Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಪ್ರಸಿದ್ಧ ಕಾರಣಿಕ ಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಭಾನುವಾರ ಸಂಜೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಕ್ಷೇತ್ರಕ್ಕೆ ಆಗಮಿಸಿದ್ದ ರಾಷ್ಟ್ರಪತಿಯವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಶೆಟ್ಟಿ ಅವರು ಆದರದಿಂದ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ರಾಜ್ಯದ ಸಚಿವರುಗಳಾದ ರುದ್ರಪ್ಪ ಲಮಾಣಿ, ಕೆ.ಜೆ ಜಾರ್ಜ್, ಪ್ರಮೋದ್ ಮಧ್ವರಾಜ್, ಬೈಂದೂರು ಕ್ಷೇತ್ರ ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಹಾಗೂ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಅರ್ಚಕರುಗಳು ಉಪಸ್ಥಿತರಿದ್ದರು. ಕುಂದಾಪ್ರ ಡಾಟ್ ಕಾಂ. ಉಡುಪಿಯಿಂದ ಕೊಲ್ಲೂರು ತನಕ ಬೀಗಿ ಭದ್ರತೆ: ಬೆಳಿಗ್ಗೆ ವಿಶೇಷ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಆಗಮಿಸಿದ್ದ ರಾಷ್ಟ್ರಪತಿಗಳು ಉಡುಪಿಯಲ್ಲಿ ಆಸ್ಪತ್ರೆಗೆ ಶಂಕುಸ್ಥಾಪನೆ ಹಾಗೂ ಉಡುಪಿ ಶ್ರೀ ಕೃಷ್ಟ ಮಠದ ದರ್ಶನ ಪಡೆದರು. ವಿಶ್ರಾಂತಿ ಪಡೆದ ಬಳಿಕ ಅಲ್ಲಿಂದ ಕೊಲ್ಲೂರಿಗೆ ಆಗಮಿಸಿ ಮರಳಿ ರಸ್ತೆ ಮಾರ್ಗವಾಗಿ ಉಡುಪಿಗೆ ಬಳಿಕ ಅಲ್ಲಿಂದ ಬೆಂಗಳೂರಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಕುಂದಾಪುರದ ರಾಯಪ್ಪನಮಠ ರಸ್ತೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನ ಹಾಗೂ ಸಪರಿವಾರ ದೇವಸ್ಥಾನದ ಪ್ರತಿಷ್ಠಾ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಬಸ್ರೂರು ಮಹಾಲಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆಯವರನ್ನು ಗೌರವಿಸಲಾಯಿತು. ದೇವಸ್ಥಾನದ ಅರ್ಚಕರಾದ ಪ್ರಸಾದ ಐತಾಳ, ಪಾತ್ರಿಗಳಾದ ರಾಮ ದೇವಾಡಿಗ, ಪ್ರಮುಖರಾದ ನಾಗರಾಜ ರಾಯಪ್ಪನಮಠ, ಚಂದ್ರ ರಾಯಪ್ಪನಮಠ, ಮಂಜುನಾಥ ರಾಯಪ್ಪನಮಠ, ಸೂರ್ಯ ರಾಯಪ್ಪನಮಠ, ದಿನೇಶ ರಾಯಪ್ಪನಮಠ, ಗಣೇಶ, ಪ್ರಕಾಶ ದೇವಾಡಿಗ, ರಮೇಶ ದೇವಾಡಿಗ ಹಂಗಾರಕಟ್ಟೆ, ಕೃಷ್ಣ ದೇವಾಡಿಗ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಪ್ಪುಂದ: ಅಂಬಾಗಿಲು ಶ್ರೀ ಅಶ್ವತ ನಾರಾಯಣ ಮೂಡುಗಣಪತಿ ದೇವಸ್ಥಾನದಲ್ಲಿ ಮಂಗಳವಾರ ಅಂಗಾರಕ ಸಂಕಷ್ಟಿಯ ವಿಶೇಷ ದಿನದಂದು ರಾತ್ರಿ ದೇವರಿಗೆ ತೊಟ್ಟಿಲೋತ್ಸವ ಸೇವೆಯು ಯು. ಗಣೇಶ ಅವಧಾನಿ ಅವರ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರಗಿತು. ಸೇವಾದಾರರಾದ ಶ್ರೀಮತಿ ಸಿಯಾ ಲಲಿತ ಕಾಮತ ಯು.ಎಸ್.ಎ. ಕುಟುಂಬಸ್ಥರು ಹಾಗೂ ಸಾವಿರಾರು ಭಕ್ತಮಹಾಶಯರು ಶ್ರೀ ದೇವರ ದರುಶನ ಪಡೆದು ಪ್ರಸಾದವನ್ನು ಸ್ವೀಕರಿಸಿ ಪುನೀತರಾದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಕಲಿಕಾ ಸಾಮಾಗ್ರಿ ವಿತರಣಾ ಸಮಾರಂಭ’ ಜರುಗಿತು. ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಮ್.ಸಿ. ಅಧ್ಯಕ್ಷ ಪ್ರಭಾಕರ್ ಗಾಣಿಗ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮಪಂಚಾಯತ್ ಸದಸ್ಯೆ ಭವಾನಿ, ಲಕ್ಷ್ಮೀ ಮತ್ತು ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ವೆಂಕಟರಮಣ ದೇವಾಡಿಗ ಉಪಸ್ಥಿತರಿದ್ದರು. ಕಾರ್ಯಕ್ರಮದ ಪ್ರಧಾನ ಪೋಷಕರು ಉಪಸ್ಥಿತರಿದ್ದರು. ಸಹಶಿಕ್ಷಕಿ ಸಂಗೀತ ಸ್ವಾಗತಿಸಿದರು. ಮುಖ್ಯೋಪಾಧ್ಯಾಯರಾದ ತಿಮ್ಮಪ್ಪ ಗಾಣಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜ್ಯೋತಿ.ಎಚ್ ವಂದಿಸಿದರು. ಸಾರಿಕಾ ನಿರೂಪಿಸಿದರು. ಶಿಕ್ಷಕಿಯರಾದ ಭಾಗೀರಥಿ, ಅಂಬಾಬಾಯಿ ಮತ್ತು ಗೌರವ ಶಿಕ್ಷಕಿ ನಾಗರತ್ನ ಸಹಕರಿಸಿದ್ದರು.

Read More

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ | 17 ಜೂನ್ 2015. ಬೈಂದೂರಿನ ಇತಿಹಾಸದಲ್ಲಿ ಎಂದೂ ಮರೆಯಲಾಗದ ಕರಾಳ ದಿನವದು. ಎಲ್ಲರಂತೆಯೇ ನೂರಾರು ಕನಸು ಹೊತ್ತ ಕಂಗಳು ಅಂದು ಕಮರಿ ಹೋಗಿದ್ದವು. ಮನುಷ್ಯರೂಪಿ ವ್ಯಾಫ್ರನ ಅಟ್ಟಹಾಸಕ್ಕೆ ಆ ಕುಗ್ರಾಮದ ಹುಡುಗಿ ನಲುಗಿ ಹೋಗಿದ್ದಳು. ಭವಿಷ್ಯದ ಸ್ಪಷ್ಟ ಗುರಿ ಹೊಂದಿದ್ದ ದಿಟ್ಟ ಹುಡುಗಿಯ ಬದುಕಿನ ದಾರಿಗೆ ಅಂತ್ಯ ಹಾಡಲಾಗಿತ್ತು. ಹೌದು. ಅಂದು ಬೈಂದೂರು ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಅಕ್ಷತಾ ದೇವಾಡಿಗ ಎಂಬ ಹೆಣ್ಣಮಗಳು ತನ್ನ ಮನೆಗೆ ಸಾಗುವ ಹಾದಿಯಲ್ಲಿಯೇ ವಿಧಿಯ ಕ್ರೂರಲೀಲೆ ಬಲಿಯಾಗಿ ಹೋಗಿದ್ದಳು ಅಕ್ಷತಾಳ ಸಾವಿನ ಕರಾಳತೆಗೆ ಬೈಂದೂರಿನ ಜನತೆ ಬೆಚ್ಚಿ ಬಿದ್ದಿದ್ದರು. ವಿದ್ಯಾರ್ಥಿ ಸಮೂಹ ಅಕ್ಷರಶಃ ಆಕ್ರೋಶಭರಿತರಾಗಿ ಬೀದಿಗಿಳಿದಿದ್ದರು. ಸ್ವತಃ ಪೊಲೀಸ್ ವರಿಷ್ಠಾಧಿಕಾರಿಗಳೇ ತನಿಕೆಗೆ ಮುಂದಾದರು. ಕೊನೆಗೆ ಆರೋಪಿಯ ಬಂಧನವೂ ಆಯಿತು. ಆದರೆ ಅಕ್ಷತಾ ಮಾತ್ರ ಮರಳಿ ಬರಲಿಲ್ಲ! ಬದುಕಿದ್ದರೆ ಇಂಜಿನಿಯರಿಂಗ್ ಓದುತ್ತಿದ್ದಳು: ಹೇನಬೇರಿನ ಬಾಬು ದೇವಾಡಿಗ ಹಾಗೂ ರಾಧಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹಿಂದೂ ಹಿತರಕ್ಷಣಾ ವೇದಿಕೆ ಬೈಂದೂರು ಇದರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ ಸಚಿವ ರಮಾನಾಥ ರೈ ವಿರುದ್ಧ ಬೈಂದೂರು ಪೇಟೆಯಲ್ಲಿ ಜೂನ್ 20ರ ಮಂಗಳವಾರ ಬೆಳಿಗ್ಗೆ 10ಗಂಟೆಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಭಾಂದವರು ಭಾಗವಹಿಸುವಂತೆ ವಿಶ್ವ ಹಿಂದೂ ಪರಿಷತ್ – ಬಜರಂಗದಳ ಬೈಂದೂರು ಪ್ರಖಂಡದ ಅಧ್ಯಕ್ಷ ಶ್ರೀಧರ ಬಿಜೂರು ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಕನ್ನಡ ವಿಶ್ವವಿದ್ಯಾಲಯ, ಹಂಪಿ ಮಾನ್ಯತೆ ಪಡೆದಿರುವ ಕುಂದಾಪುರದ ರಂಗ ಅಧ್ಯಯನ ಕೇಂದ್ರವು ನಡೆಸುವ 2017-18 ರ ಸಾಲಿನ ಒಂದು ವರ್ಷದ ನಾಟಕ ಡಿಪ್ಲೋಮಾ ತರಗತಿಗೆ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದು ಪೂರ್ಣಾವಧಿ ಕೋರ್ಸ್ ಆಗಿದ್ದು, ತರಗತಿಗಳು ಜುಲೈ 24 , 2017 ರಿಂದ 15 ಮೇ 2018 ರ ವರೆಗೆ ನಡೆಯಲಿದೆ. ತರಗತಿಗಳು ಪ್ರತಿದಿನ ಬೆಳಿಗ್ಗೆ 7 ರಿಂದ ರಾತ್ರಿ 9 ಗಂಟೆಯವರೆಗೆ ನಡೆಯುವುದು. ಗರಿಷ್ಠ 20 ಮಂದಿಗೆ ಅವಕಾಶವಿದೆ. ಕೋರ್ಸಿನ ಅವಧಿಯಲ್ಲಿ ಪಾಶ್ಚಾತ್ಯ ರಂಗಭೂಮಿ, ಅಭಿಜಾತ ಭಾರತೀಯ ರಂಗಭೂಮಿ, ಆಧುನಿಕ ಭಾರತೀಯ ರಂಗಭೂಮಿ ಹಾಗೂ ಕನ್ನಡ ರಂಗಭೂಮಿಯ ಬಗ್ಗೆ ಸಮಗ್ರ ಅಭ್ಯಾಸಕ್ಕೆ ಅವಕಾಶ ಕಲ್ಪಿಸಲಾಗುವುದು. ನಾಲ್ಕು ಪೂರ್ಣ ಪ್ರಮಾಣದ ನಾಟಕಗಳನ್ನು ತಯಾರಿಸಲಾಗುವುದು. ನಟನೆ, ನಿರ್ದೇಶನ, ಬೆಳಕು, ವರ್ಣಾಲಂಕಾರ, ರಂಗವಿನ್ಯಾಸಗಳ ಬಗ್ಗೆ ಪ್ರಾಯೋಗಿಕ ತರಬೇತಿ ನೀಡಲಾಗುವುದು. ರಂಗಭೂಮಿಯ ಬಗ್ಗೆ ಈಗಾಗಲೇ ತಿಳುವಳಿಕೆ ಹೊಂದಿದವರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಆಯ್ಕೆಯಾದವರಿಗೆ ಊಟ ಮತ್ತು ವಸತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಕುಂದಾಪುರ ಬಾರ್ ಅಸೋಸಿಯೇಷನ್ ರಿ. ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ, ಭಂಡಾರ್‌ಕಾರ‍್ಸ್ ಪದವಿ ಪೂರ್ವ ಕಾಲೇಜು, ಕುಂದಾಪುರ ಮತ್ತು ಕಾರ್ಮಿಕ ಇಲಾಖೆ ಕುಂದಾಪುರ ಇವರ ಸಂಯಕ್ತ ಆಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮ ಭಂಡಾರ್‌ಕಾರ‍್ಸ್ ಪದವಿ ಪೂರ್ವ ಕಾಲೇಜು ಕುಂದಾಪುರದ ಎ.ವಿ.ಹಾಲ್‌ನಲ್ಲಿ ಜರುಗಿತು. ಕುಂದಾಪುರದ ೨ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶರಾದ ಚಂದ್ರಶೇಖರ ಬಣಕಾರ್ ಇವರು ಕಾರ್ಯಕ್ರಮವನ್ನು ಉದ್ಘಾಟಸಿ, ಜೂನ್ ೧೨ ರಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನವನ್ನಾಗಿ ವಿಶ್ವದಾದ್ಯಂತ ಆಚರಿಸುತ್ತಿದ್ದು, ಚಿಕ್ಕ ಮಕ್ಕಳಿಂದ ದುಡಿಸಿಕೊಳ್ಳುವ ಪ್ರವೃತ್ತಿಯನ್ನು ಕೈಬಿಟ್ಟು, ಮಗುವಿನ ದೈಹಿಕ, ಮಾನಸಿಕ ಮತ್ತು ಬೌಧ್ಧಿಕ ಬೆಳವಣಿಗೆ ಸಹಾಯವಾಗುವ ಪೂರಕ ಅಂಶಗಳನ್ನು ಪೂರೈಸಿ ಮಕ್ಕಳು ತಮ್ಮ ಬಾಲ್ಯವನ್ನು ಅನುಭವಿಸುವುದರ ಜೊತೆಗೆ ಸಮಾಜದಲ್ಲಿ ಒಬ್ಬ ಉತ್ತಮ ಪ್ರಜೆಯಾಗಿ ಬದುಕುವ ಅವಕಾಶವನ್ನು ಕಲ್ಪಿಸಬೇಕು ಹಾಗೂ ಅಂತಹವರನ್ನು ಶಾಲೆಗಳಿಗೆ ಸೇರಿಸುವಲ್ಲಿ ಎಲ್ಲರೂ ಸಹಕರಿಸಿದಾಗ ಮಾತ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಕುಂದಾಪುರ ಬಾರ್ ಅಸೋಸಿಯೇಷನ್ (ರಿ.) ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಇಲಾಖೆ ಕುಂದಾಪುರ ಇವರ ಸಂಯಕ್ತ ಆಶ್ರಯದಲ್ಲಿ ಬಾಲ್ಯ ವಿವಾಹ ಜಾಗೃತಿ ಕಾರ್ಯಕ್ರಮ ಸರಕಾರಿ ಪದವಿ ಪೂರ್ವ ಕಾಲೇಜು, ಶಿರೂರು ಇಲ್ಲಿ ಜರುಗಿತು. ಕುಂದಾಪುರ ಬಾರ್ ಅಸೋಸಿಯೇಷನ್ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿ ಹದಿನೆಂಟು ವರ್ಷಕ್ಕಿಂತ ಕಡಿಮೆ ಪ್ರಾಯದ ಹುಡುಗಿ, ೨೧ ವರ್ಷಕ್ಕಿಂತ ಕಡಿಮೆ ಪ್ರಾಯದ ಹುಡುಗ ಪರಸ್ಪರ ಒಪ್ಪಿ ಮದುವೆಯಾಗುವುದು ಅಥವಾ ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡಿಸುವುದುನ್ನು ಬಾಲ್ಯ ವಿವಾಹ ಎನ್ನಲಾಗುತ್ತದೆ. ಕರಾವಳಿಯ ಈ ಭಾಗದಲ್ಲಿ ಬಾಲ್ಯ ವಿವಾಹಗಳು ನಡೆದ ಪ್ರಕರಣ ತೀರಾ ಕಡಿಮೆಯಾಗಿದ್ದು, ಉತ್ತರ ಕರ್ನಾಟಕದ ಹಾಗೂ ದೇಶದ ಬೇರೆ ಬೇರೆ ಭಾಗಗಳಲ್ಲಿ ಇಂದಿಗೂ ಕೂಡಾ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೆ ಇವೆ. ಇದರಿಂದಾಗಿ ಮಕ್ಕಳ ಮಾನಸಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟೇಶ್ವರ: ಗುರುಕುಲ ಶಾಲೆಯ ಮೊಂಟೆಸರಿ ಮಕ್ಕಳಿಗಾಗಿ ಬಣ್ಣಗಳ ದಿನ ಎಂಬ ವಿಶೇಷ ಕಾರ‍್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಾಮನ್ಯವಾಗಿ ಪುಟಾಣಿಗಳು ಮೊದಲು ಆಕರ್ಷಿತರಾಗುವುದೇ ಬಣ್ಣಗಳಿಗೆ, ಆ ನಿಟ್ಟಿನಲ್ಲಿ ಪುಟಾಣಿಗಳಿಗಾಗಿ ಪ್ರಾಥಮಿಕ, ಮಾದ್ಯಮಿಕ, ಮತ್ತು ನೈಸರ್ಗಕ ಬಣ್ಣಗಳ ಕುರಿತು ಪ್ರಾಯೋಗಿಕ ಮಾಹಿತಿ ನೀಡುವ ನಿಟ್ಟಿನಲ್ಲಿ ಪ್ರತಿ ವಿಭಾಗದ ಮಕ್ಕಳಿಗೆ ನಿರ್ದಿಷ್ಟ ಬಣ್ಣದ ಉಡುಗೆ ಹಾಕುವಂತೆ ಸೂಚಿಸಲಾಗಿತ್ತು. ಪ್ರತಿ ತರಗತಿಯ ಮಕ್ಕಳು ಮತ್ತು ಶಿಕ್ಷಕಿ ನಿರ್ದಿಷ್ಟ ಬಣ್ಣದ ಉಡುಗೆ ತೊಟ್ಟು ಅದಕ್ಕೆ ಸಂಬಂಧಪಟ್ಟ ವಸ್ತುಗಳನ್ನು ತಂದು ಜೋಡಿಸಿದ್ದರು. ಕಾರ‍್ಯಕ್ರಮದ ಮೊದಲಿಗೆ ಬಣ್ಣಗಳಲ್ಲಿ ಎಷ್ಟು ವಿಧಗಳು? ಅವುಗಳ ಮಹತ್ವವೇನು? ಯಾಕೆ ಈ ಹಂತದಲ್ಲಿ ಬಣ್ಣಗಳ ದಿನಾಚರಣೆಯನ್ನು ಆಚರಿಸಬೇಕು ? ಎನ್ನುವ ವಿಷಯದ ಕುರಿತು ಸವಿಸ್ತಾರ ಮಾಹಿತಿಯನ್ನು ಮುಖ್ಯ ಶಿಕ್ಷಕಿ, ವಿಶಾಲಾ ಶೆಟ್ಟಿ ತಿಳಿಸಿದರು. ಹಾಗು ಶಿಕ್ಷಕಿಯರು ಪುಟಾಣಿಗಳ ಜೊತೆ ಸೇರಿ ಬಣ್ಣಗಳ ಹಾಡುಗಳನ್ನು ಹಾಡಿದರು, ಮತ್ತು ಬಣ್ಣಗಳ ಕುರಿತು ವಿವರಣೆಯನ್ನು ನೀಡಿದರು ಜೊತೆಗೆ ಕಾಮನಬಿಲ್ಲಗೆ ಬಣ್ಣ ಹಾಕುವ ಕ್ರಿಯಾತ್ಮಕ ಚಟುವಟಿಕೆಯನ್ನು ಮಕ್ಕಳಿಗೆ ನೀಡುವುದರ…

Read More