ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೊತ್ತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವೆಬ್ಸೈಟ್ https://sevasindhu.karnataka.gov.in/sevasindhu/DepartmentService ನಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ:8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ (ದೂ.ಸಂಖ್ಯೆ: 08258-231101) ಹಾಗೂ ಕುಂದಾಪುರ (ದೂ.ಸಂಖ್ಯೆ: 08254-230370) ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘ ಕೋಟದ ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ರವೀಂದ್ರ ಕಾಮತ್ ಅವರನ್ನು ಅವಿರೋಧವಾಗಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷ ಕೃಷ್ಣ ಕಾಂಚನ್ ಹಾಗೂ ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಮ್ಮ ಪೂಜಾರಿ ಅವರ ನೇತೃತ್ವದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಈ ತಿರ್ಮಾನ ಕೈಗೊಳ್ಳಲಾಗಿದೆ. ಚುನಾವಣಾ ಪ್ರಕ್ರಿಯೆಯನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರುಗಳು, ನೂತನ ಉಪಾಧ್ಯಕ್ಷ ರವೀಂದ್ರ ಕಾಮತ್ ಅಭಿನಂದನೆ ಸಲ್ಲಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೆಸಿಐ ಶಿರೂರು ಘಟಕ ಇದರ ವತಿಯಿಂದ ಕಾರ್ಗಿಲ್ ವಿಜಯ್ ದಿನದ ಅಂಗವಾಗಿ ಕಳೆದ ಹಲವು ವರ್ಷಗಳಿಂದ ಯೋಧರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶಿರೂರು ಗ್ರಾಮದ ಕರಿಕಟ್ಟೆ ಆರ್ಮಿ ನಿವಾಸಿ ಸುರೇಶ ಮೇಸ್ತಾ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜೆಸಿಐ ಶಿರೂರ್ನ ಅಧ್ಯಕ್ಷರರಾದ ವಿನೋದ್ ಮೇಸ್ತಾ. ಕಾರ್ಯದರ್ಶಿ ಪವನ್ ಪೂಜಾರಿ, ಪೂರ್ವ ಅಧ್ಯಕ್ಷರಾದ ನಾಗೇಂದ್ರ ಪ್ರಭು, ಪ್ರಕಾಶ್ ಮಾಕೋಡಿ, ನಾಗೇಶ್ ಕೆ., ಪಾಂಡುರಂಗ ಆಳ್ವಗೆದ್ದೆ, ಜಯಂತ್ ಪೂಜಾರಿ ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಡುಪಿ ಜಿಲ್ಲಾಡಳಿತ ಸಹಯೋಗದೊಂದಿಗೆ ಹಾಗೂ ಜೆಸಿಐ ಶಿರೂರು ಘಟಕ ಇದರ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಶಿರೂರುಇದರ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಕಾರ್ಯಕ್ರಮ ಜರುಗಿತು. ಶಿರೂರು ಜೆಸಿಐ ಅಧ್ಯಕ್ಷ ವಿನೋದ ಮೇಸ್ತ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ದೇವೇಂದ್ರ ಕೆ. ಮೊಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಜೆಸಿಐ ಕಾರ್ಯದರ್ಶಿ ಪವನ್ ಪೂಜಾರಿ, ಶಾಲೆಯ ಶಿಕ್ಷಕರ ವೃಂದದವರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಕಾಲೇಜಿನ ಉಪಪ್ರಾಂಶುಪಾಲೆ ಜಯಂತಿ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ನೋಡಲ್ ಅಧಿಕಾರಿ ಶ್ರೀದೇವಿ ನಿರೂಪಿಸಿದರು. ಆರತಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವಿಜ್ಞಾನವನ್ನು ಘನ, ದ್ರವ ಮತ್ತು ಅನಿಲ ಎಂಬ ಮೂರು ಸ್ಥಿತಿಗಳಿಗೆ ಮಾತ್ರ ಸೀಮಿತಗೊಳಿಸದೆ, ನಾಲ್ಕನೇ ಸ್ಥಿತಿಯಾದ ಪ್ಲಾಸ್ಮಾ ಕುರಿತು ವಿದ್ಯಾರ್ಥಿಗಳು ಆಸಕ್ತಿ ಮತ್ತು ಅರಿವು ಬೆಳೆಸಿಕೊಳ್ಳಬೇಕು ಎಂದು ಗಾಂಧಿನಗರದ ಇನ್ಸ್ಟಿಟ್ಯೂಟ್ ಫಾರ್ ಪ್ಲಾಸ್ಮಾ ರಿಸರ್ಚ್ (ಐಪಿಆರ್)ನ ವೈಜ್ಞಾನಿಕ ಅಧಿಕಾರಿ ಹಾಗೂ ಔಟ್ರೀಚ್ ವಿಭಾಗದ ಮುಖ್ಯಸ್ಥ ಡಾ. ಎನ್. ರಾಮಸುಬ್ರಮಣ್ಯನ್ ಹೇಳಿದರು. ಅವರು ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯವು ಭಾರತದ ಅಣುಶಕ್ತಿ ಇಲಾಖೆಯ (ಡಿಎಇ) ಅಧೀನದ ಇನ್ಸ್ಟಿಟ್ಯೂಟ್ ಫಾರ್ ಪ್ಲಾಸ್ಮಾ ರಿಸರ್ಚ್ನ (ಐಪಿಆರ್), ಸಹಯೋಗದಲ್ಲಿ ಎಐಇಟಿ ಎಂಬಿಎ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ 5 ದಿನಗಳ 4ನೇ ರಾಜ್ಯ ಮಟ್ಟದ ಪ್ಲಾಸ್ಮಾ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದು. ಪ್ಲಾಸ್ಮಾ ವಿಜ್ಞಾನದಲ್ಲಿ ಹೆಚ್ಚಿನ ಸಂಶೋಧಕರು ಮತ್ತು ಪರಿಣಿತರ ಅಗತ್ಯವಿದೆ. ವಿದ್ಯಾರ್ಥಿಗಳು ಭೌತಶಾಸ್ತ್ರ, ಗಣಿತ ಹಾಗೂ ಎಂಜಿನಿಯರಿಂಗ್ ವಿಷಯಗಳಲ್ಲಿ ಆಸಕ್ತಿ ಬೆಳೆಸಿ ಸಂಶೋಧನಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರೆ ದೇಶದ ವೈಜ್ಞಾನಿಕ ಅಭಿವೃದ್ಧಿಗೆ ಅಮೂಲ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೆಂಪು ಕಲ್ಲು ಕ್ವಾರೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ರವಿವಾರ ಕಾಲ್ತೋಡು ಬೊಳ್ಳಂಬಳ್ಳಿಯಲ್ಲಿ ಸಂಭವಿಸಿದೆ. ಹೇರಂಜಾಲು ಗ್ರಾಮದ ಶಿವಾನಂದ ದೇವಾಡಿಗ (49) ಮೃತಪಟ್ಟ ದುರ್ದೈವಿ. ಶಿವಾನಂದ ಅವರು ಜು.26 ರಂದು ಬೆಳಿಗ್ಗೆ ಕಾಲ್ತೋಡು ಬೊಳ್ಳಂಬಳ್ಳಿಯಲ್ಲಿರುವ ಕೆಂಪು ಕಲ್ಲು ಕ್ವಾರೆ ಕೆಲಸಕ್ಕೆ ತೆರಳಿದ್ದರು. ಕೆಲಸ ಮಾಡುತ್ತಿದ್ದ ಸಮಯದಲ್ಲಿ ಅವರಿಗೆ ದಿಢೀರ್ ತಲೆತಿರುಗಿ ಬಿದ್ದಿದ್ದರಿಂದ ಗಾಯಗೊಂಡಿದ್ದರು ಎನ್ನಲಾಗಿದೆ. ಕೂಡಲೇ ಸ್ಥಳದಲ್ಲಿದ್ದವರು ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ, ಪರೀಕ್ಷಿಸಿದ ವೈದ್ಯರು ಅವರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದರು. ವಿಷಯ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಪತ್ನಿ, ಮೃತರ ತಲೆಯ ಭಾಗದಲ್ಲಿದ್ದ ಗಾಯವನ್ನು ಕಂಡು ಪತಿಯ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ನೀಡಿದ ದೂರಿನನ್ವಯ ಬೈಂದೂರು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಬಿ.ಎಸ್ಸಿ ‘ಕೃಷಿ ಮತ್ತು ಪಶುವೈದ್ಯಕೀಯ ವಿಜ್ಞಾನʼ ಕೋರ್ಸ್ಗಳ ಭವಿಷ್ಯ ಹಾಗೂ ಉದ್ಯೋಗಾವಕಾಶಗಳ ಕುರಿತು ವಿಶೇಷ ಮಾರ್ಗದರ್ಶನ ಕಾರ್ಯಾಗಾರ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದ ಹೆಸರಾಂತ ಕೃಷಿ ಶಿಕ್ಷಣ ತಜ್ಞ ರಾಜು ಬೆಳ್ಳುಂಡಗಿ ಅವರು ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಪ್ರಾಣಿ ವಿಜ್ಞಾನ (Farm Science) ಕ್ಷೇತ್ರದ ಮಹತ್ವವನ್ನು ಮನಮುಟ್ಟುವಂತೆ ವಿವರಿಸಿದರು. “ಹಿಂದಿನ ದಿನಗಳಲ್ಲಿ ಬಿ.ಎಸ್ಸಿ ಕೃಷಿ ಅಥವಾ ಪಶುವೈದ್ಯಕೀಯ ಶಿಕ್ಷಣದ ಕಡೆಗೆ ಹೆಚ್ಚಿನ ವಿದ್ಯಾರ್ಥಿಗಳು ಗಮನ ಹರಿಸುತ್ತಿರಲಿಲ್ಲ ಹಾಗೂ ಸ್ಪರ್ಧೆಯೂ ಕಡಿಮೆಯಿತ್ತು. ಆದರೆ, ಇಂದಿನ ಬದಲಾದ ಯುಗದಲ್ಲಿ ಈ ‘ಫಾರ್ಮ್ ಸೈನ್ಸ್’ ಕ್ಷೇತ್ರವು ಅತ್ಯಂತ ಶರವೇಗದಲ್ಲಿ ಬೆಳೆಯುತ್ತಿದೆ. ವೈಜ್ಞಾನಿಕ ಕೃಷಿ, ಆಹಾರ ಸಂಸ್ಕರಣೆ, ಪಶುಸಂಗೋಪನೆ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ಹೊಸ ತಂತ್ರಜ್ಞಾನಗಳು ಬಂದಿರುವುದರಿಂದ ಕೋರ್ಸ್ ಮುಗಿಸಿದ ತಕ್ಷಣ ಹೇರಳ ಉದ್ಯೋಗಾವಕಾಶಗಳು ಲಭ್ಯವಿವೆ. ನಿರಂತರ ಆಸಕ್ತಿ ಮತ್ತು ಶ್ರದ್ಧೆಯಿಂದ ಅಧ್ಯಯನ ನಡೆಸಿದರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮೊಗವೀರ ಯುವ ಸಂಘಟನೆ ಸಾಲಿಗ್ರಾಮ ಘಟಕ ಹಾಗೂ ಮಹಿಳಾ ಸಂಘಟನೆ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ -ಉಡುಪಿ ಇವರ ನೇತೃತ್ವದಲ್ಲಿ ಕರಾವಳಿ ಮೊಗವೀರ ಮಹಾಜನ ಸಂಘ ಕೋಟ, ಎಚ್ ಕೆ. ಫ್ರೆಂಡ್ಸ್ಹೊಳೆಕೆರೆ -ಚಿತ್ರಪಾಡಿ, ಗಾಣಿಗ ಯುವ ಸಂಘಟನೆ ಕೋಟ, ಪಾಂಚಜನ್ಯ ಸಂಘ ಅಂಬಾಗಿಲುಕೆರೆ ಸಾಲಿಗ್ರಾಮ ರಕ್ತನಿಧಿ ಕೆ. ಎಮ್. ಸಿ. ಮಣಿಪಾಲ, ಜಿಲ್ಲಾಡಳಿತ ಉಡುಪಿ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಕರಾವಳಿ ಮೊಗವೀರ ಸಭಾಭವನ ಗುಂಡ್ಮಿ -ಸಾಲಿಗ್ರಾಮದಲ್ಲಿ ಭಾನುವಾರ ಜರುಗಿತು. ಕಾರ್ಯಕ್ರಮದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ ಪ್ರವರ್ತಕರಾದ ನಾಡೋಜ ಡಾ.ಜಿ ಶಂಕರ್ ಶುಭ ಹಾರೈಸಿದರು. ಮೊಗವೀರ ಯುವ ಸಂಘಟನೆ ಸಾಲಿಗ್ರಾಮ ಘಟಕದ ಅಧ್ಯಕ್ಷರಾದ ಕಿರಣ್ ಕುಂದರ್ ಸಭಾಧ್ಯಕ್ಷತೆ ವಹಿಸಿದ್ದರು. ಕರಾವಳಿ ಮೊಗವೀರ ಮಹಾಜನ ಸಂಘದ ಡಾ.ಕೃಷ್ಣ ಕಾಂಚನ್, ಉಚ್ಚಿಲ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮೊ.ಯು. ಸಂಘಟನೆಯ ನಿಕಟಪೂರ್ವ ಜಿಲ್ಲಾಧ್ಯಕ್ಷ ಜಯಂತ ಅಮೀನ್, ಮಾಜಿ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ, ಮೂಡ್ಲಕಟ್ಟೆಯ ತರಬೇತಿ ಮತ್ತು ಪ್ಲೇಸ್ಮೆಂಟ್ ಸೆಲ್, ಮಂಗಳೂರಿನ ಕೋಡ್ಲ್ಯಾಬ್ ಸಿಸ್ಟಮ್ಸ್ ಸಹಯೋಗದೊಂದಿಗೆ ಅಂತಿಮ ವರ್ಷದ ಬಿ.ಸಿ.ಎ ವಿದ್ಯಾರ್ಥಿಗಳಿಗಾಗಿ ಆರು ದಿನಗಳ “ರಿಯಾಕ್ಟ್ ಜೆಎಸ್ ಮೂಲಕ ವೆಬ್ ಅಪ್ಲಿಕೇಶನ್ ಅಭಿವೃದ್ಧಿ” ಪ್ರಮಾಣೀಕೃತ ಪ್ರಾಯೋಗಿಕ ಕಾರ್ಯಾಗಾರವು ನಡೆಯಿತು. ತರಬೇತಿದಾರರಾದ ಕಾರ್ತಿಕ್, ಸುಜಾದ್ ಶೇಖ್ ಅಲಿ, ಮೊಹಮ್ಮದ್ ಜಝೀಲ್ ಮತ್ತು ಸ್ವಸ್ತಿಕ್ ಅವರು ಕಾರ್ಯಾಗಾರವನ್ನು ನಿರ್ವಹಿಸಿದರು. ಕಾರ್ಯಾಗಾರದಲ್ಲಿ ಅವರು ರಿಯಾಕ್ಟ್ ಜೆಎಸ್ ಮತ್ತು ಆಧುನಿಕ ವೆಬ್ ಅಪ್ಲಿಕೇಶನ್ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಆಳವಾದ ಪ್ರಾಯೋಗಿಕ ತರಬೇತಿಯನ್ನು ನೀಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ಅವರ ಮಾರ್ಗದರ್ಶನದಲ್ಲಿ, ಪ್ಲೇಸ್ಮೆಂಟ್ ಅಧಿಕಾರಿ ಹಾಗೂ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಭಾಗದ ಮುಖ್ಯಸ್ಥರಾದ ಸ್ವರ್ಣ ರಾಣಿ ಯು.ಪಿ. ಯವರ ಬೆಂಬಲದೊಂದಿಗೆ ಈ ಕಾರ್ಯಕ್ರಮವನ್ನು ಸಂಘಟಿಸಲಾಗಿತ್ತು. ಐಎಂಜೆಐಎಸ್ಸಿ ಯಲ್ಲಿ ನಡೆಯುತ್ತಿರುವ ನಿರಂತರ ಪ್ಲೇಸ್ಮೆಂಟ್ ಸಿದ್ಧತಾ ಉಪಕ್ರಮದ ಭಾಗವಾಗಿ ತರಬೇತಿ ಮತ್ತು ಪ್ಲೇಸ್ಮೆಂಟ್ ಸೆಲ್, ಶೈಕ್ಷಣಿಕ ವರ್ಷದ ಆರಂಭದಿಂದಲೇ ಉದ್ಯಮ-ಆಧಾರಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಸಿ.ಇ.ಟಿ, ಜೆ.ಇ.ಇ., ನೀಟ್, ಪಿ.ಜಿ.ಸಿ.ಇ.ಟಿ, ಸಿ.ಎಲ್.ಎ.ಟಿ ಹಾಗೂ ಐ.ಸಿ.ಎ.ಆರ್ ಮೂಲಕ ಆಯ್ಕೆಯಾಗುವ ಅಥವಾ ನ್ಯಾಕ್ ‘ಎ’ ಗ್ರೇಡ್ ಅಥವಾ ಅದಕ್ಕಿಂತ ಹೆಚ್ಚಿನ ಮಾನ್ಯತೆ ಹೊಂದಿರುವ ಅಥವಾ ಎನ್.ಐ.ಆರ್.ಎಫ್ ಶ್ರೇಯಾಂಕದ ಅಗ್ರ 100 ಸ್ಥಾನಗಳಲ್ಲಿರುವ ಕಾಲೇಜು, ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳು ನಡೆಸುವ ಪ್ರವೇಶ ಪರೀಕ್ಷೆಗಳ ಮೂಲಕ ಆಯ್ಕೆಯಾಗುವ ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್, ಬಿ.ಇ, ಬಿ.ಟೆಕ್, ಎಂ.ಇ., ಎಂ.ಟೆಕ್, ಬಿ.ಡಿ.ಎಸ್, ಎಂ.ಡಿ.ಎಸ್, ಬಿ.ಆಯುಷ್, ಎಂ.ಆಯುಷ್, ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿ.ಆರ್ಚ್, ಎಂ.ಆರ್ಚ್, ಬಿ.ಎಸ್ಸಿ ಅಗ್ರಿಕಲ್ಚರ್, ಅಗ್ರಿ ಕಲ್ಚರ್ ಎಂಜಿನಿಯರಿಂಗ್, ಹಾರ್ಟಿಕಲ್ಚರ್, ಡೈರಿ ಟೆಕ್ನಾಲಜಿ, ಫಾರೆಸ್ಟ್ರಿ, ವೆಟರ್ನರಿ & ಅನಿಮಲ್ ಸೈನ್ಸ್, ಫುಡ್ ಟೆಕ್ನಾಲಜಿ, ಬಯೋಟೆಕ್ನಾಲಜಿ, ಫಿಶರೀಸ್, ಸೆರಿಕಲ್ಚರ್, ಹೋಮ್ / ಕಮ್ಯುನಿಟಿ ಸೈನ್ಸಸ್, ಫುಡ್, ನ್ಯೂಟ್ರಿಷನ್ & ಡಯಟಿಟಿಕ್ಸ್, ಅಗ್ರಿಕಲ್ಚರ್ ಇಂಜಿನಿಯರಿಂಗ್, ಬಿ.ಫಾರ್ಮಾ, ಎಂ.ಫಾರ್ಮಾ, ಫಾರ್ಮಾ ಡಿ, ಡಿ ಫಾರ್ಮಾ, ಐ.ಟಿ.ಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ, ಪಿಎಚ್ಡಿ…
