Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಭಂಡಾರ್‌ಕಾರ‍್ಸ್ ಕಾಲೇಜಿನಲಿ ನಡೆದ ವಾರ್ಷಿಕೋತ್ಸವದಲ್ಲಿ ಮಂಗಳೂರು ವಿವಿ ಮಟ್ಟದಲ್ಲಿ ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾಲೇಜ್ ಆಡಳಿತ ಮಂಡಳಿ ಅಧ್ಯಕ ಡಾ.ಎಚ್.ಶಾಂತರಾಮ್‌ಅಧ್ಯಕ್ಷತೆ ವಹಿಸಿದ್ದರು.ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ.ಶಾಂತರಾಮ್ ಪ್ರಭು, ರಾಜೇಂದ್ರ ತೋಳಾರ್, ಕೆ.ಪ್ರಜ್ಞೇಶ್ ಪ್ರಭು, ಕೆ.ದೇವದಾಸ್‌ಕಾಮತ್ ಉಪಸ್ಥಿತರಿದ್ದರು. ಕಾಲೇಜಿನಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಶೈಕ್ಷಣಿಕ ಸಾಲಿನಲ್ಲಿ ನಿವೃತ್ತರಾದ ಪ್ರಾಧ್ಯಾಪಕ ಪ್ರೊ.ಉದಯಕುಮಾರ್, ಡಾ.ಪಾರ್ವತಿ ಜಿ. ಐತಾಳ್, ಪ್ರೊ.ನಾರಾಯಣತಂತ್ರಿ, ಪ್ರೊ.ಜಿ.ಎಸ್. ಹೆಗಡೆ, ಹಾಗೂ ಬೋಧಕೇತರ ಸಿಬಂದಿ ಸರಸ್ವತಿ ಬಾಯಿ ಅವರನ್ನು ಸಮ್ಮಾನಿಸಲಾಯಿತು.ಮಂಗಳೂರು ವಿಶ್ವವಿದ್ಯಾಲಯ ಮಟ್ಟದಲ್ಲಿ ರ‍್ಯಾಂಕ್ ವಿಜೇತರಾದ ಶಾಂಭವಿ, ಸಂಧ್ಯಾ, ಸಂಗೀತಾ ಯ.ಎಸ್.ಶೆಣೈ, ರಜನಿ ಹಾಗೂ ಕಾರ್ತಿಕ್ ಕಾಮತ್ ಅವರನ್ನು ಗೌರವಿಸಲಾಯಿತು. ವಿಶ್ವಸ್ಥ ಮಂಡಳಿ ಸದಸ್ಯ ಸದಾನಂದಛಾತ್ರ ಸ್ವಾಗತಿಸಿದರು.ಪ್ರಾಂಶುಪಾಲ ಡಾ.ಎನ್. ಪಿ.ನಾರಾಯಣ ಶೆಟ್ಟಿ ವರದಿ ವಾಚಿಸಿದರು.ಉಪನ್ಯಾಸಕ ಹಯವಧನ ಉಪಾಧ್ಯಾಯ ಸಮ್ಮಾನಿತರ ವಿವರ ನೀಡಿದರು. ವಿದ್ಯಾರ್ಥಿನಿಯರಾದ ವಿನಯಾ ಶೆಟ್ಟಿ ಪರಿಚಯಿಸಿದರು. ಮಹಾಲಕ್ಷ್ಮಿ ಕಾರ‍್ಯಕ್ರಮ ನಿರ್ವಹಿಸಿದರು.ಉಪನ್ಯಾಸಕಿ ರೋಹಿಣಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಭಂಡಾರ್‌ಕಾರ‍್ಸ್ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೊತ್ಸವ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆಯಿತು. ಸಮಾರಂಭದಲ್ಲಿ ಕಾಲೇಜಿನ ಉಪನ್ಯಾಸಕರಾದ ಡಾ.ಪಾರ್ವತಿ ಜಿ. ಐತಾಳ್, ಜಿ.ಎಂ. ಉದಯ ಕುಮಾರ್, ನಾರಾಯಣ ತಂತ್ರಿ, ಗಣಪತಿ ಎಸ್.ಹೆಗ್ಡೆ, ಬೋಧಕೇತರ ಸಿಬ್ಬಂದಿ ಸರಸ್ವತಿ ಬಾ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಹೆಚ್.ಶಾಂತಾರಾಮ್ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಅರುಣಾಚಲ ಮಯ್ಯ, ರಾಜೇಂದ್ರ, ಯು.ಎಸ್. ಶೆಣೈ, ಸಂದೇಶ ಶೆಟ್ಟಿ, ರಾಘವೇಂದ್ರಚರಣ ನಾವಡ ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಕಾರ್ತಿಕೇಯ ಮಧ್ಯಸ್ಥ ಸ್ವಾಗತಿಸಿದರು. ಪ್ರಾಧ್ಯಾಪಕ ಪ್ರಶಾಂತ ಹೆಗ್ಡೆ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಪ್ರಪಂಚದಲ್ಲಿ ಬಿಟ್ಟಿ ಸಲಹೆಗಳು ಬಹಳಷ್ಟು ಸಿಗುತ್ತದೆ. ಆದರೆ ನಮ್ಮ ಜೀವನಕ್ಕೆ ಅರ್ಥ ತುಂಬಬಲ್ಲ ಹಾಗೂ ಸ್ಪಷ್ಟವಾದ ಗುರಿ ತಲುಪಲು ಈ ಸಲಹೆಗಳು ಹೇಗೆ, ಎಷ್ಟು, ಮತ್ತು ಇದರಿಂದಾಗುವ ಒಳ್ಳೆಯ ಹಾಗೂ ಕೆಟ್ಟ ವಿಚಾರಗಳನ್ನು ನಿರ್ಧರಿಸಿ ಸಾಗುವುದು ಉತ್ತಮ ಎಂದು ಗಂಗೊಳ್ಳಿ ಎಸ್.ವಿ.ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ, ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಹೇಳಿದರು. ಅವರು ಬೈಂದೂರಿನ ಲಾವಣ್ಯ ಆಶ್ರಯದಲ್ಲಿ ಇಲ್ಲಿನ ಶಾರದಾ ವೇದಿಕೆಯಲ್ಲಿ ನಡೆಯುತ್ತಿರುವ ರಂಗಪಂಚಮಿ -2018 ನಾಟಕೋತ್ಸವದ ಎರಡನೆಯ ದಿನದ ಕಾರ್ಯಕ್ರಮದಲ್ಲಿ ಶುಭಾಶಂಸನೆಗೈದು ಮಾತನಾಡಿ ಟಿ.ವಿ ಮಾಧ್ಯಮದಲ್ಲಿ ಪ್ರಸಾರವಾಗುವ ಅಶ್ಲೀಲತೆ, ಅನೈತಿಕತೆಯಿಂದ ತುಂಬಿರುವ ಹಲವು ಧಾರಾವಾಹಿಗಳು ನಮ್ಮ ಸಂಸ್ಕೃತಿಗೆ ಪೂರಕವಾಗಿರುವುದಿಲ್ಲ. ಅವುಗಳನ್ನು ಕುಟುಂಬದ ಹಿರಿಯರು ಮಕ್ಕಳೊಡನೆ ಕುಳಿತು ನೋಡಲು ಆಗದು. ಮಕ್ಕಳ ಸೂಕ್ಷ್ಮ ಮನಸುಗಳ ಮೇಲೆ ಸದಾ ಕೆಡುಕನ್ನೇ ಪ್ರಚೋದಿಸುತ್ತಿರುವ ಧಾರಾವಾಹಿಗಳಿಂದ ಉತ್ತಮ ನಾಟಕಗಳತ್ತ ಆಕರ್ಷಿಸುವ ಮೂಲಕ ಅವರನ್ನು ವಿಮುಖಗೊಳಿಸಬೇಕು ಎಂದು ಸಲಹೆ ನೀಡಿದ ಅವರು ಸೃಜನಶೀಲ ಮನಸುಗಳು ಒಂದಾಗಿರುವ ಲಾವಣ್ಯ ತನ್ನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ್ಚಂದ್ರ ಶೆಟ್ಟಿಯವರನ್ನು ನೇಮಕಗೊಳಿಸಲಾಗಿದೆ. ಶಾಸಕ ಗೋಪಾಲ ಪೂಜಾರಿಯವರ ಶಿಫಾರಸಿನ ಮೇರೆಗೆ ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ನೇಮಕ ಪ್ರಕ್ರಿಯೆಯನ್ನು ಅಂತಿಮಗೊಳಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್ ಪುತ್ರನ್‌ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಪ್ರಸ್ತುತದ ಪೈಪೋಟಿ ಯುಗದಲ್ಲಿ ನಾವಿದ್ದೇವೆ. ಇನ್ನೊಬ್ಬರನ್ನು ಹಿಂದಿಕ್ಕಿ ಅಥವಾ ಸೋಲಿಸಿ ಗೆಲುವು ಪಡೆಯುವುದಕ್ಕೆ ಕಾರ್ಪೋರೇಟ್ ವಲಯzಲ್ಲಿ ಹೆಚ್ಚು ಪ್ರಾಮುಖ್ಯತೆ ಪಡೆಯುವುದಿಲ್ಲ. ಜೀವನದಲ್ಲಿ ನಮ್ಮೊಂದಿಗಿರುವವರನ್ನು ಗೆಲ್ಲಿಸಿ ನಾವು ಗೆಲ್ಲಬೇಕು ಜೊತೆಗೆ ಸಾಧಿಸಬೇಕು. ಆ ಇನ್ನೊಬ್ಬರನ್ನು ಗೆಲ್ಲಿಸಿ ನಾವು ಗೆಲ್ಲುವುದು ನಿಜವಾದ ಮತ್ತು ಪರಿಪೂರ್ಣ ಗೆಲುವು ಎನಿಸಿಕೊಳ್ಳುತ್ತದೆ. ವಿದ್ಯಾರ್ಥಿಗಳು ಮನೋಭಾವವನ್ನು ಅರಿತುಕೊಂಡು ಮುಂದೆ ಸಾಗಬೇಕು ಎಂದು ಕರ್ನಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಬಲೇಶ್ವರ ಎಂ.ಎಸ್. ಹೇಳಿದರು. ಅವರು ಭಂಡಾರ್‌ಕಾರ‍್ಸ್ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ವಿಶ್ವದಾದ್ಯಂತ ಯಾವುದೇ ಕ್ಷೇತ್ರದಲ್ಲಿ ಕಾರ‍್ಯ ನಿರ್ವಹಿಸುವ ಸಂದರ್ಭ ಬಂದೊದಗಿದಲ್ಲಿ ಆಯಾ ಪರಿಸರ, ಸಂಸ್ಕೃತಿಯನ್ನು ಕುರಿತು ಚೆನ್ನಾಗಿ ಅರಿತುಕೊಂಡು ಅವರೊಂದಿಗೆ ನಮ್ಮ ಕಾರ್ಯವೈಖರಿಯನ್ನು ನಿರ್ವಹಿಸಬೇಕು. ಅಲ್ಲದೇ ಈ ವಿದ್ಯಾರ್ಥಿ ಜೀವನದಲ್ಲಿ ಸಿಗುವಂತಹ ಅವಕಾಶಗಳನ್ನು ಉಪಯೋಗಿಸಿಕೊಂಡು ಎಲ್ಲಾ ಒಳ್ಳೆಯ ಕ್ಷೇತ್ರಗಳಲ್ಲಿ ಸಕ್ರೀಯರಾಗಿ ತೊಡಗಿಸಿಕೊಳ್ಳಬೇಕು. ಹಾಗಾದಲ್ಲಿ ಮಾತ್ರ ಭವಿಷ್ಯದ ಜೀವನವನ್ನು ಸುಖಮಯವಾಗಿಸಿಕೊಳ್ಳಲು ಸಾಧ್ಯ. ಕಾಲೇಜು ಎನ್ನುವುದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು : ಇಲ್ಲಿನ ಸುರಭಿ ಕಲಾ ಸಂಸ್ಥೆಯ ರಂಗಸುರಭಿಯ ಆಶ್ರಯದಲ್ಲಿ ಬೈಂದೂರಿನ ರೋಟರಿ ಕ್ಲಬ್ ಮತ್ತು ‘ಹಂಬಲ’ ಥೀಯೆಟರ್‌ನ ಸಹಕಾರದೊಂದಿಗೆ ‘ವಿಶ್ವ ರಂಗಭೂಮಿ’ ದಿನಾಚರಣೆಯನ್ನು ಆಚರಿಸಲಾಯಿತು. ಉದ್ಘಾಟನೆಯನ್ನು ಬೈಂದೂರು ರೋಟರಿ ಕ್ಲಬ್‌ನ ಅಧ್ಯಕ್ಷ ಶ್ರೀ ಕೃಷ್ಣಪ್ಪ ಶೆಟ್ಟಿಯವರು ಉದ್ಘಾಟಿಸಿ ರಂಗಕರ್ಮಿಗಳಿಗೆ ಶುಭ ಹಾರೈಸಿದರು. ಸುರಭಿ ಕಲಾವಿದ ಶಿಕ್ಷಕ ಶ್ರೀ ರಾಘು ಮುದ್ರ ಕಾಲ್ತೋಡು ಸ್ವಾಗತಿಸಿ ರಂಗ ನಿರ್ದೇಶಕ ಶ್ರೀ ಗಣೇಶ ಮೊಂಡಾಡಿ ರಂಗಭೂಮಿ ಸಂದೇಶ ವಾಚಿಸಿದರು. ಈ ಸಂದರ್ಭದಲ್ಲಿ ಕಲಾವಿದ ಶ್ರೀನಾದ (ಭಾಸ್ಕರ) ಮಣಿ ನಾಲ್ಕೂರು ಬಂಟ್ವಾಳ ಇವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ರೋಟರಿಯ ಖಜಾಂಚಿ ಶ್ರೀ ವೆಂಕಟೇಶ ಕಾರಂತ್ ಹಾಗೂ ‘ಹಂಬಲ’ ಥೀಯೆಟರ್‌ನ ಶ್ರೀ ಯೋಗಿಶ್ ಬಂಕೇಶ್ವರ ವೇದಿಕೆಯಲ್ಲಿ ಉಪಸ್ಥಿತರಿದ್ದು ಸುರಭಿಯ ಶ್ರೀ ಸುಧಾಕರ ಪಿ. ಬೈಂದೂರು ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ವಿಶೇಷ ಕಾರ್ಯಕ್ರಮವಾಗಿ ಕಲಾವಿದ ನಾದಮಣಿ ನಾಲ್ಕೂರುರವರ ‘ನಾದ-ಅರಿವಿನ ಗೀತೆಗಳು’ ಕಾರ್ಯಕ್ರಮ ಮೂಡಿ ಬಂದಿತು. ಡೋಲಕ್‌ನಲ್ಲಿ ಕಲಾವಿದ ಸಂತೋಷ ಸಹಕರಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು : ಕಿಶೋರ್ ಶೆಟ್ಟಿ ಮತ್ತು ಸಚಿನ್ ಶೆಟ್ಟಿ ಸ್ಮರಣಾರ್ಥ ಕುಂದಾಪುರದ ಓಂ ಫ್ರೆಂಡ್ಸ್ ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆಸಿದ್ದ ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮರವಂತೆಯ ಗುರುರಾಜ ಬಿಲ್ಲವ ಮತ್ತು ಕುಂದಾಪುರದ ಚೈತ್ರಾ ಜೋಡಿ ಮೊದಲ ಸ್ಥಾನ ಗಳಿಸಿ ನಗದು 20,000 ಮತ್ತು ಪಾರಿತೋಷಕ ಹಾಗೂ ದ್ವಿತೀಯ ಬಹುಮಾನ 10,000 ಮತ್ತು ಪಾರಿತೋಷಕವನ್ನು ತೆಂಕನಿಡಿಯೂರಿನ ಶಾಲಿನಿ ಶೆಟ್ಟಿ ಮತ್ತು ಚೇರ್ಕಾಡಿಯ ಪ್ರಜೇಶ ನಾಯ್ಕ್ ಜೋಡಿ ಪಡೆಯಿತು. ಮೊದಲ ಹಂತದ ಸ್ಪರ್ಧೆಯಲ್ಲಿ ಅಂಕ ಗಳಿಕೆಯ ಆಧಾರದಲ್ಲಿ ಮೊದಲ ಐವರು ಪುರುಷರನ್ನು ಮತ್ತು ಐವರು ಮಹಿಳೆಯರನ್ನು ಅಂತಿಮ ಸುತ್ತಿನ ಸ್ಪರ್ಧೆಗೆ ಆಯ್ಕೆಮಾಡಲಾಗಿತ್ತು, ಅವರನ್ನು ತಲಾ ಒಬ್ಬ ಪುರುಷ ಹಾಗೂ ಮಹಿಳೆ ಇರುವ ಐದು ತಂಡಗಳಾಗಿ ಮಾಡಿ ಅಂತಿಮ ಸ್ಪರ್ಧೆ ನಡೆಸಲಾಯಿತು. ಭಾನುವಾರ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ರಾಜ್ಯ ಇಂಟಕ್ ಅಧ್ಯಕ್ಷ ರಾಕೇಶ ಮಲ್ಲಿ ಬಹುಮಾನ ವಿತರಿಸಿದರು. ತೆಕ್ಕಟ್ಟೆಯ ಉದ್ಯಮಿ ಮಲ್ಯಾಡಿ ಶಿವರಾಮ ಶೆಟ್ಟಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಗ್ರಾಮೀಣ ಭಾಗದಲ್ಲಿ ಕಲಾತಂಡವನ್ನು ಕಟ್ಟಿ ರಾಜ್ಯದ ಉದ್ದಗಲಕ್ಕೂ ಸಂಚರಿಸಿ ರಂಗಭೂಮಿಯಲ್ಲಿ ತನ್ನದೇ ಆದ ಛಾಪನ್ನೂ ಮೂಡಿಸಿರುವ ಲಾವಣ್ಯ ಸಂಸ್ಥೆಯೂ ರಾಜ್ಯ ರಾಜಧಾನಿಯಲ್ಲಿಯೂ ಅಪಾರ ಪ್ರೇಕ್ಷಕವರ್ಗದವರನ್ನು ಹೊಂದಿದೆ. ಇದು ಸಂಸ್ಥೆಯ ಪ್ರಬುದ್ಧ ಕಲಾಭಿನಯವನ್ನು ಸೂಚಿಸುತ್ತದೆ ಎಂದು ಬೈಂದೂರು ಮಾಜಿ ಶಾಸಕರಾದ ಕೆ. ಲಕ್ಷ್ಮೀನಾರಾಯಣ ಹೇಳಿದರು. ಅವರು ಲಾವಣ್ಯ ಬೈಂದೂರು ಇದರ ನೂತನ ಮೇಲಂತಸ್ತಿನ ಕಟ್ಟಡ ಉದ್ಘಾಟಿಸಿದ ಬಳಿಕ ರಂಗಪಂಚಮಿ2018 ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಾವಣ್ಯ ಅಧ್ಯಕ್ಷ ಗಿರೀಶ್ ಬೈಂದೂರು ಇವರು ವಹಿಸಿದ್ದರು. ಬೈಂದೂರು ಮಾಜಿ ಶಾಸಕರಾದ ಕೆ. ಲಕ್ಷ್ಮೀನಾರಾಯಣ ಇವರು ನೂತನ ಕಟ್ಟಡ ಉದ್ಘಾಟಿಸಿದರು. ಸಂದೀಪನ್ ಆಂಗ್ಲಮಾಧ್ಯಮ ಶಾಲೆ, ನಾಗೂರು ಇದರ ಮುಖ್ಯೋಪಾಧ್ಯಾಯರಾದ ಬಿ.ವಿಶ್ವೇಶ್ವರ ಅಡಿಗ ಬಿಜೂರು ರಂಗ ಪಂಚಮಿ ಉದ್ಘಾಟನೆ ಮಾಡಿದರು. ಭೂಮಿಕಾ ಹಾರಾಡಿ ಇದರ ಸಂಚಾಲಕರಾದ ಬಿ.ಎಸ್.ರಾಮ ಶೆಟ್ಟಿ ಶುಭಶಂಸನೆ ಹೇಳಿದರು. ಕಾರ್ಯಕ್ರಮಕ್ಕೆ ಅತಿಥಿಯಾಗಿ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ, ಮುಂಬೈ ಉದ್ಯಮಿ ಗೋವಿಂದ ಬಾಬು ಪೂಜಾರಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಭಂಡಾರ್‌ಕಾರ‍್ಸ್ ಕಾಲೇಜು ವಾರ್ಷಿಕೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ಸ್ಪರ್ಧೆಯಲ್ಲಿ ತೃತೀಯ ಬಿಎಸ್ಸಿ ವಿದ್ಯಾರ್ಥಿಗಳ ತಂಡ ಸಮಗ್ರ ಪ್ರಶಸ್ತಿಯನ್ನು ಪಡೆಯಿತು. ಸ್ಪರ್ಧೆಯಲ್ಲಿ ವಿವಿಧ ತರಗತಿಗಳ 8 ತಂಡಗಳು ಭಾಗವಹಿಸಿದ್ದವು. ಸ್ಪರ್ಧೆಗೂ ಮೊದಲು ಕಾಲೇಜಿನ ಆಡಳಿತ ಮಂಡಳಿಯ ಅದ್ಯಕ್ಷರಾದ ಡಾ.ಹೆಚ್.ಶಾಂತಾರಾಮ್ ಕಾರ‍್ಯಕ್ರಮವನ್ನು ಉದ್ಘಾಟಿಸಿದರು. ಅಲ್ಲದೇ ಕಾಲೇಜಿನ ಕುರಿತು ವಿದ್ಯಾರ್ಥಿ ಸಜಿತ್ ನಿರ್ಮಾಣದ ಸಮನ್ವಯ ಮತ್ತು ವಿದ್ಯಾರ್ಥಿಗಳಾದ ಶಿವರಾಜ್ ಮತ್ತು ಕೀರ್ತನ್ ನಿರ್ಮಾಣದ ಸೆಕ್ಟ್ರಮ್ 2ಕೆ18 ಎಂಬ ಎರಡು ಸಾಕ್ಷ್ಯಚಿತ್ರಗಳನ್ನು ಉದ್ಘಾಟಿಸಿದರು. ಪ್ರತಿಭಾ ಪ್ರದರ್ಶನ ಸ್ಪರ್ಧೆಯಲ್ಲಿ ವಿವಿಧ ತರಗತಿಗಳ 8 ತಂಡಗಳು ಭಾಗವಹಿಸಿದ್ದವು. ಬಹುಮಾನ ವಿತರಣಾ ಸಮಾರಂಭದ ಅದ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ . ಸ್ಪರ್ಧೆಯ ತೀರ್ಪುಗಾರರಾಗಿ ಆಗಮಿಸಿದ್ದ ಉದಯ ಗಾಂವಂಕರ, ಸುಬ್ರಮಣ್ಯ ಶೆಟ್ಟಿ ಮತ್ತು ಡಾ.ರಜನಿ ರಾವ್ ಮತ್ತು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಅರುಣಾಚಲ ಮಯ್ಯ ಮತ್ತು ಲಲಿತಕಲಾ ಸಂಘದ ಸಂಚಾಲಕರಾದ ಮಮತಾ ಕೆ.ಎಸ್ ಉಪಸ್ಥಿತರಿದ್ದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕಾರ‍್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದಕ್ಷಿಣಕನ್ನಡ ಜಿಲ್ಲಾ ಹಾಲು ಉತ್ಪಾದಕರ ಸಂಘದ ಅದ್ಯಕ್ಷರಾದ ರಾಜೀವ ಶೆಟ್ಟಿ ಮಾತನಾಡಿ, ಮೊದಲು ಜೀವನವೆಂಬ ಪರೀಕ್ಷೆಯಲ್ಲಿ ಪಾಸಾಗುವುದರೊಂದಿಗೆ ಮಾನವೀಯರಾಗಬೇಕು. ಇಂದಿನ ಗ್ರಾಮೀಣ ಭಾರತದ ಕನಸು ನನಸಾಗಬೇಕಿದ್ದರೆ ವಿದ್ಯಾವಂತರೆನಿಸಿಕೊಂಡವರು ಗ್ರಾಮೀಣ ಭಾಗದ ಅಭಿವೃದ್ಧಿಗೆ ಶ್ರಮಿಸಬೇಕು. ತಮ್ಮ ಜ್ಞಾನದ ನೆಲೆಗಳನ್ನು ಬಳಸಿಕೊಂಡು ಉತ್ತಮ ಮಾನವ ಸಂಪನ್ಮೂಲಗಳಾಗಿ ದೇಶಕ್ಕೆ ಆಸ್ತಿಯಾಗಬೇಕು.ಇದಕ್ಕೆಲ್ಲ ಇಚ್ಛಾಶಕ್ತಿ. ನಿಶ್ಚಿತ ಗುರಿಸಾಧನೆ ಸಾಧಿಸುವ ಛಲ ಮತ್ತು ಒಳ್ಳೆಯ ಸಂಸ್ಕಾರಗನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದೇಶಕ್ಕೆ ಸಮಾಜಕ್ಕೆ ಕೊಡುಗೆಯಾಗಿರಬೇಕು. ಸಮಾಜದ ಒಳಿತಿಗಾಗಿ ಶ್ರಮಿಸಬೇಕು ಎಂದು ಅಭಿಪ್ರಾಯಪಟ್ಟರು. ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅದ್ಯಕ್ಷರಾದ ಡಾ.ಹೆಚ್.ಶಾಂತಾರಾಮ್ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ಮತ್ತು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಅರುಣಾಚಲ ಮಯ್ಯ ಉಪಸ್ಥಿತರಿದ್ದರು.

Read More