ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮೊಗೇರಿ ಗೋಪಾಲಕೃಷ್ಣ ಅಡಿಗರು ಬಹು ಅರ್ಥಗಳುಳ್ಳ ಕವಿತೆಗಳನ್ನು ರಚಿಸಿದ ಶ್ರೇಷ್ಠ ಕವಿ. ಓದುಗರ ಗ್ರಹಿಕೆಯ ಸಾಮರ್ಥ್ಯದ ಆಧಾರದ ಮೇಲೆ ಅವರ ಕವಿತೆಗಳು ವಿವಿಧ ತೆರನಾದ ಅರ್ಥವನ್ನು ನೀಡುತ್ತಿದ್ದವು ಎಂದು ಹಿರಿಯ ಸಾಹಿತಿ ಯು. ಚಂದ್ರಶೇಖರ ಹೊಳ್ಳ ಹೇಳಿದರು. ಅವರು ಉಪ್ಪುಂದದ ಸುವಿಚಾರ ಬಳಗ ಮತ್ತು ಕುಂದ ಅಧ್ಯಯನ ಕೇಂದ್ರ ಸಿರಿಮೊಗೇರಿ ಸಮಷ್ಟಿ ವೇದಿಕೆಯ ಸಹಕಾರದೊಂದಿಗೆ ಗುರುವಾರ ಬೈಂದೂರು ರತ್ತೂಬಾಯಿ ಜನತಾ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಎಂ. ಗೋಪಾಲಕೃಷ್ಣ ಅಡಿಗ ಜನ್ಮಶತಾಬ್ದಿ ಸಪ್ತಾಹದ ಎರಡನೇ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಅಡಿಗರು ತಮ್ಮ ಅನುಭವಕ್ಕೆ ನಿಲುಕದ್ದನ್ನು ಇರಬಹುದು ಎನ್ನುತ್ತಿದ್ದರೇ ಹೊರತು ಒಂದು ಪರಿಧಿಗೆ ಸೀಮಿತಗೊಳಿಸಿ ಎಲ್ಲವನ್ನೂ ಒಪ್ಪಿಕೊಂಡವರಲ್ಲ. ಆ ಕಾರಣಕ್ಕೆ ಅಡಿಗರು ಗತಿಸಿದ ಬಳಿಕವೂ ಅವರ ವಿಚಾರಧಾರೆ, ಕಥೆ ಕವಿತೆಗಳು ಇಂದಿಗೂ ಪ್ರಸ್ತುತವಾಗಿ ಉಳಿದಿವೆ ಎಂದರು. ಶಾಲೆಯ ಮುಖ್ಯೋಪಧ್ಯಾಯ ಮಂಜು ಕಾಳಾವರ ಮಾತನಾಡಿ ಅಡಿಗರನ್ನು ಓದಿ ಹಾಡಿದಷ್ಟೂ ಸುಸಂಸ್ಕೃತ ಸಮಾಜವನ್ನು ಕಟ್ಟುವ ನಾಗರಿಕ ಪ್ರಜ್ಞೆ ಬೆಳೆಯುತ್ತದೆ. ಅವರು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪರಂಪರೆಯಿಂದ ಬಂದದ್ದೆಲ್ಲ ಶ್ರೇಷ್ಠ ಎನ್ನುವುದನ್ನು ಒಪ್ಪದೇ, ಒಳಿತು ಕೆಡುಕುಗಳನ್ನು ವಿಮರ್ಷಿಸಿ ಕಾಲಕ್ಕೆ ತಕ್ಕಂತೆ ಮಾರ್ಪಾಡುಗೊಳಿಸಿದ ಬಳಿಕವಷ್ಟೇ ಒಪ್ಪುತ್ತಿದ್ದ ವ್ಯಕ್ತಿತ್ವ ಕವಿ ಗೋಪಾಲಕೃಷ್ಣ ಅಡಿಗರದ್ದಾಗಿತ್ತು. ಕಾಲದ ವಾಸ್ತವಗಳನ್ನು ಅವರ ಕಾವ್ಯದ ಮೂಲಕವೂ ಕಟುಮಾತಿನಲ್ಲಿ ವಿಮರ್ಶಿಸಿದ್ದರು. ಹೇಳಬೇಕಿರುವುದನ್ನು ತೀಕ್ಷವಾಗಿ ಹೇಳುವ ಧೈರ್ಯ ಅವರಲ್ಲಿತ್ತು ಎಂದು ವಿಶ್ರಾಂತ ಪ್ರಾಂಶುಪಾಲ ವಿಮರ್ಶಕ, ಮುರಳೀಧರ ಉಪಾಧ್ಯ ಹಿರಿಯಡಕ ಹೇಳಿದರು. ಅವರು ಉಪ್ಪುಂದದ ಸುವಿಚಾರ ಬಳಗ ಮತ್ತು ಕುಂದ ಅಧ್ಯಯನ ಕೇಂದ್ರ ಸಿರಿಮೊಗೇರಿ ಸಮಷ್ಟಿ ವೇದಿಕೆಯ ಸಹಕಾರದೊಂದಿಗೆ ಗುರುವಾರ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಎಂ. ಗೋಪಾಲಕೃಷ್ಣ ಅಡಿಗ ಜನ್ಮಶತಾಬ್ದಿ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಯು. ಚಂದ್ರಶೇಖರ ಹೊಳ್ಳರು ಬರೆದ ‘ಅಡಿಗರ ವಿಶಿಷ್ಟತೆ-ಒಂದು ಅಧ್ಯಯನ’ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಇತಿಹಾಸದ ವೈಭವೀಕರಣವನ್ನು ಗೇಲಿ ಮಾಡಿದ ಅಡಿಗರು ಪರಂಪರೆ ಮತ್ತು ಆಧುನಿಕತೆಯ ಸಂಘರ್ಷದ ಸಂಕೀರ್ಣ ಚಿತ್ರಗಳನ್ನು ತಮ್ಮ ಕಾವ್ಯದಲ್ಲಿ ನೀಡಿದರು. ‘ಚಲನವೇ ಬದುಕು-ನಿಶ್ಚಲವೇ ಮರಣ’ ಎನ್ನುವುದು ಅಡಿಗರ ಕಾಣ್ಕೆ ಎಂದು ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದ ಆಶ್ರಯದಲ್ಲಿ ನಾವುಂದದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬಡ್ಡಿ ಪಂದ್ಯಾವಳಿಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ಬಾಲಕಿಯರ ಕಬಡ್ಡಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳೊಂದಿಗೆ ದೈಹಿಕ ಶಿಕ್ಷಣ ಉಪನ್ಯಾಸಕರಾದ ಸುಕೇಶ್ ಶೆಟ್ಟಿ ಹೊಸಮಠ, ದೈಹಿಕ ಶಿಕ್ಷಣ ಶಿಕ್ಷಕರಾದ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ಮತ್ತು ಗ್ರಾಮ ಪಂಚಾಯತ್ ಸದಸ್ಯರಾದ ಪ್ರಕಾಶ್ ಪೂಜಾರಿ ಪ್ರಶಸ್ತಿ ಸ್ವೀಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಸೆ.21-30ರ ತನಕ ನಡೆಯಲಿರುವ ನವರಾತ್ರಿ ಉತ್ಸವಕ್ಕೆ ಸಕಲ ಸಿದ್ದತೆಗಳು ನಡೆದಿದೆ.ದೇವಳವು ಸಂಪೂರ್ಣ ಹೊಸ ವಿನ್ಯಾಸಗಳಿಂದ ಕೂಡಿದ ಪುಷ್ಪಾಲಂಕಾರ ಹಾಗೂ ವಿದ್ಯುದ್ದೀಪಗಳಿಂದ ಅಲಂಕೃತಗೊಂಡು ಕಂಗೊಳಿಸುತ್ತಿದೆ. ಸೆ.29ರ ಮಹಾನವಮಿಯಂದು ಬೆಳಿಗ್ಗೆ ಚಂಡಿಕಾಯಾಗ, ರಾತ್ರಿ 8:45ಕ್ಕೆ ರಥೋತ್ಸವ ನಡೆಯಲಿದೆ. ಸೆ.30ರ ವಿಜಯದಶಮಿಯಂದು ಬೆಳಿಗ್ಗೆ 4ರಿಂದ ವಿದ್ಯಾರಂಭ, ಅಪರಾಹ್ನ ನವಾನ್ನಪ್ರಾಶನ ಸಂಜೆ ೫.೩೦ಕ್ಕೆ ಶ್ರೀ ಮೂಕಾಂಬಿಕೆಯ ವಿಜಯೋತ್ಸವ ಜರುಗಲಿದೆ. ಪ್ರತಿದಿನ ಆಹ್ವಾನಿತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕುಂದಾಪುರ ಹಾಗೂ ಬೈಂದೂರಿನಿಂದ ಕೊಲ್ಲೂರಿಗೆ ಬರುವ ಭಕ್ತರಿಗಾಗಿ ವಿಶೇಷ ಸರಕಾರಿ ಬಸ್ಸುಗಳ ಸೌಲಭ್ಯ, ದೇವಳದ ಸೌಪರ್ಣಿಕಾ ಮತ್ತು ಕಾಶೀ ಸ್ನಾನ ಘಟ್ಟದಲ್ಲಿ ಹೆಚ್ಚಿನ ಬೆಳಕಿನ ವ್ಯವಸ್ಥೆ ಹಾಗೂ ಭದ್ರತಾ ಸಿಬ್ಬಂದಿಗಳ ನಿಯೋಜನೆ, ಸಭಾಭವನದಲ್ಲಿ ಹೆಚ್ಚುವರಿ ಊಟದ ವ್ಯವಸ್ಥೆ ಜೊತೆಗೆ ವಾಹನ ನಿಲುಗಡೆ ಹಾಗೂ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದು, ಸಿಸಿ ಕ್ಯಾಮೆರಾ ಮೇಲೆ ಹದ್ದಿನ ಕಣ್ಗಾವಲು ಇಂತಹ ಹಲವಾರು ವಿಚಾರಗಳ ಬಗ್ಗೆ ಈಗಾಗಲೇ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕನ್ನಡ ಸಾಹಿತ್ಯ ಕ್ಷೇತ್ರ ಕಂಡ ಅಪರೂಪದ ಕವಿ ಗೋಪಾಲಕೃಷ್ಣ ಅಡಿಗರು, ನವೋದಯದ ಅಲೆಯಲ್ಲಿ ತೇಲುತ್ತಿದ್ದ ಅಂದಿನ ಸಾಹಿತ್ಯ ಲೋಕದಲ್ಲಿ ನವ್ಯವೆಂಬ ಮಿಂಚನ್ನು ಹರಿಸಿದವರು. ರಮ್ಯ ಸಾಹಿತ್ಯದಿಂದ ವಾಸ್ತವದ ತಳಹದಿಯಲ್ಲಿ ಕೃತಿ ರಚಿಸುವ ಮನೋಭೂಮಿಕೆಯೆಡೆಗೆ ಸಾಹಿತಿಗಳನ್ನು ಸೆಳದದ್ದು ಅವರ ಹೆಚ್ಚುಗಾರಿಕೆಯೇ ಸರಿ ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪುಂದ ಇವರ ಸಹಯೋಗದಲ್ಲಿ ನಡೆದ ಅಡಿಗರ ಜನ್ಮಶತಾಬ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಹುಟ್ಟಿ, ಶಿಕ್ಷಣ ಪಡೆದು ಇಂಗ್ಲೀಷ್ ಉಪನ್ಯಾಸಕರಾದರೂ ಕನ್ನಡ ಸಾಹಿತ್ಯದಲ್ಲಿ ತಮ್ಮದೇ ಛಾಪನ್ನು ಮೂಡಿಸಿದ ಅಡಿಗರು ಇಂದಿಗೂ ಪ್ರಸ್ತುತ. ಅವರ ತತ್ವ, ಸಿದ್ಧಾಂತಗಳು ಅನುಕರಣೀಯವಾದುವುಗಳು. ಪ್ರಭುತ್ವಕ್ಕೆ ಸೆಡ್ಡು ಹೊಡೆದು ನಿಂತು, ವ್ಯವಸ್ಥೆಯ ನ್ಯೂನ್ಯತೆಗಳನ್ನು ಎತ್ತಿ ತೋರಿಸುವಂತಹ ಧೈರ್ಯ ಅವರಿಗಿತ್ತು. ಅಡಿಗರ ಒಂದೊಂದು ಕವನವು ಕ್ರಾಂತಿಗೀತೆಯಂತಿವೆ ಎಂದರು. ಉಪ್ಪುಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣೆಯನ್ನು ಮಾದರಿಯಾಗಿ ಮಾಡಲು ತೀರ್ಮಾನಿಸಿದ್ದು ಅದರ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸಲು ಆ.೩೧ರಂದು ವಂಡ್ಸೆಯಲ್ಲಿ ಜಾಗೃತಿ ಜಾಥಾ ನಡೆಸಲಾಯಿತು. ವಂಡ್ಸೆ ಪೇಟೆ ಜನವಸತಿ ಪ್ರದೇಶ, ವಾಣಿಜ್ಯ ಸಂಕೀರ್ಣ, ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಪ್ರದೇಶಗಳಿಗೆ ಭೇಟಿ ನೀಡಿ, ಸ್ವಚ್ಚತೆಯ ಮಹತ್ವ, ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣೆ(ಎಸ್.ಎಲ್.ಆರ್.ಎಂ) ಬಗ್ಗೆ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಉಪಾಧ್ಯಕ್ಷೆ ಶಾರದಾ ರುದ್ರಯ್ಯ ಆಚಾರ್ಯ, ಸದಸ್ಯರಾದ ಗುಂಡು ಪೂಜಾರಿ, ಉದಯ ಕೆ.ನಾಯ್ಕ, ಸಿಂಗಾರಿ, ಎಸ್.ಎಲ್.ಆರ್.ಎಂ ತರಬೇತಿ ಪಡೆದ ಮೇಲ್ವಿಚಾರಕ ಮಹಮ್ಮದ್ ರಫೀಕ್ ಸಾಹೇಬ್, ಗೋವರ್ಧನ ಜೋಗಿ, ಅಂಬಿಕಾ, ಅನುಸೂಯ, ಸುಧಾಕರ ಪೂಜಾರಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶಂಕರ ಆಚಾರ್ಯ, ಶ್ರೀ ಕ್ಷೇ.ಧ.ಗ್ರಾ ಯೋಜನೆಯ ಸೇವಾ ಪ್ರತಿನಿಧಿ ಲಾಲಿ ಸೋಜನ್, ಒಕ್ಕೂಟದ ಅಧ್ಯಕ್ಷೆ ಸಂಜೀವಿ, ಮಾಜಿ ಅಧ್ಯಕ್ಷೆ ಜಯಂತಿ ಶೆಟ್ಟಿ, ಪದಾಧಿಕಾರಿ ಜ್ಯೋತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ ಜಿಲ್ಲೆ ಮತ್ತು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಜರಗಿದ ಉಡುಪಿ ಜಿಲ್ಲಾ ಮಟ್ಟದ ಬಾಲಕರ ಹಾಗೂ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಾರ್ಕಳ ವಲಯದ ಪೆರ್ವಾಜೆ ಸರಕಾರಿ ಪ್ರೌಢಶಾಲೆಯ ಬಾಲಕರ ತಂಡ ಹಾಗೂ ಕಾರ್ಕಳ ವಲಯದ ಎಸ್.ವಿ.ಟಿ. ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ. ಅಂತಿಮ ಹಣಾಹಣಿಯಲ್ಲಿ ಪೆರ್ವಾಜೆ ಸರಕಾರಿ ಪ್ರೌಢಶಾಲೆಯ ಬಾಲಕರ ತಂಡವು ಬ್ರಹ್ಮಾವರ ವಲಯದ ಎಸ್.ವಿ.ಎನ್.ಎನ್. ಆಂಗ್ಲ ಮಾಧ್ಯಮ ಶಾಲೆಯ ತಂಡವನ್ನು ಮತ್ತು ಕಾರ್ಕಳದ ಎಸ್.ವಿ.ಟಿ. ಕಾಲೇಜಿನ ಬಾಲಕಿಯರ ತಂಡವು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆದುಕೊಂಡಿತು. ಗಂಗೊಳ್ಳಿಯ ಜಿಎಸ್ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್,…
ಶ್ರೇಯಾಂಕ ಎಸ್ ರಾನಡೆ. ಕುಂದಾಪ್ರ ಡಾಟ್ ಕಾಂ ಲೇಖನ. ವಿಶ್ವದ ಬಹುತೇಕ ರಾಷ್ಟ್ರಗಳು, ಪ್ರದೇಶಗಳು ಒಂದಿಲ್ಲೊಂದು ಕಾರಣದಿಂದ ಬುಲೆಟ್, ಬಾಂಬ್, ಕ್ಷಿಪಣಿಗಳನ್ನು ಹಿಡಿದು ನಿಂತಿವೆ. ಕೆಲವು ಸಾಮ್ರಾಜ್ಯ ವಿಸ್ತರಣೆಗೆ ಅವನ್ನು ಹಿಡಿಯುತ್ತಿದ್ದರೆ ಮತ್ತೆ ಕೆಲವರು ಅವರನ್ನು ತಡೆಯುವುದಕ್ಕಾಗಿಯೋ, ಅಥವಾ ತಮ್ಮ ಅಸ್ಮಿತೆಯ ರಕ್ಷಣೆಗಾಗಿಯೋ ಅಥವಾ ತಮ್ಮನ್ನು ನೆಚ್ಚಿದವರನ್ನು ಕಾಪಾಡಲೋ ಹೀಗೆ ಕಾರಣಗಳು ಹಲವಿದ್ದರೂ ಕೈಯಲ್ಲಿರುವುದು ವಿನಾಶಕಾರಿ ಆಯುಧಗಳು. ಸಿರಿಯಾ, ವೆನೆಜುವೆಲಾದಂತಹ ಕಡೆ ನಾಗರಿಕ ಯುದ್ಧವಾಗುತ್ತಿದ್ದರೆ; ಉತ್ತರ ಕೊರಿಯಾ, ಚೀನಾದಂತಹ ದೇಶಗಳು ಆಕ್ರಮಣಕ್ಕಾಗಿ ಸದಾ ಸಿದ್ಧವಾಗಿವೆ. ಭಯೋತ್ಪಾದನೆ, ಮತಾಂಧತೆಯಿಂದ ಮಧ್ಯಪ್ರಾಚ್ಯ, ಪಶ್ಚಿಮ ಏಷ್ಯಾದ ಪರಿಸ್ಥಿತಿ ರಕ್ತದ ಮಡುವಿನಲ್ಲಿ ಮುಳುಗುವಂತೆ ಮಾಡಿದೆ. ಹೀಗೆ ಒಂದಿಲ್ಲೊಂದು ಕಾರಣಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಯ ಬದಲಿಗೆ ಅಧಿಕಾರ ಕೇಂದ್ರಿತ “ಹಿಂಸೆ” ಶಕ್ತಿ ರಾಜಕಾರಣದ ಪ್ರಬಲ ಅಸ್ತ್ರವಾಗಿದೆ. ಇಂತಹ ಸಂಕೀರ್ಣ ಸಂದರ್ಭವೇ ವಿಶ್ವದ ಸುತ್ತಲೂ ಆವರಿಸಿರುವಾಗ ಭಾರತವೂ ಅಭಿವೃದ್ಧಿಯ ಬುಲೆಟ್ ಒಂದನ್ನು ನೆಚ್ಚಿದೆ. ಆದರೆ ಇಲ್ಲಿನ ಬುಲೆಟ್ ಬಂದೂಕಿನ ನಳಿಕೆಯಿಂದ ಚಿಮ್ಮುವಂತದ್ದಲ್ಲ. ಪ್ರತೀ ಘಂಟೆಗೆ 350 ಕಿಲೋ ಮೀಟರ್ವೇಗದಲ್ಲಿ (ಭಾರತದಲ್ಲಿ ಘಂಟೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾ ಕಾಂಗ್ರೆಸ್ ಐಟಿ ಸೆಲ್ನ ಉಪಾಧ್ಯಕ್ಷರನ್ನಾಗಿ ದಿನೇಶ್ ನಾಯ್ಕ್ ಅವರನ್ನು ಜಿಲ್ಲಾ ಐಟಿ ಸೆಲ್ ಅಧ್ಯಕ್ಷ ವಿಶ್ವಾಸ್ ಶೆಟ್ಟಿ ಅವರು ನೇಮಕ ಮಾಡಿದ್ದಾರೆ. ಬೈಂದೂರು ಶಾಸಕ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಅವರು ದಿನೇಶ್ ಅವರಿಗೆ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನಕುಮಾರ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇತ್ತಿಚಿಗೆ ಕುಂದಾಪುರದಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ರಸಪ್ರಶ್ನೆ ಸ್ಪರ್ಧೆ ಕಿರಿಯರ ವಿಭಾಗದಲ್ಲಿ ಉಪ್ಪುಂದ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ರಿತಿಕಾ ಕೆ ಪ್ರಥಮ ಸ್ಥಾನಿಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಈಕೆ ಪಡುವರಿ ಕಲ್ಲುಕಂಟದ ಮನೆ ರಾಘವೇಂದ್ರ ಹಾಗೂ ರಮಾವತಿ ದಂಪತಿಗಳ ಪುತ್ರಿ
