ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಅ.4: ಬಡಗುತಿಟ್ಟಿನ ಯಕ್ಷಗಾನದ ಧ್ರುವತಾರೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ (84) ಅವರು ನಿನ್ನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಇಂದು ಮೃತದೇಹವನ್ನು ಚಿಟ್ಟಾಣಿಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಉಡುಪಿಂದ ಆರಂಭಿಸಿ ಸಾಲಿಗ್ರಾಮ, ಕೋಟ, ಕುಂದಾಪುರ, ಬೈಂದೂರು ಸೇರಿದಂತೆ ವಿವಿಧೆಡೆ ಅವರ ಅಪಾರ ಅಭಿಮಾನಿಗಳು ಅಂತಿಮ ನಮನ ಸಲ್ಲಿಸಿದರು. ಯಕ್ಷಗಾನದ ಬಡಗುತಿಟ್ಟು ಶೈಲಿಯ ಮೇರು ಕಲಾವಿದರು ಚಿಟ್ಟಾಣಿಯವರು ಕೌರವ, ದುಷ್ಟಬುದ್ದಿ, ಭಸ್ಮಾಸುರ, ಕೀಚಕ, ಮಾಗದ, ಕರ್ಣ, ರುದ್ರಕೋಪ, ಕಂಸನ ಪಾತ್ರಗಳಲ್ಲಿ ವಿಂಚಿದ್ದರು. ‘ಚಿಟ್ಟಾಣಿ ಘರಾಣಾ’ ಎಂದೇ ರಾಮಚಂದ್ರ ಹೆಗಡೆ ಶೈಲಿ ಹೆಸರುವಾಸಿಯಾಗಿತ್ತು. ಪದ್ಮಶ್ರೀ ಪುರಸ್ಕಾರಕ್ಕೆ ಪಾತ್ರರಾದ ಮೊದಲ ಯಕ್ಷಗಾನ ಕಲಾವಿದ ಇವರು. ವಿದೇಶಗಳಲ್ಲೂ ಯಕ್ಷಗಾನ ಪ್ರದರ್ಶನ ನೀಡಿದ್ದಾರೆ. ಬಡಗುತಿಟ್ಟು ಶೈಲಿಯಲ್ಲಿ ನವರಸಗಳನ್ನೂ ಹೊರಹೊಮ್ಮಿಸುತ್ತಿದ್ದರು. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಅವರ ಹುಟ್ಟೂರಿನಲ್ಲಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಡಗುತಿಟ್ಟಿನ ಯಕ್ಷಗಾನದ ಧ್ರುವತಾರೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಅನಾರೋಗ್ಯದಿಂದ ದೈವಾಧಿನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಹಲೋಹ ತ್ಯಜಿದ್ದಾರೆ. ಯಕ್ಷಗಾನದ ಬಡಗುತಿಟ್ಟು ಶೈಲಿಯ ಮೇರು ಕಲಾವಿದರು ಚಿಟ್ಟಾಣಿಯವರು ಕೌರವ, ದುಷ್ಟಬುದ್ದಿ, ಭಸ್ಮಾಸುರ, ಕೀಚಕ, ಮಾಗದ, ಕರ್ಣ, ರುದ್ರಕೋಪ, ಕಂಸನ ಪಾತ್ರಗಳಲ್ಲಿ ವಿಂಚಿದ್ದರು. ‘ಚಿಟ್ಟಾಣಿ ಘರಾಣಾ’ ಎಂದೇ ರಾಮಚಂದ್ರ ಹೆಗಡೆ ಶೈಲಿ ಹೆಸರುವಾಸಿಯಾಗಿತ್ತು. ಪದ್ಮಶ್ರೀ ಪುರಸ್ಕಾರಕ್ಕೆ ಪಾತ್ರರಾದ ಮೊದಲ ಯಕ್ಷಗಾನ ಕಲಾವಿದ ಇವರು. ವಿದೇಶಗಳಲ್ಲೂ ಯಕ್ಷಗಾನ ಪ್ರದರ್ಶನ ನೀಡಿದ್ದಾರೆ. ಬಡಗುತಿಟ್ಟು ಶೈಲಿಯಲ್ಲಿ ನವರಸಗಳನ್ನೂ ಹೊರಹೊಮ್ಮಿಸುತ್ತಿದ್ದರು. ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ಮೂಲದ ಚಿಟ್ಟಾಣಿ ರಾಮಚಂದ್ರ ಹೆಗಡೆ ಜನವರಿ 1, 1933ರಲ್ಲಿ ಜನಿಸಿದರು. ತಮ್ಮ 7ನೇ ವರ್ಷದಲ್ಲಿಯೇ ಯಕ್ಷಗಾನದಲ್ಲಿ ನಟಿಸಲು ಆರಂಭ ಮಾಡಿದರು. ಎರಡನೇ ತರಗತಿ ವಿದ್ಯಾರ್ಥಿಯಾಗಿದ್ದಾಗಲೇ ಶಾಲೆಬಿಟ್ಟ ರಾಮಚಂದ್ರ ಹೆಗಡೆ ಕೇವಲ 14ನೇ ವರ್ಷಕ್ಕೇ ಪ್ರಮುಖ ಪಾತ್ರಗಳನ್ನ ನಿರ್ವಹಿಸುತ್ತಿದ್ದರು. ಮೃತರು ಪತ್ನಿ ಹಾಗೂ ಮೂವರು…
ಕುಂದಾಪ್ರ ಡಾಟ್ ಕಾಂ ವರದಿ. ಪ್ರತಿ ತಿಂಗಳ ಮೊದಲ ಭಾನುವಾರದಂದು ನಡೆಯುವ ತಿಂಗಳ ಕಥಾ ಓದು ಕಾರ್ಯಕ್ರಮ ಮತ್ತು ಸಂವಾದದ ಹಿರಿಮೆಯನ್ನು ಎತ್ತಿ ಹಿಡಿಯುವ ಸೂರ್ಯನ ನೆರಳು ನಾಟಕಗಳನ್ನು ಒಟ್ಟಿಗೆ ಗಾಂಧಿ ಜಯಂತಿಯಂದು ಹಮ್ಮಿಕೊಳ್ಳುವ ಮೂಲಕ ಕುಂದಾಪುರ ಸಮುದಾಯವು ಗಾಂಧಿಯನ್ನು ಮತ್ತೊಮ್ಮೆ ಚರ್ಚೆಯ ತೆಕ್ಕೆಗೆ ತೆಗೆದುಕೊಂಡಿತು. ಬೋಳುವಾರರ ಪಾಪು ಗಾಂಧಿ ಬಾಪೂ ಗಾಂಧಿ ಆದ ಕತೆಯಲ್ಲಿನ ಗಾಂಧಿಯ ಬದುಕಿನ ಮೂರು ಮುಖ್ಯ ಕಾಲಘಟ್ಟವನ್ನು ಪ್ರತಿನಿಧಿಸುವ ಕತೆಗಳನ್ನು ಡಾ. ರಶ್ಮಿ ಕುಂದಾಪುರ ರವರು ಫ್ಲಿಫ್ ಚಾರ್ಟಗಳ ನೆರವಿನಿಂದ ಸೊಗಸಾಗಿ ವಾಚಿಸಿದರು. ವೈದ್ಯ ವೃತ್ತಿಯಲ್ಲಿರುವವರು ಕೆಲವು ಸೂಕ್ಷ್ಮ ವಿಷಯಗಳನ್ನು ಜನರಿಗೆ ಮನದಟ್ಟು ಮಾಡುವಾಗ ಫ್ಲಿಫ್ ಚಾರ್ಟುಗಳನ್ನು ಬಳಸುತ್ತೇವೆ. ಸದ್ಯಕ್ಕೆ, ಗಾಂಧಿಯೂ ಸೂಕ್ಷ್ಮ ಸಂಗತಿಯೇ ಎನ್ನುತ್ತಾ ಆರಂಭಿಸಿದ ಡಾ. ರಶ್ಮಿಯವರು ಕತೆಯ ನಂತರವೂ ಗಾಂಧಿಯ ಈ ಕತೆಯನ್ನು ಓದಲು ಆರಂಭಿಸಿದ ಮೇಲೆ ತನ್ನ ಬದುಕು ಭಾವಗಳ ಮರುಸಂಘಟನೆಗೆ ಹೇಗೆ ಕಾರಣವಾಯಿತು ಎಂಬುದನ್ನೂ ಹಂಚಿಕೊಂಡರು. ಕಥಾ ಓದಿಗೆ ಡಾ. ಹಯವದನ ಮೂಡುಸಗ್ರಿ, ರಾಘವೇಂದ್ರ ಬೈಂದೂರು ಇನ್ನಿತರರು ಪ್ರತಿಕ್ರಿಯಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕಾರಂತ ಇಂದು ದೈಹಿಕವಾಗಿ ನಮ್ಮೊಂದಿಗೆ ಇಲ್ಲ ಆದರೆ ಕಾರಂತ ಥೀಂ ಪಾರ್ಕ್ನಲ್ಲಿ ನಿರಂತರವಾಗಿ ನಡೆಯುವ ಕಾರ್ಯಕ್ರಮಗಳ ಮೂಲಕ ಜೀವಂತವಾಗಿರುವಂತೆ ಭಾಸವಾಗುತ್ತದೆ. ಅದರಲ್ಲೂ ಅಕ್ಟೋಬರ್ ೧ರಿಂದ ೧೦ರ ವರೆಗೆ ನಡೆಯುವ ಕಾರತೋತ್ಸವ ಕಾರ್ಯಕ್ರಮಗಳು ಸಾಹಿತ್ಯಿಕ, ಸಾಂಸ್ಕೃತಿಕ ಮತ್ತು ಕಲಾತ್ಮಕ ವಿಚಾರಗಳಿಂದ ಕೂಡಿದ್ದು ಕಾರಂತರ ವಿಚಾರಗಳನ್ನು ಅರಿಯಲು ಮತ್ತಷ್ಟು ನೆರವಾಗುತ್ತದೆ ಎಂದು ಕೋಟ ಕರ್ಣಾಟಕ ಬ್ಯಾಂಕ್ ಮುಖ್ಯ ಪ್ರಬಂಧಕ ಗಣೇಶ್ ಹೊಳ್ಳ ಹೇಳಿದರು. ಅವರು ಕೋಟ ಕಾರಂತ ಥೀಂ ಪಾರ್ಕ್ನಲ್ಲಿ ಅಕ್ಟೋಬರ್ ೧ರಿಂದ ೧೦ರವರೆಗೆ ಕೋಟತಟ್ಟು ಗ್ರಾಮ ಪಂಚಾಯತ್, ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.) ಕೋಟ ಸಾರಥ್ಯದಲ್ಲಿ ಡಾ.ಶಿವರಾಮ ಕಾರಂತ ಟ್ರಸ್ಟ್(ರಿ.) ಉಡುಪಿ ಸಹಯೋಗದಲ್ಲಿ ಡಾ.ಶಿವರಾಮ ಕಾರಂತ ಜನ್ಮದಿನೋತ್ಸವ ಮತ್ತು ಹುಟ್ಟೂರ ಪ್ರಶಸ್ತಿಗೆ ೧೩ನೇ ವರುಷದ ಸಂಭ್ರಮ ತಂಬೆಲರು ೨೦೧೭ ಕಾರ್ಯಕ್ರಮದ ಪ್ರಥಮ ದಿನದ ಕಾರ್ಯಕ್ರಮವಾಗಿ ಕಾರಂತರಿಗೆ ಪಂಚನಮನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೋಟತಟ್ಟು ಪಂಚಾಯತ್ ಅಧ್ಯಕ್ಷ ಲೋಕೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಶುಭ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೇಸಿಐ ಕೋಟೇಶ್ವರ ಧ್ವಜಪುರದ ಸ್ಥಾಪಕ ಅಧ್ಯಕ್ಷರಾಗಿ ವಕ್ವಾಡಿ ರಾಕೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ವಕ್ವಾಡಿ ಯುವಶಕ್ತಿ ಮಿತ್ರ ಮಂಡಳಿಯ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ, ಮಂಗಳೂರಿನ ಪ್ರತಿಷ್ಠಿತ ಯೋಗ ಸತ್ಸಂಗದ ಉಡುಪಿ ಜಿಲ್ಲಾ ಪ್ರತಿನಿಧಿಯಾಗಿ, ನಮ್ಮ ಕಲಾಕೇಂದ್ರ ಕೋಟೇಶ್ವರ, ಹಟ್ಟಿಯಂಗಡಿ ಸಿದ್ಧಿವಿನಾಯಕ ಯಕ್ಷಗಾನ ಮೇಳ ಮೊದಲಾದ ಸಾಂಸ್ಕೃತಿಕ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿ ಕೊಂಡಿರುವ ಇವರು ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಸನ್ರೈಸ್ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಕೋಟೇಶ್ವರದ ಸೈಂಟ್ ಜೋಸೆಫ್ ಒಲ್ಡ್ ಸಿಟಿಜನ್ ಹೋಮ್ನ ನಿವಾಸಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ರೋಟರಿ ಕ್ಲಬ್ ಕುಂದಾಪುರ ಸನ್ರೈಸ್ ಅಧ್ಯಕ್ಷರಾದ ಅಜಿತ್ ಕೆ, ಕಾರ್ಯದರ್ಶಿ ಸಿ.ಎಚ್.ಗಣೇಶ್, ಆನ್ಸ್ ಕ್ಲಬ್ ಅಧ್ಯಕ್ಷೆ ರಾಜಶ್ರೀ ಅಜಿತ್, ಎಂ.ಪಿ. ಶಿವಾನಂದ, ಗಣೇಶ್ ಬೆಟ್ಟಿನ್, ರಾಜಶೇಖರ ಹೆಗ್ಡೆ, ಸದಾನಂದ ಉಡುಪ, ಗಿರಿಜಾ ಮಾಣಿ ಗೋಪಾಲ, ಪೂರ್ಣಿಮಾ ಭವಾನಿ ಶಂಕರ, ಆನ್ಸ್ ಕ್ಲಬ್ ಕಾರ್ಯದರ್ಶಿ ಸೌಮ್ಯ ರವಿ, ಪ್ರೀತಿ ಅಜೇಯ ಹವಾಲ್ದಾರ್, ಶ್ರೀರಕ್ಷಾ ಅಜಿತ್, ಸ್ಮಿತಾ ಶಿವಾನಂದ ಹಾಗೂ ಪದಾಧಿಕಾರಿಗಳು, ಕೋಟೇಶ್ವರದ ಸೈಂಟ್ ಜೋಸೆಫ್ ಒಲ್ಡ್ ಸಿಟಿಜನ್ ಹೋಮ್ಟಿ ಆಡಳಿತ ಮಂಡಳಿ ಪ್ರಮುಖರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಬಂಟರ ಯಾನೆ ನಾಡವ ಸಂಘದ ನೇತೃತ್ವದಲ್ಲಿ ಬೆಂಗಳೂರು ಬಂಟರ ಸಂಘದ ಸಹಭಾಗಿತ್ವದೊಂದಿಗೆ ನಡೆದ ವಾರ್ಷಿಕ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ಸಂಘದ ಅಧ್ಯಕ್ಷ ಬಿ. ಜಗನ್ನಾಥ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಅಮರನಾಥ ಶೆಟ್ಟಿ ಮೂಡಬಿದ್ರೆ, ಬೆಂಗಳೂರು ಸಂಘದ ಖಜಾಂಚಿ ಅನಂದರಾಮ ಶೆಟ್ಟಿ, ವಿದ್ಯಾರ್ಥಿ ವೇತನ ಸಮಿತಿ ಅಧ್ಯಕ್ಷ ರಮಿತ್ ಬಿ. ಶೆಟ್ಟಿ, ಉಪ್ಪುಂದ ಸೀತಾರಾಮ ಶೆಟ್ಟಿ, ಡಾ ಮಾಧವ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಗೌರವಾಧ್ಯಕ್ಷ ಡಾ. ಸಉಧಾಕರ ಹೆಗ್ಡೆ, ಉಪಾಧ್ಯಕ್ಷರುಗಳಾದ ನೆಲ್ಯಾಡಿ ಶೀವರಾಮ ಶೆಟ್ಟಿ, ಚುಚ್ಚಿ ನಾರಾಯಣ ಶೆಟ್ಟಿ, ಬೆಲ್ತೂರು ವಿಠಲ ಶೆಟ್ಟಿ, ನಾಕಟ್ಟೆ ಜಗನ್ನಾಥ ಶೆಟ್ಟಿ, ಸಾಲ್ಗದ್ದೆ ವಸಂತ ಹೆಗ್ಡೆ, ಸಂಘಟನಾ ಕಾರ್ಯದರ್ಶಿ ಶಶಿಧರ ಶೆಟ್ಟಿ, ಮಹಿಳಾ ವೇದಿಕೆ ಸಂಚಾಲಕಿ ಶಿಲ್ಪಾ ಸತೀಶ್ ಶೆಟ್ಟಿ ವೇದಿಕೆಯಲ್ಲಿದ್ದರು. ಈ ಸಂದರ್ಭ ಸೂರ್ಯ ನಮಸ್ಕಾರದಲ್ಲಿ ಗಿನ್ನಿಸ್ ದಾಖಲೆಗೈದ ನಿರಂಜನ ಶೆಟ್ಟಿ, ರೋಟರಿ ಬೈಂದೂರು ನಿಕಟಪೂರ್ವಾಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಪ್ಪಂದ: ಕುಂದಾನಾಡಿನ ಎರಡು ದೀಪ ಸ್ತಂಭಗಳಂತೆ ನಾಡಿನಾದ್ಯಾಂತ ಖ್ಯಾತಿ ಪಡೆದ ಡಾ | ಶಿವರಾಮ ಕಾರಂತರು ಮತ್ತು ಗೋಪಾಲ ಕೃಷ್ಣ ಅಡಿಗರನ್ನು ಅರ್ಥೈಸಿ ಕೊಳ್ಳುವುದು. ಮತ್ತು ಅಭಿಮಾನದಿಂದ ಆಸ್ವಾಧಿಸುವುದು. ನಮ್ಮ ಪೀಳಿಗೆಯ ಕರ್ತವ್ಯ ಎಂದು ಬೆಂಗಳೂರಿನ ’ಕಾರಂಂತ ವೇದಿಕೆ’ ಯ ಸಂಚಾಲಕ ಪಿ.ಸಿ ಚಡಗ ಹೇಳಿದರು. ಅವರು ಉಪ್ಪುಂದ ಸುವಿಚಾರ ಬಳಗ ಏರ್ಪಡಿಸಿದ ಅಡಿಗರ ಜನ್ಮ ಶತಾಬ್ದಿ ಸಾಹಿತ್ಯ ಸಪ್ತಾಹದ ಸ್ಪರ್ಧೆಗಳ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ನುಡಿದರು. ಸ್ಪರ್ಧಾಥಿಗಳಿಗೆ ಬಹುಮಾನ ವಿತರಿಸಿದ ಕರ್ನಾಟಕ ಬ್ಯಾಂಕಿನ ನಿವೃತ್ತಿ ಮುಖ್ಯ ಪ್ರಬಂಧಕ ಬಿ.ಎಂ.ರಮೇಶ ಅವರು ಸುವಿಚಾರ ವೇದಿಕೆಯ ಕಾರ್ಯಕ್ರಮಗಳ ವೈವಿಧ್ಯತೆ ಮತು ಹರವಿನ ಕುರಿತು ಶ್ಲಾಘಿಸಿ ಸಹ ಮನಸ್ನ ಪ್ರಜ್ಞಾವಂತರ ಕೂಟ ಇದು ಎಲ್ಲಾಡೆಯಾ ಅವಶ್ಯಕತೆಯಾಗಿದೆ ಎಂದು ನುಡಿದರು. ಲಲಿತಾ ಜಿ. ಎಸ್. ಭಟ್ರವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಯುವ ಕವಿಗೋಷ್ಠಿ ನಡೆಯಿತು. ಪ್ರಗತಿ ಶೆಟ್ಟಿ, ವಿನಯಾ ಶೆಟ್ಟಿ, ಕೀರ್ತಿ ಎಸ್. ಮನಿಷ್ ದೇವಾಡಿಗ ಮತ್ತು ನಮೃತಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಸಿಡಿಲು ಬಡಿದು ಮನೆ ಭಾಗಶಹ ಹಾನಿಯಾಗಿದ್ದು, ಓರ್ವ ಮಹಿಳೆ ಹಾಗೂ ಬಾಲಕ ಸಿಡಿಲಾಘಾತಕ್ಕೆ ಒಳಗಾಗಿದ್ದಾರೆ. ಮನೆ ಪೌಂಡೇಶನ್, ಗೋಡೆ ಬಿರುಕುಬಿಟ್ಟಿದ್ದು,ವಿದ್ಯುತ್ ಉಪಕರಣ, ಮೀಟರ್ ಬೋರ್ಡ್ ಸುಟ್ಟು ಕರಕಲಾದ ಘಟನೆ ಸೋಮವಾರ ತಡರಾತ್ರಿ ಹೇರಿಕೆರೆ ಬಳಿ ನಡೆದಿದೆ. ಕುಂದಾಪುರ ತಾಲೂಕ್ ಕಂದಾವರ ಗ್ರಾಮ, ಹೆರಿಕೆರೆ ಸಿರಾಜುನ್ನೀಸಾ ಹಾಗೂ ಅಬ್ದುಲ್ ಖಾದರ್ ಎಂಬವರ ಎರಡು ವಾಸದ ಮನೆಗೆ ಹಾನಿಯಾಗಿದೆ. ತಸ್ಲೀಮಾ ಬಾನು ಹಾಗೂ ಮೊಹಮ್ಮದ್ ರೈಫ್ ಸಿಡಿಲಾಘಾತಕ್ಕೆ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರುಳಿದ್ದಾರೆ. ಬಾಲಕನ ಕಿವಿ ತಮಟೆಗೆ ಪೆಟ್ಟಾಗಿದ್ದರೆ, ಮಹಿಳೆ ವಾಂತಿ, ತಲೆ ಸುತ್ತುವಿಕೆ ಹಾಗೂ ತೀವ್ರ ಬಳಲಿಕೆಗೆ ಒಳಗಾಗಿದ್ದಾರೆ. ಮಧ್ಯರಾತ್ರಿ ಸಿಡಿಲು ಎರಗಿದ್ದು, ಮನೆ ಗೋಡೆ ಬಿರುಕು ಬಿಟ್ಟಿದೆ. ವೈಯಿರಿಂಗ್ ಸುಟ್ಟಿದೆ. ಮನೆ ಪೌಂಡೇಶನ್ ಬಳಿ ಹೊಂಡ ಬಿದ್ದಿದ್ದು, ಮನೆ ಹತ್ತರಿದ ದರೆಗೆ ಸಿಡಿಲಪ್ಪಳಿಸಿ ಬಿರುಕು ಬಿಟ್ಟಿದೆ. ವಿದ್ಯುತ್ ಮೀಟರ್ ಬೋರ್ಡ್ ಸಂಪೂರ್ಣ ಸುಟ್ಟು ಹೋಗಿದ್ದು, ಅನತಿ ದೂರದಲ್ಲಿ ಮೀಟರ್ ಬೋರ್ಡ್ ಮುಚ್ಚಳ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾಮೀಣ ಭಾಗದಲ್ಲಿ ಹೆಚ್ಚೆಚ್ಚು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಜನರಿಗೆ ಎಲ್ಲಾ ಸೌಕರ್ಯಗಳೂ ಸುಲಭದಲ್ಲಿ ದೊರೆಯುವಂತೆ ಮಾಡುವ ಮೂಲಕ ಮಹಾತ್ಮ ಗಾಂಧೀಜಿ ಅವರ ಗ್ರಾಮೀಣ ಭಾರತದ ಕನಸು ನನಸಾಗಿಸಲು ನಿರಂತರವಾಗಿ ಶ್ರಮಿಸಬೇಕಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ, ಕೆಎಸ್ಆರ್ಟಿಸಿ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಅವರು ಹೇಳಿದರು. ಅವರು ಬೈಂದೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಜರುಗಿದ ಮಹಾತ್ಮ ಗಾಂಧೀಜಿ ಜಯಂತಿ ಹಾಗೂ ಮಾಜಿ ಪ್ರಧಾನ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜನ್ಮದಿನಾಚರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಪ್ಪಾರ್ಪಣೆಗೈದು ಬಳಿಕ ಮಾತನಾಡಿದರು. ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಅವರಂತಹ ನಾಯಕರ ಉದಾತ್ತ ಚಿಂತನೆಗಳು ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರವಹಿಸಿದ್ದು, ಅದ ಪ್ರತಿ ಹಂತದಲ್ಲಿಯೂ ಮಾರ್ಗದರ್ಶನ ನೀಡುವಂತದ್ದು ಎಂದರು. ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ. ತಾಲೂಕು ಪಂಚಾಯತ್ ಸದಸ್ಯ ಜಗದೀಶ ದೇವಾಡಿಗ ಹಾಗೂ…
