ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಹುಂಡೇಕರ್ ಸಮಿತಿ ವರದಿಯಲ್ಲಿ ದೊಡ್ಡ ತಾಲೂಕುಗಳಲ್ಲಿ ಸಂಪರ್ಕದ ವ್ಯವಸ್ಥೆಗಳು ಅಂದು ಕಡಿಮೆ ಇರುವ ಹಿನ್ನೆಲೆಯಲ್ಲಿ ಜನರಿಗೆ ಹತ್ತಿರದಲ್ಲೇ ಸೌಲಭ್ಯಗಳು ದೊರಕಲಿ ಎನ್ನುವ ಅಭಿವೃದ್ಧಿ ದೃಷ್ಟಿಕೋನದಲ್ಲಿ ಅಂತಹ ತಾಲೂಕನ್ನು ಒಡೆದು ಎರಡು ತಾಲೂಕನ್ನಾಗಿ ಮಾಡಬೇಕೆಂದು ಸೂಚಿಸಿದ್ದರು. ಆದರೆ ಈ ವರದಿಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ವಂಡ್ಸೆಯನ್ನು ತಾಲೂಕು ಕೇಂದ್ರವಾಗಿ ಮಾಡದಿದ್ದರೇ ಬೈಂದೂರು ತಾಲೂಕಿಗೆ ಸೇರಿಸುವುದು ಬೇಡ ಎಂದು ನ್ಯಾಯವಾದಿ ಟಿ.ಬಿ. ಶೆಟ್ಟಿ ಹೇಳಿದರು. ಅವರು ಹೆಮ್ಮಾಡಿಯ ಜಯಶ್ರೀ ಸಭಾಭವನದಲ್ಲಿ ನಡೆದ ವಂಡ್ಸೆ ಹೋಬಳಿ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ ಹುಂಡೇಕರ್ ವರದಿಯಲ್ಲಿ ತಾಲೂಕು ಕೇಂದ್ರ ಎಲ್ಲಿ ಆಗಬೇಕೆಂಬ ಪ್ರಸ್ತಾಪ ಇಲ್ಲ. ಬೈಂದೂರು ತಾಲೂಕು ರಚನೆಯಾದಲ್ಲಿ ಬೈಂದೂರೇ ಕೇಂದ್ರವಾಗಬೇಕೆಂದು ವರದಿಯಲ್ಲಿ ಹೇಳಿಲ್ಲ. ಎ.ಬಿ. ಪ್ರಕಾಶ್ ಸಮಿತಿಯಲ್ಲಿದ್ದ ಚಿರಂಜೀವಿ ಸಿಂಗ್ ಕೂಡಾ ಮುಂದೆ ರಾ.ಹೆ.ಕೇಂದ್ರಿತ ತಾಲೂಕು ಕೇಂದ್ರಗಳಾಗಿ ಮಾಡುವುದು ಸರಿಯಲ್ಲ ಎಂದಿದ್ದರು. ಇದುವರೆಗೆ ಯಾವ ಸರಕಾರವೂ ಕೂಡ ತಾಲೂಕು ರಚನೆಗೆ ಸಂಬಂಧಿಸಿದ ಯಾವುದೇ ವರದಿಗೂ ಗೌರವ ಕೊಟ್ಟಿಲ್ಲ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಹೇರೂರು ಗ್ರಾಮದ ಕೆಳ ಹೇರೂರಿನ ದುರ್ಗಾಂಬಿಕಾ ದೇವಸ್ಥಾನದ ಬಾಗಿಲಿನ ಬೀಗ ಒಡೆದು ಒಳ ಪ್ರವೇಶಿಸಿದ ಕಳ್ಳರು ಗರ್ಭ ಗುಡಿಯ ಬೀಗ ಒಡೆದು ದೇವರಿಗೆ ಹಾಕಿರುವ ಚಿನ್ನ -ಬೆಳ್ಳಿಯ ಆಭರಣಗಳು ಹಾಗೂ ಪರಿಕರಗಳನ್ನು ಕಳವು ಮಾಡಲಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ದೇವಸ್ಥಾನದ ಅರ್ಚಕ ರಾಮಯ್ಯ ಬಳೆಗಾರ ಅವರು ಬೆಳಗ್ಗೆ ದೇವಸ್ಥಾನಕ್ಕೆ ಪೂಜೆಗೆ ಬಂದಾಗ ಕಳವು ನಡೆದ ಬಗ್ಗೆ ತಿಳಿದುಬಂದಿದ್ದು ತತ್ಕ್ಷಣ ಆಡಳಿತ ಮೊಕ್ತೇಸರರಿಗೆ ಕರೆ ಮಾಡಿ ತಿಳಿಸಿರುತ್ತಾರೆ. ಎದುರಿನ ಬಾಗಿಲಿನ ಬೀಗ ಹಾಕುವ ಕೊಂಡಿಯನ್ನು ಮುರಿದು ಬಾಗಿಲಿಗೆ ಒಳಗಡೆಯಿಂದ ಚಿಲಕ ಹಾಕಿರುವುದು ತಿಳಿದ ಅನಂತರ ದೇವಸ್ಥಾನದ ಉತ್ತರ ಬದಿಯಲ್ಲಿ ಬಾಗಿಲನ್ನು ತೆರೆದು ಹೊಕ್ಕ ಕಳ್ಳರು ದೇವಸ್ಥಾನದ ಒಳಗಿನ ಗರ್ಭಗುಡಿಗೆ ಹೋಗುವ ಬಾಗಿಲಿನ ಬೀಗ ಹಾಕುವ ಕೊಂಡಿಯನ್ನು ಮುರಿದು ಗರ್ಭಗುಡಿಯ ಒಳಗೆ ಪ್ರವೇಶಿಸಿ ದೇವರಿಗೆ ಹಾಕಿರುವ ಬೆಳ್ಳಿಯ ಪ್ರಭಾವಳಿ, ಬೆಳ್ಳಿಯ ತ್ರಿಶೂಲ, ಬೆಳ್ಳಿಯ ಮುಖವಾಡ, ಬೆಳ್ಳಿಯ ಸೊಂಟದ ಪಟ್ಟಿ, ಬೆಳ್ಳಿಯ ಬಳೆ ಒಂದು ಜತೆ, ಬೆಳ್ಳಿಯ…
ಕುಂದಾಪ್ರ ಡಾಟ್ ಕಾಂ ವಿಡಿಯೋ |ಮರವಂತೆ ಸೌಪರ್ಣಿಕ ನದಿಯ ಕುರು ದ್ವೀಪ ನೋಡುಗರ ಕಣ್ಮನ ಸೆಳೆಯುವಂತಿದೆ. ಮರವಂತೆ ಸಮುದ್ರ ತೀರ ಹಾಗೂ ಸೌಪರ್ಣಿಕ ನದಿಯ ನಡುವೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ-66 ಇಲ್ಲಿನ ಒಂದು ವೈಶಿಷ್ಟ್ಯವಾದರೇ, ಅದರ ಪಕ್ಕದಲ್ಲಿಯೇ ಇರುವ ಕುರು ದ್ವೀಪವೂ ಸುಂದರ ಪ್ರವಾಸಿ ತಾಣವೆನಿಸಿಕೊಂಡಿದೆ. ಕುಂದಾಪುರದ ಡಿಜೆ ರಂಜು ತಮ್ಮ ಡ್ರೋನ್ ಕ್ಯಾಮರಾ ಮೂಲಕ ಈ ಪ್ರದೇಶವನ್ನು ಸೆರೆಹಿಡಿದಿದ್ದಾರೆ. ಒಮ್ಮೆ ನೋಡಿ ಮತ್ತು ಶೇರ್ ಮಾಡಿ. Aerial View of Kuru Islaland Maravanthe ಇದನ್ನೂ ನೋಡಿ: http://kundapraa.com/aerial-view-of-current-maravanthe-nh-66-beach-and-river/ ಮತ್ತಷ್ಟು ವಿಡಿಯೋಗಳಿಗೆ ನಮ್ಮ ಚಾನೆಲ್ Subscribe ಮಾಡಿಕೊಳ್ಳಿ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಕೀಲರ ಸಂಘದ ಸದಸ್ಯರಾದ ಯುವ ನ್ಯಾಯವಾದಿ ಕೆ. ವಿಕಾಸ ಹೆಗ್ಡೆಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕವಾದ ಬಗ್ಗೆ ಕುಂದಾಪುರ ವಕೀಲರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ, ಯುವ ನ್ಯಾಯವಾದಿಯಾಗಿ ಕ್ರೀಯಾಶೀಲ ವ್ಯಕ್ತಿತ್ವ ಹೊಂದಿರುವ ಕೆ.ವಿಕಾಸ ಹೆಗ್ಡೆಯವರು ರಾಜಕೀಯದಲ್ಲಿ ಅಜಾತಶತ್ರುವಾಗಿದ್ದು, ಅತೀ ಕಿರಿಯ ವಯಸ್ಸಿನಲ್ಲಿ ಉನ್ನತ ಸ್ಥಾನ ಅಲಂಕರಿಸಿರುವುದು ನಮ್ಮ ವಕೀಲರ ಸಂಘಕ್ಕೆ ಅತ್ಯಂತ ಹೆಮ್ಮೆಯ ವಿಚಾರ ಎಂದರು. ಮಾಜಿ ಅಧ್ಯಕ್ಷರುಗಳಾದ ಎ.ಬಿ.ಶೆಟ್ಟಿ, ಗಡಾಹದ್ ರಾಮಕೃಷ್ಣ ರಾವ್, ಜಿ. ಸಂತೋಷ ಕುಮಾರ್ ಶೆಟ್ಟಿ, ಹಿರಿಯ ನ್ಯಾಯವಾದಿ ಟಿ.ಬಿ ಶೆಟ್ಟಿ, ಉಪಾಧ್ಯಕ್ಷರಾದ ಜಯಪ್ರಕಾಶ ಸಾಲಿನ್ಸ್ರವರು ಕೆ.ವಿಕಾಸ ಹೆಗ್ಡೆ ಇವರನ್ನು ಸನ್ಮಾನಿಸಿದರು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಕೆ.ವಿಕಾಸ ಹೆಗ್ಡೆಯವರು, ಒಬ್ಬ ನ್ಯಾಯವಾದಿಯಾಗಿ ಇದ್ದುದರಿಂದ ರಾಜಕೀಯವಾಗಿ ಹೆಚ್ಚು ಗೌರವ ಸಿಕ್ಕಿರುವುದಲ್ಲದೆ, ಈ ವಯಸ್ಸಿನಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಲು ಸಾಧ್ಯವಾಯಿತು. ಅಲ್ಲದೇ ನಾನು ನ್ಯಾಯವಾದಿಯಾಗಿರುವುದರಿಂದ ಜನರಿಗೂ ಸಹಾ ಹೆಚ್ಚಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿಶ್ವ ಹಿಂದೂ ಪರಿಷತ್ – ಬಜರಂಗದಳ ಮರವಂತೆ ಘಟಕದ ಆಶ್ರಯದಲ್ಲಿ ಯುಗಾದಿ ಹಬ್ಬದ ಆಚರಣೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಿದವು. ಕರ್ನಾಟಕ ದಕ್ಷಿಣ ಪ್ರಾಂತ ಮಠ ಮಂದಿರ ಪ್ರಮುಖ್ ಪ್ರೇಮಾನಂದ ಶೆಟ್ಟಿ ಸಂಜೆ ನಡೆದ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು. ವಿಶ್ವ ಹಿಂದೂ ಪರಿಷತ್ ಬಜರಂಗದಳ ತಾಲೂಕು ಅಧ್ಯಕ್ಷ ಶ್ರೀಧರ ಬಿಜೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ತಾಲೂಕು ಸಂಚಾಲಕ ನಿತ್ಯಾನಂದ ಉಪ್ಪುಂದ, ನಾಗರಾಜ್, ಸತೀಶ್ ಮೊದಲಾದವರು ಉಪಸ್ಥಿತರಿದ್ದರು. ಯುಗಾದಿ ಹಬ್ಬದ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಘಟಕದ ಕಾರ್ಯಕರ್ತರು ಮರವಂತೆಯ ಮನೆಗಳಿಗೆ ತೆರಳಿ ಬೇವು ಬೆಲ್ಲ ನೀಡಿ ಶುಭಕೋರಿದರು. ರಾತ್ರಿ ಸಹಭೋಜನ ನಡೆಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ – ಕುಂದಾಪುರ: ಕುಂದಾಪುರ ಪುರಸಭೆ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ಬಬ್ಬುಕುದ್ರುವಿನ ಶ್ಮಶಾನ ಅಭಿವೃದ್ಧಿಗೆ ಅನುದಾನವನ್ನು ಮೀಸಲಾಗಿರಿಸುವ ಬಗ್ಗೆ , ವಲಸೆ ಕಾರ್ಮಿಕರಿಗೆ ರಾತ್ರಿ ವಸತಿ ಸೌಲಭ್ಯ ಒದಗಿಸುವ ಕುರಿತು ವ್ಯಾಪಕ ಚರ್ಚೆ ನಡೆಯಿತು. ಪ್ರಸ್ತುತ ಕುಂದಾಪುರದಲ್ಲಿ ನೂರಾರು ಮಂದಿ ವಲಸೆ ಕಾರ್ಮಿಕರು ನೆಹರೂ ಮೈದಾನದ ಪಕ್ಕದಲ್ಲಿರುವ ಶಾಲೆ, ಸರಕಾರಿ ಕಟ್ಟಡಗಳಲ್ಲಿ ರಾತ್ರಿ ಹೊತ್ತು ವಸತಿಗಾಗಿ ಆಶ್ರಯ ಪಡೆದುಕೊಳ್ಳುತ್ತಿದ್ದು, ಅವರು ಅಲ್ಲಿ ಶುಚಿತ್ವದ ಬಗ್ಗೆ ಹೆಚ್ಚಿನ ಗಮನ ಹರಿಸದೇ ಇರುವ ಹಿನೆ°ಲೆಯಲ್ಲಿ ಚರ್ಚೆ ನಡೆಸಲಾಗಿದ್ದು, ಈ ಬಗ್ಗೆ ಗಮನ ಹರಿಸಿದ ಕುಂದಾಪುರ ಉಪ ವಿಭಾಗಾಧಿಕಾರಿ ಶಿಲ್ಪಾನಾಗ್ ಅವರು ಕುಂದಾಪುರ ಪುರಸಭೆಯ ವತಿಯಿಂದ ವಲಸೆ ಕಾರ್ಮಿಕರಿಗೆ ನೈಟ್ ಶೆಲ್ಟರ್ವೊಂದನ್ನು ನಿರ್ಮಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ತಿಳಿಸಿದ ಪುರಸಭೆಯ ಮುಖ್ಯಾಧಿಕಾರಿ ಅವರು ಈ ಕುರಿತು ಕುಂದಾಪುರದ ಬಸ್ಸು ನಿಲ್ದಾಣದ ಬಳಿ ಇರುವ ಸಂಕೀರ್ಣದ ಎರಡನೇ ಅಂತಸ್ತಿನಲ್ಲಿ ಸೂಕ್ತ ಸ್ಥಳಾವಕಾಶ ಮಾಡಿಕೊಡುವ ಬಗ್ಗೆ ನಿರ್ಣಯವನ್ನು ತೆಗೆದುಕೊಳ್ಳಲು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಮರವಂತೆ ಗ್ರಾ.ಪಂ ವ್ಯಾಪ್ತಿಯ ನೀರೋಣಿ ಎಂಬಲ್ಲಿ ಇಂದು ಮಧ್ಯಾಹ್ನ ನಡೆದ ಅಪಘಾತದಲ್ಲಿ ಕಾರಿನ ಚಾಲಕ ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ. ಕುಂದಾಪ್ರ ಡಾಟ್ ಕಾಂ. ರಿಟ್ಜ್ ಕಾರು ಹಾಗೂ ಸರಕು ತುಂಬಿದ ಗೂಡ್ಸ್ ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು ಅಪಘಾತದಲ್ಲಿ ಉಡುಪಿ ಜಿಲ್ಲಾ ಎಸ್ಪಿ ಕಚೇರಿಯ ಗುಮಾಸ್ತ, ಕಾರಿನ ಚಲಾಯಿಸುತ್ತಿದ್ದ ಕೃಷ್ಣಮೂರ್ತಿ ಎಂಬುವರು ಗಾಯಗೊಂಡಿದ್ದಾರೆ. ಹೊನ್ನಾವರದಿಂದ ಉಡುಪಿ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನೀರೋಣಿ ಬಳಿ ಎದುರಿನಿಂದ ಬಂದ ಸರಕು ಲಾರಿ ನೇರ ಡಿಕ್ಕಿ ಹೊಡೆದಿದೆ. ತಕ್ಷಣ ಗಾಯಗೊಂಡವರನ್ನು ತಕ್ಷಣ ಕುಂದಾಪುರ ಖಾಸಗೀ ಆಸ್ಪತ್ರೆಗೆ ಸಾಗಿಸಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರಾವಳಿಯ ಯುವಕರಲ್ಲಿ ವಿಶೇಷವಾದ ಪ್ರತಿಭೆ ಇದೆ. ಏನನ್ನೂ ಸಾಧಿಸಬೇಕೆಂಬ ಛಲವಿದೆ. ಸಿನೆಮಾ ನಿರ್ಮಾಣ ನಿರ್ದೇಶನ ಎಂಬುದು ಬೆಂಗಳೂರಿಗೆ ಮಾತ್ರ ಸೀಮಿತವಾಗದೇ ಕುಂದಾಪುರ ಪರಿಸರದಲ್ಲಿಯೂ ಸಾಧ್ಯ ಎಂಬ ಛಲದೊಂದಿಗೆ ಈ ಭಾಗದ ಪ್ರತಿಭೆಗಳಿಗೂ ಅವಕಾಶ ನೀಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಮಾಜಿ ಧರ್ಮದರ್ಶಿ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ಕುಂದಾಪುರದ ನೇತಾಜಿ ಸಭಾ ಭವನದಲ್ಲಿ ಜರುಗಿದ ಮಿರಾಕಲ್ ಡಾನ್ಸ್ ಕ್ರೀವ್ ಉದ್ಘಾಟನಾ ಸಮಾರಂಭ ಹಾಗೂ ಕತ್ತಲೆಕೋಣೆ ಸಿನೆಮಾದ ಟೀಸರ್ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮತನಾಡಿ ಕುಂದಾಪುರದ ಯುವಕರು ಏನನ್ನೂ ಸಾಧಿಸಬಲ್ಲರು. ಸಿನೆಮಾ ಕ್ಷೇತ್ರದಲ್ಲಿಯೂ ಈ ಭಾಗದ ನಿರ್ದೇಶಕರು ಹೆಸರು ಮಾಡುತ್ತಿರುವುದು ಕೇಳಿದ್ದೇನೆ. ಸಂದೇಶ್ ಶೆಟ್ಟಿ ಅಜ್ರಿ ಅವರ ನಿರ್ದೇಶನದ ಕತ್ತಲೆಕೋಣೆ ಸಿನೆಮಾ ಯಶಸ್ಸು ಕಾಣುವಂತಾಗಲಿ ಎಂದು ಹಾರೈಸಿದರು. ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಧರ್ಮದರ್ಶಿ ಸಜ್ಜಿದಾನಂದ ಚಾತ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಚಿತ್ರದ ನಿರ್ಮಾಪಕ ಪಿ.ಆರ್ ಅಮೀನ್,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ನೇಮಕಗೊಂಡ ಶಾಸಕ ಕೆ. ಗೋಪಾಲ ಪೂಜಾರಿ ಅವರನ್ನು ಮರವಂತೆಯ ಸೇವಾ ಸಾಂಸ್ಕೃತಿಕ ವೇದಿಕೆ ಸಾಧನಾ ವತಿಯಿಂದ ರವಿವಾರ ಅಭಿನಂದಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಗುರುದಾಸ್ ವಿ. ಶ್ಯಾನುಭಾಗ್ ಅಧ್ಯಕ್ಷತೆ ವಹಿಸಿದ್ದರು. ಸ್ವಾಗತಿಸಿ, ಅಭಿನಂದನೆಯ ನುಡಿಗಳನ್ನಾಡಿದ ಸಾಧನಾ ಸ್ಥಾಪಕಾಧ್ಯಕ್ಷ ಎಸ್. ಜನಾರ್ದನ ತೀರ ಸಾಮಾನ್ಯ ಹಿನ್ನೆಲೆಯಿಂದ ಬಂದ ಪೂಜಾರಿ ಅವರು ರಾಜಕೀಯ ಕ್ಷೇತ್ರದಲ್ಲಿ ಮೂಡಿಸಿದ ಛಾಪು ಅಸದೃಶವಾದುದು. ನಾಲ್ಕು ಅವಧಿಗೆ ಬೈಂದೂರು ಶಾಸಕರಾಗಿ ನಡೆಸಿದ ಅಭಿವೃದ್ಧಿ ಕಾರ್ಯಗಳಿಗೆ ಸಾಟಿ ಇಲ್ಲ. ಶಿಕ್ಷಣ, ಸಂಪರ್ಕ, ವಿದ್ಯುದೀಕರಣ, ಆರೋಗ್ಯ ಮುಂತಾದ ಕ್ಷೇತ್ರಗಳಿಗೆ ಅವರಿಂದ ಅನನ್ಯ ಕೊಡುಗೆ ಸಂದಿದೆ. ಬೈಂದೂರು ತಾಲೂಕು ರಚನೆ ಅವರ ಸಾಧನೆಯ ಕಿರೀಟಕ್ಕೆ ಸೇರಿದ ಅನರ್ಘ್ಯ ಗರಿ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ನೇಮಕಗೊಂಡಿರುವ ಅವರಿಂದ ಬೈಂದೂರು ಕ್ಷೇತ್ರ ಇನ್ನಷ್ಟು ನಿರೀಕ್ಷೆಗಳನ್ನು ಇರಿಸಿಕೊಂಡಿದೆ ಎಂದರು. ಮಾತನಾಡಿದ ಗೋಪಾಲ ಪೂಜಾರಿ ತಮ್ಮ ಬಾಲ್ಯದ ಬದುಕು ಮತ್ತು ಸಾಧನೆಯ ಮೆಟ್ಟಿಲುಗಳನ್ನು ಏರಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿಯ ಶಾರದಾ ಮಂಟಪದಲ್ಲಿ ಕಳೆದ ಮಾರ್ಚ್ ೨೩ ರಂದು ಭಗತ್ಸಿಂಗ್ ಅಭಿಮಾನಿ ಬಳಗದ ವತಿಯಿಂದ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು. ಸ್ವಾತಂತ್ರ್ಯ ಯೋಧರಾದ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನಡೆಸಿ ನುಡಿನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ವಾಸು ದೇವಾಡಿಗ, ವಿಠಲ ಶೆಣೈ, ಉಮನಾಥ ದೇವಾಡಿಗ, ರಾಘವೇಂದ್ರ ಗಾಣಿಗ, ಯಶವಂತ, ನವೀನ, ರತ್ನಾಕರ, ಮಣಿ, ನಿತ್ಯಾನಂದ, ಶಂಕರ, ರವೀಂದ್ರ ಪಠೇಲ, ಭಗತ್ಸಿಂಗ್ ಅಭಿಮಾನಿ ಬಳಗದ ಸುಬ್ರಮಣ್ಯ ,ಅರುಣ, ಕಿರಣ್, ರಂಜಿತ್, ರಾಘವೇಂದ್ರ, ವಿಶ್ವನಾಥ, ವಿವೇಕ್, ಪ್ರಸನ್ನ ಮೊದಲಾದವರು ಪಾಲ್ಗೊಂಡಿದ್ದರು.
