Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬ್ಯೆಂದೂರು: ಬಿಲ್ಲವ ಸಮಾಜ ಸೇವಾ ಸಂಘ ರಿ. ಯಡ್ತರೆ ಬ್ಯೆಂದೂರು ಇದರ ೨೦೧೭ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ. ದೊಟ್ಟಯ್ಯ ಪೂಜಾರಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಸಸಿಹಿತ್ಲು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ವೃತ್ತಿಯಲ್ಲಿ ಛಾಯಾಗ್ರಾಹಕರಾಗಿರುವ ದೊಟ್ಟಯ ಪೂಜಾರಿ ಅವರು ವಿವಿಧ ಸಂಘ ಸಂಸ್ಥೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿರುವ ಕಿಶೋರ್ ಪೂಜಾರಿ ಅವರೂ ಕೂಡ ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದು, ಉತ್ತಮ ಕಬ್ಬಡ್ಡಿ ಪಟುವಾಗಿಯೂ ಗುರುತಿಸಿಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಡುಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ, ಕ್ರೀಡಾಪಟು ಕಾವ್ಯಾ ಪೂಜಾರಿ ಸಾವಿನ ಕುರಿತು ಸಮಗ್ರ ತನಿಕೆ ನಡೆಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕುಂದಾಪುರದ ಎಬಿವಿಪಿ ನೇತೃತ್ವದಲ್ಲಿ ಡಾ. ಬಿ. ಬಿ ಹೆಗ್ಡೆ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭನೆ ಜರುಗಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ರಾಘವೇಂದ್ರ ಮಾತನಾಡಿ ಕ್ರೀಡಾಪಟು ಕಾವ್ಯ ಸಾವಿನ ಸುತ್ತ ಹಲವು ಅನುಮಾನಗಳಿದ್ದು ಕ್ರೀಡಾಪಟುವಿನ ಸಾವು ಸಂಶಯ ಮೂಡಿಸುತ್ತಿದೆ. ಹಲವು ದಿನಗಳಿಂದ ಇಡಿ ಪ್ರಕರಣ ಗೊಂದಲ ಹುಟ್ಟಿಸಿದೆ. ಸಾವಿನ ಕುರಿತಾಗಿ ಪೊಲೀಸ್ ಇಲಾಖೆ ವಸ್ತುನಿಷ್ಠ ತನಿಕೆ ನಡೆಸಿ ಕುಟುಂಬಿಕರಿಗೆ ನ್ಯಾಯ ಒದಗಿಸಬೇಕಿದೆ ಎಂದು ಆಗ್ರಹಿಸಿದರು. ಕುಂದಾಪುರ ಡಾ. ಬಿ. ಬಿ ಹೆಗ್ಡೆ ಪ್ರಥಮದರ್ಜೆ ಕಾಲೇಜಿನಿಂದ ಮಿನಿವಿಧಾನಸೌದದ ತನಕ ಪ್ರತಿಭಟನಾ ರ‍್ಯಾಲಿ ನಡೆಸಿದ ವಿದ್ಯಾರ್ಥಿಗಳು ಬಳಿಕ ತಹಶೀಲ್ದಾರ್ ಬೋರ್ಕರ್ ಅವರ ಮೂಲಕ ಮನವಿ ಸಲ್ಲಿಸಿದರು. ವಿದ್ಯಾರ್ಥಿಗಳಾದ ಗಣೇಶ್, ಭರತ್, ಶ್ರೀಧರ್, ಪ್ರಗತಿ, ಅಕ್ಷತಾ, ಪ್ರತ್ಯಾರ್ಥ, ಆಶ್ರಿತಾ, ಪವನ್, ಮೊದಲಾದವರು ಪ್ರತಿಭಟನೆಯ ನೇತೃತ್ವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಾಲಾ ಹಂತದಲ್ಲಿ ಇಂಗ್ಲೀಷ್‌ನಂತಹ ಇತರೇ ಭಾಷೆಗಳಲ್ಲಿ ಮಗು ಪ್ರಭುತ್ವವನ್ನು ಸ್ಥಾಪಿಸಬೇಕಾದರೆ ಮಾತೃಭಾಷೆಯಲ್ಲಿ ಗಟ್ಟಿತನವಿರಬೇಕು. ಮಾತೃಭಾಷೆಯನ್ನೇ ಸರಿಯಾಗಿ ಕಲಿಯಲಾರದ ಮಗುವಿಗೆ ಎಂದು ಅಪರಿಚಿತವಾದ ಇನ್ನೊಂದು ಭಾಷೆ ಬೌದ್ಧಿಕ ಹೊರೆ. ಆದ್ದರಿಂದ ಪೋಷಕರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ,ಕನಿಷ್ಟ ಐದನೇ ತರಗತಿಯವರೆಗಾದರೂ ಮಕ್ಕಳಿಗೆ ತಮ್ಮ ಮಾತೃಭಾಷೆಯ ಮಾಧ್ಯಮದಲ್ಲೇ ಶಿಕ್ಷಣ ಕೊಡಿಸಬೇಕು ಎಂದು ಪ್ರಖ್ಯಾತ ಚಿಂತನಕಾರರಾದ ಕನರಾಡಿ ವಾದಿರಾಜ ಭಟ್ ಅಭಿಪ್ರಾಯ ಪಟ್ಟರು. ಸುವರ್ಣ ವರ್ಷಾಚರಣೆಯ ಸಂಭ್ರಮದಲ್ಲಿರುವ ಕುಂದಾಪುರ ವಲಯದ ಬಿದ್ಕಲ್‌ಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨ನೇ ತರಗತಿಯ ಜೀವನ್ ಹುಟ್ಟು ಹಬ್ಬದ ಪ್ರಯುಕ್ತ ತಾಯಿ ತಂದೆ ಜ್ಯೋತಿ-ಚಂದ್ರ ಅವರು ಪ್ರಾಯೋಜಿಸಿದ ಮಕ್ಕಳ ಸಾಹಿತ್ಯದೊಲವಿನ ವೇದಿಕೆಯಾದ ಚಾರಣ ಪತ್ರಿಕೆಯ ೬ನೇ ಸಂಚಿಕೆಯನ್ನು ಅನಾವರಣಗೊಳಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ೨೦೧೭-೧೮ನೇ ಸಾಲಿನ ತಿಂಗಳ ಕಲಿಕಾ ಪ್ರದರ್ಶನದ ಎರಡನೇ ಕಾರ್ಯಕ್ರಮ, ದಶಪ್ರಶ್ನೆ ಎಂಬ ವಿಶಿಷ್ಟ ಸ್ಪರ್ಧಾ ಕಾರ್ಯಕ್ರಮ ಹಾಗೂ ಸರ್ವಪೋಷಕರ ಸಭೆಯು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಾಗರತ್ನ ಹೆಬ್ಬಾರ್ ಇವರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕುಂದಾಪುರ-ಗಂಗೊಳ್ಳಿ ನಡುವೆ ಸಂಚರಿಸುತ್ತಿರುವ ಕೆಎಸ್‌ಆರ್‌ಟಿಸಿ ಬಸ್ ಸಿಬ್ಬಂದಿಗಳಿಗೆ ಕುಂದಾಪುರದಲ್ಲಿ ಕೆಲ ಖಾಸಗಿ ಬಸ್ ಏಜೆಂಟರು ಬೆದರಿಕೆ ಹಾಕುತ್ತಿರುವ ಘಟನೆಯನ್ನು ಗಂಗೊಳ್ಳಿ ನಾಗರಿಕ ಹೋರಾಟ ಸಮಿತಿ ತೀವ್ರವಾಗಿ ಖಂಡಿಸಿದ್ದು, ಖಾಸಗಿ ಬಸ್ ಏಜೆಂಟರ ಅಮಾನವೀಯ ಕೃತ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ನಾಗರಿಕ ಹೋರಾಟ ಸಮಿತಿ ತಿಳಿಸಿದೆ. ಕಳೆದ ಎಂಟು ವರ್ಷಗಳಿಂದ ಕುಂದಾಪುರ-ಗಂಗೊಳ್ಳಿ ನಡುವೆ ಸಂಚರಿಸುತ್ತಿರುವ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಖಾಸಗಿ ಬಸ್‌ಗಳು ನೀಡುತ್ತಿರುವ ತೊಂದರೆ ಇನ್ನೂ ಮುಂದುವರಿದ್ದು, ಅನಗತ್ಯ ತೊಂದರೆ ನೀಡುತ್ತಿರುವ ಹಾಗೂ ಸಂಘರ್ಷ ಮತ್ತು ಪೈಪೋಟಿಗೆ ಕಾರಣವಾಗುತ್ತಿರುವ ಖಾಸಗಿ ಬಸ್ಸುಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಜಿಲ್ಲಾ ಪ್ರಾದೇಶಿಕ ಪ್ರಾಧಿಕಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಆರ್‌ಟಿಓ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಈ ಬಗ್ಗೆ ಕ್ರಮಕೈಗೊಳ್ಳದ ಅಧಿಕಾರಿಗಳು ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಿ ಕೈ ತೊಳೆದುಕೊಂಡಿದ್ದಾರೆ. ಸಂಬಂಧಪಟ್ಟ ಇಲಾಖಾಧಿಕಾರಿಗಳು ಕಾನೂನು ರೀತ್ಯಾ ಕ್ರಮಕೈಗೊಳ್ಳದಿರುವುದರಿಂದ ಇದೀಗ ಪುನ: ಕೆಲವು ಖಾಸಗಿ ಬಸ್ಸುಗಳು ಕುಂದಾಪುರ-ಗಂಗೊಳ್ಳಿ ನಡುವೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದಲ್ಲಿ ಗರಿಗೆದರಿರುವ ಕಾಂಗ್ರೆಸ್ ಹಾಗೂ ಸರ್ಕಾರದ ಚಟುವಟಿಕೆಗಳಿಂದ ಜರ್ಜರಿತಗೊಂಡಿರುವ ಬಿಜೆಪಿ ಪಕ್ಷ ತನ್ನ ಹೇಡಿತನವನ್ನು ಪ್ರದರ್ಶಿಸಲು ಮುಂದಾಗಿದ್ದು, ಕೇಂದ್ರದ ಮೋದಿ ಸರ್ಕಾರ ಕರ್ನಾಟಕದ ಸಚಿವರ ಮೇಲೆ ಐಟಿ ದಾಳಿ ಮಾಡಿಸುವ ಮೂಲಕ ದ್ವೇಷದ ರಾಜಕೀಯವನ್ನು ಕರ್ನಾಟಕದಲ್ಲಿ ಮುಂದುವರೆಸಿದೆ ಎಂದು ಉಡುಪಿ ಜಿಲ್ಲಾ ಅಧ್ಯಕ್ಷರು ಮಾಹಿತಿ ತಂತ್ರಜ್ಞಾನ ವಿಭಾಗ ಅಧ್ಯಕ್ಷ ವಿಶ್ವಾಸ್ ಶೆಟ್ಟಿ ಹೇಳಿದ್ದಾರೆ. ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರಾದ ಅಹ್ಮದ್ ಪಟೇಲ್‌ರನ್ನು ಸೋಲಿಸಲು ಶತಾಯಗತಾಯ ಪ್ರಯತ್ನಿಸುತ್ತಿರುವ ಬಿಜೆಪಿ ಅಲ್ಲಿನ ಕಾಂಗ್ರೆಸ್ ಶಾಸಕರಿಗೆ ಲೆಕ್ಕವಿಲ್ಲದಷ್ಟು ಕೋಟಿಗಟ್ಟಲೇ ಹಣ ನೀಡಿ ಖರೀದಿಸಲು ಹೊರಟಿತ್ತು. ಆದರೆ ಇದನ್ನು ವಿಫಲಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕರ್ನಾಟಕದ ಇಂಧನ ಸಚಿವರಾದ ಡಿ.ಕೆ. ಶಿವಕುಮಾರ್ ಅವರ ಮೇಲೆ ಐಟಿ ದಾಳಿ ನಡೆಸಿ ಹೆದರಿಸುವ ಪ್ರಯತ್ನಕ್ಕೆ ಮುಂದಾಗಿದೆ. ಇಡೀ ದೇಶದಲ್ಲಿ ಬಿಜೆಪಿ ಲೋಕಸಭಾ ನಂತರ ಎದುರಿಸಿರುವ ಪ್ರತಿಯೊಂದು ಸೋಲಿಗೆ, ಹಾಗೂ ಕಾಂಗ್ರೆಸ್‌ನ ಪ್ರತಿ ಗೆಲುವಿಗೆ ಪ್ರಮುಖ ಕಾರಣಗಳಲ್ಲಿ ಒಂದಾದ ಡಿ.ಕೆ. ಶಿವಕುಮಾರ್ರನ್ನು ರಾಜಕೀಯವಾಗಿ ಮುಗಿಸಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಡುಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ, ಕ್ರೀಡಾಪಟು ಕಾವ್ಯಾ ಪೂಜಾರಿ ಸಾವಿನ ಕುರಿತು ಸಮಗ್ರ ತನಿಕೆ ನಡೆಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕುಂದಾಪುರದ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭನೆ ಜರುಗಿತು. ಎಬಿವಿಪಿ ಪ್ರಮಖ ವಿಶ್ವನಾಥ ಮಾತನಾಡಿ ಕಾವ್ಯ ಸಾವಿನ ಸುತ್ತ ಹಲವು ಅನುಮಾನಗಳಿದ್ದು ಸಾವಿನ ಕುರಿತಾಗಿ ಪೊಲೀಸ್ ಇಲಾಖೆ ವಸ್ತುನಿಷ್ಠ ತನಿಕೆ ನಡೆಸಬೇಕಿದೆ. ಒಬ್ಬ ಕ್ರೀಡಾಪಟು ಮೃತಪಟ್ಟ ರೀತಿ ಹಾಗೂ ಆಕೆಯ ಸಾವಿನ ಬಳಿಕ ಕಾಲೇಜು ಮೃತದೇಹವನ್ನು ಕೂಡಲೇ ಶವಾಗಾರದಲ್ಲಿ ಇರಿಸಿದ್ದು ಹಾಗೂ ಆ ಬಳಿಕದ ಘಟನೆಗಳು ಸಹಜವಾಗಿ ಗೊಂದಕ್ಕೆ ಎಡೆಮಾಡಿಕೊಡುತ್ತಿವೆ. ಹಾಗಾಗಿ ಸೂಕ್ತ ತನಿಕೆ ಮಾಡುವುದರೊಂದಿಗೆ ಮೃತರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕಿದೆ. ತನಿಕೆಯ ಮೂಲಕ ಜನರಲ್ಲಿ ವ್ಯಕ್ತವಾಗುತ್ತಿರುವ ಆತಂಕ ಹಾಗೂ ಗೊಂದಲವನ್ನು ನೀವಾರಿಸಬೇಕಿದೆ. ಸೂಕ್ತ ತನಿಕೆ ನಡೆಯದಿದ್ದರೆ ಎಬಿವಿಪಿ ಮತ್ತೆ ಪ್ರತಿಭಟಿಸಲಿದೆ ಎಂದು ಎಚ್ಚರಿಸಿದರು. ಕುಂದಾಪುರ ಶಾಸ್ತ್ರೀವೃತ್ತದಿಂದ ಮಿನಿವಿಧಾನಸೌದದ ತನಕ ಪ್ರತಿಭಟನಾ ರ‍್ಯಾಲಿ ನಡೆಸಿದ ವಿದ್ಯಾರ್ಥಿಗಳು ಬಳಿಕ ತಹಶೀಲ್ದಾರ್ ಬೋರ್ಕರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರತಿ ಬೂತ್ ಮಟ್ಟದಲ್ಲಿಯೂ ಕಾಂಗ್ರೆಸ್ ಕಾರ್ಯಪಡೆಯನ್ನು ಸಿದ್ಧಗೊಳಿಸಿ ರಾಜ್ಯ ಸರಕಾರದ ಜನಪರ ಯೋಜನೆಗಳನ್ನು ನಾಗರಿಕರಿಗೆ ಮನವರಿಕೆ ಮಾಡಿಕೊಡುವಲ್ಲಿ ಶ್ರಮಿಸಬೇಕಿದೆ. ರಾಜ್ಯದ ಜನರಿಗೆ ವಿವಿಧ ಭಾಗ್ಯಗಳು ಹಾಗೂ ರೈತರ ಸಾಲಮನ್ನಾದಂತಹ ಅತ್ಯುತ್ತಮ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುವ ಸರಕಾರದ ಸಾಧನೆಯನ್ನು ನೇರವಾಗಿ ಜನರ ಮುಂದಿಡುವ ಕೆಲಸವಾಗಬೇಕಿದ್ದು ಪಕ್ಷದ ಕಾರ್ಯಕರ್ತರು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕಿದೆ ಎಂದು ಎಐಸಿಸಿ ವೀಕ್ಷಕ ಪಿ.ಸಿ ವಿಷ್ಣುನಾದನ್ ಕರೆ ನೀಡಿದರು. ಅವರು ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ನಡೆದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಹಾಗೂ ವಿವಿಧ ಘಟಕಗಳ ಪದಪ್ರಧಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕೇಂದ್ರದಲ್ಲಿ ನರೇಂದ್ರ ಮೋದಿ ಸರಕಾರ ಆಡಳಿತಕ್ಕೆ ಬಂದಾಗಿನಿಂದಲೂ ಸುಳ್ಳಿನ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತಿದ್ದಾರೆ. ಅವರು ಆಡಳಿತಕ್ಕೆ ಬರುವ ಮೊದಲು ನೀಡಿದ ಭರವಸೆಗಳನ್ನು ಈಡೇರಿಸದೇ ಮೂರು ವರ್ಷ ಕಳೆದಿದ್ದಾರೆ. ಆದರೆ ರಾಜ್ಯ ಕಾಂಗ್ರೆಸ್ ಸರಕಾರ ಪ್ರನಾಳಿಕೆಯಲ್ಲಿ ತಿಳಿಸಿದ್ದ ಶೇ.೯೫ರಷ್ಟು ಭರವಸೆಗಳನ್ನು ಈಡೇರಿಸಿದೆ. ರಾಜ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ವಲಯದ ಅರಣ್ಯ ಇಲಾಖೆಯ ವತಿಯಿಂದ ನಲವತ್ತು ವರುಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಉಪ ವಲಯ ಅರಣ್ಯಾಧಿಕಾರಿ ಬೈಂದೂರು ನಿವಾಸಿ ಸುಬ್ರಾಯ ಅಲಿಯಾಸ್ ನಾಗೇಶ ಇವರನ್ನು ಕುಂದಾಪುರದ ಅರಣ್ಯ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಬಿಳ್ಕೋಡಲಾಯಿತು. ಕಾರ್ಯದಕ್ಷತೆ,ಸಮಯ ಪಾಲನೆಗೆ ಹೆಸರು ವಾಸಿಯಾದ ಉತ್ತಮ ವ್ಯಕ್ತಿತ್ವ ಹೊಂದಿದ ಅನುಭವಿ ಹಿರಿಯ ಅಧಿಕಾರಿಯಾದ ಸುಬ್ರಾಯ ಅವರ ಮುಂದಿನ ಜೀವನ ಸುಖಮಯವಾಗಿರಲಿ ಎಂದು ಕುಂದಾಪುರ ವಲಯ ಅರಣ್ಯಾಧಿಕಾರಿ ಶರತ್ ಶೆಟ್ಟಿ ಹಾರೈಸಿದರು. ಮಾತನಾಡಿದ ಅವರು ಸರ್ಕಾರಿ ಅಧಿಕಾರಿಗೆ ನಿವೃತ್ತಿಯು ಅನಿವಾರ್ಯ ಆದರೆ ಪ್ರಾಮಾಣಿಕ ಅಧಿಕಾರಿಯನ್ನು ಬಿಳ್ಕೋಡುವುದು ಅಷ್ಟೇ ಬೇಸರದ ಸಂಗತಿ ಎಂದರು. ಉಪ ವಲಯ ಅರಣ್ಯಾಧಿಕಾರಿ ನವೀನ್ ಡಿಸೋಜಾ ಮಾತನಾಡಿ, ಮಹಾ ಭಾರತದ ಆ ಭೀಷ್ಮನಂತೆ ಅರಣ್ಯ ಇಲಾಖೆಯ ಈ ಭೀಷ್ಮನಿಗಿಂದು ಗೌರವಿಸುವ ಸಮಯ. ಇಲಾಖೆಯ ಕಾನೂನು ವಿಚಾರ, ಕರ್ತವ್ಯ ನಿರ್ವಹಣೆಯ ಛಲವನ್ನು ನಾವು ಇವರಿಂದ ಕಲಿಯ ಬೇಕಾಗಿದೆ ಎಂದು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು. ಕಾರ್ಯಕ್ರಮದಲ್ಲಿ ಬೈಂದೂರು ವಲಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀನಿವಾಸ ಕಲಾ ನಿಲಯ ಬೆಂಗಳೂರು ಇವರು ಇತ್ತೀಚೆಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ ರಾಜ್ಯಮಟ್ಟದ ಭರತನಾಟ್ಯ ಸ್ಪರ್ಧೆಯ ಜ್ಯೂನಿಯರ್ ವಿಭಾಗದಲ್ಲಿ ಬಿ. ಸುನಿಧಿ ಉಡುಪ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಈಕೆ ಕುಂದಾಪುರದ ಎಚ್‌ಎಮ್‌ಎಮ್ ಆಂಗ್ಲ ಮಾಧ್ಯಮ ಶಾಲೆಯ ೬ನೆಯ ತರಗತಿಯ ವಿದ್ಯಾರ್ಥಿನಿಯಾಗಿದ್ದು ಕುಂದಾಪುರದ ನೃತ್ಯ ವಸಂತ ನಾಟ್ಯಾಲಯ (ರಿ.)ದ ವಿದುಷಿ ಪ್ರವಿತಾ ಅಶೋಕರವರ ಶಿಷ್ಯೆಯಾಗಿದ್ದು ಬಳ್ಕೂರಿನ ರಾಘವ ಉಡುಪ ಮತ್ತು ಶ್ರೀಕಾಂತಿ ಉಡುಪರ ಪುತ್ರಿಯಾಗಿರುತ್ತಾಳೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಶಂಕರನಾರಾಯಣ: ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಪ್ರತಿಭಾನ್ವಿತ ಕ್ರೀಡಾಪಟು, 10ನೇ ತರಗತಿ ವಿದ್ಯಾರ್ಥಿನಿ ಕಾವ್ಯಾ ಪೂಜಾರಿಯ ನಿಘೂಡ ಸಾವಿನ ಕುರಿತು ನಿಷ್ಪಕ್ಷಪಾತವಾದ ತನಿಖೆಗೆ ಆಗ್ರಹಿಸಿ ಎನ್ ಎಸ್ ಯು ಐ ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶಂಕರನಾರಾಯಣ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷ ಕ್ರಿಸ್ಟನ್ ಡಿ’ಆಲ್ಮೇಡಾ, ಪೋಲಿಸ್ ದಾಖಲೆಗಳ ಪ್ರಕಾರ ಕಾವ್ಯ ಹಿಂದಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದುದರ ಪರಿಣಾಮವಾಗಿ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ತಿಳಿಸಲಾಗಿದೆ. ಆದರೆ ಕಾವ್ಯಾಳ ಹೆತ್ತವರು, ಸಾಮಾಜಿಕ ಜಾಲತಾಣಗಳಲ್ಲಿ ಕಾವ್ಯಳ ಸಾವಿನ ಹಿಂದೆ ಷಡ್ಯಂತ್ರ ಅಡಗಿದೆ ಎನ್ನಲಾಗುತ್ತಿದೆ. ಕಾವ್ಯ ತನ್ನ ಹಾಸ್ಟೆಲ್ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಯ ಸಹಪಾಠಿ ವಿದ್ಯಾರ್ಥಿನಿಯರು ಆಕೆಯನ್ನು ನೇಣಿನ ಕುಣಿಕೆಯಿಂದ ಕೆಳಗಿಳಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎನ್ನಲಾಗುತ್ತಿದೆ. ಹೆಚ್ಚಾಗಿ ಹೈಸ್ಕೂಲ್ ವಿದ್ಯಾರ್ಥಿನಿಯರು ಮೃತದೇಹಗಳನ್ನು ನೋಡುವಾಗ ಹೆದರುವುದು ಸರ್ವೆ ಸಾಮಾನ್ಯ ಹಾಗಿರುವಾಗಿ ವಿದ್ಯಾರ್ಥಿನಿಯರು ಹೇಗೆ ಹಾಸ್ಟೆಲಿನ ಯಾವುದೇ ಸಿಬ್ಭಂಧಿಗಳಿಗೆ ತಿಳಿಸದೆ ಮೃತದೇಹವನ್ನು ಇಳಿಸಿ…

Read More