Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಕುಂದಾಪುರ ಬಾರ್ ಅಸೋಸಿಯೇಷನ್ (ರಿ.) ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಇಲಾಖೆ ಕುಂದಾಪುರ ಇವರ ಸಂಯಕ್ತ ಆಶ್ರಯದಲ್ಲಿ ಬಾಲ್ಯ ವಿವಾಹ ಜಾಗೃತಿ ಕಾರ್ಯಕ್ರಮ ಸರಕಾರಿ ಪದವಿ ಪೂರ್ವ ಕಾಲೇಜು, ಶಿರೂರು ಇಲ್ಲಿ ಜರುಗಿತು. ಕುಂದಾಪುರ ಬಾರ್ ಅಸೋಸಿಯೇಷನ್ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿ ಹದಿನೆಂಟು ವರ್ಷಕ್ಕಿಂತ ಕಡಿಮೆ ಪ್ರಾಯದ ಹುಡುಗಿ, ೨೧ ವರ್ಷಕ್ಕಿಂತ ಕಡಿಮೆ ಪ್ರಾಯದ ಹುಡುಗ ಪರಸ್ಪರ ಒಪ್ಪಿ ಮದುವೆಯಾಗುವುದು ಅಥವಾ ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡಿಸುವುದುನ್ನು ಬಾಲ್ಯ ವಿವಾಹ ಎನ್ನಲಾಗುತ್ತದೆ. ಕರಾವಳಿಯ ಈ ಭಾಗದಲ್ಲಿ ಬಾಲ್ಯ ವಿವಾಹಗಳು ನಡೆದ ಪ್ರಕರಣ ತೀರಾ ಕಡಿಮೆಯಾಗಿದ್ದು, ಉತ್ತರ ಕರ್ನಾಟಕದ ಹಾಗೂ ದೇಶದ ಬೇರೆ ಬೇರೆ ಭಾಗಗಳಲ್ಲಿ ಇಂದಿಗೂ ಕೂಡಾ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೆ ಇವೆ. ಇದರಿಂದಾಗಿ ಮಕ್ಕಳ ಮಾನಸಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟೇಶ್ವರ: ಗುರುಕುಲ ಶಾಲೆಯ ಮೊಂಟೆಸರಿ ಮಕ್ಕಳಿಗಾಗಿ ಬಣ್ಣಗಳ ದಿನ ಎಂಬ ವಿಶೇಷ ಕಾರ‍್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಾಮನ್ಯವಾಗಿ ಪುಟಾಣಿಗಳು ಮೊದಲು ಆಕರ್ಷಿತರಾಗುವುದೇ ಬಣ್ಣಗಳಿಗೆ, ಆ ನಿಟ್ಟಿನಲ್ಲಿ ಪುಟಾಣಿಗಳಿಗಾಗಿ ಪ್ರಾಥಮಿಕ, ಮಾದ್ಯಮಿಕ, ಮತ್ತು ನೈಸರ್ಗಕ ಬಣ್ಣಗಳ ಕುರಿತು ಪ್ರಾಯೋಗಿಕ ಮಾಹಿತಿ ನೀಡುವ ನಿಟ್ಟಿನಲ್ಲಿ ಪ್ರತಿ ವಿಭಾಗದ ಮಕ್ಕಳಿಗೆ ನಿರ್ದಿಷ್ಟ ಬಣ್ಣದ ಉಡುಗೆ ಹಾಕುವಂತೆ ಸೂಚಿಸಲಾಗಿತ್ತು. ಪ್ರತಿ ತರಗತಿಯ ಮಕ್ಕಳು ಮತ್ತು ಶಿಕ್ಷಕಿ ನಿರ್ದಿಷ್ಟ ಬಣ್ಣದ ಉಡುಗೆ ತೊಟ್ಟು ಅದಕ್ಕೆ ಸಂಬಂಧಪಟ್ಟ ವಸ್ತುಗಳನ್ನು ತಂದು ಜೋಡಿಸಿದ್ದರು. ಕಾರ‍್ಯಕ್ರಮದ ಮೊದಲಿಗೆ ಬಣ್ಣಗಳಲ್ಲಿ ಎಷ್ಟು ವಿಧಗಳು? ಅವುಗಳ ಮಹತ್ವವೇನು? ಯಾಕೆ ಈ ಹಂತದಲ್ಲಿ ಬಣ್ಣಗಳ ದಿನಾಚರಣೆಯನ್ನು ಆಚರಿಸಬೇಕು ? ಎನ್ನುವ ವಿಷಯದ ಕುರಿತು ಸವಿಸ್ತಾರ ಮಾಹಿತಿಯನ್ನು ಮುಖ್ಯ ಶಿಕ್ಷಕಿ, ವಿಶಾಲಾ ಶೆಟ್ಟಿ ತಿಳಿಸಿದರು. ಹಾಗು ಶಿಕ್ಷಕಿಯರು ಪುಟಾಣಿಗಳ ಜೊತೆ ಸೇರಿ ಬಣ್ಣಗಳ ಹಾಡುಗಳನ್ನು ಹಾಡಿದರು, ಮತ್ತು ಬಣ್ಣಗಳ ಕುರಿತು ವಿವರಣೆಯನ್ನು ನೀಡಿದರು ಜೊತೆಗೆ ಕಾಮನಬಿಲ್ಲಗೆ ಬಣ್ಣ ಹಾಕುವ ಕ್ರಿಯಾತ್ಮಕ ಚಟುವಟಿಕೆಯನ್ನು ಮಕ್ಕಳಿಗೆ ನೀಡುವುದರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಬೆಂಗಳೂರಿನ ಯಕ್ಷಪ್ರೇಮಿಗಳಿಗೆ ಅಪರೂಪಕ್ಕೊಮ್ಮೆ ಜೋಡಾಟ ನೋಡುವ ಅವಕಾಶ. ಜೂನ್ 16ರ ಶುಕ್ರವಾರ ರಾತ್ರಿ 10ರಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷ ದಿಗ್ಗಜರ ಸಮಾಗಮದೊಂದಿಗೆ ಮೂರು ಪೌರಾಣಿಕ ಪ್ರಸಂಗಗಳನ್ನು ಕಣ್ತುಂಬಿಕೊಳ್ಳಬಹುದು. ಕಲಾದರ ಯಕ್ಷರಂಗ ಬಳಗ ಜಲವಳ್ಳಿ ಹಾಗೂ ಪ್ರಸಿದ್ಧ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ, ಕಲಾಕ್ಷೇತ್ರ ಯಕ್ಷಮಿತ್ರ ಬಳಗ ಬೆಂಗಳೂರು ಸಂಯೋಜನೆಯಲ್ಲಿ ಭೀಷ್ಮ ಪ್ರತಿಜ್ಞೆ – ವೀರ ವೃಷಸೇನ – ವೀರ ಮಾರುತಿ ಎಂಬ ಮೂರು ಪ್ರಸಂಗಗಳು ಪ್ರದರ್ಶನ ಕಾಣಲಿವೆ. ಕೊಳಗಿ, ಹಿಲ್ಲೂರು, ಬಾಳ್ಕಲ್ ಗಾನ ಸಾರಥ್ಯದಲ್ಲಿ ಪ್ರಥಮಬಾರಿಗೆ ದೇವವೃತನಾಗಿ ಜಲವಳ್ಳಿ ಅಶೋಕ್ ಭಟ್ – ಶಂತನು ಯಲಗುಪ್ಪ – ಯೋಜನಗಂಧಿ ಹಳ್ಳಾಡಿ – ಕಂದರ ಸು.ಚಿಟ್ಟಾಣಿ – ಮಾರುತಿ ಯಾಜಿ – ಬಲರಾಮ ಕಾರ್ತಿಕ ಚಿಟ್ಟಾಣಿ – ಕೃಷ್ಣ ಭಾಗವತಿಕೆ :- ನಾಗರಕೊಡಿಗೆ ಗಣೇಶ್ ಹೆಬ್ರಿ ಚಂಡೆ : ಶ್ರೀನಿವಾಸ ಪ್ರಭು ಕುಮಾರ್ ಕೊಕ್ಕರ್ಣೆ ವೃಷಸೇನ : ಹೆನ್ನಾಬೈಲ್ ನಿತೀನ್ ಶೆಟ್ಟಿ ಅರ್ಜುನ : ಐರ್ ಬೈಲ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನವಣಾ ಪ್ರಕ್ರಿಯೆ ಕಾವು ಪಡೆಯುತ್ತಿದ್ದರೆ ಇನ್ನೊಂದೆಡೆ ಇಲ್ಲೊಂದು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ನಾಯಕ ಹಾಗೂ ವಿದ್ಯಾರ್ಥಿ ಉಪನಾಯಕನ ಆಯ್ಕೆಗಾಗಿ ಸಾರ್ವತ್ರಿಕ ಮಾದರಿಯ ಚುನಾವಣೆ ಸುರಿವ ಮಳೆಯ ನಡುವೆಯೂ ಬಿರುಸಿನಿಂದ ನಡೆಯಿತು. ಕುಂದಾಪುರ ವಲಯದ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಳೆದ ಹಲವು ವರ್ಷಗಳಿಂದ ಸಂಸದೀಯ ಮಾದರಿಯ ಚುನಾವಣೆಯ ಮೂಲಕ ವಿದ್ಯಾರ್ಥಿ ನಾಯಕ ಮತ್ತು ಉಪನಾಯಕನನ್ನು ಆಯ್ಕೆ ಮಾಡಲಾಗುತ್ತಿದೆ. ಮತಗಟ್ಟೆ ಅಧಿಕಾರಿಗಳ ಬಳಿ ಮತದಾರರ ಪಟ್ಟಿ ಇರುತ್ತದೆ. ಓಟು ಹಾಕುವ ಪ್ರತಿ ವಿದ್ಯಾರ್ಥಿಯ ಸಹಿಯನ್ನು ರಿಜಿಸ್ಟರಿನಲ್ಲಿ ಪಡೆಯಲಾಗುತ್ತದೆ. ನಂತರ ಅಳಿಸಲಾಗದ ಶಾಯಿಯನ್ನು ಮತದಾರರ ಬಲಗೈ ತೋರು ಬೆರಳಿಗೆ ಹಾಕಿ ಅಭ್ಯರ್ಥಿಗಳ ಹೆಸರು ಇರುವ ಮುದ್ರಿತ ಮತಪತ್ರವನ್ನು ನೀಡಲಾಗಿ ಅದಕ್ಕೆ ಅಲ್ಲಿ ಇಡಲಾಗಿರುವ ಪೆನ್ನಿನಿಂದ ಗುರುತು ಹಾಕುವ ಮೂಲಕ ವಿದ್ಯಾರ್ಥಿಗಳು ಮತ ಚಲಾಯಿಸುತ್ತಾರೆ. ಮತದಾನ ಪ್ರಕ್ರಿಯೆ ಮುಗಿದ ನಂತರ ಮತ ಎಣಿಕೆಯನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಸಿದ್ಧಾಪುರ: ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಅನ್ಯಕೋಮಿನ ಯುವಕನನ್ನು ಸಾರ್ವಜನಿಕರು ಹಿಡಿದ ಪೊಲೀಸರಿಗೊಪ್ಪಿಸಿದ ಘಟನೆ ಸಿದ್ಧಾಪುರದಲ್ಲಿ ನಡೆದಿದೆ. ಸಿದ್ಧಾಪುರ ಮೂಲದ ಅಪ್ರಾಪ್ತ ಯುವಕ (೧೭) ಪೊಲೀಸರ ವಶದಲ್ಲಿದ್ದಾನೆ. ಸಂಜೆ ವೇಳೆ ಮನೆಗೆ ತೆರಳುತ್ತಿದ್ದ ಕಾಲೇಜೊಂದರ ವಿದ್ಯಾರ್ಥಿನಿಗೆ ಸಿದ್ಧಾಪುರದ ಅನ್ಯಕೋಮಿನ ಯುವಕನೋರ್ವನನ್ನು ಅಡ್ಡಗಟ್ಟಿ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಆಕೆಯೊಂದಿಗೆ ಆಶ್ಲೀಲವಾಗಿ ಮಾತನಾಡಿದ್ದಲ್ಲದೇ ಪೋಟೋ ತೆಗೆಯಲು ಹೋಗಿದ್ದಾನೆ. ಯುವಕ ವರ್ತನೆಗೆ ಕಂಡು ಯುವತಿ ಕಿರುಚಿಕೊಂಡಿದ್ದು, ಕೂಡಲೇ ಸ್ಥಳೀಯರು ಒಟ್ಟಾಗಿ ಆತನನ್ನು ಹಿಡಿದು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಶಂಕರನಾರಾಯಣ ಪೊಲೀಸರು ಯುವಕನ್ನು ವಶಕ್ಕೆ ಪಡೆದಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತದ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರನ್ನು ‘ಬೀದಿಯ ಗೂಂಡಾ’ ಎಂದು ಹೋಲಿಕೆ ಮಾಡಿದ ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಅವರ ಹೇಳಿಕೆಯನ್ನು ಖಂಡಿಸಿ ಉಪ್ಪುಂದ ಪೇಟೆಯಲ್ಲಿ ಬೈಂದೂರು ಕ್ಷೇತ್ರ ಬಿಜೆಪಿ ಯುವ ಮೋರ್ಚಾ ವತಿಯಿಂದ ಸಂದೀಪ್ ದೀಕ್ಷಿತ್ ಭಾವಚಿತ್ರವನ್ನು ದಹಿಸಲಾಯಿತು. ಬೈಂದೂರು ಬಿಜೆಪಿ ಯುವಮೋರ್ಚಾ ಪ್ರಭಾರಿ ಬಿ.ಎಸ್ ಸುರೇಶ್ ಶೆಟ್ಟಿ ಮಾತನಾಡಿ ಭಾರತೀಯ ಸೇನೆಯ ಬಗೆಗೆ ದೇಶವಾಸಿಗಳಲ್ಲಿ ಅಪಾರ ಗೌರವವಿದೆ. ಸೇನಾ ಮುಖ್ಯಸ್ಥರ ಹೇಳಿಕೆಯನ್ನು ಟೀಕಿಸುವ ಭರದಲ್ಲಿ ಅವರನ್ನು ಪಾಕಿಸ್ಥಾನ ಸೇನೆಗೆ ಹೋಲಿಸಿದ್ದಲ್ಲದೇ ಗೂಂಡಾ ಎಂದು ಜರಿದಿರುವುದು ಖಂಡನೀಯ. ಕಾಂಗ್ರೆಸ್ ನಾಯಕರುಗಳ ಇಂತಹ ಹೇಳಿಕೆ ನಮ್ಮ ಸೇನೆಗೆ ಅಗೌರವ ತೋರುವಂತದ್ದು ಎಂದರು. ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ, ಹಿಂದುಳಿದ ಮೂರ್ಚಾ ಜಿಲ್ಲಾ ಉಪಾಧ್ಯಕ್ಷ ಆನಂದ ಖಾರ್ವಿ, ಉಪ್ಪುಂದ ಗ್ರಾಪಂ ಮಾಜಿ ಸದಸ್ಯ ಜಗನ್ನಾಥ ಖಾರ್ವಿ, ಬೈಂದೂರು ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೀವಜಲವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳದೇ ಇರುವುದರಿಂದ ಉಡುಪಿ ಜಲ್ಲೆಯಲ್ಲಿ ನೀರಿನ ಹಾಹಾಕಾರ ಹೆಚ್ಚಿದೆ. ಭೂಮಿಯನ್ನು ತಂಪಾಗಿರಿಸುತ್ತಿದ್ದ ಅರಣ್ಯ ಸಂಪತ್ತು ವರ್ಷದಿಂದ ವರ್ಷಕ್ಕೆ ನಾಶವಾಗುತ್ತಿರುವುದು ನೀರಿಗೆ ಕೊರೆತೆಗೆ ದೊಡ್ಡ ಕೊಡುಗೆ ನೀಡಿದೆ ಎಂದು ಬಾಂಡ್ಯ ಎಜುಕೇಶನ್ ಟ್ರಸ್ಟ್ ಸಂಸ್ಥಾಪಕ ಬಿ. ಅಪ್ಪಣ್ಣ ಹೆಗ್ಡೆ ಹೇಳಿದರು. ಅವರು ವಕ್ವಾಡಿ ಗುರುಕುಲ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಇಂಗುಗುಂಡಿ ನೋಡಬನ್ನಿ ಜಲಸಂರಕ್ಷಣಾ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ನಳ್ಳಿ ನೀರಿನ ವ್ಯವಸ್ಥೆ ಹೆಚ್ಚಾದಂತೆ ಅದರ ದುರುಪಯೋಗವೂ ಹೆಚ್ಚಾಗಿದೆ. ಕೊಳವೆ ಬಾವಿಯಿಂದಾಗಿ ನೀರಿನ ಮಟ್ಟ ಕುಸಿದಿದೆ. ಮಳೆ ನೀರಿನ ಕೊಯ್ಲು, ಇಂಗು ಗುಂಡಿ, ಇಂಗು ಬಾವಿಯಂತಹ ನೀರಿಂಗಿಸುವ ವಿಧಾನವನ್ನು ಒಳಗೊಂಡು ನೀರು ಉಳಿಸುವ ಕಾರ್ಯಕ್ಕೆ ಮುಂದಾಗದಿದ್ದರೆ ಮುಂದಿನ ಪೀಳಿಗೆಗೆ ಬರಡು ಭೂಮಿಯನ್ನು ಬಿಡಬೇಕಾದ ಸಂದರ್ಭ ಬಂದೊದಗಲಿದೆ ಎಂದರು. ಜಲ ತಜ್ಞ ಶ್ರೀಪಡ್ರೆ ಮಾತನಾಡಿ ಕೃತಕವಾಗಿ ನೀರು ಇಂಗಿಸುವ ಕ್ರಮ ಅಳವಡಿಸಿಕೊಳ್ಳುವುದು ಅನಿವಾರ್ಯ. ಕಾಡು ನಾಶ ಮಾಡಿದ್ದಕ್ಕೆ ಇದೊಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಸಮಾಜಕ್ಕೆ ಶಕ್ತಿ ಕೊಡುವ ಕೇಂದ್ರವಾದ ವಿದ್ಯಾಮಂದಿರಗಳಲ್ಲಿ ಧನಾತ್ಮಕ ಚಿಂತನೆಗಳು ದೊಡ್ಡ ಶಕ್ತಿಯಾಗಬೇಕು. ಶಾಲೆಯಲ್ಲಿನ ಕ್ರೀಯಾಶೀಲ ಶಿಕ್ಷಕರಿಂದ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅರಳುತ್ತದೆ. ಇಂತಹ ಪರಿಸರದಲ್ಲಿ ಕಲಿಯುವ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಅವಕಾಶಗಳನ್ನು ಬಳಸಿಕೊಂಡು ಮುನ್ನಡೆಯುತ್ತಾರೆ ಎಂದು ತಾಪಂ ಸದಸ್ಯೆ ಗ್ರೀಷ್ಮಾ ಭಿಡೆ ಹೇಳಿದರು. ಕೊಲ್ಲೂರು ಧರ್ಮಪೀಠ ಆಶ್ರಮದ ವತಿಯಿಂದ ಅತ್ಯಂತ ಹಿಂದುಳಿದ ಪ್ರದೇಶದ ಸಲಗೇರಿ, ಹಳ್ಳಬೇರು, ಮಾವಿನಕಾರು ಹಾಗೂ ಕೊಲ್ಲೂರು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ೧೧ನೇ ವರ್ಷದ ಶೈಕ್ಷಣಿಕ ಸವಲತ್ತು ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆವಹಿಸಿದ್ದ ಗ್ರಾಪಂ ಅಧ್ಯಕ್ಷ ಮಾವಿನಕಾರು ಜಯಪ್ರಕಾಶ ಶೆಟ್ಟಿ ಮಾತನಾಡಿ, ಕೊಲ್ಲೂರಿನ ಈ ಪುಣ್ಯಭೂಮಿಯಲ್ಲಿ ಧರ್ಮಪೀಠ ಆಶ್ರಮದ ವತಿಯಿಂದ ಮಠದ ಸ್ವಾಮೀಜಿಯವರು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಈ ಭಾಗದ ಜನರಿಗೆ ಸಹಾಯಹಸ್ತ ನೀಡುವ ಮೂಲಕ ಧರ್ಮಕಾರ್ಯ ಮಾಡುತ್ತಿರುವುದು ಅಭಿನಂದನೀಯ ಎಂದರು. ಕಳೆದ ಹನ್ನೊಂದು ವರ್ಷದಿಂದ ಮಕ್ಕಳಿಗೆ ಪುಸ್ತಕ ಮತ್ತು ಕೊಡೆಗಳನ್ನು ನೀಡುತ್ತಿದ್ದು, ಮಕ್ಕಳು ಇದರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಲ್ಲೂರಿನಿಂದ ಶಿರೂರು ತನಕ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಉಸ್ತುವಾರಿಯಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯಿಂದಾಗಿ ಆಗುತ್ತಿರುವ ಅವಘಡಗಳು ಹಾಗೂ ಹಾಗೂ ಸಾರ್ವಜನಿಕರಿಗೆ ಆಗುತ್ತಿರುವ ತೀವ್ರ ಸ್ವರೂಪದ ತೊಂದರೆಗಳಿಗೆ ಈ ಭಾಗದ ಸಂಸದರ ನಿರ್ಲಕ್ಷವೇ ಕಾರಣ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಆರೋಪಿಸಿದ್ದಾರೆ. ಬೈಂದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರದ ಚತುಷ್ಪಥ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವ ಐಆರ್‌ಬಿ ಕಂಪೆನಿಯು ಕೆಲಸದ ಗುಣಮಟ್ಟ ಅಪೇಕ್ಷಿತ ಮಟ್ಟದಲ್ಲಿ ಇಲ್ಲ. ಸ್ಥಳೀಯರ ಅಗತ್ಯಕ್ಕೆ ತಕ್ಕಂತೆ ಯು ಟರ್ನ್, ಅಂಡರ್ ಪಾಸ್ ನಿರ್ಮಿಸುತ್ತಿಲ್ಲ. ಚರಂಡಿ ನಿರ್ಮಿಸದೇ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವುದು, ಎಲ್ಲೆಂದರಲ್ಲಿ ಮಣ್ಣು ಸುರಿದಿರುವುದು ಮಳೆಗಾಲದಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಒತ್ತಿನೆಣೆ ಉಂಟಾಗಿರುವ ಗುಡ್ಡ ಕುಸಿತ ಮತ್ತು ಮಾರಸ್ವಾಮಿಯಲ್ಲಿ ಹಾಗೂ ಇತರೆಡೆಗಳಲ್ಲಾದ ರಸ್ತೆ ಜರಿತ ಗಂಭೀರ ಸ್ವರೂಪದ ಅಪಾಯ ಮತ್ತು ಆತಂಕ ಉಂಟುಮಾಡಿದೆ. ಮಳೆಗಾಲ ಅವಾಂತರದ ಬಗೆಗೆ ಹಲವು ಭಾರಿ ಎಚ್ಚರಿಸಿದ್ದರೂ ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿಲ್ಲ. ಇದು ರಾಷ್ಟ್ರೀಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಜೂ. 18ರಂದು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಕೊಲ್ಲೂರು ಕ್ಷೇತ್ರಕ್ಕೆ ಸಂದರ್ಶನ ಮಾಡಲಿರುವುದರಿಂದ ವಿಶೇಷ ಭದ್ರತೆ ಒದಗಿಸುವ ಸಲುವಾಗಿ ಪೊಲೀಸ್ ಉನ್ನತ ಅಧಿಕಾರಿಗಳ ಸಭೆ ನಡೆದಿದ್ದು, ದೇಗುಲದ ಪರಿಸರದ ಪರಿಶೀಲನೆ ನಡೆಸಲಾಗಿದೆ. ರಾಷ್ಟ್ರಪತಿ ಕೊಲ್ಲೂರಿಗೆ ಆಗಮಿಸುವುದು ಬಹುತೇಕ ಖಚಿತವಾಗಿದ್ದು, ಈ ದಿಸೆಯಲ್ಲಿ ಅರೆಶಿರೂರಿನಲ್ಲಿ ಪ್ರಸ್ತುತ ಇರುವ ಹೆಲಿಪ್ಯಾಡ್ ಅಲ್ಲದೇ ಪ್ರತ್ಯೇಕ 2 ಹೆಲಿಪ್ಯಾಡ್ ನಿರ್ಮಿಸುವ ಸಲುವಾಗಿ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಚಂದ್ರಶೇಖರ ನೇತೃತ್ವದಲ್ಲಿ ಕಾಮಗಾರಿ ನಡೆಯುತ್ತಿದೆ. ದಿಲ್ಲಿ ವಿಶೇಷ ಪೊಲೀಸ್ ತಂಡ ಕೊಲ್ಲೂರಿಗೆ ಆಗಮಿಸಿದ್ದು, ಇಲ್ಲಿನ ಪರಿಸರದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಎನ್ಎಸ್ಜಿ ಕಮಾಂಡೋಗಳು ಕೊಡಚಾದ್ರಿ ಬೆಟ್ಟ ಸಮೇತ ಈ ಭಾಗದ ಬಗ್ಗೆ ವಿವರಣೆ ಕೇಳಿದ್ದು, ಅದಕ್ಕೆ ಪೂರಕವಾಗಿ ವಿಶೇಷ ಭದ್ರತೆ ಒದಗಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ದೇಗುಲದ ಅರ್ಚಕರು ಹಾಗೂ ಸಿಬಂದಿ ಸಹಿತ ಪ್ರತಿಯೋರ್ವರ ವಿವರಣೆ ಕೇಳಿರುವ ವಿಶೇಷ ಪೊಲೀಸ್ ಪಡೆ, ಪೂರ್ಣ ಮಾಹಿತಿ ಸಂಗ್ರಹಿಸುತ್ತಿದೆ. ಜೂ. 18ರಂದು ಮಧ್ಯಾಹ್ನದ ಅನಂತರ ಕೊಲ್ಲೂರಿಗೆ ಆಗಮಿಸಿ…

Read More