ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಬೈಂದೂರು ವಲಯ ಸಮತಿ ನೇತೃತ್ವದಲ್ಲಿ, ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಮಿಕ ಸಂಘಟನೆಗಳ ಸದಸ್ಯರ ರಾಜಕೀಯ ಸಮಾವೇಶವು ಬೈಂದೂರು ರೋಟರಿ ಭವನದಲ್ಲಿ ಜರಗಿತು. ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ನಿತ್ಯಾನಂದ ಸ್ವಾಮಿ ರಾಜಕೀಯ ಸಮಾವೇಶ ಉದ್ಘಾಟಿಸಿ ಮಾತನಾಡುತ್ತ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಪ್ರಣಾಳಿಕೆಯಲ್ಲಿ ಹಾಗೂ ಮೋದಿಯವರ ಚುನಾವಣಾ ಪ್ರಚಾರ ಭಾಷಣದಲ್ಲಿ ಅಭಿವೃದ್ಧಿಯೇ ಬಿಜೆಪಿ ಮೂಲಮಂತ್ರ, ೬೦ ವರ್ಷದಲ್ಲಾಗದ ಅಭಿವೃದ್ಧಿ ಕೆಲಸ ಆರು ತಿಂಗಳಲ್ಲಿ ಸಾಧಿಸುತ್ತೇವೆ. ಎಲ್ಲಾ ಸಮಸ್ಯೆಗಳಿಗೆ ಬಿಜೆಪಿ ಪರಿಹಾರ ಅಚ್ಚೆದಿನ ಆನೆವಾಲೆ ಹೈ – ಒಳ್ಳೆಯ ದಿನಗಳು ಬರಲಿವೆ, ಅಧಿಕಾರಕ್ಕೆ ಬಂದ ೧೦೦ ದಿನಗಳಲ್ಲಿ ಬೆಲೆ ಏರಿಕೆ ತಡೆಯಾಡೆಯಲಾಗುತ್ತದೆ, ಬೃಷ್ಠಾಚಾರ ರಹಿತ ದೇಶ ಕಟ್ಟುತ್ತೇವೆ ಎಂದು ಮೋದಿ, ಅಮಿತ್ಷಾ ಹೇಳಿದರು. ನ ಕಾವೂಂಗ ನ ಕಾನೆ ದೂಂಗ ತಾನೂ ತಿನ್ನೊಲ್ಲ, ತಿನ್ನಲೂ ಬಿಡೋಲ್ಲ, ಸಬ್ ಕಾ ಸಾಥ್ ಸಬ್ ಕಾ ವಿಕಾಸ್…
Author: ನ್ಯೂಸ್ ಬ್ಯೂರೋ
ಕ್ಷೇತ್ರದ ಜನರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ: ಶಾಸಕ ಗೋಪಾಲ ಪೂಜಾರಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಮಾಜಿಕವಾಗಿ ಧ್ವನಿಯಿಲ್ಲದ, ಶಕ್ತಿಯಿಲ್ಲದ ಜನರಿಗೆ ಸಮಸ್ಯೆ ಹೇಳಿಕೊಳ್ಳಲು ಜನಸಂಪರ್ಕ ಸಭೆಗಳ ಮೂಲಕ ಸರಕಾರ ನೇರ ಅವಕಾಶ ಕಲ್ಪಿಸಿದೆ. ಇಲ್ಲಿ ಜನರೇ ಸಾಹೇಬರು ಎಂಬುದನ್ನು ಗಮನದಲ್ಲಿಟ್ಟುಕೊಂಡು ಜನಪ್ರತಿನಿಧಿಗಳು ಅಧಿಕಾರಿಗಳೊಂದಿಗೆ ಬಂದು ಜನರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಶಸ್ತ್ಯ ನೀಡಲಾಗುತ್ತಿದೆ. ಜನಸಂಪರ್ಕ ಸಭೆಗಳ ಮೂಲಕ ಸಾವಿರಾರು ಮಂದಿ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಅವರು ತಾಲೂಕು ಆಡಳಿತದಿಂದ ಇಲ್ಲಿನ ಯಡ್ತರೆ ಜೆಎನ್ಆರ್ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ಬೈಂದೂರು ಹೋಬಳಿ ಮಟ್ಟದ ಜನಸಂಪರ್ಕ ಸಭೆಗೆ ಚಾಲನೆ ನೀಡಿ ಮಾತನಾಡಿಜನರ ತೆರಿಗೆ ಹಣದಿಂದ ಸಂಬಳ ಪಡೆಯುವ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಯಾವಾಗಲೂ ಜನರ ಸೇವಕರೇ ಆಗಿರುತ್ತಾರೆ. ಜನರಿಗೆ ಅಗತ್ಯವಾದ ಸೌಕರ್ಯವನ್ನು ಸೂಕ್ತ ಸಮಯದಲ್ಲಿ ಒದಗಿಸುವುದು ನಮ್ಮಲ್ಲರ ಕರ್ತವ್ಯ ಎಂದರು. ರಾಜ್ಯ ಕಾಂಗ್ರೆಸ್ ಸರಕಾರ ಬಂದ ಬಳಿಕ ಜಿಲ್ಲೆಯಲ್ಲಿ ಹೊಸತಾಗಿ ೬೬,೦೦೦ ಜನರಿಗೆ ಬಿಪಿಎಲ್ ಕಾರ್ಡ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿವರಾಮ ಕಾರಂತರು ಅವಗಣನೆಗೆ ಈಡಾಗಿದ್ದ ಯಕ್ಷಗಾನಕ್ಕೆ ವಿಶೇಷ ಮಾನ್ಯತೆ ತಂದು ಕೊಟ್ಟ ಪರಿಣಾಮ ಈಗ ಈ ಕಲೆ ವ್ಯಾಪಕವಾಗಿ ಬೆಳೆದಿದೆ. ಹೊಸ ಪ್ರಯೋಗಗಳ ಮೂಲಕ ಹೊಸ ಪ್ರದೇಶಗಳಿಗೆ ವಿಸ್ತರಿಸಿದೆ. ಕಲಾವಿದರ ಆರ್ಥಿಕ ಮಟ್ಟ ಸುಧಾರಿಸಿದೆ. ಇದು ಇನ್ನಷ್ಟು ಬೆಳೆಯಬೇಕು. ಅದಕ್ಕೆ ಸಾಂಸ್ಕೃತಿಕ ಸಂಘಟನೆಗಳು ಪೋಷಣೆ ನೀಡಬೇಕು ಎಂದು ಮಾಜಿ ಸಂಸದ ಕೆ. ಜಯಪ್ರಕಾಶ ಹೆಗ್ಡೆ ಹೇಳಿದರು. ನಾಗೂರು ಒಡೆಯರಮಠ ಗೋಪಾಲಕೃಷ್ಣ ಕಲಾಮಂದಿರದ ಭಾಗವತ ಜಿ. ಆರ್. ಕಾಳಿಂಗ ನಾವುಡ ಸ್ಮರಣ ವೇದಿಕೆಯಲ್ಲಿ ಶನಿವಾರ ೫ನೇ ವರ್ಷದ ತಾಳಮದ್ದಲೆ ಸಪ್ತಾಹ ಸಮಾರೋಪದಲ್ಲಿ ಮಾತನಾಡಿದರು. ಅಕ್ಷರ ಜ್ಞಾನ ಮತ್ತು ಶಿಕ್ಷಣ ಒಂದೇ ಅಲ್ಲ. ಅಕ್ಷರದ ಅರಿವು ಇಲ್ಲದೆಯೂ ವಿದ್ಯಾವಂತನಾಗಬಹುದು ಎನ್ನುವುದಕ್ಕೆ ಯಕ್ಷಗಾನ ಕಲಾವಿದರಲ್ಲಿ ಉದಾಹರಣೆ ದೊರೆಯುತ್ತದೆ. ಅವರು ತಾವೂ ಬೆಳೆದು ಜನರಿಗೂ ಅನೌಪಚಾರಿಕ ಶಿಕ್ಷಣ ನೀಡುತ್ತಾರೆ. ಪೌರಾಣಿಕ ಕಥಾಪ್ರಸಂಗದ ಪ್ರದರ್ಶನಗಳ ಮೂಲಕ ಜನರಿಗೆ ಪುರಾಣಗಳ ಅರಿವು ಮೂಡಿಸುವುದರ ಜತೆಗೆ ಶುದ್ಧ ಕನ್ನಡ ಭಾಷೆಯನ್ನು ಕಲಿಸುತ್ತಾರೆ. ಆ ನೆಲೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಇಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಅಕ್ಷರಜ್ಞಾನ ಅತ್ಯವಶ್ಯಕ. ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶದಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚಾಗುತ್ತಿದ್ದು, ಹಳ್ಳಿಗಳಲ್ಲಿ ಇಂದಿಗೂ ಅನೇಕ ಮಂದಿ ಅನಕ್ಷರಸ್ಥರಿದ್ದಾರೆ. ಆದ್ದರಿಂದ ಅಂತರಾಷ್ಟ್ರೀಯ ರೋಟರಿ ಸಂಸ್ಥೆಯು ಸಾಕ್ಷರತೆಯನ್ನು ಹೆಚ್ಚಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ರೋಟರಿ ಸದಸ್ಯರು ಅನಕ್ಷರಸ್ಥರನ್ನು ಗುರುತಿಸಿ ಅವರಿಗೆ ಕನಿಷ್ಠ ವಿದ್ಯಾಭ್ಯಾಸ ನೀಡುವಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಚುನಾಯಿತ ೨೦೧೮-೧೯ನೇ ಸಾಲಿನ ರೋಟರಿ ಜಿಲ್ಲಾ ರಾಜ್ಯಪಾಲ ಅಭಿನಂದನ ಎ.ಶೆಟ್ಟಿ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ಒಳಾಂಗಣದಲ್ಲಿ ಗಂಗೊಳ್ಳಿ ರೋಟರಿ ಕ್ಲಬ್ ಆಶ್ರಯದಲ್ಲಿ ಜರಗಿದ ವಲಯ ಮಟ್ಟದ ಸಾಕ್ಷರತೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ದುರ್ಗರಾಜ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ರೋಟರಿ ವಲಯ-೨ರ ಮಾಜಿ ಅಸಿಸ್ಟೆಂಟ್ ಗವರ್ನರ್ ಅಶೋಕಕುಮಾರ್ ಶೆಟ್ಟಿ ಮಾಹಿತಿ ನೀಡಿದರು. ಜೋನಲ್ ಲೆಫ್ಟಿನೆಂಟ್ ಮನೋಜ್ ನಾಯರ್, ಜೋನಲ್ ಕೋ-ಆರ್ಡಿನೇಟರ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಾರಾಹಿ ಬಲದಂಡೆ ಯೋಜನೆ ಕಾಮಗಾರಿ ಆರಂಭಿಸದಿದ್ದರೆ ಎಡದಂಡೆ ಕಾಲುವೆಯಲ್ಲಿ ನೀರು ಹರಿಯೋದಕ್ಕೆ ಬಿಡೋದಿಲ್ಲ. ಕುಚ್ಚಲಕ್ಕಿ ಅನ್ನ ಊಟ ಮಾಡೋರಿಗೆ ಬೆಳ್ತಿಗೆ ಅಕ್ಕಿ ಅನ್ನಾ ಆಗಿಬರೋದಿಲ್ಲ! ಅರ್ಧ ವಾರ್ಷಿಕ ಪರೀಕ್ಷೆ ಬಂದರೂ ಬಟೆ, ಪುಸ್ತಕ ಪೂರೈಕೆ ಏಕಿಲ್ಲಾ? ಹಳ್ಳಿ ಶಾಲೆಗಳಲ್ಲಿ ಸಮಸ್ಯೆಗಳಿದ್ದರೂ ವಲಯ ಶಿಕ್ಷಣಾಧಿಕಾರಿ ಏಕೆ ಭೇಟಿ ಕೊಡೋದಿಲ್ಲ. ಸರಕಾರಿ ಜಾಗದಲ್ಲಿ ಬಹುಮಹಡಿ ಕಟ್ಟಡ ಕಟ್ಟಿದರೂ ಕ್ರಮ ಏಕೆ ಇಲ್ಲ. ಒಬ್ಬರೇ ಮೂರು ಮೂರು ಹುದ್ದೆಯಲ್ಲಿದ್ದರೂ ಸುಮ್ಮನಿರೋದು ಏಕೆ? ಇದು ಕುಂದಾಪುರ ತಾಲೂಕು ಪಂಚಾಯತ್ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ತಾಲೂಕು ಪಂಚಾಯತ್ ಸದಸ್ಯರು ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಪರಿ ಇದು. ಕಂದಾಯ ಇಲಾಖೆ ಸಂಬಂಧಪಟ್ಟ ವಿಷಯ ಚರ್ಚೆಗಿದ್ದು, ತಹಸೀಲ್ದಾರ್ ಸಭೆಗೆ ಹಾಜರಾಗಿಲ್ಲ. ಮರಳು ಮಾಫಿಯಾ ಜೀವಭಯ ಒಡ್ಡುತ್ತಿದ್ದರೂ ಉತ್ತರ ಕೊಡಬೇಕಿದ್ದ ಗಣಿ ಇಲಾಖೆ ಅಧಿಕಾರಿಗಳ ಬಂದಿಲ್ಲ. ಅಧಿಕಾರಿಗಳು ಬಾರದಿದ್ದರೆ ಪ್ರಶ್ನೋತ್ತರ ಮುಂದುವರಿಯಲು ಬಿಡೋದಿಲ್ಲ. ಬಾವಿಗಿಳಿದು ಪ್ರತಿಭಟಸಬೇಕಾಗುತ್ತದೆ ಎಂದು ತಾಪಂ ಸದಸ್ಯ ಕರಣ್ ಪೂಜಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಕರಾವಳಿ ಜಿಲ್ಲೆಗಳಲ್ಲಿ ಹಾಗೂ ರಾಜ್ಯದ ಹಲವೆಡೆಗಳಲ್ಲಿ ಹಿಂದೂ ಚಳವಳಿಯನ್ನು ಹತ್ತಿಕ್ಕುವ, ಹಿಂದು ನಾಯಕರ ಮೇಲೆ ದಬ್ಬಾಳಿಕೆಯನ್ನು ನಡೆಸುವ, ಹಿಂದು ಸಾಮಾಜಿಕ ಕಾರ್ಯಕರ್ತರ ಮೇಲೆ ನಿರಂತರ ದೌರ್ಜನ್ಯ, ಕಿರುಕುಳವನ್ನು ಎಸಗುವ, ಹಿಂದು ಧಾರ್ಮಿಕ, ಸಾಮಾಜಿಕ ಆಚರಣೆಗಳಿಗೆ ನೀತಿ-ನಿರ್ಬಂಧಗಳನ್ನು ಹೇರಿ ಅಡೆ-ತಡೆಗಳನ್ನು ಒಡ್ಡುತ್ತಿರುವ ರಾಜ್ಯ ಸರಕಾರ ಹಿಂದು ವಿರೋಧಿ ಧೋರಣೆಯನ್ನು ಅನುಸರಿಸುತ್ತಿದೆ. ಯಾವುದೇ ತಪ್ಪು ಮಾಡದ, ದ್ರೋಹ ಎಸಗದ ಹಿಂದು ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರ ಮೇಲೆ ಕೇಸು ದಾಖಲಿಸುತ್ತಿರುವ ಸರ್ಕಾರದ ಧೋರಣೆ ಖಂಡನೀಯ ಎಂದು ಬಜರಂಗ ದಳದ ದಕ್ಷಿಣ ಪ್ರಾಂತ ಸಂಚಾಲಕ ಶರಣ್ ಪಂಪ್ವೆಲ್ ಹೇಳಿದರು. ಹಿಂದು ಜಾಗರಣ ವೇದಿಕೆ ಗಂಗೊಳ್ಳಿ ಘಟಕದ ಆಶ್ರಯದಲ್ಲಿ ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆಯ ಬಸ್ ನಿಲ್ದಾಣದ ಎದುರು ರಾಜ್ಯ ಸರಕಾರ ಹಿಂದು ವಿರೋಧಿ ಧೋರಣೆಯನ್ನು ಖಂಡಿಸಿ ಬುಧವಾರ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಳೆದ ೬೦ ವರ್ಷಗಳಲ್ಲಿ ಹಿಂದು ವಿರೋಧಿ ಧೋರಣೆ ಅನುಸರಿಸುತ್ತಿರುವ ಸರಕಾರ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಇಂದು ಕ್ರೌರ್ಯಕ್ಕಿಂತ ಹೆಚ್ಚಾಗಿ ಭಯ ಹುಟ್ಟಿಸುವ ವ್ಯವಸ್ಥಿತ ಕೆಲಸವಾಗುತ್ತಿದೆ. ಭಯವೆಂಬುದು ಸಾಂಕ್ರಾಮಿಕ ರೋಗವಾಗುತ್ತಿದೆ. ನಮಗೆ ಬೇಕಿರುವುದು ನಾವು ಮತ್ತು ನಮ್ಮ ಮಕ್ಕಳು ನೆಮ್ಮದಿ ಹಾಗೂ ಧೈರ್ಯದಿಂದ ಬದುಕುವ ಸಮಾಜ. ಭಿನ್ನಾಭಿಪ್ರಾಯವಿದ್ದರೆ ಮಾತಿನಿಂದ ಪರಿಹರಿಸಿಕೊಳ್ಳೋಣ ಆದರೆ ಹತ್ಯೆ ಅದಕ್ಕೆ ಉತ್ತರವಲ್ಲ ಎಂದು ಬಹುಭಾಷಾ ನಟ ಪ್ರಕಾಶ್ ರೈ ಹೇಳಿದರು. ಅವರು ಕೋಟತಟ್ಟು ಗ್ರಾಮ ಪಂಚಾಯತ್ ಪಂಚಾಯತ್ ಸಾರಥ್ಯದಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ ಹಾಗೂ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ರಿ. ಕೋಟ ಸಹಯೋಗದೊಂದಿಗೆ ನಡೆದ ತಂಬೆಲರು ಕಾರ್ಯಕ್ರಮದಲ್ಲಿ ಡಾ. ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದರು. ನಟ, ಕಲಾವಿದ ಪತ್ರಕರ್ತ ಯಾಕೆ ಮಾತನಾಡುತ್ತಾನೆ ಎಂದು ಪ್ರಶ್ನಿಸುವ ಮೊದಲು ಅವರೂ ಜನಸಮುದಾಯದಿಂದ ಬಂದವರು ಎಂಬುದನ್ನು ಮರೆಯಬಾರದು. ಎಲ್ಲವನ್ನೂ ನೋಡುತ್ತಾ ನಾವೇ ಹೇಡಿಯಾಗಿ ಕುಳಿತರೇ ಒಂದು ಸಮಾಜ ಹೇಡಿಯಾಗಲು ನಾವೇ ಕಾರಣವಾಗುತ್ತೇವೆ. ಮನಸಾಕ್ಷಿ ಅನ್ನಿಸಿದ್ದನ್ನು ಹೇಳಬಾರದು ಎಂದು ಹೇಳಲು ಯಾರಿಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪುರಸ್ಕಾರ ಸಮಾರಂಭಕ್ಕೆ ಆಗಮಿಸಿದ್ದ ನಟ ಪ್ರಕಾಶ್ ರೈ ಅವರ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದವರನ್ನು ಪೊಲೀಸರು ತಡೆದು ವಶಕ್ಕೆ ಪಡೆದುಕೊಂಡು ಘಟನೆ ನಡೆಯಿತು. ಪ್ರತಿಭಟನೆ ನಡೆಸುವ ಮುನ್ಸೂಚನೆ ಇದ್ದಿದ್ದರಿಂದ ಕೋಟದಲ್ಲಿ ಬೀಗು ಬಂದೋವಸ್ತ್ ಏರ್ಪಡಿಸಲಾಗಿತ್ತು. ಕೋಟ ಕಾರಂತ ಥೀಂ ಪಾರ್ಕ್ನಲ್ಲಿ ವಿಶೇಷ ಪೊಲೀಸ್ ಬಂದೋಬಸ್ತು ವ್ಯವಸ್ಥೆ ಕಲ್ಪಿಸಲಾಗಿತ್ತು. ಮಂಗಳವಾರ ಮುಂಜಾನೆಯಿಂದಲೇ ಪೊಲೀಸ್ರು ಕಾರಂತ ಥೀಂ ಪಾರ್ಕ್ ಬಂದೋ ಬಸ್ತಿನಲ್ಲಿ ತೊಡಗಿದ್ದರು. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಎಂ ಪಾಟೀಲ್ ಅವರ ನೇತೃತ್ವದಲ್ಲಿ ಕಾರಂತ ಥೀಂ ಪಾರ್ಕ್ನ ಭದ್ರತೆಗೆ ವ್ಯವಸ್ಥೆ ಕಲ್ಪಿಸಲಾಯಿತು. ಪ್ರತಿಭಟನೆಗೆ ಮುಂದಾದವರನ್ನು ಬಂಧಿಸಿ ಕೊನೆಗೆ ಬಿಡುಗಡೆಗೊಳಿಸಲಾಯಿತು. ಕೋಟತಟ್ಟು ಪಂಚಾಯತ್ ಮತ್ತು ಕಾರಂತ ಹುಟ್ಟೂರ ಪ್ರತಿಷ್ಠಾನ ನೀಡುವ ಕಾರಂತ ಹುಟ್ಟೂರ ಪ್ರತಿಷ್ಠಾನ ವಿಚಾರವಾಗಿ ಎದ್ದಿರುವ ವಿವಾದ ಹಿನ್ನಲೆಯಲ್ಲಿ ಮಂಗಳವಾರ ವಿಶೇಷ ಬಂದೋಬಸ್ತ ವ್ಯವಸ್ಥೆ ಕಲ್ಪಿಸಲಾಗಿತ್ತು. ಬಹುಭಾಷಾ ನಟ ಪ್ರಕಾಶ್ ರೈ ಅವರನ್ನು ಆಯ್ಕೆ ಮಾಡಿದ ಬಳಿಕ, ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ನಮ್ಮ ಕೊಲ್ಲೂರು ಸ್ವಚ್ಚ ಕೊಲ್ಲೂರು ಅಭಿಯಾನದಡಿಯಲ್ಲಿ ಪ್ರತಿ ತಿಂಗಳು ಸ್ವಚ್ಚತಾ ಅಭಿಯಾನವನ್ನು ಆಯೋಜಿಸಲಾಗುತ್ತಿದೆ. ಪ್ರಸಿದ್ಧ ಯಾತ್ರಾಸ್ಥಳವೆನಿಸಿಕೊಂಡಿರುವ ಕೊಲ್ಲೂರು ಪರಿಸರ ಸ್ವಚ್ಚತೆ ಮಾಡುತ್ತಿದ್ದು, ಸ್ವಚ್ಚತೆಯ ಅರಿವು ಅಭಿಯಾನ ನಿರಂತವಾಗಿ ಮುಂದುವರಿಯಲಿದೆ ಎಂದು ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಹೇಳಿದರು. ಅವರು ಗ್ರಾಮ ಪಂಚಾಯತ್ ಕೊಲ್ಲೂರು, ಶ್ರೀ ಮೂಕಾಂಬಿಕಾ ದೇವಸ್ಥಾನ ಕೊಲ್ಲೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲೂರು, ವನ್ಯಜೀವಿ ವಲಯ ಕೊಲ್ಲೂರು, ಮಹಿಳಾ ಮಂಡಲ, ನವಶಕ್ತಿ ಮಹಿಳಾ ವೇದಿಕೆ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘ, ಜೀಪು ಟ್ಯಾಕ್ಸಿ ಮತ್ತು ರಿಕ್ಷಾ ಚಾಲಕರ ಮಾಲಕರ ಸಂಘ, ಆರಕ್ಷಕ ಠಾಣೆ ಕೊಲ್ಲೂರು, ಸುಪರ್ಣ ಟ್ರಸ್ಟ್, ನವೋದಯ ಸ್ವಸಹಾಯ ಸಂಘ, ಸ್ತ್ರೀಶಕ್ತಿ ಸಂಘ ಹಾಗೂ ಸಮಸ್ತ ನಾಗರಿಕರು ಹಾಗೂ ಸಹಯೋಗದೊಂದಿಗೆ ಮಾಸ್ತಿಕಟ್ಟೆಯಿಂದ ಸ್ನಾನಘಟ್ಟ ಹಾಗೂ ಕೊಲ್ಲೂರು ದೇವಳದ ತನಕ ಆಯೋಜಿಸಲಾಗಿದ್ದ ಕೊಲ್ಲೂರಿನಲ್ಲಿ ಸ್ವಚ್ಛಾತಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಸ್ವಚ್ಛ ಕೊಲ್ಲೂರು ಅಭಿಯಾನದ ಮೂಲಕ ದೇವಳದ ಪರಿಸರದಲ್ಲಿ ಸ್ವಚ್ಛತೆಯನ್ನು ಕಾಯ್ದುಕೊಳ್ಳಲು ಪಂಚಾಯತ್ ಮೂಲಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಪುವಿನಲ್ಲಿ ನಡೆದ ಮೆರುಗು ವಲಯ ವ್ಯವಹಾರ ಸಮಾವೇಶದಲ್ಲಿ ಜೇಸಿಐ ವಲಯ ೧೫ರ ‘ಎ’ ಪ್ರಾಂತ್ಯದ ಪ್ರತಿಷ್ಠಿತ ಉದ್ಯಮರತ್ನ ಪ್ರಶಸ್ತಿಯನ್ನು ಉಪ್ಪುಂದ ನ್ಯೂ ವಿನಾಯಕ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕ ಜೆಎಫ್ಪಿ ಯು. ಪ್ರಕಾಶ ಭಟ್ ಇವರಿಗೆ ಪ್ರದಾನಿಸಿ ಪುರಸ್ಕರಿಸಲಾಯಿತು. ಉಪ್ಪುಂದ ಪ್ರಕಾಶ್ ಭಟ್ ಇವರ ಉದ್ಯಮ ಕ್ಷೇತ್ರದಲ್ಲಿನ ಸಾಧನೆ ಮತ್ತು ಬೆಳವಣಿಗೆಯನ್ನು ಗುರುತಿಸಿ ಜೇಸಿಐ ವಲಯ ೧೫ರ ವತಿಯಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೇಸಿಐ ಆಂದೋಲನಕ್ಕೆ ಭಟ್ಟರ ಸಹಭಾಗಿತ್ವ ಮತ್ತು ನೀಡುತ್ತಿರುವ ಸಹಕಾರವನ್ನು ವಲಯಾಧ್ಯಕ್ಷ ಸಂತೋಷ್ ಜಿ. ಶ್ಲಾಘಿಸಿದರು. ಈ ಸಂದರ್ಭ ಜೇಸಿಐ ಇಂಡಿಯಾ ಫೌಂಡೇಶನ್ ನಿರ್ದೇಶಕ ವೈ. ಸುಕುಮಾರ್, ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಸದಾನಂದ ನಾವಡ, ರಾಷ್ಟ್ರೀಯ ತರಬೇತುದಾರ ಡಾ. ಅರವಿಂದ ಕೇದಿಗೆ, ರಾಷ್ಟ್ರೀಯ ಜೇಸಿರೇಟ್ ಸಂಯೋಜಕಿ ರೂಪಾ ಇಂದ್ರಾಳಿ, ವಲಯಾಧಿಕಾರಿ ನರಸಿಂಹ ಹಳಗೇರಿ, ಜೇಸಿಐ ಶಿರೂರು ಘಟಕದ ಅಧ್ಯಕ್ಷ ಅರುಣ್ಕುಮಾರ್, ಉಪ್ಪುಂದ ಘಟಕದ ಅಧ್ಯಕ್ಷ ಮಂಜುನಾಥ ದೇವಾಡಿಗ ಹಗೂ ಇತರ ಪದಾಧಿಕಾರಿಗಳು ಇದ್ದರು.…
