವರನ್ನು ಕೋಣಿಯ ಮಾತಾ ಮೊಂಟೆಸ್ಸೋರಿಯ ಆವರಣದಲ್ಲಿ ಪುಟಾಣಿಗಳು ಪುಷ್ಪ ಪಥದೊಂದಿಗೆ ಸ್ವಾಗತಿಸಿದರು. ಮಾತಾ ಮೊಂಟೆಸ್ಸೋರಿ ನಡೆಸುತ್ತಿರುವ ಮೊಂಟೆಸ್ಸೋರಿ ಸರ್ಟಿಫೀಕೆಟ್ ಕೋರ್ಸ್‌ನ ಪ್ರಯೋಗ ಪರೀಕ್ಷೆಯ ಪರಿವೀಕ್ಷಕರಾಗಿ ಆಗಮಿಸಿರುವ ಮುನಿರಾ ಅಕ್ತರ್‌ರವರ ಸಾಧನೆಯನ್ನು ಮನಗಂಡು ಶಾಲೆಯವತಿಯಿಂದ ಗೌರವ ಸನ್ಮಾನ ನೀಡಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಅತ್ಯಂತ ಪ್ರಭಾವಿ ಶಿಕ್ಷಣ ಶೈಲಿ ಎಂದೇ ಖ್ಯಾತವಾಗಿರುವ ಡಾ| ಮರೀಯಾ ಮಾಂಟೆಸ್ಸೋರಿಯವರ ಆವಿಷ್ಕಾರದ ಮೊಂಟೆಸ್ಸೋರಿ ಶಿಕ್ಷಣ ಪದ್ಧತಿ ಇತ್ತೀಚಿನ ದಿನಗಳಲ್ಲಿ ಭಾರತದ ನಗರಗಳಲ್ಲಿ ಹೆಚ್ಚು ಹೆಚ್ಚು ಕಂಡು ಬರುತ್ತಿದೆ. ಆದರೆ ಕೋಣಿಯಂತಹ ಗ್ರಾಮೀಣ ಭಾಗದಲ್ಲೂ ಸಂಸ್ಥೆಯನ್ನು ಹುಟ್ಟುಹಾಕಿ ಈ ಪರಿಸರದ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ನೀಡುತ್ತಿರುವ ಮಾತಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಲು ಹಾಗೂ ಮಕ್ಕಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಆಯೋಜಿಸಲಾಗುತ್ತಿರುವ ಮುದ್ದು ಕೃಷ್ಣ ಸ್ಪರ್ಧೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಈ ಕಾರ್ಯಕ್ರಮದ ಮೂಲಕ ಅನೇಕ ಮಕ್ಕಳಿಗೆ ತಮ್ಮ ಪ್ರತಿಭೆಯನ್ನು ತೋರ್ಪಡಿಸಲು ವೇದಿಕೆ ದೊರೆತಂತಾಗಿದೆ. ಮುಂದಿನ ದಿನಗಳಲ್ಲಿ ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರಬೇಕು ಮತ್ತು ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸುವ ಕಾರ್ಯ ನಡೆಸಬೇಕು ಎಂದು ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿ ಸದಸ್ಯ ಜಿ.ವೆಂಕಟೇಶ ನಾಯಕ್ ಹೇಳಿದರು. ಅವರು ಪೇಜಾವರ ಶ್ರೀ ಅಧೋಕ್ಷಜ ಮಠ ಶ್ರೀ ಕೃಷ್ಣ ಮಠ ಉಡುಪಿ ಮತ್ತು ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಜಂಟಿ ಆಶ್ರಯದಲ್ಲಿ ಶಾಲೆಯ ಟಿ.ವಿಮಲಾ ವಿ.ಪೈ ಸಭಾಂಗಣದಲ್ಲಿ ಜರಗಿದ ಮುದ್ದು ಕೃಷ್ಣ ಸ್ಪರ್ಧೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲೆಯ ಶಿಕ್ಷಕ-ರಕ್ಷಕ ಸಮಿತಿ ಕಾರ್ಯದರ್ಶಿ ಬಿ.ಪ್ರಕಾಶ ಶೆಣೈ, ಸಮಿತಿಯ ಸದಸ್ಯ ರಾಘವೇಂದ್ರ ದೇವಾಡಿಗ ಶುಭ ಹಾರೈಸಿದರು. ಕೀರ್ತನಾ ಎಸ್.ನಾಯಕ್, ಸವಿತಾ ಯು.ದೇವಾಡಿಗ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮುಂದಿನ ದಿನಗಳಲ್ಲಿ ಡಾಟಾ ಮೈನಿಂಗ್ ಕ್ಷೇತ್ರದಲ್ಲಿ ವಿಫುಲ ಉದ್ಯೋಗಾವಕಾಶಗಳಿವೆ ಎಂದು ಬೆಂಗಳೂರಿನ ಹೆಚ್ ಪಿಯಲ್ಲಿ ಜ್ಯೂನಿಯರ್ ಡಾಟಾ ವಿಜ್ನಾನಿ ಚೈತನ್ಯ ಹೊಳ್ಳ ಅವರು ಹೇಳಿದರು. ಅವರು ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಖ್ಯಾಶಾಸ್ತ್ರ ಭೌತಶಾಸ್ತ್ರ ಹಾಗೂ ಕೆರಿಯರ್ ಗೈಡೆನ್ಸ್ ಸೆಲ್ ಇದರ ಸಹಯೋಗದಲ್ಲಿ ನಡೆದ ಉಪಾನ್ಯಾಸ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತದ ದಿನಗಳಲ್ಲಿ ಡಾಟಾ ಮೈನಿಂಗ್ ಕ್ಷೇತ್ರವು ಸಾಕಷ್ಟು ಬೆಳೆಯುತ್ತಿದೆ. ಮುಂದಿನ ದಿನಗಳಲ್ಲೂ ಸಹ ಇದೇ ಕ್ಷೇತ್ರದಲ್ಲಿ ಉದ್ಯೋಗವೆಂಬುದನ್ನು ಅರಸಿಕೊಳ್ಳಬಹುದು. ಕೃತಕ ಬುದ್ಧಿವಂತಿಕೆ ಮತ್ತು ಯಂತ್ರಭಾಷೆಯನ್ನು ಕುರಿತು ಇಲ್ಲಿ ಹೆಚ್ಚಿನ ಮಹತ್ವವಿದೆ. ಅದಕ್ಕೆ ಪೂರಕವಾಗಿ ಆರ್ ಮತ್ತ್ ಪೈಥೋನ್ ಸಾಪ್ಟ್ ವೇರ್ ಗಳ ಕಲಿಯುವಿಕ್ವ್ ಅಗತ್ಯವಾಗಿ ಬೇಕಾಗಿರುತ್ತದೆ. ಇದಕ್ಕೆ ಯಾವುದೇ ವಾಣಿಜ್ಯ್ ಮತ್ತು ವಿಜ್ನಾನ ಪದವಿಗಳನ್ನು ಅಭ್ಯಸಿಸಿದರೆ ಅನೂಕೂಲಕರವಾಗಿರುತ್ತದೆ. ಅದರಲ್ಲೂ ಸಂಖ್ಯಾಶಾಸ್ತ್ರ ಮತ್ತು ಭೌತಶಾಸ್ತ್ರ ವಿಷಯಗಳ ಅಧ್ಯಯನ ಈ ಕ್ಷೇತ್ರದಲ್ಲಿ ಜ್ನಾನ ಬೆಳೆಸಿಕೊಳ್ಳಲು ಅನುಕೂಲ ಮಾಡಿಕೊಡುತ್ತದೆ. ವಿದ್ಯಾರ್ಥಿಗಳು ವಿಶೇಷ ಕೌಶಲವನ್ನು ಬೆಳೆಸಿಕೊಂಡಲ್ಲಿ…

Read More