ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇವಾಡಿಗ ಮಿತ್ರ ( ಕದಂ ) ದುಬೈ ಸದಸ್ಯರ ವತಿಯಿಂದ 6 ನೇ ವರ್ಷದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ದಿನೇಶ್ ದೇವಾಡಿಗ ಚಿತ್ರಾಡಿ ನಾಗೂರೂ ಇವರ ನೇತ್ರತ್ವದಲ್ಲಿ ತ್ರಾಸಿ ಅಣ್ಣಪ್ಪ ಸಭಾಭವನದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ರಾಜು ದೇವಾಡಿಗ ತಾಲೂಕು ಪಂಚಾಯತ್ ಸದಸ್ಯರು ವಹಿಸಿದ್ದರು. ಸಮಾರಂಭದ ಉದ್ಘಾಟನೆಯನ್ನು ತುಂಗಾ ದೇವಾಡಿಗ ಉದ್ಯಮಿ ಮುಂಬೈ ಇವರು ನೆರವೇರಿಸಿದರು.ವೆಂಕಟರಮಣ ಭಟ್ ನೆಂಪೂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ದಿಕ್ಸೂಚಿ ಭಾಷಣ ಮಾಡಿದರು ಯೋಗೀಶ್ ಬಂಕೇಶ್ವರ ಕಿರುತೆರೆ ಕಲಾವಿದರು ಹಾಗೂ ಶ್ರೀಮತಿ ಅಂಬಿಕಾ ರಾಜು ದೇವಾಡಿಗ ತ್ರಾಸಿ ವ್ಯವಸ್ಥಾಪನಾ ಸಮಿತಿ ಸದಸ್ಯರು ಶ್ರೀ ಮುಕಾಂಬಿಕಾ ದೇವಸ್ಥಾನ ಕೊಲ್ಲೂರು ಇವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ದ್ವಿತೀಯ ಪಿಯುಸಿ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕು. ರಾಧಿಕಾ ಎಮ್ ಪೈ ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ರಂಜಿತಾ ಆಚಾರ್ಯ ಇವರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೆ ವಿದ್ಯಾರ್ಥಿಗಳ ಸಂಘ ರಚನೆ ಮತ್ತು ಉದ್ಘಾಟನಾ ಸಮಾರಂಭ ಇತ್ತಿಚಿಗೆ ಶಾಲೆಯಲ್ಲಿ ನಡೆಯಿತು. ಹಳೆ ವಿದ್ಯಾರ್ಥಿಗಳ ಸಂಘದ ನೂತನ ಅಧ್ಯಕ್ಷರಾಗಿ ವಿಶ್ವನಾಥ ಉಡುಪ, ಕಾರ್ಯದರ್ಶಿಯಾಗಿ ಕೆ. ವಿ. ಶಾಜಿ ಆಯ್ಕೆಯಾಗಿದ್ದಾರೆ. ಚಂದ್ರ ಬಳೆಗಾರ ಸಹಕಾರ್ಯದರ್ಶಿಯಾಗಿ, ಪವನ ಗಾಣಿಗ ಖಜಾಂಜಿಯಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಕೊಲ್ಲೂರು ಗ್ರಾಮ ಪಂಚಾಯತ್ ಕೊಲ್ಲೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ನೇತ್ರಾವತಿ ಆಚಾರ್ಯ, ಮಾಜಿ ಅಧ್ಯಕ್ಷ ಕೆ.ಎನ್ ವಿಶ್ವನಾಥ ಅಡಿಗ, ಸದಸ್ಯರಾದ ಎಸ್.ಕುಮಾರ್, ಪ್ರೇಮ, ಎಸ್ಡಿಎಂಸಿ ಕೆ.ಎನ್ ಚಂದ್ರ ಶೇಖರ್ ಅಡಿಗ, ಉಪಾಧ್ಯಕ್ಷೆ ಹೇಮಾವತಿ, ಸದಸ್ಯರು ಮತ್ತು ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆಯ ಪೂರ್ವಪ್ರಾಥಮಿಕ ಪುಟಾಣಿಗಳು ಶೇರಿಂಗ್ ಡೇ ಯನ್ನು ಸಾಂಕೇತಿಕವಾಗಿ ಆಚರಿಸಿದರು. ಆ ಪ್ರಯುಕ್ತವಾಗಿ ಪುಟಾಣಿಗಳಿಂದ ಹಲವಾರು ಬಗೆಯ ಕಲಿಕಾ ಸಾಮಗ್ರಿಗಳನ್ನು ಸಂಗ್ರಹಿಸಲಾಗಿತ್ತು. ಸಂಗ್ರಹಿಸಿದ ಕಲಿಕಾ ಸಾಮಗ್ರಿಗಳನ್ನು ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ಮುಖ್ಯ ಶಿಕ್ಷಕಿ ವಿಶಾಲಾ ಶೆಟ್ಟಿ, ಸಹ ಶಿಕ್ಷಕಿಯರಾದ ಶ್ವೇತಾ, ವೀಣಾ ಹಾಗೂ ಪುಟಾಣಿಗಳ ಜೊತೆ ಸೇರಿ ಬೇಳೂರು ಸ್ಪೂರ್ತಿಧಾಮಕ್ಕೆ ಕೊಡುಗೆಯಾಗಿ ನೀಡಲಾಯಿತು. ಕೊಡುಗೆಯನ್ನು ಸ್ವೀಕರಿಸಿದ ಸ್ಪೂರ್ತಿಧಾಮದ ಸಿಬ್ಬಂದಿ ವರ್ಗದವರಾದ ಶಶಿಕಲಾ, ಶಾರದಾ ಹಾಗೂ ಶೀನ ಭಂಡಾರಿಯವರು ಮಕ್ಕಳೆಲ್ಲರಿಗೂ ಮನತುಂಬಿ ಹಾರೈಸಿ, ಕೃತಜ್ಞತೆ ಅರ್ಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿರೂರು ಭಾಗದ ಅಭಿವೃದ್ಧಿಯ ಕನಸುಗಾರ, ಶೈಕ್ಷಣಿಕ ಸಾಮಾಜಿಕ ಕ್ಷೇತ್ರದಲ್ಲಿ ಅವಿರತವಾಗಿ ತೊಡಗಿಸಿಕೊಂಡಿದ್ದ ದುಬೈ ಉದ್ಯಮಿ ಸೈಯದ್ ಅಬ್ದುಲ್ ಖಾದರ್ ಬಾಶು (55) ಇಂದು ಹೃದಯಾಘಾತದಿಂದ ಮಂಗಳೂರು ಎ.ಜೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸೈಯದ್ ಅಬ್ದುಲ್ ಖಾದರ್ ಬಾಶು ಮೂಲತ: ಶಿರೂರಿನವರು. ಅಂತರಾಷ್ಟ್ರೀಯ ಗುಣಮಟ್ಟದ ಗ್ರೀನ್ ವ್ಯಾಲಿ ಪ. ಪೂ ಕಾಲೇಜು ಶಿರೂರು, ದೀನಾ ಶಿಕ್ಷಣ ಸಂಸ್ಥೆ, ಅಂಗವಿಕಲ ಮಕ್ಕಳಿಗೆ ಉಚಿತ ಶಿಕ್ಷಣದ ಮೂಲಕ ಶೈಕ್ಷಣಕ ರಂಗದಲ್ಲಿ ತೊಡಗಿಸಿಕೊಂಡಿದ್ದರೇ, ಬಡವರಿಗೆ ಉಚಿತ ಅಂಬ್ಯುಲೆನ್ಸ್ ಸೇವೆ, ಪ್ರತಿ ಮನೆಗೂ ನೀರಿನ ಸೌಲಭ್ಯ, ಬೀದಿ ದೀಪದ ಸೌಕರ್ಯ ಮುಂತಾದ ಕಾರ್ಯಕ್ರಮಗಳ ಮೂಲಕ ಸಾಮಾಜಿಕ ರಂಗದಲ್ಲಿಯೂ ತೊಡಗಿಸಿಕೊಂಡಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಕಾಲೇಜು ದಿನಗಳಲ್ಲಿ ಸಂಘಟನಾ ಚಾತುರ್ಯದಿಂದ ನಾಯಕತ್ವ ಗುಣ ಮೈಗೂಡಿಸಿಕೊಂಡವರು. ದುಬೈನಲ್ಲಿ ಉದ್ಯಮಿಯಾಗಿ ಬೆಳೆದ ನಂತರ ತನ್ನೂರಿನ ನಂಟು ಬಿಟ್ಟಿರಲಿಲ್ಲ. ಸರಕಾರಿ ಯೋಜನೆಯನ್ನು ಶಿರೂರು ಗ್ರಾಮಕ್ಕೆ ತರುವಲ್ಲಿ ಯಶಸ್ವಿಯಾಗಿದ್ದರು. ಶಿರೂರು ಕರಾವಳಿ ರಸ್ತೆಯ ಸೇತುವೆಗೆ ರಾಜ್ಯ ಸಭಾ ಸದಸ್ಯ ಆಸ್ಕರ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ ಕೊರತೆ ಕಾಡುತ್ತಿದ್ದು ಪ್ರತಿಯೊಬ್ಬರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಬೇಕಿದೆ. ಅಪಘಾತ ಅಥವಾ ಹೆರಿಗೆ ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಎದುರಾಗುತ್ತದೆ. ಇಂತಹ ಸಂದರ್ಭಗಳಲ್ಲಿ ರಕ್ತದಾನಿಗಳು ನೀಡಿದ ರಕ್ತವನ್ನು ರೋಗಿಗಳಿಗೆ ನೀಡಲಾಗುತ್ತದೆ. ಕುಂದಾಪುರದಲ್ಲಿ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಮೂಲಕ ಸುಮಾರು ೧.೭೫ ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆಯಾಗಿರುವ ರಕ್ತನಿಧಿ ಕೇಂದ್ರದ ಮೂಲಕ ಸುಮಾರು ೧೦೦ಕ್ಕೂ ಅಧಿಕ ರಕ್ತದಾನ ಶಿಬಿರಗಳನ್ನು ಆಯೋಜಿಸಿ ರೋಗಿಗಳಿಗೆ ರಕ್ತವನ್ನು ನೀಡುವ ಕಾರ್ಯ ನಡೆಸುತ್ತಿದೆ ಎಂದು ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಕುಂದಾಪುರ ಘಟಕದ ಚೇರ್ಮೆನ್ ಎಸ್.ಜಯಕರ ಶೆಟ್ಟಿ ಹೇಳಿದರು. ಅವರು ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಮತ್ತು ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಕುಂದಾಪುರ ಘಟಕ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಜಿ. ವಿಠಲ ಭಾಸ್ಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕ್ಷೇತ್ರ ಶಿಕ್ಷಣಾಧಿಕಾರಿಯರ ಕಛೇರಿ ಬೈಂದೂರು ಹಾಗೂ ಕ್ಷೇತ್ರ ನಮನ್ವಯಾಧಿಕಾರಿಯವರ ಕಛೇರಿ ಬೈಂದೂರು ಮತ್ತು ರತ್ತುಬ್ಯಾ ಪ್ರೌಢಶಾಲೆ ಮತ್ತು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೈಂದೂರು ಇವರ ಸಹಯೋಗದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬೈಂದೂರಿನಲ್ಲಿ ಗಿಡಗಳನ್ನು ನೆಡುವುದರ ಮೂಲಕ ವನಮಹೋತ್ಸವ ಆಚರಣೆಗೆ ಚಾಲನೆ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಓ. ಆರ್. ಪ್ರಕಾಶ್ ಮಾತನಾಡಿ ಪ್ರಕೃತಿ ಮನುಷ್ಯನಿಗೆ ಎಲ್ಲವನ್ನು ನೀಡಿದೆ ಅದಕ್ಕಾಗಿ ಪ್ರಕೃತಿಗೆ ಸದಾ ಋಣಿಯಾಗಿರಬೇಕು ಅದು ಗಿಡಗಳನ್ನು ನೆಡುವುದರ ಮೂಲಕ ಸಲ್ಲಿಸಬೇಕು ಎಂದರು. ಸಮರಂಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿಯವರಾದ ಅಬ್ದೂಲ್ ರವೂಪ್ ವಲಯ ಉಪ ಅರಣ್ಯಾಧಿಕಾರಿಯವರಾದ ಸದಾಶಿವ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಅಧಿಕ್ಷಕರಾದ ಕೃಷ್ಣಮೂರ್ತಿ ನಾಯಕ್ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾದ ಸುಧಾಕರ ದೇವಾಡಿಗ, ಮಾದರಿ ಶಾಲೆ ಬೈಂದೂರಿನ ಪದವೀಧರ ಮುಖೋಪಾಧ್ಯಾಯರಾದ ಜನಾರ್ಧನ ಶಿಕ್ಷಕರಾದ ಗಣಪತಿ ಹೋಬಳಿದಾರ್ ಅರಣ್ಯ ರಕ್ಷಕರಾದ ಸವಿತಾ, ಅರಣ್ಯ ವೀಕ್ಷಕರಾದ ರವಿ ಉಪಸ್ಥಿತರಿದ್ದರು ಈ ಸಂದರ್ಭದಲ್ಲಿ ರತ್ತುಬ್ಯಾ ಪ್ರೌಢಶಾಲೆಯ ಗ್ರೀನ್ ಲ್ಯಾಂಡ್ ಇಕೋ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಗೊಂಬೆಮನೆಯ ತಿಂಗಳ ಕಾರ್ಯಕ್ರಮದಲ್ಲಿ ೨೦೧೬-೧೭ ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉಪ್ಪಿನಕುದ್ರು ಸರಕಾರಿ ಪ್ರೌಢ ಶಾಲೆಯಲ್ಲಿ ಪ್ರಥಮ ಸ್ಥಾನ ಪಡೆದ ಪ್ರತಿಭಾವಂತ ವಿದ್ಯಾರ್ಥಿ ಮಾಸ್ಟರ್ ಪ್ರಜ್ವಲ್ (೬೧೨ / ೬೨೫) ರನ್ನು ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ನಿವೃತ್ತ ಪ್ರಾಂಶುಪಾಲರಾದ ಎಮ್. ರತ್ನಾಕರ ಪೈ ವಹಿಸಿದ್ದರು. ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್, ಪ್ರಭಾಕರ ಮಧ್ಯಸ್ತ, ಶ್ರೀಮತಿ ವಸಂತಿ ಆರ್. ಪಂಡಿತ್ ಉಪಸ್ಥಿತರಿದ್ದರು. ಪಿ. ಜಯವಂತ ಪೈ ವಂದಿಸಿದರು. ಅನಂತರ ಶ್ರೀ ಸಿದ್ಧಿವಿನಾಯಕ ಮಹಿಳಾ ಭಜನಾ ಮಂಡಳಿ, ಕುಂದಾಪುರ ಇವರಿಂದ ಭಜನ್ ಸಂಧ್ಯಾ ಕಾರ್ಯಕ್ರಮ ನೆರೆದ ಪ್ರೇಕ್ಷಕರನ್ನು ರಂಜಿಸಿತು. ಅಕಾಡೆಮಿ ಬಳಗದ ನಾಗೇಶ್ ಶ್ಯಾನುಭೋಗ್ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ವಂಡ್ಸೆ ಗ್ರಾಮ ಪಂಚಾಯತನ ವಂಡ್ಸೆಯಿಂದ ಅಡಿಕೆಕೊಡ್ಲು ಸಂಭಾರ್ತಿ, ನೂಜಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಸೇತುವೆಯು ನಿರ್ಮಾಣವಾಗಿ ಈ ಭಾಗದ ಜನರ ಬಹುದಿನದ ಕನಸು ನನಸಾಗಿದೆ. ಸುಮಾರು ೨೦೦ ಕ್ಕೂ ಅಧಿಕ ಕುಟು೦ಬವು ಈ ಮಾರ್ಗವನ್ನು ನೆಚ್ಚಿಕೊಂಡಿದೆ. ರಸ್ತೆ ರಚನೆಯಾಗಿ ೪-೫ ವರ್ಷ ಕಳೆದರೂ ಸೇತುವೆಯ ರಚನೆ ಬಾಕಿ ಇದ್ದಿದ್ದರಿಂದ ಈ ಭಾಗದ ಜನರು ೪-೫ ಕೀ.ಮೀ. ಸುತ್ತು ಹಾಕಿ ನೂಜಾಡಿಯಿಂದ ವಂಡ್ಸೆಗೆ ಬರಬೇಕಾಗಿತ್ತು. ಈದಿಗ ಸೇತುವೆ ರಚನೆಯಿಂದ ಈ ಭಾಗದ ಜನರಿಗೆ ಅದರಲ್ಲೂ ಶಾಲಾ ಮಕ್ಕಳಿಗೆ ಅನೂಕೂಲವಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣು ತನ್ನ ಧನಾತ್ಮಕ ಚಿಂತನೆಗಳಿಂದ ಕೂಡಿದ ಕ್ರೀಯಾತ್ಮಕ ಕಾರ್ಯಗಳ ಮೂಲಕ ಎಲ್ಲಾ ಕ್ಷೇತ್ರಗಳಲ್ಲಿಯೂ ಸಮಾನತೆ ಸಾಧಿಸುತ್ತಿದ್ದಾಳೆ ಎಂದು ಕಂಡ್ಲೂರಿನ ಆಯುರ್ವೇದ ವೈದ್ಯೆ ಡಾ. ಸೋನಿ ಹೇಳಿದರು. ಇಲ್ಲಿನ ರೋಟರಿ ಭವನದಲ್ಲಿ ನಡೆದ ಇನ್ನರ್ವೀಲ್ ಕ್ಲಬ್ನ ಪದಗ್ರಹಣ ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಅವರು ಮಾತನಾಡಿದರು. ಮಹಿಳೆಗೆ ಸಮಾಜವಾಗಲಿ ಪುರುಷರಾಗಲೀ ಶತ್ರುಗಳಲ್ಲ. ಹೆಣ್ಣಿಗೆ ಹೆಣ್ಣೆ ಶತ್ರುಗಳಾಗುತ್ತಿದ್ದಾರೆ. ಆ ನೆಲೆಯಲ್ಲಿ ಪರಸ್ಪರ ಗೆಳೆತನದಿಂದ ಕೂಡಿ ಬಾಳುವ ಒಂದು ಸೂರಿನಂತಿರುವ ಇನ್ನರ್ವೀಲ್ ಕ್ಲಬ್ಬಿನಲ್ಲಿ ಎಲ್ಲಾ ಸಹೋದರಿಯರು ಸಂಘಟಿತರಾಗಿ ಊರಿಗೆ ಹಾಗೂ ಸಮಾಜಕ್ಕೆ ಮಾದರಿಯಾಗುವಂತಹ ಕೆಲಸಗಳನ್ನು ಮಾಡುವಂತಾದಾಗ ಮಾತ್ರ ಶತ್ರುತ್ವ ಮರೆಯಾಗಿ ಕತ್ತಲೆಯ ಒಳಗಿರುವ ಜ್ಞಾನ, ಭರವಸೆಗಳೆಂಬ ಬೆಳಕಿನ ಬೀಜದಂತೆ ಭವಿಷ್ಯದ ಬಾಳು ಬೆಳಗುತ್ತದೆ ಎಂದರು. ದೇಶದಾಂದ್ಯಂತ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಗಳು ಹೆಚ್ಚಾಗುತ್ತಿರುವುದು ನೋವಿನ ಸಂಗತಿಯಾಗಿದ್ದು, ಸ್ತ್ರೀ ಇನ್ನೂ ಕೂಡಾ ಸ್ವತಂತ್ರಳಾಗಿಲ್ಲ ಎನ್ನುವುದನ್ನು ನಿರೂಪಿಸುತ್ತಿದೆ. ಈ ದುಶ್ಕೃತ್ಯಗಳಿಂದ ಸ್ತ್ರೀ ಸಮಾಜ ಮುಕ್ತಿ ಕಾಣದೇ ಇನ್ನೂ ಸವಾಲಾಗಿಯೇ ಉಳಿದಿದ್ದು,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾರಂಭದಿಂದಲೂ ಸಾಮಾಜಿಕ ಅರಣ್ಯೀಕರಣ ಮತ್ತು ಜಲಸಂವರ್ಧನಾ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುತ್ತಿದ್ದು, ಎಲ್ಲೆಡೆಗಳಲ್ಲಿಯೂ ವನಸಂವರ್ಧನೆ ಆಗಬೇಕೆಂಬ ದೃಷ್ಟಿಕೋನದಿಂದ ವಿಶೇಷವಾಗಿ ದೇವಾಲಯಗಳ ಪರಿಸರದಲ್ಲಿ ದೇವರಕಾಡು, ಸರಕಾರಿ ಭೂಮಿಗಳಲ್ಲಿ ಪ್ರಗತಿವನ, ಶಾಲಾ ಪರಿಸರಗಳಲ್ಲಿ ಶಾಲಾ ವನ, ಔಷಧಿ ವನ, ನವಗ್ರಹ ವನ ಮೊದಲಾದ ಕಾರ್ಯಕ್ರಮಗಳಿಗೆ ಪ್ರೇರಣೆ ನೀಡುತ್ತಿರುವುದು ಪ್ರಶಂಶನೀಯ ಎಂದು ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು ವಂಡ್ಸೆ ವಲಯ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಅತ್ರಾಡಿ ಮತ್ತು ದೇವಲ್ಕುಂದ, ಅರಣ್ಯ ಇಲಾಖೆ ಮಾವಿನಗುಳಿ ಮತ್ತು ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಇವರ ಜಂಟಿ ಆಶ್ರಯದಲ್ಲಿ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ವಠಾರದಲ್ಲಿ ಜರಗಿದ ತಾಲೂಕು ಮಟ್ಟದ ಅರಣ್ಯ ಸಂವರ್ಧನ ಅಭಿಯಾನ ಉದ್ಘಾಟಿಸಿ ಮಾತನಾಡಿದರು. ಗಿಡಗಳನ್ನು ನಾಟಿ ಮಾಡಿದರೆ ಸಾಲದು ಅವುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು. ಇಂಗುಗುಂಡಿ…
