ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಮಾಜಸೇವೆಗೈಯಲು ಹಲವು ದಾರಿಗಳಿವೆ. ಅದರಲ್ಲಿ ವಿವಿಧ ಸಂಘ-ಸಂಸ್ಥೆಗಳ ಮೂಲಕ ಕೊರಗ ಸಮುದಾಯದ ಮನೆಗಳಿಗೆ ಗೋದ್ರೇಜ್ ಕೊಡುಗೆ ನೀಡಲು ಪ್ರೇರಣೆದಾಯಕರಾಗಿರುವ ಸಮಾಜಸೇವಕ ಶ್ರೀಕಾಂತ್ ಶೆಣೈ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಕೋಟದ ಧರ್ಮರತ್ನಾಕರ ಆನಂದ್ ಸಿ. ಕುಂದರ್ ಅಭಿಪ್ರಾಯಪಟ್ಟರು. ಅವರು ಕೋಟತಟ್ಟು ಚಿಟ್ಟಿಬೆಟ್ಟು ಕೊರಗ ಕಾಲೋನಿಯ ಏಳು ಮನೆಗಳಿಗೆ ಸಮಾಜಸೇವಕ ಶ್ರೀಕಾಂತ್ ಶೆಣೈ ನೇತೃತ್ವದಲ್ಲಿ ವಿವಿಧ ಸಂಸ್ಥೆಗಳ ಸಹಕಾರದೊಂದಿಗೆ ಗೋದ್ರೇಜ್ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರಗ ಸಮುದಾಯವನ್ನು ಕೀಳಾಗಿ ಕಾಣುವ ಕಾಲಘಟ್ಟ ಇದಲ್ಲ ಅವರು ನಮ್ಮಂತೆ ಈ ಸಮಾಜದಲ್ಲಿ ಸಮಾನರಾಗಿ ಗುರುತಿಸಿಕೊಂಡಿದ್ದಾರೆ ಎಂದರು. ಸಭೆಯಲ್ಲಿ ಗೋದ್ರೇಜ್ ನಿರ್ಮಿಸಿ ಅತಿ ಕಡಿಮೆ ಬೆಲೆಯಲ್ಲಿ ಒದಗಿಸಿದ ಪ್ರವೀಣ್ ಮಣೂರು ಇವರಿಗೆ ಕೃತಜ್ಞತೆ ಸಲ್ಲಿಸಿ ಗೌರವಿಸಲಾಯಿತು. ಸಭೆಯಲ್ಲಿ ಟ್ರಾವೆಲಿಂಕ್ಸ್ ಫ್ರೆಂಡ್ಸ್ ಅಧ್ಯಕ್ಷ ಸತೀಶ್ ಹೆಚ್. ಕುಂದರ್, ಕೋಟತಟ್ಟು ಪಂಚಾಯತ್ ಮಾಜಿ ಅಧ್ಯಕ್ಷ ಸತೀಶ್ ಕುಂದರ್, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಗೌರವಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಹಿಳಾ ಮಂಡಲದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ-ಪಡುಕೆರೆ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಗೀತಾನಂದ ಫೌಂಡೇಶನ್ ಮಣೂರು-ಪಡುಕೆರೆ ಇವರ ಸಹಭಾಗಿತ್ವದಲ್ಲಿ ಜೂನ್ 2ರಂದು ಮಂಗಳವಾರ ಬೆಳಿಗ್ಗೆ 9:00 ರಿಂದ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಬಹು ರಾಷ್ಟ್ರೀಯ ಕಂಪನಿಗಳು ಮತ್ತು ಸ್ಥಳೀಯ ಕಂಪನಿಗಳು ಆಗಮಿಸುತ್ತಿದ್ದು, SSLC, PUC, NTC, D.Ed, BPEd, B.Ed, BA, B.com, BSW, MSW, MA, M.com, MSc, MBA, BBA, BCA, BTech, MTech ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಮತ್ತು ಪ್ರಸ್ತುತ ಅಂತಿಮ ಪದವಿಯಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ಇದರ ಪ್ರಯೋಜನವನ್ನು ಪಡೆಯಲು ಇದೊಂದು ಸುವರ್ಣಾವಕಾಶ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ರೆಸ್ಯುಮ್, ಅಂಕಪಟ್ಟಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ಗಳ ಮೂಲ ಪ್ರತಿಯೊಂದಿಗೆ ಹಾಜರಾಗುವುದು. ಈ ಉದ್ಯೋಗ ಮೇಳದ ಪ್ರಯೋಜನವನ್ನು ರಾಜ್ಯದ ಎಲ್ಲಾ ಉದ್ಯೋಗಾಕಾಂಕ್ಷಿಗಳು ಪಡೆದುಕೊಳ್ಳುವಂತೆ ಕಾಲೇಜಿನ ಪ್ರಕಟಣೆಯಲ್ಲಿ ಪ್ರಾಂಶುಪಾಲರು ತಿಳಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರು ನಗರದ ಪ್ರತಿಷ್ಠಿತ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಜಾನಪದ ನೃತ್ಯ ವಿಭಾಗದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ ಜಿಲ್ಲೆಯ ಚಿತ್ತೂರು ಪಿ.ಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಗುರುಪ್ರಸಾದ್ ಅವರು, ಅದ್ಭುತ ಪ್ರದರ್ಶನದ ಮೂಲಕ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದು ಜಿಲ್ಲೆಯ ಪಾಲಿಗೆ ಅಪಾರ ಹೆಮ್ಮೆಯ ವಿಷಯವಾಗಿದೆ. ಜಾನಪದ ಕಲೆಯ ವೈಭವವನ್ನು ಮನೋಜ್ಞವಾಗಿ ಮೂಡಿಸಿ, ತಮ್ಮ ಪ್ರತಿಭೆ, ಪರಿಶ್ರಮ ಹಾಗೂ ಕಲಾಪ್ರೇಮದಿಂದ ರಾಜ್ಯದ ಗಮನ ಸೆಳೆದಿರುವುದು ನಿಜಕ್ಕೂ ಶ್ಲಾಘನೀಯ. ಇದೇ ವೇಳೆ ಕಿರು ನಾಟಕ ಸ್ಪರ್ಧೆಯಲ್ಲಿಯೂ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿ, ದ್ವಿತೀಯ ಸ್ಥಾನ ಗಳಿಸಿರುವುದು ಅವರ ಕಲಾತ್ಮಕ ನೈಪುಣ್ಯ ಹಾಗೂ ಸಾಂಸ್ಕೃತಿಕ ಬದ್ಧತೆಯ ಮತ್ತೊಂದು ಮೆರುಗು. ಶಿಕ್ಷಕರಾಗಿ ವಿದ್ಯಾರ್ಥಿಗಳಲ್ಲಿ ಶಿಸ್ತು, ಮೌಲ್ಯ ಹಾಗೂ ಸೃಜನಶೀಲತೆಯನ್ನು ಬೆಳೆಸುವ ಜೊತೆಗೆ, ವೇದಿಕೆಯ ಮೇಲೂ ಸಾಧನೆಯ ಶಿಖರ ಏರಿರುವುದು ಶಿಕ್ಷಣ ಕ್ಷೇತ್ರಕ್ಕೆ ಗೌರವ ತಂದುಕೊಟ್ಟಿದೆ. ಗುರುಪ್ರಸಾದ್ ಅವರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸುಮಾರು 5 ಸಾವಿರ ವರ್ಷಗಳ ಹಿಂದಿನ ಪ್ರವಾದಿ ಇಬ್ರಾಹಿಮರ ತ್ಯಾಗ ಬಲಿದಾನಗಳ ದೃಷ್ಟಾಂತವು ಮನುಕುಲದಲ್ಲಿ ಮಹಾ ಸಂವೇದನೆ ಮೂಡಿಸಿದ ಘಟನೆ ಎಂದು ಧರ್ಮಗುರು ಮೌಲಾನಾ ಅಬ್ದುಲ್ ಹಫೀಜ್ ಹೇಳಿದರು. ಅವರು ಗುರುವಾರ ಹೆನ್ನಾಬೈಲ್ ಈದ್ಗಾ ಮಸೀದಿಯಲ್ಲಿನ ಪ್ರಾರ್ಥನಾ ಸಭೆಯನ್ನು ಉದ್ದೇಶಿಸಿ ಧಾರ್ಮಿಕ ಪ್ರವಚನ ನೀಡಿದರು. ನೀರಿಗಾಗಿ ಹಾಜಿರಾರವರು ಓಡಿದ ಎರಡು ಪರ್ವತಗಳ ನಡುವಿನ ಓಟ ಮತ್ತು ಅದಕ್ಕೆ ಪ್ರತಿಯಾಗಿ ಅಲ್ಲಾಹನು ನೀರಿಲ್ಲದ ಮರುಭೂಮಿಯಲ್ಲಿ ಇಡೀ ಜಗತ್ತು ಕುಡಿಯುವಷ್ಟು ನೀರನ್ನು ಸೃಷ್ಟಿಸಿದ್ದು ಕಾಲಾತೀತವಾದ ಜಾಗತಿಕ ಚರಿತ್ರೆಯ ಮಹಾನ್ ವಿಸ್ಮಯಗಳಲ್ಲಿ ಒಂದು. ದೇವನ ಇರುವಿಕೆ, ಪ್ರಭಾವ ಮತ್ತು ಪ್ರೀತಿ ಎಲ್ಲವೂ ಸಂಗಮವಾಗಿದ್ದನ್ನು ಸಂಭ್ರಮಿಸಲು ಈ ಹಬ್ಬವಿದೆ. ಯಾವುದೇ ಹಬ್ಬದ ಸಂಭ್ರಮವು ಸೌಹಾರ್ದಕ್ಕೆ ಮತ್ತು ಸಹಧರ್ಮೀಯರೊಂದಿಗಿನ ಸಹಜೀವನಕ್ಕೆ ಪೂರಕವಾಗಿರಬೇಕು ಎಂದರು. ಪ್ರಾರ್ಥನಾ ಸಭೆಯಲ್ಲಿ ಅಲಿಯಬ್ಬ ತೋಟದಮನೆ, ಸೈಯದ್ ರಫೀಕ್, ಹಸನ್ ಸಾಹೇಬ್, ಶಾಹುಲ್ ಹಮೀದ್, ಸೈಯದ್ ಅಬ್ಬಾಸ್, ಸೈಯದ್ ಇಕ್ಬಾಲ್ , ಅಮಾನ್ ಜಮಾಲ್, ಇಬ್ರಾಹಿಂ ಸೈಯದ್, ಆದಮ್ ಸಾಹೇಬ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯ ಮಟ್ಟದ ರ್ಯಾಂಕ್ ವಿಜೇತ 48 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಕೆ. ರಾಮಕೃಷ್ಣ ಕಾಮತ್ ಅವರು ವಹಿಸಿದ್ದರು. ಮಾಜಿ ಸಚಿವರಾದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ನಿರಂತರ ಪ್ರಯತ್ನ ಯಶಸ್ಸಿಗೆ ದಾರಿ. ಯಾವುದೇ ಕೆಲಸದಲ್ಲಿ ಯಶಸ್ಸು ಕಾಣಲು ನಿರಂತರ ಪ್ರಯತ್ನ ಮತ್ತು ಕಾಯುವ ತಾಳ್ಮೆ ಇರಬೇಕು. ಶಿಕ್ಷಣ ಕೇವಲ ಪುಸ್ತಕದ ಜ್ಞಾನವಲ್ಲ, ಬದಲಿಗೆ ಜೀವನದ ಏಳು-ಬೀಳುಗಳನ್ನು ಎದುರಿಸುವ ಧೈರ್ಯ, ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯ ಮತ್ತು ಸಮಾಜದಲ್ಲಿ ಹೇಗೆ ಬದುಕಬೇಕು ಎಂಬುದನ್ನು ಕಲಿಸುವಂತಿರಬೇಕು ಎಂದರು. ಅತಿಥಿಯಾಗಿ ಭಾಗವಹಿಸಿದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ಹೆತ್ತವರು ತಮ್ಮ ಮಕ್ಕಳಿಗೆ ಸದ್ವಿಚಾರ, ಸಂಸ್ಕೃತಿ, ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಯಾವ ರೀತಿ ಕಾರ್ಯ ಪ್ರವೃತ್ತರಾಗಬೇಕು ಎನ್ನುವುದರ ಕುರಿತು ಸಂಪೂರ್ಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಕ್ಕಳ ಸಾಧನೆಯಿಂದ ಹೆತ್ತವರಿಗೆ ಗೌರವ ಸಿಗುವಂತಾದರೆ ಅದು ನಿಜಕ್ಕೂ ಮಕ್ಕಳು ಹೆತ್ತವರಿಗೆ ನೀಡುವಂತಹ ಅತಿ ದೊಡ್ಡ ಉಡುಗೊರೆಯಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನ ಜೀವನದಲ್ಲಿ ಪರಿಶ್ರಮ ಮತ್ತು ಶ್ರದ್ಧೆಯಿಂದ ಸಾಧನೆಗಳನ್ನು ಮಾಡಬೇಕು ಮತ್ತು ಗುರಿಯನ್ನು ತಲುಪಬೇಕು ಎಂದು ಗಂಗೊಳ್ಳಿಯ ಉದ್ಯಮಿ ವಾಮನ ಎಸ್. ಪೈ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿಯ ಆರಂಭೋತ್ಸವ ಮತ್ತು ಅಭಿಮುಖೀಕರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ ಅಧ್ಯಕ್ಷತೆ ವಹಿಸಿದ್ದರು. ಜಿ.ಎಸ್.ವಿ. ಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶೀನಾಥ್ ಪಿ.ಪೈ, ಕಾಲೇಜಿನ ಕಾರ್ಯದರ್ಶಿ ಎನ್. ಸದಾಶಿವ ನಾಯಕ್ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರತಿಭೆಗಳಾದ ಅದಿತಿ ಎಸ್. ಖಾರ್ವಿ ಇವರಿಂದ ಭರತನಾಟ್ಯ ಮತ್ತು ಶ್ಯಾಮ್ ಜಿ.ಎನ್. ಪೂಜಾರಿ ಅವರ ಕೊಳಲು ವಾದನ ಮತ್ತು ರಚಿತ್ ಚಂದ್ರ ಖಾರ್ವಿ ಅವರಿಂದ ತಬಲ ವಾದನ ಕಾರ್ಯಕ್ರಮ ನಡೆಯಿತು. ಉಪನ್ಯಾಸಕರಾದ ಸುಜಯೀಂದ್ರ …
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಉಡುಪಿ ಇವರ ವತಿಯಿಂದ ವಿಶ್ವ ಪರಿಸರ ದಿನಾಚರಣೆ – 2026ರ ಅಂಗವಾಗಿ ಜೂನ್.2ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಣಿಪಾಲದ ಶಿವಳ್ಳಿ ಗ್ರಾಮದ ವಿದ್ಯಾನಗರ ಜ್ಞಾನಸುಧಾ ಪಿಯು ಕಾಲೇಜಿನಲ್ಲಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾದೆ. ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಕ.ರಾ.ಮಾ.ನಿ.ಮಂಡಳಿಯ ಪರಿಸರ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ನಗರ ಹಾಗೂ ಕೆಲವು ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸುವ ಕಾಮಗಾರಿಯ ಪ್ರಗತಿಯ ವಿಳಂಬದಿಂದ ಸಾರ್ವಜನಿಕರಿಗೆ ತೊಂದರೆಗಳು ಉಂಟಾಗುತ್ತವೆ. ಇವುಗಳನ್ನು ಆದ್ಯತೆಯ ಮೇಲೆ ಕೈಗೊಂಡು ಪೂರ್ಣಗೊಳಿಸಿ ಕುಡಿಯುವ ನೀರನ್ನು ಒದಗಿಸಬೇಕು ಎಂದು ಕರ್ನಾಟಕ ವಿಧಾನ ಮಂಡಲದ ಸಾರ್ವಜನಿಕ ಉದ್ದಿಮೆಗಳ ಸಮಿತಿಯ ಅಧ್ಯಕ್ಷರಾದ ಟಿ. ರಘುಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವತಿಯಿಂದ ನಡೆಸಲಾದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ಜನಸಾಮಾನ್ಯರಿಗೆ ಅಗತ್ಯ ವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ ಅನೇಕ ಯೋಜನೆಗಳು ಹಾಗೂ ಕಾಮಗಾರಿಗಳನ್ನು ಕೈಗೊಳ್ಳುತ್ತದೆ. ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ವಿಳಂಬವಿಲ್ಲದೆ ಪೂರ್ಣಗೊಳಿಸಿ, ಜನಸಾಮಾನ್ಯರ ಸದುಪಯೋಗಕ್ಕೆ ಅವಕಾಶ ಮಾಡಿಕೊಡಬೇಕು. ಉಡುಪಿ ನಗರಕ್ಕೆ ವಾರಾಹಿ ನದಿಯಿಂದ ಪ್ರತಿದಿನ 45 ಎಂ.ಎಲ್.ಡಿ ಕುಡಿಯುವ ನೀರನ್ನು ಒದಗಿಸುವ ಕಾಮಗಾರಿಗಳನ್ನು ಆದ್ಯತೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ದೇವ ಎಜುಕೇಶನಲ್ ಮತ್ತು ಕಲ್ಚರಲ್ ಟ್ರಸ್ಟ್ ಕುಂದಾಪುರ ವತಿಯಿಂದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರಿಗೆ ಶೈಕ್ಷಣಿಕ ಪುನಶ್ಚೇತನ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿ ಡಾ. ಸಿಜು ಥಾಮಸ್ ಅವರು, ಕಾರ್ಯಗಾರದಲ್ಲಿ ಶಿಕ್ಷಕರು ವೈಯಕ್ತಿಕ ಮತ್ತು ವೃತ್ತಿಪರ ಸಮತೋಲನವನ್ನು ಹೇಗೆ ನಿಭಾಯಿಸಬಹುದು ಎಂಬುದನ್ನು ವಿವರಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು. ಶಿಕ್ಷಕಿ ಜಾಹ್ನವಿ ಕಾರ್ಯಕ್ರಮವನ್ನು ನಿರೂಪಿಸಿ, ದೀಪಾ ಆಚಾರ್ ಸರ್ವರನ್ನು ಸ್ವಾಗತಿಸಿದರು. ಕೊನೆಯಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗರು ವಂದನಾರ್ಪಣೆ ಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ರುಡ್ ಸೆಟ್ ಸಂಸ್ಥೆ ಇವರ ಆಶ್ರಯದಲ್ಲಿ ಆಯೋಜಿಸಲಾದ ಬ್ಯೂಟಿ ಪಾರ್ಲರ್ ತರಬೇತಿಯ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಚಾಂತಾರು ಪಂಚಾಯತ್ ಅಧಿಕಾರಿ ಮೀರಾ ಅವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ತಮ್ಮನ್ನು ತಾವು ಅಂದವಾಗಿ ಕಾಣುವಂತೆ ಶ್ರಮವಹಿಸುವಂತೆ ಇತರರ ಸೌಂದರ್ಯ ವೃದ್ಧಿಸುವಲ್ಲಿಯೂ ಸಮಾನ ಕಾಳಜಿ ವಹಿಸಬೇಕು. ಬಹಿರಂಗ ಶುದ್ಧಿಯ ಜೊತೆಗೆ ಅಂತರಂಗ ಶುದ್ಧಿಯೂ ಇದ್ದಾಗ ಮಾತ್ರ ಉತ್ತಮ ಸೇವೆಯನ್ನು ನೀಡಲು ಸಾಧ್ಯವಾಗುತ್ತದೆ ಎಂದರು. ಮಹಿಳೆಯರ ಅಚ್ಚುಮೆಚ್ಚಿನ ಕ್ಷೇತ್ರಗಳಲ್ಲಿ ಸೌಂದರ್ಯ ವೃದ್ಧಿಯ ಕೆಲಸವೂ ಒಂದಾಗಿದ್ದು, ಪಡೆದಿರುವ ಉತ್ತಮ ತರಬೇತಿಯನ್ನು ಸದ್ಬಳಕೆ ಮಾಡಿಕೊಂಡು ಸ್ವಾಭಿಮಾನಿ ಮಹಿಳೆಯರಾಗಿ ಉತ್ತಮ ಸಮಾಜ ನಿರ್ಮಾಣದಲ್ಲಿ ಪಾಲ್ಗೊಳ್ಳಬೇಕು ಎಂದು, ಟೂಲ್ ಕಿಟ್ ಹಾಗೂ ಪ್ರಮಾಣ ಪತ್ರವನ್ನು ವಿತರಿಸಿ, ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ. ಬೊಮ್ಮಯ್ಯ ಎಂ. ಅವರು ಮಾತನಾಡಿ, 35 ದಿನಗಳ ತರಬೇತಿ ನಿಜವಾದ ಅರ್ಥದಲ್ಲಿ ಯಶಸ್ವಿಯಾಗುವುದು ನೀವು ಸ್ವಂತ ಉದ್ಯಮ ಆರಂಭಿಸಿ ಯಶಸ್ಸು ಸಾಧಿಸಿದಾಗ ಮಾತ್ರ ಎಂದು ಹೇಳಿದರು. ಸಂಸ್ಥೆಗೆ…
